ಮಡಿಕೇರಿ ಜೂ.27 NEWS DESK : ಬೆಂಗಳೂರು ನಿರ್ಮಾತೃ, ಆದರ್ಶ ಆಡಳಿತಗಾರ, ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯ ಹೃದಯ ಭಾಗದಲ್ಲಿ ನಿರ್ಮಾಣ ಮಾಡುವಂತಾಗಲು ಜಾಗ ಗುರುತಿಸುವಂತೆ ಜಿಲ್ಲಾಡಳಿತಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಒಕ್ಕಲಿಗರ ಸಂಘ ಮತ್ತು ಕೊಡಗು ಗೌಡ ಸಮಾಜಗಳ ಸಹಕಾರದೊಂದಿಗೆ ನಗರದ ಗಾಂಧಿ ಭವನದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಂಗಳೂರು ನಿರ್ಮಾಣದಲ್ಲಿ ಕೆಂಪೇಗೌಡರ ಕೊಡುಗೆ ಅಪಾರವಾಗಿದೆ. ಆ ನಿಟ್ಟಿನಲ್ಲಿ ಕೆಂಪೇಗೌಡ ಅವರ ಪ್ರತಿಮೆ ನಿರ್ಮಿಸುವಂತಾಗಲು ಜಾಗ ಗುರುತಿಸಿದಲ್ಲಿ, ವಿವಿಧ ಸಂಘಟನೆಗಳ ಜೊತೆಗೂಡಿ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಲಾಗುವುದು ಎಂದು ಶಾಸಕರು ಹೇಳಿದರು. ಬೆಂಗಳೂರು ಬೆಳೆಯುತ್ತಿದೆ. ಮಾಹಿತಿ ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ತನ್ನದೇ ಆದ ಸ್ಥಾನ ಹೊಂದಿದೆ. ಕುಡಿಯುವ ನೀರು ಸೇರಿದಂತೆ ಇತರ ಮೂಲ ಸೌಲಭ್ಯ ಕಲ್ಪಿಸಬೇಕಿದೆ. ಸ್ವಚ್ಛತೆಗೆ ಆದ್ಯತೆ…
ಲೇಖಕ: admin
ಮಡಿಕೇರಿ ಜೂ.27 NEWS DESK : ವಿಶ್ವರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕದ ವತಿಯಿಂದ ಜೂ.28 ರಂದು ನಗರಸಭೆ ಪೌರಕಾರ್ಮಿಕರಿಗೆ ಸ್ವೆಟರ್ ಹಾಗೂ ಶ್ರೀ ಶಕ್ತಿ ವೃದ್ಧಾಶ್ರಮದ ಹಿರಿಯರಿಗೆ ಬಟ್ಟೆ ವಿತರಣಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕದಸಂ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ವಹಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಮಡಿಕೇರಿಯ ಆರ್.ಆರ್.ಆಸ್ಪತ್ರೆಯ ಮಕ್ಕಳ ತಜ್ಞ ಡಾ.ನವೀನ್ ಪಾಲ್ಗೊಳ್ಳಲಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಯ ಉಪ ವೈದ್ಯಧಿಕಾರಿ ಡಾ.ಹೆಚ್.ವಿ.ದೇವದಾಸ್ ಪೌರಕಾರ್ಮಿಕರಿಗೆ ಸ್ವೆಟರ್ ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ನಗರಸಭೆ ಆಯುಕ್ತ ವಿಜಯ, ಸಮಾಜ ಸೇವಕ ಬಿ.ಆರ್.ಪ್ರದೀಪ್ ಕರ್ಕೆರ, ಕದಸಂ ಮೈಸೂರು-ಕೊಡಗು ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ, ಮಡಿಕೇರಿ ತಾಲ್ಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಭಾಗವಹಿಸಲಿದ್ದಾರೆ.
