ಸುಂಟಿಕೊಪ್ಪ ಜೂ.24 NEWS DESK : ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲ್ಲಿರುವ ದುರ್ಗಾಲಕ್ಷ್ಮಿ ದೇವಿಯ ಪಾದುಕ ಪೂಜೆ ದೇವಾಲಯದ ಆವರಣದಲ್ಲಿ ಶ್ರದ್ಧಾಭಕತಿಯಿಂದ ಜರುಗಿತು. ದೇವಾಲಯದ ಪ್ರಧಾನ ಆರ್ಚಕರಾದ ಗಣೇಶ್ಭಟ್ ನೇತೃತ್ವದಲ್ಲಿ ಸ್ಥಳ ಶುದ್ಧಿಪೂಜೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ನಂತರ ದಕ್ಷಿಣ ಕನ್ನಡ ಜಿಲ್ಲೆಯ ವಾಸ್ತು ಶಿಲ್ಪಿ ಜಗ್ಗನಿವಾಸುದೇವ್ ಅವರು ದೇವಿಯ ಪಾದುಕೆಕಲ್ಲನ್ನು ದೇವಸ್ಥಾನ ಆಡಳಿತ ಮಂಡಳಿಗೆ ಒಪ್ಪಿಸಿ ಅದಕ್ಕೆ ಶುದ್ಧಿಪೂಜೆಯನ್ನು ಸಲ್ಲಿಸುವ ಮೂಲಕ ಗುಡಿಯ ನಿರ್ಮಾಣಕ್ಕೆ ಚಾಲನೆ ನೀಡಿದರು. ಅಂದಾಜು ರೂ.18 ರಿಂದ 20 ಲಕ್ಷ ವೆಚ್ಚದಲ್ಲಿ ದುರ್ಗಾಲಕ್ಷ್ಮಿಗುಡಿ, ನಾಗಗುಡಿ, ಮುಖಮಂಟಪ ಹಾಗೂ ಮಹಾದ್ವಾರದ ಕಾಮಗಾರಿಯು ತ್ವರಿತಗತಿಯಲ್ಲಿ ಆರಂಭಿಸಲಾಗಿದ್ದು, ದಾನಿಗಳು ಹಾಗೂ ಭಕ್ತಾಧಿಗಳು ಧನಸಹಾಯ ನೀಡುವಂತೆ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರದ ಅಧ್ಯಕ್ಷ ಬಿ.ಎಂ.ಸುರೇಶ್ ಮನವಿ ಮಾಡಿದರು. ಈ ಗುಡಿಗಳ ನಿರ್ಮಾಣ ಕಾರ್ಯವನ್ನು ದಕ್ಷಿಣ ಕನ್ನಡ ಮಾಣಿಯ ಶಿಲ್ಪಕಾರರಾದ ಕೃಷ್ಣಪ್ರಸಾದ್, ಜಗದೀಶ್ ದಯಾನಂದ್ ವಹಿಸಿಕೊಂಡಿದ್ದರು. ದೇವಾಲಯದ ಪದಾಧಿಕಾರಿಗಳಾದ ಚಂದ್ರ, ಧನುಕಾವೇರಪ್ಪ, ಸಿ.ಬಿ.ಚಂದ್ರಶೇಖರ್, ಬಾಲಕೃಷ್ಣ, ಆರ್.ಶಾಂತರಾಂ ಕಾಮತ್, ವಿ.ಎ.ಸಂತೋಷ್,…
ಲೇಖಕ: admin
ಮಡಿಕೇರಿ ಜೂ.24 NEWS DESK : ಜೀವನದಿ ಕಾವೇರಿ ಜಾಗೃತಿಗಾಗಿ ಹುಣ್ಣಿಮೆಯಂದು ಹಮ್ಮಿಕೊಂಡು ಬರುತ್ತಿರುವ ಮಹಾ ಆರತಿ ಕಾರ್ಯಕ್ರಮ ಕೊಡಗು ಜಿಲ್ಲೆಯ ಆರು ಕಡೆ ಕಾವೇರಿ ನದಿ ತಟದಲ್ಲಿ ಏಕಕಾಲದಲ್ಲಿ ನಡೆಯಿತು. ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ನಮಾಮಿ ಕಾವೇರಿ ತಂಡಗಳ ಮೂಲಕ ಭಾಗಮಂಡಲ ತ್ರಿವೇಣಿ ಸಂಗಮ, ಚೆಟ್ಟಿಮಾನಿ, ನಾಪೋಕ್ಲು ಕಲ್ಲುಮೊಟ್ಟೆ, ಚೆರಿಯ ಪರಂಬು, ಕುಶಾಲನಗರದ ಕಾವೇರಿ ಆರತಿ ಕ್ಷೇತ್ರ, ಗಡಿ ಭಾಗದ ಕಾವೇರಿ ಪ್ರತಿಮೆ ಬಳಿ ಸೇರಿದಂತೆ ಒಟ್ಟು ಆರು ಕಡೆ ಕಾವೇರಿ ನದಿ ತಟಗಳಲ್ಲಿ ಮಹಾ ಆರತಿ ಬೆಳಗುವ ಮೂಲಕ ಕಾವೇರಿಯ ಆರಾಧನೆ ಕಾರ್ಯಕ್ರಮಗಳು ಏಕಕಾಲದಲ್ಲಿ ಜರಗಿದವು. ಈ ಮೂಲಕ ಸ್ವಚ್ಛ ಕಾವೇರಿಗಾಗಿ ಜನರಲ್ಲಿ ಅರಿವು ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಡೆದವು. ಕಾವೇರಿ ನದಿ ಸಂರಕ್ಷಣೆಯ ಅಂಗವಾಗಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ…
