ಮಡಿಕೇರಿ ಜು.13 NEWS DESK : ತಾಂತ್ರಿಕ ದೋಷದಿಂದ ಕಾರೊಂದು ಅಗ್ನಿಗಾಹುತಿಯಾದ ಘಟನೆ ಮಡಿಕೇರಿ ನಗರದ ಸಂಪಿಗೆಕಟ್ಟೆ ಬಳಿ ನಡೆದಿದೆ. ಮಡಿಕೇರಿ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಕಾರು ಸುಟ್ಟು ಕರಕಲಾಗಿದೆ. ಅಗ್ನಿ ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶನಿವಾರ ಬೆಳಗ್ಗೆ ಮಡಿಕೇರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ತಡೆಗೋಡೆಯೊಂದಕ್ಕೆ ಡಿಕ್ಕಿಯಾದ ಕಾರಣ ಹೆದ್ದಾರಿ ಬದಿ ನಿಲ್ಲಿಸಲಾಗಿತ್ತು. ಸಂಜೆ ಇದ್ದಕ್ಕಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದರು. ಬೆಂಗಳೂರಿನ ಶ್ರೀನಿವಾಸ್ ಎಂಬುವವರಿಗೆ ಸೇರಿದ ಕಾರು ಇದಾಗಿದೆ. ಮಡಿಕೇರಿ ಸಂಚಾರಿ ಪೊಲೀಸರು ಹಾಗೂ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯಿಂದ ಹೆದ್ದಾರಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಲೇಖಕ: admin
ವಿರಾಜಪೇಟೆ ಜು.13 NEWS DESK : ತಿತಿಮತಿ ಸರ್ಕಾರಿ ಪಿಯು ಕಾಲೇಜಿನ 2024-25 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಡಾ.ರಾಜೇಂದ್ರ ಪ್ರಸಾದ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಹತಾಶರಾಗದೇ ಏಕಾಗ್ರತೆಯಿಂದ ತಮ್ಮ ಗುರಿಮುಟ್ಟಬೇಕು ಎಂದು ಸಲಹೆ ನೀಡಿದರು. ದ ಉದ್ಘಾಟನಾ ಕಾರ್ಯಕ್ರಮ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು. ತಿತಿಮತಿ ವಿಎಸ್ಎಸ್ ಎನ್ ನ ಅಧ್ಯಕ್ಷ ರಾಮಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ಈ ಹಂತದಿಂದಲೇ ನಾಯಕತ್ವ ಗುಣವನ್ನು ಅಳವಡಿಸಿಕೊಳ್ಳಬೇಕು. ಮತ್ತು ವಿದ್ಯಾರ್ಥಿ ಸಂಘದಲ್ಲಿ ತನ್ನ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದರು. ಸ್ಥಳೀಯರು ಹಾಗೂ ಸಮಾಜ ಸೇವಕರಾದ ಮನು ನಂಜಪ್ಪ ಮಾತನಾಡಿ, ವಿದ್ಯಾರ್ಥಿಗಳು ಜೀವನದ ಪ್ರತೀ ಹಂತದಲ್ಲೂ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಚಾರ್ಲ್ಸ್ ಡಿಸೋಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿತಿಮತಿ ಗ್ರಾ.ಪಂ ಸದಸ್ಯ ಅನೂಪ್ ಕುಮಾರ್, ತಿತಿಮತಿ ಪ್ರೌಢ ಶಾಲೆಯ ಮುಖ್ಯ…
