ನಾಪೋಕ್ಲು ಜು.8 NEWS DESK : ನರಿಯಂದಡ ಗ್ರಾ.ಪಂ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಕುಂಜಿಲ, ಕಕ್ಕಬ್ಬೆ ಗ್ರಾ.ಪಂ ವ್ಯಾಪ್ತಿಯಲ್ಲಿಯ ಮರ೦ದೊಡ ಗ್ರಾಮದಲ್ಲಿ ರೈತರು ಬೆಳೆದ ಕಾಫಿ ಗಿಡಗಳನ್ನು ಕಾಡಾನೆಗಳು ತುಳಿದು ನಾಶಪಡಿಸುತ್ತಿವೆ. ಕಾಡಾನೆಗಳ ಹಾವಳಿಯಿಂದ ಕಾಫಿ ಮತ್ತಿತರ ಬೆಳೆಗಳು ನಾಶವಾಗಿದ್ದು, ರೈತರು ಸಂಕಷ್ಟ ಅನುಭವಿಸುವಂತಾಗಿದೆ. ನಿಡುಮಂಡ ಹರೀಶ ಹಾಗೂ ಅಶೋಕ್, ಭೀಮಯ್ಯ ಅವರ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳು ಕಾಫಿ ಗಿಡಗಳನ್ನು ತುಳಿದು ನಾಶಪಡಿಸಿವೆ. ಸಂಬಂಧಪಟ್ಟ ಅರಣ್ಯ ಇಲಾಖೆ ಕಾಡಾನೆಗಳನ್ನು ಸೆರೆಹಿಡಿದು ಸ್ಥಳಾಂತರಿಸಬೇಕು. ನಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ವರದಿ : ದುಗ್ಗಳ ಸದಾನಂದ.
ಲೇಖಕ: admin
ನಾಪೋಕ್ಲು ಜು.8 NEWS DESK : ಆಂಧ್ರಪ್ರದೇಶದ ಕಡಪದಲ್ಲಿ ಜು 10 ರಿಂದ 17ವರೆಗೆ ನಡೆಯುವ ಎರಡನೇ ಹಾಕಿ ಇಂಡಿಯಾ ದಕ್ಷಿಣ ವಲಯ ಚಾಂಪಿಯನ್ ಶಿಪ್ ಜೂನಿಯರ್ ಕರ್ನಾಟಕ ತಂಡಕ್ಕೆ ಕೊಡಗಿನ ಏಳು ಆಟಗಾರರು ಆಯ್ಕೆಗೊಂಡಿದ್ದಾರೆ. ಬೆಂಗಳೂರಿನಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಈ ತಂಡದಲ್ಲಿ ಕೊಡಗಿನ ಕ್ರೀಡಾಪಟುಗಳಿಗೆ ಹೆಚ್ಚಿನ ಸ್ಥಾನ ಲಭಿಸಿದೆ. ನೂತನ ತಂಡದಲ್ಲಿ ನಾಪೋಕ್ಲು ಗ್ರಾಮದವರಾದ ಬಿದ್ದಾಟಂಡ ಬೋಪಣ್ಣ, ಬಿದ್ದಾಟಂಡ ಅಖಿಲ್, ಕುಲ್ಲೇಟೀರ ವಚನ್ ಮತ್ತು ಕಕ್ಕಬ್ಬೆ ಯವಕಪಾಡಿ ಗ್ರಾಮದ ಚೊಯಮಾಡ ಆಕಾಶ್ ಬಿದ್ದಪ್ಪ, ವಿರಾಜಪೇಟೆಯ ತೀತಮಾಡ ಯಶ್ವಥ್, ಹೃತಿಕ್ ಅಯ್ಯಪ್ಪ ಹಾಗೂ ಅಶ್ವಥ್ ಆಯ್ಕೆಗೊಂಡಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜು.8 NEWS DESK : ಮಾತೃವಂದನಾ ಯೋಜನೆಯು ಕೇಂದ್ರ ಪುರಸ್ಕೃತ ಯೋಜನೆಯಾಗಿದ್ದು, ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕೃತ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೋಂದಣಿಗೆ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಕಾರ್ಡ್ ಮತ್ತು ಮಗುವಿನ ಲಸಿಕೆ ಮಾಹಿತಿಯ ಪ್ರತಿ, ಫಲಾನುಭವಿಯ ಆಧಾರ್ ಕಾರ್ಡ್, ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಜೋಡಣೆಯಾಗಿರಬೇಕು. ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನರೇಗಾ ಕಾರ್ಡ್, ಇ-ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್(ಯಾವುದಾದರು ಪ್ರತಿ) ಸಲ್ಲಿಸಬೇಕು. ಮಹಿಳೆಯ ಮೊದಲ ಪ್ರಸವದ ಮತ್ತು ನಂತರದ ಸಾಕಷ್ಟು ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ತರಲು ಪ್ರೋತ್ಸಾಹಧನ ರೂಪದಲ್ಲಿ ವೇತನ ನಷ್ಟಕ್ಕಾಗಿ ನೀಡುವುದಾಗಿದೆ. ಮೊದಲ ಮಗುವಿಗೆ…
