ಮಡಿಕೇರಿ ಜೂ.29 NEWS DESK : ವಿದ್ಯಾರ್ಥಿಗಳು ಮೌಲ್ಯಯುತವಾದ ಶಿಕ್ಷಣವನ್ನು ಪಡೆದು ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದು ಚೆಟ್ಟಳ್ಳಿ ಗ್ರಾ.ಪಂ ಸದಸ್ಯ ಸಿ.ಇ.ತೀರ್ಥಕುಮಾರ್ (ಮೂಡಳ್ಳಿ ರವಿ) ಹೇಳಿದರು. ಗಾಂಧಿ ಯುವಕ ಸಂಘದ ವತಿಯಿಂದ ಕಂಡಕರೆ ವತಿಯಿಂದ ಕಂಡಕರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಬಹುತೇಕರಿಗೆ ಇಂಗ್ಲಿಷ್ ವ್ಯಾಮೋಹದಿಂದ ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಉಂಟಾಗಿದೆ. ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಕಂಡಕರೆಯ ಗಾಂಧಿ ಯುವಕ ಸಂಘವು ಸಾಮಾಜಿಕ ಚಟುವಟಿಕೆಗಳ ಮೂಲಕ ಸ್ಥಳೀಯ ಸರ್ಕಾರಿ ಶಾಲೆಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಕೆಲಸವಾಗಿದೆ ಎಂದರು. ಕಳೆದ ವರ್ಷ ಗಾಂಧಿ ಯುವಕ ಸಂಘದ ವತಿಯಿಂದ ಕಂಡಕರೆ ಶಾಲೆಗೆ ಉಚಿತವಾಗಿ 25 ಕುರ್ಚಿಗಳನ್ನು ನೀಡಿ ಎಲ್ಲರಿಗೂ ಮಾದರಿಯಾಗಿದ್ದರು. ಇದೀಗ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ನೀಡಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ. ಗ್ರಾ.ಪಂ ಹಾಗೂ ಸರ್ಕಾರದ…
ಲೇಖಕ: admin
ಮಡಿಕೇರಿ ಜೂ.29 NEWS DESK : ಜಗತ್ತಿನಾದ್ಯಂತ ಒಂದೂವರೆ ಕೋಟಿಗೂ ಹೆಚ್ಚು ಜನರು ಮಾತನಾಡುವ ತುಳು ಭಾಷೆಗೆ ಗೂಗಲ್ ಸರ್ಚ್ ಸಂಸ್ಥೆಯು ಮಾನ್ಯತೆ ನೀಡಿದ್ದು, ಇದು ತುಳು ಭಾಷೆಗೆ ಸಿಕ್ಕ ದೊಡ್ಡ ಗೌರವವಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನಿಕಟ ಪೂರ್ವ ಸದಸ್ಯ ಪಿ.ಎಂ.ರವಿ ಶ್ಲಾಘಿಸಿದ್ದಾರೆ. ಪಂಚ ದ್ರಾವಿಡ ಭಾಷೆಯಲ್ಲೇ ಅತಿ ಪುರಾತನ ಭಾಷೆಯಾಗಿರುವ ತುಳುವಿಗೆ 2600 ವರ್ಷಗಳ ಇತಿಹಾಸವಿದ್ದು, ಸ್ವಂತ ಲಿಪಿಯನ್ನು ಹೊಂದಿದೆ. ಜೂನ್ 27ರಂದು ಜಾಗತಿಕವಾಗಿ ತುಳು ಭಾಷೆಯನ್ನು ಗೂಗಲ್ ಸಂಸ್ಥೆಯು ತನ್ನ ಟ್ರಾನ್ಸ್ ಲೇಟರ್ ನಲ್ಲಿ ಸೇರ್ಪಡೆ ಮಾಡಿದ್ದು, ಇಂಗ್ಲೀಷ್ ಅಥವಾ ಯಾವುದೇ ಭಾಷೆಯ ಪದಗಳನ್ನು ಉಲ್ಲೇಖಿಸಿ ತುಳುವಿನಲ್ಲಿ ಅರ್ಥ ಕೇಳಿದರೆ ಅದಕ್ಕೆ ಸರಿಯಾದ ಅರ್ಥ ಕೊಡಬಲ್ಲ ಪದಗಳನ್ನು ತೋರಿಸುತ್ತದೆ. ತುಳು ಮಾತನಾಡುವ ಕರಾವಳಿ ಜನರು ಇಡೀ ಜಗತ್ತಿನಲ್ಲಿದ್ದಾರೆ. ತುಳು ಪ್ರಾದೇಶಿಕ ಭಾಷೆಯಾಗಿದ್ದರು ಹೆಚ್ಚಿನ ಮಂದಿ ತುಳುವನ್ನು ತಮ್ಮ ಮಾತೃಭಾಷೆಯನ್ನಾಗಿ ಬಳಸುತ್ತಿದ್ದಾರೆ. ಈಗ ಗೂಗಲ್ ಇಂಜಿನ್ ನಲ್ಲಿ ತುಳು ಭಾಷೆ ಸೇರ್ಪಡೆಯಾಗಿರುವುದು ತುಳುವಿನ ಮಟ್ಟಿಗೆ ಒಂದು…
