ಲೇಖಕ: admin

ಮಡಿಕೇರಿ ಜು.4 NEWS DESK : ಪ್ರಸಕ್ತ (2024-25) ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಪಾರ್ಸಿ ಹಾಗೂ ಸಿಖ್ ಸಮುದಾಯ ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಜೆಆರ್‍ಎಫ್ ಮಾದರಿಯಲ್ಲಿ ಫೆಲೋಶಿಪ್ ನೀಡಲು ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಲ್ಲಿ https://sevasindhu.karnataka.gov.in ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಜಿಲ್ಲಾ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‍ಎಂಸಿ ಕಾಲೇಜು ಹತ್ತಿರ, ಮಡಿಕೇರಿ, ಇವರನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08272 – 225528, ಮಾಹಿತಿ ಕೇಂದ್ರ, ಮಡಿಕೇರಿ 08272 -220214 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ತಿಳಿಸಿದ್ದಾರೆ.

Read More

ಮಡಿಕೇರಿ ಜು.4 NEWS DESK : 2023-24 ನೇ ಸಾಲಿನ ಮಡಿಕೇರಿ ನಗರಸಭಾ ನಿಧಿ ಹಾಗೂ 2024-25 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿ ಅನುದಾನದಡಿ ಅನುಮೋದಿತ ಕ್ರೀಯಾಯೋಜನೆಯಂತೆ ಶೇ.24.10 ರ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ, ಶೇ 7.25 ರ ಇತರೆ ಬಡ ಜನರ ಕಲ್ಯಾಣ ಕಾರ್ಯಕ್ರಮ ಹಾಗೂ ಶೇಕಡ 5 ರ ಅಂಗವಿಕಲರ ಅಭಿವೃದ್ಧಿ ಯೋಜನೆಯ, ವೈಯುಕ್ತಿಕ ಕಾರ್ಯಕ್ರಮದಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅನುದಾನ ಹಾಗೂ ವಿವರ ಇಂತಿದೆ. ಬಡಜನರ ಕಲ್ಯಾಣ ಕಾರ್ಯಕ್ರಮ: ಆಯ್ದ ಇತರೆ ಬಡ ಸಣ್ಣ ಉದ್ದಿಮೆದಾರರಿಗೆ ಸಹಾಯಧನ ರೂ.0.1 ಲಕ್ಷ, ಇತರೆ ಬಡಜನರ ಶಸ್ತ್ರಚಿಕಿತ್ಸೆಗೆ ಸಹಾಯಧನ ರೂ.0.77, ಇತರೆ ಬಡಜನರ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಸಹಾಯಧನ 2.94 ಲಕ್ಷ ರೂ., ಸ್ವಂತ ಉದ್ಯೋಗಕ್ಕಾಗಿ ಬ್ಯಾಂಕ್ ಮೂಲಕ ಸಾಲ ಪಡೆದ ಫಲಾನುಭವಿಗಳಿಗೆ ಸಹಾಯ ಧನ, ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ವೈದ್ಯಕೀಯ ಧನ ಸಹಾಯ ರೂ.1.18 ಲಕ್ಷ, ಅಂಗವಿಕಲರ ಕಲ್ಯಾಣ ಕಾರ್ಯಕ್ರಮ: ಅಂಗವಿಕಲರಿಗೆ ಪೋಷಣಾ ವೆಚ್ಚ…

Read More

ವಿರಾಜಪೇಟೆ ಜು.4 NEWS DESK : ವಿರಾಜಪೇಟೆಯ ವಿವೇಕ ಜಾಗೃತ ಬಳಗ ಹಾಗೂ ಸರ್ವೋದಯ ಶಿಕ್ಷಣ ಮಹಾ ವಿದ್ಯಾಲಯ ವತಿಯಿಂದ ಪಂಜರುಪೇಟೆಯಲ್ಲಿರುವ ಸರ್ವೋದಯ ಮಹಾವಿದ್ಯಾಲಯದಲ್ಲಿ ಜು. 5ರಂದು ರಕ್ತದಾನ ಶಿಬಿರ ನಡೆಯಲಿದೆ ಎಂದು ವಿವೇಕ ಜಾಗೃತ ಬಳಗದ ಹೆಚ್.ಡಿ.ಲೋಕೇಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಶಿಬಿರ ನಡೆಯಲಿದ್ದು, ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಈ ಸಂದರ್ಭದಲ್ಲಿ ತಿಳಿಸಿದರು. ಹೆಚ್ಚಿನ ಮಾಹಿತಿಗಾಗಿ ವಾಣಿ ಪುಷ್ಪರಾಜ್- 9110473574 ಹಾಗೂ ಲೋಕೇಶ್ -9980398152 ಈ ಸಂಖ್ಯೆಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ತಿಳಿಸಿದರು.

