ಲೇಖಕ: admin

ಮಡಿಕೇರಿ ಡಿ.22 NEWS DESK : ಮೈಸೂರಿನ ಹೂಟುಗಳ್ಳಿಯ ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದ 11ನೇ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ಸಂತೋಷ ಕೂಟ ಸಂಘದ ಅಧ್ಯಕ್ಷ ಪೊನ್ನಚ್ಚನ ಪಿ.ಅಪ್ಪಯ್ಯ ಅವರ ಅಧ್ಯಕ್ಷತೆಯಲ್ಲಿ ಮೈಸೂರಿನ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೊಡಗು ಗೌಡ ಸಮಾಜಗಳ ಒಕ್ಕೂಟದ ಉಪಾಧ್ಯಕ್ಷರಾದ ಡಾ.ರಾಜೇಶ್ ತೇನನ ಹಾಗೂ ದೇವಜನ ಗೀತಾ ಮೊಂಟಡ್ಕ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು. ವಿವಿಧ ಕ್ಷೇತ್ರಗಳ ಸಾಧಕರಾದ ಕುಯ್ಯಮುಡಿ ಗೀತಾ, ಸಂಘದ ಹಿರಿಯರಾದ ದಾಯನ ಬಾಲಕೃಷ್ಣ ಹಾಗೂ ನಾಟೋಳನ ಭವಾನಿ ಮಾಚಯ್ಯ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದ ಪ್ರಗತಿಯ ಕುರಿತು ಮುಖ್ಯ ಅತಿಥಿಗಳು ಮೆಚ್ಚುಗೆಯ ಮಾತುಗಳನ್ನಾಡಿದರು. ಮಧ್ಯಾಹ್ನ ಸಂತೋಷ ಕೂಟದ ಪ್ರಯುಕ್ತ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು. ಸಂಘದ ಉಪಾಧ್ಯಕ್ಷ ಚೆರುಕನ…

Read More

ಮಡಿಕೇರಿ ಡಿ.22 NEWS DESK : ಪ್ರಕೃತಿಯ ಮಡಿಲಿನ ಮರಗೋಡು ಹೊಸ್ಕೇರಿ ಗ್ರಾಮದ ಬೇರಂಗಿ ಬೆಟ್ಟದ ‘ಬಯಲ ಈಶ್ವರ ಸನ್ನಿಧಿ’ಯಲ್ಲಿ ಏಳನೇ ವಾರ್ಷಿಕೋತ್ಸವ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾ ಭಕ್ತಿಗಳಿಂದ ಸಂಭ್ರಮದಿಂದ ನಡೆಯಿತು. ಮಡಿಕೇರಿ ತಾಲ್ಲೂಕಿನ ಮರಗೋಡು ಸಮೀಪದ ಬೇರಂಗಿ ಬೆಟ್ಟದ ಬಯಲ ಈಶ್ವರ ಸನ್ನಿಧಿಯಲ್ಲಿ ಉತ್ಸವದ ಅಂಗವಾಗಿ, ವಿಶಾಲ ವೃಕ್ಷದ ಬುಡದಲ್ಲಿರುವ ದೇವರ ವಿಗ್ರಹವನ್ನು ವಿವಿಧ ವರ್ಣದ ಪುಷ್ಪಗಳಿಂದ ಅಲಂಕರಿಸಿ, ವಿಶೇಷ ಪೂಜೆ, ಮಹಾ ಮಂಗಳಾರತಿಯನ್ನು ನೆರವೇರಿಸಲಾಯಿತು. ಉತ್ಸವದ ಪ್ರಯುಕ್ತ ಭಕ್ತಾದಿಗಳಿಗೆ ಅನ್ನದಾನವು ಇದೇ ಸಂದರ್ಭ ನಡೆಯಿತು. ಉತ್ಸವದ ನೇತೃತ್ವ ವಹಿಸಿದ್ದ ದೇವಸ್ಥಾನ ಸಮಿತಿಯ ಅಧ್ಯಕ್ಷ ಬಿ.ಎಂ.ರಾಮಣ್ಣ ಒಳಗೊಂಡಂತೆ, ಮಣಿ , ಶೇಷಪ್ಪ, ದಿನೇಶ್, ಪಾಪು, ಸುಹಾಸ್ ಸೇರಿದಂತೆ ಹಲ ಗ್ರಾಮಸ್ಥರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಡಿ.22 NEWS DESK : ಪಾಲಿಬೆಟ್ಟದ ಚೆಶೈರ್ ಹೋಮ್ಸ್ ಇಂಡಿಯಾ ಕೂರ್ಗ್ ವಿಶೇಷ ಶಾಲೆಯಲ್ಲಿ ಎರಡನೇಯ ವಿಶ್ವ ಧ್ಯಾನ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯೋಪಾಧ್ಯಾಯರಾದ ಶಿವರಾಜ್ ಅವರು ಧ್ಯಾನ ಮಾಡುವುದರಿಂದ ಆಗುವ ಪ್ರಯೋಜನದ ಕುರಿತು ಮಾಹಿತಿಯನ್ನು ನೀಡುವುದರ ಜೊತೆಗೆ ವಿಶೇಷ ಚೇತನ ವಿದ್ಯಾರ್ಥಿಗಳೊಂದಿಗೆ ಸೇರಿ ಸಾಮೂಹಿಕ ಧ್ಯಾನದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಶೇಷ ಶಾಲೆಯ ಅಧ್ಯಕ್ಷರಾದ ಗೀತಾಚೆಂಗಪ್ಪ, ಕಾರ್ಯದರ್ಶಿ ಆಶಾ ಸುಬ್ಬಯ್ಯ, ಖಜಾಂಚಿ  ಡಾ.ಎ.ಸಿ.ಗಣಪತಿ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Read More

