ಮಡಿಕೇರಿ ಜೂ.29 NEWS DESK : ಹೆಚ್ಡಿಎಫ್ಸಿ ಬ್ಯಾಂಕ್ ಮಡಿಕೇರಿ ಶಾಖೆ ವತಿಯಿಂದ ಹಾಕತ್ತೂರು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಛತ್ರಿ ಮತ್ತು ಬ್ಯಾಗ್ಗಳನ್ನು ವಿತರಿಸಲಾಯಿತು. ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕ್ ನ ಆರ್.ಎಂ.ಓ.ನಾರಾಯಣ, ರಾಜೇಂದ್ರ ಹಾಗೂ ಬ್ಯಾಂಕ್ ಅಧಿಕಾರಿಗಳಾದ ಪುನಿತ್ ಪೂಣಚ್ಚ ವಿದ್ಯಾರ್ಥಿಗಳಿಗೆ ಛತ್ರಿ ಹಾಗೂ ಬ್ಯಾಗ್ ಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ನೀತು ಕುಮಾರಿ, ಬ್ಯಾಂಕ್ ನ ಶ್ರೀನಿವಾಸ್., ಹಾಕತ್ತೂರು ತ್ರಿನೇತ್ರ ಯುವಕ ಸಂಘದ ಅಧ್ಯಕ್ಷರಾದ ಪಿ.ಪಿ. ಸುಕುಮಾರ್. ಸ್ಥಾಪಕ ಅಧ್ಯಕ್ಷರಾದ ಪಿ.ಇ.ದಿವಾಕರ್. ಮಾಜಿ ಅಧ್ಯಕ್ಷ ರಾದ ಟಿ.ಕೆ.ಸಂತೋಷ್. ಶಿಕ್ಷಕರಾದ ಎಂ.ವನಜಾ, ಸಿ.ಎಂ.ಮುನೀರ್, ಬಿ.ಎನ್.ಜಯಂತಿ, ಕೆ.ಕೆ.ಪುಷ್ಪ, ಕೆ.ಜಿ.ಭವಾನಿ ಶಂಕರ್, ಸಹನಾ ಹಾಜರಿದ್ದರು.
ಲೇಖಕ: admin
ಮಡಿಕೇರಿ ಜೂ.29 NEWS DESK : ಫವಿ ಸೇವಾ ಟ್ರಸ್ಟ್ ವತಿಯಿಂದ ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿಪೂರ್ವ ಕಾಲೇಜಿಗೆ ಲ್ಯಾಪ್ಟಾಪ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಪವಿ ಸೇವಾ ಟ್ರಸ್ಟ್ ಸಂಚಾಲಕ ಅಳಮೇಂಗಡ ಮಾಳವಿಕಾ ರಮೇಶ್ ಮಾತನಾಡಿ, ನಾಗರಹೊಳೆ ಅಭಯ ಅರಣ್ಯದಂಚಿನ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣ ಪಡೆಯುತ್ತಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 25 ಲ್ಯಾಪ್ಟಾಪ್ ಗಳನ್ನು ವಿದ್ಯಾಸಂಸ್ಥೆಯ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಅವರಿಗೆ ಹಸ್ತಾಂತರಿಸಲಾಗಿದೆ ಎಂದರು. ಸಂಸ್ಥೆಯ ಉಪಾಧ್ಯಕ್ಷ ಕಾಯಮಾಡ ರಾಜ, ಪ್ರಾಂಶುಪಾಲ ಪ್ರಭು, ಮುಖ್ಯ ಶಿಕ್ಷಕ ಚಂದ್ರಶೇಖರ್, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಮಡಿಕೇರಿ ಜೂ.29 NEWS DESK : ಕೊಡಗಿನ ಅಪ್ರತಿಮ ಸ್ವಾತಂತ್ರ್ಯ ಸೇನಾನಿಗಳಾದ ಪಂದ್ಯಂಡ ಬೆಳ್ಯಪ್ಪ ಹಾಗೂ ಸೀತಮ್ಮ ಬೆಳ್ಯಪ್ಪ ಜೋಡಿ ಪ್ರತಿಮೆಯನ್ನೊಳಗೊಂಡ ಸ್ಮಾರಕವನ್ನು ಮಡಿಕೇರಿಯ ಕೇಂದ್ರ ಸ್ಥಾನದಲ್ಲಿ ಸ್ಥಾಪಿಸಿ ಅಭಿವೃದ್ಧಿ ಪಡಿಸುವಂತೆ ಯುನೈಟೆಡ್ ಕೊಡವ ಆರ್ಗನೈಜೇಷನ್ – ಯುಕೊ ಅಧ್ಯಕ್ಷ ಕೊಕ್ಕಲೇಮಾಡ ಮಂಜು ಚಿಣ್ಣಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೊಡಗು ಕರ್ನಾಟಕದೊಂದಿಗೆ ವಿಲೀನವಾದ ನಂತರ ಎಲ್ಲಾ ಸರ್ಕಾರಗಳು ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರನ್ನು ನಿರ್ಲಕ್ಷಿಸುತ್ತಲೇ ಬಂದಿದ್ದು, ಕೊಡಗಿನ ಸ್ವಾತಂತ್ರ್ಯ ಇತಿಹಾಸವನ್ನೇ ತಿರುಚಿ ನೈಜ ಇತಿಹಾಸವನ್ನು ಮರೆಮಾಚುವ ಹುನ್ನಾರ ನಡೆಯುತ್ತ ಬಂದಿದೆ ಎಂದು ಆರೋಪಿಸಿರುವ ಅವರು, ಹೀಗೆಯೇ ಮುಂದುವರಿದರೆ ಭಾರತ ಸ್ವಾತಂತ್ರ್ಯ ಇತಿಹಾಸದಲ್ಲಿ ಕೊಡಗು ಕಣ್ಮರೆಯಾಗಲಿದೆ. ಈ ನಿಟ್ಟಿನಲ್ಲಿ ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳು ಶಾಶ್ವತವಾಗಿ ಜನಮಾನಸದಲ್ಲಿ ಉಳಿಯುವಂತೆ ಮಾಡಲು ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ನಿಟ್ಟಿನಲ್ಲಿ ಮೊದಲ ಹಂತದಲ್ಲಿ, ಮಡಿಕೇರಿಯ ಪ್ರಮುಖ ಸ್ಥಳದಲ್ಲಿ ಪಂದ್ಯಂಡ ಬೆಳ್ಯಪ್ಪ ಹಾಗೂ ಸೀತಮ್ಮ ಬೆಳ್ಯಪ್ಪ ನವರ ಪರಿಚಯ ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರವನ್ನು…
ವಿರಾಜಪೇಟೆ ಜೂ.29 NEWS DESK : ಮಾದಕ ವ್ಯಸನ ಕೇವಲ ವ್ಯಕ್ತಿಯನ್ನಷ್ಟೇ ಹಾಳು ಮಾಡುವುದಿಲ್ಲ. ಕುಟುಂಬ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತದೆ ಎಂದು ವಿರಾಜಪೇಟೆ ವಿಭಾಗದ ಆರಕ್ಷಕ ಉಪ ಅಧೀಕ್ಷಕರಾದ ಮೋಹನ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಆರಕ್ಷಕ ಇಲಾಖೆ ಮತ್ತು ಕಾವೇರಿ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಅಂತರ್ ರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮ ಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಪ್ರಸ್ತುತ ಸಮಾಜದ ಯುವ ವರ್ಗವು ಮಾದಕವಸ್ತು ಸೇವನೆಗೆ ದಾಸರಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಮಾದಕದ್ರವ್ಯ ವ್ಯಸನಿಯಾದ ವ್ಯಕ್ತಿಯನ್ನು ಕುಟುಂಬ ತ್ಯಜಿಸುತ್ತದೆ.ಅಲ್ಲದೆ ಸಮಾಜದಿಂದ ಧಿಕ್ಕರಿಸುವಂತನಾಗುತ್ತಾನೆ.ಇದು ಜೇಡ ಬಲೆಯಂತೆ ಸುಳಿಯಲ್ಲಿ ಸಿಲುಕಿದ ವ್ಯಕ್ತಿ ಹೊರಬರಲು ಹರ ಸಹಾಸ ಪಡುವ ಪ್ರಮೇಯ ಎದುರಾಗುತ್ತದೆ. ಮಾದಕದ್ರವ್ಯ ಮತ್ತು ವಸ್ತುಗಳ ಉಪಯೋಗ ಹಾಗೂ ಮಾರಾಟ ಕಾನೂನು ಬಾಹಿರವಾಗಿದೆ. ವ್ಯಸನದ ಆರಂಭದಲ್ಲೇ ತ್ಯಜಿಸುವ ಮನಸ್ಸು ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ವಿರಾಜಪೇಟೆ ವೃತ್ತ ನಿರೀಕ್ಷ ಶಿವರುದ್ರ…
