ಸೋಮವಾರಪೇಟೆ ಜು.4 NEWS DESK : ಜೆಸಿಐ ವಲಯ 14 ರ ಮಧ್ಯವಾರ್ಷಿಕ ಸಮ್ಮೇಳನದಲ್ಲಿ ಜೆಸಿಐ ಸೋಮವಾರಪೇಟೆ ಪುಷ್ಪಗಿರಿ ಘಟಕ ಹಲವು ಪ್ರಶಸ್ತಿಗಳನ್ನು ಗಳಿಸಿದೆ. ಇತ್ತೀಚೆಗೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದ ಮಧ್ಯವಾರ್ಷಿಕ ಸಮ್ಮೇಳನದಲ್ಲಿ ಪ್ರಶಸ್ತಿಗಳನ್ನು ನೀಡಲಾಯಿತು. ಔಟ್ ಸ್ಟ್ಯಾಂಡಿಗ್ ಪ್ರೋಗ್ರಾಮ್ ವಿನ್ನರ್ ಅವಾರ್ಡ್ ಮತ್ತು ಔಟ್ ಸ್ಟ್ಯಾಂಡಿಂಗ್ ಪ್ರೆಸಿಡೆಂಟ್ ಪುರಸ್ಕಾರವನ್ನು ಜೆಸಿಐ ಸೋಮವಾರಪೇಟೆ ಘಟಕದ ಅಧ್ಯಕ್ಷ ಎಸ್.ಆರ್.ವಸಂತ್ ಪಡೆದುಕೊಂಡಿದ್ದಾರೆ. ವಲಯ 14 ರ ಅಧ್ಯಕ್ಷೆ ಆಶಾ ಜೈನ್, ಉಪಾಧ್ಯಕ್ಷ ರಾಕೇಶ್, ಕಾರ್ಯದರ್ಶಿ ಮಾಯಾ ಗಿರೀಶ್, ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಘಟಕದ ಜೆಎಸಿ ಉಪಾಧ್ಯಕ್ಷರಾದ ಮಮತಾ, ರಾಷ್ಟ್ರೀಯ ಅಧಿಕಾರಿ ನೆಲ್ಸನ್ ಡಿಸೋಜ, ಸೋಮವಾರಪೇಟೆ ಘಟಕದ ಕಾರ್ಯದರ್ಶಿ ಜಗದಾಂಭ ಗುರುಪ್ರಸಾದ್, ಮಹಿಳಾ ಘಟಕದ ಅಧ್ಯಕ್ಷೆ ವಿನುತ ಸುದೀಪ್, ಸದಸ್ಯರಾದ ಪುಷ್ಪಕ್, ನಿಕಟಪೂರ್ವ ವಲಯ ಅಧಿಕಾರಿ ಗಿರೀಶ್, ಪ್ರಮುಖರಾದ ಗುರುಪ್ರಸಾದ್, ಜೂನಿಯರ್ ಜೇಸಿ ವಲಯ ಅಧ್ಯಕ್ಷ ದಿಶಾಗಿರೀಶ್ ಇದ್ದರು.
ಲೇಖಕ: admin
ಮಡಿಕೇರಿ ಜು.4 NEWS DESK : ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ನೂತನ ಎಂ.ಆರ್.ಐ ಸ್ಕ್ಯಾನಿಂಗ್ ಯಂತ್ರದ ಅಳವಡಿಕೆ ಕಾರ್ಯವು ಭರದಿಂದ ಸಾಗಿದ್ದು, ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂ.ಆರ್.ಐ) ಸೇವೆಯು ಕೊಡಗಿನ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಯಾಗಿದ್ದು, ಈ ಸೇವೆಯಿಂದ ಕೀಲು ಮತ್ತು ಮೂಳೆ ಸಮಸ್ಯೆ, ಹೃದಯ ರಕ್ತನಾಳಗಳ ಕಾಯಿಲೆಗಳನ್ನು ಗುರುತಿಸಲು, ಸ್ತನ ಕ್ಯಾನ್ಸರ್ ಅಪಾಯವನ್ನು ಗುರುತಿಸಲು, ಎಂಡೊಮೆಟ್ರಿಯಾಸೀಸ್ ಮತ್ತು ವಿವಿಧ ರೋಗಗಳನ್ನು ಪತ್ತೆಹಚ್ಚಲು ಸಹಕಾರಿಯಾಗಲಿದೆ ಎಂದರು.
