ಲೇಖಕ: admin

ಮಡಿಕೇರಿ ಜು.6 NEWS DESK : ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ಮರಳಿ ನೀಡುವ ಸೇವಾ ಮನೋಭಾವವನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು ಎಂದು ರೋಟರಿ ಜಿಲ್ಲೆಯ ಮಾಜಿ ರಾಜ್ಯಪಾಲ ಪ್ರಕಾಶ್ ಕಾರಂತ್ ಕರೆ ನೀಡಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ನಡೆದ ರೋಟರಿ ಮಡಿಕೇರಿಯ 2024- 25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಪದಗ್ರಹಣ ಅಧಿಕಾರಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ರೋಟರಿ ಪದಾಧಿಕಾರಿಗಳು ಬದಲಾದ ಕಾಲಘಟ್ಟಕ್ಕೆ ತಕ್ಕ ಹಾಗೆ ಸೂಕ್ತ ಕಾರ್ಯಕ್ರಮಗಳನ್ನು ರೂಪಿಸಬೇಕು. ಧನಾತ್ಮಕ ಚಿಂತನೆಗಳ ಮೂಲಕ ಜನಸೇವೆ ಮಾಡಬೇಕು. ಸೇವಾ ಮನೋಭಾವನೆಯ ಸದಸ್ಯರು ರೋಟರಿಗೆ ಅಗತ್ಯವಿದ್ದು, ಮಹಿಳೆಯರು ಸೇರಿದಂತೆ ವೈವಿಧ್ಯಮಯ ಕ್ಷೇತ್ರದಲ್ಲಿರುವ ಪ್ರತಿನಿಧಿಗಳನ್ನು ನೇಮಿಸಿಕೊಳ್ಳಿ ಎಂದು ಸಲಹೆ ನೀಡಿದರು. ಸಮಾಜದಿಂದ ನಾವು ಸಾಕಷ್ಟು ಪಡೆದುಕೊಳ್ಳುತ್ತೇವೆ, ಅದನ್ನು ಮರಳಿ ಸಮಾಜಕ್ಕೆ ನೀಡುವ ಗುಣದೊಂದಿಗೆ ಸೇವೆಯನ್ನು ಮಾಡಬೇಕು ಎಂದು ಪ್ರಕಾಶ್ ಕಾರಂತ್ ತಿಳಿಸಿದರು. ಸಹಾಯಕ ರಾಜ್ಯಪಾಲ ಡಿ.ಎಂ.ಕಿರಣ್ ಮಾತನಾಡಿ ಈ ಬಾರಿ ರೋಟರಿ ಜಿಲ್ಲೆಯಲ್ಲಿ 8 ಸೇವಾ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಮಾದಕ ವಸ್ತು…

Read More

ಮಡಿಕೇರಿ ಜು.6 NEWS DESK : ಮಕ್ಕಳು ಓದಿನೊಂದಿಗೆ ಸಾಹಿತ್ಯ ಕ್ಷೇತ್ರದತ್ತಲೂ ಒಲವು ತೋರಬೇಕೆಂದು ಗಣ್ಯರು ಕರೆ ನೀಡಿದರು. ಕನ್ನಡ ಸಿರಿ ಸ್ನೇಹ ಬಳಗ ಹಾಗೂ ಮಡಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಅಂಗವಾಗಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಸಾಹಿತಿ ದಿ. ಜಿ.ಟಿ.ನಾರಾಯಣ ರಾವ್ ಅವರ ಬದುಕು ಬರಹ ಕುರಿತ ಉಪನ್ಯಾಸ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಬಿ.ಜಿ.ಅನಂತಶಯನ, ವಿದ್ಯಾರ್ಥಿಗಳು ಪ್ರಶ್ನಿಸುವ, ಉತ್ತರಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕು. ಎಲ್ಲರಿಗೂ ಸ್ವಾತಂತ್ರ್ಯವಿದೆ, ಅದನ್ನು ಉಪಯೋಗಿಸಿಕೊಳ್ಳಬೇಕೆಂದು ಹೇಳಿದರು. ಪ್ರಪಂಚದಲ್ಲಿ ಲೋಕದೊಳಗಡೆ ಮತ್ತಷ್ಟು ಲೋಕಗಳಿವೆ. ಕ್ರೀಡೆ, ಸಾಹಿತ್ಯ, ಸಂಗೀತ, ಪಾಪಿಗಳ ಲೋಕ ಕೂಡ ಇದೆ. ಅದರಲ್ಲಿ ಅಧ್ಯಾತ್ಮಿಕ ಲೋಕ ಚೆನ್ನಾಗಿದೆ. ಧ್ಯಾನದಿಂದ ಸ್ಥಿರತೆ, ಅನಂತತೆಯನ್ನು ಸಾಧಿಸಬಹುದಾಗಿದೆ. ಸಾಹಿತ್ಯ ಲೋಕ ಅತಿ ಮುಖ್ಯವಾದುದಾಗಿದೆ. ಸಾಹಿತಿ ಸಾಮಾನ್ಯನಾಗಿ ಕಂಡರೂ ಆತನಲ್ಲಿ ಎಲ್ಲ ರೀತಿಯ ಸ್ವಭಾವಗಳು ಅಡಕವಾಗಿರುತ್ತದೆ. ಬರಹದಲ್ಲಿ ಕಲಾತ್ಮಕತೆ, ಸೃಜಶೀಲತೆ ಇರುತ್ತದೆ. ಎಲ್ಲವೂ…