ಮಡಿಕೇರಿ ಡಿ.22 NEWS DESK : ಕೊಡಗಿನ ಮೊಟ್ಟ ಮೊದಲ ಸೌಹಾರ್ದ ಸಹಕಾರಿ ‘ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತ’ ಶತಮಾನೋತ್ಸವದ ಸಂಭ್ರಮದಲ್ಲಿದೆ. ಇದರ ಅಂಗವಾಗಿ ಡಿ.25 ರಂದು ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಭ್ರಮದಿಂದ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಚೇತನ್ ಹೆಚ್.ಎಸ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸೌಹಾರ್ದ ಸಹಕಾರಿ ಶತಸಂಭ್ರಮದ ಕಾರ್ಯಕ್ರಮ ಜ.11 ರಂದು ನಗರದ ಗೌಡ ಸಮಾಜದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದರು.  ಡಿ.25 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲೆಯ ಶಿಕ್ಷಕರಿಗೆ, ಸಂಘದ ಸದಸ್ಯರಿಗೆ ಹಾಗೂ ಕೊಡಗು ಜಿಲ್ಲಾ ಶಿಕ್ಷಣ ಇಲಾಖಾ ನೌಕರರಿಗೆ ಕ್ರೀಡಾಕೂಟ ನಡೆಯಲಿದೆ. ಪುರುಷರಿಗೆ ವಾಲಿಬಾಲ್, ಹಗ್ಗ ಜಗ್ಗಾಟ, ಕಬ್ಬಡ್ಡಿ, ಮಹಿಳೆಯರಿಗೆ ಹಗ್ಗ ಜಗ್ಗಾಟ ಮತ್ತು ಥ್ರೋಬಾಲ್. ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ 100 ಮೀಟರ್ ಓಟದ ಸ್ಪರ್ಧೆ, ನಡೆಯುವ ಸ್ಪರ್ಧೆ, ಮೂಸಿಕಲ್ ಚೇರ್, ಭಾರತದ ಗುಂಡು ಎಸೆತ ಮತ್ತು ವಿಷದ ಚೆಂಡು…

Read More

ಮಡಿಕೇರಿ ಡಿ.22 NEWS DESK : ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ಣಂಗೇರಿ ಗ್ರಾಮದ ಮೊಣಕಾಲ್ಮುರಿ ಅಂಗನವಾಡಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ’ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯಿತಿ ಸದಸ್ಯರಾದ ಜಾನ್ಸನ್ ಪಿಂಟೋ ಮಕ್ಕಳಿಗೆ  ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಪಲ್ಸ್ ಪೋಲಿಯೊ ಲಸಿಕೆ ದಿನದಂದು ದೇಶಾದ್ಯಂತ ಲಕ್ಷಾಂತರ ಮಕ್ಕಳಿಗೆ ಲಸಿಕೆ ಹಾಕಲಾಗುತ್ತದೆ. ಇದರಿಂದ ಪೋಲಿಯೊ ಪ್ರಕರಣಗಳ ಸಂಖ್ಯೆಯನ್ನು ತೀವ್ರವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.

