ಮಡಿಕೇರಿ ಜು.6 NEWS DESK : 2023-24ನೇ ಸಾಲಿನಲ್ಲಿ ಕಡಗದಾಳು ಪ್ರೌಢಶಾಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಶೇ.100 ರಷ್ಟು ಫಲಿತಾಂಶ ಬರಲು ಕಾರಣರಾದ ಶಿಕ್ಷಕರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಸಮಾಜ ಸೇವಕರು ಹಾಗೂ ದಾನಿಗಳಾದ ಟಿ.ಆರ್.ವಾಸುದೇವ್, ಪ್ರಸ್ತುತ ದಿನಗಳಲ್ಲಿ ಶಿಕ್ಷಕರಲ್ಲಿ ದೇವರನ್ನು ಕಾಣುತ್ತಿದ್ದೇವೆ. ಶಿಕ್ಷಕರನ್ನು ಗೌರವಿಸಿದರೆ ಎಲ್ಲ ಕೆಲಸ ಕಾರ್ಯಗಳು ನೆರವೇರುತ್ತದೆ ಎಂದರು. ವಿದ್ಯಾರ್ಥಿಗಳು ಮೊಬೈಲ್ನಿಂದ ದೂರವಿದ್ದು, ಉತ್ತಮವಾಗಿ ಓದಿ ಶಾಲೆಗೆ ಒಳ್ಳೆಯ ಹೆಸರು ತರಬೇಕು ಮತ್ತು ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಬೇಕು ಎಂದು ಕರೆ ನೀಡಿದರು. ಸಂಘಟನೆಯ ಜಿಲ್ಲಾ ಸಂಚಾಲ ಹೆಚ್.ಎಲ್.ದಿವಾಕರ್ ಪ್ರಾಸ್ತವಿಕ ಮಾತನಾಡಿ, ಕೊಡಗಿನ ಎಲ್ಲಾ ಸರಕಾರಿ ಶಾಲಾ, ಕಾಲೇಜುಗಳಲ್ಲಿ ಶೇ.100ರಷ್ಟು ಫಲಿತಾಂಶ ಬರಬೇಕು ಎಂಬ ಕಾರಣಕ್ಕಾಗಿ ಸಂಘಟನೆಯ ವತಿಯಿಂದ ಸುಮಾರು 10 ವರ್ಷಗಳಿಂದ ಉತ್ತಮ ಫಲಿತಾಂಶ ಬಂದ ಸರಕಾರಿ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ಭೇಟಿ…
ಲೇಖಕ: admin
ಮಡಿಕೇರಿ ಜು.6 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರವಾಸಿ ಮಾರ್ಗದರ್ಶಕರನ್ನು ನೇಮಿಸದೆ ಇರುವ ಅಂಶವನ್ನು ಗಂಭೀರವಾಗಿ ಪರಿಗಣಿಸಿರುವ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಪ್ರವಾಸೋದ್ಯಮ ಇಲಾಖೆಗೆ ಸೂಚನೆ ನೀಡಿ ನೇಮಕಾತಿಗೆ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹವೆಂದು ಕೆಪಿಸಿಸಿ ಸದಸ್ಯ ಬಿ.ಎಸ್.ರಮಾನಾಥ್ ತಿಳಿಸಿದ್ದಾರೆ. ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಹಳ ವರ್ಷಗಳ ಹಿಂದೆಯೇ ಪ್ರವಾಸಿ ಮಾರ್ಗದರ್ಶಕರ ನೇಮಕವಾಗಿದೆ. ಆದರೆ ಕರ್ನಾಟಕದ ಪ್ರಮುಖ ಪ್ರವಾಸಿತಾಣವಾದ ಕೊಡಗಿನಲ್ಲಿ ಪ್ರವಾಸಿ ಮಾರ್ಗದರ್ಶಕರ ನೇಮಕವಾಗದೆ ನಿರ್ಲಕ್ಷಿಸಲ್ಪಟ್ಟಿತ್ತು. ಕೊಡಗು ಜಿಲ್ಲೆಯ ವಿಶಿಷ್ಟವಾದ ಸಂಸ್ಕೃತಿ ಮತ್ತು ಪ್ರವಾಸಿತಾಣಗಳನ್ನು ಪರಿಚಯಿಸಲು ಪ್ರವಾಸಿ ಮಾರ್ಗದರ್ಶಕರ ಅಗತ್ಯವಿತ್ತು. ಇದನ್ನು ಮನಗಂಡ ಶಾಸಕ ಮಂತರ್ ಗೌಡ ಅವರು ತಕ್ಷಣ ಸ್ಪಂದಿಸಿ ನೇಮಕಾತಿಗಾಗಿ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಕರ್ನಾಟಕದಲ್ಲಿ ಒಟ್ಟು 32 ಪ್ರವಾಸಿ ಮಾರ್ಗದರ್ಶಕರು ಲೈಸನ್ಸ್ ಪಡೆದಿದ್ದು, ಇವರಲ್ಲಿ ಕೊಡಗಿನ ಯಾರೊಬ್ಬರು ಇಲ್ಲದೆ ಇರುವುದು ವಿಪರ್ಯಾಸ. ಇದೀಗ ಶಾಸಕರ ಕಾಳಜಿಯಿಂದ ಪ್ರವಾಸಿ ಮಾರ್ಗದರ್ಶಕರ ನೇಮಕಕ್ಕೆ ಪ್ರವಾಸೋದ್ಯಮ ಇಲಾಖೆ ಮುಂದಾಗಿರುವುದು ಸ್ವಾಗತಾರ್ಹ ಕ್ರಮವಾಗಿದ್ದು, ಈ…
ಸಿದ್ದಾಪುರ ಜು.6 NEWS DESK : ಪತ್ರಿಕಾ ದಿನಾಚರಣೆಯ ಅಂಗವಾಗಿ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಮ್ಮತ್ತಿ ಪ್ರೌಢಶಾಲಾ ವಿದ್ಯರ್ಥಿಗಳಿಗೆ ಪ್ರಬಂಧ ಸ್ಪರ್ದೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಕರ್ನಲ್ ಕೆ.ಸಿ ಸುಬ್ಬಯ್ಯ, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಬೆಳವಣಿಗೆಗಾಗಿ ಸ್ಪರ್ಧೆ ನಡೆಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ಆಟ-ಪಾಟದೊಂದಿಗೆ ಉತ್ತಮ ನಾಗರೀಕರಾಗಬೇಕು ಎಂದು ಕರೆ ನೀಡಿದರು. ಪ್ರಸ್ತಾವಿಕವಾಗಿ ಮಾತನಾಡಿದ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಅಧ್ಯಕ್ಷ ರೆಜಿತ್ ಕುಮಾರ್ ಗುಹ್ಯ, ಸರ್ಕಾರಿ ಸಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸುವ ಮೂಲಕ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಸರ್ಕಾರಿ ಶಾಲಾ ಮಕ್ಕಳು, ಖಾಸಗಿ ಶಾಲಾ ಮಕ್ಕಳೊಂದಿಗೆ ಸ್ಪರ್ಧೆ ಮಾಡುವಂತಾಗಿದೆ. ಸರ್ಕಾರಿ ಸಾಲಾ ಮಕ್ಕಳಿಗೂ ಹೆಚ್ಚು ಪ್ರೋತ್ಸಾಹದ ಅಗತ್ಯವಿದೆ. ಸಂಘವು ಸಮಾಜಮುಖಿ ಕೆಲಸವನ್ನು ಮಾಡಿಕೊಂಡು ಬಂದಿದೆ ಎಂದರು. ಶಾಲಾ ಮುಖ್ಯೋಪಾಧ್ಯಾಯರಾದ ದೊಡತಮ್ಮಯ್ಯ ಮಾತನಾಡಿ, ವಿದ್ಯಾರ್ಥಿಗಳು ಪತ್ರಿಕೆಗಳನ್ನು ಹೆಚ್ಚು ಓದಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಇತ್ತೀಚೆಗಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿದ್ದು,…
