ಲೇಖಕ: admin

ಮಡಿಕೇರಿ ಜೂ.28 NEWS DESK : ಕೊಡಗು ಜಿಲ್ಲಾ ಪೊಲೀಸ್ ಮತ್ತು ಮರಗೋಡು ಭಾರತಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ದಿನಾಚರಣೆ ನಡೆಯಿತು. ಮರಗೋಡಿನ ಭಾರತಿ ವಿದ್ಯಾಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಗ್ರಾಮಾಂತರ ಠಾಣಾಧಿಕಾರಿ ಪೊಲೀಸ್ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಯುವ ಜನಾಂಗವು ಕ್ಷಣಿಕ ಸುಖದ ಆಸೆಗೆ ಬಿದ್ದು ತಮ್ಮ ಸುಂದರ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು, ಡ್ರಗ್ಸ್ ನಂತಹ ಮಾದಕ ವಸ್ತುಗಳ ಸಂಪರ್ಕಕ್ಕೆ ಬಂದವರು ಎಂದೂ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯವಿಲ್ಲ. ಮಾದಕ ವಸ್ತುಗಳ ಬಳಕೆ ಮಾಡಿದವರು ಎಲ್ಲವನ್ನೂ ಕಳೆದುಕೊಳ್ಳಬೇಕಾಗುತ್ತದೆ. ಇಂತಹ ದುಶ್ಚಟಗಳ ಬಗ್ಗೆ ಎಲ್ಲರೂ ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಿದರು. ಡ್ರಗ್ಸ್ ಪೂರೈಕೆ ಮತ್ತು ಬಳಕೆಯ ಕುರಿತು ಮಾಹಿತಿ ಇದ್ದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ವ್ಯಸನ ಮುಕ್ತ ಸಮಾಜದ ನಿರ್ಮಾಣವಾಬೇಕು ಎಂದು ಕರೆ ನೀಡಿದರು. ವಿದ್ಯಾಸಾಗರ ಕಲಾವೇದಿಕೆ ಕುಶಾಲನಗರ ಇ.ರಾಜು…

Read More

ಟಿ.ಶೆಟ್ಟಿಗೇರಿ ಜೂ.28  NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಶ್ರೇಯೋಭಿವೃದ್ಧಿಗೆ ಕಾಂಗ್ರೆಸ್ ಕಾರ್ಯಕರ್ತರು ಟಿ.ಶೆಟ್ಟಿಗೇರಿ ಶ್ರೀ ಕೊರಕೋಟು ಅಯ್ಯಪ್ಪ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕಾಂಗ್ರೆಸ್ ವಲಯ ಅಧ್ಯಕ್ಷ ಪ್ರಭು ಸುಬ್ಬಯ್ಯ, ಹಿರಿಯ ಮುಖಂಡ ಅಪ್ಪಚಂಗಡ ಪಿ.ಮೋಟಯ್ಯ, ಟಿ .ಶೆಟ್ಟಿಗೇರಿ ಪಂಚಾಯಿತಿ ಮಾಜಿ ಅಧ್ಯಕ್ಷ ಪೆಮ್ಮಂಡ ರಾಜ ಕುಶಾಲಪ್ಪ, ಆಲೆಮಾಡ ಸೋಮಣ್ಣ, ತೀತಿರ ದೊರೆ ಗಣಪತಿ ಮತ್ತು ಹಲವಾರು ಕಾರ್ಯಕರ್ತರು ಪೊನ್ನಣ್ಣ ಅವರು ಜನಪರ ಕೆಲಸಗಳಿಗೆ ಮತ್ತಷ್ಟು ಮತ್ತಷ್ಟು ಶಕ್ತಿ ಲಭಿಸಲಿ ಎಂದು ಪ್ರಾರ್ಥಿಸಿದರು. ಶ್ರೀ ಅಯ್ಯಪ್ಪ ದೇವಾಲಯದ ಅರ್ಚಕ ವಸಂತ ಪೂಜೆ ನೆರವೇರಿಸಿದರು.