Read More

ಕುಶಾಲನಗರ ಜು.6 NEWS DESK : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಅವರನ್ನು ಕೊಡಗಿನ ಸೈನಿಕ ಶಾಲೆ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್ ಬೆಂಗಳೂರಿನ ರಾಜಭವನದಲ್ಲಿ ಭೇಟಿ ಮಾಡಿ, ಶಾಲೆಯ ಕುರಿತು ಸಮಗ್ರ ಮಾಹಿತಿ ನೀಡಿದರು. ಶಾಲೆಯಲ್ಲಿನ ವಿವಿಧ ತರಬೇತಿ ಚಟುವಟಿಕೆಗಳು ಮತ್ತು ಶಾಲೆಯು ಸಾಧಿಸಿದ ಗಮನಾರ್ಹ ಪ್ರಗತಿ ಕುರಿತು ವಿವರಿಸಿದರು. ಶಾಲೆಯಲ್ಲಿ ಕೇಂದ್ರೀಕೃತ ತರಬೇತಿ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಿದ ಯು.ಪಿ.ಎಸ್.ಸಿ ಮತ್ತು ಎಸ್.ಎಸ್.ಬಿ ತರಬೇತಿಯ ಕುರಿತು ಸಮಗ್ರ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ಅಗತ್ಯವಾದ ಕೌಶಲ್ಯ ಮತ್ತು ಜ್ಞಾನ ನೀಡುವುದರೊಂದಿಗೆ ಅಗತ್ಯ ಮತ್ತು ನಿಖರವಾದ ವಿನ್ಯಾಸಗೊಳಿಸಲಾದ ತರಬೇತಿಯನ್ನು ನೀಡಿ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ತಿಳಿಸಿದರು. ಶಾಲೆಯು ಪ್ರಾರಂಭವಾದ ದಿನದಿಂದ ಇಲ್ಲಿಯವರೆಗೆ ಒಟ್ಟು 36 ವಿದ್ಯಾರ್ಥಿಗಳು ದೇಶದ ಭೂಸೇನೆ, ನೌಕಾ ಸೇನೆ ಮತ್ತು ವಾಯುಸೇನೆಯಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು. 42ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯರಾಗಿದ್ದು, ಸುಮಾರು 15 ವಿದ್ಯಾರ್ಥಿಗಳು ವೈದ್ಯರಾಗಲು ದೇಶದ ಪ್ರತಿಷ್ಠಿತ ವೈದ್ಯಕೀಯ…

Read More

ಮಡಿಕೇರಿ ಜು.6 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತೀಯ ಹರಿಕಾರ ಡಾ.ಬಾಬು ಜಗಜೀವನ್‍ರಾಂ ಅವರ 38ನೇ ಪರಿನಿರ್ವಾಣ ಕಾರ್ಯಕ್ರಮವನ್ನು ಆಚರಿಸಲಾಯಿತು. ನಗರದ ಗಾಂಧಿ ಭವನದಲ್ಲಿ‌ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಡಾ.ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಜಿ.ಪಂ ಸಿಇಒ ವರ್ಣಿತ್ ನೇಗಿ, ಉಪವಿಭಾಗಾಧಿಕಾರಿ ವಿನಾಯಕ್ ನಾರ್ವಡೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಪೌರಾಯುಕ್ತ ವಿಜಯ್  ಇತರರು ಇದ್ದರು.

