ಮಡಿಕೇರಿ ಜು.3 NEWS DESK : ಅನಿಯಮಿತವಾಗಿ 2-3 ದಿನ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳುತ್ತಿರುವ ಬಗ್ಗೆ ದಕ್ಷಿಣ ಕೊಡಗಿನ ಕಿರುಗೂರು ಗ್ರಾ.ಪಂ ವ್ಯಾಪ್ತಿಯ ಕಿರುಗೂರು, ಮತ್ತೂರು ಮತ್ತು ಕೋಟೂರು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಾಳಿ, ಮಳೆ, ಸಿಡಿಲು ಇಲ್ಲದಿದ್ದರೂ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಗ್ರಾಮಗಳು ನಿರಂತರವಾಗಿ ಕತ್ತಲೆಯಲ್ಲಿ ಮುಳುಗುತ್ತಿವೆ. ಇದರಿಂದಾಗಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅಡಚಣೆ ಉಂಟಾಗಿದೆ. ಚೆಸ್ಕಾಂ ಗೆ ದೂರು ನೀಡಿದರೂ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ತುರ್ತು ಸಹಾಯವಾಣಿಗೆ ಕರೆ ಮಾಡಿದರೆ ಯಾರೂ ಕರೆಯನ್ನು ಸ್ವೀಕರಿಸುತ್ತಿಲ್ಲ, ಒಂದು ವೇಳೆ ದೂರು ದಾಖಲಿಸಿಕೊಂಡರೂ ಯಾವುದೇ ಸ್ಪಂದನೆ ದೊರೆಯುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಿರುಗೂರು ಗ್ರಾ.ಪಂ ಅಧ್ಯಕ್ಷ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ವಿದ್ಯುತ್ ಸಮಸ್ಯೆ ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚೆಸ್ಕಾಂ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸುತ್ತಿಲ್ಲವೆಂದು ಗ್ರಾಮಸ್ಥರು ಗ್ರಾ.ಪಂ ಗೆ ದೂರು ನೀಡುತ್ತಿದ್ದಾರೆ. ವಿದ್ಯುತ್ ವ್ಯತ್ಯಯದ ಕುರಿತು ಅಧಿಕಾರಿಗಳ ಬಳಿ ಕೇಳಿದರೆ ಸಿಬ್ಬಂದಿಗಳ ಕೊರತೆ ಇದೆ…
ಲೇಖಕ: admin
ಮಡಿಕೇರಿ ಜು.3 NEWS DESK : ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ ಪ್ರಕಾಶ ಆರ್.ಪಾಟೀಲ ಅವರು ಜು.5 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೆಡಿಕಲ್ ಕಾಲೇಜ್ ಗೆ ಭೇಟಿ ನೀಡಲಿರುವ ಅವರು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಮಡಿಕೇರಿ ಜು.3 NEWS DESK : ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಇಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ “ಭೂ ಪರಿವರ್ತನೆ ಮತ್ತು ಒಣಭೂಮಿ ನಿರ್ವಹಣೆ” ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿದರು. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಮರಿಗೌಡ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಇಲಾಖೆಯ ಹಿರಿಯ ಅಧಿಕಾರಿಗಳು, ಪರಿಸರ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಡಿಕೇರಿ ಜು.3 NEWS DESK : ಶಾಲಾ ಮಕ್ಕಳಲ್ಲಿ ಶಿಸ್ತು – ಸಂಯಮ, ಉತ್ತಮ ನಾಯಕತ್ವ ಗುಣ ಬೆಳೆಸಲು ಸಹಕಾರಿಯಾಗಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಹಾಗೂ ಭವಿಷ್ಯದಲ್ಲಿ ತಮ್ಮನ್ನು ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತಮ ವೇದಿಕೆ ಒದಗಿಸುತ್ತದೆ ಎಂದು ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಆಡಳಿತ ) ಸಿ.ರಂಗಧಾಮಪ್ಪ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಘಟಕದ ವತಿಯಿಂದ ಮಡಿಕೇರಿ ನಗರದ ಡಿಡಿಪಿಐ ಕಛೇರಿಯಲ್ಲಿ ಜಿಲ್ಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆಗಳ ಕುರಿತು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮತ್ತು ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಶಿಕ್ಷಣ ಇಲಾಖೆಯ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕಾರ್ಯಚಟುವಟಿಕೆಗಳ ಕುರಿತು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾಹಿತಿ ನೀಡಿದರು. ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸಂಸ್ಥೆಯ ಘಟಕಗಳ ಮೂಲಕ ಮಕ್ಕಳಲ್ಲಿ ವಿವಿಧ…
ಬೆಂಗಳೂರು ಜು.3 NEWS DESK : ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ಬಿಜೆಪಿ ಪ್ರತಿಭಟನೆ ನಡೆಸಿತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹಾಗೂ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಬಿಜೆಪಿ ಶಾಸಕರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಮುಂದಾದರು. ಈ ಸಂದರ್ಭ ಪೊಲೀಸರು ಮಧ್ಯ ಪ್ರವೇಶಿಸಿ ಪ್ರತಿಭಟನಾ ನಿರತ ಬಿಜೆಪಿ ನಾಯಕರನ್ನು ವಶಕ್ಕೆ ಪಡೆದರು. ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕಡಂಗ ಜು.3 NEWS DESK : ವಿರಾಜಪೇಟೆ ಸಮೀಪದ ಕಡಂಗ ಗ್ರಾಮದಲ್ಲಿ ದಿನನಿತ್ಯ ವಿದ್ಯುತ್ ಸರಬರಾಜು ಇಲ್ಲದೆ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ 4 ದಿನಗಳಿಂದ ವಿದ್ಯುತ್ ಇಲ್ಲದೆ ಗ್ರಾಮಸ್ಥರು ಕತ್ತಲಲ್ಲಿ ಕಾಲ ಕಳೆಯುವಂತ್ತಾಗಿದೆ. ಹಲವು ಬಾರಿ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಮಳೆ ಇಲ್ಲದಿದ್ದರೂ ಮಳೆ ನೆಪಹೇಳಿ ದಿನ ಕಳೆಯುತ್ತಿದ್ದಾರೆ, ಗ್ರಾಮಸ್ಥರ ಮನವಿಗೆ ಯಾವುದೇ ರೀತಿಯ ಸ್ಪಂದನೆ ನೀಡುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿಗಳು ಹಾಗೂ ವ್ಯಾಪಾರಸ್ಥರಿಗೆ ವಿದ್ಯುತ್ ಕಡಿತದಿಂದ ಹೆಚ್ಚು ತೊಂದರೆಯಾಗಿದೆ. ಮೊಬೈಲ್ ಮತ್ತು ಇಂಟರ್ ನೆಟ್ ಬಳಕೆಗೂ ಅಡಚಣೆಯಾಗಿದೆ. ಕಡಂಗದಲ್ಲಿ 2 ಟಿ.ಸಿ ಗಳ ಅವಶ್ಯಕತೆಯಿದ್ದರು ಕೇವಲ 1 ಟಿ ಸಿ ಮಾತ್ರ ಇದೆ. ಶೀಘ್ರ ಸರಿಪಡಿಸದಿದ್ದಲ್ಲಿ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. (ವರದಿ : ನೌಫಲ್ ಕಡಂಗ)