ವಿರಾಜಪೇಟೆ ಜು.4 NEWS DESK : ಕಾಡಾನೆಯೊಂದು ಕಾಫಿ ತೋಟದೊಳಗೆ ನುಗ್ಗಿ ದಾಂಧಲೆ ನಡೆಸಿ ಅಪಾರ ಪ್ರಮಾಣದಲ್ಲಿ ಕೃಷಿ ಫಸಲು ನಾಶಗೊಳಿಸಿದ ಘಟನೆ ಒಂದನೇ ರುದ್ರಗುಪ್ಪೆಯಲ್ಲಿ ನಡೆದಿದೆ. ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ರುದ್ರಗುಪ್ಪೆ ಗ್ರಾಮದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗ ದಾಂಧಲೆ ನಡೆಸಿ ಗ್ರಾಮದ ಎ.ಹೆಚ್. ಸರಸ್ವತಿ ಮತ್ತು ಟೋಮಿ ಎಂಬುವವರಿಗೆ ಸೇರಿದ ತೋಟಗಳಲ್ಲಿನ ಕಾಫಿ ಗಿಡಗಳು, ಅಡಿಕೆ, ತೆಂಗು, ಬಾಳೆ ಎಲ್ಲವನ್ನು ದ್ವಂಸಗೊಳಿಸಿವೆ. ಅಲ್ಲದೆ ವಿದ್ಯುತ್ ಪರಿವರ್ತಕದಿಂದ ಕೊಳವೆ ಬಾವಿಗೆ ಸಂಪರ್ಕ ಕಲ್ಪಿಸುವ ವಿದ್ಯುತ್ ತಂತಿಯನ್ನು ತುಂಡರಿಸಿದೆ. ಇದರಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದು, ವಿದ್ಯುತ್ ಪೂರೈಕೆಯಾಗುವ ತಂತಿ ನೆಲದ ಮೇಲೆ ಬಿದ್ದಿರುವ ಕಾರಣ ಕೆಲಸಕ್ಕೆ ತೆರಳುವ ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ.
ಸುಂಟಿಕೊಪ್ಪ, ಜು.3 NEWS DESK : ಮದ್ಯವರ್ಜನದ ಕುರಿತು ರಾಜ್ಯದ 17,548 ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ನಡೆಸಿ 20 ಮಿಕ್ಕಿ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡಿದ್ದಾರೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ಪಿ.ಪಿ.ನಂದಕುಮಾರ್ ಹೇಳಿದರು. ಮಡಿಕೇರಿ ತಾಲ್ಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿಯ ಅಖಿಲ ಕರ್ನಾಟಕಬಜನಜಾಗೃತಿ ವೇದಿಕೆ, ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ, ಮಡಿಕೇರಿ ತಾಲ್ಲೂಕು ಪ್ರಗತಿಬಂದು ಸ್ವಸಹಾಯ ಸಂಘಗಳ ಒಕ್ಕೂಟ, ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜು ಅವರ ಸಂಯುಕ್ತಾಶ್ರಯದಲ್ಲಿ ಸ್ವಸ್ಥ್ಯ ಮತ್ತು ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಜಾಗೃತಿ ಮೂಡಿಸುವ ‘ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ’ ದಲ್ಲಿ ಅವರು ಮಾತನಾಡಿದರು. ಇದುವರೆಗೆ 1805 ಮದ್ಯವರ್ಜನ ಶಿಬಿರಗಳನ್ನು ನಡೆಸಿ 1 ಲಕ್ಷದ 46 ಸಾವಿರ ಮದ್ಯವ್ಯಸನಿಗಳನ್ನು ವ್ಯಸನಮುಕ್ತಗೊಳಿಸಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಕಳೆದ ಸಂಶೋಧನೆಯ ಪ್ರಕಾರ ನಮ್ಮ ದೇಶದಲ್ಲಿ ಒಂದು ವರ್ಷಕ್ಕೆ 5 ಲಕ್ಷ ಜನರು ಮದ್ಯಪಾನದಿಂದ ಮರಣ…