Read More

ವಿರಾಜಪೇಟೆ ಡಿ.22 NEWS DESK : ಕೊಡಗು ಜಿಲ್ಲೆ ಹಾಗೂ ಕೇರಳ ರಾಜ್ಯದ ನಡುವೆ ಪುರಾತನ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಇದಕ್ಕೆ ಸಾಕ್ಷಿ ಎಂದರೆ ಕೊಡಗಿನ ಜನತೆ ಕೇರಳದಲ್ಲಿ ಆಚರಣೆ ಮಾಡುವ ಮೈರೋಮಾಂಚನಗೊಳಿಸುವಂತಹ ಬೈತೂರು ಉತ್ಸವ, ಪಯ್ಯವೂರ್ ಉತ್ಸವವೂ ಹೌದು. ಕೊಡಗು ಮತ್ತು ಕೇರಳದ ನಡುವೆ ಇತಿಹಾಸ, ಸಂಸ್ಕೃತಿ ಮತ್ತು ಭೂಗೋಳಶಾಸ್ತ್ರದ ಆಳವಾದ ಸಂಬಂಧವಿದೆ; ಎರಡೂ ಪಶ್ಚಿಮ ಘಟ್ಟಗಳ ಭಾಗವಾಗಿರುವುದರಿಂದ ಧಾರ್ಮಿಕ ಆಚರಣೆಗಳು (ತೆಯ್ಯಂ), ತೆರೆ, ದೇವರುಗಳು, ದೇವಾಲಯದ ವಾಸ್ತುಶಿಲ್ಪ ಮತ್ತು ಸ್ಥಳೀಯರ ನಡುವೆ ಸಾಮ್ಯತೆಗಳಿವೆ, ವ್ಯಾಪಾರ ವಹಿವಾಟು, ದೇವರು, ಮದುವೆ ಹೀಗೆ ಅನೇಕ ರೀತಿಯಲ್ಲಿ ಸಂಬಂಧ ಮುಂದುವರೆದಿದೆ. ದೈವ ದೇವರ ವಿಚಾರಕ್ಕೆ ಬಂದರೆ ಕೇರಳದ ಮುತ್ತಪ್ಪನ ಬಗ್ಗೆ ತಿಳಿಯದವರೇ ಇಲ್ಲ. ಪರಶಿನಿಕಡವು ಅಂದರೆ ಮುತ್ತಪ್ಪ ಎಂದೇ ಹೇಳಬೇಕು. ಕೊಡಗಿನಲ್ಲಿಯೂ ಮುತ್ತಪ್ಪನ ಮಡಪುರಕ್ಕೆ ಕೊರತೆ ಇಲ್ಲ. ಸರ್ವರನ್ನು ದಯಾಪಾಲಿಸುವ ದೈವವಾಗಿ ಮುತ್ತಪ್ಪ ಕೊಡಗಿನೆಲ್ಲೆಡೆ ಸ್ಥಿತಗೊಂಡಿದ್ದಾನೆ. ಆದರೆ ಈ ಮುತ್ತಪ್ಪನ ನಿಜವಾದ ಮೂಲ ಸ್ಥಾನ ಮತ್ತು ಹಿನ್ನಲೆ ಬಹಳಷ್ಟು ಜನರಿಗೆ ಇನ್ನೂ ತಿಳಿದಿಲ್ಲ.…