ಮಡಿಕೇರಿ ಜೂ.29 NEWS DESK : ಕೊಡಗು ಪತ್ರಕರ್ತರ ಸಂಘ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಜು.1 ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ಪತ್ರಿಕಾ ದಿನಾಚರಣೆ ನಡೆಯಲಿದೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್ ಅವರ ಅಧ್ಯಕ್ಷತೆಯಲ್ಲಿ ಬೆಳ್ಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಮ್ಯಾನೆಂಜಿಂಗ್ ಟ್ರಸ್ಟಿ ಎಂ.ಪಿ.ಕೇಶವ ಕಾಮತ್ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಸಾಹಿತಿಗಳು, ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ ದೇರ್ಲ ಆಗಮಿಸಲಿದ್ದಾರೆ. ಗಡಿನಾಡ ಸಂಚಾರಿ ಸಂಪಾದಕ ಟಿ.ಪಿ.ರಮೇಶ್ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಹಿರಿಯ ಪತ್ರಕರ್ತರಾದ ಶಕ್ತಿ ದಿನಪತ್ರಿಕೆಯ ಸಂಪಾದಕರಾದ ಜಿ. ಚಿದ್ವಿಲಾಸ್, ಗಡಿನಾಡ ಸಂಚಾರಿ ಸಂಪಾದಕ ಟಿ.ಪಿ.ರಮೇಶ್ ,ಸುಂಟಿಕೊಪ್ಪದ ಸಂಯುಕ್ತ ಕರ್ನಾಟಕ ವರಿಗಾರರಾದ ಕೆ.ಹೆಚ್.ಶಿವಣ್ಣ, ಗೋಣಿಕೊಪ್ಪಲು ಸುದ್ದಿ ಸಂಸ್ಥೆ ಸಂಪಾದಕ ಟಿ.ಎಲ್. ಶ್ರೀನಿವಾಸ್ ಹಾಗೂ ಸೋಮವಾರಪೇಟೆ ವಿಜಯ ಕರ್ನಾಟಕ ವರದಿಗಾರ ತೇಲಪಂಡ ಕವನ್ ಕಾರ್ಯಪ್ಪ ಇವರುಗಳನ್ನು ಸನ್ಮಾನಿಸಲಾಗುವುದು ಎಂದು ಕೊಡಗು…
ಮಡಿಕೇರಿ ಜೂ.29 NEWS DESK : ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ‘ಗ್ಲಾಸ್ ಬ್ರಿಡ್ಜ್’ಗಳನ್ನು ಸೆಪ್ಟೆಂಬರ್, 15 ರವರೆಗೆ ಸ್ಥಗಿತಗೊಳಿಸುವಂತೆ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೆಪ್ಟೆಂಬರ್, 15 ರವರೆಗೆ ಗ್ಲಾಸ್ ಬ್ರಿಡ್ಜ್ ಸ್ಥಗಿತ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಿಂದ ಆದೇಶ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಜಿಲ್ಲೆಯಲ್ಲಿ ಯಾವುದೇ ರೀತಿಯ ಸುರಕ್ಷತೆ ಇಲ್ಲದೆ ಗ್ಲಾಸ್ ಬ್ರಿಡ್ಜ್ಗಳ ನಿರ್ಮಾಣ ಮಾಡಲಾಗಿದೆ. ಸುರಕ್ಷತೆ ಇಲ್ಲದಿರುವ ಗ್ಲಾಸ್ ಬ್ರಿಡ್ಜ್ಗಳಿಗೆ ಪಿಡಿಒಗಳು ಹೇಗೆ ಎನ್ಒಸಿ ನೀಡುತ್ತಾರೆ. ಸಭೆಯ ನಡಾವಳಿ ಮಾಡಿಕೊಂಡು ಎನ್ಒಸಿ ನೀಡಿದರೆ ಸಾಕೆ, ಸುರಕ್ಷತೆ ಬೇಡವೇ ಎಂದು ಜಿಲ್ಲಾಧಿಕಾರಿ ಅವರು ಪ್ರಶ್ನಿಸಿದರು. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ‘ಗ್ಲಾಸ್ ಬ್ರಿಡ್ಜ್’ ವೀಕ್ಷಣೆಗೆ ಭೇಟಿ ನೀಡುವುದರಿಂದ ಏನಾದರೂ ತೊಂದರೆಯಾದಲ್ಲಿ ಯಾರೂ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ ಎಂದು ಪಂಚಾಯತ್ ರಾಜ್ ಅಧಿಕಾರಿಗಳಿಗೆ ಎಚ್ಚರಿಸಿದರು. ಜಿಲ್ಲೆಯಲ್ಲಿ ಉತ್ತಮ…
