ಮಡಿಕೇರಿ ಜು.18 NEWS DESK : ಮಾನವ ಸಂಪನ್ಮೂಲ ಇಲಾಖೆಯಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಈಗಾಗಲೇ ಆಹ್ವಾನಿಸಿದ್ದು, ಅರ್ಜಿಯನ್ನು ಸೆ.16 ರೊಳಗೆ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊಡಗು ಜಿಲ್ಲೆಯ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ, ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪ್ರಾಥಮಿಕ ಶಾಲೆಯಲ್ಲಿ ಐದನೆಯ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಯ ಪಾಲಕರು ಕೊಡಗು ಜಿಲ್ಲೆಯ ನಿವಾಸಿಯಾಗಿದ್ದು, ವಿದ್ಯಾರ್ಥಿಯೂ ಕೂಡಾ ಕೊಡಗು ಜಿಲ್ಲೆಯಲ್ಲೇ ಓದುತ್ತಿರಬೇಕು. ಅಭ್ಯರ್ಥಿ 2023 ರ ಮೇ, 01 ರಿಂದ 2025 ರ ಜುಲೈ, 31 ರೊಳಗೆ ಜನಿಸಿದವರಾಗಿರಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 16 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು https://navodaya.gov.in ಗಳಲ್ಲಿ ಸೂಕ್ತ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಬಹುದು ಎಂದು ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ…
ಲೇಖಕ: admin
ಮಡಿಕೇರಿ ಜು.18 NEWS DESK : ಕೇಂದ್ರ ಸರ್ಕಾರದ ಆಲಿಮ್ಕೋ ಸಂಸ್ಥೆಯಿಂದ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಹಾಗೂ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳನ್ನು ನೀಡುವ ಸಂಬಂಧ ತಾಲ್ಲೂಕುವಾರು ಮೌಲ್ಯಮಾಪನ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ವಿಶೇಷಚೇತನರಿಗೆ ಹಾಗೂ ಹಿರಿಯನಾಗರಿಕರಿಗೆ ಈ ಶಿಬಿರಕ್ಕೆ ಬಂದು ಹೋಗಲು ಅನಾನುಕೂಲವಾಗುವುದರಿಂದ ಮೌಲ್ಯಮಾಪನ ಶಿಬಿರವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಹಾಗೂ ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ.08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ತಿಳಿಸಿದ್ದಾರೆ.
ಮಡಿಕೇರಿ ಜು.18 NEWS DESK : ಪ್ರಸಕ್ತ(2024-25) ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಶೇ.6 ರ ಬಡ್ಡಿ ಸಹಾಯಧನ ನೀಡಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಹೈನುಗಾರಿಕೆಗಾಗಿ ವಿವಿಧ ಬ್ಯಾಂಕ್ಗಳಲ್ಲಿ ಸಾಲ ಪಡೆಯುವ ಪ್ರತಿ ಫಲಾನುಭವಿಗಳಿಗೆ ಗರಿಷ್ಠ 65 ಸಾವಿರ ರೂ ಸಾಲದ ಮೊತ್ತಕ್ಕೆ ಶೇ.6 ಬಡ್ಡಿ ಸಹಾಯಧನ (3625 ರೂ.) ನೀಡಲಾಗುತ್ತದೆ. ಪ್ರತಿ ಹಸು/ಎಮ್ಮೆ ಘಟಕದ ಮೊತ್ತ ರೂ:65000, ಶೇ.6 ವಾರ್ಷಿಕ ಬಡ್ಡಿ ಸಹಾಯಧನದ ಪ್ರತಿ ಫಲಾನುಭವಿಗೆ ಗರಿಷ್ಟ ರೂ.3624.50/-(3625), ಆಸಕ್ತ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಅಥವಾ ಸಂಬಂಧಪಟ್ಟ ಪಶು ಆಸ್ಪತ್ರೆಗಳನ್ನು ಸಂರ್ಪಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ ತಿಳಿಸಿದ್ದಾರೆ.
ಮಡಿಕೇರಿ ಜು.18 NEWS DESK : 2023-24ರ ಶೈಕ್ಷಣಿಕ ಸಾಲಿನಲ್ಲಿ ಕೇಂದ್ರ ಸರ್ಕಾರ ರಾಷ್ಟ್ರ ಮಟ್ಟದಲ್ಲಿ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಸಲುವಾಗಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ್(Pಒ USಂ) ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಗೆ ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಅಯ್ಕೆಯಾಗಿದ್ದು, ಈ ಯೋಜನೆಯಡಿ ಸಂಸ್ಥೆಗೆ ಮೂಲಭೂತ ಸೌಕರ್ಯ ಮತ್ತು ನವೀಕರಣ ಕಾಮಗಾರಿಗಾಗಿ 5 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಸರಕಾರ ಕಾಮಗಾರಿಯನ್ನು ಕರ್ನಾಟಕ ಗೃಹ ಮಂಡಳಿಯವರಿಗೆ ನೀಡಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ದಯಾನಂದ ಕೆ.ಸಿ.ತಿಳಿಸಿದ್ದಾರೆ.