Read More

ಸುಂಟಿಕೊಪ್ಪ ಜೂ.28 NEWS DESK : ಸಂತ ಅಂತೋಣಿ ದೇವಾಲಯದ ವಾರ್ಷಿಕೋತ್ಸವಕ್ಕೆ ಮಡಿಕೇರಿ ಸಂತ ಮೈಕಲ್ಸ್ ಶಿಕ್ಷಣ ಸಂಸ್ಥೆ ವ್ಯವಸ್ಥಾಪಕ ರೇ.ಫಾ. ಸಂಜಯ್ ಕುಮಾರ್ ಹಾಗೂ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ವಿಜಯಕುಮಾರ್ ಮೂಲಕ ಚಾಲನೆ ನೀಡಿದರು. ರೇ.ಫಾ. ಸಂಜಯ್ ಕುಮಾರ್ ಧ್ವಜಾರೋಹಣ ನೇರವೇರಿಸುವ ಮೂಲಕ ಚಾಲನೆ ನೀಡಿದರು. ವಾರ್ಷಿಕೋತ್ಸವದ ಅಂಗವಾಗಿ 3 ದಿನಗಳ ಕಾಲ ದೇವಾಲಯದಲ್ಲಿ ವಿಶೇಷ ಬಲಿಪೂಜೆ, ಆರಾಧನೆ ನೆರವೇರಲಿದೆ. ಇಂದು ಸಂಜೆ ಬಲಿಪೂಜೆ ಹಾಗೂ ಆರಾಧನೆಯನ್ನು ಡೊರ್ನಹಳ್ಳಿಯ ಸಂತ ಅಂತೋಣಿ ಬಸಿಲಿಕಾ ಆಡಳಿತಾಧಿಕಾರಿ ವಂ.ಗುರುಗಳಾದ ಪ್ರವೀಣ್ ಪೇಧ್ರು ನೇರವೇರಿಸಲಿದ್ದಾರೆ. ಜೂ.29 ರಂದು ಸೋಮವಾರಪೇಟೆ ಜಯವೀರ ಮಾತೆ ದೇವಾಲಯದ ಧರ್ಮಗುರುಗಳಾದ ವಂ.ರೇ.ಫಾ. ಅವಿನಾಶ್ ಹಾಗೂ ಧರ್ಮಗುರುಗಳಾದ ವಿಜಯಕುಮಾರ್ ನೇರವೇರಿಸಲಿದ್ದಾರೆ. ಜೂ.30 ರಂದು ಸಂಜೆ 5.30 ಗಂಟೆಗೆ ಸಂತ ಅಂತೋಣಿಯವರ ಹಬ್ಬದ ಅಡಂಬರ ಗಾಯನ ಬಲಿಪೂಜೆ ನೆರವೇರಲಿದೆ. ಪರಮ ಪ್ರಸಾದ ಆರಾಧನೆಯನ್ನು ಹೆಚ್.ಡಿಕೋಟೆಯ ಸೈಂಟ್ ಮೇರಿಸ್ ಚರ್ಚ್‍ನ ಬರ್ನಾಡ್ ಪ್ರಕಾಶ್ ಬಾರ್ನಿಸ್ ನೇರವೇರಿಸಲಿದ್ದಾರೆ ಎಂದು ದೇವಾಲಯದ ಧರ್ಮಗುರುಗಳಾದ ವಿಜಯಕುಮಾರ್ ತಿಳಿಸಿದ್ದಾರೆ.…

