ಮಡಿಕೇರಿ ಜು.15 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಒಳಹರಿವಿನ ಪ್ರಮಾಣದಲ್ಲಿ ಏರಿಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಲಾಶಯದಿಂದ 20,000 ಕ್ಯುಸೆಕ್ ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ.
ಲೇಖಕ: admin
ಮಡಿಕೇರಿ ಜು.15 NEWS DESK : ವಿರಾಜಪೇಟೆ ತಾಲ್ಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ 2023ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಐವರು ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಅವರು ತಮ್ಮ ತಂದೆ ದಿವಂಗತ ಎ.ಕೆ.ಸುಬ್ಬಯ್ಯ ಹಾಗೂ ತಾಯಿ ದಿವಂಗತ ಎ.ಎಸ್ ಪೊನ್ನಮ್ಮ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ “ಕ್ರೀಡಾ ಗ್ರಾಮದಲ್ಲಿ ಮೈದಾನದ ಕೊರತೆ” ವರದಿಗೆ ಎ.ಎನ್.ವಾಸು ಪಡೆದುಕೊಂಡಿದ್ದಾರೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ಆರ್.ಸವಿತಾ ರೈ ಅವರು ತಮ್ಮ ತಂದೆ ಕೃಷಿಕರಾಗಿದ್ದ ದಿವಂಗತ ಬಿ.ಎಸ್.ರಂಗನಾಥ ರೈ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕೃಷಿ ವರದಿಗೆ ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ “ಮಿಶ್ರ ಕೃಷಿಯಲ್ಲಿ ದಂಪತಿ ಸಾಧನೆ” ವರದಿಗೆ ಪಿ.ವಿ.ಅಂತೋಣಿ ಪಡೆದುಕೊಂಡಿದ್ದಾರೆ. ಸಿದ್ದಾಪುರದ ಸಮಾಜ ಸೇವಕರಾದ ಕೆ.ಯು.ಅಬ್ದುಲ್ ಮಜೀದ್ ಅವರು ತಮ್ಮ ತಂದೆ ದಿವಂಗತ ಉಸ್ಮಾನ್ ಹಾಜಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿಗೆ ಕೊಡಗು ಚಾನಲ್…
ಮಡಿಕೇರಿ ಜು.15 NEWS DESK : ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗಿದ್ದು, ಅಲ್ಲಲ್ಲಿ ಮರದ ರೆಂಬೆಗಳು ಮುರಿದುಬಿದ್ದು ಮನೆಗಳಿಗೆ ಹಾನಿಯಾಗಿದೆ. ಸುಂಟಿಕೊಪ್ಪ ಹೋಬಳಿಯ ಅಂದಾಗೋವೆ ಗ್ರಾಮದ ಅಬ್ಬಾಸ್ ಎಂಬವರ ಮನೆಯ ಮೇಲ್ಛಾವಣಿಯ ಶೀಟುಗಳು ಗಾಳಿ ಮಳೆಗೆ ಹಾನಿಗೊಂಡಿದೆ.
ಮಡಿಕೇರಿ ಜು.15 NEWS DESK : ಕಕ್ಕಬ್ಬೆ ಭಾಗದ ಹಲವರು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಡಿಸಿಸಿ ಸದಸ್ಯರಾದ ಬಾಚಮಂಡ ಲವ ಚಿಣ್ಣಪ್ಪ ಹಾಗೂ ಗ್ರಾ.ಪಂ ಮಾಜಿ ಅಧ್ಯಕ್ಷ ಕಲಿಯಂಡ ಸಂಪಬ್ ಅಯ್ಯಪ್ಪ ಮುಂದಾಳತ್ವದಲ್ಲಿ ವಿರಾಜಪೇಟೆಯ ಶಾಸಕ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.
