ಮಡಿಕೇರಿ ಜೂ.25 NEWS DESK : ಬಿದ್ದು ಸಿಕ್ಕಿದ ಚಿನ್ನದ ನಾಣ್ಯಗಳನ್ನು ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ನಗರದ ಸಂಚಾರಿ ಪೊಲೀಸರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮಡಿಕೇರಿಯ ನ್ಯೂ ಎಕ್ಟೆಷನ್ ನಿವಾಸಿ, ವಿಘ್ನೇಶ್ವರ ಜ್ಯುವೆಲರಿ ಮಾಲೀಕ ಬಿ.ಸಿ.ಮೋಹನ್ ಚಿನ್ನದ ನಾಣ್ಯಗಳನ್ನು ಕಳೆದುಕೊಂಡಿದ್ದರು. ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಸಮೀಪ ಎರಡು ಗ್ರಾಮ್ ನ ಮೂರು ಚಿನ್ನದ ನಾಣಯ್ಯಗಳು ಮಡಿಕೇರಿ ಸಂಚಾರಿ ಪೊಲೀಸ್ ನಾಗರಾಜ್ ಎಂಬುವವರಿಗೆ ಬಿದ್ದುಸಿಕ್ಕಿದ್ದು, ಅದನ್ನು ಮಡಿಕೇರಿ ಸಂಚಾರಿ ಪೊಲೀಸ್ ಠಾಣಾಧಿಕಾರಿ ಸಿ.ಪಿ.ಶ್ರೀಧರ್ ಸಮ್ಮುಖದಲ್ಲಿ ವಾರಸುದಾರರಿಗೆ ಒಪ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಲೇಖಕ: admin
ವಿರಾಜಪೇಟೆ ಜೂ.25 NEWS DESK : ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ವಿರಾಜಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹನ ಮತ್ತು ಅಣುಕು ಶವ ಯಾತ್ರೆ ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಶಾಸಕ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪಟ್ಟಣದ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಶಾಸಕ ಎ.ಎಸ್.ಪೊನ್ನಣ್ಣ ಅವರ ಆಯುಷ್ಯ, ಆರೋಗ್ಯ ವೃದ್ಧಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ವಕೀಲರು ಮತ್ತು ಮುಖಂಡರಾದ ಎನ್.ನರೇಂದ್ರ ಕಾಮತ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಸದಸ್ಯರಾದ ರಾಜೇಶ್ ಪದ್ಮನಾಭ, ರಜನಿಕಾಂತ್, ಪುರಸಭೆ ನಾಮನಿರ್ದೇಶಿತ ಸದಸ್ಯರಾದ ಶಭರಿಶ್ ಶೆಟ್ಟಿ, ರವಿ, ದಿನೇಶ್, ಮಾದಂಡ ಪೂವಯ್ಯ, ಘಟಕದ ಪೊನ್ನಕ್ಕಿ, ಉದ್ಯಮಿಗಳಾದ ವಿಕ್ರಂ ಚೆಂಗಪ್ಪ, ಜಗತ್, ಶೃಂಗಾ, ಸೋಮಣ್ಣ, ಮಂಜು, ಶಶಿ, ರಕ್ಷೀತ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು…
ಮಡಿಕೇರಿ, ಜೂ.25 NEWS DESK : ಕೊಡಗು ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನೂತನ ಉಪ ನಿರ್ದೇಶಕ (ಆಡಳಿತ )ರಾಗಿ ರಂಗಧಾಮಪ್ಪ ಅಧಿಕಾರ ವಹಿಸಿಕೊಂಡಿದ್ದಾರೆ. ನೂತನ ಡಿಡಿಪಿಐ ರಂಗಧಾಮಪ್ಪ ಅವರು ಡಿಡಿಪಿಐ ಹುದ್ದೆಯ ಪ್ರಭಾರದಲ್ಲಿದ್ದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯ ಪ್ರಾಂಶುಪಾಲ ಎಂ.ಚಂದ್ರಕಾಂತ್ ಅವರಿಂದ ಅಧಿಕಾರ ಸ್ವೀಕರಿಸಿದರು. ತುಮಕೂರು ಜಿಲ್ಲಾ ಡಿಡಿಪಿಐ ಕಛೇರಿಯಲ್ಲಿ ಉಪ ಯೋಜನಾ ಸಮನ್ವಯಾಧಿಕಾರಿ( ಡಿ.ವೈ.ಪಿ.ಸಿ.) ಯಾಗಿ ಸೇವೆ ಸಲ್ಲಿಸುತ್ತಿದ್ದ ರಂಗಧಾಮಪ್ಪ ಅವರು ಮುಂಬಡ್ತಿ ಹೊಂದಿ ಕೊಡಗು ಜಿಲ್ಲೆಯ ಡಿಡಿಪಿಐ ಆಗಿ ಸರ್ಕಾರ ನೇಮಕ ಮಾಡಿದೆ. ಸೇನಾ ಜಿಲ್ಲೆ ಎಂದು ಹೆಸರಾಗಿರುವ ಕೊಡಗಿನಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆಗಳಿಂದ ಕೂಡಿರುವ ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳ ಪ್ರಗತಿಯೊಂದಿಗೆ ಶಾಲೆಗಳ ಬಲವರ್ಧನೆಗೆ ವಿಶೇಷ ಗಮನ ಹರಿಸಲಾಗುವುದು ಎಂದು ನೂತನ ಡಿಡಿಪಿಐ ರಂಗಧಾಮಪ್ಪ ತಿಳಿಸಿದ್ದಾರೆ.