Read More

ಮಡಿಕೇರಿ ಜು.6 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶೇಷಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಣೆ ಮಾಡಲಾಯಿತು. ನಗರದ ಗಾಂಧಿ ಮೈದಾನದಲ್ಲಿ  ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು  ಫಲಾನುಭವಿಗಳಿಗೆ ವಿತರಿಸಿದರು. ಈ ಸಂದರ್ಭ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ಶಾಸಕರಾದ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಇತರರು ಇದ್ದರು.  

Read More

ಸೋಮವಾರಪೇಟೆ ಜು.6 NEWS DESK : ಗಾಂಧಿನಗರದಲ್ಲಿರುವ ಶ್ರೀ ದೊಡ್ಡ ಮಾರಿಯಮ್ಮ ದೇವಾಲಯದಲ್ಲಿ ಆಷಾಡ ಮಾಸದ ಪೂಜೆ ಆರಂಭಗೊಂಡಿದ್ದು, ಆ.2 ರವರೆಗೆ ಪ್ರತಿ ಮಂಗಳವಾರ ಮತ್ತು ಶುಕ್ರವಾರ ವಿಶೇಷ ಪೂಜೆ ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಗಂಗಾಧರ್ ತಿಳಿಸಿದ್ದಾರೆ. ಪ್ರತಿ ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ ದೇವರಿಗೆ ಫಲಪಂಚಾಮೃತ ಅಭಿಷೇಕ ಸೇವೆ, ವಿಶೇಷ ದ್ರವ್ಯಗಳಿಂದ ಅಲಂಕಾರ ಸೇವೆ, ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗವಿರುತ್ತದೆ. ಆಷಾಡ ಮಾಸದ ಪ್ರತಿ ಶುಕ್ರವಾರ ಪೂರ್ವಾಹ್ನ 10.30 ರಿಂದ 12ರವರೆಗಿನ ರಾಹುಕಾಲದಲ್ಲಿ ನಿಂಬೆಹಣ್ಣಿನ ದೀಪ ಆರಾಧನೆ ಮತ್ತು ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ. ಆ.2 ರಂದು ಆಷಾಡ ಮಾಸದ ಕೊನೆಯ ದಿನದ ಪೂಜೆ ಅಂಗವಾಗಿ ಅಮ್ಮನವರ ಸನ್ನಿಧಾನದಲ್ಲಿ ಸಂಜೆ 6 ಗಂಟೆಗೆ ರಂಗ ಪೂಜೆ, 7 ಗಂಟೆಗೆ ಮಹಾ ಮಂಗಳಾರತಿ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ ಎಂದು ಗಂಗಾಧರ್ ಮಾಹಿತಿ ನೀಡಿದ್ದಾರೆ.

Read More

ಸೋಮವಾರಪೇಟೆ ಜು.6 NEWS DESK : ಡೆಂಗ್ಯೂ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಪಟ್ಟಣ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಡೆಂಗ್ಯೂವನ್ನು ಹರಡುವ ಸೊಳ್ಳೆಗಳ ಉತ್ಪತ್ತಿ ಸ್ಥಾನವನ್ನು ನಾಶಗೊಳಿಸುವ ಬಗ್ಗೆ ಪಟ್ಟಣದ ವಿವಿಧ ವಾರ್ಡ್‍ಗಳಲ್ಲಿ ಅರಿವು ಮೂಡಿಸಲಾಯಿತು. ಸೊಳ್ಳೆಗಳ ಉಗಮವನ್ನು ತಡೆಗಟ್ಟುವುದು ಹಾಗೂ ಸುತ್ತಮುತ್ತಲ ವಾತಾವರಣವನ್ನು ಶುಚಿಯಾಗಿಟ್ಟುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ಪ.ಪಂ ಮುಖ್ಯಾಧಿಕಾರಿ ನಾಚಪ್ಪ, ಆರೋಗ್ಯಾಧಿಕಾರಿ ಜಾಸೀಂ ಖಾನ್, ಆಸ್ಪತ್ರೆಯ ಆರೋಗ್ಯ ನಿರೀಕ್ಷಕ ಮಹೇಶ್, ಪ್ರವೀಣ್, ಅನಿತಾ ಸೇರಿದಂತೆ ಇತರರು ಹಾಜರಿದ್ದರು.

