ಮಡಿಕೇರಿ ಜೂ.24 NEWS DESK : ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರಿಂದ ಮೂಲ ನಿವಾಸಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿರುವ ಜಬ್ಬೂಮಿ ಸಂಘಟನೆಯ ಸಂಚಾಲಕ ಚೊಟ್ಟೇಕ್ಮಾಡ ರಾಜೀವ್ ಬೋಪಯ್ಯ ಅವರು, ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗಿನಲ್ಲಿ ಪ್ರವಾಸಿಗರ ದೌರ್ಜನ್ಯ ಮಿತಿ ಮೀರುತ್ತಿದೆ, ಇದಕ್ಕೆ ರಾಜಕೀಯ ಮತ್ತು ಕೋಮು ಬಣ್ಣ ಬಳಿಯಲಾಗುತ್ತಿದೆ. ವಿನಾಕಾರಣ ಮಹಿಳಾ ದೌರ್ಜನ್ಯದ ಆರೋಪ ಹೊರಿಸಿ ಸ್ಥಳೀಯ ಮೂಲ ನಿವಾಸಿಗಳ ಆತ್ಮಸ್ಥೈರ್ಯ ಕುಗ್ಗಿಸುವ ಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಉತ್ತರ ಕೊಡಗಿನ ಮಾದಾಪುರ ಸಮೀಪದ ಕೋಟೆಬೆಟ್ಟದ ತಪ್ಪಲಿನಲ್ಲಿ ಇತ್ತೀಚೆಗೆ ಕ್ಷುಲ್ಲಕ ವಿಚಾರಕ್ಕೆ ಕಲಹ ನಡೆದಿದೆ. ಇದಕ್ಕೆ ಮೊದಲಿಗೆ ರಾಜಕೀಯ ಬಣ್ಣ ಬಳಿಯಲು ಯತ್ನಿಸಿದ್ದು, ನಂತರ ಸ್ಥಳೀಯರಿಂದ ಸರಗಳ್ಳತನ ಎಂದು ಬಿಂಬಿಸಿ, ವೀಡಿಯೋ ಮತ್ತು ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡಲಾಗಿದೆ. ಸ್ಥಳೀಯರು ವಾಸ್ತವಾಂಶದ ವಿವರವನ್ನು ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಪಡಿಸಿದ…
ಲೇಖಕ: admin
ಮಡಿಕೇರಿ ಜೂ.24 NEWS DESK : ಸುವರ್ಣ ಕರ್ನಾಟಕ 50ರ ಸಂಭ್ರಮದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಶ್ರೀ ಅರಮೇರಿ ಕಳಂಚೇರಿ ಮಠ ಮತ್ತು ಎಸ್.ಎಂ. ಎಸ್ ಶಿಕ್ಷಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಜೂ.27 ರಂದು ಆರೋಢ ದಾಸೋಹಿ ಧರ್ಮ ಚಿಂತಾಮಣಿ ಮಹಾಶರಣ ಲಿಂ. ಮಾಗನೂರು ಬಸಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ದಾವಣಗೆರೆಯ ಸುನಂದಾದೇವಿ ಮತ್ತು ಸಂಗಮೇಶ್ವರ ಗೌಡ ಅವರು ಶರಣ ತತ್ವ ಪ್ರಚಾರ ಮತ್ತು ಶರಣ ವಿಚಾರಗಳನ್ನು ತಿಳಿಯಪಡಿಸುವುದ್ದಕೋಸ್ಕರ ಸ್ಥಾಪಿಸಿರುವ ದತ್ತಿ ಕಾರ್ಯಕ್ರಮವು ಮಧ್ಯಾಹ್ನ 1 ಗಂಟೆಗೆ ಅರಮೇರಿ ಕಳಚೇರಿ ಮಠದ ಎಸ್.ಎಂ.ಎಸ್ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ದಿವ್ಯಸಾನಿದ್ಯವನ್ನು ಅರಮೆರಿ ಕಳಂಚೇರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ವಹಿಸಲಿದ್ದು, ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಅಖಿಲ ಭಾರತ ವೀರಶೈವ ಸಮಾಜದ ಅಧ್ಯಕ್ಷರಾದ ಹೆಚ್.ವಿ.ಶಿವಪ್ಪ…