Read More

ಸುಂಟಿಕೊಪ್ಪ ಡಿ.22 NEWS DESK : ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಬಿಳಿಗೇರಿ ಗ್ರಾಮದವರಾದ ನಿವೃತ್ತ ಲೆಪ್ಟಿನೆಂಟ್ ಜನರಲ್ ಡಾ. ಬಿ.ಎನ್.ಬಿ.ಎಂ.ಪ್ರಸಾದ್ ಎಸ್‍ಎಂವಿಎಸ್‍ಎಂ ಪಿಹೆಚ್‍ಎಸ್ ಅವರಿಗೆ ಮುಂಬೈನಲ್ಲಿ ಬಾಲಿವುಡ್ ಸಿನಿ ತಾರೆ ಮಿಸ್ ಮಲೈಕಾ ಅರೋರಾ ಅವರು ಟೆಸ್ಕಾನ್-2025 ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಲೆಪ್ಟಿನೆಂಟ್ ಜನರಲ್ ಡಾ.ಬಿ.ಎನ್.ಬಿ.ಎಂ.ಪ್ರಸಾದ್ ಎಸ್‍ಎಂವಿಎಸ್‍ಎಂ ಪಿಎಚ್‍ಎಸ್ ತಮ್ಮ ಸೇನಾ ಸೇವಾಧಿಯಲ್ಲಿ ಅತ್ಯುತ್ತಮ ಸೇವೆಗಾಗಿ ಹತ್ತು ಹಲವು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿದ್ದು, ಈ ಪೈಕಿ ಕಾರ್ಗಿಲ್ ಸಮರದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ಹಿನ್ನಲೆಯಲ್ಲಿ ಸೇನಾ ಮೆಡಲ್ ಶೌರ್ಯ ಪ್ರಶಸ್ತಿಯನ್ನು ಪಡೆದಿರುವುದು ಉಲ್ಲೇಖಾರ್ಹ. ಡಾ. ಪ್ರಸಾದ್ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಅವರ ವೈಧ್ಯರಾಗಿ ಸರಿ ಸುಮಾರು 1 ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ಭಾರತೀಯ ಸೇನಾ ಪಡೆಯ ವೈದಕೀಯ ವಿಭಾಗದ ಮಹಾ ನಿರ್ದೇಶಕರಾಗಿದ್ದಾಗ ಅಂದಿನ ರಾಷ್ಟ್ರಪತಿ ಭಾರತ ರತ್ನ ಪ್ರಣಬ್‍ಮುಖರ್ಜಿಯವರ ಗೌರವ ಸರ್ಜನ್ ಆಗಿ ಸೇವೆ ಸಲ್ಲಿಸಿದ್ದಾರೆ. ಇದನ್ನು ಗುರುತಿಸಿ ಭಾರತೀಯ ಸೇನಾ ಪಡೆಯ…

Read More

ಸುಂಟಿಕೊಪ್ಪ ಡಿ.22 NEWS DESK : ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಪಲ್ಸ್‍ಪೊಲಿಯೋ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಿತು. ಸುಂಟಿಕೊಪ್ಪದ ಪ್ರಥಮ ಪ್ರಜೆ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಅವರು ಗದ್ದೆಹಳ್ಳದ ಅಂಗನವಾಡಿಯಲ್ಲಿ ದಿನದ ಮೊದಲ ಪಲ್ಸ್‍ಪೊಲಿಯೋ ಹನಿಯನ್ನು ನೀಡಿದರು. ನಂತರ ಸುಂಟಿಕೊಪ್ಪ ಬಸ್‍ನಿಲ್ಧಾಣದಲ್ಲಿ ನಡೆದ ಪಲ್ಸ್‍ಪೊಲಿಯೋ ಕಾರ್ಯಕ್ರಮವನ್ನು ಉದ್ಘಾಟಿಸಿ, ಶ್ರೀದೇವಿ ಬಡಾವಣೆ ಮತ್ತು ಸುಂಟಿಕೊಪ್ಪ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Read More

