ಲೇಖಕ: admin

ಕುಶಾಲನಗರ ಜು.9 NEWS DESK  : ಕುಶಾಲನಗರದ ಖ್ಯಾತ ನಾಟಿ ವೈದ್ಯೆ ಅಯಿನಮಂಡ ಲೀಲಾವತಿ ಗಣಪತಿ ಅವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಕೊಡಮಾಡುವ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ 60ಕ್ಕೂ ಅಧಿಕ ವರ್ಷಗಳಿಂದ ನಾಟಿ ಔಷಧಿ ನೀಡುವ ಮೂಲಕ ಜಿಲ್ಲೆ ಮತ್ತು ನೆರೆ ಜಿಲ್ಲೆಗಳ ಮಕ್ಕಳಿಗೆ ಬಾಲ ಸಂಜೀವಿನಿ ಆಗಿರುವ ಲೀಲಾವತಿ ಗಣಪತಿ ( ಕೊಡಗರಮ್ಮ ) ಅವರನ್ನು ಕಾಯಕ ರತ್ನ ಪ್ರಶಸ್ತಿ – 2024 ಕ್ಕೆ ಕೊಡಗು ಜಿಲ್ಲೆಯಿಂದ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾಗಿರುವ ಡಾ.ಹುಲಿಕಲ್ ನಟರಾಜ್ ತಿಳಿಸಿದ್ದಾರೆ. ಈ ತಿಂಗಳ 13 ರಂದು ಬೀದರ್ ಜಿಲ್ಲೆಯಲ್ಲಿ ನಡೆಯಲಿರುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಜ್ಯದ ಒಟ್ಟು 35 ಮಂದಿ ಸಾಧಕರಿಗೆ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕೊಡಗು ಜಿಲ್ಲೆ ಅಧ್ಯಕ್ಷೆ ವನಿತಾ ಚಂದ್ರಮೋಹನ್…

Read More

ನಾಪೋಕ್ಲು ಜು.9 NEWS DESK : ನಾಪೋಕ್ಲು – ಭಾಗಮಂಡಲ ಮುಖ್ಯರಸ್ತೆಯ ಚೋನಕೆರೆ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ಮುರಿದುಬಿದ್ದ ಪರಿಣಾಮ ಸಂಚಾರಕ್ಕೆ ಅಡ್ಡಿ ಉಂಟಾಯಿತು. ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ವಾಹನಗಳು ಕುರುಳಿ -ಎಮ್ಮೆ ಮಾಡು ಮುಖಾಂತರ ಬಳಸು ರಸ್ತೆಯಲ್ಲಿ ಸಾಗಿದವು. ಬಲ್ಲಮಾವಟಿ ಗ್ರಾ.ಪಂ ಮಾಜಿ ಅಧ್ಯಕ್ಷ ಮಣವಟ್ಟಿರ ಕುಶಾಲಪ್ಪ , ನಾಪೋಕ್ಲು ಗ್ರಾ.ಪಂ ಸದಸ್ಯ ಮಾಚೇಟಿರ ಕುಶು ಕುಶಾಲಪ್ಪ, ಅರಣ್ಯ ಇಲಾಖೆಯ ಸಿಬ್ಬಂದಿ ಕಾಳೇಗೌಡ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡು ರಸ್ತೆ ಗಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿದರು. ಸುಮಾರು 2 ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತು. ಸಂಜೆಯ ವೇಳೆಗೆ ಮರವನ್ನು ತೆರವುಗೊಳಿಸಲಾಯಿತು. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಜು.9 NEWS DESK : ಡೆಂಗ್ಯೂ ಪ್ರಕರಣ ಹೆಚ್ಚಳ ಹಿನ್ನೆಲೆ ಮಡಿಕೇರಿ ನಗರಸಭೆ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ‘ಕಿಂಗ್ ಫಾಗಿಂಗ್’ ಮಾಡಲಾಗುತ್ತಿದೆ ಎಂದು ಪೌರಾಯುಕ್ತರಾದ ವಿಜಯ್ ತಿಳಿಸಿದ್ದಾರೆ. 

Read More

ಮಡಿಕೇರಿ ಜು.8 NEWS DESK : ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕ ಹಾಗೂ ಸಮಸ್ತ ಮುಶಾವರ ಸದಸ್ಯರಾದ, ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳ ಖಾಝಿಗಳಾಗಿರುವ ಸೈಯದ್ ಫಜಲ್ ಕೋಯಮ್ಮ ತಂಙಳ್ ಕೂರ ರವರ ನಿಧನ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ.ಅವರ ನಿಧನಕ್ಕೆ ಮಾಜಿ ಕೊಡಗು ವಕ್ಫ್ ಬೋರ್ಡ್ ಅಧ್ಯಕ್ಷರು, ಹೊದ್ದೂರು ಗ್ರಾ.ಪಂಸದಸ್ಯರಾದ ಎಂ.ಬಿ ಹಮೀದ್ ಸಂತಾಪ ಸೂಚಿಸಿದ್ದಾರೆ.  

Read More

ಮಡಿಕೇರಿ ಜು.8 NEWS DESK  : ವಿದ್ಯಾರ್ಥಿಗಳು ಜೀವನದಲ್ಲಿ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಸಮಾಜಕ್ಕೆ ಮಾದರಿಯಾಗಿರಬೇಕೆಂದು ಸಾಹಿತಿ ರಜಿತ ಕಾರ್ಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಗೋಣಿಕೊಪ್ಪ ಸಂತ ಥಾಮಸ್ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ, ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಕಾರ್ಯಕ್ರಮದಲ್ಲಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ರಜಿತ ಕಾರ್ಯಪ್ಪ ಅವರು, ಪಾಲಕರು, ಗುರುಗಳು, ಹಿರಿಯರನ್ನು ಗೌರವಿಸುವ ಮಹತ್ವ ಸಾರಿದರು. ವಿದ್ಯಾರ್ಥಿಗಳು ತಮ್ಮ ಬೇರುಗಳನ್ನು ಮತ್ತು ಅವರನ್ನು ರೂಪಿಸಿದ ಶಾಲೆಯನ್ನು ನೆನಪಿಸಿಕೊಳ್ಳಬೇಕು ಮತ್ತು ಉತ್ತಮ ನಾಗರಿಕರಾಗಲು ಮತ್ತು ಸಮಾಜಕ್ಕೆ ಅರ್ಥಪೂರ್ಣ ಕೊಡುಗೆಗಳನ್ನು ನೀಡಲು ಅನುವು ಮಾಡಿಕೊಡುವ ಗುಣಾತ್ಮಕ ಶಿಕ್ಷಣಕ್ಕಾಗಿ ಶ್ರಮಿಸಬೇಕು ಎಂದರು. ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಉಜ್ವಲ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಪ್ರೋತ್ಸಾಹಿಸಿದರು. ವಿದ್ಯೆ ಎಂಬುವುದು ಕದಿಯಲಾಗದ ಸಂಪತ್ತು, ವಿದ್ಯಾವಂತರು ದೇಶಕ್ಕೆ ಆಸ್ತಿಯಾಗಬೇಕು. ಸಮಾಜದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಆಸಕ್ತಿಯನ್ನು ಬೆಳೆಸಿದರೆ ಮಾತ್ರ ಯುವ…

Read More

*ಜನಪ್ರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರಿಗೆ ಜನ್ಮ ದಿನದ ಶುಭಾಶಯಗಳು*

Read More

*ಜನಪ್ರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರಿಗೆ ಜನ್ಮ ದಿನದ ಶುಭಾಶಯಗಳು*

Read More

*ಜನಪ್ರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರಿಗೆ ಜನ್ಮ ದಿನದ ಶುಭಾಶಯಗಳು*

Read More

*ಜನಪ್ರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರಿಗೆ ಜನ್ಮ ದಿನದ ಶುಭಾಶಯಗಳು*

Read More

*ಜನಪ್ರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರಿಗೆ ಜನ್ಮ ದಿನದ ಶುಭಾಶಯಗಳು*

Read More