ಮಡಿಕೇರಿ ಜು.13 NEWS DESK : ಕೊಂಡಂಗೇರಿ ಸರಕಾರಿ ಪ್ರೌಢ ಶಾಲೆಯಲ್ಲಿ ಶಾಲಾ ಸಂಸತ್ತು ಚುನಾವಣೆ ನಡೆಸಿ ವಿದ್ಯಾರ್ಥಿ ನಾಯಕರುಗಳನ್ನು ಆಯ್ಕೆ ಮಾಡಲಾಯಿತು. ಪ್ರಧಾನ ಮಂತ್ರಿಯಾಗಿ ಹೆಚ್.ಯು.ಮೊಹಮ್ಮದ್ ಹರ್ಷಾದ್, ಕ್ರೀಡಾ ಮಂತ್ರಿಯಾಗಿ ಹೆಚ್.ಎಂ.ಅಬ್ದುಲ್ ರಹಿಮಾನ್ ಅಜಿನಾಸ್, ಶಿಸ್ತು ಪಾಲನಾ ಮಂತ್ರಿಯಾಗಿ ಅಬೂಬಕರ್ ಸಿದ್ದೀಕ್ ಆಯ್ಕೆಯಾದರು. ಸ್ವಚ್ಛತಾ ಮಂತ್ರಿಯಾಗಿ ಕೆ.ಯು.ಫಾತಿಮತ್ ಫಾಹಿಜಾ, ತೋಟಗಾರಿಕಾ ಮಂತ್ರಿಯಾಗಿ ಪಿ.ಜೆ.ಫೈಜಲ್, ಹಣಕಾಸು ಮಂತ್ರಿಯಾಗಿ ಬಿ.ಎ.ಮೊಹಮ್ಮದ್ ಅಫ್ನಾನ್, ಆರೋಗ್ಯ ಮಂತ್ರಿಯಾಗಿ ಎಂ.ಎಸ್.ಶಮ್ನ, ವಾರ್ತಾ ಮಂತ್ರಿಯಾಗಿ ಆರ್.ಎ.ಆಯಿಷತು ಸಹಲ, ಸಾಂಸ್ಕೃತಿಕ ಮಂತ್ರಿಯಾಗಿ ಟಿ.ಐ.ಮೊಹಮ್ಮದ್ ಇಸಾಕ್, ನೀರಾವರಿ ಮಂತ್ರಿಯಾಗಿ ಎ.ಎಂ.ತೋಹ ಅವರನ್ನು ವಿದ್ಯಾರ್ಥಿಗಳು ಮತಚಲಾಯಿಸುವ ಮೂಲಕ ಆಯ್ಕೆ ಮಾಡಿದರು. ವಿರೋಧ ಪಕ್ಷದ ನಾಯಕನಾಗಿ ಪಿ.ಹೆಚ್.ಮೊಹಮ್ಮದ್ ಮಿಸ್ಹಾಬ ಆಯ್ಕೆ ಮಾಡಲಾಯಿತು. ಶಾಲಾ ಮುಖ್ಯ ಶಿಕ್ಷಕರಾದ ಜೆ.ಸಿ.ಜಯಂತಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ, ಮುಂದಿನ ದಿನಗಳಲ್ಲಿ ನಾಯಕರು ಮಾಡಬೇಕಾದ ಕರ್ತವ್ಯಗಳ ಬಗ್ಗೆ ವಿವರಿಸಿದರು. ಶಾಲೆಯ ಆಂಗ್ಲ ಭಾಷಾ ಶಿಕ್ಷಕರಾದ ಬಿ.ಎಂ.ಲವಿನ್ ಮತದಾನ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಶಾಲೆಯ ಇಐಅ ಕ್ಲಬ್…
ಸಿದ್ದಾಪುರ ಜು.13 NEWS DESK : ಅಭಿವೃದ್ಧಿ ಎಂಬ ಹೆಸರಿನಲ್ಲಿ ಕೊಡಗು ಜಿಲ್ಲೆಯ ಪರಿಸರವು ಹಾಳಾಗುತ್ತಿದ್ದು, ಪ್ರತಿ ಗ್ರಾಮಗಳಲ್ಲಿ ತ್ಯಾಜ್ಯ, ಪ್ಲಾಸ್ಟಿಕ್ ಸಮಸ್ಯೆಗೆ ಮುಕ್ತಿ ನೀಡುವ ಸಲುವಾಗಿ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ತ್ಯಾಜ್ಯ ವಿಲೇವಾರಿ ವೈಜ್ಞಾನಿಕ ಘಟಕವನ್ನು ಪ್ರಾರಂಭಿಸುವುದರೊಂದಿಗೆ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಜಿಲ್ಲೆಯನಾಗಿಸಬೇಕೆಂದು ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯ ಮುಕೋಂಡ ವಿಜು ಸುಬ್ರಮಣಿ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ಸಿದ್ದಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ಪ್ರಜ್ಞಾವಂತ ನಾಗರಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸ್ವಚ್ಛ ಪರಿಸರ ನಿರ್ಮಾಣದ ಜಿಲ್ಲೆಯನ್ನಾಗಿ ಮಾರ್ಪಾಡಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಹೇಳಿದರು. ಅಭಿವೃದ್ಧಿ ಎಂಬ ಹೆಸರಿನಲ್ಲಿ ಜಿಲ್ಲೆಯ ಪರಿಸರವು ಹಾಳಾಗುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಕೊಡಗಿನ ನಾಗರಿಕರು ನೀರು, ನೆರ್ಮಲ್ಯ ಮತ್ತು ಸ್ವಚ್ಛತಾ ಅಭಿಯಾನಗಳೆಂಬ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪರಿಸರ ಸ್ನೇಹಿ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದರ ಜೊತೆಗೆ ಕೊಡಗು ಜಿಲ್ಲಾ ಪಂಚಾಯತ್ ನ ಅಧಿಕಾರಿಗಳು…
ಮಡಿಕೇರಿ ಜು.13 NEWS DESK : ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾಧ್ಯಕ್ಷರಾಗಿ ಸಿ.ಕೆ.ಬೋಪಣ್ಣ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ನಡೆದ ವಿಶ್ವ ಹಿಂದೂ ಪರಿಷತ್ ನ ಕರ್ನಾಟಕ ದಕ್ಷಿಣ ವಿಶೇಷ ಪ್ರಾಂತ ಬೈಠಕ್ ನಲ್ಲಿ ರಾಷ್ಟ್ರೀಯ ಪ್ರಮುಖರ ಸಮ್ಮುಖದಲ್ಲಿ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಯಿತು ಎಂದು ಜಿಲ್ಲಾ ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ ತಿಳಿಸಿದ್ದಾರೆ.
ಮಡಿಕೇರಿ ಜು.13 NEWS DESK : ಕೊಡಗು ಜಿಲ್ಲಾ ವಿಶ್ವವಾಣಿ ಪತ್ರಿಕೆಯ ವರದಿಗಾರ ಹಾಗೂ ಕೊಡಗು ಪತ್ರಕರ್ತರ ಸಂಘದ ಹಿರಿಯ ಸಲಹೆಗಾರ ಅನಿಲ್ ಹೆಚ್.ಟಿ. ಅವರಿಗೆ ಕಾಸರಗೋಡುವಿನ ಉದ್ಯಮಿ, ಸಮಾಜಸೇವಕ ಅಶ್ರಫ್ ಶಾ ಮಂತೂರು ಅವರು ಸ್ಥಾಪಿಸಿರುವ ದತ್ತಿ ನಿಧಿ ಪ್ರಶಸ್ತಿ ಲಭಿಸಿದೆ. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಂಟಿ ಆಶ್ರಯದಲ್ಲಿ ಕಾಸರಗೋಡು ಸೀತಂಗೋಳಿ ಗ್ರಾಮದ ಲಯನ್ಸ್ ಸಭಾಭವನದಲ್ಲಿ ನಡೆದ ದತ್ತಿನಿಧಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ಪಿ.ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭ ಶಾಸಕ ಎ.ಕೆ.ಎಂ.ಅಶ್ರಫ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ, ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಕೆಯುಡಬ್ಲ್ಯೂಜೆ ಕೇರಳ ಘಟಕ ಅಧ್ಯಕ್ಷ ಅಬ್ದುಲ್ ರೆಹಮಾನ್, ಸುಬ್ಬಯ್ಯಕಟ್ಟಿ ಮತ್ತಿತರರು ಹಾಜರಿದ್ದರು.
