ಮಡಿಕೇರಿ ಜೂ.25 NEWS DESK : ಪ್ರತಿಭಟನೆಯ ಒಂದು ಭಾಗವಾಗಿರುವ ಪ್ರತಿಕೃತಿ ದಹನವನ್ನು ರಾಜಕೀಯ ದೃಷ್ಟಿಕೋನದಲ್ಲಿ ನೋಡಬೇಕೆ ಹೊರತು ವೈಯುಕ್ತಿಕವಾಗಿ ಪರಿಗಣಿಸಿ ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ. ಕಾಂಗ್ರೆಸ್ ನ ಬೆದರಿಕೆಗಳಿಗೆ ಬಿಜೆಪಿ ಅಂಜುವುದಿಲ್ಲವೆಂದು ಜಿಲ್ಲಾ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಪೂಜಾರಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಜನಸಾಮಾನ್ಯರಿಗೆ ಹೊರೆಯಾಗುವ ರೀತಿಯಲ್ಲಿ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಯನ್ನು ನೆಪ ಮಾಡಿಕೊಂಡು ಕೊಡಗಿನ ಕಾಂಗ್ರೆಸ್ಸಿಗರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ವಿರೋಧ ಪಕ್ಷವಾಗಿರುವ ಬಿಜೆಪಿ ಆಡಳಿತ ಪಕ್ಷದ ಜನವಿರೋಧಿ ಧೋರಣೆ ವಿರುದ್ಧ ಜನಪರವಾಗಿ ಪ್ರತಿಭಟನೆ ನಡೆಸಿದೆ. ಸಾಂಕೇತಿಕವಾಗಿ ಕಾಂಗ್ರೆಸ್ ನಾಯಕರ ಪ್ರತಿಕೃತಿ ದಹಿಸಿದ್ದು, ಇದು ಪ್ರತಿಭಟನೆಯ ಒಂದು ಭಾಗವಾಗಿದೆಯಷ್ಟೆ. ಕಾಂಗ್ರೆಸ್ ಪಕ್ಷ ಕೂಡ…
ಲೇಖಕ: admin
ಮಡಿಕೇರಿ, ಜೂ.24 NEWS DESK : ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯು ಗುಣಾತ್ಮಕ ಫಲಿತಾಂಶ ಗಳಿಸುವ ಮೂಲಕ ರಾಜ್ಯಕ್ಕೆ ನಾಲ್ಕನೇ ಸ್ಥಾನ ಗಳಿಸಿರುವುದನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಕರ್ನಾಟಕ ರಾಜ್ಯದ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಶ್ಲಾಘಿಸಿದ್ದಾರೆ. ಕೊಡಗು ಜಿಲ್ಲೆಗೆ ಉತ್ತಮ ಫಲಿತಾಂಶ ಬರಲು ಶ್ರಮಿಸಿದ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಅಭಿನಂದಿಸಿದ ಅವರು, ಬರುವ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಲು ಎಲ್ಲರೂ ಸಂಘಟಿತ ಪ್ರಯತ್ನ ನಡೆಸಬೇಕು ಎಂದರು. ಪ್ರತಿಭಾವಂತ ಜಿಲ್ಲೆಗಳು ಎನಿಸಿರುವ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಮೊದಲಿನಿಂದಲೂ ಈ ಪರೀಕ್ಷೆಯಲ್ಲಿ ಉತ್ತಮ ಸ್ಥಾನ ಗಳಿಸುತ್ತಾ ಬಂದಿವೆ. ಹಾಗೆಯೇ, ಮಲೆನಾಡಾದ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಕೂಡ ಪ್ರತಿಭಾವಂತರಿದ್ದು, ಇಲ್ಲಿನ ಜನತೆ ಕೂಡ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಅದೇ ಮಾದರಿಯಲ್ಲಿ ಜಿಲ್ಲೆಯ ಮಕ್ಕಳು ಕೂಡ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ…
