ಕುಶಾಲನಗರ ಜು.8 NEWS DESK : ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಲ್ಲಿ ಹಿರಿಯ ಪತ್ರಕರ್ತರಿಗೆ ಪುಲಿಯಂಡ ರಾಮ್ ದೇವಯ್ಯ ಅವರು ಜ್ಞಾನಗಂಗಾ ಶಾಲೆಯ ಹೆಸರಿನಲ್ಲಿ ಸ್ಥಾಪಿಸಿರುವ ವಾರ್ಷಿಕ ದತ್ತಿ ಪ್ರಶಸ್ತಿಗೆ ಹೊಸದಿಗಂತ ಪತ್ರಿಕೆಯ ಜಿಲ್ಲಾ ವರದಿಗಾರ ಕೆ. ತಿಮ್ಮಪ್ಪ ಭಾಜನರಾಗಿದ್ದಾರೆ. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಕೊಡಗು ವಿಶ್ವವಿದ್ಯಾಲಯದ ಆಶ್ರಯದಲ್ಲಿ ಜು.9 ರಂದು ಕೊಡಗು ವಿಶ್ವವಿದ್ಯಾಲಯದ ಚಿಕ್ಕ ಅಳುವಾರ ಜ್ಞಾನಕಾವೇರಿ ಸಭಾಂಗಣದಲ್ಲಿ ಮಧ್ಯಾಹ್ನ 1 ಗಂಟೆಗೆ ನಡೆಯುವ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಕೊಡಗು ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೊ.ಅಶೋಕ್ ಸಂಗಪ್ಪ ಆಲೂರ ಉದ್ಘಾಟಿಸಲಿದ್ದಾರೆ. ಗೌರವ ಉಪಸ್ಥಿತಿಯನ್ನು ಕೊಡಗು ವಿಶ್ವ ವಿದ್ಯಾಲಯದ ರಿಜಿಸ್ಟ್ರಾರ್ (ಪರಿಕ್ಷಾಂಗ) ಡಾ.ಸೀನಪ್ಪ ವಹಿಸಲಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರರು ಹಾಗೂ ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ.ಅನಂತಶಯನ ಮುಖ್ಯ ಭಾಷಣ ಮಾಡಲಿದ್ದಾರೆ. ಕುಶಾಲನಗರ ರೋಟರಿಯ ಅಧ್ಯಕ್ಷ ಎಂ.ಡಿ.ರಂಗಸ್ವಾಮಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕೊಡಗು ಪತ್ರಕರ್ತರ…
ಲೇಖಕ: admin
ಮಡಿಕೇರಿ ಜು.8 NEWS DESK : ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯ ನೂತನ ಅಧ್ಯಕ್ಷೆಯಾಗಿ ಆಗ್ನೇಸ್ ಮುತ್ತಣ್ಣ ಮತ್ತು ಕಾಯ೯ದಶಿ೯ಯಾಗಿ ರಶ್ಮಿ ಪ್ರವೀಣ್ ಅಧಿಕಾರ ಸ್ವೀಕರಿಸಿದರು. ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಇನ್ನರ್ ವೀಲ್ ನ ನಿಕಟಪೂವ೯ ಜಿಲ್ಲಾಧ್ಯಕ್ಷೆ ಪೂಣಿ೯ಮಾ ರವಿ ಪದಗ್ರಹಣ ನೆರವೇರಿಸಿದರು. ಕಾಯ೯ಕ್ರಮದಲ್ಲಿ ಮಡಿಕೇರಿ ನಗರಸಭೆಯ ಪೌರಕಾಮಿ೯ಕರಾದ ಲಕ್ಷ್ಮಿ ಮತ್ತು ಲಕ್ಷ್ಮಮ್ಮ ಅವರನ್ನು ಸನ್ಮಾನಿಸಲಾಯಿತು. ರೋಟರಿ ಮಡಿಕೇರಿಯ ಅಧ್ಯಕ್ಷ ಸುದಯ್ ನಾಣಯ್ಯ ಅವರು ಲಲಿತಾರಾಘವನ್ ಸಂಪಾದಕತ್ವದಲ್ಲಿ ಪ್ರಕಟಿತ ಗಿರಿಶೖಂಗ ವಾತಾ೯ಸಂಚಿಕೆ ಬಿಡುಗಡೆಗೊಳಿಸಿದರು. ವೇದಿಕೆಯಲ್ಲಿ ಇನ್ನರ್ ವೀಲ್ ಖಜಾಂಜಿ ದಿವ್ಯ ಮುತ್ತಣ್ಣ, ನಿಕಟಪೂವ೯ ಅಧ್ಯಕ್ಷೆ ಕನ್ನು ದೇವರಾಜ್ ಉಪಸ್ಥಿತರಿದ್ದರು. ಡಾ.ರೇಣುಕಾ ಸುಧಾಕರ್ ಪ್ರಾಥಿ೯ಸಿ, ಲತಾ ಚೆಂಗಪ್ಪ, ಶಫಾಲ್ಲಿ ರೈ, ಗುಲಾಬಿ ಜನಾರ್ಧನ್, ನಮಿತಾ ರೈ, ರಾಧಿಕ ವಿಶ್ವನಾಥ್ ನಿವ೯ಹಿಸಿದ ಕಾಯ೯ಕ್ರಮದಲ್ಲಿ ಬೊಳ್ಳು ಮೇದಪ್ಪ ವಂದಿಸಿದರು.