ಮಡಿಕೇರಿ ಜೂ.25 NEWS DESK : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 10 ವರ್ಷಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 22 ಬಾರಿ ಏರಿಕೆ ಮಾಡಿದೆ. ಆಗ ಬಿಜೆಪಿಗೆ ಇಲ್ಲದ ಜನಪರ ಕಾಳಜಿ ಈಗ ರಾಜ್ಯ ಕಾಂಗ್ರೆಸ್ ಸರ್ಕಾರ ಏರಿಕೆ ಮಾಡಿದಾಗ ಹೇಗೆ ಬಂತು ಎಂದು ಬೆಟ್ಟಗೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಕೊಡಗನ ತೀರ್ಥಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬೆಲೆ ಏರಿಕೆಯ ನೆಪ ಮಾಡಿಕೊಂಡು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಜನಪ್ರಿಯ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹಿಸಿರುವುದು ಖಂಡನೀಯ ಮತ್ತು ಇದು ಬಿಜೆಪಿಯ ಕೀಳು ಮಟ್ಟದ ವರ್ತನೆಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ. ಜನಸಾಮಾನ್ಯರ ಸಂಕಷ್ಟವನ್ನು ಅರಿಯದ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಸುತ್ತಲೇ ಬಂದಿದ್ದು, ನೂರರ ಗಡಿ ದಾಟಿದೆ. ಡಾ.ಮನಮೋಹನ್ ಸಿಂಗ್ ಅವರ ನೇತೃತ್ವದ ಕೇಂದ್ರ ಸರ್ಕಾರವಿದ್ದಾಗ 450 ರೂ. ಇದ್ದ ಅಡುಗೆ ಅನಿಲದ…
ಮಡಿಕೇರಿ ಜೂ.25 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಒಕ್ಕಲಿಗರ ಸಂಘ ಮತ್ತು ಕೊಡಗು ಗೌಡ ಸಮಾಜಗಳ ಸಹಕಾರದೊಂದಿಗೆ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿಯು ಜೂನ್, 27 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಮತ್ತು ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಹರಪಳ್ಳಿ ರವೀಂದ್ರ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್.ಎಂ.ಚಂಗಪ್ಪ, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಆರ್.ಸೋಮಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇತರರು ಪಾಲ್ಗೊಳ್ಳಲಿದ್ದಾರೆ. ಗೌಡ ಸಮಾಜಗಳ ಒಕ್ಕೂಟದ…
ಮಡಿಕೇರಿ ಜೂ.25 NEWS DESK : ಮಾದಕ ದ್ರವ್ಯ ವಿರೋಧಿ ದಿನಾಚರಣೆ ಪ್ರಯುಕ್ತ ಜೂ.26 ರಂದು ಬೆಳಗ್ಗೆ 9 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಜಾಗೃತಿ ಜಾಥ ನಡೆಯಲಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ. ಜನರಲ್ ತಿಮ್ಮಯ್ಯ ವೃತ್ತದಿಂದ ಹೊರಟು ಮಂಗೇರಿರ ಮುತ್ತಣ್ಣ ವೃತ್ತ, ಅಜ್ಜಮಾಡ ದೇವಯ್ಯ ವೃತ್ತ, ಇಂದಿರಾಗಾಂಧಿ ವೃತ್ತ ಹಾಗೂ ಕಾಲೇಜು ರಸ್ತೆ ಮೂಲಕ ಜಾಗೃತಿ ಜಾಥಾ ಹೊರಟು ನಗರದ ಕಾವೇರಿ ಹಾಲ್ ತಲುಪಲಿದೆ. ಬಳಿಕ ಸಭಾ ಕಾರ್ಯಕ್ರಮವು ನಗರದ ಕಾವೇರಿ ಹಾಲ್(ಸಭಾಂಗಣದಲ್ಲಿ) ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಜೂ.25 NEWS DESK : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ/ಸಿಇಟಿ/ನೀಟ್ ಮುಖಾಂತರ) ಎಂಬಿಬಿಎಸ್, ಬಿಡಿಎಸ್, ಬಿ.ಇ/ಬಿಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲ ನೀಡಲಾಗುತ್ತದೆ. ಸಿಇಟಿ/ನೀಟ್ ಮೂಲಕ ಪ್ರವೇಶ ಪಡೆಯ ಬಯಸುವ ವಿದ್ಯಾರ್ಥಿಗಳಿಗೆ “ಅರಿವು” ಯೋಜನೆಯಡಿ ಶೈಕ್ಷಣಿಕ ಸಾಲ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್ ಸೈಟ್ https://kmdconline.karnataka.gov.in/ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿ ಪ್ರಿಂಟೌಟ್ ಪಡೆದು…
