ಕಡಂಗ ಜೂ.26 NEWS DESK : ಕೊಡಗಿನ ಸಮಗ್ರ ಅಭಿವೃದ್ಧಿಗಾಗಿ ಪಣತೊಟ್ಟಿರುವ ಜನಪರ, ಜನಪ್ರಿಯ ನಾಯಕ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿಯನ್ನು ಬಿಜೆಪಿ ದಹಿಸಿರುವುದು ಖಂಡನೀಯವೆಂದು ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷಾತೀತ ಮತ್ತು ಜಾತ್ಯತೀತವಾಗಿ ಎಲ್ಲಾ ಜನಾಂಗದವರನ್ನು ಒಗ್ಗಟ್ಟಾಗಿ ಮುನ್ನಡೆಸುತ್ತಿರುವ ಪೊನ್ನಣ್ಣ ಅವರು ಅಭಿವೃದ್ಧಿಯ ಹರಿಕಾರರಾಗಿದ್ದಾರೆ. ಪೊನ್ನಣ್ಣ ಅವರ ಬೆಳವಣಿಗೆಯನ್ನು ಸಹಿಸಲಾಗದೆ ಬಿಜೆಪಿ ಈ ರೀತಿ ವರ್ತಿಸುತ್ತಿದೆ. ಬಿಜೆಪಿ ಕೊಡಗಿನ ಪ್ರಬುದ್ಧ ರಾಜಕಾರಣಕ್ಕೆ ಕಳಂಕ ತಂದಿದೆ ಎಂದು ಅವರು ಆರೋಪಿಸಿದ್ದಾರೆ.
ಲೇಖಕ: admin
ಮಡಿಕೇರಿ ಜೂ.26 NEWS DESK : ನಿರಂತರ ಮಳೆಯಾಗುತ್ತಿರುವ ಕಾರಣ ಮುಂಜಾಗೃತಾ ಕ್ರಮವಾಗಿ ಜೂ.27 ರಂದು ಒಂದು ದಿನ ಕೊಡಗು ಜಿಲ್ಲೆಯ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಮಳೆಯ ತೀವ್ರತೆಯನ್ನು ಆಧರಿಸಿ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಜಿಲ್ಲೆಯ ಆಯಾ ವ್ಯಾಪ್ತಿಯ ಶಾಲೆಗಳ ಮುಖ್ಯೋಪಾಧ್ಯಾರಿಗೆ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಉಪನಿರ್ದೇಶಕರ ಅನುಮತಿ ಪಡೆಯುವುದು ಖಡ್ಡಾಯವಾಗಿದೆ.
ಸೋಮವಾರಪೇಟೆ ಜೂ.26 NEWS DESK : ವಿರಾಜಪೇಟೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ವಿರುದ್ಧ ವಿನಾಕಾರಣ ಹೂಡಲಾಗಿರುವ ಮೊಕದ್ದಮೆಯನ್ನು ವಾಪಾಸ್ ಪಡೆಯದಿದ್ದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಸೋಮವಾರಪೇಟೆ ಮಂಡಲ ಬಿಜೆಪಿ ಎಚ್ಚರಿಕೆ ನೀಡಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತೆರಿಗೆ ಹೆಚ್ಚಳದಿಂದ ದಿನನಿತ್ಯ ಬಳಸುವ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಜನರು ಸಂಕಷ್ಟದಲ್ಲಿದ್ದಾರೆ. ತಕ್ಷಣ ಪೆಟ್ರೋಲ್, ಡೀಸೆಲ್ ಮತ್ತು ಹಾಲಿನ ಬೆಲೆ ಇಳಿಕೆ ಮಾಡಬೇಕು ಎಂದು ಮಂಡಲದ ವಕ್ತಾರ ಕಂಠಿ ಕಾರ್ಯಪ್ಪ ಆಗ್ರಹಿಸಿದ್ದಾರೆ. ಸೋಮವಾರಪೇಟೆಯ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಜನರ ಮೇಲೆ ತೆರಿಗೆ ಬರೆ ಹಾಕಲಾಗುತ್ತಿದೆ. ಬಿಟ್ಟಿ ಭಾಗ್ಯಗಳಿಂದ ರಾಜ್ಯದ ಬೊಕ್ಕಸ ಖಾಲಿಯಾಗಿದೆ, ಇದೇ ಕಾರಣಕ್ಕೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಮತ್ತು ತೆರಿಗೆಯನ್ನು ಏರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಬೆಲೆ ಏರಿಕೆಯನ್ನು ವಿರೋಧಿಸಿ ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆ ಮತ್ತು ಪ್ರತಿಕೃತಿ ದಹನವನ್ನು ಶಾಸಕರು ವೈಯುಕ್ತಿಕವಾಗಿ ತೆಗೆದುಕೊಳ್ಳಬಾರದು. ಈ ವಿಷಯದಲ್ಲಿ ಜಾತಿಯನ್ನು ತಂದು ಕೆಲವರು…
ಮಡಿಕೇರಿ ಜೂ.26 NEWS DESK : ಇದೇ ಜೂ.27 ರಿಂದ ಜು.2 ರವರೆಗೆ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೈನಿಕ ಕಲ್ಯಾಣ ಇಲಾಖೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯು ಒಂದು ವಿಶಿಷ್ಟ ಕಾರ್ಯಕ್ರಮವಾಗಿದ್ದು, ಯಾರಿಗೂ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು. ವಸತಿ ಊಟೋಪಚಾರ ಸೇರಿದಂತೆ ಹಲವು ಮೂಲ ಸೌಕರ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸ್ಪಷ್ಟ ನಿರ್ದೇಶನ ನೀಡಿದರು. ಸೈನಿಕ ಭರ್ತಿ ಕಾರ್ಯಾಲಯದ ನಿರ್ದೇಶಕರಾದ ಕರ್ನಲ್ ಗೌರವ್ ತಾಪ ಮಾತನಾಡಿ, ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕಿದೆ. ಲೋಕೋಪಯೋಗಿ, ಸೆಸ್ಕ್, ಪದವಿ ಪೂರ್ವ ಶಿಕ್ಷಣ, ಅಗ್ನಿಶಾಮಕ ದಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವೈದ್ಯಕೀಯ ಶಿಕ್ಷಣ, ಸೆಸ್ಕ್, ಬಿಎಸ್ಎನ್ಎಲ್ ಹೀಗೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಸಹಕಾರ ನೀಡುವಂತೆ…
ಮಡಿಕೇರಿ ಜೂ.26 NEWS DESK : ಇದೇ ಜೂ.30 ರಂದು ನಡೆಯುವ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (ಟಿಇಟಿ) ಪರೀಕ್ಷಾ ಮಾರ್ಗ ಸೂಚಿಯಂತೆ ನಡೆಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಪರೀಕ್ಷೆಯನ್ನು ಯಾವುದೇ ರೀತಿ ಲೋಪ ಉಂಟಾಗದಂತೆ ಗಮನಹರಿಸುವಂತೆ ಸೂಚಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ ಮಾತನಾಡಿ ಕರ್ನಾಟಕ ಟಿಇಟಿ ಪರೀಕ್ಷೆಯು ಇದೇ ಜೂ.30 ರಂದು ಮಡಿಕೇರಿಯಲ್ಲಿ ನಡೆಯಲಿದೆ. ಒಟ್ಟು ಮೂರು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಇಲ್ಲಿ ಎರಡು ಕೇಂದ್ರಗಳು ಹಾಗೂ ಸಂತ ಮೈಕಲರ ಶಾಲೆ ಇಲ್ಲಿ ಒಂದು ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 759 ಪರೀಕ್ಷಾರ್ಥಿಗಳು ಮೂರು ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಜೂನ್ 30 ರಂದು ಬೆಳಗ್ಗೆ ಪರೀಕ್ಷೆ 9.30 ಗಂಟೆಯಿಂದ 12 ಗಂಟೆ ವರೆಗೆ ಪರೀಕ್ಷೆ ನಡೆಯಲಿದೆ ಎಂದು…
ಮಡಿಕೇರಿ ಜೂ.26 NEWS DESK : ಯುವ ಜನಾಂಗ ಮಾದಕ ವಸ್ತು ಸೇವನೆಯಂತಹ ದುಶ್ಚಟಗಳಿಗೆ ಬಲಿಯಾಗಿ, ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳದೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಕರೆ ನೀಡಿದ್ದಾರೆ. ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಕಾವೇರಿ ಹಾಲ್ನಲ್ಲಿ ಬುಧವಾರ ನಡೆದ `ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಟ ವಿರುದ್ಧ’ ಅಂತರ ರಾಷ್ಟ್ರೀಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು. ನಾಳೆಯ ಬಗ್ಗೆ ಚಿಂತಿಸಬೆಕು. ಮಾನವನ ಜೀವನ ಅತ್ಯಂತ ಅಮೂಲ್ಯವಾಗಿದ್ದು, ಭವಿಷ್ಯದಲ್ಲಿ ಉತ್ತಮ ಗುರಿ ಸಾಧಿಸಲು ನಿರಂತರ ಪ್ರಯತ್ನಿಸಬೇಕು ಎಂದು ಸಲಹೆ ಮಾಡಿದರು. ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ತುತ್ತಾಗಾಬಾರದು. ಮಾದಕ ವಸ್ತುಗಳಿಗೆ ಅವಲಂಬಿತರಾದರೆ ಅದರಿಂದ ಪುನಃ ಹೊರಬರುವುದು ತುಂಬಾ ಕಷ್ಟ ಎಂದರು. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 2023 ರಲ್ಲಿ 101 ಪ್ರಕರಣ ದಾಖಲಾಗಿದೆ. 89.217 ಕೆ.ಜಿ.ಗಾಂಜಾ, 154.26 ಗ್ರಾಂ. ಟ್ಯಾಬ್ಲೆಟ್, ಎಲ್ಎಸ್ಡಿ 9 ಬ್ಲಾಕ್ಸ್,…
