ಮಡಿಕೇರಿ ಜು.1 NEWS DESK : ಪ್ರಸಕ್ತ(2024-24) ಸಾಲಿನ ಜೂನ್-2024ರ ಅಂತ್ಯದ ವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ಜು.6 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಜು.1 NEWS DESK : ಪ್ರಸಕ್ತ (2024-25) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪಿ.ಯು.ಸಿ. ಮತ್ತು ಪಿಯುಸಿ. ಸಮನಾಂತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 20 ಕೊನೆ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: https://shp.karnataka.gov.in/bcwd ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1 ಲಕ್ಷ ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://bcwd.karnataka.gov.in ಅನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿಗಳವರ ಕಚೇರಿ ಮತ್ತು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ ಕೆಳಕಂಡಂತಿದೆ.…
ಮಡಿಕೇರಿ ಜು.1 NEWS DESK : ವಿರಾಜಪೇಟೆ ತಾಲ್ಲೂಕಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಾಲ್ಲೂಕು ಆಡಳಿತಾಧಿಕಾರಿಯಾಗಿರುವ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಧನರಾಜ್ ಸೂಚನೆ ನೀಡಿದ್ದಾರೆ. ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯಸೌಧದಲ್ಲಿ ನಡೆದ ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಇಲಾಖೆಗಳ ಮಾಹಿತಿ ಪಡೆದು ಅವರು ಮಾತನಾಡಿದರು. ತಾಲ್ಲೂಕಿನಲ್ಲಿ ಡೆಂಗ್ಯೂ ಪ್ರಕಣಗಳು ಹೆಚ್ಚಾಗುತ್ತಿದ್ದು, ವಿರಾಜಪೇಟೆಯಲ್ಲಿ 15, ಪೊನ್ನಂಪೇಟೆಯಲ್ಲಿ 35 ಪ್ರಕಣಗಳು ಕಂಡು ಬಂದಿದೆ. ಡೆಂಗ್ಯೂ ವ್ಯಾಪಿಸದಂತೆ ತಡೆಕಟ್ಟಲು ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಡೆಂಗ್ಯೂ ನಿಂತ ನೀರಿನಿಂದ ಬರುತ್ತದೆ, ಸೊಳ್ಳೆಗಳು ಉತ್ಪತ್ತಿಯಾಗದಂತೆ ಸಾರ್ವಜನಿಕರು ಎಚ್ಚರವಹಿಸಬೇಕು. ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಕೃಷಿ ಇಲಾಖೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹಲವು ಸೌಲಭ್ಯಗಳಿದ್ದು, ಈ ಕುರಿತು ಅಭಿವೃದ್ಧಿ ಸಾಧಿಸುವಂತೆ ಕೃಷಿ ಅಧಿಕಾರಿಗಳಿಗೆ ತಿಳಿಸಿದರು. ಪಶುಪಾಲನ ಇಲಾಖೆಯಿಂದ ಈಗಾಗಲೇ ಹಸುಗಳಿಗೆ ಕಾಲು-ಬಾಯಿ ಜ್ವರದ ಲಸಿಕೆಯನ್ನು ಶೇ.93ರಷ್ಟು…
ಮಡಿಕೇರಿ ಜು.1 NEWS DESK : ಸುಂಟಿಕೊಪ್ಪ ಮತ್ತು ಕುಶಾಲನಗರ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಮಾದಾಪುರದ ನಂದಿಮೊಟ್ಟೆಯಲ್ಲಿ ನೆಲೆಸಿರುವ ಅಸ್ಸಾಂ ಮೂಲದ ತೋಮಿಜುದ್ದೀನ್ ಅನ್ವರ್ ಹುಸೈನ್ (23) ಎಂಬಾತನನ್ನು ಬಂಧಿಸಿ ಸುಮಾರು 750 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈತ ಸುಂಟಿಕೊಪ್ಪದ ತೋಟವೊಂದರ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಎಎಸ್ಪಿ ಸುಂದರರಾಜ್ ಅವರ ಮಾರ್ಗದರ್ಶನದಲ್ಲಿ ಸೋಮವಾರಪೇಟೆ ಡಿವೈಎಸ್ಪಿ ಗಂಗಾಧರಪ್ಪ, ಕುಶಾಲನಗರ ಸಿಪಿಐ ರಾಜೇಶ್ ಕೋಟ್ಯಾನ್ ಸೂಚನೆ ಮೇರೆಗೆ ಠಾಣಾಧಿಕಾರಿ ರಮೇಶ್ ಪೆಡ್ಡಣನವರ್, ಅಪರಾಧ ವಿಭಾಗದ ಪಿಎಸ್ಐ ಸ್ವಾಮಿ, ಎಎಸ್ಐ ವೆಂಕಟೇಶ್, ಸಿಬ್ಬಂದಿಗಳಾದ ಸತೀಶ್, ಪ್ರಕಾಶ್, ಜೀವನ್, ಪ್ರವೀಣ್, ರಂಜೀತ್, ವೆಂಕಟೇಶ್, ರಮೇಶ್, ಜಗದೀಶ್, ಸೌಮ್ಯ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಜು.1 NEWS DESK : ಪ್ರವಾಸಕ್ಕೆಂದು ಕೊಡಗು ಜಿಲ್ಲೆಗೆ ಬಂದಿದ್ದ ವ್ಯಕ್ತಿಯೊಬ್ಬರು ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪ ಸಮೀಪದ ಹೇರೂರು ಗ್ರಾಮದಲ್ಲಿ ನಡೆದಿದೆ. ಮೈಸೂರು ಮೂಲದ ಶಶಿ (30) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಈಜಲು ತೆರಳಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ಪ್ರವಾಸಿತಾಣಗಳನ್ನು ವೀಕ್ಷಿಸಲೆಂದು ಮೈಸೂರಿನಿಂದ ಸುಮಾರು 15 ಮಂದಿ ಆಗಮಿಸಿದ್ದರು ಎಂದು ತಿಳಿದು ಬಂದಿದೆ. ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತದೇಹದ ಶೋಧ ಕಾರ್ಯ ನಡೆದಿದೆ.
