ಮಡಿಕೇರಿ ಜು.8 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಬಡವರ ಆರ್ಥಿಕ ಸಬಲೀಕರಣಕ್ಕೆ ಪ್ರಯತ್ನಿಸಿದೆ. ಆ ನಿಟ್ಟಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ ರೂ.2000 ನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಇದುವರೆಗೆ 1,15,229 ಮಂದಿ ಮಹಿಳೆಯರು ನೋಂದಣಿ ಮಾಡಿದ್ದು, ಇವರಲ್ಲಿ 1,14,056 ಮಂದಿ ಮಹಿಳೆಯರಿಗೆ ಮಂಜೂರಾಗಿ ಶೇ.98.98 ರಷ್ಟು ಸಾಧನೆ ಮಾಡಲಾಗಿದೆ. ತಾಲ್ಲೂಕುವಾರು ಗಮನಿಸಿದಾಗ ಮಡಿಕೇರಿ ತಾಲ್ಲೂಕಿನಲ್ಲಿ 30,341 ಮಂದಿ ಮಹಿಳೆಯರು ನೋಂದಣಿಯಾಗಿದ್ದು, ಇವರಲ್ಲಿ 30169 ಮಂದಿ ಮಹಿಳೆಯರಿಗೆ ಮಂಜೂರಾತಿ ದೊರೆತಿದ್ದು, ಶೇ.99.43 ರಷ್ಟು ಸಾಧನೆ ಮಾಡಲಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ 24,238 ಮಂದಿ ಮಹಿಳೆಯರು ಹೆಸರು ನೋಂದಾಯಿಸಿದ್ದು, ಇವರಲ್ಲಿ 24,124 ಮಂದಿ ಮಹಿಳೆಯರಿಗೆ ಮಂಜೂರಾತಿ ದೊರೆತಿದ್ದು, ಶೇ.99.53 ರಷ್ಟು ಸಾಧನೆ ಮಾಡಲಾಗಿದೆ. ಕುಶಾಲನಗರ ತಾಲ್ಲೂಕಿನಲ್ಲಿ 22,108 ಫಲಾನುಭವಿಗಳು ನೋಂದಣಿಯಾಗಿದ್ದು, ಇವರಲ್ಲಿ 21,830 ಮಂದಿ ಮಹಿಳೆಯರಿಗೆ…
ಲೇಖಕ: admin
ವಿರಾಜಪೆಟೆ ಜು.8 NEWS DESK : ವಿರಾಜಪೇಟೆಯ ಪ್ರಗತಿ ಶಾಲೆಯಲ್ಲಿ ವಿದ್ಯಾರ್ಥಿ ಸಂಘವನ್ನು ವಿರಾಜಪೇಟೆ ವೃತ್ತ ನಿರೀಕ್ಷಕರಾದ ಶಿವರುದ್ರಪ್ಪಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಈ ಶಾಲೆಯಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆ ನಡೆಯುತ್ತಿದೆ. ನನ್ನ ಮೂವತ್ತು ವರ್ಷಗಳ ಸೇವೆಯಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿದೆ, ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ನಾಯಕನಾಗುವ ಎಲ್ಲಾ ಗುಣಗಳಿವೆ ಎಂದು ನುಡಿದರು. ಪ್ರಗತಿ ಶಾಲೆಯ ವ್ಯವಸ್ಥಾಪಕರಾದ ಮಾದಂಡ ತಿಮ್ಮಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ ನಮ್ಮ ಶಾಲೆಯಲ್ಲಿ ವಿಧ್ಯಾಭ್ಯಾಸಗಳ ಜೊತೆಯಲ್ಲಿ ವಿವಿಧ ರೀತಿಯ ಚಟುವಟಿಕೆಗಳಿಗೆ ಹೆಚ್ಚಿನ ಪ್ರಮಾಣದ ಒತ್ತು ನೀಡಲಾಗುತ್ತಿದೆ. ಮಕ್ಕಳು ಹಾಗೂ ಪೋಷಕರು ಉತ್ತಮ ರೀತಿಯಲ್ಲಿ ನಮಗೆ ಸಹಕಾರ ನೀಡುತ್ತಾರೆ ಎಂದು ತಿಳಿಸಿದರು. ವೇದಿಕೆಯಲ್ಲಿ ನೂತನ ಸಾಲಿನ ನಾಯಕರಿಗೆ ಜವಾಬ್ದಾರಿ ನೀಡುವ ಕಾರ್ಯಕ್ರಮ ನಡೆಯಿತು. ಶಾಲಾ ನಾಯಕನಾಗಿ 9ನೇ ತರಗತಿ ಉಮರ ಸುಲ್ತಾನ್, ಉಪನಾಯಕಿಯಾಗಿ ಕೆ.ಎ.ದಿಯಾ, ಕ್ರೀಡಾ ನಾಯಕನಾಗಿ ಬಿ.ಜಿ.ಶಿಶಿರ ಸುಗಂಧ್,…
ಮಡಿಕೇರಿ ಜು.8 NEWS DESK : ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ. ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿರುತ್ತದೆ. ಜಲಾಶಯವು ಶೀಘ್ರವೇ ಗರಿಷ್ಟ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಆದ್ದರಿಂದ ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಕೋರಲಾಗಿದೆ.
ಮಡಿಕೇರಿ ಜು.8 NEWS DESK : ಆಂಧ್ರಪ್ರದೇಶದ ಕಡಪಾದಲ್ಲಿ ಜು.10ರಿಂದ 17 ರವರೆಗೆ ನಡೆಯಲಿರುವ 2ನೇ ಹಾಕಿ ಇಂಡಿಯಾ ಜೂನಿಯರ್ ಮಹಿಳಾ ದಕ್ಷಿಣ ವಲಯ ಚಾಂಪಿಯನ್ ಶಿಪ್ ನಲ್ಲಿ ಬೇಂಗೂರು ಗ್ರಾಮದ ಪಟ್ಟಮಾಡ ಶ್ರೀಷ್ಮ ಬೊಳ್ಳಮ್ಮ ಹಾಕಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಬೇಂಗೂರಿನ ಪಟ್ಟಮಾಡ ರವಿನ್ ಮುತ್ತಣ್ಣ ಹಾಗೂ ಮಿಲನ್ ಮುತ್ತಣ್ಣ ಅವರ ಪುತ್ರಿ ಶ್ರೀಷ್ಮ ಬೊಳ್ಳಮ್ಮ ಬೆಂಗಳೂರಿನ ಸಂತ ಜೋಸೆಫರ ಕಾಲೇಜ್ ನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.
ಕುಶಾಲನಗರ ಜು.8 NEWS DESK : ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಲ್ಲಿ ಹಿರಿಯ ಪತ್ರಕರ್ತರಿಗೆ ಪುಲಿಯಂಡ ರಾಮ್ ದೇವಯ್ಯ ಅವರು ಜ್ಞಾನಗಂಗಾ ಶಾಲೆಯ ಹೆಸರಿನಲ್ಲಿ ಸ್ಥಾಪಿಸಿರುವ ವಾರ್ಷಿಕ ದತ್ತಿ ಪ್ರಶಸ್ತಿಗೆ ಹೊಸದಿಗಂತ ಪತ್ರಿಕೆಯ ಜಿಲ್ಲಾ ವರದಿಗಾರ ಕೆ. ತಿಮ್ಮಪ್ಪ ಭಾಜನರಾಗಿದ್ದಾರೆ. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಕೊಡಗು ವಿಶ್ವವಿದ್ಯಾಲಯದ ಆಶ್ರಯದಲ್ಲಿ ಜು.9 ರಂದು ಕೊಡಗು ವಿಶ್ವವಿದ್ಯಾಲಯದ ಚಿಕ್ಕ ಅಳುವಾರ ಜ್ಞಾನಕಾವೇರಿ ಸಭಾಂಗಣದಲ್ಲಿ ಮಧ್ಯಾಹ್ನ 1 ಗಂಟೆಗೆ ನಡೆಯುವ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಕೊಡಗು ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೊ.ಅಶೋಕ್ ಸಂಗಪ್ಪ ಆಲೂರ ಉದ್ಘಾಟಿಸಲಿದ್ದಾರೆ. ಗೌರವ ಉಪಸ್ಥಿತಿಯನ್ನು ಕೊಡಗು ವಿಶ್ವ ವಿದ್ಯಾಲಯದ ರಿಜಿಸ್ಟ್ರಾರ್ (ಪರಿಕ್ಷಾಂಗ) ಡಾ.