ಮಡಿಕೇರಿ ಜು.8 NEWS DESK : ಅಂತರರಾಷ್ಟ್ರೀಯ ಸೇವಾ ಸಂಸ್ಥೆಯಾಗಿ ಜಗದಗಲ ಖ್ಯಾತಿ ಗಳಿಸಿರುವ ರೋಟರಿ ಸಂಸ್ಥೆಯು ನಾಯಕತ್ವ ಗುಣ ಬೆಳೆಸಲು ನೆರವಾಗುವುದರೊಂದಿಗೆ ಸದಸ್ಯರಲ್ಲಿರುವ ಪ್ರತಿಭೆಯ ಅನಾವರಣಕ್ಕೂ ವೇದಿಕೆಯಾಗಿ ಸಮಾಜ ಸೇವೆಗೆ ಪ್ರೇರಪಣೆ ನೀಡುತ್ತದೆ ಎಂದು ಸುಳ್ಯ ರೋಟರಿ ಸಂಸ್ಥೆಯ ಮಾಜಿ ಸಹಾಯಕ ಗವನ೯ರ್ ಡಾ. ಪಿ.ಕೆ.ಕೇಶವ್ ಹೇಳಿದ್ದಾರೆ. ಮಡಿಕೇರಿ ರೋಟರಿ ಸಭಾಂಗಣದಲ್ಲಿ ರೋಟರಿ ಮಡಿಕೇರಿ ವುಡ್ಸ್ ನ ನೂತನ ಅಧ್ಯಕ್ಷರಾಗಿ ಹರೀಶ್ ಕಿಗ್ಗಾಲು ಮತ್ತು ಕಾಯ೯ದಶಿ೯ಯಾಗಿ ಕಿರಣ್ ಕುಂದರ್ ಹಾಗೂ ತಂಡದ ಪದಗ್ರಹಣ ನೆರವೇರಿಸಿ ಮಾತನಾಡಿದ ಡಾ. ಪಿ.ಕೆ.ಕೇಶವ್, ಸರಿಯಾದ ವೇದಿಕೆಗಳು ದೊರಕದೇ ಇದ್ದಾಗ ಅಸಾಮಾನ್ಯ ವ್ಯಕ್ತಿ ಕೂಡ ಸಾಮಾನ್ಯನಾಗಿಬಿಡುತ್ತಾನೆ, ರೋಟರಿಯಂಥ ನಾಯಕತ್ವ ಬೆಳೆಸುವ ಸಂಸ್ಥೆಗಳು ಅಸಮಾನ್ಯ ವ್ಯಕ್ತಿತ್ವದವರೊಂದಿಗೆ ಸಾಮಾನ್ಯನನ್ನೂ ಅಸಮಾನ್ಯ ವ್ಯಕ್ತಿತ್ವದ ನಾಯಕನನ್ನಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಹೀಗಾಗಿ ರೋಟರಿಯಂಥ ಸೇವಾ ಸಂಸ್ಥೆಗಳಲ್ಲಿ ಸೇಪ೯ಡೆಯಾಗಿ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಟಿ20 ವಿಶ್ವಕಪ್ ನಲ್ಲಿ ಭಾರತ ತಂಡ ಹೇಗೆ ಎಲ್ಲಾ ಆಟಗಾರರ ಸಾಮಥ್ಯ೯…
ಮಡಿಕೇರಿ ಜು.8 NEWS DESK : ಆಂಧ್ರಪ್ರದೇಶದ ಕಡಪದಲ್ಲಿ ಜು.10ರಿಂದ ನಡೆಯಲಿರುವ ಹಾಕಿ ಇಂಡಿಯಾ ದಕ್ಷಿಣ ವಲಯ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಮಕ್ಕಂದೂರು ಗ್ರಾಮದ, ಪ್ರಸ್ತುತ ಬೆಂಗಳೂರಿನ ಕ್ರೀಡಾ ವಸತಿ ನಿಲಯದಲ್ಲಿರುವ ವಿಶ್ವಜಿತ್ ಕೆ.ವಿ ಹಾಕಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಮಕ್ಕಂದೂರಿನ ಕುಂಭಗೌಡನ ವಿನೋದ್ ಕುಮಾರ್ ಹಾಗೂ ಜಲಜಾಕ್ಷಿ ದಂಪತಿಯ ಪುತ್ರ ವಿಶ್ವಜಿತ್, ಬೆಂಗಳೂರಿನ ಅಲ್- ಅಮೀನ್ ಕಾಲೇಜ್ ನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
