ಮಡಿಕೇರಿ ಜು.8 NEWS DESK : ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದ ನೂತನ ಅಧ್ಯಕ್ಷರನ್ನಾಗಿ ನಗರಸಭಾ ಸದಸ್ಯ ಬಿ.ವೈ.ರಾಜೇಶ್ ಹಾಗೂ ನಾಲ್ವರು ಸದಸ್ಯರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ನೂತನ ಸದಸ್ಯರಾಗಿ ಸುದಯ್ ಎಂ.ಎನ್, ಮೊಣ್ಣಪ್ಪ ಕೆ.ಎ, ಮಿನಾಜ್ ಫಾತಿಮಾ ಹಾಗೂ ಚಂದ್ರಶೇಖರ್ ಆರ್.ಪಿ. ನಿಯುಕ್ತಿಗೊಂಡಿದ್ದಾರೆ.
ಲೇಖಕ: admin
ಮಡಿಕೇರಿ ಜು.8 NEWS DESK : ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದ ನೂತನ ಅಧ್ಯಕ್ಷರನ್ನಾಗಿ ನಗರಸಭಾ ಸದಸ್ಯ ಬಿ.ವೈ.ರಾಜೇಶ್ ಹಾಗೂ ನಾಲ್ವರು ಸದಸ್ಯರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ನೂತನ ಸದಸ್ಯರಾಗಿ ಸುದಯ್ ಎಂ.ಎನ್, ಮೊಣ್ಣಪ್ಪ ಕೆ.ಎ, ಮಿನಾಜ್ ಫಾತಿಮಾ ಹಾಗೂ ಚಂದ್ರಶೇಖರ್ ಆರ್.ಪಿ. ನಿಯುಕ್ತಿಗೊಂಡಿದ್ದಾರೆ.
ಮಡಿಕೇರಿ ಜು.8 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯಾಗುವ ಮೊದಲೇ ಪ್ರವಾಹ ಮುಂಜಾಗೃತಾ ಕ್ರಮವಾಗಿ ಸಂಜೆ ವೇಳೆ 1 ಸಾವಿರ ಕ್ಯುಸೆಕ್ ಪ್ರಮಾಣದ ನೀರನ್ನು ನದಿ ಪಾತ್ರಕ್ಕೆ ಬಿಡುಗಡೆ ಮಾಡಲಾಗಿದೆ. ಕ್ರೆಸ್ಟ್ ಗೇಟ್ ತೆರೆಯುವ ವಿದ್ಯುತ್ ಚಾಲಿತ ಯಂತ್ರದ ಗುಂಡಿ ಒತ್ತುವ ಮೂಲಕ ನೀರನ್ನು ಬಿಡುಗಡೆ ಮಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ, ಮುಂದಿನ ಮಳೆಯ ಮುನ್ಸೂಚನೆ, ಒಳ ಹರಿವಿನ ಪ್ರಮಾಣ, ಪ್ರಸ್ತುತ ನದಿಗೆ ಹರಿ ಬಿಡಲಾಗುತ್ತಿರುವ ನೀರಿನ ಪ್ರಮಾಣ ಮತ್ತಿತ್ತರ ವಿಚಾರಗಳ ಕುರಿತು ಹಾರಂಗಿ ಜಲಾಶಯದ ಅಧಿಕಾರಿಗಳು ಮತ್ತು ಇಂಜಿನಿಯರ್ಗಳಿAದ ಮಾಹಿತಿ ಪಡೆದರು. ಉತ್ತಮ ಮಳೆಯಿಂದ ಕಾವೇರಿ ನದಿಯಲ್ಲೂ ನೀರಿನ ಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಹರಿಸುವ ನೀರಿನಿಂದ ಪ್ರವಾಹ ಪರಿಸ್ಥಿತಿ ಉಂಟಾಗದAತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಶಾಸಕರು ಮತ್ತು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಜಲಾಶಯದ 4 ಕ್ರೆಸ್ಟ್…
ಮಡಿಕೇರಿ ಜು.8 NEWS DESK : ಮದೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರ್ತೋಜಿ ಬಳಿ ಮಳೆಯಿಂದಾಗಿ ರಸ್ತೆಯ ಒಂದು ಬದಿ ಉಬ್ಬಿಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಎಚ್ಚರಿಕೆ ಫಲಕ ಅಳವಡಿಸಿದ್ದಾರೆ.