ನಾಪೋಕ್ಲು ಜೂ.29 NEWS DESK : ಬಲ್ಲಮಾವಟಿ ಗ್ರಾಮದ ಶ್ರೀ ಭಗವತಿ ದೇವಾಲಯದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರ ಹೆಸರಿನಲ್ಲಿ ಬಲ್ಲಮಾವಟಿ ಬೂತ್ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಬಲ್ಲಮಾವಟಿ ಬೂತ್ ಕಾಂಗ್ರೆಸ್ ಅಧ್ಯಕ್ಷ ಚಂಗೇಟಿರ ಕುಶಾಲಪ್ಪ ಶಾಸಕ ಹೆಸರಿನಲ್ಲಿ ಪ್ರಾರ್ಥಿಸಿದರು. ಪೂಜಾ ವಿಧಿ ವಿಧಾನವನ್ನು ದೇವಾಲಯದ ಮುಖ್ಯ ಅರ್ಚಕ ಶಶಿಧರ ನೆರವೇರಿಸಿದರು. ಈ ಸಂದರ್ಭ ವಲಯ ಕಾಂಗ್ರೆಸ್ ಅಧ್ಯಕ್ಷ ತಾಪಂಡ ಅಪ್ಪಣ್ಣ, ವಲಯ ಕಾಂಗ್ರೆಸ್ ಕಾರ್ಯದರ್ಶಿ ಮಣವಟ್ಟಿರ ದಯಾ ಕುಟ್ಟಪ್ಪ, ಜಿಲ್ಲಾ ಎನ್ಎಸ್ಯುಐ ಕಾರ್ಯದರ್ಶಿ ಮುಕ್ಕಾಟಿರ ಯತೀಶ್, ನೆಲಜಿ ಬೂತ್ ಅಧ್ಯಕ್ಷ ಕೈಬುಲಿರ ಗಣಪತಿ, ಪಕ್ಷದ ನಾಯಕರುಗಳಾದ ಅಪ್ಪಚೆಟ್ಟೋಳಂಡ ಮಾಚಯ್ಯ, ಬೊಟ್ಟೋಳಂಡ ಜಾನಕ್ಕಿ, ಚೀಯಕಪೂವಂಡ ರಂಜನ್, ಚೋಕಿರ ವಾಸುದೇವ, ನಿವೃತ್ತ ಯೋಧ ಪೊನ್ನುಕಂಡ ಬೆಳ್ಳಿಯಪ್ಪ ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜೂ.29 NEWS DESK : ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ತೆನ್ನಿರ ಮೈನಾ ಎಂಬ ವ್ಯಕ್ತಿ ನಿರಂತರವಾಗಿ ಸಾಮಾಜಿಕ ಜಾಲತಾಣವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿಯ ಮಡಿಕೇರಿ ನಗರ ಮಂಡಲ ಆರೋಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಮಂಡಲದ ಅಧ್ಯಕ್ಷ ಉಮೇಶ್ ಸುಬ್ರಮಣಿ, ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರ ವಿರುದ್ಧ ತೆನ್ನಿರಾ ಮೈನಾ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮತ್ತು ಅವಹೇಳನ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನಾಕಾರರನ್ನು ಹೆಂಡ ಕುಡಿದ ಕೋತಿಗಳು ಎಂದು ತೇಜೋವಧೆ ಮಾಡಿದ್ದು, ಇದರಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯರಿಗೆ ಮುಜುಗರವಾಗಿದೆ ಮತ್ತು ಅವಮಾನವಾಗಿದೆ. ತೆನ್ನಿರ ಮೈನಾ ಅವರ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರು ಯಾವುದೇ ಪ್ರಕರಣ ದಾಖಲಾಗಿಲ್ಲ ಮತ್ತು ಇವರ ಮೊಬೈಲ್ ಫೋನ್ ವಶಕ್ಕೆ ಪಡೆದಿಲ್ಲ ಎಂದು ಆರೋಪಿಸಿದರು. ಕಳೆದ ಚುನಾವಣೆ ಸಂದರ್ಭ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡ…
ನಾಪೋಕ್ಲು ಜೂ.29 NEWS DESK : ವಿದ್ಯೆ, ಬುದ್ಧಿವಂತಿಕೆ ಯಾರ ಸ್ವತ್ತಲ್ಲ ವಿದ್ಯಾರ್ಥಿಗಳು ತಮ್ಮ ಸ್ವಂತ ಸಾಮರ್ಥ್ಯದಿಂದ ಮುಂದೆ ಬರಬೇಕು ಎಂದು ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೇದುರ ವಿಶಾಲ ಹೇಳಿದರು. ನಾಪೋಕ್ಲು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ 2024- 25ರ ಸಾಲಿನ ವಿದ್ಯಾರ್ಥಿ ಸಂಘದವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಶಾಲಾ ಹಂತದಲ್ಲಿ ರಚಿಸಲಾಗುವ ಸಂಘವು ವಿದ್ಯಾರ್ಥಿಯ ಭವಿಷ್ಯಕ್ಕೆ ಪೂರಕವಾಗಿರುತ್ತದೆ ಎಂದ ಅವರು ಮೌಲ್ಯ ನಿರ್ಣಯವೂ ಸಹ ವಿದ್ಯಾರ್ಥಿಗಳಿಗೆ ಪರಿಪೂರ್ಣತೆಯನ್ನು ಒದಗಿಸುತ್ತದೆ. ವಿದ್ಯಾರ್ಥಿ ದೆಸೆಯಲ್ಲೇ ಮುಂದಿನ ಭವಿಷ್ಯದ ಬಗ್ಗೆ ಕನಸು ಕಂಡು ಅದನ್ನು ನನಸಾಗಿಸಲು ಶಿಸ್ತು, ಸೈಂಯಮ ಮತ್ತು ಶ್ರದ್ಧೆಯಿಂದ ಶ್ರಮಿಸುವಂತಾಗಬೇಕು ಎಂದು ಹಿತವಚನ ನುಡಿದರು. ನಿವೃತ್ತ ಪ್ರಾಂಶುಪಾಲರು ಹಾಗೂ ಸಂಸ್ಥೆಯ ನಿರ್ದೇಶಕರಾದ ಪ್ರೊ.ಕಲ್ಯಾಟಂಡ ಪೂಣಚ್ಚ ಮಾತನಾಡಿ, ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಸಂಸ್ಥೆಯ ಮಾಜಿ ಅಧ್ಯಕ್ಷರ ಕೊಡುಗೆ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿ ಮಕ್ಕಳಿಗೆ ಹಿತವಚನವನ್ನು ನೀಡಿದರು. ಶಾಲೆಯ ಪ್ರಾಂಶುಪಾಲರಾದ ಕಲ್ಯಾಣಂಡ ಶಾರದ ಮಾತನಾಡಿ, ವಿದ್ಯಾರ್ಥಿಗಳು ಜವಾಬ್ದಾರಿಯನ್ನು ಹೊಂದಿ…
ನಾಪೋಕ್ಲು ಜೂ.29 NEWS DESK : ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಸರಕಾರ ಹಲವು ನಿಯಮಗಳನ್ನು ಜಾರಿಗೊಳಿಸಿದೆ ಎಂದು ಠಾಣಾಧಿಕಾರಿ ಮಂಜುನಾಥ್ ಹೇಳಿದರು. ಕುಂಜಿಲದ ಆಕ್ಸ್ಫರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಅಂಗವಾಗಿ ವಿಷಯ ವಿವರಣೆಯನ್ನು ಅವರು ನೀಡಿದರು. ಸಮಾಜದಲ್ಲಿ ಜರುಗುತ್ತಿರುವ ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳು ಹಾಗೂ ಸಂಚಾರಿ ನಿಯಮಗಳ ಕುರಿತು ಮಾಹಿತಿ ನೀಡಿದರು. ಅಂತರ್ಜಾಲ ವಂಚನೆಗಳನ್ನು ವಿವರಿಸಿ ಎಚ್ಚರಿಕೆ ನೀಡಿದರು. ತಂಬಾಕು ಉತ್ಪನ್ನಗಳು ಮಾರಕ ಆದರೂ ಅದನ್ನು ಮಾರಾಟ ಮಾಡುತ್ತಿದ್ದಾರೆ.ಆದರೆ ವಿದ್ಯಾರ್ಥಿಗಳು ಅವುಗಳ ಮೊರೆ ಹೋಗಬಾರದು ಎಂದರು. ಮಾದಕ ವಸ್ತುಗಳ ಬಳಕೆ ವಿರುದ್ಧ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಕ್ರೈಂ ಠಾಣಾಧಿಕಾರಿ ಶ್ರೀಧರ್, ಆಕ್ಸ್ಫರ್ಡ್ ಆಂಗ್ಲ ಮಾಧ್ಯಮ ಶಾಲೆಯ ನಿರ್ವಾಹಕ ಅಧಿಕಾರಿ ಶಾಹಿದ್ ಅಲಿ, ಮುಖ್ಯೋಪಧ್ಯಾಯಿನಿ ಕವಿತಾ, ಅಧ್ಯಾಪಕವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಜೂ.29 NEWS DESK : ನಾಪೋಕ್ಲು ಕೊಡವ ಸಮಾಜ ರಸ್ತೆಯಲ್ಲಿ ಕಾಂಕ್ರೀಟ್ ಕಾಮಗಾರಿ ಕೈಗೊಳ್ಳಲಾಗಿದ್ದು ಸಂಚಾರ ಸಮಸ್ಯೆಯನ್ನು ಪರಿಹರಿಸಲಾಗಿದೆ.