ಮಡಿಕೇರಿ ಜು.6 NEWS DESK : ಕೇಂದ್ರದ ಬೃಹತ್ ಕೈಗಾರಿಕಾ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕೊಡಗಿನ ಜೆಡಿಎಸ್ ಮುಖಂಡರು ಬೆಂಗಳೂರಿನಲ್ಲಿ ಭೇಟಿಯಾದರು. ಯುವ ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಜಿ.ಜಾಶಿರ್ ಮೂರ್ನಾಡು, ಪ್ರಮುಖರಾದ ಶಿವದಾಸ್, ಶರತ್ ಮತ್ತಿತರರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಕೊಡಗು ಜಿಲ್ಲೆಗೆ ಭೇಟಿ ಮಾಡುವಂತೆ ಮನವಿ ಮಾಡಿದರು. ಸಧ್ಯದಲ್ಲೇ ಜಿಲ್ಲೆಗೆ ಭೇಟಿ ನೀಡಿ, ಕಾರ್ಯಕರ್ತರ ಸಭೆ ನಡೆಸಿ ಪಕ್ಷ ಸಂಘಟಿಸುವ ಕುರಿತು ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ. ಅಲ್ಲದೆ ನಿಷ್ಠಾವಂತ ಕಾರ್ಯಕರ್ತರಿಗೆ ಮುಂದಿನ ಜಿ.ಪಂ ಮತ್ತು ತಾ.ಪಂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ತಿಳಿಸಿದ್ದಾರೆ ಎಂದು ವಿಶ್ವ ಹಾಗೂ ಜಾಶಿರ್ ಹೇಳಿದರು.
ಬೆಂಗಳೂರು ಜು.6 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿದರು. ಗೃಹ ಸಚಿವರಾದ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಡಿಜಿ-ಐಜಿ ಡಾ.ಅಲೋಕ್ ಮೋಹನ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕ್ ಚಂದ್ರ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾದ ತಂತ್ರಾಂಶಗಳು ಮತ್ತು ಕೈಪಿಡಿಗಳು ಹೀಗಿವೆ: *ಸೀನ್ ಆಫ್ ಕ್ರೈಂ ಕೈಪಿಡಿ *ಸಂಚಯ: ಹೊಸ ಕ್ರಿಮಿನಲ್ ಕಾನೂನುಗಳ ಡಿಜಿಟಲ್ ತಂತ್ರಾಂಶ, ಆ್ಯಪ್ ಬಿಡುಗಡೆ *ರಿಯಲ್ ಟೈಂ ಟ್ರಾಕಿಂಗ್ ಆಫ್ ಹೊಯ್ಸಳ ತಂತ್ರಾಂಶ *ಬೆಂಗಳೂರು ಸಿಟಿ ಪೊಲೀಸ್- ಸೇಫ್ ಕನೆಕ್ಟ್ (ಕಮಾಂಡ್ ಸೆಂಡರ್ ಜೊತೆಗೆ ನೊಂದವರು ಆಡಿಯೊ, ವಿಡಿಯೊ ಕಾಲ್ ಮೂಲಕ ಸಂಪರ್ಕ ಸಾಧಿಸುವ ಸಾಧನ) *ಡಿಜಿಟಲ್ ಅರೆಸ್ಟ್ ಸ್ಕ್ಯಾಮ್ (ಸೈಬರ್ ಕ್ರೈಂ ಕೈಪಿಡಿ)
ಮಡಿಕೇರಿ ಜು.6 NEWS DESK : ಗಾಳಿಬೀಡು ಗ್ರಾಮದ ತೋಟವೊಂದರಲ್ಲಿ ಕಾಣಿಸಿಕೊಂಡ ಹೆಬ್ಬಾವನ್ನು ಉರಗ ತಜ್ಞ ರಕ್ಷಿಸಿದ್ದಾರೆ. ಗಾಳಿಬೀಡು ಗ್ರಾಮದ ಕರಕರನ ಪವನ್(ಪ್ರಭು) ಅವರ ಕಾಫಿ ತೋಟದಲ್ಲಿ ಕೆಲಸ ಮಾಡುವ ಸಂದರ್ಭ ಹೆಬ್ಬಾವು ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉರಗ ತಜ್ಞ ಹೆಬ್ಬಾವನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಸುರಕ್ಷಿತವಾಗಿ ಅರಣ್ಯ ಬಿಟ್ಟಿದ್ದಾರೆ.
