ನಾಪೋಕ್ಲು ಡಿ.22 NEWS DESK : ಹಳೇತಾಲ್ಲೂಕು ಅಂಗನವಾಡಿ ಕೇಂದ್ರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಿತು. ಹಳೇತಾಲ್ಲೂಕು ಅಂಗನವಾಡಿ ಕೇಂದ್ರದಲ್ಲಿ ಪಂಚಾಯತ್ ಸದಸ್ಯರು, ಸ್ಥಳ ದಾನಿಗಳಾದ ಕುಲ್ಲೇಟಿರ ಅರುಣ ಬೇಬ, ಪಂಚಾಯತ್ ಸದಸ್ಯರಾದ ಹೇಮಾ ಅರುಣ್ ಮತ್ತು ಪೊಲೀಸ್ ಠಾಣೆಯ ಮುಖ್ಯಪೇದೆ ರಾಮಕೃಷ್ಣ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕುಲ್ಲೇಟಿರ ಅರುಣ ಬೇಬ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಪೋಲಿಯೋ ಮಹತ್ವದ ಬಗ್ಗೆ ವಿವರವಾಗಿ ಮಾಹಿತಿ ನೀಡಿ ಶುಭ ಹಾರೈಸಿದರು. ಈ ಸಂದರ್ಭ ಅಂಗನವಾಡಿ ಕಾರ್ಯಕರ್ತಯಾರಾದ ಭಾಗ್ಯವತಿ, ಪವಿತ್ರ, ಸುಜಾತಾ, ಆಶಾ ಕಾರ್ಯಕರ್ತರಾದ ರಮ್ಯ ಹಾಗೂ ಪೋಷಕರು ಮಕ್ಕಳು ಹಾಜರಾಗಿದ್ದರು. ವರದಿ : ದುಗ್ಗಳ ಸದಾನಂದ.
ಲೇಖಕ: admin
ಕಾರ್ಕಳ ಡಿ.22 NEWS DESK : ಕರಾವಳಿಯ ಶ್ರೀಮಂತ ಜಾನಪದ ಸಂಸ್ಕೃತಿಗೆ ವೈಚಾರಿಕ ಆಯಾಮ ನೀಡುವ ಮಹತ್ವದ ಸಂಶೋಧನಾ ಕೃತಿಯಾದ “ಭೂತಾರಾಧನೆ ಮಾಯದ ನಡೆ ಜೋಗದ ನುಡಿ” ಕೃತಿಯ ಬಿಡುಗಡೆ ಸಮಾರಂಭವು ಕ್ರಿಯೇಟಿವ್ ಪುಸ್ತಕ ಮನೆ, ಕಾರ್ಕಳ ಮತ್ತು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಎಲ್.ಎಫ್. ರಸ್ಕಿನ್ಹ ಸಭಾಂಗಣದಲ್ಲಿ ನಡೆಯಿತು. ಕೃತಿಯನ್ನು ಖ್ಯಾತ ಸಾಹಿತಿ, ಜಾನಪದ ವಿದ್ವಾಂಸ ಹಾಗೂ ವಿಶ್ರಾಂತ ಕುಲಪತಿಗಳಾದ ಡಾ. ಬಿ.ಎ. ವಿವೇಕ ರೈ ಅವರು ಅನಾವರಣಗೊಳಿಸಿ ಮಾತನಾಡಿ, ಭೂತಾರಾಧನೆ ಕೇವಲ ಆಚರಣೆಯಲ್ಲ. ಅದು ಸಮುದಾಯದ ಸ್ಮೃತಿ, ನಂಬಿಕೆ ಮತ್ತು ಬದುಕಿನ ದರ್ಶನ ಎಂದು ಅಭಿಪ್ರಾಯಪಟ್ಟರು. ಡಾ. ಕೆ.ಚಿನ್ನಪ್ಪ ಗೌಡರ ಈ ಕೃತಿ ಜಾನಪದ ಅಧ್ಯಯನ ಕ್ಷೇತ್ರದಲ್ಲಿ ಮಹತ್ವದ ಮೈಲುಗಲ್ಲಾಗಲಿದೆ ಎಂದರು.ಕೃತಿ ಅವಲೋಕನವನ್ನು ಡಾ. ರಾಜಶೇಖರ್ ಹಳೆಮನೆ ಅವರು ನಡೆಸಿ, ಭೂತಾರಾಧನೆಯ ಆಚರಣೆ, ನುಡಿ, ನಡೆ ಮತ್ತು ಸಮಾಜದ ಒಳಹೊಮ್ಮುಗಳನ್ನು ವೈಜ್ಞಾನಿಕ ದೃಷ್ಟಿಯಿಂದ ದಾಖಲಿಸುವ ಗಂಭೀರ ಸಂಶೋಧನಾ…
ನಾಪೋಕ್ಲು ಡಿ.22 NEWS DESK : ಜಾನುವಾರಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಕೊಂದು ತಿಂದ ಘಟನೆ ಅಯ್ಯಂಗೇರಿ ಗ್ರಾಮದಲ್ಲಿ ನಡೆದಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಅಯ್ಯಂಗೇರಿ ಗ್ರಾಮದ ನಿವಾಸಿ ಮಹಮ್ಮದ್ ಪಳ್ಳಿ ಎಂಬವರು ತಮ್ಮ ಜಾನುವಾರುಗಳನ್ನು ಗದ್ದೆಯಲ್ಲಿ ಮೇಯಲು ಬಿಟ್ಟಿದ್ದ ಸಂದರ್ಭ ಬೀದಿ ನಾಯಿಗಳು ಜಾನುವಾರುಗಳ ಮೇಲೆ ದಾಳಿ ನಡೆಸಿ, ಹಸುವನ್ನು ಕೊಂದು ಬಹುತೇಕ ಭಾಗಗಳನ್ನು ತಿಂದು ಹಾಕಿವೆ. ಮೂರು ನಾಲ್ಕು ಜಾನುವಾರುಗಳಿಗೆ ಗಾಯಗಳಾಗಿವೆ. ಸ್ಥಳಕ್ಕೆ ಬಲ್ಲಮಾವಟ್ಟಿ ಪಶುವೈದ್ಯ ಡಾ.