ಮಡಿಕೇರಿ ಜೂ.24 NEWS DESK : ಕೊಡಗು ಜಿಲ್ಲೆಯ ಕುಶಾಲನಗರ ಸಮುದಾಯ ಆರೋಗ್ಯ ಆಸ್ಪತ್ರೆಗೆ ಮತ್ತು ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಗೆ ತಲಾ 1.75 ಕೋಟಿ ರೂ. ಮತ್ತು ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಗೆ 2 ಕೋಟಿ ರೂ. ಒಟ್ಟು ಸುಮಾರು 5 ಕೋಟಿಯಷ್ಟು ಆಸ್ಪತ್ರೆ ಅಭಿವೃದ್ಧಿಗೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್ ಹೇಳಿದರು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ವತಿಯಿಂದ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ಆರಂಬಿಸಲಾಗಿರುವ `ಡಯಾಲಿಸಿಸ್ ಘಟಕ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳನ್ನು ಆರಂಭಿಸಿ ಸುಮಾರು 800 ಯಂತ್ರಗಳನ್ನು ಅಳವಡಿಸಲಾಗಿದೆ. ಹೊಸ ತಾಲ್ಲೂಕು ಕೇಂದ್ರಗಳಲ್ಲಿಯೂ ಸಹ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೊಸ ಹೊಸ ಪ್ರಯೋಗಗಳನ್ನು ಮಾಡಿ ಸುಲಭವಾಗಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗಿದೆ ಎಂದು ಸಚಿವರು ಹೇಳಿದರು. ಈಗಾಗಲೇ ಕುಶಾಲನಗರ ಸಮುದಾಯ ಆರೋಗ್ಯ…
ಮಡಿಕೇರಿ ಜೂ.24 NEWS DESK : ಜಿಲ್ಲೆಯಲ್ಲಿ ಒತ್ತುವರಿ ಮಾಡಿಕೊಂಡಿರುವ ಸರಕಾರಿ ಜಾಗವನ್ನು ಕಡಿಮೆ ದರಕ್ಕೆ ಗುತ್ತಿಗೆ ನೀಡುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ವಿವಿಧ ಬೇಡಿಕೆಗಳ ಈಡೇರಿಗಾಗಿ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಆರ್.ಭರತ್, ಕಾಂಗ್ರೆಸ್ ಸರಕಾರ ಬಿಜೆಪಿ ಸರಕಾರ ತೆಗೆದುಕೊಂಡ ನಿರ್ಧಾರದಂತೆ ಉಳ್ಳವರಿಗೆ ಗುತ್ತಿಗೆ ಆಧಾರದಲ್ಲಿ ಜಮೀನನ್ನು ನೀಡಲು ಮುಂದಾಗಿದೆ. ಇದರಿಂದ ಕಡು ಬಡತನದಲ್ಲಿರುವ ಆದಿವಾಸಿ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ವಂಚನೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜನವಿರೋಧಿ ಆದೇಶವನ್ನು ತಕ್ಷಣ ಹಿಂಪಡೆಯಬೇಕು, ಸರಕಾರಿ ಒತ್ತುವರಿ ಜಾಗವನ್ನು ತೆರವುಗೊಳಿಸಿ ಜಿಲ್ಲೆಯ ನಿವೇಶನ ರಹಿತರಿಗೆ ನೀಡಬೇಕು, 2018-19ರಲ್ಲಿ ಮಹಾಮಳೆಯಿಂದ ಮನೆಕಳೆದುಕೊಂಡಿರುವ ನಿವೇಶನ ರಹಿತ ಕುಟುಂಟಗಳಿಗೆ ನಿವೇಶನ ನೀಡಬೇಕು, ನಿರಾಶ್ರಿತರ ಹೊಸ ಪಟ್ಟಿಯನ್ನು ತಯಾರಿಸಬೇಕು ಎಂದು ಒತ್ತಾಯಿಸಿದರು.…