ಮಡಿಕೇರಿ ಜು.6 NEWS DESK : ನಿಟ್ಟೂರು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ನಿಟ್ಟೂರು ಕಾರ್ಮಾಡು ಗ್ರಾಮದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ್ ದಿವಸ್ ಆಚರಣೆ ಮಾಡಲಾಯಿತು. ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭ ಬಿಜೆಪಿ ಕೃಷಿ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಮಾಪಂಗಡ ಯಮುನಾ ಚಂಗಪ್ಪ, ವಿರಾಜಪೇಟೆ ಮಂಡಳ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಮಲ್ಚೀರ ಕವಿತಾ ಬೋಜಪ್ಪ, ನಿಟ್ಟೂರು ಗ್ರಾ.ಪ0 ಉಪಾಧ್ಯಕ್ಷ ಚಕ್ಕೇರ ಅಯ್ಯಪ್ಪ, ಸದಸ್ಯರಾದ ಪಡಿಞರಂಡ ಕವಿತಾ ಪ್ರಭು, ಬಿಜೆಪಿ ನಿಟ್ಟೂರು ಶಕ್ತಿ ಕೇಂದ್ರದ ಎಸ್.ಟಿ.ಮಹೊರ್ಚದ ಸದಸ್ಯ ನಾಗ ಮುಂತಾದವರು ಹಾಜರಿದ್ದರು.
ನಾಪೋಕ್ಲು ಜು.6 NEWS DESK : ಶಿಸ್ತನ್ನು ಬೆಳೆಸಿಕೊಳ್ಳಲು ಹಾಗೂ ಮಕ್ಕಳ ಸರ್ವಾಂಗೀಣ ಅಭಿವೃಧ್ಧಿಗೆ ಪೋಷಕರ, ಶಿಕ್ಷಕರ ಪಾತ್ರ ಬಹು ಮುಖ್ಯ ಎಂದು ಆಕ್ಸ್ ಫರ್ಡ್ ಶಾಲಾ ಮುಖ್ಯೋಪಾಧ್ಯಾಯಿನಿ ಕವಿತಾ ಹೇಳಿದರು. ಕುಂಜಿಲದ ಆಕ್ಸ್ ಫರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಶಿಕ್ಷಕ – ಪೋಷಕರ ಸಭೆಯಲ್ಲಿ ಮಾತನಾಡಿ, ಮಕ್ಕಳ ಭವಿಷ್ಯದ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಆಕ್ಸ್ ಫರ್ಡ್ ಶಾಲೆಯ ನಿರ್ವಾಹಕ ಅಧಿಕಾರಿ ಶಾಹಿದ್ ಅಲಿ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಲು ಕಿವಿ ಮಾತು ಹೇಳಿದರು . ಸಭೆಯಲ್ಲಿ ಅಧ್ಯಾಪಕ ವೃಂದ ಹಾಗೂ ಪೋಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಜು.6 NEWS DESK : ಲಯನ್ಸ್ ಮತ್ತು ಲಿಯೋ ಕ್ಲಬ್ ನ 2024- 25ರ ಸಾಲಿನ ನೂತನ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ನಾಪೋಕ್ಲು ಕೊಡವ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ಬಿನ ನೂತನ ಅಧ್ಯಕ್ಷ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ, ಕಾರ್ಯದರ್ಶಿ ಕುಂಚೆಟ್ಟಿರ ರೇಷ್ಮಾ ಉತ್ತಪ್ಪ, ಖಜಾಂಚಿ ಕಾಂಡಂಡ ರೇಖಾ ಪೊನ್ನಣ್ಣ, ಲಿಯೋ ನೂತನ ಅಧ್ಯಕ್ಷ ಅಂಕುರ್ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಉಮ್ಮು ಹಬೀಬ, ಕಾರ್ಯದರ್ಶಿ ಬಿ.