ಮಡಿಕೇರಿ ಜು.5 NEWS DESK : ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣು ಪ್ರಕಾಶ್ ಪಾಟೀಲ್ ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ಕಾಂಗ್ರೆಸ್ ಮುಖಂಡರು ಆತ್ಮೀಯವಾಗಿ ಸ್ವಾಗತಿಸಿದರು. ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಮಡಿಕೇರಿ ನಗರಸಭಾ ಸದಸ್ಯರಾದ ರಾಜೇಶ್ ಯಲ್ಲಪ್ಪ, ಕೆಪಿಸಿಸಿ ಸದಸ್ಯ ನಂದಕುಮಾರ್, ಮಡಿಕೇರಿ ನಗರ ಕಾಂಗ್ರೆಸ್ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ನಾಮ ನಿರ್ದೇಶಿತ ಸದಸ್ಯರುಗಳಾದ ಬಿ.ಎನ್.ಮುದ್ದುರಾಜ್, ಜಿ.ಸಿ.ಜಗದೀಶ್,ವಿಶಾಲ್ ನಂದಕುಮಾರ್ ಮಡಿಕೇರಿಯಲ್ಲಿ ಬರಮಾಡಿಕೊಂಡರು.
ಲೇಖಕ: admin
ಮಡಿಕೇರಿ ಜು.4 NEWS DESK : ಭಾರತೀಯ ಜನಸಂಘದ ಸ್ಥಾಪಕ ಅಧ್ಯಕ್ಷ ಭಾರತೀಯ ಸಂಸ್ಕೃತಿಯನ್ನು ಎತ್ತಿಹಿಡಿದಿರುವ ಸಂಪ್ರದಾಯ ಕುಟುಂಬದಲ್ಲಿ ಜನನ ಹೊಂದಿರುವ ಶ್ಯಾಮ್ ಪ್ರಸಾದ್ ಮುಖರ್ಜಿಯವರು 1901 ಜುಲೈ 6 ರಂದು ಜನಿಸಿದರು. ತಂದೆ ಅಶುತೋಷ್ ಫೋಷ್, ತಾಯಿ ಜೋಗಮಯ್ಯ ದೇವಿ. ಭಾರತೀಯ ಸಂಪ್ರದಾಯ ಕುಟುಂಬದಲ್ಲಿ ಬೆಳೆದಿರುವ ಇವರ ತಂದೆ ಭಾರತೀಯ ಸಂಸ್ಕೃತಿಯನ್ನು ಅತೀಯಾಗಿ ಪಾಲಿಸುತ್ತಿದ್ದರು. ಇವರ ತಂದೆ ಖ್ಯಾತ ವಕೀಲರಾಗಿ, ನ್ಯಾಯಧೀಶರಾಗಿ ಕಲ್ಕತ್ತದ ವಿಶ್ವವಿದ್ಯಾನಿಲಯದ ಉಪ ಕುಲಪತಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಇವರ ತಂದೆಯನ್ನು ಸರಸ್ವತಿ ಪುತ್ರ ಎಂದೂ ಕರೆಯುತ್ತಿದ್ದರೂ. ಕಾರಣ ಇವರ ಮನೆಯಲ್ಲಿ 85,000 ಸಾವಿರಕ್ಕೂ ಹೆಚ್ಚು ಪುಸ್ತಕ ಸಂಗ್ರಹ ಮಾಡಿದ್ದರು. ಇಂದಿಗೂ ಕಲ್ಕತ್ತದ ನ್ಯಾಷನಲ್ ಗ್ರಂಥಾಲಯದಲ್ಲಿ ಪತ್ಯೇಕವಾಗಿ ಸಂಗ್ರಹಿಸಿ ಇಡಲಾಗಿದೆ. ತಂದೆಯವರ ಮಾರ್ಗದರ್ಶನದಂತೆ ರಾಷ್ಟ್ರೀಯ ಸಂಪ್ರದಾಯ, ರಾಷ್ಟ್ರೀಯತೆಯನ್ನು ಇವರು ಮೈಗೂಡಿಸಿಕೊಂಡಿದ್ದರು. ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಕಲ್ಪನೆ ಕನಸು-“ನಾನು ದೊಡ್ಡವನಾದ ಮೇಲೆ ಬಹು ದೊಡ್ಡ ವ್ಯಕ್ತಿಯಾಗಬೇಕು. ಸಾಮಾಜಿಕ ಹಿತಕ್ಕಾಗಿ ಸಮಾಜದ ಸುಧಾರಣೆಗೆ ನನ್ನನ್ನು ತೊಡಗಿಸಿಕೊಳ್ಳಬೇಕೆಂಬ ಹಂಬಲ ಅವರಲಿತ್ತು. ಶಿಕ್ಷಣದ ತುಡಿತ,…
