ಮಡಿಕೇರಿ ಜು.2 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಸಭೆಯು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕಾರ್ಮಿಕ ಇಲಾಖೆಗಳಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ಚರ್ಚಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಘಟಕದ ಜಿಲ್ಲಾಧ್ಯಕ್ಷ ಕೆ.ಆರ್.ದಿನೇಶ್, ಸರ್ಕಾರ ಮತ್ತು ಇಲಾಖೆಗಳಿಂದ ಲಭ್ಯವಾಗುವ ಸೌಲಭ್ಯಗಳನ್ನು ಕಾರ್ಮಿಕರಿಗೆ ಒದಗಿಸುವ ನಿಟ್ಟಿನಲ್ಲಿ ಘಟಕದ ಬ್ಲಾಕ್ ಅಧ್ಯಕ್ಷರುಗಳು ಶ್ರಮವಹಿಸಬೇಕು, ಕಾರ್ಮಿಕರು ಕೆಲಸ ನಿರ್ವಹಿಸುವ ಸಂದರ್ಭ ಉಂಟಾಗುತ್ತಿರುವ ಅನಾನುಕೂಲತೆಗಳ ಬಗ್ಗೆಯೂ ಗಮನಹರಿಸಬೇಕಿದೆ ಎಂದು ಕರೆ ನೀಡಿದರು. ಸರ್ಕಾರದಿಂದ ಡೆಲಿವರಿ ಬಾಯ್, ಹಾಲು, ಪೇಪರ್ ವಿತರಣಾ ಸಿಬ್ಬಂದಿಗಳಿಗೆ ನೀಡಿರುವ ಅಪಘಾತ ವಿಮಾ ಕಾರ್ಡ್ ಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಮತ್ತು ಕಟ್ಟಡ ಕಾರ್ಮಿಕರು ತಮ್ಮ ಎಲ್ಲಾ ಕಾರ್ಡ್ಗಳನ್ನು ನವೀಕರಣಗೊಳಿಸಬೇಕು, ತೋಟದ ಕೂಲಿ ಕಾರ್ಮಿಕರು ಕಡ್ಡಾಯವಾಗಿ ಇ-ಶ್ರಮ್ ಕಾಡ್ಗಳನ್ನು ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು. ಸಭೆಯಲ್ಲಿ ಪೊನ್ನಂಪೇಟೆ ಗ್ರಾ.ಪಂ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಪೊನ್ನಂಪೇಟೆ ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷೆ ಮಂಜುಳಾ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಈ ಸಂದರ್ಭ…
ಲೇಖಕ: admin
ಮಡಿಕೇರಿ ಜು.2 NEWS DESK : ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಡಿಸೆಂಬರ್ 26 ರಿಂದ ನೋಂದಣಿ ಪ್ರಕ್ರಿಯೆ ಚಾಲನೆಗೊಂಡಿದೆ. ಪ್ರತೀ ತಿಂಗಳು 3,000 ಮತ್ತು 1500 ರೂ. ನಿರುದ್ಯೋಗ ಭತ್ಯೆಯನ್ನು ನೀಡುವ ಯೋಜನೆ ಆಗಿದೆ. ಜನವರಿ 12 ರಿಂದ ಅರ್ಹ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಯುವನಿಧಿ ಯೋಜನೆಗೆ ಇದುವರೆಗೆ 1134 ಮಂದಿ ಹೆಸರು ನೋಂದಣಿ ಮಾಡಿದ್ದು, 562 ಮಂದಿಗೆ ಯುವನಿಧಿ ಯೋಜನೆ ತಲುಪುತಿದೆ. ಯುವನಿಧಿ ಯೋಜನೆ ಪಡೆಯುತ್ತಿರುವವರು ಪ್ರತಿ ತಿಂಗಳು ಸ್ವಯಂ ದೃಢೀಕರಣವನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಿದೆ ಎಂದು ಜಿಲ್ಲಾ ಉದ್ಯೋಗವಿನಿಯಮಾಯಾಧಿಕಾರಿ ರೇಖಾ ಗಣಪತಿ ತಿಳಿಸಿದ್ದಾರೆ. ಕುಶಾಲನಗರ ತಾಲ್ಲೂಕಿನಲ್ಲಿ 177, ಮಡಿಕೇರಿ ತಾಲ್ಲೂಕಿನಲ್ಲಿ 304, ಪೊನ್ನಂಪೇಟೆ ತಾಲ್ಲೂಕಿನಲ್ಲಿ 133, ಸೋಮವಾರಪೇಟೆ ತಾಲ್ಲೂಕಿನಲ್ಲಿ 317, ವಿರಾಜಪೇಟೆ ತಾಲ್ಲೂಕಿನಲ್ಲಿ 203 ಮಂದಿ ಹೆಸರು ನೋಂದಾಯಿಸಿದ್ದಾರೆ. ಯುವನಿಧಿ ಯೋಜನೆ ಫಲಾನುಭವಿಗಳ ಗಮನಕ್ಕೆ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಯೋಜನೆಯಾದ…
ಮಡಿಕೇರಿ ಜು.2 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಡಾ.ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ `ವಚನ ಸಂರಕ್ಷಣಾ ದಿನಾಚರಣೆ’ಯು ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಉಪನ್ಯಾಸಕರಾದ ಎಚ್.ಎಲ್.ರಮೇಶ್ ಡಾ.ಫ.ಗು.ಹಳಕಟ್ಟಿ ವಚನ ಪುಸ್ತಕಗಳು ಹಾಗೂ ಪುಸ್ತಕ ಬಂಡಾರವನ್ನು ಕನ್ನಡ ಸಾಹಿತ್ಯಕ್ಕೆ ನೀಡಿದ್ದಾರೆ ಎಂದು ತಿಳಿಸಿದರು. ಉಪನ್ಯಾಸಕರಾದ ವೆಂಕಟ್ ನಾಯಕ್ ಮಾತನಾಡಿ, ಫ.ಗು.ಹಳಕಟ್ಟಿ ಅವರು ವಚನ ಸಾಹಿತ್ಯ ಸಂಗ್ರಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು. ವಚನ ಸಾಹಿತ್ಯ ಸಂಗ್ರಹಣೆಯಲ್ಲಿ ಸಾವಿರ ವಚನಗಳನ್ನು ರಚಿಸಿದ್ದಾರೆ. ಜೇಡರ ದಾಸಿಮಯ್ಯ ಅವರು ಕನ್ನಡದಲ್ಲಿ ಮೊದಲ ವಚನಕಾರ ಶಿವಾನುಭವ ಸಂಗ್ರಹದ ಲೇಖಕರು ಆಗಿದ್ದಾರೆ ಎಂದರು. ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕುಮಾರ್ ಅವರು ಮಾತನಾಡಿ ಫ.ಗು.ಹಳಕಟ್ಟಿಯವರು ವಚನ ಸಾಹಿತ್ಯದ ಪಿತಾಮಹ ಎಂದು ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಹೆಬ್ಬಾಲೆ…