ಸೀನಪ್ಪ ವಹಿಸಲಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರರು ಹಾಗೂ ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ.ಅನಂತಶಯನ ಮುಖ್ಯ ಭಾಷಣ ಮಾಡಲಿದ್ದಾರೆ. ಕುಶಾಲನಗರ ರೋಟರಿಯ ಅಧ್ಯಕ್ಷ ಎಂ.ಡಿ.ರಂಗಸ್ವಾಮಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕೊಡಗು ಪತ್ರಕರ್ತರ…
ಮಡಿಕೇರಿ ಜು.8 NEWS DESK : ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯ ನೂತನ ಅಧ್ಯಕ್ಷೆಯಾಗಿ ಆಗ್ನೇಸ್ ಮುತ್ತಣ್ಣ ಮತ್ತು ಕಾಯ೯ದಶಿ೯ಯಾಗಿ ರಶ್ಮಿ ಪ್ರವೀಣ್ ಅಧಿಕಾರ ಸ್ವೀಕರಿಸಿದರು. ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಇನ್ನರ್ ವೀಲ್ ನ ನಿಕಟಪೂವ೯ ಜಿಲ್ಲಾಧ್ಯಕ್ಷೆ ಪೂಣಿ೯ಮಾ ರವಿ ಪದಗ್ರಹಣ ನೆರವೇರಿಸಿದರು. ಕಾಯ೯ಕ್ರಮದಲ್ಲಿ ಮಡಿಕೇರಿ ನಗರಸಭೆಯ ಪೌರಕಾಮಿ೯ಕರಾದ ಲಕ್ಷ್ಮಿ ಮತ್ತು ಲಕ್ಷ್ಮಮ್ಮ ಅವರನ್ನು ಸನ್ಮಾನಿಸಲಾಯಿತು. ರೋಟರಿ ಮಡಿಕೇರಿಯ ಅಧ್ಯಕ್ಷ ಸುದಯ್ ನಾಣಯ್ಯ ಅವರು ಲಲಿತಾರಾಘವನ್ ಸಂಪಾದಕತ್ವದಲ್ಲಿ ಪ್ರಕಟಿತ ಗಿರಿಶೖಂಗ ವಾತಾ೯ಸಂಚಿಕೆ ಬಿಡುಗಡೆಗೊಳಿಸಿದರು. ವೇದಿಕೆಯಲ್ಲಿ ಇನ್ನರ್ ವೀಲ್ ಖಜಾಂಜಿ ದಿವ್ಯ ಮುತ್ತಣ್ಣ, ನಿಕಟಪೂವ೯ ಅಧ್ಯಕ್ಷೆ ಕನ್ನು ದೇವರಾಜ್ ಉಪಸ್ಥಿತರಿದ್ದರು. ಡಾ.ರೇಣುಕಾ ಸುಧಾಕರ್ ಪ್ರಾಥಿ೯ಸಿ, ಲತಾ ಚೆಂಗಪ್ಪ, ಶಫಾಲ್ಲಿ ರೈ, ಗುಲಾಬಿ ಜನಾರ್ಧನ್, ನಮಿತಾ ರೈ, ರಾಧಿಕ ವಿಶ್ವನಾಥ್ ನಿವ೯ಹಿಸಿದ ಕಾಯ೯ಕ್ರಮದಲ್ಲಿ ಬೊಳ್ಳು ಮೇದಪ್ಪ ವಂದಿಸಿದರು.