ಮಡಿಕೇರಿ ಜೂ.28 NEWS DESK : ಇಡೀ ಮನುಕುಲದ ಮಹಾನ್ ಶಕ್ತಿಯಾಗಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಇತ್ತೀಚಿನ ಸಾಮಾಜಿಕ ಮತ್ತು ಜಾತಿ ವ್ಯವಸ್ಥೆಯು ಒಂದು ಸಮುದಾಯಕ್ಕೆ ಸೀಮಿತಗೊಳಿಸಿರುವುದು ಸರಿಯಲ್ಲ ಎಂದು ಮಡಿಕೇರಿಯ ಆರ್.ಆರ್.ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಬಿ.ಸಿ.ನವೀನ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಗರಸಭೆಯ ಪೌರಕಾರ್ಮಿಕರಿಗೆ ಸ್ವೆಟರ್ ಹಾಗೂ ಶ್ರೀ ಶಕ್ತಿ ವೃದ್ಧಾಶ್ರಮದ ಸಂಧ್ಯಾಕಾಲದ ಬಂಧುಗಳಿಗೆ ಬಟ್ಟೆ ವಿತರಣೆ ಮಾಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ.ಬಿ.ಸಿ.ನವೀನ್ ಕುಮಾರ್, ಡಾ.ಅಂಬೇಡ್ಕರ್ ಅವರು ಶೋಷಿತ ಸಮಾಜದ ಧ್ವನಿಯಾಗಿ, ಆತ್ಮಸಾಕ್ಷಿಯನ್ನು ಜಾಗೃತಗೊಳಿಸುವ ಕೆಲಸವನ್ನು ಶಿಕ್ಷಣದ ಮೂಲಕ ಮಾಡಿದ್ದಾರೆ. ಅವರೊಬ್ಬರು ಪರಿಪೂರ್ಣ ವ್ಯಕ್ತಿತ್ವ ಹೊಂದಿರುವವರು. ಜ್ಞಾನ, ಬದ್ಧತೆ ಮತ್ತು ಸಾಮಾಜಿಕ ಕಳಕಳಿ ಹೊಂದಿರುವ ಅವರು ಕೇವಲ ಒಂದು ಜಾತಿಗೆ ಸೀಮಿತರಾಗಿಲ್ಲ ಎಂದರು. ಅಂಬೇಡ್ಕರ್ ಅವರು ಈ ಸಮಾಜದ ಶೋಷಿತ ವರ್ಗ,…
ಮಡಿಕೇರಿ ಜೂ.28 NEWS DESK : ದೇವಭಾಷೆಗೆ ಸರಿಸಮವಾಗಿ ಕನ್ನಡ ಭಾಷೆಯನ್ನು ನಾಡು ಭಾಷೆಯಾಗಿ ಬೆಳೆಸುವಲ್ಲಿ ಮತ್ತು ವಚನಗಳ ಮೂಲಕವೇ ಜನಸಾಮಾನ್ಯರಿಗೆ ತಲುಪಿಸುವಲ್ಲಿ ಶರಣರು ನೀಡಿದ ಕೊಡುಗೆಗಳು ಸಾಮಾನ್ಯವಾದುದ್ದಲ್ಲವೆಂದು ಅರಮೇರಿ ಕಳಂಚೇರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅರಮೇರಿ ಕಳಂಚೇರಿ ಮಠ ಮತ್ತು ಎಸ್ಎಂಎಸ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಅರಮೇರಿ ಮಠದಲ್ಲಿ ನಡೆದ ಧರ್ಮಚಿಂತಾಮಣಿ ಮಹಾಶರಣ ಲಿಂಗೈಕ ಮಾಗನೂರು ಬಸಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಕರ್ನಾಟಕದ ಇತಿಹಾಸದಲ್ಲಿ 12ನೇ ಶತಮಾನವು ಚಿರಸ್ಮರಣೀಯವಾಗಿದ್ದು, ಈ ಶತಮಾನವನ್ನು ಶರಣಯುಗವೆಂದು ಕರೆಯುತ್ತಾರೆ. ಶಿವಶರಣರು ವಚನ ಸಾಹಿತ್ಯಸೌಧದ ಮೂಲಕ ನಾಡುನುಡಿಗಾಗಿ ದುಡಿದು ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದವರೆಂದು ಸ್ವಾಮೀಜಿ ಹೇಳಿದರು. ಧ್ವನಿ ಇಲ್ಲದವರ ಧ್ವನಿಯಾಗಿ ಶರಣರು ವಚನಗಳನ್ನು ಜನಸಮುದಾಯಕ್ಕೆ ನೀಡುವುದರ ಮೂಲಕ ತಾರತಮ್ಯ ಸಮಾಜವನ್ನು ಸಮಸಮಾಜವಾಗಿ ನಿರ್ಮಿಸಲು ಅವಿತರವಾಗಿ ಶ್ರಮಿಸಿದರು. ಶರಣರು ವಚನಗಳನ್ನು ಸುಲಲಿತ ಕನ್ನಡದಲ್ಲಿ ಹೇಳುವ ಮೂಲಕ ಜನ ಸಾಮಾನ್ಯರ ಬದುಕಿಗೆ…