ಮಡಿಕೇರಿ ಜು.2 NEWS DESK : ಯೂತ್ ರೆಡ್ ಕ್ರಾಸ್ ಸೊಸೈಟಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ರಾಷ್ಟ್ರೀಯ ವೈದ್ಯಕೀಯ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸುಂಟಿಕೊಪ್ಪದ ಸ್ವಸ್ಥ, ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಯೂತ್ ರೆಡ್ ಕ್ರಾಸ್ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳ ಕಾರ್ಯಕ್ರಮ ಅಧಿಕಾರಿ ಡಾ. ಕರುಂಬಯ್ಯ, ಸದಸ್ಯ ಡಾ. ಶಶಾಂಕ, ಘಟಕದ ವಿದ್ಯಾರ್ಥಿ ಕಾರ್ಯದರ್ಶಿ ಡಾ. ಹರಿನಾರಾಯಣ್, 26 ವೈದ್ಯರುಗಳ ತಂಡದೊಂದಿಗೆ ಸಾಮಾನ್ಯ ದೈಹಿಕ, ವ್ಯವಸ್ಥಿತ ಪರೀಕ್ಷೆ, ದೃಷ್ಟಿ ಮತ್ತು ಶ್ರವಣ ಪರೀಕ್ಷೆಗಳು ಮತ್ತು ಮನರಂಜನಾ ಚಟುವಟಿಕೆ ನಡೆಯಿತು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕೊಡಗು ಅಧ್ಯಕ್ಷ ಬಿ.ಕೆ.ರವೀಂದ್ರ ರೈ, ಯೂತ್ ರೆಡ್ ಕ್ರಾಸ್ ಸೊಸೈಟಿ ಕೊಡಗು ಅಧ್ಯಕ್ಷ ಎಂ, ಧನಂಜಯ , ಯೂತ್ ರೆಡ್ ಕ್ರಾಸ್ ಕಾರ್ಯಕ್ರಮದ ಸಂಯೋಜಕ ಎಂ,ಆರ್, ಜಗದೀಶ್, ನ್ಯಾಷನಲ್ ಮೆಡಿಕೋಸ್ ಆಗ೯ನೈಸೇಷನ್ ನ ಕರ್ನಾಟಕ ದಕ್ಷಿಣ ವಲಯ ಸಹಪ್ರಮುಖ ಡಾ.ಹರಿನಾರಾಯಣ್, ಸ್ವಸ್ಥ ನಿರ್ದೇಶಕಿ ಆರತಿ…
ವಿರಾಜಪೇಟೆ ಜು.2 NEWS DESK : ಮೈಸೂರು ವಿಶ್ವ ವಿದ್ಯಾನಿಲಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಯುನಿಸೆಫ್ ವತಿಯಿಂದ ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಆಯೋಜಿಸಲಾಗಿದ್ದ ಬದಲಾವಣೆಗಾಗಿ ಮಾಧ್ಯಮ –ಮಕ್ಕಳ ವಿಷಯಗಳು ಕುರಿತ ಎರಡು ದಿನಗಳ ಕಾಲ ನಡೆದ ಕಾರ್ಯಾಗಾರದಲ್ಲಿ ಕೊಡಗಿನ ವಿರಾಜಪೇಟೆಯ ಪತ್ರಕರ್ತೆ ರಜಿತ ಕಾರ್ಯಪ್ಪ ಭಾಗವಹಿಸಿ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ. ಈ ಸಂದರ್ಭ ಕರ್ನಾಟಕ, ತೆಲಂಗಾಣ ಹಾಗೂ ಆಂದ್ರಪ್ರದೇಶದ ಯೂನಿಸೆಫ್ನ ಸಂವಹನ ವಕಾಲತ್ತು ಮತ್ತು ಪಾಲುದಾರಿಕೆ ತಜ್ಞ ಪ್ರೋಸುನ್ ಸೆನ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಪ್ರೋ. ಎಂ.ಎಸ್. ಸಪ್ನಾ, ಮಂಜುನಾಥ್ ಸುಬೇದಾರ್, ಡಾ. ಎಂ.ಮಂಜುಳಾ, ಎಂ. ಪುಷ್ಪಲತಾ ಸೇರಿದಂತೆ ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಜಿಲ್ಲೆಯ ವಿವಿಧ ಭಾಗಗಳ ಪತ್ರಕರ್ತರು, ಹವ್ಯಾಸಿ ಪತ್ರಕರ್ತರು ಹಾಜರಿದ್ದರು.
ಮಡಿಕೇರಿ ಜು.2 NEWS DESK : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ನಡೆಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯದ ನಿವೃತ್ತ ಡೆಪ್ಯೂಟಿ ಮಾನೈಜಿಂಗ್ ಡೈರೆಕ್ಟರ್ ಕಂಜಿತಂಡ ಸ್ವಾತಿ ಸುಬ್ರಮಣಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿ ನಾಯಕರ ಜವಬ್ದಾರಿಯ ಬಗ್ಗೆ ತಿಳಿಸಿ, ಉತ್ತಮ ನಾಗರಿಕರಾಗಬೇಕು ಎಂದರು. ಬದುಕಿನಲ್ಲಿ ಮೇಲೆ ಬರುವ ಪ್ರಯತ್ನ ಪಡಬೇಕು, ತಂದೆ – ತಾಯಿಗಳ ಬಗ್ಗೆ ಗೌರವ ಇರಬೇಕು ಎಂದ ಅವರು, ಶಾಲಾ ದಿನಗಳ ಮೆಲುಕು ಹಾಕಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ಕೊಡವ ಸಮಾಜ ಹಾಗೂ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ಶಾಲಾ ನಾಯಕರುಗಳು ಜವಾಬ್ದಾರಿ ವಹಿಸಿ ಕೆಲಸ ಮಾಡಿ ಪ್ರತಿಭೆಯನ್ನು ಪ್ರದರ್ಶಿಸಬೇಕು. ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಆ ಮೂಲಕ ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತರವಂತಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು,…
ವಿರಾಜಪೇಟೆ ಜು.2 NEWS DESK : ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯಕ್ಕೆ ದಕ್ಷಿಣ ಕೊರಿಯಾದ ಸಿಯೋಲ್ನಲ್ಲಿರುವ ಪ್ರತಿಷ್ಠಿತ ಕ್ಯುಂಗ್ ಹೀ ವಿಶ್ವವಿದ್ಯಾಲಯದ ಸಂಶೋಧನಾ ಘಟಕ ಹಾಗೂ ಮ್ಯಾಕ್ಸಿಲೊಫೇಶಿಯಲ್ ಸರ್ಜರಿ ವಿಭಾಗದ ಮುಖ್ಯಸ್ಥ ಪ್ರೊ.ಯೋಂಗ್-ಡೇ ಕ್ವಾನ್ ಭೇಟಿ ನೀಡಿದರು. ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ಬೆಳ್ಳಿ ಮಹೋತ್ಸವದ ಚಟುವಟಿಕೆಗಳ ಅಂಗವಾಗಿ ವಿದ್ಯಾಲಯದ ಡಾ.ಸುನಿಲ್ ಮುದ್ದಯ್ಯ ಅವರ ಆಹ್ವಾನದ ಮೇರೆಗೆ ಭೇಟಿ ನೀಡಿದ ಅವರು, ಕೊಡಗು ದಂತ ವೈಧ್ಯಕೀಯ ಮಹಾವಿದ್ಯಾಲಯ ಹಾಗೂ ವಿಶ್ವವಿದ್ಯಾನಿಲಯದ ಪರಸ್ಪರ ಸಹಯೋಗದ ಒಪ್ಪಂದಕ್ಕೆ ಸಹಿ ಹಾಕಿದರು. ಈ ಸಂದರ್ಭ ಇಂಪ್ಲಾಂಟ್ ಡೆಂಟಿಸ್ಟ್ರಿ ಮತ್ತು ಮ್ಯಾಕ್ಸಿಲೊಫೇಶಿಯಲ್ ಸರ್ಜರಿಯಲ್ಲಿ ಪರಿಣಿತರು, ಇಂಪ್ಲಾಂಟ್ ಬೆಂಬಲಿತ ದಂತ ಪುನರ್ವಸತಿ ಸಾಧಿಸಲು ಸಂಬಂಧಿಸಿದ ವಿಷಯಗಳ ಕುರಿತು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರೊ.ಕ್ವಾನ್, ಇದರಿಂದ ಕೊಡಗಿನ ಸಾಮಾನ್ಯ ಜನತೆಗೆ ವಿಶ್ವದರ್ಜೆಯ ಇಂಪ್ಲಾಂಟ್ ಕೃತಕ ದಂತ ಚಿಕಿತ್ಸೆಯನ್ನು ಈಗ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನೀಡಲಾಗುತ್ತದೆ. ಇಂಪ್ಲಾಂಟ್ ಕೃತಕ ದಂತ ಚಿಕಿತ್ಸೆಯಲ್ಲಿ ವಿಶ್ವವಿಖ್ಯಾತಿಗಳಿಸಿದೆ ಎಂದರಲ್ಲದೆ ಹಲವು ಜಟಿಲವಾದ…
ಮಡಿಕೇರಿ ಜು.2 NEWS DESK : ರೋಟರಿ ಮಡಿಕೇರಿಯ 2024-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುದಯ್ ನಾಣಯ್ಯ ಹಾಗೂ ಕಾರ್ಯದರ್ಶಿಯಾಗಿ ಪ್ರಿನ್ಸ್ ಪೊನ್ನಣ್ಣ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜು.5 ರಂದು ಸಂಜೆ 7 ಗಂಟೆಗೆ ಮಡಿಕೇರಿ ರೋಟರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ರೋಟರಿ ಪ್ರಕಟಣೆ ತಿಳಿಸಿದೆ.
