ಮಡಿಕೇರಿ ಜೂ.22 NEWS DESK : ಕೊಡಗಿನ ವಿಶಿಷ್ಟ ಸಂಸ್ಕೃತಿ ಮತ್ತು ಪರಂಪರೆಯನ್ನು ಮರೆತು ವಿರಾಜಪೇಟೆ ಕ್ಷೇತ್ರದ ಶಾಸಕ, ಕೊಡವ ಸಮೂಹದ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿಯನ್ನು ಬಿಜೆಪಿ ಪ್ರಮುಖರು ದಹಿಸಿರುವುದು ಖಂಡನೀಯವೆAದು ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾನೊಬ್ಬ ಕೊಡವತಿಯಾಗಿ ಮಾತನಾಡುತ್ತಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲವೆಂದು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ ಅವರು, ಬಿಜೆಪಿ ಜಿಲ್ಲೆಯ ಜನತೆಯ ಕ್ಷಮೆ ಕೋರಬೇಕೆಂದು ಆಗ್ರಹಿಸಿದರು. ಇಂಧನ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹಿಸಲಾಗಿದ್ದು, ಅದರಲ್ಲಿ ಸ್ಥಳೀಯ ಸಂಸ್ಕೃತಿಯ ಬಗ್ಗೆ ಅರಿವಿರುವ ಕೊಡವ ಮಹಿಳೆಯರು ಪಾಲ್ಗೊಂಡಿರುವುದು ಬೇಸರ ತರಿಸಿದೆ. ಬಿಜೆಪಿಯ ಇಂತಹ ನಡೆಗಳು ಆ ಪಕ್ಷದ ಅವನತಿಗೆ ಹಾದಿಯಾಗಿದೆ ಎಂದರು. ಕೊಡವರಿಗೆ ಹುಟ್ಟು ಸಾವಿನ ಸಂದರ್ಭ ಅವರದ್ದೇ ಆದ ಆಚರಣೆಗಳು, ಪದ್ಧತಿ ಪರಂಪರೆಗಳಿವೆ. ಬೀದಿಯಲ್ಲಿ ಕೊಡವ ಸಮೂಹಕ್ಕೆ ಸೇರಿದ ಜನಪ್ರತಿನಿಧಿಯ ಪ್ರತಿಕೃತಿ ದಹಿಸಲಾಗಿದೆ. ಈ ಸಂದರ್ಭ ಬಿಜೆಪಿಯಲ್ಲಿನ ಕೆಲವು…
ಲೇಖಕ: admin
ಮಡಿಕೇರಿ ಜೂ.22 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಬಿಜೆಪಿ ಮಂದಿ ಅತ್ಯಂತ ಕೀಳುಮಟ್ಟದ ರಾಜಕೀಯ ಪ್ರದರ್ಶಿಸಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷಗಳಲ್ಲಿ ಬಿಜೆಪಿ ಶಾಸಕರುಗಳಿಂದ ಆಗದ ಅಭಿವೃದ್ಧಿ ಕಾರ್ಯಗಳನ್ನು ಈಗಿನ ಕಾಂಗ್ರೆಸ್ ಶಾಸಕರು ಮಾಡುತ್ತಿದ್ದಾರೆ. ಅಲ್ಲದೆ ಶಾಸಕರ ಜನಪ್ರಿಯತೆ ಹೆಚ್ಚುತ್ತಿದೆ. ಇದನ್ನು ಸಹಿಸಲಾಗದೆ ವಿನಾಕಾರಣ ಪ್ರತಿಕೃತಿ ದಹಿಸಿ ವಿಕೃತಿ ಮೆರೆದಿದ್ದಾರೆ ಎಂದು ಆರೋಪಿಸಿದರು. ಸಂವಿಧಾನದತ್ತವಾಗಿ ಎಲ್ಲರಿಗೂ ಪ್ರತಿಭಟಿಸುವ ಹಕ್ಕಿದೆ. ಆದರೆ ಬೆಲೆ ಏರಿಕೆ ವಿರುದ್ಧ ರಾಜ್ಯ ಸರ್ಕಾರವನ್ನು ಗುರಿಯಾಗಿಸಿ ಬಿಜೆಪಿಗರು ನಡೆಸಿದ ಪ್ರತಿಭಟನೆಯಲ್ಲಿ ರಾಜ್ಯದ ಬೇರೆ ಜಿಲ್ಲೆಗೆ ಹೊಲಿಸಿದರೆ ವಿರಾಜಪೇಟೆಯಲ್ಲಿ ಅತ್ಯಂತ ಕೀಳು ಮಟ್ಟದ ಪ್ರತಿಭಟನೆ ನಡೆಸಲಾಗಿದೆ. ಕಾಂಗ್ರೆಸ್ ಇಂತಹ ಕೀಳು ಮಟ್ಟದ ಪ್ರತಿಭಟನೆಯನ್ನು ಎಂದೂ ಮಾಡಿಲ್ಲ ಎಂದರು. ಬೆಲೆ ಏರಿಕೆ ಕುರಿತು ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುವ ನೈತಿಕತೆಯನ್ನು ಬಿಜೆಪಿ…
