ಲೇಖಕ: admin

ನವದೆಹಲಿ ಜೂ.26 NEWS DESK : 18ನೇ ಲೋಕಸಭೆಯ ಸ್ಪೀಕರ್ ಆಗಿ ಬಿಜೆಪಿ ಸಂಸದ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಸತತ 2ನೇ ಅವಧಿಗೆ ಲೋಕಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಓಂ ಬಿರ್ಲಾ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅಭಿನಂದನೆ ಸಲ್ಲಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾತನಾಡಿ 2ನೇ ಬಾರಿಗೆ ಲೋಕಸಭಾಧ್ಯಕ್ಷ ಹುದ್ದೆಯನ್ನು ಅಲಂಕರಿಸಿ ದೊಡ್ಡ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೀರಿ. ಮುಂದಿನ 5 ವರ್ಷಗಳವರೆಗೆ ನೀವು ನಮಗೆ ಮಾರ್ಗದರ್ಶನ ನೀಡುತ್ತೀರಿ ಎಂದು ನಾವು ಭಾವಿಸುತ್ತೇವೆ ಎಂದರು.

Read More

ಮಡಿಕೇರಿ ಜೂ.26 NEWS DESK : ಶ್ರೀ ರಾಜೇಶ್ವರಿ ವಿದ್ಯಾಲಯ ವತಿಯಿಂದ ಪ್ರಪ್ರಥಮ ಬಾರಿಗೆ ಎಸ್.ಆರ್.ವಿ ಫುಟ್ಬಾಲ್ ಕಪ್  ಹೊನಲು ಬೆಳಕಿನ ಫುಟ್ಬಾಲ್ ಪ್ರೀಮಿಯರ್ ಲೀಗ್ ಪಂದ್ಯವು ಜು.7 ರಂದು ನಡೆಯಲಿದೆ. ನಗರದ ಗಾಂಧಿ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು,  ಮಡಿಕೇರಿ ನಗರದ ಕ್ರೀಡಾ ಪಟುಗಳಿಗೆ ಮಾತ್ರ ಸೀಮಿತವಾಗಿದೆ. ಒಟ್ಟು ಹತ್ತು ಮಾಲೀಕತ್ವದ ಹತ್ತು ತಂಡಗಳು ಪಾಲ್ಗೊಳ್ಳಲಿದೆ. ಬೆಂಜ್ಝಿ ಫುಟ್ಬಾಲ್ ಕ್ಲಬ್, ದಿ ರೆಡ್ ಡೆವಿಲ್ಸ್, ಟೀಮ್ ಭಗವತಿ, ಕೂರ್ಗ್ ಚಾಮರ್ಸ್, ಟೀಮ್ ಒನ್ ಟಚ್, ಟೀಮ್ ಬ್ರದರ್ಸ್, ವೆಸ್ಟನ್, ವೈಲ್ಡ್ ಮಾಸ್ಟರ್ಸ್, ಟೀಮ್ ಲೆಜೆಂಡ್ಸ್, ಹಾಗೂ ಕೆ.ಎಂ.ಯುನೈಟೆಡ್ ತಂಡಗಳ ನಡುವೆ ಪಂದ್ಯಗಳು ನಡೆಯಲಿವೆ. ವಿಜೇತ ತಂಡಕ್ಕೆ 25,000 ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 15,000 ನಗದು ಹಾಗೂ ಆಕರ್ಷಕ ಟ್ರೊಫಿ ಜೊತೆಗೆ ವೈಯಕ್ತಿಕ ಟ್ರೊಫಿಗಳು ನೀಡಲಾಗುವುದು. ಕ್ರೀಡಾ ಕೂಟದ ಪ್ರಮುಖವಾಗಿ ಎಂ.ಸಿ.ಸಿ ಲೆಜೆಂಡ್ಸ್ ಹಾಗೂ ಕೊಡಗು ಪತ್ರಕರ್ತರ ನಡುವೆ ಪ್ರದರ್ಶನ ಪಂದ್ಯವು ನಡೆಯಲಿದೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