ಹಾಸನ ಜು.4 NEWS DESK : ಭಾರತದೇಶದಲ್ಲಿ ರಾಜಮಹಾರಾಜರ ಕಾಲದಿಂದಲೂ ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸುತ್ತಾ ಭಾರತದ ಸಾಂಸ್ಕೃತಿಕ ಜಗತ್ತನ್ನು ಶ್ರೀಮಂತಗೊಳಿಸಿದ್ದು, ಇಂದಿನ ಜನಪ್ರತಿನಿಧಿಗಳು ಕೂಡ ಅದನ್ನು ಪೋಷಿಸುವುದು ಅಗತ್ಯವಿದೆ ಎಂದು ಸಾಹಿತಿ ಹಾಗೂ ಸಾಮಾಜಿಕ ಹೋರಾಟಗಾರ್ತಿ ಸಿ.ಸುವರ್ಣ ತಿಳಿಸಿದ್ದಾರೆ. ನಗರದಲ್ಲಿ ಚಿತ್ರಕಲಾವಿದ ವಸಂತಕುಮಾರ್ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಲೆ ಮನುಷ್ಯನ ಸೌಂದರ್ಯ ಪ್ರಜ್ಞೆಯನ್ನು ಹೆಚ್ಚಿಸುವುದರ ಜೊತೆಗೆ ಪಂಚೇಂದ್ರಿಯಗಳ ಬೆಳವಣಿಗೆಯ ಹೊಸಹೊಸ ಯೋಚನೆಗಳು, ಚಿಂತನೆಗಳು ಬೆಳೆಯಲು ಇದು ಪ್ರೇರಣೆಯಾಗಿದೆ. ಅಲ್ಲದೆ ಮನುಷ್ಯನ ಬದುಕನ್ನು ರೂಪಿಸಲು ಇದು ಸಹಕಾರಿಯಾಗಿದೆ ಎಂದರು. ಹಾಸನದಲ್ಲಿ ಕಳೆದ ಇಪ್ಪತ್ತೈದು ವರ್ಷದಿಂದಲೂ ಕಲಾಗ್ಯಾಲರಿಯನ್ನು ನಿರ್ಮಿಸಿ ಕಲೆಗೆ ಪೂರಕವಾದ ವಾತಾವರಣವನ್ನು ನಿರ್ಮಾಣ ಮಾಡುವಂತೆ ಜನರು ಬೇಡಿಕೆ ಇಟ್ಟಿದ್ದರೂ ಕೂಡ ಕಲಾವಿದರ ಹಾಗೂ ನಾಗರಿಕರ ಕನಸು ಕನಸಾಗಿಯೇ ಉಳಿದಿರುವುದು ನೋವಿನ ಸಂಗತಿ. ಹಾಸನ ಜಿಲ್ಲೆ ಕಲೆಗಳ ತವರೂರು ಇಲ್ಲಿಯ ಕಲೆಗಳು ಜಗತ್ ವಿಖ್ಯಾತಿಯನ್ನು ಪಡೆದಿದೆ ಜೊತೆಗೆ ಕಲಾವಿದರು ಕೂಡ ಕಲೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯುದಿರುವುದು ಹೆಮ್ಮೆಯ ಸಂಗತಿ.…
ಕುಶಾಲನಗರ, ಜು.4 NEWS DESK : ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು (ಕೂಡ್ಲೂರು) ಪ್ರೌಢಶಾಲೆಯಲ್ಲಿ ಶಾಲೆಯ ರಾಮಾನುಜನ್ ಗಣಿತ ಸಂಘದ ಆಶ್ರಯದಲ್ಲಿ ಕುಶಾಲನಗರ ಬ್ರೈನ್ ಅಕಾಡೆಮಿ ವತಿಯಿಂದ ಮಕ್ಕಳಿಗೆ ಆರಂಭಿಸಲಾದ ಅಬಾಕಸ್ ಕಲಿಕಾ ತರಬೇತಿಗೆ ಕುಶಾಲನಗರ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿನಿರತರ ಸಹಕಾರ ಸಂಘದ ಅಧ್ಯಕ್ಷ ಟಿ.ಆರ್.ಶರವಣಕುಮಾರ್ ಚಾಲನೆ ನೀಡಿದರು. ಅಬಾಕಸ್ ತರಬೇತಿ ಪಡೆಯಲಿರುವ ಶಾಲೆಯ 100 ಮಕ್ಕಳಿಗೆ ಕುಶಾಲನಗರ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿನಿರತರ ಸಹಕಾರ ಸಂಘದ ವತಿಯಿಂದ ಸಾಧನಾ ಸಲಕರಣೆ ಮತ್ತು ಅಭ್ಯಾಸ ಮಾರ್ಗದರ್ಶಿ ಪುಸ್ತಕಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ಅಬಾಕಸ್ ಕಲಿಕೆಯ ಸಾಧನ ಸಲಕರಣೆ ವಿತರಿಸಿ ಮಾತನಾಡಿದ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿನಿರತರ ಸಹಕಾರ ಸಂಘದ ಅಧ್ಯಕ್ಷ ಟಿ.