ಮಡಿಕೇರಿ ಜೂ.22 NEWS DESK : ಕೊಡಗು ಜಿಲ್ಲಾ ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘ 2023-24ನೇ ಸಾಲಿನ ಅಂತ್ಯಕ್ಕೆ ರೂ.12.51 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.10 ರಷ್ಟು ಡಿವಿಡೆಂಟ್ನ್ನು ನೀಡಲಾಗುವುದೆಂದು ಸಂಘದ ಅಧ್ಯಕ್ಷ ಸಿರಿಲ್ ಮೊರಾಸ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಕಾರ್ಯವ್ಯಾಪ್ತಿಯುಳ್ಳ ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘವು 2019ನೇ ವರ್ಷದಲ್ಲಿ ಸ್ಥಾಪನೆಗೊಂಡಿದ್ದು, ಸಂಘವು ಸ್ಥಾಪನೆಯಾದ ಪ್ರಾರಂಭದಲ್ಲೇ ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಆರ್ಥಿಕ ಸಂಕಷ್ಟ ಎದುರಿಸಬೇಕಾದ ಸಂದರ್ಭದ ಹೊರತಾಗಿಯೂ ಸ್ಥಾಪನೆಯಾದ ಐದು ವರ್ಷಗಳ ಅಲ್ಪಾವದಿಯಲ್ಲೇ ಗಣನೀಯ ಪ್ರಗತಿಯನ್ನು ಸಾಧಿಸಿದೆ ಎಂದು ತಿಳಿಸಿದರು. ಸಂಘದಲ್ಲಿ ಒಟ್ಟು 1090 ಸದಸ್ಯರಿದ್ದು, ಸದಸ್ಯರಿಂದ ಪಾಲು ಬಂಡವಾಳವಾಗಿ 57 ಲಕ್ಷಗಳಿರುತ್ತದೆ. ಠೇವಣಿ ಹಾಗೂ ಸಾಲ ನೀಡುವಿಕೆಯಲ್ಲಿ ಗಣನೀಯ ಪ್ರಮಾಣದ ಪ್ರಗತಿಯನ್ನು ಸಾಧಿಸಲಾಗಿದ್ದು, ಮಾಚ್ ಅಂತ್ಯಕ್ಕೆ ರೂ.7.70 ಕೋಟಿ ಠೇವಣಿ ಹೊಂದಿದೆ. ಸದಸ್ಯರಿಗೆ ರೂ.5.29 ಕೋಟಿಯಷ್ಟು ವಿವಿಧ ಸಾಲಗಳನ್ನು ವಿತರಿಸಲಾಗಿದ್ದು, ಮಾರ್ಚ್ 2024ರ ಅಂತ್ಯಕ್ಕೆ ರೂ.6.28 ಕೋಟಿಯಷ್ಟು ವಿವಿಧ ಸಾಲಗಳು ಹೊರಬಾಕಿ…
ಮಡಿಕೇರಿ ಜೂ.22 NEWS DESK : ಬೆಲೆ ಏರಿಕೆಯ ನೆಪವೊಡ್ಡಿ ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆ ರಾಜಕೀಯ ದುರುದ್ದೇಶದಿಂದ ಕೂಡಿದೆ ಮತ್ತು ಜನಪ್ರಿಯ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಗುರಿಯಾಗಿಸಿದ ಕೀಳು ಮಟ್ಟದ ರಾಜಕಾರಣವಾಗಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಅವರ ಪ್ರತಿಕೃತಿ ದಹಿಸಿದ ಬಿಜೆಪಿಯ ವರ್ತನೆ ಖಂಡನೀಯವೆAದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ 10 ವರ್ಷಗಳ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ದುರಾಡಳಿತದ ಫಲವಾಗಿ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರಿದೆ. ಬಡವರು, ಕೂಲಿ ಕಾರ್ಮಿಕರು, ಜನಸಾಮಾನ್ಯರು ನಿತ್ಯ ಕಷ್ಟದ ಜೀವನ ನಡೆಸುತ್ತಿದ್ದಾರೆ. ಈ ಬಗ್ಗೆ ತಲೆ ಕೆಡಿಸಿಕೊಳ್ಳದ ಬಿಜೆಪಿ 5 ಪ್ರಮುಖ ಗ್ಯಾರಂಟಿಗಳ ಮೂಲಕ ಜನಪ್ರಿಯತೆ ಗಳಿಸಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಅರ್ಥಹೀನ ಪ್ರತಿಭಟನೆ ನಡೆಸುತ್ತಿದೆ. ಕೇಂದ್ರ ಸರಕಾರದ ಆರ್ಥಿಕ ನೀತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ರಾಜ್ಯ ಸರಕಾರದ ಗ್ಯಾರಂಟಿಗಳು ವರದಾನವಾಗಿದೆ. ಜನ ಗ್ಯಾರಂಟಿ ಯೋಜನೆಯ…
ಮಡಿಕೇರಿ ಜೂ.22 NEWS DESK : ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಮತ್ತು ಹುಣುಸೂರು ಮಾರ್ಗವಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ- ಸಿದ್ದಾಪುರ ಅರಣ್ಯ ವ್ಯಾಪ್ತಿಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ಸಂಚರಿಸುವವರಿಗೆ ದರೋಡೆಕೋರರ ಆತಂಕವಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊAಡ ಪ್ರಕರಣದ ತನಿಖೆ ನಡೆಸಿರುವ ಕೊಡಗು ಪೊಲೀಸರು ಇದೊಂದು ಸುಳ್ಳು ಸುದ್ದಿ ಎನ್ನುವುದನ್ನು ಖಾತ್ರಿ ಪಡಿಸಿದ್ದಾರೆ. ಕೆಲವು ವ್ಯಕ್ತಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊAಡಿರುವ ಮಾಹಿತಿ ಕೇವಲ ಊಹಾಪೋಹವಾಗಿದೆ. ಪಿರಿಯಾಪಟ್ಟಣ- ಹುಣುಸೂರು- ವಿರಾಜಪೇಟೆ- ಸಿದ್ದಾಪುರ ಮಾರ್ಗದಲ್ಲಿ ಆತಂಕದ ವಾತಾವರಣವಿಲ್ಲ. ಯಾವುದೇ ವೇಳೆಯಲ್ಲಿ ಪ್ರಯಾಣಿಸಬಹುದಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸ್ಪಷ್ಟಪಡಿಸಿದ್ದಾರೆ. ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಿದ್ದು, ಸುಳ್ಳು ಸುದ್ದಿ, ವದಂತಿಗಳನ್ನು ಹರಡುವುದು, ಶಾಂತಿ ಸೌಹಾರ್ದತೆಗೆ ದಕ್ಕೆ ತರಬಹುದಾದ ಮಾಹತಿಗಳನ್ನು ಹಂಚಿಕೊAಡಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಸ್ಪಿ ಎಚ್ಚರಿಕೆ ನೀಡಿದ್ದಾರೆ.