ಮಡಿಕೇರಿ ಜು.8 NEWS DESK : ಅಂತರರಾಷ್ಟ್ರೀಯ ಸೇವಾ ಸಂಸ್ಥೆಯಾಗಿ ಜಗದಗಲ ಖ್ಯಾತಿ ಗಳಿಸಿರುವ ರೋಟರಿ ಸಂಸ್ಥೆಯು ನಾಯಕತ್ವ ಗುಣ ಬೆಳೆಸಲು ನೆರವಾಗುವುದರೊಂದಿಗೆ ಸದಸ್ಯರಲ್ಲಿರುವ ಪ್ರತಿಭೆಯ ಅನಾವರಣಕ್ಕೂ ವೇದಿಕೆಯಾಗಿ ಸಮಾಜ ಸೇವೆಗೆ ಪ್ರೇರಪಣೆ ನೀಡುತ್ತದೆ ಎಂದು ಸುಳ್ಯ ರೋಟರಿ ಸಂಸ್ಥೆಯ ಮಾಜಿ ಸಹಾಯಕ ಗವನ೯ರ್ ಡಾ. ಪಿ.ಕೆ.ಕೇಶವ್ ಹೇಳಿದ್ದಾರೆ. ಮಡಿಕೇರಿ ರೋಟರಿ ಸಭಾಂಗಣದಲ್ಲಿ ರೋಟರಿ ಮಡಿಕೇರಿ ವುಡ್ಸ್ ನ ನೂತನ ಅಧ್ಯಕ್ಷರಾಗಿ ಹರೀಶ್ ಕಿಗ್ಗಾಲು ಮತ್ತು ಕಾಯ೯ದಶಿ೯ಯಾಗಿ ಕಿರಣ್ ಕುಂದರ್ ಹಾಗೂ ತಂಡದ ಪದಗ್ರಹಣ ನೆರವೇರಿಸಿ ಮಾತನಾಡಿದ ಡಾ. ಪಿ.ಕೆ.ಕೇಶವ್, ಸರಿಯಾದ ವೇದಿಕೆಗಳು ದೊರಕದೇ ಇದ್ದಾಗ ಅಸಾಮಾನ್ಯ ವ್ಯಕ್ತಿ ಕೂಡ ಸಾಮಾನ್ಯನಾಗಿಬಿಡುತ್ತಾನೆ, ರೋಟರಿಯಂಥ ನಾಯಕತ್ವ ಬೆಳೆಸುವ ಸಂಸ್ಥೆಗಳು ಅಸಮಾನ್ಯ ವ್ಯಕ್ತಿತ್ವದವರೊಂದಿಗೆ ಸಾಮಾನ್ಯನನ್ನೂ ಅಸಮಾನ್ಯ ವ್ಯಕ್ತಿತ್ವದ ನಾಯಕನನ್ನಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಹೀಗಾಗಿ ರೋಟರಿಯಂಥ ಸೇವಾ ಸಂಸ್ಥೆಗಳಲ್ಲಿ ಸೇಪ೯ಡೆಯಾಗಿ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಟಿ20 ವಿಶ್ವಕಪ್ ನಲ್ಲಿ ಭಾರತ ತಂಡ ಹೇಗೆ ಎಲ್ಲಾ ಆಟಗಾರರ ಸಾಮಥ್ಯ೯…
ಮಡಿಕೇರಿ ಜು.8 NEWS DESK : ಆಂಧ್ರಪ್ರದೇಶದ ಕಡಪದಲ್ಲಿ ಜು.10ರಿಂದ ನಡೆಯಲಿರುವ ಹಾಕಿ ಇಂಡಿಯಾ ದಕ್ಷಿಣ ವಲಯ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಮಕ್ಕಂದೂರು ಗ್ರಾಮದ, ಪ್ರಸ್ತುತ ಬೆಂಗಳೂರಿನ ಕ್ರೀಡಾ ವಸತಿ ನಿಲಯದಲ್ಲಿರುವ ವಿಶ್ವಜಿತ್ ಕೆ.ವಿ ಹಾಕಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಮಕ್ಕಂದೂರಿನ ಕುಂಭಗೌಡನ ವಿನೋದ್ ಕುಮಾರ್ ಹಾಗೂ ಜಲಜಾಕ್ಷಿ ದಂಪತಿಯ ಪುತ್ರ ವಿಶ್ವಜಿತ್, ಬೆಂಗಳೂರಿನ ಅಲ್- ಅಮೀನ್ ಕಾಲೇಜ್ ನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