Read More

ವಿರಾಜಪೇಟೆ ಜು.4 NEWS DESK : ದೇವಣಗೇರಿ ಬಿ.ಸಿ.ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನ ಆಚರಿಸಲಾಯಿತು. ವಿರಾಜಪೇಟೆಯ ಆರಕ್ಷಕ ಠಾಣೆಯ ಚಂದ್ರಶೇಖರ್ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ, ವಿಷಯ ವಿವರಣೆಯನ್ನು ನೀಡಿದರು. ಸಮಾಜದಲ್ಲಿ ಜರುಗುತ್ತಿರುವ ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮ ಹಾಗೂ ಸಂಚಾರಿ ನಿಯಮಗಳನ್ನು ವಿವರಿಸಿದರು. ಅಂತರ್ಜಾಲ ವಂಚನೆಗಳನ್ನು ವಿವರಿಸಿ ಎಚ್ಚರಿಕೆ ನೀಡಿದರು. ತಂಬಾಕು ಉತ್ಪನ್ನಗಳು ಮಾರಕ ಆದರೂ ಅದನ್ನು ಮಾರಾಟ ಮಾಡುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳು ಅವುಗಳ ಮೊರೆ ಹೋಗಬಾರದು ಎಂದರಲ್ಲದೆ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಹಾಗೂ ಬಳಕೆ ಮಾಡುವುದು ಅಪರಾಧ ಹಾಗೂ ಆರೋಗ್ಯದ ದೃಷ್ಟಿಯಿಂದ ಯಾವುದೆ ತಂಬಾಕು ಹಾಗೂ ಮದ್ಯಪಾನ ಸೇವನೆ ಮಕ್ಕಳಿಗೆ ಮಾರಕವಾಗಿ ಜೀವನದಲ್ಲಿ ಸದಾ ಅಂಗವಿಕಲತೆಯಿಂದ, ರೋಗದಿಂದ ಬಳಲಬೇಕಾಗತ್ತದೆ ಎಂದು ತಿಳಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ಹೆಚ್.ಡಿ ಲೋಕೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪ್ರತಿಜ್ಞಾವಿಧಿ ಬೋಧಿಸಿ ದಿನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ವಿರಾಜಪೇಟೆ ಆರಕ್ಷಕ ಠಾಣೆ ಆರಕ್ಷಕರಾದ ವಿಜು,…