ಸೋಮವಾರಪೇಟೆ ಜೂ.24 NEWS DESK : ಶ್ರೀ ಸೋಮೇಶ್ವರ ದೇವಾಲಯದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ನಂಜಮ್ಮ ಕಲ್ಯಾಣ ಮಂಟಪದಲ್ಲಿ ನವದುರ್ಗಾ ಚಂಡಿಕಾ ಹೋಮ, ಮತ್ತು ಏಕಾದಶ ರುದ್ರಹೋಮ ನಡೆಯಿತು. ವೇದಬ್ರಹ್ಮ ಎಂ.ವಿ.ಕೃಷ್ಣಮೂರ್ತಿ ಘನಪಾಠಿಗಳು ಹಾಗೂ ಚಿತ್ರಕುಮಾರ್ ಭಟ್ ಪೌರೋಹಿತ್ಯದಲ್ಲಿ ಪೂಜಾ ವಿಧಿವಿಧಾನಗಳು ನಡೆದವು. ದೇವಾಲಯದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಕಾರ್ಯದರ್ಶಿ ಎಸ್.ಡಿ.ವಿಜೇತ್ ಪದಾಧಿಕಾರಿಗಳಾದ ವೈ.ಪಿ.ಹರೀಶ್, ಸಿ.ಎನ್.ಸತೀಶ್, ಶಾಮ್ ಸುಂದರ್, ರಾಜೇಶ್ ಪದ್ಮನಾಭ, ಸುದರ್ಶನ್ ಕೌಶಿಕ್, ಜಯಂತ್, ಇನ್ನಿತರರು ಇದ್ದರು. ಇಂದು (ಜೂ.24) ಅಮೃತಮನೋತ್ಸವ ಸಭಾ ಕಾರ್ಯಕ್ರಮ ನಡೆಯಲಿದೆ. ಸಂಸದ ಯದುವೀರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಶಾಸಕ ಡಾ.ಮಂತರ್ಗೌಡ, ಮಾಜಿ ಸಚಿವ ಅಪ್ಪಚ್ಚು ರಂಜನ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ಮಡಿಕೇರಿ ಜೂ.24 NEWS DESK : ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಕಲಿಕೆಯ ಸಮಯದಲ್ಲೇ ಚುನಾವಣೆಯ ಮಹತ್ವ, ಚುನಾವಣೆಯ ಪ್ರಕ್ರಿಯೆ, ಮತದಾನದ ಮಹತ್ವ, ಮತದಾನ ಪ್ರಕ್ರಿಯೆ,ಶಾಲಾ ಸಂಬಂಧಿಸಿದ ಸಂಸತ್ತಿನ ಚಟುವಟಿಕೆಗಳ ಅರಿವು ಮೂಡಿಸುವ ಉದ್ದೇಶದಿಂದ ತ್ರಿವೇಣಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಸಂಸತ್ತಿನ ಚುನಾವಣೆ ನಡೆಯಿತು. 4ನೇ ತರಗತಿಯಿಂದ 10 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಯಿತು. ನಾಮಪತ್ರ ಸಲ್ಲಿಕೆ ಪ್ರಕಾರದಿಂದ ಹಿಡಿದು, ಮತಯಾಚನೆ, ಮತದಾನ ಪ್ರಕ್ರಿಯೆ, ಗುರುತು ಮಾಡುವಿಕೆ ನಡೆಸಲಾಯಿತು. ಫಲಿತಾಂಶ ಎಣಿಕೆಯ ಸಂದರ್ಭದಲ್ಲಿ ವಿದ್ಯಾರ್ಥಿ ನಾಯಕರುಗಳು ಮುನ್ನಡೆ-ಹಿನ್ನಡೆ ಗಳಿಸಿಕೊಂಡು ಅಂತಿಮವಾಗಿ ವಿದ್ಯಾರ್ಥಿ ನಾಯಕರನ್ನು ಆಯ್ಕೆ ಮಾಡಲಾಯಿತು.
ನಾಪೋಕ್ಲು ಜೂ.24 NEWS DESK : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ ವತಿಯಿಂದ ವಾರ್ಷಿಕ ಮಾಹಿತಿ ಕಾರ್ಯಾಗಾರ ನಡೆಯಿತು. ಮಡಿಕೇರಿಯ ಜ್ಞಾನ ವಿಕಾಸ ಕೇಂದ್ರದ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಉದ್ಘಾಟಿಸಿ, ಜ್ಞಾನ ವಿಕಾಸ ಕೇಂದ್ರದ ಧ್ಯೇಯವೋದ್ದೇಶಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು. ಈ ಸಂದರ್ಭ ಜ್ಞಾನ ವಿಕಾಸ ಕೇಂದ್ರದ ಯೋಜನಾಧಿಕಾರಿ ಪುರುಷೋತ್ತಮ, ಅರಕಲಗೋಡು ತಾಲ್ಲೂಕಿನ ಸಮನ್ವಯಧಿಕಾರಿ ಸಪ್ನಾ, ಮಡಿಕೇರಿ ತಾಲ್ಲೂಕಿನ ಸಮನ್ವಯಧಿಕಾರಿ ಮಾಲಿನಿ ಹಾಗೂ ಎಲ್ಲಾ ತಾಲ್ಲೂಕಿನ ಸೇವಾಪ್ರತಿನಿಧಿಗಳು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜೂ.24 NEWS DESK : ಬಿಜೆಪಿಯವರಿಗೆ ನಿಜವಾಗಿಯೂ ಜನಸಾಮಾನ್ಯರ ಮೇಲೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಇಳಿಕೆ ಮಾಡಿಸಲಿ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬೆಲೆ ಏರಿಕೆಯ ನೆಪವೊಡ್ಡಿ ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆ ರಾಜಕೀಯ ದುರುದ್ದೇಶದಿಂದ ಕೂಡಿದೆ ಮತ್ತು ಜನಪ್ರಿಯ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರನ್ನು ಗುರಿಯಾಗಿಸಿದ ಕೀಳು ಮಟ್ಟದ ರಾಜಕಾರಣವಾಗಿದೆ ಎಂದು ಆರೋಪಿಸಿದ್ದಾರೆ. ಪೊನ್ನಣ್ಣ ಅವರ ಪ್ರತಿಕೃತಿ ದಹಿಸಿದ ಬಿಜೆಪಿಯ ವರ್ತನೆ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ 10 ವರ್ಷಗಳ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದುರಾಡಳಿತದ ಫಲವಾಗಿ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರಿದೆ. ಬಡವರು, ಕೂಲಿ ಕಾರ್ಮಿಕರು, ಜನಸಾಮಾನ್ಯರು ನಿತ್ಯ ಕಷ್ಟದ ಜೀವನ ನಡೆಸುತ್ತಿದ್ದಾರೆ. ಈ ಬಗ್ಗೆ ತಲೆ ಕೆಡಿಸಿಕೊಳ್ಳದ ಬಿಜೆಪಿ 5 ಪ್ರಮುಖ ಗ್ಯಾರಂಟಿಗಳ ಮೂಲಕ ಜನಪ್ರಿಯತೆ ಗಳಿಸಿರುವ…
ಕುಶಾಲನಗರ, ಜೂ.24 NEWS DESK : ಶಿಕ್ಷಕರು ಶಾಲಾ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸುವ ಮೂಲಕ ಅವರನ್ನು ಭವಿಷ್ಯದಲ್ಲಿ ಉತ್ತಮ ಪರಿಸರ ಸಂರಕ್ಷಕರಾಗಿ ರೂಪಿಸುವಲ್ಲಿ ವಿಶೇಷ ಗಮನ ಹರಿಸಬೇಕು ಎಂದು ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಸಲಹೆ ನೀಡಿದರು. ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕದ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಇಕೋ ಕ್ಲಬ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆ( ಎನ್.ಎಸ್.ಎಸ್.) ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಇಕೋ ಕ್ಲಬ್ ಸಹಯೋಗದೊಂದಿಗೆ ಶಾಲಾವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಪರಿಸರ ಸಂಭ್ರಮಾಚರಣೆಯಲ್ಲಿ ನೇರಳೆ ಗಿಡ ನೆಟ್ಟು ಮಾತನಾಡಿದರು. ಭವಿಷ್ಯದ ಮಕ್ಕಳಲ್ಲಿ ಪರಿಸರದ ಅರಿವು ಮೂಡಿಸುವ ದಿಸೆಯಲ್ಲಿ ಅರಣ್ಯ ಇಲಾಖೆಯು ಶಿಕ್ಷಣ ಇಲಾಖೆ ಸಹಕಾರದೊಂದಿಗೆ ಶಾಲಾವರಣ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಗಿಡಗಳನ್ನು ನೆಟ್ಟು ಬೆಳೆಸಲು ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು. ಅರಣ್ಯ ಮತ್ತು ಪರಿಸರ…
ಕುಶಾಲನಗರ, ಜೂ.24 NEWS DESK : ರಾಜ್ಯದಲ್ಲಿ ಮಾರ್ಚ್–ಏಪ್ರಿಲ್ನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಕೊಡಗು ಜಿಲ್ಲೆಯು ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿ ಉತ್ತಮ ಸಾಧನೆ ತೋರಿದ್ದು, ಇದಕ್ಕಾಗಿ ಜಿಲ್ಲೆಯ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು, ವಿದ್ಯಾರ್ಥಿ- ಪೋಷಕ ವೃಂದಕ್ಕೆ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಕೃತಜ್ಞತೆ ಸಲ್ಲಿಸಿ ಅಭಿನಂದಿಸಿದರು. ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಏರ್ಪಡಿಸಿದ್ದ ಶೈಕ್ಷಣಿಕ ಸಭೆಯನ್ನು ಉದ್ಘಾಟಿಸಿ ಶೈಕ್ಷಣಿಕ ವಿಚಾರಗಳ ಕುರಿತು ಮಾಹಿತಿ ನೀಡಿದರು. ಇದರೊಂದಿಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯು ಗುಣಾತ್ಮಕ ಫಲಿತಾಂಶ ಗಳಿಸುವಲ್ಲಿ ರಾಜ್ಯಕ್ಕೆ ಮೊದಲ ಸ್ಥಾನಗಳಿಸಿದೆ. ಗುಣಾತ್ಮಕ ಫಲಿತಾಂಶ ಪಡೆಯಲು ಕಾರಣರಾದ ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರ ಪರಿಶ್ರಮ ಬಹಳ ಮುಖ್ಯವಾಗಿದೆ ಎಂದರು. ಪ್ರಸಕ್ತ ಸಾಲಿನಲ್ಲಿ ಕೂಡ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯು ಉತ್ತಮ…
ಮಡಿಕೇರಿ ಜೂ.24 NEWS DESK : ಬೆಳಕು ಟ್ರಸ್ಟ್ ವತಿಯಿಂದ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಸಾಹಿತ್ಯ ಕಾರ್ಯಕ್ರಮದಲ್ಲಿ ಪೊನ್ನಂಪೇಟೆಯ ಮೂಕಳೇರ ಟೈನಿ ಪೂಣಚ್ಚ (ತಾಮನೆ ಮುಕ್ಕಾಟೀರ ನಾಲ್ಕೇರಿ) ಅವರ ಸಾಹಿತ್ಯ ಸೇವೆಗಾಗಿ ರಾಷ್ಟ್ರ ಮಟ್ಟದ ಅಕ್ಕಮಹಾದೇವಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಡಿಕೇರಿ, ಜೂ.24 NEWS DESK : ಉತ್ತಮ ಪರಿಸರ ಸಂರಕ್ಷಣೆ ಹಾಗೂ ಜೀವ ಸಂಕುಲದ ಉಳಿವಿಗೆ ಬೇಕಾದ ಶುದ್ಧ ಆಮ್ಲಜನಕ ಒದಗಿಸಿ ಪರಿಸರ ಸಮತೋಲನ ಕಾಪಾಡಿಕೊಂಡು ಉತ್ತಮ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಹೇಳಿದರು. ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ , ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಮೂಲ ತರಬೇತಿ ಹಾಗೂ ಮುಂದುವರಿದ ತರಬೇತಿಯ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್, ಅರಣ್ಯ ಇಲಾಖೆಯ ಮಡಿಕೇರಿ ವಲಯ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪರಿಸರ ಸಂಭ್ರಮ ಕಾರ್ಯಕ್ರಮದಲ್ಲಿ ಶಾಲಾವರಣದಲ್ಲಿ ಅರಣ್ಯ ಸಸಿ ನೆಡುವ ಮೂಲಕ ವನ ಸಂಭ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕೊಡಗಿನಲ್ಲಿ ಉತ್ತಮ ಮಳೆ ಬಿದ್ದು ಜೀವನದಿ…