ಮಡಿಕೇರಿ ಜೂ.25 NEWS DESK : ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿಯನ್ನು ಜೂ.27 ರಂದು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಯೋಜಿಸಬೇಕಿದ್ದು, ಆ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲೆ ಸ್ಪರ್ಧೆ ಏರ್ಪಡಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ಈ ಬಾರಿ ಕೆಂಪೇಗೌಡರ ಆಡಳಿತ ಹಾಗೂ ಅವರ ಜೀವನ ಚರಿತ್ರೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ನಿರ್ಧರಿಸಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಕೆಂಪೇಗೌಡರ ಆಡಳಿತ ವ್ಯವಸ್ಥೆಯನ್ನು ಪರಿಚಯಿಸಲು ಶಾಲಾ ಕಾಲೇಜು ಹಂತದಲ್ಲಿ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿ, ವರದಿ ನೀಡುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ತಾಲ್ಲೂಕು ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ…
ಮಡಿಕೇರಿ ಜೂ.25 NEWS DESK : ಕಾಂಗ್ರೆಸ್ ಶಾಸಕರ ಕುಮ್ಮಕ್ಕಿನಿಂದ ಬಿಜೆಪಿ ಕಾರ್ಯಕರ್ತರ ವಿರುದ್ಧ ವಿನಾಕಾರಣ ಪ್ರಕರಣ ದಾಖಲಿಸಿದರೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷದ ವಿರುದ್ಧ ಪ್ರತಿಭಟಿಸುವ ಹಕ್ಕು ವಿರೋಧ ಪಕ್ಷಗಳಿಗಿದೆ. ಆದರೆ ಜಿಲ್ಲೆಯ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸುವವರ ವಿರುದ್ಧ ಸುಳ್ಳು ದೂರು ದಾಖಲಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆದರೆ ವಿರಾಜಪೇಟೆಯಲ್ಲಿ ಸಾರ್ವಜನಿಕರ ಆಸ್ತಿಗೆ ಹಾನಿ ಮಾಡಲಾಗಿದೆ ಎಂದು ಸುಳ್ಳು ದೂರು ನೀಡಿ ಬಿಜೆಪಿಯ ನಾಯಕರು ಹಾಗೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದರು. ದುರಾಡಳಿತ, ಭ್ರಷ್ಟಾಚಾರ, ಆಡಳಿತ ವೈಫಲ್ಯ, ಅಭಿವೃದ್ಧಿ ಶೂನ್ಯ ವ್ಯವಸ್ಥೆಯನ್ನು ಮುಚ್ಚಿ ಹಾಕಿ ಜನರ ಹಾದಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ.…
ನಾಪೋಕ್ಲು ಜೂ.25 NEWS DESK : ಕಕ್ಕಬ್ಬೆ ವಲಯ ಕಾಂಗ್ರೆಸ್ ವತಿಯಿಂದ ಕಕ್ಕಬ್ಬೆ ಶ್ರೀ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರ ಶ್ರೇಯೋಭಿವೃದ್ಧಿಗಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಡಿಸಿಸಿ ಸದಸ್ಯ ಬಾಚಮಂಡ ಲವ ಚಿಣ್ಣಪ್ಪ, ವಲಯ ಕಾಂಗ್ರೆಸ್ ಸದಸ್ಯರಾದ ಕಲಿಯಂಡ ಸಂಪನ್ ಅಯ್ಯಪ್ಪ, ಬಾಚಮಂಡ ರಾಜ ಪೂವಣ್ಣ, ಉದಿಯoಡ ಶುಭಾಷ್, ಪೊನ್ನೋಲ್ತಂಡ ರಘು ಚಿನ್ನಪ್ಪ, ಬಾಚಮಂಡ ಭರತ್, ಬಡಕಡ ದೀನ ಪುವಯ್ಯ, ಪುಂಗೆರ ಉಲ್ಲಾಸ್, ಚೊವಂಡ ಜೋಯಪ್ಪ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ವರದಿ : ದುಗ್ಗಳ ಸದಾನಂದ






