ಮಡಿಕೇರಿ ಜೂ.21 NEWS DESK : ದೇಹ ಮತ್ತು ಮನಸ್ಸಿನ ನಡುವೆ ಸಮನ್ವಯ ಸಾಧಿಸಲು ಯೋಗಾಭ್ಯಾಸ ಅಗತ್ಯವಾಗಿದೆ ಜಿಲ್ಲಾಧಿಕಾರಿ ವೆಂಕಟ್ರಾಜಾ ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೊಡಗು ವೈದ್ಯಕೀಯ ಶಿಕ್ಷಣ, ಜಿಲ್ಲಾ ಪೊಲೀಸ್, ಯುವ ಸಬಲೀಕರಣ ಮತ್ತು ಕ್ರೀಡೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಸಮಾಜ ಕಲ್ಯಾಣ, ಪದವಿ ಪೂರ್ವ ಶಿಕ್ಷಣ, ಎನ್ಎಸ್ಎಸ್ ಮತ್ತು ಎನ್ಸಿಸಿ ಘಟಕ, ನೆಹರು ಯುವ ಕೇಂದ್ರ, ಕೊಡಗು ಯುವ ಒಕ್ಕೂಟ, ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಯೋಗ ಭಾರತಿ, ಪ್ರಣವ ಯೋಗ ಕೇಂದ್ರ, ಪತಂಜಲಿ ಯೋಗ ಶಿಕ್ಷಣ, ಆರ್ಟ್ ಆಪ್ ಲಿವಿಂಗ್, ಸ್ಕೌಟ್ಸ್ ಮತ್ತು ಗೈಡ್ಸ್, ನೀಮಾ ಸಂಸ್ಥೆ ಹೀಗೆ ಸರ್ಕಾರಿ ಮತ್ತು ಸರ್ಕಾರೇತರ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ `ಯೋಗ ಫಾರ್ ಸೆಲ್ಫ್ ಅಂಡ್ ಸೊಸೈಟಿ’ ಹೆಸರಿನಲ್ಲಿ ನಗರದ ಗೌಡ ಸಮಾಜದಲ್ಲಿ ನಡೆದ ಅಂತರರಾಷ್ಟ್ರೀಯ 10ನೇ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಆರೋಗ್ಯವೇ ಭಾಗ್ಯವಾಗಿದ್ದು, ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಯೋಗ ಸಹಕಾರಿಯಾಗಿದೆ…
ಲೇಖಕ: admin
ಮಡಿಕೇರಿ ಜೂ.21 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ದೇವಟ್ಪರಂಬ್ ನರಮೇಧದ ಸ್ಮಾರಕ ಸ್ಥಳದಲ್ಲಿ ಪುಷ್ಪ ನಮನ ಸಲ್ಲಿಸಲಾಯಿತು. ಹತ್ಯೆಗೀಡಾದ ಹಿರಿಯರಿಗೆ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಪುಷ್ಪ ನಮನ ಸಲ್ಲಿಸಿ ಕೊಡವ ಜನಾಂಗದ ಯೋಗಕ್ಷೇಮಕ್ಕಾಗಿ ಮತ್ತು ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಯನ್ನು ಸಾಧಿಸಲು ಶಕ್ತಿಯನ್ನು ನೀಡುವಂತೆ ಪ್ರಾರ್ಥಿಸಲಾಯಿತು. ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳು ಮತ್ತು ಎಸ್ಟಿ ಟ್ಯಾಗ್ ನೀಡಬೇಕು. ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಕೊಡವ ಬುಡಕಟ್ಟಿನ ಮಾತೃ ಮಣ್ಣಿನಲ್ಲಿ ಐತಿಹಾಸಿಕ ನಿರಂತರತೆಗಾಗಿ ಸಾರ್ವತ್ರಿಕ ಮನ್ನಣೆಯನ್ನು ಕಲ್ಪಿಸಬೇಕು. ದೇವಟ್ಪರಂಬ್ನಲ್ಲಿ ಅಂತರಾಷ್ಟ್ರೀಯ ಕೊಡವ ನರಮೇಧದ ಸ್ಮಾರಕವನ್ನು ನಿರ್ಮಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ ಅಂತರರಾಷ್ಟ್ರೀಯ ಹತ್ಯಾಕಾಂಡದ ಸ್ಮರಣಾರ್ಥ ಪಟ್ಟಿಯಲ್ಲಿ ದೇವಟ್ಪರಂಬು ಕೊಡವರ ದುರಂತ ನರಮೇಧವನ್ನು ಸೇರಿಸಬೇಕು ಎಂದು ನಾಚಪ್ಪ ಒತ್ತಾಯಿಸಿದರು. ಗಾಳಿಯಲ್ಲಿ ಗುಂಡು ಹಾರಿಸಿ ಹಿರಿಯರಿಗೆ ಗೌರವ ಅರ್ಪಿಸಿದರು. ಸಿಎನ್ಸಿ ಪ್ರಮುಖರಾದ ಕಲಿಯಂಡ ಪ್ರಕಾಶ್, ಮಂದಪಂಡ ಮನೋಜ್, ಅರೆಯಡ ಗಿರೀಶ್ ಹಾಗೂ ಚೀಯಬೇರ ಸತೀಶ್ ಹಾಜರಿದ್ದರು.