ಸೋಮವಾರಪೇಟೆ ಜು.8 NEWS DESK : ಸಮಯದ ಸದುಪಯೋಗ, ನಿರಂತರ ಕಲಿಕೆಯಿಂದ ವಿದ್ಯಾರ್ಥಿಗಳು ಅಧಿಕ ಅಂಕಗಳನ್ನು ಗಳಿಸಬಹುದು ಎಂದು ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಹೇಳಿದರು. ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘ ಹಾಗೂ ಫ್ರೇಶರ್ಸ್ ಡೇ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಮಾಧ್ಯಮದಲ್ಲಿ ಶಿಕ್ಷಣ ಕೊಡಬೇಕೆಂಬ ಉದ್ದೇಶದಿಂದ ಒಕ್ಕಲಿಗರ ಸಂಘ ಸಂಸ್ಥೆಯನ್ನು ಹುಟ್ಟು ಹಾಕಿದೆ. ಶೇ.99ರಷ್ಟು ಮಂದಿ ಗ್ರಾಮೀಣ ವಿದ್ಯಾರ್ಥಿಗಳು ನಮ್ಮ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸತತ 7ನೇ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದ ಹೆಗ್ಗಳಿಕೆ ಶಾಲೆಗಿದೆ. ಪ್ರಸಕ್ತ ವರ್ಷ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲೂ ಶೇ.100 ಫಲಿತಾಂಶ ಸಿಕ್ಕಿದೆ. ಹಿಂದಿನ ವರ್ಷದಿಂದ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ತೆರೆಯಲಾಗಿದೆ ಎಂದು ಹೇಳಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷರುಗಳಾಗಿ ಕೆ.ಎಲ್.ಕೀರ್ತನ್, ಎಚ್.ಆರ್.ಜೀವಿತ, ಉಪಾಧ್ಯಕ್ಷರುಗಳಾಗಿ ಪೂರ್ಣಚಂದ್ರ, ಸ್ನೇಹ, ಕ್ರೀಡಾ ಮಂತ್ರಿಗಳಾಗಿ ಕೃಷಿ, ಅಮೂಲ್ಯ, ಶಿಸ್ತುಪಾಲನ ಮಂತ್ರಿಗಳಾಗಿ ಮಿಥುನ್,…
ಮಡಿಕೇರಿ ಜು.8 NEWS DESK : ಅರಣ್ಯ ಇಲಾಖೆಯ ವಿರಾಜಪೇಟೆ ಪ್ರಾದೇಶಿಕ ವಿಭಾಗ ತಿತಿಮತಿ ವಲಯದ ವತಿಯಿಂದ ದೇವರಪುರದಲ್ಲಿ ವನಮಹೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆಯ ಶಾಸಕರಾದ ಎ.ಎಸ್.ಪೊನ್ನಣ್ಣ ಭಾಗವಹಿಸಿ ಗಿಡನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಈ ಸಂದರ್ಭ ಕಾಂಚನ್ ಪೊನ್ನಣ್ಣ ಮತ್ತು ಅರಣ್ಯ ಅಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಜು.8 NEWS DESK : ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯು ಜು.11 ರಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಕೊಡಗು ಜಿಲ್ಲಾ ಪಂಚಾಯಿತಿಯ ಮುಖ್ಯ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿ.ಪಂ.ಸಿಇಒ ತಿಳಿಸಿದ್ದಾರೆ.