ಚೇತನ್ ಭೇಟಿ ನೀಡಿ ಗಾಯಗಳಿಗೊಳಗಾದ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ನೀಡಿ, ಪ್ರಕರಣವನ್ನು ದಾಖಲಿಸಿಕೊಂಡರು. ಈ ಭಾಗದಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದ್ದು, ಈಗಾಗಲೇ ಕೆಲವು ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಹಚ್ಚಿದ ಘಟನೆಗಳು ಪುನರಾವರ್ತನೆಯಾಗುತ್ತಿದೆ. ಇದರಿಂದಾಗಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣ ಆಗಿದೆ. ಇನ್ನಷ್ಟು ಜೀವ ಹಾನಿ ಆಗುವ ಮೊದಲು ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಬೀದಿ ನಾಯಿಗಳನ್ನು ನಿಯಂತ್ರಿಸಬೇಕು, ಹಸುವನ್ನು ಕಳೆದುಕೊಂಡ ಮಾಲೀಕರಿಗೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ವರದಿ…
ಮಡಿಕೇರಿ ಡಿ.22 NEWS DESK : ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರರಾದ ಟಿ.ಪಿ.ರಮೇಶ್ ಮತ್ತು ಅನಂತಶಯನ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಕೊಡ್ಲಿಪೇಟೆ ಡಿ.22 NEWS DESK : ವಿಶ್ವ ಆರೋಗ್ಯ ಸಂಸ್ಥೆಯು ಪೋಲಿಯೋ ಮುಕ್ತ ರಾಷ್ಟ್ರ ಎಂದು ಭಾರತವನ್ನು ಘೋಷಿಸಿದ್ದು, ಇದು ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಬಹು ದೊಡ್ಡ ಗೆಲುವು ಸಾಧಿಸಿದ ದೇಶ ನಮ್ಮ ಭಾರತ ಎಂಬ ಗರಿಮೆ ಪಾತ್ರವಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಡಾ.ಜ಼ಮೀರ್ ಅಹಮದ್ ಅವರು ಶ್ಲಾಘಿಸಿದರು. ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರ್.ಸಿ.ಹೆಚ್., ವಿಭಾಗ, ಕೊಡಗು ಜಿಲ್ಲೆಯ ವತಿಯಿಂದ ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೋಲಿಯೋ ದಿನ – 2025 ಕಾರ್ಯಕ್ರಮದಲ್ಲಿ ಕೊಡಗು ವಿಶ್ವವಿದ್ಯಾಲಯದ ಉಪನ್ಯಾಸಕರುಗಳಾದ ಡಾ. ಜ಼ಮೀರ್ ಅಹಮದ್, ಡಾ.ನಗ್ಮಾಭಾನು ದಂಪತಿಗಳು ತಮ್ಮ ಮಗನಿಗೆ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಮಾತನಾಡಿದ ಅವರು, ಡಿ.21 ರಿಂದ 24 ರವರೆಗೆ 4 ದಿನಗಳ ಕಾಲ ‘ರಾಷ್ಟ್ರೀಯ ಪಲ್ಸ್ ಪೋಲಿಯೋ’ ಕಾರ್ಯಕ್ರಮ ಜರುಗಲಿದ್ದು, ಪ್ರಾಥಮಿಕವಾಗಿ ಪುಟ್ಟ ಮಕ್ಕಳ ಮೇಲೆ ಪರಿಣಾಮ ಬೀರುವ…
ಮಡಿಕೇರಿ ಡಿ.22 NEWS DESK : ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ತಕ್ಷಣವೇ ಚಿಕಿತ್ಸೆ ನೀಡಿ. ಬಿ.ಪಿ.ಎಲ್ ಅಥವಾ ಎ.ಪಿ.ಎಲ್ ನವರು ಎಂದು ನಂತರ ಮಾಹಿತಿ ಪಡೆದು ಬಿಲ್ ಬಗ್ಗೆ ನಿರ್ಧರಿಸಿ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗಳ (ಕೊಡಗು ಜಿಲ್ಲಾಸ್ಪತ್ರೆ) ನಿರ್ದೇಶಕರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಖಡಕ್ ಸೂಚನೆ ನೀಡಿದ್ದಾರೆ. ಆಕಸ್ಮಿಕ ಪಟಾಕಿ ಸಿಡಿತದಿಂದ ಬೆರಳು ಕಳೆದುಕೊಂಡು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಗೋಣಿಕೊಪ್ಪದ ಶಾಲಾ ಬಾಲಕ ಪವನ್ ಆರೋಗ್ಯ ವಿಚಾರಿಸಲು ಪೊನ್ನಣ್ಣ ಅವರು ಆಸ್ಪತ್ರೆಗೆ ಬಂದಾಗ ಪರಿಶಿಷ್ಟ ಪಂಗಡದ ಬಡ ಕುಟುಂಬದ ಪವನ್ ನನ್ನು ಆಸ್ಪತ್ರೆಗೆ ದಾಖಲಿಸುವ ಸಂದರ್ಭದಲ್ಲಿ ದಾಖಲಾತಿ ಇಲ್ಲದೆ ಇದ್ದುದರಿಂದ ಎ.ಪಿ.ಎಲ್ ಎಂದು ನಿರ್ಧರಿಸಿ ಬಿಲ್ ಕಟ್ಟಿಸಲಾಗಿತ್ತು. ನಂತರ ಶಾಲಾ ದಾಖಲಾತಿಯನ್ನು ಸಲ್ಲಿಸಲಾಗಿತ್ತು ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಶಾಸಕರ ಗಮನಕ್ಕೆ ತಂದರು. ತುರ್ತು ಸಂದರ್ಭದಲ್ಲಿ ಬಡ ರೋಗಿಗಳು…
ಮಡಿಕೇರಿ ಡಿ.22 NEWS DESK : ಕೊಡಗು ಜಿಲ್ಲೆಯಲ್ಲಿ ನಡೆದ ಪಲ್ಸ್ ಪೊಲಿಯೋ ಕಾರ್ಯಕ್ರಮದಲ್ಲಿ ಇದುವರೆಗೆ ಒಟ್ಟು 34,736 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟಾರೆ ಶೇ.106.2 ಪಗತಿ ಸಾಧಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಒಟ್ಟು 31,100 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 105.7ರಷ್ಟು ನಗರ ಪ್ರದೇಶದಲ್ಲಿ ಒಟ್ಟು 3,636 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.111.0ರಷ್ಟು ಪ್ರಗತಿ ಸಾಧಿಸಲಾಗಿದೆ. :: ಮಡಿಕೇರಿ ತಾಲ್ಲೂಕು :: ಒಟ್ಟು 9,703 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಶೇ.106.4 ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 7,537 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 102.3 %ರಷ್ಟು ಹಾಗೂ ನಗರ ಪ್ರದೇಶದಲ್ಲಿ 2,166 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.123.10 %ರಷ್ಟು ಪ್ರಗತಿ ಸಾಧಿಸಲಾಗಿದೆ. :: ಸೋಮವಾರಪೇಟೆ ತಾಲ್ಲೂಕು :: ಒಟ್ಟು 11,991 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಶೇ.111.50 ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 11,667 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 110.90ರಷ್ಟು ನಗರ ಪ್ರದೇಶದಲ್ಲಿ 324 ಮಕ್ಕಳಿಗೆ ಲಸಿಕೆಯನ್ನು…
ಮಡಿಕೇರಿ ಡಿ.22 NEWS DESK : ಕೊಡಗು ಜಿಲ್ಲೆಯಾದ್ಯಂತ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ನೀಡುವ ಕಾರ್ಯಕ್ರಮ ನಡೆಯಿತು. ಗೋಣಿಕೊಪ್ಪದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಪೋಲಿಯೊ ಲಸಿಕೆ ನೀಡುವ ಮೂಲಕ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಎ.ಎಸ್.ಪೊನ್ನಣ್ಣ ಅವರು ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸುವಂತೆ ಪೋಷಕರಲ್ಲಿ ಮನವಿ ಮಾಡಿದರು. ಜಿಲ್ಲೆಯಲ್ಲಿ ವಲಸಿಗ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದು ಐದು ವರ್ಷದೊಳಗಿನ ಮಕ್ಕಳು ಪೋಲಿಯೊ ಲಸಿಕೆಯಿಂದ ಬಿಟ್ಟುಹೋಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ಮಾಡಿದರು. ಪ್ರವಾಸಿಗರು ಸಹ ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಪ್ರವಾಸಿ ಕೇಂದ್ರಗಳು ಸೇರಿದಂತೆ ಎಲ್ಲೆಡೆ ಐದು ವರ್ಷದೊಳಿನ ಮಕ್ಕಳಿಗೆ ಲಸಿಕೆ ನೀಡುವಂತೆ ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು. ಜಿಲ್ಲಾ ಕೇಂದ್ರ ಮಡಿಕೇರಿಯ ಶಿಶುವಿಹಾರ ಕೇಂದ್ರದಲ್ಲಿ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಮಗುವಿಗೆ ಪೋಲಿಯೊ ಲಸಿಕೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ…
ಮಡಿಕೇರಿ NEWS DESK ಡಿ.21 : ಕೊಡಗು ಜಿಲ್ಲೆಯ ದೇವರಕೊಲ್ಲಿ ಶ್ರೀಚಾಮುಂಡೇಶ್ವರಿ ದೇವಾಲಯದಿಂದ ಹೊರಟ ಆದಿಯೋಗಿ ರಥ ಇಂದು ಸಂಜೆೆ ಮದೆನಾಡು ತಲುಪಿತು. ದೇವರಕೊಲ್ಲಿ ಸ್ವಯಂಸೇವಕರು ರಥ ಎಳೆಯುವ ಪುಣ್ಯ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಡಿ.22 ರಂದು ಮದೆನಾಡಿನಿಂದ ಮಡಿಕೇರಿವರೆಗೆ ಕಡಿದಾದ ಬೆಟ್ಟಗುಡ್ಡ ದಾರಿಯಲ್ಲಿ ರಥ ಸಾಗಲಿದೆ. ಸಂಜೆ 5 ಘಂಟೆಯ ನಂತರ ಜನರಲ್ ತಿಮ್ಮಯ್ಯ ವೃತ್ತದಲ್ಲಿ ರಥವನ್ನು ಬರಮಾಡಿಕೊಂಡು ಮುಖ್ಯಬೀದಿಯಲ್ಲಿ ಭಜನೆಯೊಂದಿಗೆ ಕೊಂಡೊಯ್ಯಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
ಗುಂಡ್ಲುಪೇಟೆ NEWS DESK ಡಿ.21 : ಹುಲಿಗಳ ನಡುವಿನ ಕಾದಾಟದ ಸಂದರ್ಭ ದಾಳಿಗೆ ಸಿಲುಕಿ ಗಾಯಗೊಂಡಿದ್ದ ಗಂಡು ಹುಲಿಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮುಕ್ತಿ ಕಾಲೋನಿಯ ರೈತರೊಬ್ಬರ ಬಾಳೆ ತೋಟದಲ್ಲಿ ಸೆರೆ ಹಿಡಿದಿದ್ದಾರೆ. ಮುಕ್ತಿ ಕಾಲೋನಿಯ ಲೋಕೇಶ್ ಎಂಬುವವರ ಬಾಳೆ ತೋಟದಲ್ಲಿ ಬೆಳ್ಳಂಬೆಳಗ್ಗೆ ಹುಲಿ ಕಾಣಿಸಿಕೊಂಡು ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಅರಣ್ಯಾಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿತು. ಬಾಳೆ ತೋಟದಲ್ಲಿ ವಿಶ್ರಾಂತಿಗೆ ಜಾರಿದ್ದ ಹುಲಿಗೆ ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯಲಾಯಿತು. ಸೆರೆಯಾದ ಹುಲಿಯ ಮೈಮೇಲೆ ಗಾಯಗಳು ಗೋಚರಿಸಿದೆ. ಕಾರ್ಯಾಚರಣೆಯಲ್ಲಿ ಬಂಡೀಪುರ ಸಿಎಫ್ ಪ್ರಭಾಕರನ್, ಎಸಿಎಫ್ ಸುರೇಶ್, ಆರ್.ಎಫ್.ಓ ಪುನೀತ್, ಡಿ.ಆರ್.ಎಫ್.ಓ ಶಿವಕುಮಾರ್ ಮತ್ತಿತರ ಅರಣ್ಯ ಇಲಾಖೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.