ಮಡಿಕೇರಿ ಜೂ.25 NEWS DESK : ಸೋಮವಾರಪೇಟೆ ಶ್ರೀ ಸೋಮೇಶ್ವರ ದೇವಾಲಯದ ಅಮೃತ ಮಹೋತ್ಸವ ಪ್ರಯುಕ್ತ “ಅಮೃತ ಸೋಮೇಶ್ವರ” ಸಾಕ್ಷ್ಯ ಚಿತ್ರ ಲೋಕಾಪ೯ಣೆಗೊಂಡಿತು. ಸೋಮೇಶ್ವರ ದೇವಾಲಯದ ಸಭಾ ಭವನದಲ್ಲಿ ಆಯೋಜಿತ ಸಭಾ ಕಾಯ೯ಕ್ರಮದಲ್ಲಿ ಅಮೃತ ಸೋಮೇಶ್ವರ ಸಾಕ್ಷ್ಯ ಚಿತ್ರವನ್ನು ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಲೋಕಾಪ೯ಣೆ ಮಾಡಿದರು.ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಪ್ರಮುಖರು ಹಾಜರಿದ್ದರು. ಸಾಕ್ಷ್ಯ ಚಿತ್ರ ನಿಮಿ೯ಸಿ, ನಿದೇ೯ಶಿಸಿದ ಪತ್ರಕತ೯ ಅನಿಲ್ ಹೆಚ್.ಟಿ ಮತ್ತು ರೀನಾ ಅನಿಲ್ ದಂಪತಿಯನ್ನು ಈ ಸಂದಭ೯ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ಹೆಸರಾಂತ ಸಾಹಿತಿ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ, ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಸೋಮೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್, ಮಾಜಿ ಅಧ್ಯಕ್ಷ ಜಿ.ಸೋಮೇಶ್, ನಿದೇ೯ಶಕ ಎಸ್.ಡಿ.ವಿಜೇತ್, ದೇವಿಬಳಗದ ಅಧ್ಯಕ್ಷೆ ರತಿ ನಂದಕುಮಾರ್, ಚಿತ್ರಲೇಖ ಸನ್ಮಾನಿಸಿ ಗೌರವಿಸಿದರು. ಶ್ರೀ ಸೋಮೇಶ್ವರ ದೇವಾಲಯ ಇತಿಹಾಸ, ದೇವಾಲಯ ಮಹತ್ವದ ಕುರಿತ 45 ನಿಮಿಷಗಳ ಸಾಕ್ಷ್ಯ ಚಿತ್ರ ದೇವಾಲಯಕ್ಕೆ ಸಂಬಂಧಿಸಿದಂತೆ ಭವಿಷ್ಯಕ್ಕೆ ಉತ್ತಮ ದಾಖಲೆಯಾಗಿದೆ ಎಂದು…
ಮಡಿಕೇರಿ ಜೂ.25 NEWS DESK : ಕುಶಾಲನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಕುಟ್ಟಂಡ ಪ್ರಮೋದ್ ಮುತ್ತಪ್ಪ ನೇಮಕಗೊಂಡಿದ್ದಾರೆ. ಪ್ರಮೋದ್ ಅವರು ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಮತ್ತು ಪುರಸಭೆ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಾಧಿಕಾರದ ಸದಸ್ಯರಾಗಿ ವಿ.ಎಸ್.ಸಜಿ, ಕೆ.ಆರ್.ಕಿರಣ್ ಕುಮಾರ್ ಮತ್ತು ಕೆ.ಆರ್.ಸಂಗೀತ ಅವರುಗಳನ್ನು ನೇಮಕ ಮಾಡಲಾಗಿದೆ.
ನಾಪೋಕ್ಲು ಜೂ.25 NEWS DESK : ಪ್ರತಿಕೃತಿ ದಹನ, ಅಣುಕು ಶವಯಾತ್ರೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತಿದ್ದು, ಇದೀಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರ ಶ್ರೇಯೋಭಿವೃದ್ಧಿಗೆ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಸುತ್ತಿದ್ದಾರೆ. ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಆಯುಷ್ಯ, ಆರೋಗ್ಯ ವೃದ್ಧಿಗಾಗಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಅಧ್ಯಕ್ಷ ಕೆ.ಎ ಇಸ್ಮಾಯಿಲ್, ಭಾಗಮಂಡಲ ವಲಯ ಅಧ್ಯಕ್ಷ ಕೋಳಿ ಬೈಲ್ ವೆಂಕಟೇಶ್, ಡಿಸಿಸಿ ಸದಸ್ಯ ಸುನಿಲ್ ಪತ್ರವೋ, ಅಕ್ರಮ ಸಕ್ರಮ ಸಮಿತಿ ಮಡಿಕೇರಿ ತಾಲೂಕು ಅಧ್ಯಕ್ಷ ನೆರವಂಡ ಉಮೇಶ್, ನಾಪೋಕ್ಲು ವಲಯ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ, ಪಂಚಾಯಿತಿ ಸದಸ್ಯ ಕುಲ್ಲೇಟಿರ ಅರುಣ ಬೇಬ, ಭಾಗಮಂಡಲ ಮಾಜಿ ವಲಯ ಅಧ್ಯಕ್ಷ ದೇವಂಗೋಡಿ ಹರ್ಷ, ಚೆಯಂಡಾಣೆ ಗ್ರಾ.ಪಂ ಉಪಾಧ್ಯಕ್ಷ, ವಿನೋದ್ ಕೋಡಿರ. ಚೇರಂಬಾಣೆ ಗ್ರಾ.ಪಂ ಸದಸ್ಯೆ ಬಿಂದು., ಕೊಟ್ಟುಕತ್ತಿರ ದಿವ್ಯ ಹಾಗೂ ಕಾಂಗ್ರೆಸ್ ಪಕ್ಷದ ಹಿತೈಷಿಗಳು ನಾಯಕರುಗಳು ಪಕ್ಷದ ಕಾರ್ಯಕರ್ತರು…
ಕುಶಾಲನಗರ ಜೂ.25 NEWS DESK : ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಜಿಲ್ಲಾ, ತಾಲೂಕು ಮಟ್ಟದ ಆಡಳಿತ ಮಂಡಳಿಗೆ ಚುನಾವಣೆಗೆ ವೇಳಾಪಟ್ಟಿ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಘಟಕದ ಚುನಾವಣಾ ಅಧಿಕಾರಿ ಎಸ್.ಆರ್.ಜಿತೇಂದ್ರ ತಿಳಿಸಿದ್ದಾರೆ. ಕುಶಾಲನಗರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಅಖಿಲ ಭಾರತ ವೀರಶೈವ ಮಹಾಸಭಾ ಮೊದಲನೇ ಹಂತದ ಚುನಾವಣೆ ತಾಲೂಕು ಮತ್ತು ಜಿಲ್ಲಾ ಘಟಕಗಳಿಗೆ ನಡೆಯಲಿದೆ. ಚುನಾವಣೆ ಮೂಲಕ ಅಧ್ಯಕ್ಷರು ಮತ್ತು ಕಾರ್ಯಕಾರಿ ಮಂಡಳಿ ಸದಸ್ಯರ ಆಯ್ಕೆ ನಡೆಯುವುದು ಎಂದು ತಿಳಿಸಿದ್ದಾರೆ. ನಾಮಪತ್ರ ಸ್ವೀಕಾರ ಈ ತಿಂಗಳ 27 ರಿಂದ ಆರಂಭವಾಗುವುದು. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಜು.4 ಆಗಿರುತ್ತದೆ ಎಂದು ಹೇಳಿದ್ದಾರೆ. ಜು.5 ನಾಮಪತ್ರ ಪರಿಶೀಲನೆ, ಜು.8 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆ ದಿನಾಂಕವಾಗಿದೆ. ಜು.21ರಂದು ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ. ಮತದಾನದ ನಂತರ ಮತಗಳ ಎಣಿಕೆ ನಡೆದು ಫಲಿತಾಂಶ ಪ್ರಕಟಣೆ ಆಗಲಿದೆ ಎಂದು ಅವರು ಮಾಹಿತಿ ಒದಗಿಸಿದರು.…