ಮಡಿಕೇರಿ ಜೂ.29 NEWS DESK : ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತಿದೆಯಲ್ಲದೆ ಅಧಿಕ ಬಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿರುತ್ತದೆ. ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್(ಮಲ್ಟಿ ಆಕ್ಸಿಲ್), ಆರ್ಟಿಕ್ಯೂಲೇಟೆಡ್ ವಾಹನಗಳು ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಭಂದಿಸಲಾಗಿದೆ. ಸ್ಥಳೀಯರು ವಾಹನ ಸವಾರರ ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಜು.1 ರಿಂದ ಜು.30 ರವರೆಗೆ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ…
ಮಡಿಕೇರಿ ಜೂ.29 NEWS DESK : ಮಡಿಕೇರಿಯ ಮಲ್ಲಿಕಾರ್ಜುನ ನಗರ ಹಾಗೂ ತ್ಯಾಗರಾಜ ಕಾಲೋನಿಯ ಮಳೆಹಾನಿ ಪ್ರದೇಶಗಳಿಗೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲಿಸಿದರು. ಹೆಚ್ಚಿನ ಮಳೆಯಿಂದಾಗಿ ಗೋಡೆ ಕುಸಿತ ಉಂಟಾಗಿದ್ದು, ಮನೆ ಹಾನಿಯಾಗಿರುವುದನ್ನು ಪರಿಶೀಲಿಸಿದ ಶಾಸಕರು ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಮಾರ್ಗಸೂಚಿಯಂತೆ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಇಲ್ಲಿನ ನಾಗರಿಕರು ಸಹ ಹೆಚ್ಚಿನ ಜಾಗೃತಿ ವಹಿಸಬೇಕಿದೆ ಎಂದರು. ಸ್ಥಳೀಯರ ಕುಂದುಕೊರತೆಯನ್ನು ಇದೇ ಸಂದರ್ಭದಲ್ಲಿ ಶಾಸಕರು ಆಲಿಸಿದರು. ನಂತರ ನಗರದ ಸ್ಟೀವರ್ಟ್ ಹಿಲ್ ಬಳಿಯಿರುವ ತ್ಯಾಜ್ಯ ಘಟಕ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಜಾಗ ಸಂಬಂಧ ಹೈಕೋರ್ಟ್ ನ್ಯಾಯಾಲಯದಲ್ಲಿ ಪ್ರಕರಣ ಇರುವುದರಿಂದ ಬದಲಿ ಜಾಗ ಗುರುತಿಸುವಂತೆ ಕಂದಾಯ ಹಾಗೂ ನಗರಸಭೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಜಾಗವನ್ನು ಅಭಿವೃದ್ಧಿ ಪಡಿಸುವ ಸಂಬಂಧ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತರಾದ ವಿಜಯ್, ಪರಿಸರ…
ಮಡಿಕೇರಿ ಜೂ.29 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2020 ರಲ್ಲಿ ಪ್ರಸ್ತುತಪಡಿಸಿದ ‘ಸಾಹೇಬ್ರು ಬಂದವೇ’ ನಾಟಕದಲ್ಲಿ ಮೋನಿಕಾ ಪಾತ್ರದಲ್ಲಿ ಅಭಿನಯಿಸಿದ್ದ ಸುಸ್ಮಿತಾ ಅವರು ಶಿವಮೊಗ್ಗ ಜಿಲ್ಲೆಯ ಸಾಗರದ ನೀನಾಸಂ ರಂಗಶಿಕ್ಷಣ ತರಬೇತಿಗೆ ಪ್ರಸ್ತಕ( 2024-25) ಸಾಲಿಗೆ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ತಿಳಿಸಿದ್ದಾರೆ. ಪ್ರತಿಯೊಬ್ಬ ರಂಗಭೂಮಿ ಕಲಾವಿದನ ಕನಸು ಪ್ರತಿಷ್ಠಿತ ನೀನಾಸಂಗೆ ಆಯ್ಕೆ ಆಗಬೇಕು ಎಂಬುದಾಗಿದೆ. ಆ ನಿಟ್ಟಿನಲ್ಲಿ ಅಷ್ಟೇ ಶ್ರದ್ಧೆ ಮತ್ತು ಪರಿಶ್ರಮದ ಅಗತ್ಯತೆ ಇದ್ದು, ಈಗಾಗಲೇ ಸಾವಿರಾರು ಕಲಾವಿದರು ಇಲ್ಲಿ ತರಬೇತಿ ಪಡೆದು ಉತ್ತಮ ಕಲಾವಿದರಾಗಿ ಹೊರಹೊಮ್ಮಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2020 ರಲ್ಲಿ ಪ್ರಸಿದ್ದ ಸಾಹೇಬ್ರು ಬಂದವೇ! ನಾಟಕವನ್ನು ರಾಜ್ಯದ ಒಬ್ಬ ಶ್ರೇಷ್ಟ ರಂಗಭೂಮಿ ನಿರ್ದೇಶಕರಾದ ಡಾ.ಜೀವನ್ ರಾಂ ಸುಳ್ಯ ಅವರ ನಿರ್ದೇಶನದಲ್ಲಿ ಸಿದ್ಧಪಡಿಸಲಾಗಿತ್ತು. ರಾಜ್ಯಾದ್ಯಂತ ಸುಮಾರು 20…
ಮಡಿಕೇರಿ ಜೂ.29 NEWS DESK : ಸಿದ್ದಾಪುರ ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಜು.1 ರಂದು ಕಕ್ಕಬ್ಬೆ ಜಂಕ್ಷನ್ನಲ್ಲಿ ಬೆಳಿಗ್ಗೆ 10.30 ಗಂಟೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಕಕ್ಕಬ್ಬೆ, ಕುಂಜಿಲ, ಯವಕಪಾಡಿ, ನಾಲಡಿ ಸುತ್ತಮುತ್ತಲಿನ ಎಲ್ಲಾ ಕೊಡವ ಮತ್ತು ಕೊಡವತಿಯರು ಮಾನವ ಸರಪಳಿಯಲ್ಲಿ ಭಾಗವಹಿಸಿ ಪವಿತ್ರ ಕೊಡವ ಲ್ಯಾಂಡ್ ನ ಸಂರಕ್ಷಣೆಗಾಗಿ ಪಣತೊಡುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ಕೃಷಿ ಭೂಮಿಯನ್ನು ವಾಣಿಜ್ಯ ದುರುದ್ದೇಶವನ್ನಾಗಿ ಪರಿವರ್ತಿಸಲು ನಮ್ಮ ಪ್ರಾಚೀನ ಭೂಮಿ ಮತ್ತು ದೀರ್ಘಕಾಲಿಕ ಜಲಮೂಲಗಳನ್ನು ಲೂಟಿ ಮಾಡಲಾಗುತ್ತಿದೆ. ಇದು ಸ್ಥಳೀಯ ಕೊಡವರ ಅಸ್ಮಿತೆ, ಅಸ್ತಿತ್ವ ಮತ್ತು ಕೊಡವ ಹಿತಾಸಕ್ತಿಗಳಿಗೆ ಹಾನಿಕಾರಕವಾಗಿದೆ ಎಂದು ಆರೋಪಿಸಿದ್ದಾರೆ. ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ವಿಪತ್ತನ್ನು ಜಯಿಸಲು ಇರುವ ಏಕೈಕ ದಿವ್ಯೌಷಧ, ಅಂತರಾಷ್ಟ್ರೀಯ ಕಾನೂನಿನಡಿಯಲ್ಲಿ ನಮ್ಮ ಕೊಡವ ತಾಯಿ ನೆಲದಲ್ಲಿ…
ನವದೆಹಲಿ/ಬೆಂಗಳೂರು ಜೂ.29 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತು ಚರ್ಚೆ ನಡೆಸಿದರು. ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು. ರಾಜ್ಯದ ಪರವಾಗಿ ಮಂಡಿಸಲಾದ ಪ್ರಮುಖ ಪ್ರಸ್ತಾವನೆಗಳು ಹೀಗಿವೆ: ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ ಇಂಡಿಯಾ ರಿಸರ್ವ್ ಬೆಟಾಲಿಯನ್ (India Reserve Battalion) ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್ ಸ್ಥಾಪನೆಗೆ ಅನುಮೋದನೆ ನೀಡುವುದು. ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್…