Read More

   ಕುಶಾಲನಗರ ಜೂ.28 NEWS DESK :  ಸಮುದಾಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ರೋಟರಿ ಸದಸ್ಯರು ತಮ್ಮ ಯೋಜನೆಗಳ ಚಮತ್ಕಾರ ಅನಾವರಣಗೊಳಿಸಬೇಕು ಎಂದು ಮಡಿಕೇರಿಯ ರೋಟರಿ ಮಿಸ್ಟಿ ಹಿಲ್ಸ್ ನ ಮಾಜಿ ಸಹಾಯಕ ರಾಜ್ಯಪಾಲ ಡಾ. ಸಿ.ಆರ್.ಪ್ರಶಾಂತ್ ಕರೆ ನೀಡಿದ್ದಾರೆ. ಕುಶಾಲನಗರ ರೋಟರಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನೆರವೇರಿಸಿ ಮಾತನಾಡಿದರು. ಮಹಿಳಾ ಶಕ್ತಿ ಮೂಲಕ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಲು ಸಾಧ್ಯ ಎಂದ ಅವರು, ರೋಟರಿಯಲ್ಲಿ ಮಹಿಳಾ ಸದಸ್ಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕಾಗಿದೆ ಎಂದರು. ಹೆಚ್ಚಿನ ಪ್ರಮಾಣದಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಆ ಮೂಲಕ ಸಮಾಜದ ಅಭಿವೃದ್ಧಿ ಸಾಧ್ಯ ಎಂದರು. ಕುಶಾಲನಗರ ರೋಟರಿ ಕಾರ್ಯ ವೈಖರಿಯ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ರೋಟರಿ ಕುಶಾಲನಗರದ ನೂತನ ಅಧ್ಯಕ್ಷರಾಗಿ ಸಿ ಬಿ ಹರೀಶ್ ,ಕಾರ್ಯದರ್ಶಿಯಾಗಿ ಡಿ.ಡಿ.ಕಿರಣ್ ಅವರು ಆಯ್ಕೆಗೊಂಡಿದ್ದು ಅವರ ತಂಡಕ್ಕೆ ಪ್ರಮಾಣವಚನ ಬೋಧಿಸಿದರು. ಹಿಂದಿನ ಸಾಲಿನ ಅಧ್ಯಕ್ಷರಾಗಿದ್ದ ಸುನೀತಾ ಮಹೇಶ್ ಅವರಿಂದ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು. ಈ…

Read More

  ಮಡಿಕೇರಿ ಜೂ.28 NEWS DESK : ಪಾರಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ಮತ್ತು ಅಕ್ರಮ ಕಳ್ಳ ಸಾಗಣೆ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯೋಪದ್ಯಾಯರಾದ ವೇದಪ್ರಸಾದ್ ಅವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯದ ಕೆಡುಕುಗಳು ಮತ್ತು ಸಾಮಾಜಿಕ ಪಿಡುಗಾಗಿ ಕಾಡುತ್ತಿರುವ ಮಾದಕ ದ್ರವ್ಯಗಳ ನಿರ್ಮೂಲನೆಯ ಕುರಿತು ಹಾಗೂ ಅವ್ಯಾಹತವಾಗಿ ನಡೆಯುತ್ತಿರುವ ಕಳ್ಳ ಸಾಗಣೆಯ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದರಲ್ಲದೆ, ಸಾಮಾಜಿಕ ಪಿಡುಗು ನಿವಾರಿಸಿ, ಸಮ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ದೆಸೆಯಿಂದಲೇ ಸರ್ವರೂ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಸಹ ಶಿಕ್ಷಕ ಕಿಶೋರ್ ಕುಮಾರ್  ಪ್ರತಿಜ್ಞಾ ವಿಧಿ ಬೋಧಿಸಿದರು. ಶಿಕ್ಷಕಿಯರಾದ ಸುಮಿತ್ರ, ಮಂಜುಳ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.  

Read More

ಮಡಿಕೇರಿ ಜೂ.27 NEWS DESK : ನಿರಂತರ ಮಳೆಯಿಂದಾಗಿ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕೊಯನಾಡು ಸರ್ಕಾರಿ ಶಾಲೆಯ ಹಿಂಭಾಗದ ಗುಡ್ಡದ ಮಣ್ಣು ಕುಸಿದು ಶಾಲೆಯ ಗೋಡೆ ಮತ್ತು ಕಿಟಕಿಗೆ ಹಾನಿಯಾಗಿದೆ. ದೊಡ್ಡ ದೊಡ್ಡ ಕಲ್ಲು ಸಹಿತ ಮಣ್ಣು ಬಂದ ರಭಸಕ್ಕೆ ಶಾಲೆಯ ಗೋಡೆಯ ಒಂದು ಭಾಗ ಮತ್ತು ಕಿಟಕಿಯೊಂದು ಬಿದ್ದಿದೆ. ತರಗತಿಯೊಳಗೆ ಗೋಡೆ, ಗುಡ್ಡದ ಮಣ್ಣು ಮತ್ತು ಕಲ್ಲು ಬಿದ್ದಿದ್ದು, ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದ್ದ ಕಾರಣ ಭಾರೀ ಅನಾಹುತವೊಂದು ತಪ್ಪಿದೆ. ::: ದುಬಾರೆಯಲ್ಲಿ ನಿರ್ಬಂಧ ::: ಕೊಡಗು ಜಿಲ್ಲೆಯ ಹೆಸರುವಾಸಿ ಪ್ರವಾಸಿತಾಣ ದುಬಾರೆ ಭಾಗದಲ್ಲಿ ನಿರಂತರ ಮಳೆಯಿಂದ ನದಿ ತುಂಬಿ ಹರಿಯುತ್ತಿದೆ. ಮುಂಜಾಗೃತಾ ಕ್ರಮವಾಗಿ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ರ‍್ಯಾಫ್ಟಿಂಗ್ ಜಲಕ್ರೀಡೆಯನ್ನು ಮಳೆಯ ಕಾರಣ ಈಗಾಗಲೇ ಸ್ಥಗಿತಗೊಳಿಸಲಾಗಿದೆ.