Read More

ಮಡಿಕೇರಿ ಜೂ.26 NEWS DESK : ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ರಾತ್ರಿ ವೇಳೆ ನಿರಂತರ ಮಳೆ ಸುರಿಯುತ್ತಿದ್ದು, ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಜೂನ್ ತಿಂಗಳ ಆರಂಭದಲ್ಲಿ ಕೈಕೊಟ್ಟ ಮಳೆ ಕೊನೆಯಲ್ಲಿ ಬಿರುಸು ಪಡೆದುಕೊಂಡಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಶ್ರೀಭಗಂಡೇಶ್ವರ ಕ್ಷೇತ್ರ ಭಾಗಮಂಡಲದಲ್ಲಿ ಉತ್ತಮ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ತಲಕಾವೇರಿ ರಸ್ತೆಯಲ್ಲಿ ಮರ ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆಯಾಗಿತ್ತು. ಇದೀಗ ಮರವನ್ನು ತೆರವುಗೊಳಿಸಲಾಗಿದೆ. ಮಡಿಕೇರಿ ನಗರ ವ್ಯಾಪ್ತಿಯಲ್ಲೂ ಮಳೆಯಾಗುತ್ತಿದ್ದು, ಮಂಜು ಮತ್ತು ಚಳಿ ಇದೆ. ನೀರುಕೊಲ್ಲಿ- ಚೆಟ್ಟಳ್ಳಿ ರಸ್ತೆಯಲ್ಲಿ ಮರ ಬಿದ್ದು, ವಾಹನ ಸಂಚಾರಕ್ಕೆ ತೊಡಕ್ಕುಂಟಾಗಿತ್ತು. ವಿರಾಜಪೇಟೆ, ಗೋಣಿಕೊಪ್ಪ, ಪೊನ್ನಂಪೇಟೆ, ಸೋಮವಾರಪೇಟೆ, ಕುಶಾಲನಗರ, ಸಿದ್ದಾಪುರ, ಕರಿಕೆ ಭಾಗದಲ್ಲೂ ಮಳೆಯಾಗುತ್ತಿದೆ. ಆರ್ದ್ರಾ ಮಳೆಯ ಆಗಮನ ಕೃಷಿಕರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡAತೆ ಕಳೆದ 24…

Read More

ಮಡಿಕೇರಿ ಜೂ.26 NEWS DESK : ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಹಾಲ್‍ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಉದ್ಘಾಟಿಸಿ, ಮಾತನಾಡಿ ಯುವಕರು ದುಶ್ಚಟಗಳಿಂದ ದೂರವಿರಬೇಕು. ವಿದ್ಯಾರ್ಥಿಗಳು, ಮಾದಕ ದ್ರವ್ಯ ಸೇವನೆ ಮಾಡದಂತೆ ಜನರಿಗೆ ತಿಳಿವಳಿಕೆ ನೀಡಬೇಕು ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಪ್ಪ, ನಗರಸಭೆ ಪೌರಾಯುಕ್ತ ವಿಜಯ್ ಹಾಗೂ ಇತರರು ಇದ್ದರು. ಸಭಾ ಕಾರ್ಯಕ್ರಮಕ್ಕೂ ಮೊದಲು ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಹೊರಟು ಮಂಗೇರಿರ ಮುತ್ತಣ್ಣ ವೃತ್ತ, ಅಜ್ಜಮಾಡ ದೇವಯ್ಯ ವೃತ್ತ, ಇಂದಿರಾಗಾಂಧಿ ವೃತ್ತ ಹಾಗೂ ಕಾಲೇಜು ರಸ್ತೆ ಮೂಲಕ ಜಾಗೃತಿ ಜಾಥಾ ಹೊರಟು ನಗರದ ಕಾವೇರಿ ಹಾಲ್  ಜಾಗೃತಿ ಜಾಥ ನಡೆಯಿತು.

