ಲೇಖಕ: admin

ವಿರಾಜಪೇಟೆ ಜು.19 NEWS DESK : ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ವಿರಾಜಪೇಟೆಯ ಟೀಂ ಇಂಟೋಪೀಸ್ ಡ್ಯಾನ್ಸ್ ಸ್ಟುಡಿಯೋದ ವಿದ್ಯಾರ್ಥಿಗಳು ಭಾಗವಹಿಸಿ ಚಾಂಪಿಯನ್ ಟ್ರೋಫಿಯನ್ನು ಗೆದ್ದುಕೊಂಡರು. ಸಬ್ ಜೂನಿಯರ್ ವಿಭಾಗದಲ್ಲಿ ಜೀಯ ತೃತಿಯ ಬಹುಮಾನ, ಜೂನಿಯರ್ ವಿಭಾಗದಲ್ಲಿ ಶ್ರೀದೇವಿ ದ್ವಿತೀಯ ಬಹುಮಾನ, ಜೋಡಿ ನೃತ್ಯ ವಿಭಾಗದಲ್ಲಿ ವಿಮರ್ಶ ಮತ್ತು ತನ್ವಿ ತೃತಿಯ ಬಹುಮಾನ, ಹಿರಿಯ ವಿಭಾಗಗಳಲ್ಲಿ ಯಶಿಕಾ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.

Read More

ವಿರಾಜಪೇಟೆ ಜು.19 NEWS DESK : ಪೊನ್ನಂಪೇಟೆಯ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳು ಪಿರಿಯಾಪಟ್ಟಣ ತಾಲ್ಲೂಕು ರಾವಂದೂರುವಿನ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ವಿವಿಧ ತರಬೇತಿ ಪಡೆದರು. ಹದಿನೈದು ದಿವಸಗಳ ಕಾಲ ಜರುಗಿದ ತರಬೇತಿ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಶಿವು ಸೈನಿಕ ಅಕಾಡೆಮಿ ಗೆ ಭೇಟಿ ನೀಡಿ, ಸೈನ್ಯಕ್ಕೆ ಸೇರಲು ಬೇಕಾದ ಮಾಹಿತಿಯನ್ನು ಪಡೆದುಕೊಂಡರು. ಅಕಾಡೆಮಿ ಅಧ್ಯಕ್ಷರು ಹಾಗೂ ಮಾಜಿ ಸೈನಿಕರಾದ ಶಿವು ವಿದ್ಯಾರ್ಥಿಗಳಿಗೆ ಸೈನ್ಯಕ್ಕೆ ಸೇರಲು ಹಾಗೂ ವ್ಯಾಯಾಮ, ದೈಹಿಕ ಕಸರತ್ತು ಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಅಲ್ಲದೇ ಪರಿಶ್ರಮ, ದೈಹಿಕ ಚಟುವಟಿಕೆ, ಮಾನಸಿಕ ಸದೃಢತೆ ಹೊಂದಲು ಬೇಕಾದ ಅಂಶಗಳನ್ನು ಉದಾಹರಣೆ ಸಮೇತ ವಿವರಿಸಿದರು. ಮಾತ್ರವಲ್ಲದೆ ಸಮಾಜದಲ್ಲಿ ಉತ್ತಮ ನಾಯಕರಾಗಿ ಹೊರಹೊಮ್ಮಿ ಎಂದು ಕಿವಿಮಾತು ಹೇಳಿದರು. ಈ ಸಂದರ್ಭ ಪ್ರಾಧ್ಯಾಪಕರಾದ ಗಣೇಶ್ ಪ್ರಸಾದ್, ಶಿವು ಸೈನಿಕ ಅಕಾಡೆಮಿಯ ಕಾರ್ಯದರ್ಶಿ ಸ್ವಾಮಿ, ವಿದ್ಯಾರ್ಥಿ ನಾಯಕರಾದ ಪ್ರಶಾಂತ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Read More

ಸೋಮವಾರಪೇಟೆ ಜು.19 NEWS DESK : ದೊಡ್ಡಮಳ್ತೆಯ ಇತಿಹಾಸ ಪ್ರಸಿದ್ಧ ಹೊನ್ನಮ್ಮನ ಕೆರೆಯು ಭಾರಿ ಮಳೆಯಿಂದ ತುಂಬಿ ಹರಿಯುತ್ತಿದ್ದು, ಸ್ಥಳೀಯ ಗ್ರಾಮಸ್ಥರು ಕೆರೆಗೆ ಪೂಜೆ ಸಲ್ಲಿಸಿದರು. ಈ ಸಂದರ್ಭ ಅಧ್ಯಕ್ಷರಾದ ವಿರೇಶ್, ಪ್ರಮುಖರಾದ ಕಿರಣ್ ಕುಮಾರ್, ರತನ್, ಲೋಕೇಶ್, ತಿಮ್ಮಯ್ಯ, ಹರ್ಷಿತ್ ಇದ್ದರು.

