ಲೇಖಕ: admin

ಮಡಿಕೇರಿ ಜು.13 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಹುಟ್ಟು ಹಬ್ಬದ ಪ್ರಯುಕ್ತ ಚೇರಂಬಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸ್ವಚ್ಛತಾ ಶ್ರಮದಾನ ಮಾಡಿದರು. ಚೇರಂಬಾಣೆ (ಬೆಂಗೂರು )ಗ್ರಾ.ಪಂ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದ ಸುತ್ತಲು ಪ್ಲಾಸ್ಟಿಕ್ ತ್ಯಾಜ್ಯ, ಕಸ, ಕಡ್ಡಿಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷ ಮಿಲನ್ ಮುತ್ತಣ್ಣ, ಉಪಾಧ್ಯಕ್ಷ ಸೋಮಣ್ಣ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಿಪಿನ್ ಮತ್ತು ವಲಯ ಕಾರ್ಯದರ್ಶಿ ಕೆ.ಎಂ.ಬಶೀರ್, ಪಕ್ಷದ ಸದಸ್ಯರುಗಳಾದ ಕುಂಚೆಟ್ಟಿ ಗೋಪಾಲ, ಕಾರ್ಯಪ್ಪ, ಕೇಕಡ ತಮ್ಮಯ್ಯ, ಕೀಪಾಡ0ಡ ಜಗದೀಶ, ಪಟ್ಟಮಾಡ ಹೆಮ್ ಮಾದಪ್ಪ, ಉಡುದೋಳಿ ಶೇಖರ, ಕೇಕಡ ಡ್ಯೂಕ, ಮುಕ್ಕಾಟಿ ಸುಗು, ಇರ್ಷಾದ್ (ಇಚ್ಚು), ದೇವಯ್ಯ ಬೆಂಗೂರ್, ಶಿವ, ಮೋಹನ, ಕೂಡಕಂಡಿ ಲವ, ದಯಾನಂದ ಬೆಂಗೂರ್, ಯತೀಶ್ ಪರಂಬು ಹಾಗೂ ಪಂಚಾಯತ್ ಸದಸ್ಯ ಪಾಲ್ಗೊಂಡಿದ್ದರು.

Read More

ಮಡಿಕೇರಿ ಜು.13 NEWS DESK : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಕೆಲಸಗಳನ್ನು ಕಾರ್ಯಾಂಗದ ಮೂಲಕ‌ ಪರಿಹರಿಸುವುದು ಶಾಸಕಾಂಗದ ಕರ್ತವ್ಯ ಆಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ‘ಜನಸ್ಪಂದನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹೇಳಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆದ ‘ಜನಸ್ಪಂದನ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಂದಾಯ, ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಲೋಕೋಪಯೋಗಿ, ಸೆಸ್ಕ್, ಆರೋಗ್ಯ, ಶಿಕ್ಷಣ, ಪೌರಾಡಳಿತ, ಸೇರಿದಂತೆ ಹಲವು ಇಲಾಖೆ ವ್ಯಾಪ್ತಿಯ ಕೆಲಸ-ಕಾರ್ಯಗಳಿಗೆ ಸಾರ್ವಜನಿಕರಿಂದ ಪ್ರತಿನಿತ್ಯ ಹೆಚ್ಚಿನ ಮನವಿ ಸಲ್ಲಿಸುತ್ತಾರೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಶಾಸಕರು ತಿಳಿಸಿದರು. ಸಾರ್ವಜನಿಕರಿಗೆ ನ್ಯಾಯ ಒದಗಿಸುವುದು ಸರ್ಕಾರದ ಪ್ರಥಮ ಆದ್ಯತೆ ಆಗಿದೆ. ಸಲ್ಲಿಕೆಯಾದ ಅರ್ಜಿಗೆ ಮಾತ್ರ ಸೀಮಿತವಾಗದೆ. ಸ್ಥಳೀಯ ಎಲ್ಲಾ ರೀತಿಯ ಸಮಸ್ಯೆ ಬಗೆಹರಿಸುವುದು ಅತಿಮುಖ್ಯ ಎಂದು ಡಾ.ಮಂತರ್ ಗೌಡ ಅವರು…