ರಸ್ತೆಯಲ್ಲಿ ಹೊಂಡ ಗುಂಡಿಗಳಾಗಿದ್ದು ಸಂಚಾರಕ್ಕೆ ತೊಡಕು ಉಂಟಾಗಿ ಈ ಬಗ್ಗೆ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಕೆಆರ್ಐಡಿಎಲ್ ವತಿಯಿಂದ 3.70 ಲಕ್ಷ ವೆಚ್ಚದಲ್ಲಿ 52 ಮೀಟರ್ ಉದ್ದದ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡಿದೆ. ರಸ್ತೆ ನಿರ್ಮಾಣದಿಂದಾಗಿ ಮುಂದಿನ 15 ದಿನಗಳು ವಾಹನ ಸಂಚಾರ ನಿಷೇಧಿಸಿ. ನಾಡಕಚೇರಿಗೆ ತೆರಳಲು ಬೈಪಾಸ್ ರಸ್ತೆಯಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜೂ.29 NEWS DESK : ಬೆಲೆ ಏರಿಕೆ ವಿರುದ್ಧ ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಸಂದೇಶ ಕಳುಹಿಸಿರುವ ಕಾಂಗ್ರೆಸ್ ವ್ಯಕ್ತಿಯೊಬ್ಬರ ವಿರುದ್ಧ ದೂರು ನೀಡಿದರೂ ಪೊಲೀಸರು ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ಪೊಲೀಸರ ನಿರ್ಲಕ್ಷ್ಯವನ್ನು ಖಂಡಿಸಿ ಕೊಡಗು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳೆದುರು ಬಿಜೆಪಿ ವತಿಯಿಂದ ಜು.3ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ.ಅರುಣ್ ಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಕೈಗೊಂಬೆಯಂತೆ ವರ್ತಿಸುತ್ತಿದ್ದು, ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಮೊಕದ್ದಮೆಗಳನ್ನು ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ತಮಗೆ ಬಂದ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡರೆ ಪೊಲೀಸರು ಅವರ ವಿರುದ್ಧ ಮೊಕದ್ದಮೆ ಹೂಡಿ ಮೊಬೈಲ್ಗಳನ್ನು ವಶಪಡಿಸಿಕೊಂಡು ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಆದರೆ ಕಾಂಗ್ರೆಸಿಗರೊಬ್ಬರು ಬಿ.ಜೆ.ಪಿ ಪಕ್ಷದ ನಾಯಕರುಗಳು ಹಾಗೂ ಕಾರ್ಯಕರ್ತರನ್ನು…
ಮಡಿಕೇರಿ ಜೂ.29 NEWS DESK : ಮಡಿಕೇರಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರಾಗಿ ಕೌಸರ್ ಎಂ.ಬಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಿರಂಜನ್ ಕ್ಸೇವಿಯರ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಹನೀಫ್ ಪಿ.ಎ ಅವರ ಆದೇಶದ ಮೇರೆಗೆ ಪಕ್ಷ ಸಂಘಟನೆಗಾಗಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿರುವುದಾಗಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ತಿಳಿಸಿದ್ದಾರೆ.
ಮಡಿಕೇರಿ ಜೂ.29 NEWS DESK : ಹಾಲಿನ ದರ ಏರಿಕೆ ಮಾಡಿದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿ ಕುಮಾರ್, ಛಲವಾದಿ ನಾರಾಯಣ ಸ್ವಾಮಿ, ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಂ.ರುದ್ರೇಶ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ರೈತ ಮೋರ್ಚಾ ಪದಾಧಿಕಾರಿಗಳು ಮತ್ತು ಪ್ರಮುಖರು ಪಾಲ್ಗೊಂಡಿದ್ದರು.