Read More

*ರಾಜ್ಯದ ಹಿತ ದೃಷ್ಟಿಯಿಂದ ಸೇರಿರುವ ಸಭೆ ಇದಾಗಿದ್ದು ಇದರಲ್ಲಿ ರಾಜಕೀಯ ಇಲ್ಲ: ಸಿ.ಎಂ.ಸಿದ್ದರಾಮಯ್ಯ* ಕೇಂದ್ರ ಸರ್ಕಾರಕ್ಕೆ ಹಲವು ಮನವಿ, ಪ್ರಸ್ತಾವನೆ ಸಲ್ಲಿಸಿದ್ದೇವೆ. ಅವುಗಳು ಸಾಕಾರಗೊಳ್ಳಲು ಪ್ರಯತ್ನಿಸಬೇಕು ಎನ್ನುವ ಕಾರಣದಿಂದ ಈ ಸಭೆ* *ಇದು ಕೇಂದ್ರ ಸರ್ಕಾರದ ವಿರುದ್ಧ ಮಾಡುವ ಆರೋಪವಲ್ಲ. ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲ ಅಭಿವೃದ್ಧಿಗಾಗಿ ರಾಜಕೀಯ ಮರೆತು ಚರ್ಚೆ: ಸಿಎಂ* ದೆಹಲಿ ಜೂ 27 NEWS DESK : ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೋರಲಿನಿಂದ ಒಂದೇ ಧ್ವನಿಯಲ್ಲಿ ಪ್ರಯತ್ನಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ನಡೆದ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಮಂತ್ರಿಗಳು ತಮ್ಮ ಪ್ರಸ್ತಾವಿಕ ಮಾತುಗಳಲ್ಲಿ ಮಂಡಿಸಿದ ವಿಚಾರಗಳ ಹೈಲೈಟ್ಸ್ ಗಳು… *ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆ. ಭದ್ರಾ ಯೋಜನೆ ಬಗ್ಗೆಯೂ ಪ್ರಯತ್ನ ಮುಂದುವರೆಸಬೇಕಾಗಿದೆ. ಕೇಂದ್ರದ ಹಣಕಾಸು ಮಂತ್ರಿ ತಮ್ಮ ಬಜೆಟ್ ನಲ್ಲೇ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ.…

Read More

ಮಡಿಕೇರಿ ಜೂ.27 NEWS DESK : ಕೊಡಗಿನ ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆ ಪುಸ್ತಕಗಳ ಮೂಲಕ ಎಲ್ಲರಿಗೂ ಪರಿಚಯವಾಗುತ್ತಿದ್ದು, ಇದು ಉತ್ತಮ ಬೆಳವಣಿಗೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ತಿಳಿಸಿದ್ದಾರೆ. ನಗರದ ಭಾರತೀಯ ವಿದ್ಯಾಭವನದಲ್ಲಿ ಹಿರಿಯ ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ ಅವರ “ಪಾರು” ಇಂಗ್ಲೀಷ್ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪುಸ್ತಕಗಳ ಮೂಲಕ ಸಂಸ್ಕೃತಿಯ ಪರಿಚಯವಾಗುತ್ತದೆ ಮತ್ತು ಸಾಹಿತ್ಯದ ಬೆಳವಣಿಗೆಯಾಗುತ್ತದೆ. ಆಚಾರ, ವಿಚಾರಗಳನ್ನು ಉಳಿಸಿ ಬೆಳೆಸುವ ಶಕ್ತಿ ಕೂಡ ಪುಸ್ತಕಗಳಿಗಿದೆ. ಆದ್ದರಿಂದ ಹೆಚ್ಚು ಹೆಚ್ಚು ಪುಸ್ತಕಗಳು ರಚನೆಯಾಗಬೇಕು ಎಂದರು. ಆಧುನಿಕತೆಯ ಭರಾಟೆಯಿಂದಾಗಿ ಹಿಂದಿನ ಪ್ರೀತಿ, ವಿಶ್ವಾಸ, ಅಭಿಮಾನ ಇಂದು ಕಾಣುತ್ತಿಲ್ಲ. ಹಿರಿಯರು ಅಂದು ಅನುಭಿಸಿದ ಅನುಭವಗಳನ್ನು ಇಂದು ಪುಸ್ತಕದ ಮೂಲಕ ಓದಿ ತಿಳಿದುಕೊಳ್ಳುವಂತಾಗಿದೆ ಎಂದು ಮಹೇಶ್ ನಾಚಯ್ಯ ಬೇಸರ ವ್ಯಕ್ತಪಡಿಸಿದರು. ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಸಮಾಜದಲ್ಲಿ ನಡೆಯುವ ವಿಭಿನ್ನ ವಿಚಾರಗಳ…