Read More

ಸುಂಟಿಕೊಪ್ಪ,ಜು.4 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಂಟಿಕೊಪ್ಪ ವಲಯದ ಕಾನ್ ಬೈಲ್ ಕಾರ್ಯಕ್ಷೇತ್ರದ ಶ್ರೀ ಬಸವೇಶ್ವರ ದೇವಾಲಯಕ್ಕೆ ದೇಣಿಗೆ ವಿತರಿಸಲಾಯಿತು. ನಾಕೂರು-ಶಿರಂಗಾಲ ಶ್ರೀ ಬಸವೇಶ್ವರ ದೇವಾಲಯದ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ವತಿಯಿಂದ ರೂ 1.50 ಲಕ್ಷ ಗಳನ್ನು ಸುಂಟಿಕೊಪ್ಪ ವಲಯದ ಕಾನ್ ಬೈಲ್ ಕಾರ್ಯಕ್ಷೇತ್ರದ ಮೂಲಕ ಜಿಲ್ಲಾ ನಿರ್ದೇಶಕರಾದ ಲೀಲಾವತಿ, ತಾಲ್ಲೂಕು ಯೋಜನಾಧಿಕಾರಿ ಪುರುಷೋತ್ತಮ್ ದೇವಸ್ಥಾನ ಸಮಿತಿ ಅಧ್ಯಕ್ಷ ಡಿ.ಎನ್.ಧರ್ಮಪ್ಪ ಡಿ.ಡಿ. ಹಸ್ತಾಂತರಿಸಿದರು. ಈ ಸಂದರ್ಭ ನಾಕೂರು ಶಿರಂಗಾಲ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಗೂಳಪ್ಪ ಕೂತಿನರ್, ಕಾನ್ ಬೈಲ್ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಯಶೋಧ ಬಸವರಾಜ್ ಹಾಗೂ ಒಕ್ಕೂಟದ ಅಧ್ಯಕ್ಷೆ ಭವ್ಯ, ಸಹಕಾರ್ಯದರ್ಶಿ ಅರ್ಚನಾ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬ್ಯಾಂಕಿನ ನಿರ್ದೇಶಕ ಕೆ.ಆರ್.ಮಂಜುನಾಥ್,ರಾಮಯ್ಯ,ಬ್ರಿಜೇಶ್,ಸಿ.ಡಿ.ಗಣೇಶ್,ದಿಲೀಪ್, ಪಂಚಾಕ್ಷರಿ,ಚಿದ್ದು, ಶಿವಕುಮಾರ್,ವಸಂತ,ವಿವೇಕ್,ಜಿ.ಪಂ.ಮಾಜಿ ಸದಸ್ಯೆ ಕುಮುದಾಧರ್ಮಪ್ಪ ಹಾಗೂ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಮತ್ತಿತರರು ಹಾಜರಿದ್ದರು.

Read More

ಮಡಿಕೇರಿ ಜೂ.3 NEWS DESK : ಲೋಕಸಭಾ ಅಧಿವೇಶನದಲ್ಲಿ ಮುಕ್ತವಾಗಿ ಮಾತನಾಡುವ ವಿಶೇಷ ಅವಕಾಶವನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ವಿಧಾನಸಭೆಯ ಮಾಜಿ ಅಧ್ಯಕ್ಷರು ಹಾಗೂ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು, ರಾಹುಲ್ ರಾಷ್ಟçದ ಜನತೆಯ ಕ್ಷಮೆಯಾಚನೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತ್ಯಂತ ಜವಾಬ್ದಾರಿಯುತ ವಿರೋಧ ಪಕ್ಷದ ಸ್ಥಾನವನ್ನು ಅಲಂಕರಿಸಿರುವ ರಾಹುಲ್ ಗಾಂಧಿ ಅವರು, ತಮ್ಮ ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆಯಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ದೊಡ್ಡ ಆಂದೋಲನವನ್ನೇ ನಡೆಸಬೇಕಗುತ್ತದೆ ಎಂದು ಎಚ್ಚರಿಕೆ ನೀಡಿದರು. ರಾಷ್ಟ್ರಪತಿಗಳ ಭಾಷಣ ಎನ್ನುವುದು ಆಳುವ ಪಕ್ಷದ ಸರ್ಕಾರ ಮುನ್ನಡೆಯಬೇಕಾದ ಹಾದಿಯ ಕುರಿತಾದ ದಿಕ್ಸೂಚಿ ಭಾಷಣವಾಗಿರುತ್ತದೆ. ಈ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ಸಂದರ್ಭ ಸರ್ಕಾರ ಮುನ್ನಡೆಸುವ ಬಗ್ಗೆ ಆರೋಗ್ಯಕರವಾದ ಸಲಹೆ ಸೂಚನೆಗಳನ್ನು ನೀಡಬೇಕಾದ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು, ತಮ್ಮ ಭಾಷಣದ ಬಹುತೇಕ…