ಮಡಿಕೇರಿ, ಜೂ.24 NEWS DESK : ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಉತ್ತಮ ನಾಯಕತ್ವ ಗುಣ ಹಾಗೂ ದೇಶದ ಏಕತೆ ಮತ್ತು ಸಮಗ್ರತೆಗಾಗಿ ಅವರಲ್ಲಿ ಭ್ರಾತ್ವತ್ವ ಬೆಳೆಸುವ ಮೂಲಕ ಸಮಾಜದ ಉತ್ತಮ ಹಾಗೂ ಜವಾಬ್ದಾರಿ ನಾಗರಿಕರನ್ನಾಗಿ ರೂಪಿಸಲು ಶ್ರಮಿಸಬೇಕು ಎಂದು ಮಾಜಿ ಸಚಿವ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಕರ್ನಾಟಕ ರಾಜ್ಯದ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಕರೆ ನೀಡಿದರು. ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ , ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಶಿಕ್ಷಕರಿಗೆ ಒಂದು ವಾರ ಕಾಲ ಏರ್ಪಡಿಸಿದ್ದ ಜಿಲ್ಲಾಮಟ್ಟದ ಮೂಲ ತರಬೇತಿ ಹಾಗೂ ಮುಂದುವರಿದ ತರಬೇತಿಯ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆಯಿಂದ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನದ ಜತೆಗೆ ಕಲಿಕೆಯಲ್ಲೂ ಪ್ರಗತಿ ಸಾಧಿಸಲು ಸಾಧ್ಯ. ಹಾಗಾಗಿ ಎಲ್ಲಾ ಶಾಲಾ ಮಕ್ಕಳು ಸ್ಕೌಟ್ಸ್…
*NEWS DESK* ಈ ಮಾಸದ ಸಂಕಷ್ಟಹರವು ದಿನಾಂಕ 25.06.2024ನೇ ಮಂಗಳವಾರ ಬರಲಿದೆ. ಮಂಗಳವಾರ ಸಂಕಷ್ಟ ಚತುರ್ಥಿ ಬರುವುದು ಅಪರೂಪವಾಗಿದೆ. ವರ್ಷದಲ್ಲಿ ಒಂದು-ಎರಡು ಅಥವಾ ಮೂರು ಬಾರಿ ಬರುತ್ತದೆ. ಗಣಪತಿಗೆ ಎರಡು ಜನ್ಮ ಅಂದರೆ ಸುಮಂಗಲಿ ಸ್ವರೂಪಿಯಾದ ಗೌರಿಯು ಮಂಗಳವಾರ ಅಂಗಾರಕ ಜೀವವನ್ನು ತುಂಬಿದರೆ ಶಿವನು ಬುಧವಾರ ತನ್ನಿಂದಲೇ ಸಾಯಿಸಲ್ಪಟ್ಟ ಮಗುವಿಗೆ ಆನೆಯ ತಲೆಯನ್ನು ತಂದು ಪುನರ್ಜನ್ಮವನ್ನು ನೀಡಿರುವುದು ಬುಧವಾರವಾಗಿದೆ. ಅದರಿಂದ ಗೌರಿ ಪ್ರಿಯವಾದ ಗಣಪನಿಗೆ ಮಂಗಳವಾರ ಅತೀ ಶ್ರೇಷ್ಠವಾಗಿರುವುದುರಿಂದ ಸಂಕಷ್ಟಹರ ಸ್ವರೂಪಿಯಾದ ಗಣಪನ ವೃತವು ಸಂಕಷ್ಟ ಚುತುರ್ಥಿಯು ಮಂಗಳವಾರ ಬಂದರೆ ಅಂಗಾರಕ ಸಂಕಷ್ಟಹರ ಚತುರ್ಥಿ ಎಂದು ಕರೆಯಲ್ಪಡುತ್ತದೆ. ಮಂಗಳವಾರ ಬರುವ ಸಂಕಷ್ಟ ಚತುರ್ಥಿ ಶುಭದಿನದಂದು ಶ್ರದ್ಧಾಭಕ್ತಿಯಿಂದ ಆಚರಣೆಯನ್ನು ಯಾರುಮಾಡುತ್ತಾರೋ ಅವರಿಗೆ ಹೆಚ್ಚಿನ ಫಲದಾಯಕನಾಗುತ್ತಾನೆ. ಗಣಪನು ಎಂದು ಶಿವ ಪುರಾಣ ಹೇಳುತ್ತದೆ. ಆದ್ದರಿಂದ ಈ ವರ್ಷದ ನಮ್ಮೆಲ್ಲರ ಆಸೆ, ಆಕಾಂಕ್ಷೆ ಈಡೇರಬೇಕೆಂದರೆ ಕಾರ್ಯ ಸಿದ್ಧಿಯಾಗಬೇಂದರೆ ನಮ್ಮ ಜೀವನದ ಎಲ್ಲಾ ಕೆಲಸವೆಲ್ಲವು ಈ ವರ್ಷ ನಿರ್ವಿಘ್ನವಾಗಿ ಸಾಗಬೇಕೆಂದರೆ ವಿಶೇಷ ಫಲದಾಯನಾದ ಸಂಕಷ್ಟಗಳ ಪರಿಹರಿಸುವ ಮಹಾಗಣಪತಿಯ…