ಮಂಗಳೂರು ಜು.13 NEWS DESK : ಮಾಧ್ಯಮ ಪ್ರತಿನಿಧಿಗಳು ಹಮ್ಮಿಕೊಂಡಿರುವ ಹಸಿರೇ ಉಸಿರು ಸೇರಿದಂತೆ ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾದ ಮಹತ್ವದ ಕಾರ್ಯಕ್ರಮವಾಗಿದೆ ಎಂದು ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆ ಗಾರರಾದ ಕೆ.ವಿ.ಪ್ರಭಾಕರ್ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಅರಣ್ಯ ಇಲಾಖೆ ಸಹಾಭಾಗಿತ್ವದಲ್ಲಿ ನಗರದ ಕದ್ರಿ ಪಾರ್ಕ್ ನಲ್ಲಿ ಹಮ್ಮಿಕೊಂಡ ‘ಹಸಿರೇ ಉಸಿರು’ ವನ ಮಹೋತ್ಸವ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಾಧ್ಯಮ ಪ್ರತಿನಿಧಿಗಳು ತಮ್ಮ ವೃತ್ತಿಯ ಜೊತೆ ಗ್ರಾಮ ವಾಸ್ತವ್ಯ, ವನಮಹೋತ್ಸವ, ಸರಕಾರಿ ಶಾಲೆ, ಅಂಗನವಾಡಿಗಳಿಗೆ ನೆರವು ಸೇರಿದಂತೆ ಸಾಮಾಜಿಕ ಹೊಣೆಗಾರಿಕೆಯನ್ನುಅರಿತು ಕಾರ್ಯ ನಿರ್ವಹಿಸುತ್ತಿರುವುದು ಮಾದರಿಯಾಗಿದೆ ಎಂದು ಪ್ರಭಾಕರ್ ಶುಭ ಹಾರೈಸಿದರು. ಈ ಸಂದರ್ಭ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಕರ್ತರು ಸಾಮಾಜಿಕ ಬದ್ಧತೆಯನ್ನು ಮರೆಯ ಬಾರದು. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ ಸಾಮಾಜಿಕ ಬದ್ಧತೆಯೊಂದಿಗೆ…
ಮಡಿಕೇರಿ ಜು.13 NEWS DESK : ಮಡಿಕೇರಿ ನಗರ ಸಂಚಾರಿ ಪೊಲೀಸ್ ಅಧಿಕಾರಿಗಳು ಮಾರುಕಟ್ಟೆ ಪ್ರದೇಶ ಸೇರಿದಂತೆ ವಿವಿಧೆಡೆ ಸುವ್ಯವಸ್ಥಿತ ಪಾರ್ಕಿಂಗ್ ವ್ಯವಸ್ಥೆಗೆ ಕ್ರಮ ಕೈಗೊಳ್ಳುತ್ತಿರುವುದು ಸ್ವಾಗತಾರ್ಹ. ಆದರೆ ಇದು ಒಂದು ದಿನಕ್ಕೆ ಸೀಮಿತವಾಗಬಾರದು ಎಂದು ನಗರಸಭೆಯ ಮಾಜಿ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯ ಕೆ.ಯು.ಅಬ್ದುಲ್ ರಜಾಕ್ ಮನವಿ ಮಾಡಿದ್ದಾರೆ. ಮಡಿಕೇರಿ ನಗರದಲ್ಲಿ ದಿನದಿಂದ ದಿನಕ್ಕೆ ವಾಹನದಟ್ಟಣೆ ಅಧಿಕವಾಗುತ್ತಿದ್ದು, ಪಾರ್ಕಿಂಗ್ ವ್ಯವಸ್ಥೆ ಹದಗೆಡುತ್ತಿದೆ. ಮಾರುಕಟ್ಟೆ, ರಾಜಾಸೀಟ್, ಕಾಲೇಜು ರಸ್ತೆ ಮತ್ತು ಕಾವೇರಿ ಹಾಲ್ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅವಕಾಶ ಇಲ್ಲದಾಗಿದೆ. ಮಾರುಕಟ್ಟೆ ಭಾಗದಲ್ಲಿ ಪ್ರತಿ ಶುಕ್ರವಾರ ಎಲ್ಲೆಂದರಲ್ಲಿ ವಾಹನಗಳನ್ನು ನಿಲುಗಡೆಗೊಳಿಸುತ್ತಿರುವುದರಿಂದ ವಾಹನದಟ್ಟಣೆ ಉಂಟಾಗಿ ಜನ ಕಷ್ಟ ಪಡುವಂತ್ತಾಗಿದೆ. ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆ ನಗರ ಸಂಚಾರಿ ಪೊಲೀಸ್ ಅಧಿಕಾರಿಗಳು ಈ ಶುಕ್ರವಾರ ಪಾರ್ಕಿಂಗ್ ವ್ಯವಸ್ಥೆಯನ್ನು ಸುಗಮಗೊಳಿಸಿದ್ದರು. ರಸ್ತೆಯಲ್ಲಿ ಎಲ್ಲೆಂದರಲ್ಲಿ ನಿಲುಗಡೆಗೊಂಡಿದ್ದ ವಾಹನಗಳನ್ನು ವ್ಯವಸ್ಥಿತವಾಗಿ ನಿಲುಗಡೆಗೊಳಿಸಲು ಪೊಲೀಸರು ಕ್ರಮ ಕೈಗೊಂಡ ಪರಿಣಾಮ ಮಾರುಕಟ್ಟೆ ಆವರಣ ಜನ…