ಮಡಿಕೇರಿ ಜು.18 NEWS DESK : 2024-25ನೇ ಸಾಲಿನ 32ನೇ ರಾಜ್ಯಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳು ಆ.10 ರಂದು ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ.ದೇವಯ್ಯ ಅವರ ಗದ್ದೆಯಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಹಾಗೂ ಮಡಿಕೇರಿ ತಾಲೂಕು ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಫ್ ಇಂಡಿಯಾ (ಮಡಿಕೇರಿ ಘಟಕ), ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಕಗ್ಗೊಡ್ಲು ಕಾವೇರಿ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 9.30 ರಿಂದ ಸ್ಪರ್ಧೆಗಳು ನಡೆಯಲಿವೆ. ಸಾರ್ವಜನಿಕ ಪುರುಷ ಮತ್ತು ಮಹಿಳೆಯರ ಹಗ್ಗ ಜಗ್ಗಾಟ (7 ಜನರ ತಂಡ), ಸಾರ್ವಜನಿಕ ಪುರುಷರ ವಾಲಿಬಾಲ್ (4 ಜನರ ತಂಡ), ಸಾರ್ವಜನಿಕ ಮಹಿಳೆಯರಿಗೆ ಥ್ರೋಬಾಲ್ (6 ಜನರ ತಂಡ), ಪ್ರೌಢ…
ಮಡಿಕೇರಿ ಜು.18 NEWS DESK : ವಿರಾಜಪೇಟೆ ತಾಲೂಕು ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆಯಲ್ಲಿ ಭಾರಿ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಈ ಹಿನ್ನೆಲೆ ಕರಡಿಗೋಡು ಹೊಳೆಕೆರೆ ಬದಿಯಲ್ಲಿ ವಾಸವಿರುವ 9 ಕುಟುಂಬದವರಿಗೆ ಪ್ರವಾಹ ಭೀತಿ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳಾಂತರಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ರಾಮಚಂದ್ರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇತರರು ಭೇಟಿ ನೀಡಿ ವೀಕ್ಷಿಸಿದರು.
ಮಡಿಕೇರಿ ಜು.18 NEWS DESK : ಶೌಚಾಲಯದ ಗುಂಡಿಯಲ್ಲಿ ಸಿಲುಕಿದ್ದ ಕಾಡಾನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ರಕ್ಷಿಸಿರುವ ಘಟನೆ ಕೊಳತೋಡು ಬೈಗೋಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಗಣೇಶ್ ಎಂಬವರ ಮನೆಯ ಶೌಚಾಲಯದಲ್ಲಿ ಕಾಡಾನೆ ಸಿಲುಕಿಕೊಂಡಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಕಾಡಾನೆಯನ್ನು ರಕ್ಷಿಸಿ, ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಡಿಎಫ್ಓ ಜಗನ್ನಾಥ್, ಎಸಿಎಫ್ ನೆಹರು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರ್ಎಫ್ಓ ಕೆ.ಎಂ.ದೇವಯ್ಯ, ಡಿಆರ್ಎಫ್ಒ ಸಂಜಿತ್ ಸೋಮಯ್ಯ ಸೇರಿದಂತೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಮಡಿಕೇರಿ ಜು.18 NEWS DESK : ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಕಳೆದ 9 ವರ್ಷಗಳಿಂದ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಆರ್.ಪಿ.ಚಂದ್ರಶೇಖರ್ ಅವರಿಗೆ ಶಾಲೆಯ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲೆ ಪಿ.ಕೆ.ನಳಿನಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ, ಶಾಲೆಯ ದೈಹಿಕ ಶಿಕ್ಷಕ ಶ್ರೀನಿವಾಸ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಚಂದ್ರಶೇಖರ್ ಅವರನ್ನು ಸನ್ಮಾನಿಸಿ, ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಆರ್.ಪಿ.ಚಂದ್ರಶೇಖರ್, ಶಾಲೆಯ ಅಭಿವೃದ್ಧಿಗೆ ಮುಂದೆಯೂ ಸಹಕಾರ ನೀಡುವುದಾಗಿ ಚಂದ್ರಶೇರ್ ತಿಳಿಸಿದರು. ಉಪ ಪ್ರಂಶುಪಾಲೆ ಕೆ.ವಿ.ಶಶಿಕಲಾ ಪ್ರಾಸ್ತಾವಿಕ ನುಡಿಗಳನ್ನಾಡಿ, ಶಾಲೆಯ ಅಭಿವೃದ್ಧಿಗೆ ಚಂದ್ರಶೇಖರ್ ಅವರು ಶ್ರಮ ವಹಿಸಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ವಿದ್ಯಾರ್ಥಿನಿಯರಾದ ಮೇಘನಾ ಹಾಗೂ ಶ್ರೇಷ್ಟ ತಮ್ಮ ಅನುಭವಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಆಂಗ್ಲ ಭಾಷಾ ಶಿಕ್ಷಕಿ ಐರಿನ್ ಉಷಾ ನಿರೂಪಿಸಿದರು. ವಿದ್ಯಾರ್ಥಿಗಳಾದ ಶಿವಕುಮಾರ್, ಚಂದ್ರ ಸ್ವರಚಿತ ಧನ್ಯವಾದ ಸಮರ್ಪಣೆ ಗಾಯನ ಮಾಡಿದರು. ಸಮಾಜ ವಿಜ್ಞಾನ ಶಿಕ್ಷಕಿ ಮಂದಾಕಿನಿ ವಂದಿಸಿದರು.