ಮಡಿಕೇರಿ ಜು.2 NEWS DESK : ಪೋಷಣ್ ಅಭಿಯಾನ ಯೋಜನೆಯಡಿ ಭಾರತ ಸರ್ಕಾರದ ಮಾರ್ಗಸೂಚಿಯಂತೆ ಸೋಮವಾರಪೇಟೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ನಡೆಯುವ ದಿನನಿತ್ಯ ಚಟುವಟಿಗಳನ್ನು ಆನ್ಲೈನ್ ನಲ್ಲಿ ಅಳವಡಿಸಲು ಅನುಕೂಲವಾಗುವಂತೆ ಸ್ಮಾರ್ಟ್ ಫೋನ್ ಮತ್ತು ಪರಿಕರಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸೋಮವಾರಪೇಟೆಯ ಶಾಸಕರ ಕಚೇರಿಯಲ್ಲಿ ಶಾಸಕ ಡಾ.ಮಂತರ್ ಗೌಡ ವಿತರಿಸಿದರು.
ವಿರಾಜಪೇಟೆ ಜು.2 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029 ರ ಅವಧಿಗೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿರುವ ಸಂಘದ ಅಧ್ಯಕ್ಷ ಬಿ.ಎಸ್.ಗುರುರಾಜ್ , ಬೈಲಾದ ನಿಯಮದಂತೆ ಚುನಾವಣೆಯನ್ನು ನಡೆಸಲು ಎಲ್ಲಾ ಇಲಾಖೆಗಳಿಂದ ರಾಜ್ಯ ಸರ್ಕಾರಿ ನೌಕರರ ಕರಡು ಮತದಾರರ ಪಟ್ಟಿಯನ್ನು ಸಿದ್ದಪಡಿಸಿದ್ದು, ಸದರಿ ಪಟ್ಟಿಯನ್ನು ಸಂಘದ ವಿರಾಜಪೇಟೆ ಶಾಖೆಯಲ್ಲಿ ಸೂಚನ ಫಲಕದಲ್ಲಿ ಪ್ರಕಟಿಸಲಾಗಿರುತ್ತದೆ. ಜು.2 ರಿಂದ ಜು.10ರ ವರೆಗೆ ಸದರಿ ಪಟ್ಟಿಗೆ ಸಂಭಂದಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ಮುಕ್ತವಾದ ಅವಕಾಶವಿರುತ್ತದೆ ಎಂದು ಹೇಳಿದರು. ಹೆಚ್ಚಿನ ಮಾಹಿತಿಗಾಗಿ ಸಂಘದ ಕಾರ್ಯದರ್ಶಿಗಳಾದ ದೇವರಾಜ್ ಬಿ.ಟಿ. (ಮೊ. ಸ.9739570806)ನ್ನು ಸಂಪರ್ಕಿಸಲು ಕೋರಿದೆ.