NEWS DESK : ದೇಶದಾದ್ಯಂತ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾಲಿಯಿರುವ 6128 ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಐಬಿಪಿಎಸ್ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಅಭ್ಯರ್ಥಿಗಳ ಆಯ್ಕೆ ಹಾಗೂ ನೇಮಕಾತಿ ಸ್ವರೂಪ ಕುರಿತ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಗುಮಾಸ್ತ (ಕ್ಲರ್ಕ್) ಹುದ್ದೆಗೆ ಸೇರಬೇಕು ಎಂಬ ಕನಸು ಹೊತ್ತವರಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್ ) ಸಿಹಿ ಸುದ್ದಿಯೊಂದನ್ನು ನೀಡಿದೆ. ದೇಶದ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾಲಿಯಿರುವ ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಕ್ಕಾಗಿ ‘ಸಾಮಾನ್ಯ ಪ್ರವೇಶ ಪರೀಕ್ಷೆ'(CRP ಗುಮಾಸ್ತರು XIV)ನಡೆಸುತ್ತಿದ್ದು, ಸೋಮವಾರ ಅಧಿಸೂಚನೆ ಹೊರಡಿಸಿದೆ. ಈ ಬಾರಿ 11 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾಲಿಯಿರುವ 6128 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ನಮ್ಮ ರಾಜ್ಯದಲ್ಲಿ 457 ಹುದ್ದೆಗಳು ಖಾಲಿ ಇವೆ. ಎಂದಿನಂತೆ, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನವಾಗಿರುತ್ತದೆ. ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯಿದ್ದು ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ…
ಮಡಿಕೇರಿ ಜು.8 NEWS DESK : ಮಡಿಕೇರಿ ನಗರ ವ್ಯಾಪ್ತಿಯ ದುಸ್ಥಿತಿಯಲ್ಲಿರುವ ಬಸ್ ತಂಗುದಾಣಗಳನ್ನು ಆಧುನೀಕರಣಗೊಳಿಸಲು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ನಗರಸಭೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಜನರಲ್ ತಿಮ್ಮಯ್ಯ ವೃತ್ತ, ಜಿಲ್ಲಾ ಆಸ್ಪತ್ರೆ, ಚೈನ್ ಗೇಟ್, ಮೂರ್ನಾಡು ರಸ್ತೆ, ಮಂಗಳೂರು ರಸ್ತೆಯ ಬಸ್ ತಂಗುದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು ತ್ವರಿತಗತಿಯಲ್ಲಿ ಹೈ ಟೆಕ್ ತಂಗುದಾಣಗಳನ್ನು ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಚೈನ್ ಗೇಟ್ ಬಳಿ ಇದ್ದ ತಂಗುದಾಣ ಕೆಡವಿದ ಸ್ಥಳದಿಂದ ಸ್ವಲ್ಪ ಮುಂದಕ್ಕೆ ಸುರಕ್ಷಿತ ಮತ್ತು ಸುಸಜ್ಜಿತ ಬಸ್ ತಂಗುದಾಣ ನಿರ್ಮಾಣಕ್ಕೆ ಸೂಚನೆ ನೀಡಿದರು. ಮೂರ್ನಾಡು ರಸ್ತೆಯಲ್ಲಿನ ಶೌಚಾಲಯ ವೀಕ್ಷಣೆ ಮಾಡಿದ ಶಾಸಕರು 20 ಲಕ್ಷ ರೂ ವೆಚ್ಚದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ನಕಾಶೆ ಮತ್ತು ಅಂದಾಜು ಪಟ್ಟಿಯನ್ನು ಸಲ್ಲಿಸುವಂತೆ ಪೌರಾಯುಕ್ತರಿಗೆ ನಿರ್ದೇಶನ ನೀಡಿದರು. ಈ ಸಂಧರ್ಭ ಮಡಿಕೇರಿ ನಗರಸಭೆ ಪೌರಾಯುಕ್ತ ವಿಜಯ್,…