ಮಡಿಕೇರಿ ಜು.14 NEWS DESK : ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಗಾಳಿಗೆ ಮರದ ಕೊಂಬೆ ಬಿದ್ದು ಸುಮಾರು ಆರು ಕಾರುಗಳು ಜಖಂಗೊಂಡಿವೆ. ವಿವಿಧೆಡೆ ಮನೆಗಳಿಗೆ ಹಾನಿಯಾಗಿದೆ, ಮರಗಳು, ವಿದ್ಯುತ್ ಕಂಬಗಳು ಬಿದ್ದಿವೆ. ವಿದ್ಯುತ್ ತಂತಿ ಬಿದ್ದು ಹಸುವೊಂದು ಮೃತಪಟ್ಟಿದೆ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.15 ರಂದು ರಜೆ ಘೋಷಿಸಲಾಗಿದೆ. ಕಳೆದೆರಡು ದಿನಗಳಿಂದ ಶಾಂತವಾಗಿದ್ದ ಮಳೆ ಭಾನುವಾರದಿಂದ ಮತ್ತೆ ತೀವ್ರತೆಯನ್ನು ಪಡೆದುಕೊಂಡಿದೆ. ಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಬೆಟ್ಟಗುಡ್ಡದ ಮೇಲೆ ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಲ್ಲಿ ಆತಂಕ ಮನೆ ಮಾಡಿದೆ. ಮಡಿಕೇರಿ ನಗರದಿಂದ ಗಾಳಿಬೀಡು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಬಿದ್ದಿವೆ. ಚೆಸ್ಕಾಂ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ತೆರವು ಕಾರ್ಯಾಚರಣೆ ನಡೆಸಿದರು. ಭಾರೀ ಗಾಳಿಗೆ ಮರದ ಕೊಂಬೆ ಬಿದ್ದು ಆರು ಕಾರುಗಳು ಜಖಂಗೊಂಡಿರುವ ಘಟನೆ ಸೋಮವಾರಪೇಟೆಯ ರೆಸಾರ್ಟ್ವೊಂದರ ಸಮೀಪ…
ಮಡಿಕೇರಿ ಜು.14 NEWS DESK : ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ (ಜು.15 ರಂದು) ಜಿಲ್ಲೆಯ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶರಾದ ರಂಗಧಾಮಪ್ಪ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು ಅವರು ತಿಳಿಸಿದ್ದಾರೆ.
ಮಡಿಕೇರಿ ಜು.14 NEWS DESK : ಗಾಳಿ ಮಳೆ ತೀವ್ರತೆಯನ್ನು ಪಡೆದುಕೊಳ್ಳುತ್ತಿರುವುದರಿಂದ ಮಡಿಕೇರಿ, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜು.15 ರಂದು ಒಂದು ದಿನ ರಜೆ ಘೋಷಿಸಲಾಗಿದೆ.
ಮಡಿಕೇರಿ ಜು.14 NEWS DESK : ಕರುನಾಡು ಕಂಡ ಮೇರು ಸಾಹಿತಿ, ಪತ್ರಕರ್ತ, ಕುಲಪುರೋಹಿತ ಎಂಬ ಬಿರುದಿಗೆ ಭಾಜನರಾಗಿದ್ದ ಆಲೂರು ವೆಂಕಟರಾಯರ ಜನ್ಮ ದಿನಾಚರಣೆಯನ್ನು, ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶನದಂತೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಾರಾಣೆಯಲ್ಲಿ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಗೆ, ರಾಯರ ಕುರಿತ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಿ, ವಿಜೇತರಿಗೆ ಚಪ್ಪಾಳೆಗಳ ಮೂಲಕ ಅಭಿನಂದಿಸಿ, ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನೂ ಪ್ರೋತ್ಸಾಹಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ವೇದಪ್ರಸಾದ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಶಿಕ್ಷಕ ಕಿಶೋರ್ಕುಮಾರ್ ಅವರು ವಿದ್ಯಾರ್ಥಿಗಳಿಗೆ ಆಲೂರು ವೆಂಕಟರಾಯರ ಭಾವಚಿತ್ರದೊಂದಿಗೆ, ರಾಯರ ಬದುಕು ಸಾಧನೆಯನ್ನು ವಿವರಿಸಿದರು. ಶಿಕ್ಷಕಿಯರಾದ ಸುಮಿತ್ರ, ಮಂಜುಳ ಅವರು ರಸಪ್ರಶ್ನೆ ಸ್ಪರ್ಧೆ ನಡೆಸಿದರು.
ಸುಂಟಿಕೊಪ್ಪ ಜು.14 NEWS DESK : ಸುಂಟಿಕೊಪ್ಪ ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ವೀರಾ ಡಿಸೋಜ ವರ್ಗಾವಣೆಗೊಂಡಿದ್ದು, ಅವರಿಗೆ ಸಂತ ಅಂತೋಣಿ ದೇವಾಲಯದ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಸಂತ ಅಂತೋಣಿಯವರ ದೇವಾಲಯದ ಧರ್ಮಗುರುಗಳಾದ ವಿಜಯಕುಮಾರ್ ಹಾಗೂ ಪಾಲನಾ ಸಮಿತಿಯವರು ಶುಭ ಹಾರೈಸಿದರು. ವೀರಾ ಡಿಸೋಜ ಅವರು ಇದೀಗ ಶಿವಮೊಗ್ಗ ಜಿಲ್ಲೆಯ ಸಾಗರ ಜೋಗಾಕ್ಕೆ ವರ್ಗಾವಣೆಗೊಂಡಿದ್ದಾರೆ. ಈ ಸಂದರ್ಭ ದೇವಾಲಯ ಪಾಲನಾ ಸಮಿತಿ ಕಾರ್ಯದರ್ಶಿ ಸ್ವೆಲ್ವರಾಜ್, ಗ್ಯಾಬ್ರಿಯಲ್ ಡಿಸೋಜ, ರೋಸ್ಮೇರಿ ರಾಡ್ರಿಗಸ್, ಗ್ರೇಸಿ, ಕನ್ಯಾಸ್ತ್ರೀಯರು ಹಾಗೂ ಕ್ರೈಸ್ತ ಭಾಂದವರು ಇದ್ದರು.
ಸುಂಟಿಕೊಪ್ಪ ಜು.14 NEWS DESK : ಪಿಯುಸಿ ವಿದ್ಯಾರ್ಥಿಗಳ ವ್ಯಾಸಂಗ ಭವಿಷ್ಯದ ಪ್ರಮುಖ ಘಟ್ಟವಾಗಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿಚಲಿತರಾಗದೆ ವಿದ್ಯಭ್ಯಾಸದ ಕಡೆಗೆ ಹೆಚ್ಚಿನ ಗಮನಹರಿಸಬೇಕೆಂದು ಸುಂಟಿಕೊಪ್ಪ ಪೊಲೀಸ್ಠಾಣೆಯ ಪಿಎಸ್ಐ ಶ್ರೀಧರ್ ಹೇಳಿದರು. ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಭಾಷಣ ಮಾಡಿದ ಅವರು ಹದಿಹರೆಯದಲ್ಲಿ ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಮೊಬೈಲ್ನ ದಾಸರಾಗಬಾರದು, ರಸ್ತೆ ಸುರಕ್ಷತೆ ಬಗ್ಗೆ ಆರಿತುಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾದ ಅವರು ಉದ್ಘಾಟಿಸಿ ಮಾತನಾಡಿ ಕಾಲೇಜಿನ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಹೇಳಿ ಸಂಘಕ್ಕೆ ಶುಭಹಾರೈಸಿದರು. ಜೀವಶಾಸ್ತç ಉಪನ್ಯಾಸಕಿಯಾದ ಪದ್ಮಾವತಿ ಪ್ರತಿಜ್ಞಾನ ವಿಧಿ ಭೋಧಿಸಿದರು. ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ ಮಾತನಾಡಿ ವಿದ್ಯಾರ್ಥಿಗಳಲ್ಲಿ ವ್ಯಾಸಂಗದ ಅವಧಿಯಲ್ಲಿಯೇ ಅವರುಗಳು ನಾಯಕತ್ವ ಗುಣಗಳನ್ನು ಬೆಳೆಸುವ ದೃಷ್ಟಿಯಿಂದ ಕಾಲೇಜಿನಲ್ಲಿ ಪ್ರಜಾಸತ್ತಾತ್ಮಕ ನೀತಿಯನ್ನು ಚುನಾವಣೆ ನಡೆಸಿ ವಿದ್ಯಾರ್ಥಿ ಸಂಘವನ್ನು ರಚಿಸಲಾಗಿದೆ ಎಂದು ಹೇಳಿದರು. ಕಾಲೇಜಿನ…