Read More

ಕಡಂಗ ಜು.13 NEWS DESK : ರಾತ್ರಿ ಸುರಿದ ಬಾರಿ ಮಳೆಯಿಂದಾಗಿ ಕಡಂಗ ಚೆಯ್ಯಂಡಾಣೆ ಮುಖ್ಯ ರಸ್ತೆಯ ಪೊದ್ಧಮಾನಿ ಗ್ರಾಮದಲ್ಲಿರುವ ಬೃಹತ್ ಮಾವಿನ ಮರದ ಕೊಂಬೆ ರಸ್ತೆಗೆ ಬಿದ್ದಿದೆ. ಅಲ್ಲದೆ ವಿದ್ಯುತ್ ತಂತಿಗೆ ಹಾನಿಯಗಿದ್ದು, ಗ್ರಾಮದ ಸುತ್ತಮುತ್ತಲ ಮನೆಗಳಿಗೆ ಸಂಪರ್ಕ ಕಡಿತಗೊಂಡಿದೆ. ವರದಿ : ನೌಫಲ್

Read More

ಮಡಿಕೇರಿ ಜು.13 NEWS DESK : ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.17 ರಂದು ನಡೆಯಲಿದೆ ಎಂದು ನೂತನ ಅಧ್ಯಕ್ಷ ಬಿ.ವೈ.ರಾಜೇಶ್ ಯಲ್ಲಪ್ಪ ತಿಳಿಸಿದ್ದಾರೆ. ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ತಾವು ಸೇರಿದಂತೆ ಸದಸ್ಯರುಗಳಾದ ಸುದಯ್ ನಾಣಯ್ಯ, ಕಾನೆಹಿತ್ಲು ಮೊಣ್ಣಪ್ಪ, ಆರ್.ಪಿ.ಚಂದ್ರಶೇಖರ್ ಹಾಗೂ ಮೀನಾಜ್ ಪ್ರವೀಣ್ ಅಧಿಕಾರ ಸ್ವೀಕರಿಸಲಿರುವುದಾಗಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Read More

ಮಡಿಕೇರಿ ಜು.13 NEWS DESK : ಸೋಮವಾರಪೇಟೆ ಪಟ್ಟಣ ಪಂಚಾಯಿತಿಯ ಸದಸ್ಯರುಗಳೊಂದಿಗೆ ಶಾಸಕ ಡಾ.ಮಂತರ್ ಗೌಡ ಸಭೆ ನಡೆಸಿ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ನಂತರ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರಿಗೆ ಮಳೆಗಾಲದ ಹಿನ್ನೆಲೆಯಲ್ಲಿ ರೈನ್ ಕೋಟ್ ವಿತರಣೆ ಮಾಡಿದರು.

Read More

ಮಡಿಕೇರಿ ಜು.13 NEWS DESK : ಸಮುದಾಯ ವೈದ್ಯಶಾಸ್ತ್ರವಿಭಾಗ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಬೋಧಕ ಆಸ್ಪತ್ರೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೊಡಗು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಮಡಿಕೇರಿಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ನಗರದ ಮೈತ್ರಿ ಹಾಲ್ ಸಭಾಂಗಣದಲ್ಲಿ ನಡೆದ ಶಿಬಿರದಲ್ಲಿ  ಸಾಮಾನ್ಯ ವೈದ್ಯ ಶಾಸ್ತ್ರ, ಶಸ್ತ್ರ ಚಿಕಿತ್ಸೆ, ಕಣ್ಣು, ಪ್ರಸೂತಿ ಮತ್ತು ಸ್ತ್ರೀ ರೋಗ, ಮಕ್ಕಳ ವಿಭಾಗ, ಚರ್ಮ ರೋಗ, ಕಿವಿ ಮೂಗು ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವೈದ್ಯಕೀಯ ವಿಭಾಗದ ನುರಿತ ತಜ್ಞ ವೈದ್ಯರು ವೈದ್ಯಕೀಯ ಸೇವೆಯನ್ನು ನೀಡಿದರು. ಸುಮಾರು 100 ಕ್ಕಿಂತ ಹೆಚ್ಚು ಹೊರ ರೋಗಿಗಳು ರಕ್ತದೊತ್ತಡ ಮದುಮೇಹ ರಕ್ತಹೀನತೇ ಇನ್ನಿತರ ರೋಗಗಳಿಗೆ ಚಿಕಿತ್ಸೆ ಪಡೆದರು. ಭಾರತೀಯ ರೆಡ್‌ ಕ್ರಾಸ್‌ನ ಸಭಾಪತಿಗಳಾದ ಬಿ.ಕೆ.ರವೀಂದ್ರ ರೈ ಮಾತನಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ, ನವದೆಹಲಿಯ ಶಿಫರಸ್ಸಿನಂತೆ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಮಾಜದಲ್ಲಿರುವ…