ಸುಂಟಿಕೊಪ್ಪ ಜೂ.24 NEWS DESK : ದೈವ ಮಂದಿರಗಳು ಮನುಷ್ಯನ ಮಾನಸಿಕ ನೆಮ್ಮದಿಯ ಸುಂದರ ತಾಣಗಳು ಎಂದು ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ಕುಶಾಲನಗರ ತಾಲ್ಲೂಕಿನ ನಾಕೂರು-ಶಿರಂಗಾಲ ಗ್ರಾಮದಲ್ಲಿ ಸ್ಥಳೀಯ ಬಸವೇಶ್ವರ ಸೇವಾ ಸಮಿತಿ ವತಿಯಿಂದ ಬಸವೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನೆ ಮತ್ತು ಬ್ರಹ್ಮ ಕಲಶೋತ್ಸವ ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಇಂದಿನ ಆಧುನಿಕತೆಯ ನಾಗಾಲೋಟದ ಕಾಲಘಟ್ಟದಲ್ಲಿ ಮನುಷ್ಯ ಸಂಪತ್ತಿನ ಹಿಂದೆ ಓಡುತ್ತಿದ್ದಾನೆ ಹೊರತು ಅವನಿಗೆ ಬೇಕಾದಂತಹ ಸಂತಸ ಹಾಗೂ ಸಮಧಾನ ಸಿಗುತ್ತಿಲ್ಲ. ಹಾಗಾಗಿ ಮನುಷ್ಯನಿಗೆ ಬೇಕಾದಂತಹ ಶಾಂತಿ ಹಾಗೂ ನೆಮ್ಮದಿ ದೇವ ಮಂದಿರಗಳಲ್ಲಿ ದೊರಕುತ್ತದೆ ಎಂದು ಶ್ರೀಗಳು ಹೇಳಿದರು. ಪ್ರಕೃತಿ ಮನುಷ್ಯನಿಗೆ ಬೇಕಾದಂತಹ ಎಲ್ಲವನ್ನು ನೀಡುತ್ತಿದೆ. ಆದರೆ ಪ್ರಕೃತಿಗೆ ನಾವೇನು ಕೊಡುತ್ತಿದ್ದೇವೆ ಎಂಬ ಆತ್ಮಾವಲೋಕನದ ತುರ್ತು ಅಗತ್ಯವಿದೆ. ಮನುಷ್ಯರಾದ ನಾವೆಲ್ಲರೂ ಪರಸ್ಪರ ಸ್ನೇಹ, ವಿಶ್ವಾಸ ಹಾಗೂ ಸಹಬಾಳ್ವೆಯಿಂದ ಜೀವನ ಕಟ್ಟಬೇಕೆಂದು ಶ್ರೀಗಳು ಭಕ್ತರಿಗೆ ಕರೆಕೊಟ್ಟರು. ಎರಡು ದಿನಗಳ ಕಾಲ…
ವಿರಾಜಪೇಟೆ ಜೂ.24 NEWS DESK : ಪಟ್ಟಣದ ಮಗ್ಗುಲ ದಲ್ಲಿರುವ ಲಿಟಲ್ ಸ್ಕಾಲರ್ಸ್ ಶಾಲೆಯಲ್ಲಿ ಸಾರ್ವಜನಿಕ ಸೇವಾ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿರಾಜಪೇಟೆ ಪುರಸಭಾ ಸ್ವಚ್ಛತಾ ಸಿಬ್ಬಂದಿಗಳು, ಮಕ್ಕಳಿಗೆ ಕಸ ವಿಂಗಡಣೆ ಮಾಡುವ ವಿಧಾನಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಮಕ್ಕಳು ಅನೇಕ ಪ್ರಶ್ನೆಗಳನ್ನು ಕೇಳುವುದರ ಮೂಲಕ ಮಾಹಿತಿ ಪಡೆದರು. ಶಾಲಾ ಮುಖ್ಯಸ್ಥರು ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ಮಾತನಾಡಿ, ಪಟ್ಟಣದ ಶುಚಿತ್ವದಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಪಾತ್ರ ಬಹಳಷ್ಟಿದ್ದು ಮಳೆ, ಬಿಸಿಲು ಎನ್ನದೇ ನಿರಂತರ ಸೇವೆಯನ್ನು ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು. ಸ್ವಚ್ಛತಾ ಸಿಬ್ಬಂದಿಗಳ ಜೊತೆಗೆ ಸಂವಹನ ನಡೆಸಿ ಅವರ ಸಮಸ್ಯೆಗಳ ಬಗ್ಗೆ ತಿಳಿದುಕೊಂಡರು. ಕಾರ್ಯಕ್ರಮದಲ್ಲಿ ವಿರಾಜಪೇಟೆ ಪುರಸಭೆಯ ಸ್ವಚ್ಛತಾ ಸಿಬ್ಬಂದಿಗಳನ್ನು ಶಾಲಾ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕರಾದ ಮೀರಾ ಪೂಣಚ್ಚ, ಶಿಕ್ಷಕರು, ಸಿಬ್ಬಂದಿಗಳು, ಶಾಲಾ ಮಕ್ಕಳು ಹಾಜರಿದ್ದರು.