Read More

ಮಡಿಕೇರಿ ಜು.19 NEWS DESK : ಚೆಟ್ಟಳ್ಳಿ-ಮಡಿಕೇರಿ ರಸ್ತೆ ಅಭ್ಯಾಲ ಬಳಿ ಮಣ್ಣು ಕುಸಿದು ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು, ಬದಲಿ ಮಾರ್ಗವಾಗಿ ತೆರಳುವಂತೆ ಪೊಲೀಸ್ ಇಲಾಖೆ ಸೂಚಿಸಿದೆ.

Read More

ಕುಶಾಲನಗರ ಜು.19 NEWS DESK : ಕುಶಾಲನಗರ ಹೋಬಳಿ ಗೊಂದಿಬಸವನಹಳ್ಳಿ ಗ್ರಾಮದ ರೊಂಡೆ ಕೆರೆಯ ಏರಿ ಭಾರಿ ಮಳೆಯಿಂದ ಒಡೆದು ಅಪಾರ ಪ್ರಮಾಣದ ನೀರು ರೈತರ ಜಮೀನುಗಳಿಗೆ ನುಗ್ಗಿದೆ. ಕಳೆದ ಮೂರು ದಿನಗಳಿಂದ ಸುರಿದ ಸತತ ಬಿರುಸಿನ ಮಳೆಯಿಂದ ಕೆರೆಯಲ್ಲಿನ ನೀರಿನ ಪ್ರಮಾಣ ಹೆಚ್ಚಳವಾಗಿ ಒಡೆದು ನೀರೆಲ್ಲಾ ರೈತರ ಕೃಷಿ ಭೂಮಿಗೆ ನುಗ್ಗಿದ್ದು, ಅಕ್ಕ ಪಕ್ಕದ ಜಮೀನುಗಳು ಜಲಾವೃತವಾಗಿವೆ.

Read More

ಸುಂಟಿಕೊಪ್ಪ,ಜು.19  NEWS DESK: ಆನೆ ಮಾನವ ಸಂಘರ್ಷ ಉಪಶಮನಗೊಳಿಸುವ ನಿಟ್ಟಿನಲ್ಲಿ ತಾತ್ಕಲಿಕ ಮತ್ತು ಶಾಶ್ವತ ಪರಿಹಾರಗಳ ಕುರಿತು ಸದ್ಯದಲ್ಲೇ ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಿ ಮೇಲಾಧಿಕಾರಿಗಳಿಗೆ ಸೂಕ್ತ ಪ್ರಸ್ತಾವನೆ ಕಳುಹಿಸಲಾಗುವುದೆಂದು ಅರಣ್ಯ ಇಲಾಖೆಯ ಕೊಡಗು ವೃತ್ತದ ಮಡಿಕೇರಿ ವಿಭಾಗದ ಉಪಸಂರಕ್ಷಣಾದಿಕಾರಿ ಬಾಸ್ಕರ್ ಹೇಳಿದರು. ಕೆದಕಲ್ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿತವಾಗಿದ್ದ ಕಾಫಿ ಬೆಳೆಗಾರರು ಮತ್ತು ಅರಣ್ಯ ಇಲಾಖಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಡಾನೆ ಓಡಿಸುವ ಸಂದರ್ಭದಲ್ಲಿ ಇಲಾಖೆಯವರಿಗೆ ಮತ್ತು ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ಬೇಕಾಗುವ ಅಂಬ್ಯುಲೆನ್ಸ್ ವಾಹನ ಒದಗಿಸುವ ಬಗ್ಗೆ ಘೋಷಣೆ, ಒಂದೂವರೆ ವರ್ಷದ ಹಿಂದೆ ನಡೆದ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳ ಮರುಪರಿಶೀಲನೆ ಮತ್ತು ನಿಯಮಿತವಾಗಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ಕರೆಯುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ಬಾಸ್ಕರ್ ಹೇಳಿದರು. ಈಗಾಗಲೇ ಆನೆ ಓಡಿಸುವ ಕಾರ್ಯಾಚರಣೆ ಚಾಲ್ತಿಯಲ್ಲಿದ್ದು, ಇದು ಹೆಚ್ಚು ಪರಿಣಾಮಕಾರಿಯಾಗಿ ಆಗಬೇಕು, ಯಾವುದೇ ಸಂದರ್ಭದಲ್ಲಿ ಮಾನವ ಜೀವಹಾನಿ ಆಗಬಾರದೆಂಬುದು ನಮ್ಮ ಕಾಳಜಿಯಾಗಿದೆ.…