ಸುಂಟಿಕೊಪ್ಪ ಜು.8 NEWS DESK : ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ವನ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ, ಪ್ರಸ್ತುತ ಸನ್ನಿವೇಶದಲ್ಲಿ ಪರಿಸರದ ಮೇಲೆ ಆಗುತ್ತಿರುವ ಅಪಾಯಕಾರಿ ಚಟುವಟಿಕೆಗಳ ಕುರಿತು ಮಾಹಿತಿಯನ್ನು ನೀಡಿ, ಪರಿಸರ ಸಂರಕ್ಷಣೆಯು ನಮ್ಮೆಲ್ಲಾರ ಆದ್ಯ ಕರ್ತವ್ಯವಾಗಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ಪರಿಸರ ಮಾಲಿನ್ಯವನ್ನು ಉಂಟು ಮಾಡುವ ಯಾವುದೇ ಕೆಲಸದಲ್ಲಿ ವಿದ್ಯಾರ್ಥಿಗಳು ತೊಡಗಬಾರದೆಂದರು. ಕಾರ್ಯಕ್ರಮದಲ್ಲಿ ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಹಾಗೂ ನಿಸರ್ಗ ಇಕೋಕ್ಲಬ್ ಸಂಚಾಲಕಿ ಪದ್ಮಾವತಿ ದಿನದ ಮಹತ್ವದ ಕುರಿತು ಮಾತನಾಡಿ, ವಿಶ್ವಪರಿಸರ ದಿನಾಚರಣೆಯ -2024 ರ ಘೋಷವಾಕ್ಯವಾದ “ಭುಮಿಯ ಪುನರತ್ತಾನ ಹಾಗೂ ಮರುಭುಮಿ ತಡೆಗಟುವಿಕೆ” ವಿಚಾರದ ಬಗ್ಗೆ ಮಾಹಿತಿಯನ್ನು ನೀಡಿದರು. ಅರಣ್ಯನಾಶದಿಂದಾಗಿ ಭೂಮಿ ಮರುಭೂಮಿಯಾಗುತ್ತಿರುವ ಬಗ್ಗೆ ಗಂಭೀರ ಸಮಸ್ಯೆಯ ಕುರಿತು ವಿದ್ಯಾರ್ಥಿಗಳಿಗೆ ಎಚ್ಚರಿಕೆಯ ಸಂದೇಶ ನೀಡಿದರು. ನದಿಮೂಲ ಜಲಮೂಲಗಳು ಬರಿದಾಗುತ್ತಿರುವ ಬಗ್ಗೆ ಮಾಹಿತಿ ನೀಡಿದರು. ಅರಣ್ಯ ನಾಶದಿಂದಾಗಿ ಪ್ರಸ್ತುತವಾಗಿ ತಾಪಮಾನವು…
ಸೋಮವಾರಪೇಟೆ ಜು.8 NEWS DESK : ವಿದ್ಯಾರ್ಥಿಗಳ ಕಲಿಕೆ ನಿರಂತರವಾಗಿರಬೇಕು. ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿಗಳ ಕಲಿಕಾ ಪ್ರಗತಿಗೆ ಪ್ರೋತ್ಸಾಹ ನೀಡಬೇಕು ಎಂದು ನಿವೃತ್ತ ಉಪನ್ಯಾಸಕಿ ತಿಲೋತ್ತಮೆ ನಂದಕುಮಾರ್ ಅಭಿಪ್ರಾಯಿಸಿದರು. ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ನಿವೃತ್ತ ಉಪನ್ಯಾಸಕಿ ತಿಲೋತ್ತಮೆ ಅವರಿಗೆ ಬೀಳ್ಕೊಡುಗೆ ನೀಡಿ ಸನ್ಮಾನಿಸಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅರಳುವ ಹೂಗಳು ವಿದ್ಯಾರ್ಥಿಗಳಾಗಬೇಕು. ಇಂದಿನಿಂದಲೇ ಮೊಬೈಲ್ ಗೀಳಿನಿಂದ ಹೊರಬಂದರೆ ಸಾಧನೆಯ ಮೆಟ್ಟಿಲು ಏರಬಹುದು. ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಸುಧಾರಿಸಲು ಅತಿಥಿ ಶಿಕ್ಷಕರ ಕೊಡುಗೆ ತುಂಬ ಇದೆ. ಕಡಿಮೆ ಸಂಬಳಕ್ಕೆ ಹೆಚ್ಚಿನ ಸಮಯ ದುಡಿಯುತ್ತಿದ್ದಾರೆ. ಅವರ ವೇತನ ಕೂಡ ಹೆಚ್ಚಾಗಬೇಕು ಎಂದು ಹೇಳಿದರು. ಮುಂದೆ ದ್ವಿತೀಯ ಪಿಯುಸಿಯಲ್ಲಿ ಉನ್ನತ ದರ್ಜೆಯಲ್ಲಿ ಪಾಸಾದ ಎಲ್ಲಾ ವಿದ್ಯಾರ್ಥಿಗಳಿಗೆ ವೈಯುಕ್ತಿವಾಗಿ ಐದು ಸಾವಿರ ರೂ.ಗಳ ಪ್ರೋತ್ಸಾಹಧನ ನೀಡುವುದಾಗಿ ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಪುಟ್ಟರಾಜು ಅವರು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಸನ್ಮಾನ…
ಮಡಿಕೇರಿ ಜು.7 NEWS DESK : ಇದೇ ಜುಲೈ 10ರಿಂದ ಆಂದ್ರಪ್ರದೇಶ ಕಡಪದಲ್ಲಿ ನಡೆಯಲಿರುವ ಎರಡನೇ ಹಾಕಿ ಇಂಡಿಯಾ ದಕ್ಷಿಣ ವಲಯ ಚಾಂಪಿಯನ್ ಶಿಪ್ ಕರ್ನಾಟಕ ತಂಡಕ್ಕೆ ಕೊಡಗು ಜಿಲ್ಲೆಯ ಕೆದಮುಳ್ಳೂರು ಮೂಲದ ಮಾಳೇಟೀರ ದಿಶಾ ಪೊನ್ನಮ್ಮ ಆಯ್ಕೆಯಾಗಿದ್ದಾರೆ. ಈ ಹಿಂದೆ ಹಲವಾರು ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಅನುಭವ ಇರುವ ಮಾಳೇಟೀರ ದಿಶಾ ಪೊನ್ನಮ್ಮ ಕರ್ನಾಟಕ ಜೂನಿಯರ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಮೂಲತಃ ಕೆದಮುಳ್ಳೂರುವಿನ ನಿವಾಸಿ, ತಾಲ್ಲೂಕು ಪಂಚಾಯಿತಿ ಸದಸ್ಯ ಮಾಳೇಟೀರ ಪ್ರಶಾಂತ್ ಉತ್ತಪ್ಪ ಹಾಗೂ ಮೂರ್ನಾಡು ಜೂನಿಯರ್ ಕಾಲೇಜುವಿನ ಪ್ರಾಧ್ಯಾಪಕಿ ಮಾಳೇಟೀರ ರಶ್ಮಿ ಉತ್ತಪ್ಪ ದಂಪತಿಯ ಪುತ್ರಿ.
ಶ್ರೀನಗರ NEWS DESK ಜು.7 : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಅವಳಿ ಎನ್ಕೌಂಟರ್ನಲ್ಲಿ ಆರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆರ್ಆರ್ ಸ್ವೈನ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆಯುತ್ತಿರುವ ಅವಳಿ ಎನ್ಕೌಂಟರ್ಗಳಲ್ಲಿ ಆರು ಉಗ್ರರು ಹತರಾಗಿದ್ದರೆ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಎನ್ಕೌಂಟರ್ಗಳಲ್ಲಿ ಆರು ಉಗ್ರರನ್ನು ಹತ್ಯೆ ಮಾಡಿರುವುದು ಭದ್ರತಾ ಪಡೆಗಳಿಗೆ ಒಂದು ಮೈಲಿಗಲ್ಲು ಎಂದು ಡಿಜಿಪಿ ತಿಳಿಸಿದ್ದಾರೆ.
ಬೆಂಗಳೂರು ಜು.7 NEWS DESK : ಬೆಂಗಳೂರು ನಗರದ ‘ಪ್ರೆಸ್ ಕ್ಲಬ್ ಆಫ್ ಬೆಂಗಳೂರಿಗೆ’ ಭಾನುವಾರ ನಡೆದ ಚುನಾವಣೆಯಲ್ಲಿ ಹಿರಿಯ ಪತ್ರಕರ್ತ ಆರ್.ಶ್ರೀಧರ್ ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮೋಹನ್ ಕುಮಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ಬೆಳ್ಳಿ ತಟ್ಟೆ ಆಯ್ಕೆಯಾದರು. ಪ್ರೆಸ್ ಕ್ಲಬ್ ನ ಅಧ್ಯಕ್ಷ ಸ್ಥಾನಕ್ಕಾಗಿ ಆರ್. ಶ್ರೀಧರ್, ಧ್ಯಾನ್ ಪೂಣಚ್ಚ ಹಾಗೂ ಸುಭಾಷ್ ಹೂಗಾರ್ ನಡುವೆ ತೀವ್ರ ಪೈಪೋಟಿ ನಡೆಯಿತು. ಆದರೆ ಅಂತಿಮವಾಗಿ ಆರ್.ಶ್ರೀಧರ್ ಹೆಚ್ಚಿನ ಮತ ಗಳಿಸುವುದರೊಂದಿಗೆ ಮತ್ತೆ ಅಧ್ಯಕ್ಷರಾಗಿ ಆಯ್ಕೆಯಾದರು.