ಮಡಿಕೇರಿ ಜು.4 NEWS DESK : ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986 ರನ್ವಯ ಮಕ್ಕಳ ಶಿಕ್ಷಣದ ಹಕ್ಕಿಗೆ ಮಾರಕವಾಗದಂತೆ ಬಾಲ ನಟ, ನಟಿಯಾಗಿ ನಟನಾ ಕೆಲಸ ನಿರ್ವಹಿಸುವ ಚಟುವಟಿಕೆಗಳನ್ನು ಹೊರತುಪಡಿಸಿ, ಕಾಯ್ದೆಯು ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ ಹಾಗೂ ಕಾಯ್ದೆಯು 14 ರಿಂದ 18 ವಯಸ್ಸಿನ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕೊಡಗು ಉಪ ವಿಭಾಗದ ಕಾರ್ಮಿಕ ಅಧಿಕಾರಿ ಹರ್ಷವರ್ಧನ ತಿಳಿಸಿದ್ದಾರೆ.
ಮಡಿಕೇರಿ ಜು.4 NEWS DESK : ನಮ್ಮ ಸುತ್ತಲ ಹಸಿರ ಪರಿಸರದಲ್ಲಿ ಲಭ್ಯವಿರುವ ಔಷಧೀಯ ಗುಣಗಳುಳ್ಳ, ಆರೋಗ್ಯಕ್ಕೆ ಪೂರಕವಾದ ಸಸ್ಯ ಸಂಪತ್ತನ್ನು ಪರಿಚಯಿಸುವ ‘ಔಷಧ ಸಿಂಚನ’ ವಿನೂತನ ಕಾರ್ಯಕ್ರಮ ವಿರಾಜಪೇಟೆ ತಾಲೂಕಿನ ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಚೆನ್ನಂಗಿ ಸರ್ಕಾರಿ ಶಾಲೆಯಲ್ಲಿ ನಡೆಯಿತು. ಚೆನ್ನಂಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ನಮ್ಮ ಸುತ್ತಲಲ್ಲಿ ಕಂಡು ಬರುವ ಗಿಡ ಮರಗಳಲ್ಲಿನ ಔಷಧೀಯ ಅಂಶಗಳ ಮಹತ್ವವನ್ನು ಸ್ಥಳೀಯರಿಗೆ ಪರಿಚಯಿಸುವ ಮೂಲಕ, ಔಷಧೀಯ ಗುಣಗಳನ್ನು ಹೊಂದಿದ ಸಸ್ಯಗಳನ್ನು ಬಳಸಿ ಆರೋಗ್ಯವಂತರಾಗಿರಿ ಎಂಬ ಸಂದೇಶ ಸಾರುವ ಮೂಲಕ ಗಮನ ಸೆಳೆದರು. ಔಷಧ ಸಿಂಚನ ಕಾರ್ಯಕ್ರಮ ಹಿನ್ನೆಲೆ ಶಾಲೆಯ 1 ರಿಂದ 7ನೇ ತರಗತಿಯ ಸುಮಾರು ಐವತ್ತು ವಿದ್ಯಾರ್ಥಿಗಳು ಮನೆಯ ಸುತ್ತಮುvಲು ಬೆಳೆದು ನಿಂತ ಮರಕೆಸ, ಕಾಡು ಸಾಂಬಾರ, ಶುಂಠಿ, ಅಮೃತ ಬಳ್ಳಿ, ಕೊತ್ತಂಬರಿ, ಪುದೀನ, ನಿಂಬೆ, ಹಾಗಲಕಾಯಿ, ಕರಿಬೇವು, ತುಂಬೆ, ತುಳಸಿ, ಬಾಳೆ, ಸೀಬೆ, ದಾಳಿಂಬೆ, ನೇರಳೆ, ಪಣ್ಪುಳಿ, ಬದನೆಕಾಯಿ, ಸಾಸಿವೆ, ಈರುಳ್ಳಿ, ಬೆಳ್ಳುಳ್ಳಿ, ನೀಲಗಿರಿ,…