Read More

ಮಡಿಕೇರಿ ಜು.19 NEWS DESK : ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಡಿ ಬಂಧಿಯಾಗಿರುವ ಆರೋಪಿಯೊಬ್ಬ ಅಂತರ್ ಜಿಲ್ಲಾ ವಾಹನ ಚೋರನೂ ಆಗಿದ್ದಾನೆ ಎನ್ನುವ ಮಾಹಿತಿ ವಿಚಾರಣೆ ವೇಳೆ ಬಹಿರಂಗಗೊಂಡಿದೆ. ಆರ್ಜಿ ಗ್ರಾ.ಪಂ ವ್ಯಾಪ್ತಿಯ ಒಂದನೇ ಪೆರುಂಬಾಡಿ ಗ್ರಾಮದ ನಿವಾಸಿ, ಕೂಲಿ ಕಾರ್ಮಿಕ ಎನ್.ದರ್ಶನ್ ನಾಯಕ್ (26) ಬಂಧಿತ ಆರೋಪಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ 11 ದ್ವಿಚಕ್ರ ವಾಹನಗಳು ಮತ್ತು ಒಂದು ಓಮ್ನಿ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಣಸೂರು, ಹನಗೋಡು, ಬಿಳಿಕೆರೆ, ರಾಮನಾಥಪುರ ಮತ್ತಿತರ ಕಡೆಗಳಲ್ಲಿ ಈತ ವಾಹನಗಳನ್ನು ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕೆಲವು ದಿನಗಳ ಹಿಂದು ಆರ್ಜಿ ಗ್ರಾಮ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಯತ್ನ ಆರೋಪದಡಿ ವಿರಾಜಪೇಟೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ಅಲ್ಲದೆ ನಾಲ್ಕು ದ್ವಿಚಕ್ರ ವಾಹನ ಮತ್ತು ಒಂದು ಓಮ್ನಿ ವಾಹನ ವಶಕ್ಕೆ ಪಡೆದಿದ್ದರು. ದರ್ಶನ್ ನಾಯಕ್ ಸೇರಿದಂತೆ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದರು. ಬಂಧಿತರನ್ನು ವಿಚಾರಣೆಗೊಳಪಡಿಸಿದಾಗ ವಶ…

Read More

ಸುಂಟಿಕೊಪ್ಪ ಜು.19 NEWS DESK : ವರ್ಕ್‍ಶಾಪ್ ಮಾಲೀಕರ ಸಂಘದ ಅಧ್ಯಕ್ಷರಾಗಿ ಬಿ.ಎಸ್.ರಮೇಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಣಿಕಂಠ ಆಯ್ಕೆಯಾಗಿದ್ದಾರೆ. ಸುಂಟಿಕೊಪ್ಪ ಕೊಡವ ಸಮಾಜದಲ್ಲಿ ಸಂಘದ ಅಧ್ಯಕ್ಷ ಪಿ.ಆರ್.ಸುನೀಲ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ವರ್ಕ್‍ಶಾಪ್ ಮಾಲೀಕರ ಸಂಘದ 22ನೇ ವಾರ್ಷಿಕ ಮಹಾ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಉಪಾಧ್ಯಕ್ಷರಾಗಿ ತಂಗವೇಲು, ಖಜಾಂಚಿಯಾಗಿ ಸಂದೀಪ್, ಸಂಘಟನಾ ಕಾರ್ಯದರ್ಶಿಯಾಗಿ ಫೆಲಿಕ್ಸ್ ಡಿಸೋಜ, ಸಹ ಕಾರ್ಯದರ್ಶಿಯಾಗಿ ರಜಾಕ್, ಗೌರವ ಅಧ್ಯಕ್ಷರಾಗಿ ವಿ.ಎ.ಸಂತೋಷ್, ಪಿ.ಆರ್.ಸುಕುಮಾರ್, ಕೆ.ಪಿ.ವಿನೋದ್ ಹಾಗೂ 9 ಜನರನ್ನು ಸಮಿತಿ ಸದಸ್ಯರಾಗಿ ನೇಮಕ ಮಾಡಲಾಯಿತು.