Read More

ಮಡಿಕೇರಿ ಜು.13 NEWS DESK : ಪ್ರಾಮಾಣಿಕ ಬದ್ಧತೆ ಇದ್ದಲ್ಲಿ ಯಶಸ್ಸು ಸಾಧ್ಯ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ರೇಣುಕಾಚಾರ್ಯ ಕಾನೂನು ಮಹಾವಿದ್ಯಾಲಯ ಮತ್ತು ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನಡೆದ ಅಭಿನಂದನ ಸಮಾರಂಭದಲ್ಲಿ ಮಾತನಾಡಿದ ಅವರು, ನ್ಯಾಯಮೂರ್ತಿಗಳಾದ ವೀರಪ್ಪರವರು ಪ್ರಾಮಾಣಿಕ ವ್ಯಕ್ತಿ. ಅವರನ್ನು ಅಭಿನಂದಿಸಲಿಕ್ಕೆ ಆಗಮಿಸಿದ ಯುವ ವಕೀಲರು ಅವರ ಜೀವನದಾರಿಯನ್ನ ಅಳವಡಿಸಿಕೊಳ್ಳಬೇಕು. ಅವರ ಮಾರ್ಗದರ್ಶನ ಕಂಡುಕೊಳ್ಳುತ್ತಾ  ತಮ್ಮ ಜೀವನವನ್ನು ನಡೆಸಿದರೆ ಖಂಡಿತವಾಗಿ ಎಲ್ಲರೂ ಯಶಸ್ಸನ್ನು ಕಾಣಲು ಸಾಧ್ಯವಿದೆ ಎಂದರು. ವಕೀಲರ ವೃತ್ತಿ ಕೆಲವೊಮ್ಮೆ ಹತ್ತಿರದಿಂದ ಕಂಡಾಗ ಎಲ್ಲೋ ದಾರಿ ತಪ್ಪುತ್ತಿದೆ ಎಂದ ಅವರು ಯುವ ವಕೀಲರು ತಮ್ಮ ವೃತ್ತಿಯನ್ನು ಪ್ರಮಾಣಿಕತೆಯಿಂದ ನಡೆಸಿ ಅದಕ್ಕೆ ಫಲ ಸಿಗುತ್ತದೆ ಎಂದು ಹೇಳಿದರು. ಉಪ ಲೋಕಾಯುಕ್ತರಾಗಿ ಆಯ್ಕೆ ಆಗಿರುವ ನ್ಯಾಯಮೂರ್ತಿ ವೀರಪ್ಪ ಸಾಕಷ್ಟು ಹೆಸರು ಮಾಡಿದ್ದಾರೆ. ಅವರ ಯಶಸ್ಸು ಇನ್ನಷ್ಟು ವಿಸ್ತಾರವಾಗಲೆಂದು ಹಾರೈಸುತ್ತೇನೆ. ಅವರ ಮೇಲೆ ದೊಡ್ಡ ಜವಾಬ್ದಾರಿ ಇದೆ, ಉಪ ಲೋಕಾಯುಕ್ತ ರನ್ನಾಗಿ…

Read More

ಮಡಿಕೇರಿ ಜು.13 NEWS DESK : ಸಿದ್ದಾಪುರದ ಕೆಲವು ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜು.15 ರಂದು ಪೊನ್ನಂಪೇಟೆಯಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಬೆಳಿಗ್ಗೆ 10.30 ಗಂಟೆಗೆ ಪೊನ್ನಂಪೇಟೆ ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹಾಗೂ ಕೊಡವ ಲ್ಯಾಂಡ್ ಪರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಆದಿಮ ಸಂಜಾತ ಕೊಡವರ ಪವಿತ್ರ ಕೊಡವ ಲ್ಯಾಂಡ್ ನ್ನು ಸಂರಕ್ಷಿಸಿಕೊಳ್ಳಲು ಜಿಲ್ಲೆಯಾದ್ಯಂತ ಸಿಎನ್‌ಸಿ ವತಿಯಿಂದ ನಿರಂತರ ಜನಜಾಗೃತಿ ಕಾರ್ಯಕ್ರಮ ನಡೆಯುತ್ತಿದ್ದು, ಕೊಡವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ರಾಜಕೀಯ ನಂಟು ಮತ್ತು ಕಪ್ಪು ಹಣ ಹೊಂದಿರುವ ಭೂಮಾಫಿಯಾಗಳು, ರೆಸಾರ್ಟ್ ದೊರೆಗಳು, ಕಾರ್ಪೋರೇಟ್ ವಲಯಗಳು, ಬಹುರಾಷ್ಟ್ರೀಯ ಕಂಪೆನಿಗಳು, ಅನಿವಾಸಿ ಭಾರತೀಯ ಉದ್ಯಮಪತಿಗಳು, ಆಂಧ್ರ,…