ಮಡಿಕೇರಿ ಜು.18 NEWS DESK : ತೀವ್ರ ಮಳೆಯಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಕ್ಕೆ (ಚೆಸ್ಕಾಂ) ರೂ.1.17 ಕೋಟಿ ನಷ್ಟ ಸಂಭವಿಸಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಏಪ್ರಿಲ್ನಿಂದ ಇಲ್ಲಿಯವರೆಗೆ ನಷ್ಟದ ಮೊತ್ತ ಇದಾಗಿದ್ದು, ವಿದ್ಯುತ್ ಕಂಬ, ಟ್ರಾನ್ಸ್ಫಾರ್ಮರ್ಗಳನ್ನು ಬದಲಿಸಿ ವಿದ್ಯುತ್ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಜಿಲ್ಲೆಯಲ್ಲಿ 1606 ಕಂಬಗಳು ಹಾನಿಯಾಗಿದ್ದು, 110 ಸರಿಪಡಿಸಲು ಬಾಕಿ ಇವೆ. 1.5 ಕಿ.ಮೀ ವಿದ್ಯುತ್ ವಾಹಕ ಅಳವಡಿಸಲಾಗಿದೆ. ಮಳೆಯಿಂದ ಹಾನಿಗೀಡಾದ 43 ಟ್ರಾನ್ಸ್ಫಾರ್ಮರ್ಗಳನ್ನು ಹೊಸದಾಗಿ ಅಳವಡಿಸಿ ಕ್ರಮವಹಿಸಲಾಗಿದೆ. 235 ಖಾಯಂ ಲೈನ್ಮೆನ್ಗಳಿದ್ದು, ಮಳೆಗಾಲಕ್ಕಾಗಿ ವಿವಿಧೆಡೆಗಳಿಂದ 40 ಲೈನ್ಮೆನ್ಗಳನ್ನು ನೇಮಿಸಿಕೊಳ್ಳಲಾಗಿದೆ. ಇದರೊಂದಿಗೆ ತಾತ್ಕಾಲಿಕವಾಗಿ 62 ಗ್ಯಾಂಗ್ಮೆನ್ಗಳನ್ನು ನಿಯೋಜಿಸಿಕೊಂಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತೀವ್ರ ಮಳೆಯ ನಡುವೆ ಚೆಸ್ಕಾಂ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿರುವುದು ಜಿಲ್ಲೆಯಲ್ಲಿ ಕಂಡುಬರುತ್ತಿದೆ.
ಭಾಗಮಂಡಲ ಜು.18 NEWS DESK : ಕೊಡಗು ಜಿಲ್ಲೆಯ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಎಡೆಬಿಡದೆ ಧಾರಾಕಾರ ಮಳೆಯಾಗುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಉಕ್ಕಿ ಹರಿಯುತ್ತಿದ್ದು, ಪ್ರವಾಹದ ನೀರು ಶ್ರೀಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳನ್ನು ಆವರಿಸಿದೆ. ಅಕ್ಕಪಕ್ಕದ ಅಂಗಡಿಗಳು ಜಲಾವೃತಗೊಂಡಿವೆ. ಕಳೆದ 24 ಗಂಟೆಗಳಲ್ಲಿ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ಆರು ಇಂಚಿಗೂ ಅಧಿಕ ಮಳೆಯಾಗಿದೆ. ಮಳೆಯ ಪ್ರಮಾಣ ಹೆಚ್ಚಾಗಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಎತ್ತರ ಪ್ರದೇಶ ಮತ್ತು ತಗ್ಗು ಪ್ರದೇಶದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಗ್ರಾಮ ಪಂಚಾಯಿತಿ ಈಗಾಗಲೇ ಸೂಚನೆ ನೀಡಿದೆ.