ಮಡಿಕೇರಿ ಜು.4 NEWS DESK : ಕೊಡಗು ಜಿಲ್ಲೆಯಲ್ಲಿ ವಾಡಿಕೆಯಂತೆ ಸರಾಸರಿ ಮಳೆಯಾಗುತ್ತಿದ್ದು, ಆ ನಿಟ್ಟಿನಲ್ಲಿ ಅತಿವೃಷ್ಟಿಯಿಂದ ಪ್ರಾಕೃತಿಕ ಅವಘಡಗಳು ಸಂಭವಿಸಿದಲ್ಲಿ ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಸದಾ ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಕೆರೆಕಟ್ಟೆ, ತೊರೆ ಹಾಗೂ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಆ ದಿಸೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಪ್ರಾಕೃತಿಕ ವಿಕೋಪ ನಿರ್ವಹಣೆಯ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಈಗಾಗಲೇ ಹೋಬಳಿವಾರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ವಾರಕ್ಕೊಮ್ಮೆಯಾದರೂ ತಮ್ಮ ಹೋಬಳಿ ವ್ಯಾಪ್ತಿಗೆ ಭೇಟಿ ನೀಡಿ ಪ್ರಾಕೃತಿಕ ವಿಕೋಪ ಸಂಬಂಧ ಮಾಹಿತಿ ಪಡೆಯುವುದರ ಜೊತೆಗೆ, ಹೆಚ್ಚಿನ ಮಳೆಯಾದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದು ಅವರು…
ಮಡಿಕೇರಿ ಜು.4 NEWS DESK : ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರ ಜನ್ಮ ದಿನ ಅಂಗವಾಗಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು. ಈ ಸಂದರ್ಭ ಬಿಜೆಪಿ ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್, ನಗರ ಯುವ ಮೋರ್ಚಾ ಅಧ್ಯಕ್ಷ ಪಾಡಿರ ಪೂಣಚ್ಚ, ಓಬಿಸಿ ಮೋರ್ಚಾ ಅಧ್ಯಕ್ಷ ಕುಶಕುಮಾರ್, ನಗರ ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್, ನಗರಸಭಾ ಸದಸ್ಯರಾದ ಸವಿತಾ ರಾಕೇಶ್, ನಗರ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸೌಮ್ಯ, ಪ್ರಧಾನ ಕಾರ್ಯದರ್ಶಿ ಸಂಗೀತ, ಕಾರ್ಯದರ್ಶಿ ವೈಭವಿ ಹಾಗೂ ಕೀರ್ತಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಗ್ನೇಶ್, ಮಂಜುಳಾ ಮತ್ತು ಇತರ ಕಾರ್ಯಕರ್ತರು ಹಾಜರಿದ್ದರು.