Read More

ಮಡಿಕೇರಿ ಜೂ.26 NEWS DESK : ಕೊಡಗಿನ ಹಾಕಿಯ ಪಿತಾಮಹ ಎಂದೆ ಹೆಸರಾದ ಶಂಕರ ಸ್ವಾಮಿ ಅವರ ಗರಡಿಯಲ್ಲಿ ಪಳಗಿದ ಅದೆಷ್ಟೋ ಆಟಗಾರರು ಬಾನಿನಲ್ಲಿ ನಕ್ಷತ್ರಗಳಿದ್ದಂತೆ, ಅವರ ಲೆಕ್ಕ ಸಿಕ್ಕುವುದಿಲ್ಲ. ಇವರ ಲೇಖನದಲ್ಲಿ “ಮುದ್ದಯ್ಯ ಒಬ್ಬ ಅದ್ಭುತ ಆಟಗಾರ ಹಾಗೂ ತರಬೇತಿದಾರನಾಗಬಹುದು ಹಾಗೂ ತಾನು ಹುಟ್ಟು ಹಾಕಿದ ವಾಂಡರರ್ಸ್ ಸಂಸ್ಥೆಯನ್ನು ಮುನ್ನಡೆಸುವ ಸಾಮರ್ಥ್ಯ ಹೊಂದಿರುವ ಆಟಗಾರನಾಗುತ್ತಾನೆ” ಎಂದು ಕಾಫಿ ಲ್ಯಾಂಡ್ ಪತ್ರಿಕೆಯಲ್ಲಿ ಕೆಲವು ವರ್ಷಗಳ ಹಿಂದೆ ಮುನ್ನುಡಿ ಬರೆದಿದ್ದರು. ಕೊಡಗಿನ ಕೋಟೇರ ನಂಜುಂಡ ಹಾಗೂ ಕಾಮವ್ವ (ತಾಮನೆ ಕೀತಿಯಂಡ) ದಂಪತಿಯರ ಪುತ್ರನಾಗಿ ಮುದ್ದಯ್ಯನವರು 5 ಏಪ್ರಿಲ್ 1949 ರಲ್ಲಿ ಜನಿಸಿದರು. ಇವರ ತಂದೆ ನಿವೃತ್ತ ಅಸಿಸ್ಟೆಂಟ್ ಕಮಿಷನರ್. ಇವರು ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಮಡಿಕೇರಿಯ ಸೆಂಟ್ರಲ್ ಹೈಸ್ಕೂಲ್ ನಲ್ಲಿ ಪಡೆದರು. :: ಅದ್ಭುತ ಕಲೆ :: ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ಪದವಿ ಓದುತ್ತಿದ್ದಾಗ ಮೈಸೂರು ವಿಶ್ವವಿದ್ಯಾನಿಲಯವನ್ನು 3 ವರ್ಷಗಳ ಕಾಲ ಪ್ರತಿನಿಧಿಸಿದ್ದರು. ಪೂನಾದ ವಿರುದ್ಧ ನಡೆದ ಅಂತರ…

Read More

ಕೊಡ್ಲಿಪೇಟೆ ಜೂ.26 NEWS DESK : ಎಸ್‌ಕೆಎಸ್‌ಎಸ್‌ಎಫ್ ಹಾಗೂ ಎಸ್ ವೈ ಎಸ್ ಕೊಡ್ಲಿಪೇಟೆ ಶಾಖೆಯ ವತಿಯಿಂದ ಸಮಸ್ತ ಸ್ಥಾಪನಾ ದಿನದ ಅಂಗವಾಗಿ “ಆದರ್ಶ ಪರಿಶುದ್ಧತೆಯೊಂದಿಗೆ ಶತಮಾನದೆಡೆಗೆ” ಎಂಬ ಧ್ಯೇಯ ವಾಕ್ಯದೊಂದಿಗೆ ಹ್ಯಾಂಡ್ ಪೋಸ್ಟ್ ನಲ್ಲಿರುವ ಶಾಖಾ ಕಚೇರಿಯ ಮುಂಭಾಗ ಧ್ವಜಾರೋಹಣ ಹಾಗೂ ಪ್ರಾರ್ಥನಾ ಕಾರ್ಯಕ್ರಮ ನಡೆಯಿತು. ಅಧ್ಯಕ್ಷರಾದ ಝಹೀರ್ ನಿಝಾಮಿ ಧ್ವಜಾರೋಹಣ ನೆರವೇರಿಸಿದರು. ಎಸ್ ವೈ ಎಸ್ ಸದಸ್ಯರಾದ ಉಮ್ಮರ್, ಕಾರ್ಯದರ್ಶಿಗಳಾದ ತೌಫೀಕ್, ಅಷ್ಫಾಕ್, ಅಬ್ದುಲ್ ರಶೀದ್ ಹಾಗೂ ಸಮಿತಿ ಸದಸ್ಯರುಗಳಾದ ರಶೀದ್ ಎಲೆಕ್ಟ್ರಿಷಿಯನ್, ಸೌಕತ್ ಅಲಿ, ಶಾಕಿರ್ ಹಾಜರಿದ್ದರು.