ಆರ್.ಶರವಣಕುಮಾರ್, ಬುದ್ಧಿಮತ್ತೆಯ ಅಬಾಕಸ್ ಕಲಿಕೆಯು ಮಕ್ಕಳಲ್ಲಿ ಏಕಾಗ್ರತೆ, ಕ್ರಿಯಾಶೀಲತೆಯೊಂದಿಗೆ ಸೃಜನಶೀಲತೆ ಬೆಳೆಸುವ ಮೂಲಕ ಅವರ ಬುದ್ಧಿಶಕ್ತಿಯನ್ನು ಉದ್ದೀಪನಗೊಳಿಸಲು ತುಂಬಾ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಅಬಾಕಸ್ ಕಲಿಕೆಯ ತರಬೇತಿಯನ್ನು ಸದುಪಯೋಗಪಡಿಸಿಕೊಂಡು ತಮ್ಮ ಜ್ಞಾನಾಭಿವೃದ್ಧಿ ವೃದ್ಧಿಸಿಕೊಳ್ಳಬೇಕು ಎಂದರು. ತಮ್ಮ ಸಹಕಾರ ಸಂಘದ ವತಿಯಿಂದ ಹಸಿರು ಯೋಜನೆಯಡಿ ಕುಶಾಲನಗರ…
ಮಡಿಕೇರಿ ಜು.4 NEWS DESK : ಮಡಿಕೇರಿ ಬನ್ನಿಮಂಟಪದ ಸ್ವಸ್ತಿಕ್ ಯುವ ವೇದಿಕೆ ಯ 23ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಅಂಚೆಮನೆ ಸತೀಶ್ ಕುಟ್ಟಪ್ಪ, ಉಪಾಧ್ಯಕ್ಷರಾಗಿ ವಿಕ್ರಂ ವಿಜಯ್ ಕುಮಾರ್, ಪ್ರದಾನ ಕಾರ್ಯದರ್ಶಿಯಾಗಿ ಡಿ.ಜಯಣ್ಣ ಆಯ್ಕೆಯಾಗಿದ್ದಾರೆ ಎಂದು ಸಮಿತಿ ಯ ಸಂಸ್ಥಾಪಕ ಅಧ್ಯಕ್ಷ ಕುಲದೀಪ್ ಪೂಣಚ್ಚ ತಿಳಿಸಿದ್ದಾರೆ. ಜಂಟಿ ಕಾರ್ಯದರ್ಶಿಯಾಗಿ ಶಿವರಾಜ್, ಸಹ ಕಾರ್ಯದರ್ಶಿಯಾಗಿ ಚರಣ್, ಖಜಾಂಚಿಯಾಗಿ ಹೊಯ್ಸಳ, ಜಂಟಿ ಖಜಾಂಚಿಯಾಗಿ ಮಿಲನ್, ಸಹ ಖಜಾಂಚಿಯಾಗಿ ಪುನೀತ್, ಅಲಂಕಾರ ಸಮಿತಿ ಗೆ ರಮೇಶ್ ಮತ್ತು ಜಗ್ಗಿ, ಮೆರವಣಿಗೆ ಸಮಿತಿ ಗೆ ಸೋನಲ್ ಪೂಜಾರಿ ಹಾಗೂ ಪ್ರಶಾಂತ್ ನೇಮಕಗೊಂಡಿದ್ದಾರೆ. ಆಹಾರ ಸಮಿತಿ ಗೆ ಹೇಮಂತ್ ಕುಮಾರ್ ಹಾಗೂ ಜ್ಞಾನ ಕುಮಾರ್, ಧ್ವನಿವರ್ಧಕ ಸಮಿತಿ ಗೆ ಮನು ಹಾಗೂ ಬ್ರಿಜೇಶ್, ಗೌರವ ಅಧ್ಯಕ್ಷರಾಗಿ ಗಣೇಶ್ ಹಾಗೂ ಮಂಜುನಾಥ್, ನಿರ್ದೇಶಕರಾಗಿ ಎಂ.ಎಸ್.ಪ್ರಸಾದ್, ಸಲಹೆಗಾರರಾಗಿ ಸವಿತಾ ರಾಕೇಶ್, ಪ್ರೇಮ ರಾಮಯ್ಯ, ರಶ್ಮಿ ಪ್ರವೀಣ್ ನೇಮಕಗೊಂಡಿದರೆ ಎಂದು ಕುಲದೀಪ್ ಪೂಣಚ್ಚ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜು.4 NEWS DESK : ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜು.6 ರಂದು ಚೆಟ್ಟಳ್ಳಿಯಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಬೆಳಿಗ್ಗೆ 10.30 ಗಂಟೆಗೆ ಚೆಟ್ಟಳ್ಳಿ ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹಾಗೂ ಕೊಡವ ಲ್ಯಾಂಡ್ ಪರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಆದಿಮ ಸಂಜಾತ ಕೊಡವರ ಪವಿತ್ರ ಕೊಡವ ಲ್ಯಾಂಡ್ ನ್ನು ಸಂರಕ್ಷಿಸಿಕೊಳ್ಳಲು ಜಿಲ್ಲೆಯಾದ್ಯಂತ ಸಿಎನ್ಸಿ ವತಿಯಿಂದ ನಿರಂತರ ಜನಜಾಗೃತಿ ಕಾರ್ಯಕ್ರಮ ನಡೆಯುತ್ತಿದ್ದು, ಕೊಡವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ರಾಜಕೀಯ ನಂಟು ಮತ್ತು ಕಪ್ಪು ಹಣ ಹೊಂದಿರುವ ಭೂಮಾಫಿಯಾಗಳು, ರೆಸಾರ್ಟ್ ದೊರೆಗಳು, ಕಾರ್ಪೋರೇಟ್ ವಲಯಗಳು, ಬಹುರಾಷ್ಟ್ರೀಯ ಕಂಪೆನಿಗಳು, ಅನಿವಾಸಿ ಭಾರತೀಯ ಉದ್ಯಮಪತಿಗಳು, ವಿಶ್ವದಾದ್ಯಂತ ಇರುವ…
ಮಡಿಕೇರಿ ಜು.4 NEWS DESK : ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಚಿಕಿತ್ಸಕರಾಗಿದ್ದ ಡಾ.ಅನಿಲ್ ದವಾನ್ ಅವರಿಗೆ ಉತ್ತಮ ವೈದ್ಯ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ವೈದ್ಯ ರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುಖ್ಯಮಂತ್ರಿ ಮತ್ತು ಅರೋಗ್ಯ ಸಚಿವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಇವರು, ಪ್ರಸ್ತುತ ಕೊಡಗು ಮತ್ತು ಹಾಸನ ಜಿಲ್ಲೆಯ ಆಹಾರ ಮತ್ತು ಗುಣಮಟ್ಟದ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮಡಿಕೇರಿ ಜು.4 NEWS DESK : ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್ ಕನ್ನಡ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಜು.8 ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ 6.30ರಿಂದ ವೀಕ್ಷಿಸಬಹುದು. ‘ನನ್ನ ದೇವ್ರು’ ಧಾರಾವಾಹಿಯ ವಿಶೇಷವೆಂದರೆ “ಅಶ್ವಿನಿ ನಕ್ಷತ್ರ’ದಿಂದ ಮನೆಮಾತಾಗಿದ್ದ ಮಯೂರಿ ಮತ್ತೆ ಕಿರುತೆರೆಗೆ ಮರಳಿರುವುದು. ಈ ಧಾರಾವಾಹಿಯಲ್ಲಿ ಮಯೂರಿಯದು ಸಣ್ಣ ಊರಿನ ಬಡ ನರ್ಸ್ ಪಾತ್ರ. ಊರೇ ಮೆಚ್ಚುವ ಉದ್ಯಮಿ ಸಚ್ಚಿದಾನಂದ ಅವರಿಗೆ ಸೇರಿದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುವ ಬಡ ಹುಡುಗಿ ಮಯೂರಿ. ಜನಾನುರಾಗಿ ಸಚ್ಚಿದಾನಂದರ 20 ವರ್ಷದ ಮಗಳಿಗೆ ಅಪ್ಪನನ್ನು ಕಂಡರೆ ಇಷ್ಟವಿಲ್ಲ. ತನ್ನಿಂದ ದೂರಾಗಿ ಬದುಕುತ್ತಿರುವ ಮಗಳ ವಿಶ್ವಾಸವನ್ನು ಮರಳಿ ಗಳಿಸಿಕೊಳ್ಳಲು ಹಲುಬುತ್ತಿರುವ ಸಚ್ಚಿದಾನಂದ ಅವರ ಬದುಕಿನಲ್ಲಿ ಮಯೂರಿಯ ಪ್ರವೇಶವಾಗುತ್ತದೆ. ತಾನು ಆರಾಧಿಸುವ ಸಚ್ಚಿದಾನಂದ್ ಬಾಳನ್ನು ಸರಿದಾರಿಗೆ ತರುವ ಹಾದಿಯಲ್ಲಿ ಮಯೂರಿ ಎದುರಿಸುವ ಸವಾಲುಗಳೇನು ಎಂಬುದೇ ಮುಂದಿನ ಕತೆ.…