Read More

ಮಡಿಕೇರಿ ಜು.13 NEWS DESK : ಸಮಾಜದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2025ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ “ಪದ್ಮ ವಿಭೂಷಣ” ಪದ್ಮಭೂಷಣ” ಮತ್ತು “ಪದ್ಮಶ್ರೀ” ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುತ್ತದೆ. ಈ ಕ್ಷೇತ್ರಗಳಲ್ಲಿ ಶ್ರೇಷ್ಠತೆಗಳಿಸಿ ಅಸಾಧರಣ ಕೊಡುಗೆ ನೀಡಿರುವ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲಾಗುತ್ತದೆ. ಕಲೆ (ಜನಪ್ರಿಯ ಕಲೆ, ಸಂಗೀತ, ಚಿತ್ರಕಲೆ, ವಾಸ್ತುಶಿಲ್ಪ, ಶಿಲ್ಪಕಲೆ, ಚಲನಚಿತ್ರ, ಛಾಯಾಗ್ರಹಣ ಮತ್ತಿತರ), ಸಮಾಜದ ಕಾರ್ಯ (ಸಮಾಜ ಸೇವೆ. ಧರ್ಮಾರ್ಥ ಸೇವೆ, ಸಮುದಾಯ ಯೋಜನೆಯ ನಿಮಿತ್ತದ ಕೊಡುಗೆ ಒಳಗೊಂಡಂತೆ, ಸಾರ್ವಜನಿಕ ವ್ಯವಹಾರ (ಕಾನೂರು ಮತ್ತು ಸಾರ್ವಜನಿಕ ಜೀವನ ರಾಜಕೀಯ ಇತ್ಯಾದಿ), ವಿಜ್ಞಾನ, ತಾಂತ್ರಿಕ, ತಂತ್ರಜ್ಞಾನ ಮತ್ತು ಇತರ ಗೌರವಾನ್ವಿತ ವೃತ್ತಿ (ಬಾಹ್ಯಾಕಾಶ, ಎಂಜಿನೀಯರಿಂಗ್, ಅಣುವಿಜ್ಞಾನ, ಮಾಹಿತಿ ತಂತ್ರಜ್ಞಾನ, ಸಂಶೋಧನೆ ಇತ್ಯಾದಿ), ವ್ಯಾಪಾರ ಮತ್ತು ಕೈಗಾರಿಕೆ (ಬ್ಯಾಂಕಿಂಗ್, ಆರ್ಥಿಕ ಚಟುವಟಿಕೆ, ಮ್ಯಾನೇಜ್ ಮೆಂಟ್, ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ವಾಣಿಜ್ಯ ಒಳಗೊಂಡಂತೆ), ವೈದ್ಯಕೀಯ (ವೈದ್ಯಕೀಯ ಸಂಶೋಧನೆ, ಆಯರ್ವೇದದಲ್ಲಿ ಕುಶಲತೆ, ಹೋಮಿಯೋಪತಿ, ಸಿದ್ದ,…

Read More

ಮಡಿಕೇರಿ ಜು.13 NEWS DESK : ಪ್ರಸಕ್ತ (2024-25) ಸಾಲಿನಲ್ಲಿ ಸಾಮಾನ್ಯ ಘಟಕ, ವಿಶೇಷಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಪ್ರಾಯೋಜಿತ ಕಾರ್ಯಕ್ರಮಗಳಿಗೆ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಕಲಾ ತಂಡಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನ ಎರಡನೇ ಮಹಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪಡೆಯಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಕೋರಿದ್ದಾರೆ.

Read More