ಮಡಿಕೇರಿ ಜು.4 NEWS DESK : ತಿರುಮಲ ತಿರುಪತಿ ದೇವಸ್ಥಾನಂ ಬೋರ್ಡ್ ಮತ್ತು ಆಂಧ್ರದ “ಸಾಫ್ಟ್ ಮನಿ” ಫಲಾನುಭವಿಗಳು ಸರ್ಕಾರ ನೀಡುತ್ತಿರುವ ಬಡ್ಡಿ ರಹಿತ ಸಾಲದ ಮೊತ್ತವನ್ನು ಕೊಡವ ಲ್ಯಾಂಡ್ ನ ಕೃಷಿ ಭೂಮಿ ಖರೀದಿಗಾಗಿ ಬಳಕೆ ಮಾಡುತ್ತಿದ್ದು, ಕೊಡವರ ಹಿತದೃಷ್ಟಿಯಿಂದ ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ. “ಸಾಫ್ಟ್ ಮನಿ” ಫಲಾನುಭವಿಗಳು ವಾಣಿಜ್ಯ ದುಸ್ಸಾಹಸಕ್ಕಾಗಿ ಕೊಡಗಿನ ಕೃಷಿ ಭೂಮಿಯನ್ನು ಯುದ್ಧೋಪಾದಿಯಲ್ಲಿ ಖರೀದಿಸುತ್ತಿದ್ದಾರೆ ಮತ್ತು ನಮ್ಮ ಪರ್ವತಗಳು, ಅರಣ್ಯ ಪ್ರದೇಶಗಳು, ಸಸ್ಯ ಸಂಕುಲ ಮತ್ತು ಜಲಮೂಲಗಳನ್ನು ನಾಶಪಡಿಸಲಾಗುತ್ತಿದೆ. ಇದು ಕಾವೇರಿ ಜಲಾನಯನ ಪ್ರದೇಶದ ನರ ಕೇಂದ್ರ ಮತ್ತು ನೀರಿನ ತಳಹದಿಯ ಜಲ ಗರ್ಭಕ್ಕೆ ಹಾನಿಯುಂಟುಮಾಡುತ್ತಿದೆ. ಪವಿತ್ರ ನದಿ ಕಾವೇರಿಯು ದುಃಖದಿಂದ ಬಳಲುತ್ತಿರುವುದನ್ನು ಭಗವಾನ್ ವೆಂಕಟೇಶನು ಸಹಿಸುವುದಿಲ್ಲ. ತಿರುಪತಿ ದೇವಸ್ಥಾನಂ ಮಂಡಳಿಯ ಸಾವಿರಾರು ಕೋಟಿ ಹಣವನ್ನು ಕೊಡವ ಲ್ಯಾಂಡ್ನಲ್ಲಿ ಭೂಮಿಯನ್ನು ಖರೀದಿಸಲು…
ಮಡಿಕೇರಿ ಜು.4 NEWS DESK : ಹಿಂದೂ ಮಲಯಾಳಿ ಸಮಾಜದ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜು.7 ರಂದು ನಗರದ ಅಂಬೇಡ್ಕರ್ ಭವನದಲ್ಲಿ ವಾರ್ಷಿಕ ಮಹಾಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆಯೆಂದು ಸಮಿತಿಯ ಅಧ್ಯಕ್ಷ ವಿ.ಎಂ.ವಿಜಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಹಿಂದೂ ಮಲಯಾಳಿ ಸಮಾಜದಿಂದ 2022-23 ಮತ್ತು 2023-24 ನೇ ಸಾಲಿಗೆ ಸಂಬಂಧಿಸಿದಂತೆ ಜಿಲ್ಲಾ ವ್ಯಾಪ್ತಿಯ ಹಿಂದೂ ಮಲಯಾಳಿ ಸಮಾಜದ 9 ಘಟಕಗಳಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ತಲಾ ನಾಲ್ವರು ವಿದ್ಯಾರ್ಥಿಗಳಂತೆ ಒಟ್ಟು 36 ವಿದ್ಯಾರ್ಥಿಗಳನ್ನು ಪ್ರೋತ್ಸಾಹ ಧನವನ್ನು ನೀಡಿ ಪುರಸ್ಕರಿಸಲಾಗುತ್ತದೆಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಮತ್ತು ಉನ್ನತ ವ್ಯಾಸಂಗ ಮಾಡಿದ ಸುಮಾರು 40 ಮಂದಿಯನ್ನು ಸನ್ಮಾನಿಸಿ ಗೌರವಿಸಲಾಗುತ್ತದೆಂದು ಹೇಳಿದರು. ನೂತನ ಸಂಸದರಿಗೆ ಸನ್ಮಾನ : ಸನ್ಮಾನ ಕಾರ್ಯಕ್ರಮವನ್ನು ಜು.7 ರಂದು ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್…