Read More

ಮಡಿಕೇರಿ ಜು.3 NEWS DESK : ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯ ಗೌಡಳ್ಳಿ ಗ್ರಾಮದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರಸಂತೆಯ ಚೆಸ್ಕಾಂನಲ್ಲಿ ಲೈನ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೊಳೆನರಸೀಪುರ ಮೂಲದ ಸಂದೀಪ್ ಆರ್. (27) ಎಂಬಾತನೇ ಬಂಧಿತ ಆರೋಪಿ. ಇತ್ತೀಚೆಗೆ ಗೌಡಳ್ಳಿ ಗ್ರಾಮದ ನಿವಾಸಿ ಅಣ್ಣಯ್ಯ (76) ಅವರ ಮನೆಗೆ ರಾತ್ರಿ 8.30 ರ ಸುಮಾರಿನಲ್ಲಿ ನುಗ್ಗಿದ ಅಪರಿಚಿತ ವ್ಯಕ್ತಿ ಅಣ್ಣಯ್ಯ ಅವರು ತಲೆಗೆ ಧರಿಸಿದ್ದ ಮಂಕಿ ಕ್ಯಾಪ್ ಅನ್ನು ಹಿಂಭಾಗದಿAದ ಕಣ್ಣುಮುಚ್ಚುವಂತೆ ಎಳೆದು ಕುತ್ತಿಗೆಯಲ್ಲಿದ್ದ ಅಂದಾಜು 27 ಗ್ರಾಂ ತೂಕದ ಚಿನ್ನದ ಸರವನ್ನು ಕದ್ದೊಯ್ದಿದ್ದ ಕುರಿತು ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಪಿಐ ಪ್ರೀತಂ ಡಿ. ಶ್ರೇಯಾಕರ್, ಶನಿವಾರಸಂತೆ ಪೊಲೀಸ್ ಠಾಣೆಯ ಪಿಎಸ್‌ಐ ಗೋವಿಂದ ರಾಜು, ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿAದ 27…

Read More

ಮಡಿಕೇರಿ ಜು.3 NEWS DESK : ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ವಿವಿಧೆಡೆ ಮರ, ಬರೆ ಬಿದ್ದಿದ್ದು, ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ರಾಷ್ಟ್ರೀಯ ಹೆದ್ದಾರಿ ಮಡಿಕೇರಿ- ಸಂಪಾಜೆಯ ದೇವರಕೊಲ್ಲಿ ಬಳಿ ಬೃಹತ್ ಮರವೊಂದು ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಕೊಡಗು- ಕೇರಳ ಗಡಿ ಭಾಗದ ಕುಟ್ಟದ ಬಳಿಯೂ ಹೆದ್ದಾರಿಗೆ ಅಡ್ಡಲಾಗಿ ಮರ ಬಿದ್ದಿತ್ತು. ಗ್ರಾಮೀಣ ಭಾಗದ ರಸ್ತೆಗಳಲ್ಲೂ ಮರ ಬಿದ್ದ ಘಟನೆ ನಡೆದಿದ್ದು, ತೆರವು ಕಾರ್ಯಾಚರಣೆ ಮೂಲಕ ವಾಹನಗಳ ಸಂಚಾರಕ್ಕೆ ಅನುವು ಕಲ್ಪಿಸಿಕೊಡಲಾಯಿತು. ಅರಣ್ಯ ಇಲಾಖೆ, ಚೆಸ್ಕಾಂ ಮತ್ತು ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಗ್ರಾಮೀಣ ಭಾಗದಲ್ಲಿ ನಿರಂತರ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದು, ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ::: ನೀರಿಗಿಳಿಯದಂತೆ ನಿರ್ಬಂಧ ::: ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ಜಲಪಾತ, ಝರಿ, ನದಿ, ತೊರೆ, ಸಾರ್ವಜನಿಕ ಕೆರೆಗಳು, ಅಣೆಕಟ್ಟು, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ನೀರಿಗಿಳಿಯದಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ…

