ಮಡಿಕೇರಿ ಜೂ.26 NEWS DESK : ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ ಘಟಕದ 3ನೇ ವಾರ್ಷಿಕೋತ್ಸವದ ಅಂಗವಾಗಿ ಜೂ.27 ರಂದು ಮಡಿಕೇರಿಯಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಡಿಕೇರಿಯ ಹ್ಯೂಮಾನಿಟಿ ಫಸ್ಟ್ ಇಂಡಿಯಾ ಸಂಸ್ಥೆ ಹಾಗೂ ಕೊಡಗು ಜಿಲ್ಲಾ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ನಗರದ ಬಾಲಭವನದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಶಿಬಿರ ನಡೆಯಲಿದೆ ಎಂದು ಮಾಹಿತಿ ನೀಡಿದರು. ಸುಮಾರು 50 ಬಾರಿ ರಕ್ತ ನೀಡಿದ ಮಹಾದಾನಿ ರಾಮಪ್ಪ ಶಿಬಿರವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪಿ.ಎಂ.ರವಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಕೋವಿಡ್ ಸಂದರ್ಭ ಜಿಲ್ಲೆಯಲ್ಲಿ…
ಲೇಖಕ: admin
ಸಿದ್ದಾಪುರ ಜೂ.26 NEWS DESK : ಮಾದಕ ದ್ರವ್ಯ ವಿರೋಧಿ ದಿನಾಚರಣೆ ಪ್ರಯುಕ್ತ ನೆಲ್ಯಹುದಿಕೇರಿ ಸಿದ್ದಾಪುರದಲ್ಲಿ ಬೈಕ್ ಮೂಲಕ ಜಾಗೃತಿ ಜಾಥಾ ನಡೆಯಿತು. ಸಿದ್ದಾಪುರ ಪೋಲಿಸ್ ಠಾಣಾ ವ್ಯಾಪ್ತಿಯ ಅತ್ತಿಮಂಗಲ ಬಳಿ ಬೈಕ್ ಜಾಥಾಕ್ಕೆ ಡಿವೈಎಸ್ಪಿ ಮಹೇಶ್ ಚಾಲನೆ ನೀಡಿದರು. ನಂತರ ಮಾತನಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾರ್ಗದರ್ಶನದಲ್ಲಿ ಅಂತರಾಷ್ಟ್ರೀಯ ಮಾದಕ ವಿರೋಧಿ ದಿನಾಚರಣೆ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯುವ ಸಮೂಹ ದುಶ್ಚಟಗಳಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಕೈಜೋಡಿಸಬೇಕೆಂದರು. ಈ ಸಂದರ್ಭ ಸರ್ಕಲ್ ಇನ್ಸ್ಪೆಕ್ಟರ್ ರಾಜು, ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ಸೇರಿದಂತೆ ಸಿಬ್ಬಂದಿಗಳು ಹಾಗೂ ಸ್ಥಳೀಯರು ಭಾಗವಹಿಸಿದ್ದರು.
ಮಡಿಕೇರಿ ಜೂ.26 NEWS DESK : ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ರಾತ್ರಿ ವೇಳೆ ನಿರಂತರ ಮಳೆ ಸುರಿಯುತ್ತಿದ್ದು, ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಮಳೆ ತೀವ್ರತೆಯನ್ನು ಪಡೆದುಕೊಳ್ಳುತ್ತಿರುವುದರಿಂದ ಜೂ.28 ರ ಬೆಳಿಗ್ಗೆ 8.30 ಗಂಟೆಯವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೂನ್ ತಿಂಗಳ ಆರಂಭದಲ್ಲಿ ಕೈಕೊಟ್ಟ ಮಳೆ ಕೊನೆಯಲ್ಲಿ ಬಿರುಸು ಪಡೆದುಕೊಂಡಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಶ್ರೀಭಗಂಡೇಶ್ವರ ಕ್ಷೇತ್ರ ಭಾಗಮಂಡಲದಲ್ಲಿ ಉತ್ತಮ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ತಲಕಾವೇರಿ ರಸ್ತೆಯಲ್ಲಿ ಮರ ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆಯಾಗಿತ್ತು. ಇದೀಗ ಮರವನ್ನು ತೆರವುಗೊಳಿಸಲಾಗಿದೆ. ಮಡಿಕೇರಿ ನಗರ ವ್ಯಾಪ್ತಿಯಲ್ಲೂ ಮಳೆಯಾಗುತ್ತಿದ್ದು, ಮಂಜು ಮತ್ತು ಚಳಿ ಇದೆ. ನೀರುಕೊಲ್ಲಿ- ಚೆಟ್ಟಳ್ಳಿ ರಸ್ತೆಯಲ್ಲಿ ಮರ ಬಿದ್ದು, ವಾಹನ ಸಂಚಾರಕ್ಕೆ ತೊಡಕುಂಟಾಗಿತ್ತು. ವಿರಾಜಪೇಟೆ, ಗೋಣಿಕೊಪ್ಪ, ಪೊನ್ನಂಪೇಟೆ, ಸೋಮವಾರಪೇಟೆ, ಕುಶಾಲನಗರ, ಸಿದ್ದಾಪುರ, ಕರಿಕೆ ಭಾಗದಲ್ಲೂ ಉತ್ತಮ ಮಳೆಯಾಗುತ್ತಿದೆ. ಆದ್ರ್ರಾ ಮಳೆಯ ಆಗಮನ…
ಮಡಿಕೇರಿ ಜೂ.26 NEWS DESK : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿರಾಜಪೇಟೆಯ ಕಾವೇರಿ ಶಾಲಾ ವಿಧ್ಯಾರ್ಥಿಗಳು ಕಾಕೋಟುಪರಂಬು ಕಾಲಭೈರವ ದೇವಸ್ಥಾನದ ಆವರಣದಲ್ಲಿ ವಿವಿಧ ರೀತಿಯ ಸಸಿಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ನಂತರ ಶಾಲೆಯ ಸುತ್ತಮುತ್ತ ಶ್ರಮದಾನ ಮಾಡಿದರು. ದಿನದ ಮಹತ್ವದ ಕುರಿತು 10ನೇ ತರಗತಿಯ ವಿದ್ಯಾರ್ಥಿ ಆಶ್ರಯ ಅಕ್ಕಮ್ಮ ಹಾಗೂ ನಿಶಾನ್ ಎಂ. ಎಂ ಕಿರು ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್,ಸುದೇಶ್, ಕಾರ್ಯದರ್ಶಿ ಪಿ.ಎನ್.ವಿನೋದ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಯು.ಪಿ,ಪಾರ್ವತಿ, ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಬಿ.ಎಸ್.ಜ್ಯೋತಿ, ದೈಹಿಕ ಶಿಕ್ಷಕಿ ಎಂ.ಪಿ.ಮೋನಿಕ, ಸಹ ಶಿಕ್ಷಕಿ ಬಿ.ಡಿ,ಭಾಗ್ಯ, ಟಿ.ಜಿ,ಕಲ್ಪ, ಕೆ.ಎನ್,ವೀಣಾ, ಟಿ.ಎಸ್.ಸುಕನ್ಯ ಹಾಗೂ ಬೋಧಕ ಬೋಧಕೇತರ ವೃಂದದವರು ಹಾಜರಿದ್ದರು.
ಮಡಿಕೇರಿ ಜೂ.26 NEWS DESK : ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿಯನ್ನು ಜೂ.27 ರಂದು ಸೋಮವಾರಪೇಟೆಯಲ್ಲಿ ಅರ್ಥಪೂರ್ಣವಾಗಿ ಆಡಚರಿಸಲು ಸೋಮವಾರಪೇಟೆ ತಾಲ್ಲೂಕು ಆಡಳಿತ ನಿರ್ಧರಿಸಿದೆ. ತಹಶೀಲ್ದಾರ್ ನವೀನ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಜೂ.27 ರಂದು ಬೆಳಿಗ್ಗೆ 10 ಗಂಟೆಗೆ ಒಕ್ಕಲಿಗರ ಕಲ್ಯಾಣಮಂಟಪದಲ್ಲಿ ನಡೆಯಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ನೆರವೇರಲಿದೆ. ಈ ಸಂದರ್ಭ ಒಕ್ಕಲಿಗ ಮುಖಂಡರು ಹಾಜರಿದ್ದರು.
ಮಡಿಕೇರಿ ಜೂ.26 NEWS DESK : ಬಲ್ಲಮಾವಟಿ ಶ್ರೀ ಭಗವತಿ ದೇವಾಲಯದಲ್ಲಿ ಬಲ್ಲಮಾವಟಿ ಬೂತ್ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಶಾಸಕ ಎ.ಎಸ್.ಪೊನ್ನಣ್ಣ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಲ್ಲಮಾವಟಿ ಬೂತ್ ಕಾಂಗ್ರೆಸ್ ಅಧ್ಯಕ್ಷ ಚಂಗೇಟಿರ ಕುಶಾಲಪ್ಪ ಶಾಸಕರ ಶ್ರೇಯೋಭಿವೃದ್ಧಿಗೆ ಪ್ರಾರ್ಥಿಸಿ, ಮುಂದಿನ ರಾಜಕೀಯ ಭವಿಷ್ಯ ಉತ್ತಮವಾಗಿರಲೆಂದು ಹಾರೈಸಿದರು. ಈ ಸಂದರ್ಭದಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷ ತಾಪಂಡ ಅಪ್ಪಣ್ಣ, ಕಾರ್ಯದರ್ಶಿ ಮಣವಟ್ಟಿರ ದಯಾ ಕುಟ್ಟಪ್ಪ, ಜಿಲ್ಲಾ ಎನ್ಎಸ್ಯುಐ ಕಾರ್ಯದರ್ಶಿ ಮುಕ್ಕಾಟಿರ ಯತೀಶ್, ನೆಲಜಿ ಬೂತ್ ಅಧ್ಯಕ್ಷ ಕೈಬುಲಿರ ಗಣಪತಿ, ಪಕ್ಷದ ನಾಯಕರುಗಳಾದ ಅಪ್ಪಚೆಟ್ಟೋಳಂಡ ಮಾಚಯ್ಯ, ಬೊಟ್ಟೋಮಳಂಡ ಜಾನಕ್ಕಿ, ಚೀಯಕಪೂವಂಡ ರಂಜನ್, ಚೋಕಿರ ವಾಸುದೇವ, ನಿವೃತ್ತ ಯೋಧ ಪೊನ್ನುಕಂಡ ಬೆಳ್ಳಿಯಪ್ಪ ಹಾಜರಿದ್ದರು.
ಮಡಿಕೇರಿ ಜೂ.26 NEWS DESK : ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆ ಸಂದರ್ಭ ಪ್ರತಿಕೃತಿ ದಹಿಸಿರುವುದಕ್ಕೆ ಬೇಸರಗೊಂಡು ಜನರೇ ನನ್ನ ಪರ ಸ್ವಯಂ ಪ್ರೇರಿತರಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಿಜೆಪಿ ಮಾಡುತ್ತಿರುವ ಆರೋಪದಂತೆ ಪ್ರತಿಕ್ರಿಯೆ ನೀಡಲು ನಾನು ಹೇಳಿರುವುದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಲೆ ಏರಿಕೆಯನ್ನು ವಿರೋಧಿಸಿ ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಆದರೆ ವಿರಾಜಪೇಟೆಯಲ್ಲಿ ಬಿಜೆಪಿಯ ಪ್ರತಿಭಟನೆ ಹಾದಿ ತಪ್ಪಿದೆ. ರಾಜ್ಯದ ಎಲ್ಲೂ ಪ್ರತಿಕೃತಿಯನ್ನು ದಹಿಸಿಲ್ಲ, ಸೈಕಲ್ ತುಳಿದಿದ್ದಾರೆ, ವಿರಾಜಪೇಟೆಯಲ್ಲಿ ಮಾತ್ರ ಪ್ರತಿಕೃತಿ ದಹಿಸಲಾಗಿದೆ. ಇದು ಸಹಜವಾಗಿಯೇ ಜನರ ಬೇಸರಕ್ಕೆ ಕಾರಣವಾಗಿದ್ದು, ಸ್ವಯಂ ಪ್ರೇರಣೆಯಿಂದ ನನ್ನ ಪರ ಧ್ವನಿ ಎತ್ತಿದ್ದಾರೆ. ಆದರೆ ಬಿಜೆಪಿಯವರ ಸರಣಿ ಹೇಳಿಕೆಗಳು ಬಿಜೆಪಿಯ ನಾಯಕರೇ ಹೇಳಿ ಮಾಡಿಸಿದ್ದಾಗಿದೆ ಎಂದರು. ಪಕ್ಷಾತೀತ, ಜಾತ್ಯತೀತ ಮತ್ತು ಧರ್ಮಾತೀತವಾಗಿ ಸಾಮಾಜಿಕ ಕಳಕಳಿಯಿಂದ ಜನಸೇವೆ ಮಾಡುತ್ತಾ ಬಂದವನು ನಾನು. ಅಭಿವೃದ್ಧಿ ಕಾರ್ಯಗಳ…
ನಾಪೋಕ್ಲು ಜೂ.26 NEWS DESK : ಬೆಟ್ಟಗೇರಿ ವಲಯ ಕಾಂಗ್ರೆಸ್ ವತಿಯಿಂದ ಪಾಲೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊಣ್ಣ ಅವರ ಹೆಸರಿನಲ್ಲಿ ಮಹಾ ರುದ್ರಭಿಷೇಕ ಪೂಜೆ ಸಲ್ಲಿಸಲಾಯಿತು. ಶಾಸಕ ಎ.ಎಸ್.ಪೊನ್ನಣ್ಣ ಅವರ ಶ್ರೇಯೋಭಿವೃದ್ಧಿಗೆ ಪಕ್ಷದ ಹಿರಿಯರಾದ ನಾಪಂಡ ಗಣೇಶ ಹೆರವನಾಡು ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ಪೂಜಾ ವಿಧಿ ವಿಧಾನವನ್ನು ದೇವಾಲಯದ ಮುಖ್ಯ ಅರ್ಚಕರಾದ ದೇವಿ ಪ್ರಸಾದ್ ನೆರವೇರಿಸಿದರು. ಈ ಸಂದರ್ಭ ಬೆಟ್ಟಗೇರಿ ವಲಯ ಅಧ್ಯಕ್ಷ ಕೊಡಗನ ತೀರ್ಥ ಪ್ರಸಾದ್ , ಗ್ರಾ.ಪಂ ಅಧ್ಯರಾದ ಚಳಿಯಂಡ ಕಮಲ ಉತ್ತಯ್ಯ, ಜಿಲ್ಲಾ ಕಾಂಗ್ರೆಸ್ ಸದಸ್ಯ ಮೋಹನ್ ರಾಜ್ , ಮಾಜಿ ವಲಯ ಅಧ್ಯಕ್ಷರು ಹಾಗೂ ಬೂತ್ ಅಧ್ಯಕ್ಷರಾದ ಕಾಳೇರಮ್ಮನ ಕುಮಾರ್, ಅರ್ವತ್ತೂಕ್ಲು ಬೂತ್ ಅಧ್ಯಕ್ಷ ಪೂಜಾರಿ ರ ಪ್ರದೀಪ್ ಕುಮಾರ್ , ಉಪಾಧ್ಯಕ್ಷರಾದ ಬಾಲಾಡಿ ಪ್ರತಾಪ್ , ಪಾಲೂರು ಬೂತ್ ಅಧ್ಯಕ್ಷ ದೊರೆರಾಜ್, ಮಚ್ಚಂಡ ಲಾಲು ಹಾಜರಿದ್ದರು. ವಲಯದ ಕಾರ್ಯದರ್ಶಿ ಮಜೀದ್ ಹಾಗೂ ಬೆಟ್ಟಗ್ಗೇರಿ…
ಕುಶಾಲನಗರ, ಜೂ.26 NEWS DESK : ಉತ್ತರ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಇಕೋ ಕ್ಲಬ್, ವಿಜ್ಞಾನ ಸಂಘ, ಎನ್.ಎಸ್.ಎಸ್.ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ರೆಡ್ ರಿಬ್ಬನ್ ಕ್ಲಬ್ ವತಿಯಿಂದ ಕುಶಾಲನಗರ ತಾಲ್ಲೂಕು ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳಸಾಗಣೆ ವಿರೋಧಿ ದಿನ ಆಚರಿಸಲಾಯಿತು. ಸಮಾಜ ವಿಜ್ಞಾನ ಸಂಘದ ಉಸ್ತುವಾರಿ ಶಿಕ್ಷಕಿ ಎಸ್.ಎಂ.ಗೀತಾ ಮಾತನಾಡಿ, ಯುವಕರು ವಿವಿಧ ಕಾರಣಗಳಿಂದ ಮಾದಕ ದ್ರವ್ಯದ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಮಾದಕ ದ್ರವ್ಯಗಳ ಪಿಡುಗು ಸಮಾಜದಲ್ಲಿ ಆಳವಾಗಿ ಬೇರೂರಿದೆ. ಇದರಿಂದಾಗಿ ಬಹುತೇಕ ಇಡೀ ಪೀಳಿಗೆಯು ವಿನಾಶದತ್ತ ಸಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಮಾದಕ ವ್ಯಸನ ಮತ್ತು ದುರುಪಯೋಗದ ಹಿಡಿತದಿಂದ ಯುವ ಸಮುದಾಯ ಹಾಗೂ ಜನರನ್ನು ರಕ್ಷಿಸಲು, ಮಾದಕ ವ್ಯಸನ ಮತ್ತು ಅಕ್ರಮ ಸಾಗಣೆ ವಿರುದ್ಧ ಅರಿವು ಮೂಡಿಸುವ ದೃಷ್ಟಿಯಿಂದ ಪ್ರತಿ ವರ್ಷ ಜೂನ್…
ಮಡಿಕೇರಿ ಜೂ.26 NEWS DESK : ಡಾ.ಶಾನ್ ರಾಕ್ ಪ್ರತಿಷ್ಠಾನದ ವತಿಯಿಂದ “ಸೋನಿಕ್ ಸೊಲೇಸ್ 5.0′ ಶೀರ್ಷಿಕೆಯಡಿಯಲ್ಲಿ ಮಡಿಕೇರಿಯ ಜಿಲ್ಲಾ ಕಾರಾಗೃಹದ ಕೈದಿಗಳಿಗೆ ಧ್ವನಿ ಚಿಕಿತ್ಸೆ (ಸೌಂಡ್ ಹೀಲಿಂಗ್) ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರಾಗೃಹದ ಉಪಾಧೀಕ್ಷಕ ಸಂಜಯ್ ದತ್ತಿ, ಪ್ರತಿಷ್ಠಾನದ ಪ್ರಯತ್ನಗಳನ್ನು ಶ್ಲಾಘಿಸಿದರು. ಡಾ.ಶರಣ್ ರಾಕ್ ಮಾತನಾಡಿ, ಅಪರಾಧಿ ನಡವಳಿಕೆ ಹೆಚ್ಚಾಗಿ ಅಂತರ್ಗತ ಲಕ್ಷಣವಾಗಿರದೇ ಸನ್ನಿವೇಶಾನುಸಾರ ಸಾಂದರ್ಭಿಕವಾಗಿ ಬೇರು ಬಿಟ್ಟಿರುತ್ತದೆ. ಈ ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವವರಿಗೆ ತಮ್ಮ ಭಾವನೆಗಳನ್ನು ನಿಭಾಯಿಸುವ ಮತ್ತು ಹಿಂದು ಮುಂದು ನೋಡದೇ ಆವೇಶಭರಿತ ಆಯ್ಕೆಗಳನ್ನು ತಪ್ಪಿಸುವ ಸಾಧನಗಳೊಂದಿಗೆ ಸಜ್ಜುಗೊಳಿಸಲಲಾಗುವುದು ಎಂದರು. ಡಾ.ಶರಣ್ ರಾಕ್ ಪ್ರತಿಷ್ಟಾನವು ಈ ಕಾರ್ಯಾಗಾರವನ್ನೂ ಹೊರತಾದ ವಿಸ್ತ್ರತ ಉದ್ದೇಶವನ್ನು ಹೊಂದಿದೆ. ಗ್ರಾಮೀಣ ಭಾಗದ ಆಸಕ್ತ ಕಲಾವಿದರನ್ನು ತರಬೇತುಗೊಳಿಸುವುದರ ಮೂಲಕ ಸಶಕ್ತಿಕರಿಸುವುದು ಮತ್ತು ಸಂಗೀತವನ್ನು ವೃತ್ತಿಯಾಗಿ ಅನುಸರಿಸಲು ಅವಕಾಶ ಒದಗಿಸುವ ಉದ್ದೇಶವನ್ನು ಹೊಂದಿದೆ. ಗುಣಪಡಿಸುವಿಕೆ, ಕ್ರಿಯಾಶೀಲತೆ, ಶಾಂತಿ ಮತ್ತು…