ಮಡಿಕೇರಿ ಜು.4 NEWS DESK : ದಾನಿಗಳ ಸಹಕಾರದಿಂದ ಮೂರ್ನಾಡಿನಲ್ಲಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸುಸಜ್ಜಿತ ಹಿಂದೂ ರುದ್ರಭೂಮಿ ಇಂದು ಉದ್ಘಾಟನೆಗೊಂಡಿತು. ಊರಿನ ಹಿರಿಯರಾದ ಕೆರೆಮನೆ ವಿಜಯಲಕ್ಷ್ಮಿ ಪಾಲಾಕ್ಷ ಅವರು ದಾನವಾಗಿ ನೀಡಿದ ಸುಮಾರು 40 ಸೆಂಟ್ ಜಾಗದಲ್ಲಿ ರುದ್ರಭೂಮಿ ನಿರ್ಮಾಣಗೊಂಡಿದೆ. ಕೊಡಗು ಜಿಲ್ಲೆಯಲ್ಲೇ ಮೊದಲು ಎನ್ನಬಹುದಾದ ವಿಶೇಷ ವ್ಯವಸ್ಥೆ ಈ ರುದ್ರಭೂಮಿಯಲ್ಲಿದೆ. ಎರಡು ಸಿಲಿಕಾನ್ ಚೇಂಬರ್, ಹರಿಶ್ಚಂದ್ರ ಗುಡಿ, ಉದ್ಯಾನವನ, ಕಚೇರಿ, ಪ್ರತ್ಯೇಕ ಕೋಣೆ, ಸ್ನಾನದ ಕೋಣೆ, ಸೌದೆ ಶೇಖರಣಾ ಶೆಡ್, ನೀರು, ವಿದ್ಯುತ್ ಸೇರಿದಂತೆ ಮೂಲಭೂತ ಸೌಲಭ್ಯ ಇಲ್ಲಿದೆ. ದಾನಿಗಳು, ಸ್ವಯಂಸೇವಕರು, ಸಂಘ ಸಂಸ್ಥೆಗಳು, ಗ್ರಾಮಸ್ಥರು, ಗ್ರಾ.ಪಂ ಹಾಗೂ ಜನಪ್ರತಿನಿಧಿಗಳ ಸಹಕಾರದಿಂದ ಸುಸಜ್ಜಿತವಾದ ಈ ಹಿಂದೂ ರುದ್ರಭೂಮಿಯನ್ನು ನಿರ್ಮಿಸಲು ಸಾಧ್ಯವಾಯಿತು ಎಂದು ಮೂರ್ನಾಡು ಹಿಂದೂ ರುದ್ರಭೂಮಿ ಸಮಿತಿಯ ಪ್ರಮುಖರು ತಿಳಿಸಿದರು. ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಕುಶನ್ ರೈ, ರುದ್ರಭೂಮಿ ಸಮಿತಿಯ ಅಧ್ಯಕ್ಷ ಅರುಣ್ ಬಾಬ, ಉಪಾಧ್ಯಕ್ಷ ಮೋಹನ್, ಖಜಾಂಚಿ ಜಯರಾಂ, ಕಾರ್ಯದರ್ಶಿ ಹೀರ…
ಸೋಮವಾರಪೇಟೆ ಜು.4 NEWS DESK : ಕೊಡಗು ಜಿಲ್ಲಾ ಮೊಗೇರಾ ಸೇವಾ ಸಮಿತಿ ವತಿಯಿಂದ ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಸಮಿತಿಯ ಪ್ರಮುಖರು, ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ಶಾಲೆಯ ಆವರಣದಲ್ಲಿದ್ದ ಗಿಡಗಂಟಿಗಳನ್ನು ಕಡೆದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಡಿಸಿದರು. ಈ ಸಂದರ್ಭ ಮೊಗೇರಾ ಸೇವಾ ಸಮಿತಿಯ ಸದಸ್ಯರಾದ ಕಿಟ್ಟು, ರಾಮು, ಸಂಜು, ಐತ್ತಪ್ಪ, ಜಗದೀಶ್, ಸುರೇಶ್ ಇದ್ದರು.