Read More

ಮಡಿಕೇರಿ ಜು. 3 NEWS DESK :  ಕಾಸರಗೋಡು ಜಿಲ್ಲಾ ಕನ್ನಡ ಪತ್ರಕತ೯ರ ಕ್ಷೇಮಾಭಿವೃದ್ಧಿ ಸಂಘವು ನೀಡುವ ಅಶ್ರಫ್ ಶಾ ಮಂತೂರು ದತ್ತಿಪ್ರಶಸ್ತಿಗೆ ಕೊಡಗು ಜಿಲ್ಲೆಯ ಪತ್ರಕತ೯ ಅನಿಲ್ ಹೆಚ್.ಟಿ.   ಆಯ್ಕೆಯಾಗಿದ್ದಾರೆ. ಕಾಸರಗೋಡುವಿನ ಉದ್ಯಮಿ, ಸಮಾಜಸೇವಕ ಅಶ್ರಫ್ ಶಾ ಮಂತೂರು ಅವರು ಸ್ತಾಪಿಸಿರುವ ದತ್ತಿನಿಧಿಗೆ ಈ ವಷ೯ ಅನಿಲ್ ಹೆಚ್.ಟಿ ಅವರನ್ನು ಆಯ್ಕೆ ಮಾಡಿರವುದಾಗಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕತ೯ರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿನಾಯ್ಕಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ  ಕೊಡಗು ಜಿಲ್ಲೆಯ ಮಡಿಕೇರಿಯ ಅನಿಲ್ ಹೆಚ್.ಟಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಈವರೆಗೆ ಕನಾ೯ಟಕದಲ್ಲಿಯೇ ದಾಖಲೆಯಾಗಿರುವ 60 ಪ್ರಶಸ್ತಿಗಳನ್ನು ಪಡೆದಿದ್ದು, ಈ ಸಾಧನೆ ಪರಿಗಣಿಸಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕತ೯ರ ಕ್ಷೇಮಾಭಿವೃದ್ಧಿ ಸಂಘವು ಈ ಬಾರಿ ದತ್ತಿಪ್ರಶಸ್ತಿಗೆ ಅನಿಲ್ ಅವರನ್ನು ಆಯ್ಕೆ ಮಾಡಿದೆ ಎಂದು ರವಿ ನಾಯ್ಕಾಪು ತಿಳಿಸಿದ್ದಾರೆ. ಪ್ರಶಸ್ತಿಯು 10 ಸಾವಿರ ರು, ನಗದು, ಪ್ರಶಸ್ತಿ ಪತ್ರವನ್ನು ಹೊಂದಿದ್ದು, ಜುಲೈ 13 ರಂದು ಬೆಳಗ್ಗೆ 10,30 ಗಂಟೆಗೆ  ಕಾಸರಗೋಡು ಬಳಿಯ ಸೀತಂಗೋಳಿ ಗ್ರಾಮದ ಅಲಯನ್ಸ್…

Read More

ಮಡಿಕೇರಿ ಜು 3 NEWS DESK :  ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದ 2024 -27 ನೇ ಸಾಲಿಗೆ ಅಧ್ಯಕ್ಷರಾಗಿ ಬೆಂಗಳೂರಿನ ರಘುನಾಥ ರೆಡ್ಡಿ ಮತ್ತು ಗೌರವ ಕಾಯ೯ದಶಿ೯ಯಾಗಿ ಮಡಿಕೇರಿಯ ಅಂಬೆಕಲ್ ಜೀವನ್ ಕುಶಾಲಪ್ಪ ಪುನರಾಯ್ಕೆಯಾಗಿದ್ದಾರೆ. ಮಡಿಕೇರಿಯಲ್ಲಿ ನಡೆದ ಕನಾ೯ಟಕ ಔಷಧಿ ವ್ಯಾಪಾರಿಗಳ ಸಂಘದ 66 ನೇ ವಾಷಿ೯ಕ ಮಹಾಸಭೆಯಲ್ಲಿ ನೂತನ ಆಡಳಿತ ಮಂಡಳಿಗೆ ಆಯ್ಕೆ ಪ್ರಕ್ರಿಯೆ ನಡೆದ ಸಂದಭ೯ ರಘುನಾಥ ರೆಡ್ಡಿ ಮತ್ತು ಜೀವನ್ ಅವಿರೋಧವಾಗಿ ಪುನರಾಯ್ಕೆಯಾದರು,  ನೂತನ ಆಡಳಿತ ಮಂಡಳಿಯ ಖಜಾಂಚಿಯಾಗಿ   ಬಿ. ಉಮೇಶ್, ಉಪಾಧ್ಯಕ್ಷರಾಗಿ ಬಿ. ಕೆ. ಪ್ರಸನ್ನ ಕುಮಾರ್, ಶಿವರಾಜ್ ಪಾಟೀಲ್, ಜಂಟಿ ಕಾರ್ಯದರ್ಶಿಯಾಗಿ  ಸತ್ಯನಾರಾಯಣ ಕೇಲ್ಗರ್ ,   ಸಂಘಟನಾ  ಕಾರ್ಯದರ್ಶಿಯಾಗಿ  ವಿಜಯ್ ಕುಮಾರ್ ಎಸ್. ಬುರಲಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Read More