Read More

ಕೊಳ್ಳೇಗಾಲ ಜು.6 NEWS DESK : ಕಾಮಗೆರೆ ಸೆಂಟ್ ಫ್ರಾನ್ಸಿಸ್ ಕ್ಷೇವಿಯರ್ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಶಾಲಾ ಮಂತ್ರಿಮಂಡಲವನ್ನು ರಚಿಸಲಾಯಿತು. ಶಾಲಾ ಮಕ್ಕಳು ಚುನಾವಣೆಯ ಮೂಲಕ ವಿವಿಧ ನಾಯಕರನ್ನು ಆಯ್ಕೆ ಮಾಡಿದರು. ಶಾಲಾ ಮಂತ್ರಿ ಮಂಡಲದ ವಿದ್ಯಾರ್ಥಿ ಅಧ್ಯಕ್ಷನಾಗಿ ಶೈನ ಜೆರುಷ, ಉಪಾಧ್ಯಕ್ಷರಾಗಿ ಮೋಕ್ಷಿತ್ ಗೌಡ, ಕಾರ್ಯದರ್ಶಿಯಾಗಿ ರಿತುನಿಶಿ, ಶಿಸ್ತುಪಾಲನೆ ಮಂತ್ರಿಯಾಗಿ ಗಾನವಿ ಗೌಡ, ಸಹಾಯಕ ಮಂತ್ರಿಯಾಗಿ ಆಕಾಶ್, ಆರೋಗ್ಯ ಮಂತ್ರಿಯಾಗಿ ಮೋಹಿತ್ ಗೌಡ, ಉಪ ಆರೋಗ್ಯ ಮಂತ್ರಿಯಾಗಿ ಇಂಚರ, ಸಾಂಸ್ಕೃತಿಕ ಮಂತ್ರಿಯಾಗಿ ಅನ್ವಿತಾ ಅರುಳ್, ಉಪ ಸಾಂಸ್ಕೃತಿಕ ಮಂತ್ರಿಯಾಗಿ ಮೊಹಮದ್ ಸಾದ್ ಸರೀಫ್, ಕ್ರೀಡಾ ಮಂತ್ರಿಯಾಗಿ ಪುನೀತ್ ಕುಮಾರ್, ಉಪ ಕ್ರೀಡಾ ಮಂತ್ರಿಯಾಗಿ ಶ್ರೇಯಸ್ ಕುಮಾರ್,ವಾದ್ಯ ದ ನಾಯಕನಾಗಿ ಸೋಹನ್ ಆಯ್ಕೆಗೊಂಡರು. ಶಾಲಾ ವಿದ್ಯಾರ್ಥಿ ನಾಯಕರ ಪದಗ್ರಹಣ ಸಮಾರಂಭದಲ್ಲಿ ಶಾಲಾ ವ್ಯವಸ್ಥಾಪಕರು ಮತ್ತು ಧರ್ಮಗುರುಗಳಾದ ರೆ. ಫಾ. ಐಸಾಕ್ ರತ್ನಾಕರ್,  ನೂತನ ವಿದ್ಯಾರ್ಥಿ ಮುಖಂಡರಿಗೆ ಪ್ರಮಾಣವಚನ ಭೋದಿಸಿದರು ಮತ್ತು ವಿದ್ಯಾರ್ಥಿಗಳಿಂದ ಗೌರವ ರಕ್ಷೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