ಮಡಿಕೇರಿ ಜೂ.22 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿಯನ್ನು ದಹಿಸುವ ಮೂಲಕ ಬಿಜೆಪಿ ಕೊಡಗಿನ ಜನರ ಭಾವನೆಗೆ ದಕ್ಕೆ ತಂದಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆರೋಪಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ಅವರು, ಅಣುಕು ಶವಯಾತ್ರೆ ಮಾಡಿ, ಪ್ರತಿಕೃತಿ ದಹಿಸಿ ವಿಕೃತಿ ಮೆರೆಯುವುದು ಕೊಡಗಿನ ಸಂಸ್ಕೃತಿಯಲ್ಲ. ಬಿಜೆಪಿಯ ಈ ವರ್ತನೆ ಖಂಡನೀಯವೆಂದು ತಿಳಿಸಿದ್ದಾರೆ. ಕಳೆದ 10 ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 100ರ ಗಡಿ ದಾಟಿಸಿದೆ. ಅಡುಗೆ ಅನಿಲ, ರಸಗೊಬ್ಬರ, ಕೃಷಿ ಪರಿಕರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ದುಪ್ಪಟ್ಟಾಗಿದೆ. ಜನಸಾಮಾನ್ಯರು ಬೆಲೆ ಏರಿಕೆಯ ಹೊರೆಯಿಂದ ಕಷ್ಟದ ಜೀವನ ಸಾಗಿಸುತ್ತಿದ್ದಾರೆ. ಆದರೂ ಕಾಂಗ್ರೆಸ್ ಪಕ್ಷ ಬಿಜೆಪಿ ಮಂದಿಯ ಪ್ರತಿಕೃತಿ ದಹಿಸಿ ವಿಕೃತಿ ಮೆರೆಯುವ ಕಾರ್ಯಕ್ಕೆ ಮುಂದಾಗಿಲ್ಲ. ಬಿಜೆಪಿ ತನ್ನ ಕೀಳು ಮಟ್ಟದ ರಾಜಕಾರಣವನ್ನು ಪೊನ್ನಣ್ಣ…
ಮಡಿಕೇರಿ ಜೂ.22 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪದವಿಪೂರ್ವ ಕಾಲೇಜುಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅಭಿವೃದ್ಧಿ ಹಾಗೂ ಕೊಠಡಿಗಳ ನಿರ್ಮಾಣದ ಕುರಿತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರು ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತ ಸಚಿವ ಎಸ್.ಮಧು ಬಂಗಾರಪ್ಪ ಅವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕೂಡಿಗೆ ಜೂ.22 NEWS DESK : ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ತಮ್ಮ ಹುಟ್ಟುಹಬ್ಬವನ್ನು ಕೂಡಿಗೆ ಶಕ್ತಿ ವೃದ್ಧಾಶ್ರಮದಲ್ಲಿ ಸರಳವಾಗಿ ಆಚರಿಸಿಕೊಂಡರು. ನಂತರ ವಯೋವೃದ್ಧರ ಯೋಗ ಕ್ಷೇಮ ವಿಚಾರಿಸಿ, ವೃದ್ಧರಿಗೆ ಊಟದ ವ್ಯವಸ್ಥೆಯನ್ನು ಏರ್ಪಡಿಸಿದರು. ಈ ಸಂದರ್ಭ ಮಾತನಾಡಿದ ಸಮಾಜ ಸೇವಕರು ಹಾಗೂ ದಾನಿಗಳಾದ ಹರಪಳ್ಳಿ ರವೀಂದ್ರ, ಜನ್ಮ ದಿನವನ್ನು ವೃದ್ಧರೊಂದಿಗೆ ಆಚರಣೆ ಮಾಡುತ್ತಿರುವುದು ಮನಸ್ಸಿಗೆ ಬಹಳ ಸಂತೋಷ ಹಾಗೂ ನೆಮ್ಮದಿಯನ್ನು ನೀಡುತ್ತದೆ. ಆದ್ದರಿಂದ ಇಲ್ಲಿನ ವೃದ್ಧರಿಗೆ ಒಂದೊತ್ತಿನ ಆಹಾರವನ್ನು ನೀಡಿ, ಅವರೊಂದಿಗೆ ಜನ್ಮ ದಿನವನ್ನು ರವೀಂದ್ರ ಅಭಿಮಾನಿ ಬಳಗದ ವತಿಯಿಂದ ಆಚರಣೆ ಮಾಡುತ್ತಿದ್ದಾರೆ ಎಂದರು. ಕೂಡಿಗೆ ರಾಜೇಗೌಡ ಮಾತನಾಡಿ. ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರು ಹಾಗೂ ಸಮಾಜ ಸೇವಕರು ಹಾಗೂ ದಾನಿಗಳಾದ ಹರಪಳ್ಳಿ ರವೀಂದ್ರಣ್ಣ ಅವರ ಹುಟ್ಟುಹಬ್ಬವನ್ನು ಕೂಡಿಗೆಯ ಶಕ್ತಿ ವೃದ್ಧಾಶ್ರಮದ ವಯೋ ವೃದ್ಧರ ಜೊತೆ ಆಚರಣೆ ಮಾಡುತ್ತಿರುವುದು ಶಕ್ತಿ ವೃದ್ಧಾಶ್ರಮದ ವಯೋವೃದ್ಧರಿಗೆ ತುಂಬಾ ಖುಷಿ ತಂದಂತೆ ಹಾಗಿದೆ ಹಾಗಾಗಿ ಈ ಬಾರಿ ಕೂಡಿಗೆಯ ಶಕ್ತಿ ವೃದ್ಧಾಶ್ರಮದಲ್ಲಿ…
ವಿರಾಜಪೇಟೆ ಜೂ.22 NEWS DESK : ವಿರಾಜಪೇಟೆಯ ಪ್ರಗತಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ಆಡಳಿತಾಧಿಕಾರಿ ಅಂತರಾಷ್ಟ್ರೀಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಮತ್ತು ಸುಷ್ಮಾ ತಿಮ್ಮಯ್ಯ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಯೋಗಾಸನದ ಮಹತ್ವದ ಕುರಿತು ಮಾಹಿತಿ ನೀಡಿ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು. ಈ ಸಂದರ್ಭ ಪ್ರಾಂಶುಪಾಲರಾದ ವಿಮಲ್ ಪ್ರಭು ಮತ್ತು ಕ್ರೀಡಾ ಸಂಯೋಜಕ ಶಿವಶಕ್ತಿ ಸೇರಿದಂತೆ ಶಾಲೆಯ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಇದ್ದರು.
ವಿರಾಜಪೇಟೆ ಜೂ.22 NEWS DESK : ಯೋಗಾಭ್ಯಾಸವು ಎಲ್ಲಾ ಧರ್ಮಗಳಲ್ಲಿ, ಎಲ್ಲಾ ದೇಶದ ಜನರ ನಡುವೆ ಸಾಮರಸ್ಯವನ್ನು ಬೆಳೆಸುತ್ತದೆ ಎಂದು ಪಾಲಿಬೆಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಎಂ.ಬಿ.ಪಾರ್ವತಿ ಅಭಿಪ್ರಾಯ ವ್ಯಕ್ತಪಡಿಸಿದರು. ಪಾಲೆಬೆಟ್ಟದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಯೋಗ ಶಾರೀರಿಕ ಹಾಗೂ ಮಾನಸಿಕ ನೆಮ್ಮದಿಯನ್ನು ವೃದ್ಧಿಸುತ್ತದೆ. ಜನರಲ್ಲಿ ಐಕ್ಯತೆ ಮತ್ತು ಸಾಮರಸ್ಯವನ್ನು ಬೆಳೆಸುತ್ತದೆ ಯೋಗವನ್ನು ಪ್ರತಿನಿತ್ಯ ಮಾಡುವುದರಿಂದ ಶ್ರದ್ಧೆ ಹಾಗೂ ಉತ್ತಮ ಆರೋಗ್ಯ ಬೆಳವಣಿಗೆಯಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾಲೇಜಿನ ಕನ್ನಡ ಉಪನ್ಯಾಸಕಿ ಪಿ.ಆರ್.ಸವಿತಾ ವಿದ್ಯಾರ್ಥಿಗಳಿಗೆ, ತ್ರಿಕೋನಾಸನ, ವಿತ್ಕಟಾಸನ ಪರಿವೃತ್ತ ತ್ರಿಕೋನಸನ, ಅರ್ಧ ಚಕ್ರಾಸನ, ವೀರಭದ್ರಸನ ಹಾಗೂ ಸೂರ್ಯ ನಮಸ್ಕಾರವನ್ನು ಮಾಡಿಸಿದರು. ಈ ಸಂದರ್ಭ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಪಿ.ಆರ್.ಶಿವದಾಸ್, ಉಪನ್ಯಾಸಕಿ ಕೆ.ಕೆ.ಸುನಿತ ಸೇರಿದಂತೆ ಎಲ್ಲಾ ಉಪನ್ಯಾಸಕರು, ಕಚೇರಿ ಸಿಬ್ಬಂದಿ ಶಾಲಿನಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.