Read More

ಮಡಿಕೇರಿ ಜೂ 25 NEWS DESK : ಕರ್ನಾಟಕ ಟಿಇಟಿ ಪರೀಕ್ಷೆಯು ಇದೇ ಜೂ.30 ರಂದು ಮಡಿಕೇರಿಯಲ್ಲಿ ನಡೆಯಲಿದೆ. ಒಟ್ಟು ಮೂರು ಪರೀಕ್ಷಾ ಕೇಂದ್ರಗಳ ಪರೀಕ್ಷೆ ನಡೆಯಲಿದ್ದು, ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಇಲ್ಲಿ ಎರಡು ಕೇಂದ್ರಗಳು ಹಾಗೂ ಸಂತ ಮೈಕಲರ ಶಾಲೆ ಇಲ್ಲಿ ಒಂದು ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 759 ಪರೀಕ್ಷಾರ್ಥಿಗಳು ಮೂರು ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಜೂನ್ 30 ರಂದು ಬೆಳಗ್ಗೆ ಪರೀಕ್ಷೆ 9.30 ಗಂಟೆಯಿಂದ 12 ಗಂಟೆ ವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷಾರ್ಥಿಗಳು ಬೆಳಗ್ಗೆ 9 ಗಂಟೆಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕಿದೆ. ಮಧ್ಯಾಹ್ನದ ಅವಧಿಯಲ್ಲಿ 2 ಗಂಟೆಯಿಂದ ನಾಲ್ಕುವರೆವರೆಗೆ ಪರೀಕ್ಷೆ ನಡೆಯಲಿದೆ. ಒಬ್ಬರು ಮಾರ್ಗ ಅಧಿಕಾರಿಯನ್ನು ನೇಮಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಒಬ್ಬರಂತೆ ಸ್ಥಾನಿಕ ಜಾಗೃತ ದಳವನ್ನು ನೇಮಿಸಲಾಗಿದೆ ಹಾಗೆಯೇ ಪರೀಕ್ಷಾರ್ಥಿಗಳ ಮೊಬೈಲನ್ನು ಪರೀಕ್ಷಾ ವೇಳೇಲಿ ಸಂರಕ್ಷಿಸಿ ಇಟ್ಟು ಪರೀಕ್ಷೆಯ ನಂತರ ಅವರಿಗೆ ಹಿಂತುರುಗಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ…

Read More

ಸುಂಟಿಕೊಪ್ಪ ಜೂ.26 NEWS DESK :  ಶಾಲಾ ಸಂಸತ್ ರಚನೆಯಿಂದ ಶಾಲೆಗೆ ಬೇಕಾಗುವ ಮೂಲಭೂತ ಸೌಕರ್ಯಗಳನ್ನು ಪಡೆದುಕೊಳ್ಳಲು ಸಹಕಾರಿಯಾಗಲಿದೆ ಎಂದು ಸುಂಟಿಕೊಪ್ಪ ಗ್ರೇಡ್ 1 ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಹೇಳಿದರು. ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಸರಕಾರಿ ಪ್ರೌಢಶಾಲಾ ಶಾಲಾ ಸಂಸತ್ ರಚನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಇರುವ ಹಿನ್ನಲೆಯಲ್ಲಿ ಮಕ್ಕಳು ಶಾಲಾ ಕಾಲೇಜು ದಿನಗಳಿಂದಲೇ ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಪಾಯ ಮತ್ತು ವ್ಯವಸ್ಥೆ ಯ ಕುರಿತು ಜ್ಞಾನ ಹೊಂದಲು ಶಾಲಾ ಸಂಸತ್ ತುಂಬಾ ಸಹಕಾರಿಯಾಗಿದೆ ಎಂದರು. ಸರಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸುವ ಮೂಲಕ ಸರಕಾರಿ ಶಾಲೆಗಳ ಉಳಿವಿಕೆಗೆ ಕೈಜೋಡಿಸಿದ ಬಗ್ಗೆ ಅಭಿನಂದಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸಿರಿಲ್ ರಾಡ್ರಿಗಸ್ ವಹಿಸಿದ್ದರು. ಉಪಪ್ರಾಂಶುಪಾಲ ಬಾಲಕೃಷ್ಣ  ನೂತನ ಸಂಸತ್ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋದಿಸಿದರು. ವೇದಿಕೆಯಲ್ಲಿ ಗ್ರಾ.ಪಂ ಸದಸ್ಯರುಗಳಾದ ಪ್ರಸಾದ್ ಕುಟ್ಟಪ್ಪ, ಆಲಿಕುಟ್ಟಿ, ಶಬ್ಬೀರ್, ರಫೀಕ್ ಖಾನ್, ಸೋಮನಾಥ್, ಕೊಡಗು ಜಿಲ್ಲಾ…