ಸುಂಟಿಕೊಪ್ಪ ಡಿ.22 NEWS DESK : ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಬಿಳಿಗೇರಿ ಗ್ರಾಮದವರಾದ ನಿವೃತ್ತ ಲೆಪ್ಟಿನೆಂಟ್ ಜನರಲ್ ಡಾ. ಬಿ.ಎನ್.ಬಿ.ಎಂ.ಪ್ರಸಾದ್ ಎಸ್‍ಎಂವಿಎಸ್‍ಎಂ ಪಿಹೆಚ್‍ಎಸ್ ಅವರಿಗೆ ಥೋರಾಸಿಕ್ ಎಂಡೋ ಸ್ಕೋಪಿ ಸೊಸೈಟಿ ಆಫ್ ಇಂಡಿಯಾ ವತಿಯಿಂದ ನೀಡಲಾಗುವ ರಾಷ್ಟ್ರಮಟ್ಟದ ಜೀವಮಾನ ಸಾಧನೆ ಪ್ರಶಸ್ತಿ 2025 ನೀಡಿ ಗೌರವಿಸಲಾಗಿದೆ. ಲೆಪ್ಟಿನೆಂಟ್ ಜನರಲ್ ಡಾ.ಬಿ.ಎನ್.ಬಿ.ಎಂ.ಪ್ರಸಾದ್ ಎಸ್‍ಎಂವಿಎಸ್‍ಎಂ ಪಿಎಚ್‍ಎಸ್ ತಮ್ಮ ಸೇನಾ ಸೇವಾಧಿಯಲ್ಲಿ ಅತ್ಯುತ್ತಮ ಸೇವೆಗಾಗಿ ಹತ್ತು ಹಲವು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿದ್ದು, ಈ ಪೈಕಿ ಕಾರ್ಗಿಲ್ ಸಮರದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ಹಿನ್ನಲೆಯಲ್ಲಿ ಸೇನಾ ಮೆಡಲ್ ಶೌರ್ಯ ಪ್ರಶಸ್ತಿಯನ್ನು ಪಡೆದಿರುವುದು ಉಲ್ಲೇಖಾರ್ಹ. ಡಾ. ಪ್ರಸಾದ್ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಅವರ ವೈಧ್ಯರಾಗಿ ಸರಿ ಸುಮಾರು 1 ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ಭಾರತೀಯ ಸೇನಾ ಪಡೆಯ ವೈದಕೀಯ ವಿಭಾಗದ ಮಹಾ ನಿರ್ದೇಶಕರಾಗಿದ್ದಾಗ ಅಂದಿನ ರಾಷ್ಟ್ರಪತಿ ಭಾರತ ರತ್ನ ಪ್ರಣಬ್‍ಮುಖರ್ಜಿಯವರ ಗೌರವ ಸರ್ಜನ್ ಆಗಿ ಸೇವೆ ಸಲ್ಲಿಸಿದ್ದಾರೆ. ಇದನ್ನು ಗುರುತಿಸಿ ಭಾರತೀಯ ಸೇನಾ…

Read More

ನಾಪೋಕ್ಲು ಡಿ.22 NEWS DESK : ಮೈಸೂರಿನ ಹೂಟಗಳ್ಳಿ ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದ 11ನೇ ವರ್ಷದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಪೊನ್ನಚ್ಚನ ಪಿ.ಅಪ್ಪಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಗೌಡ ಸಮಾಜ ಸಭಾಂಗಣದಲ್ಲಿ ನಡೆದ ಮಹಾಸಭೆಯನ್ನು ಕೊಡಗು ಗೌಡ ಸಮಾಜಗಳ ಒಕ್ಕೂಟದ ಉಪಾಧ್ಯಕ್ಷರಾದ ಡಾ.ರಾಜೇಶ್ ತೇನನ ಮತ್ತು ದೇವಜನ ಗೀತಾ ಮೊಂಟಡ್ಕ ಉದ್ಘಾಟಿಸಿದರು. ಸಂಘದ ಉಪಾಧ್ಯಕ್ಷರಾದ ಬೆಪ್ಪುರನ ಲವ, ಕಾರ್ಯದರ್ಶಿ ಮುಕ್ಕಾಟಿ ಅರುಣ, ಸಹ ಕಾರ್ಯದರ್ಶಿ ಹೊಸೋಕ್ಲು ಅಪ್ಪಯ್ಯ, ಖಜಾಂಚಿ ಎಡಿಕೇರಿ ಪೂಣಚ್ಚ, ಸಲಹಾ ಸೂಚಕರಾಗಿ ನಡುಮನೆ ಚಂಗಪ್ಪ ಮತ್ತು ಚೆಟ್ಟಿಮಾಡ ಜನಾರ್ಧನ, ಸಂಘದ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿಶೇಷ ಸಾಧಕರಾದ ಕುಯ್ಯಮುಡಿ ಗೀತಾ ಹಾಗೂ ಸಂಘದ ಹಿರಿಯ ನಾಗರಿಕರಾದ ದಾಯನ ಬಾಲಕೃಷ್ಣ ಮತ್ತು ನಾಟೋಳನ ಭವಾನಿ ಮಾಚಯ್ಯ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಭೆಯಲ್ಲಿ ಸಂಘದ ಶ್ರೇಯೋಭಿವೃದ್ಧಿಗೆ ಚರ್ಚಿಸಿ ಸಲಹೆ ಸೂಚನೆಗಳನ್ನು ಪಡೆದು…

Read More