Read More

ಮಡಿಕೇರಿ ಜೂ.27 NEWS DESK : ಪ್ರಸಕ್ತ (2024-25) ಸಾಲಿಗೆ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮದಡಿ ಮ್ಯಾನುಯಲ್ ಸ್ಕಾವೆಂಜರ್ ಕುಟುಂಬದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಗರಿಷ್ಟ ರೂ. 50 ಲಕ್ಷ ಹಾಗೂ ಸೇವಾ ಘಟಕಗಳನ್ನು ಸ್ಥಾಪಿಸಲು ಗರಿಷ್ಟ ರೂ. 20 ಲಕ್ಷ ಸಾಲ ಬ್ಯಾಂಕುಗಳ ಮುಖಾಂತರ ನೀಡಲಾಗುವುದು. ಆಸಕ್ತಿವುಳ್ಳ ಅಭ್ಯರ್ಥಿಗಳು ಆನ್‍ಲೈನ್ ಪಿಎಂಇಜಿಪಿ ವೆಬ್‍ಸೈಟ್: ತಿತಿತಿ.ಞviಛಿoಟಿಟiಟಿe.gov.iಟಿ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ ರವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. 

Read More

ಮಡಿಕೇರಿ ಜೂ.27 NEWS DESK : ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ವಾಸವಾಗಿರುವ ಸಾರ್ವಜನಿಕರು ಕುಶಾಲನಗರ ಪುರಸಭೆಯ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) (ಹಂತ -4) ಯೋಜನೆ ಅಡಿ ವಿವಿಧ ವೈಯಕ್ತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಸೌಲಭ್ಯ ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೌಲಭ್ಯ ಪಡೆದುಕೊಳ್ಳಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಜುಲೈ, 06 ರ ಸಂಜೆ 5.30 ಗಂಟೆಯೊಳಗೆ ಮುಖ್ಯಾಧಿಕಾರಿಗಳು ಪುರಸಭೆ ಕುಶಾಲನಗರ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ಕುಶಾಲನಗರ ಪುರಸಭೆ ಕಚೇರಿಯಲ್ಲಿ ಪಡೆದುಕೊಳ್ಳಬಹುದು ಎಂದು ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ(ಮುನಿಸಿಪಾಲಿಟಿ)(ಹಂತ-4) ಯೋಜನೆ ಅಡಿ ಪರಿಶಿಷ್ಟ ಜಾತಿ ಜನಾಂಗದ ವ್ಯಕ್ತಿ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಮೀಸಲು. ಸೌಲಭ್ಯಗಳ ವಿವರ: 2022-23 ರಿಂದ 2024-25 ನೇ ಸಾಲಿಗೆ ವಿವಿಧ ವಸತಿ ಯೋಜನೆ ಪಕ್ಕಾಮನೆ ನಿರ್ಮಿಸಲು ಸರಕಾರದ ಇತರೆ ವಸತಿಯೋಜನೆ ಅಡಿ ಹೊಂದಾಣಿಕೆ ಮೊತ್ತ ಪಾವತಿಸಲು ಸಹಾಯಧನ, 10ನೇ ತರಗತಿ ಮೇಲ್ಪಟ್ಟು ವಿವಿಧ ಹಂತಗಳಲ್ಲಿ ವ್ಯಾಸಂಗ…

Read More