Read More

ಬೆಂಗಳೂರು ಜು.6 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಸ್‌ಸಿಸಿಪಿ/ಟಿ.ಎಸ್.ಪಿ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯ ಬಳಿಕ ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿವೆ. ಅದನ್ನು ಉತ್ಕೃಷ್ಟ ಮಟ್ಟಕ್ಕೇರಿಸಲು ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು. ರಾಜ್ಯದಲ್ಲಿ 833 ವಸತಿ ಶಾಲೆಗಳಿದ್ದು, ಎಲ್ಲಾ ವಸತಿ ಶಾಲೆಗಳಿಗೆ ಸುಸಜ್ಜಿತವಾದ ಕಟ್ಟಡಗಳನ್ನು ಹಂತಹಂತವಾಗಿ ನಿರ್ಮಿಸಲಾಗುತ್ತಿದೆ. ಎಲ್ಲಾ ಆಶ್ರಮ ಶಾಲೆಗಳನ್ನು ವಸತಿ ಶಾಲೆಗಳಾಗಿ ಪರಿರ್ವತಿಸುತ್ತಿದ್ದೇವೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಊಟ, ವಾಸ್ತವ್ಯ ವ್ಯವಸ್ಥೆ ಮಾತ್ರವಲ್ಲದೆ ಇಂಗ್ಲಿಷ್‌, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕೋಚಿಂಗ್‌ ಸಹ ನೀಡುತ್ತಿದ್ದೇವೆ. ಚಾಮರಾಜಪೇಟೆಯ ಸರ್ಕಾರಿ ಶಾಲೆಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆಯಾಗಿ ಪರಿವರ್ತಿಸಲಾಗಿದೆ. ಪ್ರಸ್ತುತ ಇಲ್ಲಿ 218 ಮಕ್ಕಳಿದ್ದಾರೆ. ಆಹಾರದ ಗುಣಮಟ್ಟದ ಪರೀಕ್ಷೆಗಾಗಿ ಊಟ ಮಾಡಿದೆ, ಊಟ ತುಂಬಾ ಚೆನ್ನಾಗಿತ್ತು.

Read More

(NEWS DESK) 12 ಏಪ್ರಿಲ್ 1895 ರಲ್ಲಿ ಸ್ಥಾಪನೆಯಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ 103,144 ಕ್ಕೂ ಹೆಚ್ಚು ಉದ್ಯೋಗಿಗಳ ಬಲವಿದ್ದು. ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿದೆ. ಡಿಸೆಂಬರ್ 2023 ರ ಅಂತ್ಯದ ವೇಳೆಗೆ ದೇಶಾದ್ಯಂತ ಒಟ್ಟು 52,331 ಶಾಖೆಯ ವಿತರಣಾ ಜಾಲಗಳನ್ನು ಹೊಂದಿದ್ದು. 10,108ಕ್ಕೂ ಮಿಕ್ಕಿ ದೇಶೀಯ ಶಾಖೆಗಳು, 2 ಅಂತಾರಾಷ್ಟ್ರೀಯ ಶಾಖೆಗಳು, 12,455 ಎಟಿಎಮ್‍ಗಳು ಹಾಗೂ 29,768 ವ್ಯಾಪಾರ ಕರೊಸ್ಪಾಂಡೆಂಟ್ ಗಳನ್ನು ಹೊಂದಿವೆ. ಬ್ಯಾಂಕಿನ ಸುದೀರ್ಘ ಇತಿಹಾಸದಲ್ಲಿ ಪಂಜಾಬ್ ನ್ಯಾಶನಲ್ ಬ್ಯಾಂಕ್‍ನೊಂದಿಗೆ 9 ಬ್ಯಾಂಕುಗಳನ್ನು ವಿಲೀನಗೊಳಿಸಲಾಗಿದೆ. 22,90,742 ಕೋಟಿ ರೂ.ಗಿಂತ ಹೆಚ್ಚಿನ ಒಟ್ಟು ವ್ಯವಹಾರದೊಂದಿಗೆ ಅಗ್ರಗಣ್ಯ ಬ್ಯಾಂಕ್ ಎಂದು ಗುರುತಿಸಲ್ಪಟ್ಟಿದೆ. ಭವಿಷ್ಯದ ಬ್ಯಾಂಕ್ ಉದ್ಯೋಗಿಗಳನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಹಲವು ಬ್ಯಾಂಕ್‍ಗಳು ಅಪ್ರೆಂಟಿಸ್ ಶಿಪ್ ತರಬೇತಿ ನೀಡುತ್ತಿವೆ. ತರಬೇತಿ ಎನ್ನುವುದು ಕಾಯಂ ಹುದ್ದೆ ಅಲ್ಲದಿದ್ದರೂ, ಕೌಶಲ್ಯ ಕಲಿಕೆಗೆ ಮತ್ತು ಭವಿಷ್ಯದಲ್ಲಿ ಬ್ಯಾಂಕ್ ಉದ್ಯೋಗಿಯಾಗಲು ಪೂರಕವಾಗುವ ನಿಟ್ಟಿನಲ್ಲಿ ಅಭ್ಯರ್ಥಿಗಳು ಸಿದ್ದರಾಗಲು ಇದು ನೆರವಾಗುತ್ತದೆ. ಇದೇ ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳಿಗೆ ಅಪ್ರೆಂಟಿಸ್‍ಷಿಪ್ ನೀಡಲು…

Read More