ಮಡಿಕೇರಿ ಜು.13 NEWS DESK : ಕೊಡಗು ಜಿಲ್ಲಾ ಪಂಚಾಯತ್ ನಲ್ಲಿ ಕಳೆದ 1 ವರ್ಷಗಳಿಂದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ವರ್ಣಿತ್ ನೇಗಿ ಅವರಿಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು. ಕೊಡಗು ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ವಿವಿಧ ಇಲಾಖೆಗಳಿಂದ ಸನ್ಮಾನಿ ಬೀಳ್ಕೊಡುಗೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲೆಯ ಉತ್ತಮ ಆಡಳಿತಕ್ಕೆ ತಂಡದ ಕೋಚ್ ರೀತಿ ಶ್ರಮಿಸಿದ್ದು, ಮಾತು ಕಡಿಮೆ ಕೆಲಸ ಜಾಸ್ತಿ ಎಂಬ ತತ್ವದ ಮೇಲೆ ಕೆಲಸ ನಿರ್ವಹಿಸಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರ ಮುಂದಿನ ವೃತ್ತಿ ಜೀವನದಲ್ಲಿ ಸಾಕಷ್ಟು ಯಶಸ್ಸು ಸಿಗಲಿ ಎಂದು ಶುಭ ಕೋರಿದರು. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮಾರಾಜನ್ ಮಾತನಾಡಿ, ಸರ್ಕಾರಿ ಸೇವೆಯಲ್ಲಿ ವರ್ಗಾವಣೆ ಎಂಬುದು ನಿಶ್ಚಿತ. ಕುಟುಂಬದ ಸದಸ್ಯರಂತೆ ಹಾಗೂ ಉತ್ತಮ ಸ್ನೇಹಿತರಾಗಿ ಕಳೆದ ಒಂದು ವರ್ಷದಿಂದ ಇದ್ದು, ಇಂದು ವರ್ಗಾವಣೆಗೊಳ್ಳುತ್ತಿರುವುದು ಬೇಸರವನ್ನುಂಟು ಮಾಡಿದೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ…
ಕಾಸರಗೋಡು ಜು.13 NEWS DESK : ಕಾಸರಗೋಡು ಕನ್ನಡಿಗರಿಗೆ ಸರ್ಕಾರ ಧ್ವನಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಕಾಸರಗೋಡು ಪತ್ರಕರ್ತರ ಸಂಘದ ವತಿಯಿಂದ ನಡೆದ ದತ್ತಿನಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹೊರನಾಡಿನ ಕನ್ನಡಿಗರ ಅಭಿಮಾನ ದೊಡ್ಡದು. ವಿಶೇಷವಾಗಿ ಕಾಸರಗೋಡು ಕನ್ನಡಿಗರ ಭಾವನೆ ಅರ್ಥವಾಗುತ್ತದೆ. ನಿಮ್ಮ ಜೊತೆಯಲ್ಲಿ ಕರ್ನಾಟಕ ಸರ್ಕಾರ ಸದಾ ಇದೆ. ನಿಮ್ಮ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಗಡಿ ನಾಡಿನ ಕಾಸರಗೊಡು ಪತ್ರಕರ್ತರ ಬಸ್ ಪಾಸ್ ಕೊಡಿಸುವ ಭರವಸೆ ನೀಡಿದ ಕೆ.ವಿ.ಪ್ರಭಾಕರ್ ಅವರು, ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಸಿಎಂ ಜೊತೆಗೆ ಮಾತನಾಡಿ ಅನುದಾನ ಒದಗಿಸುವುದಾಗಿ ತಿಳಿಸಿದರು. ಬೆಂಗಳೂರಿನಲ್ಲಿ ನಾವು ರಾಜ್ಯೋತ್ಸವ ಕನ್ನಡಿಗರಾಗಿದ್ದೇವೆ. ಆದರೆ ನೀವು ವರ್ಷದ ಅನುಕಾಲವೂ ಕನ್ನಡ ಭಾಷೆ ಉಳಿಸುವ ಪ್ರಯತ್ನ ಮಾಡುತ್ತಿರುವುದು ಹೆಮ್ಮೆಯ ಮತ್ತು ಅಭಿಮಾನದ ಸಂಗತಿ ಎಂದರು. ಕಾಸರಗೋಡು ದತ್ತಿ ಪ್ರಶಸ್ತಿ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು,…