ಮಡಿಕೇರಿ ಜೂ.27 NEWS DESK : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣ ಮತ್ತು ರಾಜ್ಯ ಸರ್ಕಾರದಿಂದ ಪರಿಶಿಷ್ಟರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.28 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿನಲ್ಲಿ ಕೊಡಗು ಜಿಲ್ಲಾ ಬಿಜೆಪಿ ಎಸ್ಟಿ ಮೋರ್ಚಾದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ತಿಳಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ಪ್ರತಿಭಟನೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಪರಿಶಿಷ್ಟರ ಅಭ್ಯುದಯಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಅಲ್ಲದೆ ಹೆಚ್ಚು ಅನುದಾನ ಮೀಸಲಿಡಲಾಗಿತ್ತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೂಡ ಪರಿಶಿಷ್ಟರ ಅಭಿವೃದ್ಧಿಗಾಗಿ ಹಣ ನೀಡುತ್ತಿದೆ. ಆದರೆ ಈಗಿನ ರಾಜ್ಯ ಕಾಂಗ್ರೆಸ್ ಸರ್ಕಾರ ಬಿಟ್ಟಿ ಭಾಗ್ಯಗಳನ್ನು ಈಡೇರಿಸಲು ಪರಿಶಿಷ್ಟರ ಕಲ್ಯಾಣ ಇಲಾಖೆಗಳ ಅನುದಾನವನ್ನು ಬಳಸಿಕೊಳ್ಳುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲೂ ಇದೇ ರೀತಿಯ ಅನ್ಯಾಯವಾಗಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು…
ಮಡಿಕೇರಿ ಜೂ.27 NEWS DESK : ಇತ್ತೀಚಿನ ದಿನಗಳಲ್ಲಿ ಕಿರಿಯ ವಯಸ್ಸಿನವರು ಹೃದಯಾಘಾತಕ್ಕೊಳಗಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊಡಗು ಜಿಲ್ಲೆಯ ನೆಲಜಿ ಗ್ರಾಮದಲ್ಲಿ ಯುವತಿಯೊಬ್ಬಳು ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ ನಡೆದಿದೆ. ಮಡಿಕೇರಿ ತಾಲ್ಲೂಕಿನ ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಎಂಬುವವರ ಪುತ್ರಿ ನಿಲಿಕಾ ಪೊನ್ನಪ್ಪ (24) ಮೃತ ಯುವತಿ. ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಉದ್ಯೋಗದಲ್ಲಿದ್ದ ಇವರು ಇಂದು ಬೆಳಿಗ್ಗೆ ಕರ್ತವ್ಯಕ್ಕೆ ತೆರಳಲೆಂದು ಮನೆಯಲ್ಲಿ ತಯಾರಿ ನಡೆಸುತ್ತಿದ್ದರು. ಈ ಸಂದರ್ಭ ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ. ಪುತ್ರಿಯನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಸೋಮವಾರಪೇಟೆ ಜೂ.27 NEWS DESK : ನಾಡಪ್ರಭು ಕೆಂಪೇಗೌಡರ ದೂರದರ್ಶಿತ್ವಕ್ಕೆ ಸಾಕ್ಷಿ ಎಂಬಂತೆ ಸುಮಾರು 500 ವರ್ಷಗಳ ಹಿಂದೆಯೇ ಸಾಮಾಜಿಕ ನ್ಯಾಯದ ಮೂಲಕ ಆದರ್ಶನೀಯ ಆಡಳಿತಗಾರರಾಗಿದ್ದರು ಎಂದು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ತಿಲೊತ್ತಮೆ ಬಣ್ಣಿಸಿದರು. ಸೋಮವಾರಪೇಟೆ ತಾಲ್ಲೂಕು ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಾಲ್ಲೂಕು ಒಕ್ಕಲಿಗರ ಸಂಘದ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ಐನೂರ ಹದಿನೈದನೆ ಜಯಂತಿ ಕಾಯ್ರ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಕೆಂಪೇಗೌಡರು ಅಂದಿನ ರೈತರು ಮತ್ತು ಕೃಷಿ ಕಾರ್ಮಿಕರು ಸ್ವಾಭಿಮಾನದಿಂದ ಬದುಕಲು ಹಾಗೂ ಕುಲಕಸುಬುಗಳಲ್ಲಿ ತೊಡಗಿದ್ದ ಎಲ್ಲಾ ಸಾಮಾಜಿಕ ವರ್ಗಗಳಿಗೆ ಅನ್ನ, ನೀರು, ಆಶ್ರಯ, ಸಿಗಬೇಕೆಂಬ ದೂರ ದೃಷ್ಟಿ ಹೊಂದಿದ್ದರು ಎಂದರು. ವ್ಯವಸಾಯಕ್ಕೆ ನೀರಿನ ಭದ್ರತೆ ಒದಗಿಸುವ ಹಲವಾರು ಕೆರೆಗಳನ್ನು ಕಟ್ಟಿಸಿದ್ದರು. ನಾವುಗಳು ಇಂದು ಜೀವನಾಡಿಗಳಾಗಿರುವ ಕೆರೆಗಳನ್ನೇ ನಾಶಮಾಡುತ್ತಿದ್ದೇವೆ ಎಂದು ವಿಷಾದ ವ್ಯಕ್ತಪಡಿಸಿದರು. ಕೇವಲ ಆಚರಣೆಗಷ್ಟೇ ಸೀಮಿತಗೊಳಿಸದೆ ಕೆಂಪೇಗೌಡರ ಆದರ್ಶಗಳನ್ನೂ ಪಾಲಿಸೋಣವೆಂದರು. ವಕೀಲರಾದ ಅಭಿಮನ್ಯು ಕುಮಾರ್…
ಬೆಂಗಳೂರು ಜೂ.27 NEWS DESK : ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಕೆಂಪೇಗೌಡರ ಸಾಧನೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು.