ಮೂರ್ನಾಡು ಜೂ.25 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರಾಜಪೇಟೆ ತಾಲೂಕಿನ ಕಾಂತೂರು-ಮೂರ್ನಾಡು ವಲಯದ ಹೊದ್ದೂರು, ವಾಟೆಕಾಡು ಮತ್ತು ಮರಗೋಡುವಿನ ಶೌರ್ಯವಿಪತ್ತು ನಿರ್ವಹಣಾ ತಂಡದ ವತಿಯಿಂದ ವಾಟೆಕಾಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎರಡು ದಿನಗಳು ಸ್ವಚ್ಛತಾ ಶ್ರಮದಾನ ನಡೆಯಿತು. ಹೊದ್ದೂರು ವಾಟೇಕಾಡು ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬೆಳೆದಿದ್ದ ಗಿಡ-ಗಂಟೆಗಳನ್ನು ಕಡಿದು ಸ್ವಚ್ಚಗೊಳಿಸುವುದರ ಮೂಲಕ ಶ್ರಮದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಪ್ರತಾಪ್, ಸೇವಾಪ್ರತಿನಿಧಿಗಳಾದ ಕಾವೇರಿ, ಲತಾ ಮತ್ತು ದಿವ್ಯ, ಜನಜಾಗೃತಿ ವೇದಿಕೆ ಸದಸ್ಯ ಸುಬ್ರಮಣ್ಯ, ಶಾಲಾ ಪ್ರಭಾರ ಮುಖ್ಯಶಿಕ್ಷಕಿ ಬಿ.ಪಿ.ಸುನಂದಿನಿ, ಹೊದ್ದೂರು ಗ್ರಾ.ಪಂ ಮಾಜಿ ಅಧ್ಯಕ್ಷೆ ಕುಸುಮ, ಹೊದ್ದೂರು ಗ್ರಾ.ಪಂ ನ್ಯಾಯ ಸಮಿತಿಯ ಅಧ್ಯಕ್ಷ ಮೊಣ್ಣಪ್ಪ, ಹೊದ್ದೂರು ವಾಟೇಕಾಡು ಮತ್ತು ಮರಗೋಡುವಿನ ಶೌರ್ಯವಿಪತ್ತು ನಿರ್ವಹಣಾ ತಂಡದ 26 ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದ್ದರು. ಶ್ರಮದಾನದ ನಂತರ ಎರಡು ಶೌರ್ಯ ಘಟಕದ ಮಾಸಿಕಸಭೆಯನ್ನು ಶಾಲೆಯ ಸಭಾಂಗಣದಲ್ಲಿ ನಡೆಸಲಾಯಿತು. ವರದಿ : ಟಿ.ಸಿ.ನಾಗರಾಜ್, ಮೂರ್ನಾಡು …
ಮಡಿಕೇರಿ ಜೂ.24 NEWS DESK : ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿ, ಬೆದರಿಸಿ, ಹಿಟ್ಲರ್ ಸಂಸ್ಕೃತಿ ಅನುಸರಿಸಿ ಬಿಜೆಪಿಯನ್ನು ಬಗ್ಗು ಬಡಿಯುವುದು ತಿರುಕನ ಕನಸು. ಕೊಡಗಿನಲ್ಲಿ ಹಿಟ್ಲರ್ ಸಂಸ್ಕೃತಿ ನಡೆಯಲ್ಲ ಎಂದು ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾ ಬಿಜೆಪಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷವಾಗಿ ಆಡಳಿತ ಪಕ್ಷದ ಜನವಿರೋಧಿ ಧೋರಣೆಗಳನ್ನು ವಿರೋಧಿಸುವುದು ಕರ್ತವ್ಯವಾಗಿದೆ. ಅದರಂತೆ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ವೈಜ್ಞಾನಿಕವಾಗಿ ಏರಿಕೆ ಮಾಡಿದ ಕಾರಣಕ್ಕಾಗಿ ಬಿಜೆಪಿ ವಿರಾಜಪೇಟೆಯಲ್ಲಿ ಪ್ರತಿಭಟನೆ ಮಾಡಿದೆ. ಇದನ್ನೇ ನೆಪ ಮಾಡಿಕೊಂಡು ಪ್ರತಿಭಟನೆ ಮಾಡಿದವರ ವಿರುದ್ಧವೇ ಪ್ರಕರಣ ದಾಖಲಿಸುವುದು ಖಂಡನೀಯವೆಂದರು. ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಜಾರಿಗೆ ತಂದ ಕಾಂಗ್ರೆಸ್ಗೆ ಪ್ರಜಾಪ್ರಭುತ್ವ ವ್ಯವಸ್ಥೆ ಎಂದರೆ ಏನೆಂದೇ ತಿಳಿದಿಲ್ಲ. ಸರ್ವಾಧಿಕಾರಿ ಧೋರಣೆ ಅನುಸರಿಸಿದವರ ಪರಿಸ್ಥಿತಿ ಏನಾಗಿದೆ ಎನ್ನುವುದನ್ನು ಚರಿತ್ರೆ ಹೇಳುತ್ತದೆ. ಕೊಡಗು ಜಿಲ್ಲೆಯ ಜನ ಬುದ್ಧಿವಂತರಾಗಿದ್ದು, ಈಗಾಗಲೇ ಲೋಕಸಭಾ…