ಮಡಿಕೇರಿ ಜೂ.24 NEWS DESK : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರನ್ನು ಅವಹೇಳನ ಮಾಡಿ ಅಶಾಂತಿ ಮೂಡಿಸುವ ರೀತಿಯಲ್ಲಿ ಮಡಿಕೇರಿ ನಗರದ ನಿವಾಸಿ ತೆನ್ನಿರ ಮೈನಾ ಅವರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪ್ರಮುಖರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರಿಗೆ ದೂರು ಸಲ್ಲಿಸಿದ್ದಾರೆ. ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು “ಕೋತಿಗಳು ಸಾರ್ ಕೋತಿಗಳು ಕಳ್ಳು ಕುಡಿದ ಕೋತಿಗಳು” ಎಂಬ ಹೆಸರಿನ ಪ್ರಚೋದನಾಕಾರಿ ಬರಹದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರನ್ನು ದಂಧೆಕೋರರು ಎಂದು ದೂಷಿಸಿ ಅವಹೇಳನ ಮಾಡಲಾಗಿದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುವ ಸಾಧ್ಯತೆಯಿದೆ. ತೆನ್ನಿರ ಮೈನಾ ಅವರು ಬಹಳ ದಿನಗಳಿಂದ ಬಿಜೆಪಿ ಪಕ್ಷ, ಪಕ್ಷದ ನಾಯಕರು ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಬರಹಗಳನ್ನು ಬರೆದು ಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಉದ್ದೇಶಪೂರ್ವಕವಾಗಿ…
ಮಡಿಕೇರಿ ಜೂ.24 NEWS DESK : ಜಮಾಅತೆ ಇಸ್ಲಾಮೀ ಹಿಂದ್ ನೂತನ ಕೊಡಗು ಸಂಚಾಲಕರಾಗಿ ಸಿ.ಹೆಚ್.ಅಫ್ಸರ್ ಆಯ್ಕೆಯಾಗಿದ್ದಾರೆ. ಹುಣಸೂರಿನಲ್ಲಿ ನಡೆದ ಮೈಸೂರು ವಲಯ ಹೊಣೆಗಾರರ ಸಭೆಯಲ್ಲಿ ವಲಯಕ್ಕೆ ಓರ್ವ ಕಾರ್ಯದರ್ಶಿಯನ್ನು ನೇಮಕಗೊಳಿಸಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ, ಹಾಸನದಲ್ಲಿ ನಡೆದ ರಾಜ್ಯ ಸಲಹಾ ಸಮಿತಿ ಸಭೆಯಲ್ಲಿ ನೂತನ ಕೊಡಗು ಜಿಲ್ಲಾಸಂಚಾಲಕರಾಗಿ ಸಿ.ಹೆಚ್.ಅಫ್ಸರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಮೈಸೂರು ವಲಯ ಸಂಚಾಲಕ ಯು.ಅಬ್ದುಲ್ ಸಲಾಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಸಿ.ಹೆಚ್.ಅಫ್ಸರ್ಪ್ರಸ್ತುತ ಜಮಾಅತೆ ಇಸ್ಲಾಮೀ ಹಿಂದ್ ಮಡಿಕೇರಿ ಸ್ಥಾನಿಯ ಸಂಚಾಲಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ವಲಯ ಕಾರ್ಯದರ್ಶಿಯಾಗಿ ವಿರಾಜಪೇಟೆಯ ಪಿ.ಕೆ.ಅಬ್ದುಲ್ ರೆಹಮಾನ್ ಅವರನ್ನು ಮೈಸೂರು ವಲಯ ಹೊಣೆಗಾರರ ಸಲಹೆಯ ಮೇರೆಗೆ ಆಯ್ಕೆ ಮಾಡಲಾಗಿದೆ.
ವಿರಾಜಪೇಟೆ ಜೂ.24 NEWS DESK : ವಿರಾಜಪೇಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗೋಣಿಕೊಪ್ಪಲು ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಹೊಸೂರು ಶ್ರೀ ಮಹದೇಶ್ವರ ದೇವಾಲಯದಲ್ಲಿ ಪರಿಸರ ದಿನಾಚರಣೆ ಆಚರಿಸಲಾಯಿತು. ದೇವಾಲಯದ ಹೊರ ಆವರಣದಲ್ಲಿ ತಂಡದ ಸ್ವಯಂ ಸೇವಕರು ಹಣ್ಣಿನ ಗಿಡಗಳು ಮತ್ತು ಇತರ ಮರಗಳ ಗಿಡಗಳನ್ನು ನೆಟ್ಟರು. ಈ ಸಂದರ್ಭ ಕೃಷಿ ಅಧಿಕಾರಿಗಳಾದ ಹರೀಶ್, ವೇಣು ಮಂದಣ್ಣ ಮತ್ತು ಸ್ವಯಂ ಸೇವಕರಾದ ಜಯಪ್ರಕಾಶ್, ಅಭಿಷೇಕ್, ದಿನೇಶ್, ತೀರ್ಥಕುಮಾರ್, ಕಿರಣಕುಮಾರ್, ಪದ್ಮ, ಗೌರಿ, ಅವ್ವಿ, ಚಂದ್ರು, ಸಂದೀಪ್ ಹಾಜರಿದ್ದರು.
ಮಡಿಕೇರಿ ಜೂ.24 NEWS DESK : ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ಆರಂಭಿಸಿರುವ ಉಚಿತ ಡಯಾಲಿಸಿಸ್ ಕೇಂದ್ರವನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಈ ಸಂದರ್ಭ ಶಾಸಕ ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜ, ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.