ಸಿ.ನವಲ್ ನಾಚಪ್ಪ ಹಾಗೂ ಖಜಾಂಚಿ ದ್ರುವ್ ದೇವಯ್ಯ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಕನ್ನಂಬಿರ ಸುಧಿ ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬಡ್ಡೀರ ನಳಿನಿ ಪೂವಯ್ಯ ನೂತನ ಸದಸ್ಯರಾಗಿ ಸೇರ್ಪಡೆಗೊಂಡರು. ಕುಡುಪಿ ಅರವಿಂದ್ ಶೆಣೈ PMJF (VPG 1) ಮಂಗಳೂರು ಲಯನ್ಸ್ ಜಿಲ್ಲೆ ಉಪರಾಜ್ಯಪಾಲ ಪದಗ್ರಹಣ ಅಧಿಕಾರಿಗಳಾಗಿ ಪಾಲ್ಗೊಂಡು ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಲೈನ್ಸ್ ಸಂಸ್ಥೆಯ ಧ್ಯೇಯ ಉದ್ದೇಶಗಳ ಬಗ್ಗೆ ವಿವರಿಸಿದರು.…
ನಾಪೋಕ್ಲು ಜು.6 NEWS DESK : ಚೆಯ್ಯಂಡಾಣೆ, ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ನಿರಂತರ ಉಪಟಳದಿಂದ ಬೇಸತ್ತ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ. ಚೈಯಂಡಾಣೆ, ನರಿಯಂದಡ ಗ್ರಾ.ಪಂ ವ್ಯಾಪ್ತಿಯ ಚೆಯ್ಯಂಡಾಣೆ, ನರಿಯಂದಡ, ಚೇಲಾವರ, ಕೋಕೇರಿ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ನಿರಂತರವಾಗಿದ್ದು, ಕೃಷಿ ಫಸಲನ್ನು ತಿಂದು ನಷ್ಟ ಪಡಿಸುತ್ತಿದೆ. ಗ್ರಾಮದ ಪೊಕ್ಕೋಳಂಡ್ರ, ಕೋಡಿಮಣಿಯoಡ, ಬೊವೇರಿಯಂಡ, ಬಿಳಿಯಂಡ್ರ, ಮಕ್ಕಿಮನೆ, ಮಂಜoಡ್ರ, ನೆಲ್ಲಮಕ್ಕಳ, ಮುಂಡ್ಯೋಲಂಡ ಅವರ ತೋಟಗಳಿಗೆ ಲಗ್ಗೆ ಇಡುತ್ತಿರುವ ಕಾಡಾನೆಗಳ ಹಿಂಡು ಅಡಿಕೆ, ಕಾಫಿ, ಬಾಳೆ ಗಿಡಗಳನ್ನು ನಾಶಪಡಿಸಿವೆ. ಈ ಭಾಗದ ತೋಟಗಳಲ್ಲಿ ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಅರಣ್ಯ ಇಲಾಖೆಯ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಚರಣೆ ನಡೆಸಲಾಗುತ್ತಿದೆ. ಆದರೆ ಇಲ್ಲಿಯವರೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ನರಿಯಂದಡ ಗ್ರಾಮಸ್ಥ ಪೊಕ್ಕೋಳಂಡ್ರ ಧನೋಜ್ ಅಳಲು ತೋಡಿಕೊಂಡಿದ್ದಾರೆ. ಕಾಡಾನೆ ತಡೆಗೆ ಅರಣ್ಯ ಇಲಾಖೆ ತಕ್ಷಣವೇ ಶಾಶ್ವತ ಪರಿಹಾರ ಕಲ್ಪಿಸಬೇಕು ಮತ್ತು ನಷ್ಟ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ಮುಂದಿನ ಹತ್ತು ದಿನಗಳೊಳಗೆ ಯಾವುದೇ…