ಮಡಿಕೇರಿ ಜು.8 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಜನ್ಮದಿನಾಚರಣೆ ಅಂಗವಾಗಿ ಜು.9 ರಂದು ಭಾಗಮಂಡಲದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಕೋಳಿಬೈಲು ವೆಂಕಟೇಶ್ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 7 ಗಂಟೆಯಿಂದ 7.30ರ ವರೆಗೆ ತಲಕಾವೇರಿಯಲ್ಲಿ ವಿಶೇಷ ಪೂಜೆ, 8 ಗಂಟೆಗೆ ತಲಕಾವೇರಿಯಲ್ಲಿ ಪತ್ರಿಕಾಗೋಷ್ಠಿ, 8.30ಕ್ಕೆ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ತುಲಭಾರ, 9 ಗಂಟೆಗೆ ಭಾಗಮಂಡಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಅರಿವಿನ ಮೂಲಕ ಮಕ್ಕಳೊಂದಿಗೆ ಜನ್ಮದಿನ ಆಚರಣೆ, 9.30 ಗಂಟೆಗೆ ಭಾಗಮಂಡಲದ ಮಾರುಕಟ್ಟೆಯಿಂದ ಸ್ವಚ್ಛತಾ ಅಭಿಯಾನ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಕಡಂಗ ಜು.8 NEWS DESK : ಬದ್ರಿಯಾ ಸುನ್ನಿ ಮದರಸದ ನೂತನ ನವಿಕೃತ ಕಟ್ಟಡವನ್ನು ಮಗ್ರಿಬ್ ನಮಾಜ್ ಬಳಿಕ ಉದ್ಘಾಟಿಸಲಾಯಿತು. ಬದ್ರಿಯಾ ಮಸೀದಿಯ ಮುದರಿಸ್ ಸತ್ತಾರ್ ಅಹ್ಸನಿ ಮದರಸ ಕೊಠಡಿಯನ್ನು ಉದ್ಘಾಟಿಸಿ, ಮಾತನಾಡಿ ದಾನಿಗಳ ಸಹಕಾರದಿಂದ ಉತ್ತಮ ಕಟ್ಟಡ ನಿರ್ಮಾಣವಾಗಿದೆ ಇದಕ್ಕೆ ಪ್ರಯತ್ನ ಪಟ್ಟ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ ಪ್ರಾರ್ಥಿಸಿದರು. ಈ ಸಂದರ್ಭ ಬದ್ರಿಯಾ ಜಮಾಅತ್ ಅಧ್ಯಕ್ಷ ಕೆ.ಇ.ಉಸ್ಮಾನ್, ಕೆ.ಎಂ.ಜೆ ಅಧ್ಯಕ್ಷ ಸುಲೈಮಾನ್, ಎಸ್ ವೈ ಎಸ್ ಅಧ್ಯಕ್ಷ ಅಶ್ರಫ್, ಮೊಯ್ದು ಕುಟ್ಟಿ ಮುಸ್ಲಿಯಾರ್, ಬದ್ರಿಯಾ ಜಮಾಅತ್ ಉಪಾಧ್ಯಕ್ಷ ಅಬ್ದುಲ್ ರಝಕ್, ಪ್ರಧಾನ ಕಾರ್ಯದರ್ಶಿ ರಾಶೀದ್, ಕೋಶಾಧಿಕಾರಿ ರಜಾಕ್, ಸದರ್ ಮುಹಲೀಮ್ ಹುಸೈನಾರ್ ಸಅದಿ, ರಝಕ್ ಮುಸ್ಲಿಯಾರ್, ರಫೀಕ್ ಮುಸ್ಲಿಯಾರ್, ಹಿರಿಯರಾದ ಹಸೈನಾರ್, ಬದ್ರಿಯಾ ಯು.ಎ.ಇ. ಸಮಿತಿಯ ಉಪಾಧ್ಯಕ್ಷ ರಶೀದ್ ಅಶ್ರಫಿ, ಮುಸ್ತಫಾ ಜಿದ್ದಾ, ಜಮಾಅತ್ ಪದಾಧಿಕಾರಿಗಳಾದ ಸಹದ್, ನೌಫಲ್, ಕರೀಂ, ಎಸ್ ವೈ ಎಸ್, ಕೆ.ಎಂ.ಜೆ, ಎಸ್.ಎಸ್.ಎಫ್. ಕಾರ್ಯಕರ್ತರು, ಮತಿತ್ತರು ಹಾಜರಿದ್ದರು. ವರದಿ : ನೌಫಲ್