ಮಡಿಕೇರಿ ಜು.8 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಜನ್ಮದಿನಾಚರಣೆ ಅಂಗವಾಗಿ ಜು.9 ರಂದು ಭಾಗಮಂಡಲದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಕೋಳಿಬೈಲು ವೆಂಕಟೇಶ್ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 7 ಗಂಟೆಯಿಂದ 7.30ರ ವರೆಗೆ ತಲಕಾವೇರಿಯಲ್ಲಿ ವಿಶೇಷ ಪೂಜೆ, 8 ಗಂಟೆಗೆ ತಲಕಾವೇರಿಯಲ್ಲಿ ಪತ್ರಿಕಾಗೋಷ್ಠಿ, 8.30ಕ್ಕೆ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ತುಲಭಾರ, 9 ಗಂಟೆಗೆ ಭಾಗಮಂಡಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಅರಿವಿನ ಮೂಲಕ ಮಕ್ಕಳೊಂದಿಗೆ ಜನ್ಮದಿನ ಆಚರಣೆ, 9.30 ಗಂಟೆಗೆ ಭಾಗಮಂಡಲದ ಮಾರುಕಟ್ಟೆಯಿಂದ ಸ್ವಚ್ಛತಾ ಅಭಿಯಾನ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಕಡಂಗ ಜು.8 NEWS DESK : ಬದ್ರಿಯಾ ಸುನ್ನಿ ಮದರಸದ ನೂತನ ನವಿಕೃತ ಕಟ್ಟಡವನ್ನು ಮಗ್ರಿಬ್ ನಮಾಜ್ ಬಳಿಕ ಉದ್ಘಾಟಿಸಲಾಯಿತು. ಬದ್ರಿಯಾ ಮಸೀದಿಯ ಮುದರಿಸ್ ಸತ್ತಾರ್ ಅಹ್ಸನಿ ಮದರಸ ಕೊಠಡಿಯನ್ನು ಉದ್ಘಾಟಿಸಿ, ಮಾತನಾಡಿ ದಾನಿಗಳ ಸಹಕಾರದಿಂದ ಉತ್ತಮ ಕಟ್ಟಡ ನಿರ್ಮಾಣವಾಗಿದೆ ಇದಕ್ಕೆ ಪ್ರಯತ್ನ ಪಟ್ಟ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ ಪ್ರಾರ್ಥಿಸಿದರು. ಈ ಸಂದರ್ಭ ಬದ್ರಿಯಾ ಜಮಾಅತ್ ಅಧ್ಯಕ್ಷ ಕೆ.ಇ.ಉಸ್ಮಾನ್, ಕೆ.ಎಂ.ಜೆ ಅಧ್ಯಕ್ಷ ಸುಲೈಮಾನ್, ಎಸ್ ವೈ ಎಸ್ ಅಧ್ಯಕ್ಷ ಅಶ್ರಫ್, ಮೊಯ್ದು ಕುಟ್ಟಿ ಮುಸ್ಲಿಯಾರ್, ಬದ್ರಿಯಾ ಜಮಾಅತ್ ಉಪಾಧ್ಯಕ್ಷ ಅಬ್ದುಲ್ ರಝಕ್, ಪ್ರಧಾನ ಕಾರ್ಯದರ್ಶಿ ರಾಶೀದ್, ಕೋಶಾಧಿಕಾರಿ ರಜಾಕ್, ಸದರ್ ಮುಹಲೀಮ್ ಹುಸೈನಾರ್ ಸಅದಿ, ರಝಕ್ ಮುಸ್ಲಿಯಾರ್, ರಫೀಕ್ ಮುಸ್ಲಿಯಾರ್, ಹಿರಿಯರಾದ ಹಸೈನಾರ್, ಬದ್ರಿಯಾ ಯು.ಎ.ಇ. ಸಮಿತಿಯ ಉಪಾಧ್ಯಕ್ಷ ರಶೀದ್ ಅಶ್ರಫಿ, ಮುಸ್ತಫಾ ಜಿದ್ದಾ, ಜಮಾಅತ್ ಪದಾಧಿಕಾರಿಗಳಾದ ಸಹದ್, ನೌಫಲ್, ಕರೀಂ, ಎಸ್ ವೈ ಎಸ್, ಕೆ.ಎಂ.ಜೆ, ಎಸ್.ಎಸ್.ಎಫ್. ಕಾರ್ಯಕರ್ತರು, ಮತಿತ್ತರು ಹಾಜರಿದ್ದರು. ವರದಿ : ನೌಫಲ್