ಮಡಿಕೇರಿ ಜು.8 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಬಡವರ ಆರ್ಥಿಕ ಸಬಲೀಕರಣಕ್ಕೆ ಪ್ರಯತ್ನಿಸಿದೆ. ಆ ನಿಟ್ಟಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ ರೂ.2000 ನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಇದುವರೆಗೆ 1,15,229 ಮಂದಿ ಮಹಿಳೆಯರು ನೋಂದಣಿ ಮಾಡಿದ್ದು, ಇವರಲ್ಲಿ 1,14,056 ಮಂದಿ ಮಹಿಳೆಯರಿಗೆ ಮಂಜೂರಾಗಿ ಶೇ.98.98 ರಷ್ಟು ಸಾಧನೆ ಮಾಡಲಾಗಿದೆ. ತಾಲ್ಲೂಕುವಾರು ಗಮನಿಸಿದಾಗ ಮಡಿಕೇರಿ ತಾಲ್ಲೂಕಿನಲ್ಲಿ 30,341 ಮಂದಿ ಮಹಿಳೆಯರು ನೋಂದಣಿಯಾಗಿದ್ದು, ಇವರಲ್ಲಿ 30169 ಮಂದಿ ಮಹಿಳೆಯರಿಗೆ ಮಂಜೂರಾತಿ ದೊರೆತಿದ್ದು, ಶೇ.99.43 ರಷ್ಟು ಸಾಧನೆ ಮಾಡಲಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ 24,238 ಮಂದಿ ಮಹಿಳೆಯರು ಹೆಸರು ನೋಂದಾಯಿಸಿದ್ದು, ಇವರಲ್ಲಿ 24,124 ಮಂದಿ ಮಹಿಳೆಯರಿಗೆ ಮಂಜೂರಾತಿ ದೊರೆತಿದ್ದು, ಶೇ.99.53 ರಷ್ಟು ಸಾಧನೆ ಮಾಡಲಾಗಿದೆ. ಕುಶಾಲನಗರ ತಾಲ್ಲೂಕಿನಲ್ಲಿ 22,108 ಫಲಾನುಭವಿಗಳು ನೋಂದಣಿಯಾಗಿದ್ದು, ಇವರಲ್ಲಿ 21,830 ಮಂದಿ ಮಹಿಳೆಯರಿಗೆ…
ವಿರಾಜಪೆಟೆ ಜು.8 NEWS DESK : ವಿರಾಜಪೇಟೆಯ ಪ್ರಗತಿ ಶಾಲೆಯಲ್ಲಿ ವಿದ್ಯಾರ್ಥಿ ಸಂಘವನ್ನು ವಿರಾಜಪೇಟೆ ವೃತ್ತ ನಿರೀಕ್ಷಕರಾದ ಶಿವರುದ್ರಪ್ಪಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಈ ಶಾಲೆಯಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆ ನಡೆಯುತ್ತಿದೆ. ನನ್ನ ಮೂವತ್ತು ವರ್ಷಗಳ ಸೇವೆಯಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿದೆ, ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ನಾಯಕನಾಗುವ ಎಲ್ಲಾ ಗುಣಗಳಿವೆ ಎಂದು ನುಡಿದರು. ಪ್ರಗತಿ ಶಾಲೆಯ ವ್ಯವಸ್ಥಾಪಕರಾದ ಮಾದಂಡ ತಿಮ್ಮಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ ನಮ್ಮ ಶಾಲೆಯಲ್ಲಿ ವಿಧ್ಯಾಭ್ಯಾಸಗಳ ಜೊತೆಯಲ್ಲಿ ವಿವಿಧ ರೀತಿಯ ಚಟುವಟಿಕೆಗಳಿಗೆ ಹೆಚ್ಚಿನ ಪ್ರಮಾಣದ ಒತ್ತು ನೀಡಲಾಗುತ್ತಿದೆ. ಮಕ್ಕಳು ಹಾಗೂ ಪೋಷಕರು ಉತ್ತಮ ರೀತಿಯಲ್ಲಿ ನಮಗೆ ಸಹಕಾರ ನೀಡುತ್ತಾರೆ ಎಂದು ತಿಳಿಸಿದರು. ವೇದಿಕೆಯಲ್ಲಿ ನೂತನ ಸಾಲಿನ ನಾಯಕರಿಗೆ ಜವಾಬ್ದಾರಿ ನೀಡುವ ಕಾರ್ಯಕ್ರಮ ನಡೆಯಿತು. ಶಾಲಾ ನಾಯಕನಾಗಿ 9ನೇ ತರಗತಿ ಉಮರ ಸುಲ್ತಾನ್, ಉಪನಾಯಕಿಯಾಗಿ ಕೆ.ಎ.ದಿಯಾ, ಕ್ರೀಡಾ ನಾಯಕನಾಗಿ ಬಿ.ಜಿ.ಶಿಶಿರ ಸುಗಂಧ್,…
ಮಡಿಕೇರಿ ಜು.8 NEWS DESK : ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ. ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿರುತ್ತದೆ. ಜಲಾಶಯವು ಶೀಘ್ರವೇ ಗರಿಷ್ಟ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಆದ್ದರಿಂದ ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಕೋರಲಾಗಿದೆ.






