*ಜನಪ್ರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರಿಗೆ ಜನ್ಮ ದಿನದ ಶುಭಾಶಯಗಳು*
ಲೇಖಕ: admin
*ಜನಪ್ರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರಿಗೆ ಜನ್ಮ ದಿನದ ಶುಭಾಶಯಗಳು*
ಕುಶಾಲನಗರ ಜು.8 NEWS DESK : ಕುಶಾಲನಗರದ ಲಾಡ್ಜೊಂದರಲ್ಲಿ ಹೆಂಗಸರಿಂದ ಮಸಾಜ್ ಮಾಡಿಸಲಾಗುವುದು ಎಂದು ನಂಬಿಸಿ ಆನ್ಲೈನ್ ಮೂಲಕ ಗ್ರಾಹಕರಿಂದ ಹಣ ಪಡೆದು ವಂಚಿಸುತ್ತಿದ್ದ ಹಾಸನ ಮೂಲದ 8 ಮಂದಿಯನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಸುಳ್ಳಕ್ಕಿ ಗ್ರಾಮದ ಮಂಜುನಾಥ (29), ಚಿಕ್ಕಸತ್ತಿಗಾಲದ ಸಿ.ಎಸ್.ಸಂದೀಪ್ ಕುಮಾರ್, ಸಿ.ಬಿ.ರಾಕೇಶ್ (24) ಕೆ.ಜಯಲಕ್ಷ್ಮಿ (29), ಬೇಲೂರು ತಾಲೂಕಿನ ರಾಮನಗರ ಗ್ರಾಮದ ಎಸ್. ಸಹನಾ(19), ಪಲ್ಲವಿ(30),ಸಕಲೇಶಪುರ ತಾಲೂಕಿನ ಇರಗಲ್ ಗ್ರಾಮದ ಅಭಿಷೇಕ್ (24) ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಅಪ್ರಾಪ್ತ ಬಾಲಕಿಯನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದ ಪೊಲೀಸರು, ಆರೋಪಿಗಳಿಂದ ಎರಡು ಕಾರು,17ಮೊಬೈಲ್, ತಲಾ ಒಂದು ಟ್ಯಾಬ್ ಹಾಗೂ ಲ್ಯಾಪ್ಟಾಪ್ ಮತ್ತು 24,800 ರೂ.ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಕರೆ ಮಾಡಿದ ವ್ಯಕ್ತಿಗಳ ಊರಿನಲ್ಲಿರುವ ಲಾಡ್ಜ್ನ ಹೆಸರು ಹೇಳಿಕೊಂಡು ಹಲವು ಜನರಿಗೆ ವಂಚಿಸಿ 3 ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು ಪಡೆದಿರುವುದು ತನಿಖೆಯಲ್ಲಿ ತಿಳಿದು ಬಂದಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಘಟನೆಯ…
ಮಡಿಕೇರಿ ಜು.8 NEWS DESK : ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದ ನೂತನ ಅಧ್ಯಕ್ಷರನ್ನಾಗಿ ನಗರಸಭಾ ಸದಸ್ಯ ಬಿ.ವೈ.ರಾಜೇಶ್ ಹಾಗೂ ನಾಲ್ವರು ಸದಸ್ಯರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ನೂತನ ಸದಸ್ಯರಾಗಿ ಸುದಯ್ ಎಂ.ಎನ್, ಮೊಣ್ಣಪ್ಪ ಕೆ.ಎ, ಮಿನಾಜ್ ಫಾತಿಮಾ ಹಾಗೂ ಚಂದ್ರಶೇಖರ್ ಆರ್.ಪಿ. ನಿಯುಕ್ತಿಗೊಂಡಿದ್ದಾರೆ.
ಮಡಿಕೇರಿ ಜು.8 NEWS DESK : ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದ ನೂತನ ಅಧ್ಯಕ್ಷರನ್ನಾಗಿ ನಗರಸಭಾ ಸದಸ್ಯ ಬಿ.ವೈ.ರಾಜೇಶ್ ಹಾಗೂ ನಾಲ್ವರು ಸದಸ್ಯರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ನೂತನ ಸದಸ್ಯರಾಗಿ ಸುದಯ್ ಎಂ.ಎನ್, ಮೊಣ್ಣಪ್ಪ ಕೆ.ಎ, ಮಿನಾಜ್ ಫಾತಿಮಾ ಹಾಗೂ ಚಂದ್ರಶೇಖರ್ ಆರ್.ಪಿ. ನಿಯುಕ್ತಿಗೊಂಡಿದ್ದಾರೆ.
ಮಡಿಕೇರಿ ಜು.8 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯಾಗುವ ಮೊದಲೇ ಪ್ರವಾಹ ಮುಂಜಾಗೃತಾ ಕ್ರಮವಾಗಿ ಸಂಜೆ ವೇಳೆ 1 ಸಾವಿರ ಕ್ಯುಸೆಕ್ ಪ್ರಮಾಣದ ನೀರನ್ನು ನದಿ ಪಾತ್ರಕ್ಕೆ ಬಿಡುಗಡೆ ಮಾಡಲಾಗಿದೆ. ಕ್ರೆಸ್ಟ್ ಗೇಟ್ ತೆರೆಯುವ ವಿದ್ಯುತ್ ಚಾಲಿತ ಯಂತ್ರದ ಗುಂಡಿ ಒತ್ತುವ ಮೂಲಕ ನೀರನ್ನು ಬಿಡುಗಡೆ ಮಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ, ಮುಂದಿನ ಮಳೆಯ ಮುನ್ಸೂಚನೆ, ಒಳ ಹರಿವಿನ ಪ್ರಮಾಣ, ಪ್ರಸ್ತುತ ನದಿಗೆ ಹರಿ ಬಿಡಲಾಗುತ್ತಿರುವ ನೀರಿನ ಪ್ರಮಾಣ ಮತ್ತಿತ್ತರ ವಿಚಾರಗಳ ಕುರಿತು ಹಾರಂಗಿ ಜಲಾಶಯದ ಅಧಿಕಾರಿಗಳು ಮತ್ತು ಇಂಜಿನಿಯರ್ಗಳಿAದ ಮಾಹಿತಿ ಪಡೆದರು. ಉತ್ತಮ ಮಳೆಯಿಂದ ಕಾವೇರಿ ನದಿಯಲ್ಲೂ ನೀರಿನ ಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಹರಿಸುವ ನೀರಿನಿಂದ ಪ್ರವಾಹ ಪರಿಸ್ಥಿತಿ ಉಂಟಾಗದAತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಶಾಸಕರು ಮತ್ತು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಜಲಾಶಯದ 4 ಕ್ರೆಸ್ಟ್…
ಮಡಿಕೇರಿ ಜು.8 NEWS DESK : ಮದೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರ್ತೋಜಿ ಬಳಿ ಮಳೆಯಿಂದಾಗಿ ರಸ್ತೆಯ ಒಂದು ಬದಿ ಉಬ್ಬಿಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಎಚ್ಚರಿಕೆ ಫಲಕ ಅಳವಡಿಸಿದ್ದಾರೆ.
ಸೋಮವಾರಪೇಟೆ ಜು.8 NEWS DESK : ಸಮಯದ ಸದುಪಯೋಗ, ನಿರಂತರ ಕಲಿಕೆಯಿಂದ ವಿದ್ಯಾರ್ಥಿಗಳು ಅಧಿಕ ಅಂಕಗಳನ್ನು ಗಳಿಸಬಹುದು ಎಂದು ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಹೇಳಿದರು. ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘ ಹಾಗೂ ಫ್ರೇಶರ್ಸ್ ಡೇ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಮಾಧ್ಯಮದಲ್ಲಿ ಶಿಕ್ಷಣ ಕೊಡಬೇಕೆಂಬ ಉದ್ದೇಶದಿಂದ ಒಕ್ಕಲಿಗರ ಸಂಘ ಸಂಸ್ಥೆಯನ್ನು ಹುಟ್ಟು ಹಾಕಿದೆ. ಶೇ.99ರಷ್ಟು ಮಂದಿ ಗ್ರಾಮೀಣ ವಿದ್ಯಾರ್ಥಿಗಳು ನಮ್ಮ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸತತ 7ನೇ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದ ಹೆಗ್ಗಳಿಕೆ ಶಾಲೆಗಿದೆ. ಪ್ರಸಕ್ತ ವರ್ಷ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲೂ ಶೇ.100 ಫಲಿತಾಂಶ ಸಿಕ್ಕಿದೆ. ಹಿಂದಿನ ವರ್ಷದಿಂದ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ತೆರೆಯಲಾಗಿದೆ ಎಂದು ಹೇಳಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷರುಗಳಾಗಿ ಕೆ.ಎಲ್.ಕೀರ್ತನ್, ಎಚ್.ಆರ್.ಜೀವಿತ, ಉಪಾಧ್ಯಕ್ಷರುಗಳಾಗಿ ಪೂರ್ಣಚಂದ್ರ, ಸ್ನೇಹ, ಕ್ರೀಡಾ ಮಂತ್ರಿಗಳಾಗಿ ಕೃಷಿ, ಅಮೂಲ್ಯ, ಶಿಸ್ತುಪಾಲನ ಮಂತ್ರಿಗಳಾಗಿ ಮಿಥುನ್,…
ಮಡಿಕೇರಿ ಜು.8 NEWS DESK : ಅರಣ್ಯ ಇಲಾಖೆಯ ವಿರಾಜಪೇಟೆ ಪ್ರಾದೇಶಿಕ ವಿಭಾಗ ತಿತಿಮತಿ ವಲಯದ ವತಿಯಿಂದ ದೇವರಪುರದಲ್ಲಿ ವನಮಹೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆಯ ಶಾಸಕರಾದ ಎ.ಎಸ್.ಪೊನ್ನಣ್ಣ ಭಾಗವಹಿಸಿ ಗಿಡನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಈ ಸಂದರ್ಭ ಕಾಂಚನ್ ಪೊನ್ನಣ್ಣ ಮತ್ತು ಅರಣ್ಯ ಅಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಜು.8 NEWS DESK : ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯು ಜು.11 ರಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಕೊಡಗು ಜಿಲ್ಲಾ ಪಂಚಾಯಿತಿಯ ಮುಖ್ಯ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿ.ಪಂ.ಸಿಇಒ ತಿಳಿಸಿದ್ದಾರೆ.