ನಾಪೋಕ್ಲು ಜು.8 NEWS DESK : ನರಿಯಂದಡ ಗ್ರಾ.ಪಂ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಕುಂಜಿಲ, ಕಕ್ಕಬ್ಬೆ ಗ್ರಾ.ಪಂ ವ್ಯಾಪ್ತಿಯಲ್ಲಿಯ ಮರ೦ದೊಡ ಗ್ರಾಮದಲ್ಲಿ ರೈತರು ಬೆಳೆದ ಕಾಫಿ ಗಿಡಗಳನ್ನು ಕಾಡಾನೆಗಳು ತುಳಿದು ನಾಶಪಡಿಸುತ್ತಿವೆ. ಕಾಡಾನೆಗಳ ಹಾವಳಿಯಿಂದ ಕಾಫಿ ಮತ್ತಿತರ ಬೆಳೆಗಳು ನಾಶವಾಗಿದ್ದು, ರೈತರು ಸಂಕಷ್ಟ ಅನುಭವಿಸುವಂತಾಗಿದೆ. ನಿಡುಮಂಡ ಹರೀಶ ಹಾಗೂ ಅಶೋಕ್, ಭೀಮಯ್ಯ ಅವರ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳು ಕಾಫಿ ಗಿಡಗಳನ್ನು ತುಳಿದು ನಾಶಪಡಿಸಿವೆ. ಸಂಬಂಧಪಟ್ಟ ಅರಣ್ಯ ಇಲಾಖೆ ಕಾಡಾನೆಗಳನ್ನು ಸೆರೆಹಿಡಿದು ಸ್ಥಳಾಂತರಿಸಬೇಕು. ನಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಜು.8 NEWS DESK : ಆಂಧ್ರಪ್ರದೇಶದ ಕಡಪದಲ್ಲಿ ಜು 10 ರಿಂದ 17ವರೆಗೆ ನಡೆಯುವ ಎರಡನೇ ಹಾಕಿ ಇಂಡಿಯಾ ದಕ್ಷಿಣ ವಲಯ ಚಾಂಪಿಯನ್ ಶಿಪ್ ಜೂನಿಯರ್ ಕರ್ನಾಟಕ ತಂಡಕ್ಕೆ ಕೊಡಗಿನ ಏಳು ಆಟಗಾರರು ಆಯ್ಕೆಗೊಂಡಿದ್ದಾರೆ. ಬೆಂಗಳೂರಿನಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಈ ತಂಡದಲ್ಲಿ ಕೊಡಗಿನ ಕ್ರೀಡಾಪಟುಗಳಿಗೆ ಹೆಚ್ಚಿನ ಸ್ಥಾನ ಲಭಿಸಿದೆ. ನೂತನ ತಂಡದಲ್ಲಿ ನಾಪೋಕ್ಲು ಗ್ರಾಮದವರಾದ ಬಿದ್ದಾಟಂಡ ಬೋಪಣ್ಣ, ಬಿದ್ದಾಟಂಡ ಅಖಿಲ್, ಕುಲ್ಲೇಟೀರ ವಚನ್ ಮತ್ತು ಕಕ್ಕಬ್ಬೆ ಯವಕಪಾಡಿ ಗ್ರಾಮದ ಚೊಯಮಾಡ ಆಕಾಶ್ ಬಿದ್ದಪ್ಪ, ವಿರಾಜಪೇಟೆಯ ತೀತಮಾಡ ಯಶ್ವಥ್, ಹೃತಿಕ್ ಅಯ್ಯಪ್ಪ ಹಾಗೂ ಅಶ್ವಥ್ ಆಯ್ಕೆಗೊಂಡಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜು.8 NEWS DESK : ಮಾತೃವಂದನಾ ಯೋಜನೆಯು ಕೇಂದ್ರ ಪುರಸ್ಕೃತ ಯೋಜನೆಯಾಗಿದ್ದು, ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕೃತ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೋಂದಣಿಗೆ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಕಾರ್ಡ್ ಮತ್ತು ಮಗುವಿನ ಲಸಿಕೆ ಮಾಹಿತಿಯ ಪ್ರತಿ, ಫಲಾನುಭವಿಯ ಆಧಾರ್ ಕಾರ್ಡ್, ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಜೋಡಣೆಯಾಗಿರಬೇಕು. ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನರೇಗಾ ಕಾರ್ಡ್, ಇ-ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್(ಯಾವುದಾದರು ಪ್ರತಿ) ಸಲ್ಲಿಸಬೇಕು. ಮಹಿಳೆಯ ಮೊದಲ ಪ್ರಸವದ ಮತ್ತು ನಂತರದ ಸಾಕಷ್ಟು ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ತರಲು ಪ್ರೋತ್ಸಾಹಧನ ರೂಪದಲ್ಲಿ ವೇತನ ನಷ್ಟಕ್ಕಾಗಿ ನೀಡುವುದಾಗಿದೆ. ಮೊದಲ ಮಗುವಿಗೆ…
NEWS DESK : ದೇಶದಾದ್ಯಂತ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾಲಿಯಿರುವ 6128 ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಐಬಿಪಿಎಸ್ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಅಭ್ಯರ್ಥಿಗಳ ಆಯ್ಕೆ ಹಾಗೂ ನೇಮಕಾತಿ ಸ್ವರೂಪ ಕುರಿತ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಗುಮಾಸ್ತ (ಕ್ಲರ್ಕ್) ಹುದ್ದೆಗೆ ಸೇರಬೇಕು ಎಂಬ ಕನಸು ಹೊತ್ತವರಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್ ) ಸಿಹಿ ಸುದ್ದಿಯೊಂದನ್ನು ನೀಡಿದೆ. ದೇಶದ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾಲಿಯಿರುವ ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಕ್ಕಾಗಿ ‘ಸಾಮಾನ್ಯ ಪ್ರವೇಶ ಪರೀಕ್ಷೆ'(CRP ಗುಮಾಸ್ತರು XIV)ನಡೆಸುತ್ತಿದ್ದು, ಸೋಮವಾರ ಅಧಿಸೂಚನೆ ಹೊರಡಿಸಿದೆ. ಈ ಬಾರಿ 11 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾಲಿಯಿರುವ 6128 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ನಮ್ಮ ರಾಜ್ಯದಲ್ಲಿ 457 ಹುದ್ದೆಗಳು ಖಾಲಿ ಇವೆ. ಎಂದಿನಂತೆ, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನವಾಗಿರುತ್ತದೆ. ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯಿದ್ದು ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ…