ನವದೆಹಲಿ, ಜೂ.28 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದರು. ರಾಜ್ಯದಲ್ಲಿ ಬೆಳಗಾವಿ – ಹುನಗುಂದ- ರಾಯಚೂರು (NH748ಂ), ಬೆಂಗಳೂರು ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿ, ಸೂರತ್ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್ಫೀಲ್ಡ್ ಕಾರಿಡಾರ್ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿಗಳು ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದರು. ರಾಜ್ಯದಲ್ಲಿ 5225ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು. ರಾಜ್ಯ ಸರ್ಕಾರದ ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿರುವ ಇತರ…
ಮಡಿಕೇರಿ ಜೂ.28 NEWS DESK : ಕಳೆದ ಐದಾರು ವರ್ಷಗಳಿಂದ ಸ್ಥಗಿತವಾಗಿದ್ದ ಸೋಮವಾರಪೇಟೆ ತಾಲ್ಲೂಕಿನ ಕುಗ್ರಾಮ ಸೂರ್ಲಬ್ಬಿಯನ್ನು ಸಂಪರ್ಕಿಸುವ ಬಸ್ ಸಂಚಾರ ಗ್ರಾಮಸ್ಥರ ಪ್ರತಿಭಟನೆಯಿಂದ ಪುನರಾರಂಭಗೊಂಡಿದೆ. ಇಂದು ಬೆಳಗ್ಗೆ ಸೂರ್ಲಬ್ಬಿ ವಿಭಾಗದ ಹತ್ತಾರು ಗ್ರಾಮಸ್ಥರು ಮಡಿಕೇರಿಗೆ ಆಗಮಿಸಿ, ಕೆಎಸ್ಆರ್ಟಿಸಿ ಡಿಪೋ ಮುಖ್ಯ ದ್ವಾರದಲ್ಲೆ ಪ್ಲಾಸ್ಟಿಕ್ ಟಾರ್ಪಾಲ್ ಹರಡಿಕೊಂಡು ಕುಳಿತು ಪ್ರತಿಭಟನೆ ನಡೆಸಿ ತಕ್ಷಣ ಮಡಿಕೇರಿಯಿಂದ ಸೂರ್ಲಬ್ಬಿವರೆಗೆ ಬಸ್ ಪುನರಾರಂಭಕ್ಕೆ ಒತ್ತಾಯಿಸಿದರು. ಗ್ರಾಮಸ್ಥರ ಪ್ರತಿಭಟನೆಯಿಂದ ಕೆಲ ಕಾಲ ಡಿಪೋ ಅಧಿಕಾರಿಗಳು ಏನು ಮಾಡಲು ತೋಚದೆ ಕಕ್ಕಾಬಿಕ್ಕಿಯಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ಬಗ್ಗೆ ಗಮನ ಹರಿಸಿ ಬಸ್ ಸಂಚಾರ ಪುನರಾರಂಭಿಸಲಾಗುವುದು, ಪ್ರತಿಭಟನೆಯಿಂದ ಹಿಂದಕ್ಕೆ ಸರಿಯಿರಿ ಎಂದು ಅಧಿಕಾರಿಗಳು ಮನವಿ ಮಾಡಿದರು. ಈ ಬಗ್ಗೆ ಲಿಖಿತ ರೂಪದಲ್ಲಿ ಭರವಸೆ ನೀಡಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದರು. ಅಂತಿಮವಾಗಿ ಪ್ರತಿಭಟನಾಕಾರರ ಆಗ್ರಹಕ್ಕೆ ಮಣಿದ ಸಹಾಯಕ ಸಂಚಾರಿ ಮೇಲ್ವಿಚಾರಕ ಈರಸಪ್ಪ ಅವರು, ತಕ್ಷಣವೇ ಜಾರಿಗೆ ಬರುವಂತೆ ಬಸ್ ಮಾರ್ಗವನ್ನು ಪ್ರಾರಂಭಿಸುವುದಾಗಿ ತಿಳಿಸಿದರು. ಸೂರ್ಲಬ್ಬಿ ಗ್ರಾಮ ಅತ್ಯಂತ ಕುಗ್ರಾಮ ಎಂಬ ಹಣೆಪಟ್ಟಿ…