ಮಡಿಕೇರಿ ಜು.3 NEWS DESK : ಬುಡಕಟ್ಟು ಜನಾಂಗದ ಕುಟುಂಬಗಳನ್ನು ಲೈನ್ ಮನೆಗಳಿಂದ ಮುಕ್ತಗೊಳಿಸಬೇಕು ಮತ್ತು ಸ್ವಂತ ವಸತಿಗಾಗಿ ನಿವೇಶನ ಮಂಜೂರು ಮಾಡಬೇಕೆಂದು ಆಗ್ರಹಿಸಿ ಬುಡಕಟ್ಟು ಕಾರ್ಮಿಕರ ಸಂಘ ಹಾಗೂ ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ಹೊಸೂರು ಗ್ರಾಮ ಪಂಚಾಯಿತಿ ಎದುರು ಧರಣಿ ಸತ್ಯಾಗ್ರಹ ನಡೆಸಿತು. ಮಳೆಯ ನಡುವೆ ಮಹಿಳೆಯರು, ಮಕ್ಕಳು ಸೇರಿದಂತೆ ಅನೇಕರು ಪ್ರತಿಭಟನೆ ನಡೆಸಿ ಲೈನ್ ಮನೆ ಜೀವನ ಬೇಡ, ಸ್ವಂತಮನೆ ನಿರ್ಮಿಸಿಕೊಳ್ಳಲು ಸರ್ಕಾರ ನಿವೇಶನ ನೀಡಬೇಕು ಎಂದು ಆಗ್ರಹಿಸಿದರು. ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳತ್ಮಾಡುವಿನಲ್ಲಿ ನಿವೇಶನ ರಹಿತರಿಗೆ ವಿತರಿಸಲು ಭೂಮಿ ಲಭ್ಯವಿದೆ. ಈ ಭೂಮಿಯನ್ನು ಹೊಸೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಲೈನ್ ಮನೆಗಳಲ್ಲಿ ಹಾಗೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಬುಡಕಟ್ಟು ಕುಟುಂಬಗಳಿಗೆ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು. ಬುಡಕಟ್ಟು ಕಾರ್ಮಿಕರ ಸಂಘದ ಅಧ್ಯಕ್ಷ ಗಪ್ಪು ಮಾತನಾಡಿ, ಕಾಫಿತೋಟಗಳ ಲೈನ್ಮನೆಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಕುಟುಂಬಗಳಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕಳೆದ 9 ವರ್ಷಗಳಿಂದ ನಿರಂತರ ಹೋರಾಟ…
ಮಡಿಕೇರಿ ಜು.2 NEWS DESK : ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘವು 25 ವಸಂತಗಳನ್ನು ಪೂರೈಸಿರುವ ಹಿನ್ನೆಲೆ, ಮುಂಬರುವ ನವೆಂಬರ್ ತಿಂಗಳಿನಲ್ಲಿ ‘ಬೆಳ್ಳಿ ಮಹೋತ್ಸವ’ವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಸಂಘದ ಗೌರವ ಅಧ್ಯಕ್ಷ, ನಿವೃತ್ತ ಎಸ್ಪಿ ಎಂ.ಎ.ಅಪ್ಪಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2000ನೇ ಸಾಲಿನಲ್ಲಿ ಅಂದಿನ ಜಿಲ್ಲಾ ಎಸ್ಪಿ ಸೀಮಂತ್ ಕುಮಾರ್ ಸಿಂಗ್ ಅವರ ಸಲಹೆಯ ಮೇರೆ ಡಿವೈಎಸ್ಪಿ ದಿ. ಕಾಳೇರಮ್ಮನ ನಾಣಯ್ಯ ಅವರ ನೇತೃತ್ವದಲ್ಲಿ ಸಮಾನ ಮನಸ್ಕ 28 ಮಂದಿ ಪೊಲೀಸ್ ನಿವೃತ್ತ ಅಧಿಕಾರಿಗಳು ಒಗ್ಗೂಡಿ ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘವನ್ನು ಸ್ಥಾಪಿಸಲಾಯಿತು. ಪ್ರಸ್ತುತ ಸಂಘದಲ್ಲಿ ಸುಮಾರು ಸಾವಿರಕ್ಕೂ ಮೇಲ್ಪಟ್ಟು ಸದಸ್ಯರುಗಳಿದ್ದಾರೆ ಎಂದರು. ಸಂಘ ಆರಂಭಗೊAಡರು ಕಚೇರಿಗೆ ಅಗತ್ಯ ಸ್ಥಳಾವಕಾಶ ಇಲ್ಲದ ಹಿನ್ನೆಲೆಯಲ್ಲಿ ಅಂದಿನ ಎಡಿಜಿಪಿ ಜೀವನ್ ಕುಮಾರ್ ಗಾಂವ್ಕರ್ ಅವರು ನಗರದ ಮೈತ್ರಿ ಸಭಾಂಗಣದ ಪಕ್ಕದಲ್ಲಿ ಸ್ಥಳವನ್ನು ಒದಗಿಸಿದ್ದಲ್ಲದೆ, ಅಗತ್ಯ ಆರ್ಥಿಕ ನೆರವನ್ನು ನೀಡಿದ್ದರೆಂದು ಸ್ಮರಿಸಿಕೊಂಡ ಅಪ್ಪಯ್ಯ…
ಮಡಿಕೇರಿ ಜು.2 NEWS DESK : ಟಿ.ಎಂ.ಶಹೀದ್ ತೆಕ್ಕಿತ್ ಅಭಿನಂದನಾ ಸಮಿತಿ ವತಿಯಿಂದ ಜು.6 ರಂದು ತೆಕ್ಕಿಲ್ ಗ್ರಾಮಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಳ್ಯ ಕೇರ್ಪಳದ ಬಂಟರ ಭವನದಲ್ಲಿ ಪೂರ್ವಾಹ್ನ 10.30 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಉದ್ಘಾಟಿಸಲಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿನಂದನಾ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್ 55 ಸೇವಾ ಚಟುವಟಿಕೆಗಳಿಗೆ ಚಾಲನೆ ನೀಡಲಿದ್ದು, ಚಟುವಟಿಕೆಗಳ ಸವಲತ್ತುಗಳನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಭಾಗೀರಥಿ ಮುರುಳ್ಯ ವಿತರಣೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ, ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಲಯನ್ ಎಂ.ಜೆ.ಎಫ್ ಎಂ.ಬಿ ಸದಾಶಿವ, ಮಾಜಿ ಸಚಿವ ರಮಾನಾಥ ರೈ,…
ಮಡಿಕೇರಿ ಜು.2 NEWS DESK : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಂಗಡಿ ಮತ್ತು ದೇವಾಲಯದ ಹುಂಡಿ ಕಳವು ಪ್ರಕರಣಕ್ಕೆ ಸಂಬAಧಿಸಿದAತೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಾಪೋಕ್ಲು ಸಮೀಪದ ನಾಲಾಡಿ ಗ್ರಾಮದ ನಿವಾಸಿ ಅಶೋಕ.ಕೆ.ಸಿ(35) ಎಂಬಾತನೇ ಬಂಧಿತ ಆರೋಪಿಯಾಗಿದ್ದು, 21.3 ಗ್ರಾಂ ಚಿನ್ನಾಭರಣ ಮತ್ತು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ಹೊರವಲಯದ ತಾಳತ್ಮನೆ ನಿವಾಸಿ ಭರತ್ ಎಂಬುವವರಿಗೆ ಸೇರಿದ ಕೋಳಿ ಮಾಂಸದ ಅಂಗಡಿ ಮತ್ತು ಜ್ಯೂಸ್ ಅಂಗಡಿಯಿAದ ಜೂ.5ರಂದು ರೂ.10 ಸಾವಿರ ನಗದು, 52 ಗ್ರಾಂ ಚಿನ್ನಾಭರಣ ಹಾಗೂ ಅಂಗಡಿಯ ಮುಂಭಾಗ ನಿಲ್ಲಿಸಿದ್ದ 1 ದ್ವಿಚಕ್ರ ವಾಹನವನ್ನು ಕಳವು ಮಾಡಿರುವ ಕುರಿತು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಕೈಗೊಂಡ ಗ್ರಾಮಾಂತರ ಠಾಣಾ ಪೊಲೀಸರು ಜು.1ರಂದು ಆರೋಪಿ ಕೆ.ಸಿ.ಅಶೋಕನನ್ನು ಮಾಲು ಸಹಿತ ಬಂಧಿಸಿದ್ದಾರೆ. ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಗೇರಿಯಲ್ಲಿ ಅಂಗಡಿ ಕಳವು ಮಾಡಿರುವುದು ಹಾಗೂ…