ಮಡಿಕೇರಿ ಜೂ.26 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕುಮಾರ ಅಧಿಕಾರ ವಹಿಸಿಕೊಂಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಹೆಚ್ಚುವರಿ ಪ್ರಭಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿನ್ನಸ್ವಾಮಿ ಅವರು ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದೇಶಕರ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು. ಕುಮಾರ ಅವರು ಈ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಂಗಳೂರಿನ ನಾಟಕ ಅಕಾಡೆಮಿಯಲ್ಲಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಮಡಿಕೇರಿ ಜೂ.26 NEWS DESK : ಗೋವಾದಲ್ಲಿ ನಡೆದ ರಾಷ್ಟ್ರೀಯ ಮುಕ್ತ ಕಬಡ್ಡಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡ ಚಿನ್ನದ ಪದಕ ಗೆದ್ದುಕೊಂಡಿದ್ದು, ತಂಡವನ್ನು ಪ್ರತಿನಿಧಿಸಿದ ಕೊಡಗಿನ ಯಶ್ವಿತ್ ರೈ ಪಂದ್ಯಾವಳಿಯ ಅಲ್ ರೌಂಡರ್ ಆಗಿ ಉತ್ತಮ ಪ್ರದರ್ಶನ ನೀಡಿದ್ದಾನೆ. ಕುಂಜಲಗೇರಿ ಗ್ರಾಮದ ಬಿ.ಪಿ.ಉಲ್ಲಾಸ್ ರೈ ಮತ್ತು ಬಿ.ಯು.ಸುಜಾತಾ ರೈ ದಂಪತಿಯ ಪುತ್ರನಾದ ಯಶ್ವಿತ್ ರೈ ತರಬೇತುದಾರ ಟಿ.ಸುರೇಶ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾನೆ.
ಕಡಂಗ ಜೂ.27 NEWS DESK : ಗೋವಾದಲ್ಲಿ ನಡೆದ ರಾಷ್ಟ್ರೀಯ ಮುಕ್ತ ಕಬಡ್ಡಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡ ಚಿನ್ನದ ಪದಕ ಗೆದ್ದುಕೊಂಡಿದ್ದು, ತಂಡವನ್ನು ಪ್ರತಿನಿಧಿಸಿದ ಕೊಡಗಿನ ಯಶ್ವಿತ್ ರೈ ಪಂದ್ಯಾವಳಿಯ ಅಲ್ ರೌಂಡರ್ ಆಗಿ ಉತ್ತಮ ಪ್ರದರ್ಶನ ನೀಡಿದ್ದಾನೆ. ಕುಂಜಲಗೇರಿ ಗ್ರಾಮದ ಬಿ.ಪಿ.ಉಲ್ಲಾಸ್ ರೈ ಮತ್ತು ಬಿ.ಯು.ಸುಜಾತಾ ರೈ ದಂಪತಿಯ ಪುತ್ರನಾದ ಯಶ್ವಿತ್ ರೈ ತರಬೇತುದಾರ ಟಿ.ಸುರೇಶ್ ಅವರಅವರಲ್ಲಿ ತರಬೇತಿ ಪಡೆಯುತ್ತಿದ್ದಾನೆ. ವರದಿ : ನೌಫಲ್ ಕಡಂಗ
ಮಡಿಕೇರಿ ಜೂ.26 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹಿಸಿದ ಬಿಜೆಪಿ ಕ್ರಮ ಖಂಡನೀಯವೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ಶಾಸಕ ಎ.ಎಸ್.ಪೊನ್ನಣ್ಣ ಅವರು ಪಕ್ಷಾತೀತ ಮತ್ತು ಜಾತ್ಯತೀತವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಅಲ್ಲದೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಸಕಾಲದಲ್ಲಿ ಮಾಡುತ್ತಿದ್ದಾರೆ, ಬಡವರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುತ್ತಿದ್ದಾರೆ. ಸಾಮಾನ್ಯ ಕಾರ್ಯಕರ್ತರ ಕರೆಗೂ ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಹೀಗಿರುವಾಗ ಬಿಜೆಪಿ ಮಂದಿ ಕೇವಲ ಮತಕ್ಕಾಗಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚು ಮಾಡಿರುವುದಕ್ಕೆ ಬಡವರಿಗೆ ಹಾಗೂ ಕೂಲಿಕಾರ್ಮಿಕರಿಗೆ ತೊಂದರೆಯಾಗಿದೆ ಎಂದು ಹೇಳುತ್ತಿರುವ ಬಿಜೆಪಿ ಮಂದಿ ಕಳೆದ 10 ವರ್ಷಗಳ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಗೊಬ್ಬರ ಸೇರಿದಂತೆ…