Read More

ಮಡಿಕೇರಿ ಜೂ.25 NEWS DESK : ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ವಾರ್ಷಿಕ 57 ಸಾವಿರ ಕೋಟಿ ರೂ.ಗಳ ಅಗತ್ಯವಿದೆ. ಆದರೆ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದರಿಂದ ಕೇವಲ 500 ಕೋಟಿ ರೂ. ಆದಾಯ ಕ್ರೋಢೀಕರಣವಾಗುತ್ತದೆ. ಬಿಜೆಪಿ ವಿನಾಕಾರಣ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕೆ ಮತ್ತು ಪ್ರತಿಭಟನೆ ಮಾಡುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಟೀಕಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಕಳೆದ 10 ವರ್ಷಗಳಲ್ಲಿ 22 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿದಾಗ ಬಿಜೆಪಿಗೆ ಜನರ ಬಗ್ಗೆ ಕಾಳಜಿ ಇರಲಿಲ್ಲವೇ, ಇವುಗಳ ಬೆಲೆಯನ್ನು ನೂರರ ಗಡಿ ದಾಟಿಸಿದವರು ಯಾರು ಎಂದು ಪ್ರಶ್ನಿಸಿದರು. ಅಂತರರಾಷ್ಟ್ರೀಯ ಬೆಲೆಯನ್ನು ಆಧರಿಸಿ ಕೇಂದ್ರ ಸರ್ಕಾರ ಪೆಟ್ರೋಲ್ ದರ ಲೀಟರ್ ಗೆ 50 ರೂ. ಮತ್ತು ಡೀಸೆಲ್ ಗೆ 45 ರೂ. ಎಂದು ನಿಗಧಿ ಮಾಡಬಹುದಾಗಿದೆ. ಆದರೆ ಕೆಲವು ಹೊರ ದೇಶಗಳಿಗೆ ಭಾರತ ರೂ.32 ಕ್ಕೆ ಪೆಟ್ರೋಲ್…

Read More

ಮಡಿಕೇರಿ ಜೂ.25 NEWS DESK : ಕೊಡವ ಸಮಾಜಗಳು ಯಾವುದೇ ಕಾರಣಕ್ಕು ರಾಜಕೀಯದಲ್ಲಿ ಮೂಗು ತೂರಿಸಬಾರದು ಮತ್ತು ಸಾಮಾಜಿಕ ಜಾಲತಾಣಗಳ ಪ್ರಚೋದನೆಗೆ ಒಳಗಾಗಬಾರದು ಎಂದು ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮನು ಮುತ್ತಪ್ಪ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆ ಸಂದರ್ಭ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹನಕ್ಕೆ ಸಂಬಂಧಿಸಿದಂತೆ ಕೆಲವು ಕೊಡವ ಸಮಾಜಗಳು ಪ್ರತಿಕ್ರಿಯೆ ನೀಡಿರುವುದನ್ನು ತೀವ್ರವಾಗಿ ಖಂಡಿಸಿದರು. ಪೊನ್ನಣ್ಣ ಅವರ ಪರ ಪ್ರತಿಕ್ರಿಯೆ ನೀಡುವಂತೆ ಸಾಮಾಜಿಕ ಜಾಲತಾಣದ ವೀರರು ಕೊಡವ ಸಮಾಜಗಳಿಗೆ ಪ್ರಚೋದನೆ ನೀಡಿದ್ದಾರೆ. ಕೊಡವ ಸಮಾಜಗಳ ಒಕ್ಕೂಟ ಕೂಡ ಪ್ರತಿಕ್ರಿಯೆ ನೀಡಿದ್ದು, ಇದು ಸರಿಯಾದ ಕ್ರಮವಲ್ಲ. ಕಾಂಗ್ರೆಸ್ಸಿಗರಿಗೆ ಚುನಾವಣೆ ಬಂದಾಗ ಮಾತ್ರ ಕೊಡವರ ಬಗ್ಗೆ ಕಾಳಜಿ ಹೆಚ್ಚಾಗುತ್ತದೆ. ಪೊನ್ನಣ್ಣ ಅವರು ಮಾತ್ರ ಕೊಡವ ಜನಪ್ರತಿನಿಧಿಯೇ ಬೇರೆ ಯಾರು ಇಲ್ಲವೇ, ಈ ಹಿಂದೆ ಮಾಜಿ ಶಾಸಕ ಅಪ್ಪಚ್ಚು ರಂಜನ್ ಅವರ ಪ್ರತಿಕೃತಿ ದಹಿಸಿದಾಗ ಯಾಕೆ ಯಾರೂ ಧ್ವನಿ ಎತ್ತಲಿಲ್ಲ, ಅಪ್ಪಚ್ಚು ರಂಜನ್ ಕೊಡವರಲ್ಲವೇ…

Read More