Read More

ಸುಂಟಿಕೊಪ್ಪ ಜು.19 NEWS DESK : ಸುಂಟಿಕೊಪ್ಪ, ಮಾದಾಪುರ, ಸೋಮವಾರಪೇಟೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯು ಕಳೆದ 3 ವರ್ಷಗಳ ಹಿಂದೆಯೇ ಅಪಾಯದ ಅಂಚಿನಲ್ಲಿದ್ದು, ಲೋಕೋಪಯೋಗಿ ಇಲಾಖೆ ಈ ರಸ್ತೆಗೂ ನಮಗೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಸೋಮವಾರಪೇಟೆ ರಾಜ್ಯ ಹೆದ್ದಾರಿಯಲ್ಲಿರುವ ಕೆಂಚೆಟ್ಟಿ ತೋಟದ ಸಮೀಪದಲ್ಲಿರುವ ಮೋರಿಯೊಂದು ಕಳೆದ ಮೂರು ವರ್ಷಗಳಿಂದಲ್ಲೂ ಅಪಾಯದ ಅಂಚಿನಲ್ಲಿದೆ. ತಡೆಗೋಡೆಗಳು ಕುಸಿಯಲಾರಂಭಿಸಿದೆ. ನಿತ್ಯ ಈ ರಸ್ತೆಯಲ್ಲಿ ನೂರಾರು ವಾಹನಗಳು ಸಂಚರಿಸುತ್ತಿದ್ದು, ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಈ ರಸ್ತೆ ಬಹಳ ಕಿರಿದಾಗಿದ್ದು, ಮುಂಭಾಗದಿಂದ ಆಗಮಿಸುವ ವಾಹನಗಳಿಗೆ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಸಂಬಂಧಿಸಿದ ಇಲಾಖೆಯವರು ಸ್ಥಳ ಪರಿಶೀಲಿಸಿ, ತಡೆಗೋಡೆ ನಿರ್ಮಿಸಲು ಮುಂದಾಗುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Read More

ವಿರಾಜಪೇಟೆ ಜು.19 NEWS DESK : ಮಾಧ್ಯಮ ಮತ್ತು ಆಡಳಿತ ವ್ಯವಸ್ಥೆಯಿಂದ ಸಮಾಜದ ಅಭಿವೃದ್ದಿ ಕಾಣಬಹುದು ಎಂದು ವಿರಾಜಪೇಟೆ ತಹಶೀಲ್ದಾರ್ ಹೆಚ್.ಎನ್. ರಾಮಚಂದ್ರ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಎ-ಜೆಡ್ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಮತ್ತು ಪ್ರಶಸ್ತಿ ಪ್ರದಾನ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಸಮಾಜದ ಓರೆಕೋರೆಗಳನ್ನು ತಿದ್ದುವ ಮೂಲಕ ಉತ್ತಮ ಸಮಾಜವನ್ನು ರೂಪಿಸುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು, ಮಾಧ್ಯಮದಿಂದ ಸಮಾಜವನ್ನು ತಿದ್ದುವ ಕಾರ್ಯ ನಡೆಯುತ್ತಿದೆ. ಆಡಳಿತ ವ್ಯವಸ್ಥೆಗೆ ಕೂಡ ಮಾಧ್ಯಮದ ಕೊಡುಗೆ ಅಪಾರ. ಸರ್ಕಾರದ ಯಾವುದೇ ಕಾರ್ಯಕ್ರಮಗಳು ಜನರಿಗೆ ತಲುಪಲು ಮಾಧ್ಯಮದ ಕೊಡುಗೆ ಹೆಚ್ಚಿದೆ. ಪತ್ರಿಕೆಗಳನ್ನು ಓದುವುದರಿಂದ ಸಮಸ್ಯೆಗಳನ್ನು ತಿಳಿಯಲು ಸಾಧ್ಯವಾಗುತ್ತದೆ. ಅಲ್ಲದೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪತ್ರಿಕಾ ವರದಿಗಳು ಮತ್ತು ಪತ್ರಕರ್ತರ ಸಹಕಾರ ಕೂಡಾ ಅತ್ಯಗತ್ಯವಾಗಿದೆ. ತಾಲ್ಲೂಕಿನ ಪತ್ರಕರ್ತರ ಮೂಲಕ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿದೆ. ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಶ್ಲಾಘನೀಯ ಎಂದರು.…

Read More