ಮಡಿಕೇರಿ ಜೂ.27 NEWS DESK : ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಜೂ.30 ರಂದು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷರಾದ ಪಾಣತ್ತಲೆ ಜಗದೀಶ್ ಮಂದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಪಿ.ಎ ನಾಗೇಶ್(ಈಶ್ವರ್) ತಿಳಿಸಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಅಮ್ಮತಿಯ ಪ್ರೌಢಶಾಲಾ ಮೈದಾನದಲ್ಲಿರುವ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಛೇರಿಯಲ್ಲಿ ನಡೆಯಲಿದೆ ಕಚೇರಿಯಲ್ಲಿ ನಡೆಯಲಿರುವ ಸಭೆಗೆ ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಅಸ್ಲಮ್ ಖಾನ್ ಭಾಗವಹಿಸಲಿದ್ದಾರೆ. ಮಹಾಸಭೆಗೆ ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಅಸ್ಲಮ್ ಖಾನ್ ಹಾಗೂ ಶರವಣ ಭಾಗವಹಿಸಲಿದ್ದಾರೆ. ಜಿಲ್ಲಾ ಫುಟ್ಬಾಲ್ ಸಂಸ್ಥೆಯಲ್ಲಿ ನೋಂದಣಿಯಾದ ಕ್ಲಬ್ ಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಕಡ್ಡಾಯವಾಗಿ ಮಹಾಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ನಾಗೇಶ್(ಈಶ್ವರ್) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಂಟಿಕೊಪ್ಪ ಜೂ.27 NEWS DESK : ಕಾಡಾನೆ ದಾಳಿಯಿಂದ ಕೃಷಿ ಫಸಲು ನಾಶವಾಗಿದ್ದು, ಬೆಳೆಗಾರರು ಆತಂಕಗೊಂಡಿದ್ದಾರೆ. ಸುಂಟಿಕೊಪ್ಪ ಉಲುಗುಲಿ ಗ್ರಾಮದ ಓಡಿಯಪ್ಪನ ಸುದೇಶ್ಕುಮಾರ್ ಅವರ ತೋಟದಲ್ಲಿ ಕಾಡಾನೆ ದಾಳಿ ನಡೆಸಿ ತೆಂಗು, ಕಾಫಿ, ಬಾಳೆ, ಏಲಕ್ಕಿ ಸೇರಿದಂತೆ ಹಲವು ಗಿಡಗಳನ್ನು ನಾಶಗೊಳಿಸಿದೆ. ಕಳೆದ ಎರಡು ಮೂರು ದಿನಗಳಿಂದ ಕಾಡಾನೆ ತೋಟದಲ್ಲೆ ಬೀಡುಬಿಟ್ಟಿದ್ದು, ಕೃಷಿ ಫಸಲುಗಳನ್ನು ನಾಶಪಡಿಸುತ್ತಿವೆ. ಕಾರ್ಮಿಕರು ಹಾಗೂ ಶಾಲಾ ಮಕ್ಕಳು ಆತಂಕ ಪಡುವಂತಾಗಿದೆ. ತಕ್ಷಣವೇ ಅರಣ್ಯ ಇಲಾಖೆ ಕಾಡಾನೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ ಜೂ.27 NEWS DESK : ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಆರ್ದ್ರಾ ಮಳೆ ತೀವ್ರತೆಯನ್ನು ಪಡೆದುಕೊಂಡಿದ್ದು, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಕಳೆದ 24 ಗಂಟೆಗಳಲ್ಲಿ ಭಾಗಮಂಡಲದಲ್ಲಿ ದಾಖಲೆಯ 8 ಇಂಚು ಮಳೆಯಾಗಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿ ಮಡಿಕೇರಿ ಮತ್ತು ನಾಪೋಕ್ಲು ರಸ್ತೆ ಜಲಾವೃತಗೊಂಡಿದೆ. ನೂತನ ಮೇಲು ಸೇತುವೆಯಲ್ಲಿ ಸಂಚಾರಕ್ಕೆ ಅವಕಾಶ ನೀಡಿರುವುದರಿಂದ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಗದ್ದೆ, ತೋಟಗಳಿಗೂ ನೀರು ನುಗ್ಗಿದ್ದು, ಕೃಷಿಕ ವರ್ಗ ನಷ್ಟ ಅನುಭವಿಸಿದೆ. ಮಡಿಕೇರಿ ನಗರದಲ್ಲೂ ಮಳೆಯಾಗುತ್ತಿದ್ದು, ತೋಡು, ಚರಂಡಿಗಳು ತುಂಬಿ ಹರಿಯುತ್ತಿವೆ. ಕೆಲವು ಭಾಗದಲ್ಲಿ ಮಳೆಯ ನೀರಿನ ರಭಸಕ್ಕೆ ರಸ್ತೆಗಳ ಡಾಂಬರು ಮತ್ತು ಕಾಂಕ್ರೀಟ್ ಕೊಚ್ಚಿ ಹೋಗಿದೆ. ತ್ಯಾಗರಾಜ ಕಾಲೋನಿಯಲ್ಲಿ ಬರೆ ಬಿದ್ದು ಮೂರು ಮನೆಗಳಿಗೆ ಹಾನಿಯಾಗಿದೆ. ಬೆಟ್ಟ ಮತ್ತು ತಗ್ಗು ಪ್ರದೇಶದಲ್ಲಿರುವ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ನಗರಸಭೆ ಈಗಾಗಲೇ ಸೂಚನೆ ನೀಡಿದೆ. ಬೇತ್ರಿ, ಬಲಮುರಿ, ದುಬಾರೆ, ಕೂಡಿಗೆ,…
ಸುಂಟಿಕೊಪ್ಪ ಜೂ.27 NEWS DESK : ಇಂದಿನ ಯುವ ಪೀಳಿಗೆ ಮಾದಕ ದ್ರವ್ಯಗಳ ವ್ಯಸಕ್ಕೆ ಬಲಿಯಾಗುವತ್ತಿರುವುದು ಆತಂಕಕಾರಿ ಸಂಗತಿಯಾಗಿದೆ ಮತ್ತು ಯುವ ಸಮುದಾಯವನ್ನು ಕಾಡುತ್ತಿರುವ ಗಂಭೀರ ಸಮಸ್ಯೆಯಾಗಿದೆ ಎಂದು ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀಲತಾ ಅಭಿಪ್ರಾಯ ವ್ಯಕ್ತಪಡಿಸಿದರು. ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸಮಾರಂಭದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಎಚ್ಚರಿಕೆಯ ಸಂದೇಶ ನೀಡಿ ಮತ್ತು ಬರಿಸುವ ಮಾದಕವ್ಯಸನಿಗಳು ನಮ್ಮಗಳ ಶಾರೀರಿಕ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರಿ, ವ್ಯಕ್ತಿಯನ್ನು ಜೀವಚ್ಛವವವಾಗಿ ಮಾಡುತ್ತವೆ ಎಂದರು. ಶರೀರದ ನರಮಂಡಲದ ಮೇಲೆ ಮಾದಕ ವ್ಯಸನಿಗಳಿಂದ ವ್ಯತಿರಿಕ್ತ ಪರಿಣಾಮ ಉಂಟಾಗಿ ವ್ಯಕ್ತಿಯು ಸಾವಿನ ದವಡೆಗೆ ದೂಡಲ್ಪಡುತ್ತದೆ ಎಂದರು. ಅಂತರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ವಿರೋಧಿ ದಿನಚಾರಣೆಯ ಕುರಿತು ಸುಂಟಿಕೊಪ್ಪ ಪೊಲೀಸ್ ಠಾಣೆಯ ಮುಖ್ಯಪೇದೆ ರಮೇಶ್ ಮಾತನಾಡಿ, ಸೈಬರ್ ಕ್ರೈಮ್ ಬ್ರ್ಯಾಂಚ್ನಿಂದ ಮಾದಕ ವ್ಯಸನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಉಂಟು ಮಾಡಲು ಆಗಮಿಸಿದ್ದ ಮಾದಕ ವಸ್ತುಗಳಿಗೆ ಜನ…