ಮಡಿಕೇರಿ ಜೂ.21 NEWS DESK : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ರವರ 133ನೇ ಜನ್ಮದಿನಾಚರಣೆ ಕಾರ್ಯಕ್ರಮ ಜೂ.28 ರಂದು ನಗರದಲ್ಲಿ ನಡೆಯಲಿದ್ದು, ಈ ಸಂದರ್ಭ ವೃದ್ಧಾಶ್ರಮದ ಹಿರಿಯರಿಗೆ ವಸ್ತ್ರ ವಿತರಣೆ ಮತ್ತು ಪೌರ ಕಾರ್ಮಿಕರಿಗೆ ಸ್ವೆಟರ್ಗಳನ್ನು ವಿತರಿಸಲಾಗುತ್ತದೆಂದು ದಸಂಸ ಜಿಲ್ಲಾ ಸಂಚಾಲಕರಾದ ಹೆಚ್.ಎಲ್.ದಿವಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ಆಯೋಜಿತ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೆ. ರಾಮರಾಜನ್ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ. ನವೀನ್, ಸಮಾಜ ಕಲ್ಯಾಣ ಇಲಾಖಾ ಉಪ ನಿರ್ದೇಶಕರಾದ ಶೇಖರ್, ನಗರಸಭಾ ಪೌರಾಯುಕ್ತರಾದ ವಿಜಯ್, ಹೊಟೇಲ್ ಉದ್ಯಮಿ ಪ್ರದೀಪ್ ಕರ್ಕೇರ ಪಾಲ್ಗೊಳ್ಳಲಿದ್ದಾರೆಂದು ಮಾಹಿತಿ ನೀಡಿದರು. ಹಿರಿಯರಿಗೆ ವಸ್ತ್ರ ವಿತರಣೆ- ದಸಂಸ ಸಂಘನೆಯ ವತಿಯಿಂದ ಕಳೆದ ಇಪ್ಪತ್ತೈದು ವರ್ಷಗಳಿಂದ ವೃದ್ಧಾಶ್ರಮದ ಹಿರಿಯ ಜೀವಗಳಿಗೆ ಡಾ. ಅಂಬೇಡ್ಕರ್ ಜನ್ಮದಿನಾಚರಣೆ ಸಂದರ್ಭ ಹೊಸ ಬಟ್ಟೆಗಳನ್ನು ನೀಡುತ್ತಾ ಬರಲಾಗುತ್ತಿದೆ. ಈ ಬಾರಿಯೂ ಸಮಾರಂಭದಲ್ಲಿ ನಗರದ…
ಮಡಿಕೇರಿ ಜೂ.21 NEWS DESK : ಜಿಲ್ಲೆಯಲ್ಲಿ ಒತ್ತುವರಿ ಮಾಡಿಕೊಂಡಿರುವ ಸರಕಾರಿ ಜಾಗವನ್ನು ಕಡಿಮೆ ದರಕ್ಕೆ ಗುತ್ತಿಗೆ ನೀಡುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ವತಿಯಿಂದ ಜೂ.24 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದೆಂದು ಸಂಘಟನೆಯ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಮವಾರ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು. ಜಿಲ್ಲೆಯಲ್ಲಿ 3 ಲಕ್ಷಕ್ಕಿಂತಲೂ ಹೆಚ್ಚು ಕಾರ್ಮಿಕರು ಬಾಡಿಗೆ ಮನೆ, ತೋಟದ ಲೈನ್ಮನೆ, ಅಪಾಯಕಾರಿಯಾಗಿರುವ ನದಿ ದಡ, ಬೆಟ್ಟಗುಡ್ಡಗಳ ಮೇಲೆ ಮನೆ ನಿರ್ಮಿಸಿ ಸಂಕಷ್ಟದ ಬದುಕನ್ನು ನಡೆಸುತ್ತಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಇರುವ ಆದಿವಾಸಿ, ದಲಿತ ಸಮುದಾಯಗಳು, ಅಲ್ಪಸಂಖ್ಯಾತರು ಸೇರಿದಂತೆ ಬಡ ಕುಟುಂಬಗಳು ಸ್ವಂತ ಮನೆ, ನಿವೇಶನಕ್ಕಾಗಿ ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಆದರೆ ಸಂವಿಧಾನದಲ್ಲಿ ಹೇಳಿರುವಂತೆ ಇಲ್ಲಿಯವರೆಗೆ ಮೂಲಭೂತ ಹಕ್ಕನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ…
ಮಡಿಕೇರಿ ಜೂ.21 NEWS DESK : ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ದಿ ಪಡಿಸಲಾದ ಅಮೃತ್ ಸರೋವರ ಕೆರೆಗಳ ದಡದಲ್ಲಿ ” ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಿ ಯೋಗದ ಮಹತ್ವವನ್ನು ತಿಳಿಸಲಾಯಿತು. ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳನ್ನು ಅಭಿವೃದ್ದಿಪಡಿಸುವ ಮೂಲ ಉದ್ದೇಶದಿಂದ ಆಜಾದಿ- ಕಾ ಅಮೃತ್ ಮಹೋತ್ಸವದ ಅಂಗವಾಗಿ ಅಮೃತ್ ಸರೋವರ ಅಭಿಯಾನದಡಿ ಕೆರೆಗಳನ್ನು ಮನರೇಗಾ ಯೋಜನೆಯಡಿ ಅಭಿವೃದ್ದಿಪಡಿಸಲಾಯಿತು. ಆಯುಕ್ತಾಲಯದ ನಿರ್ದೇಶನದಂತೆ ಈ ಬಾರಿಯ ಅಂತರಾಷ್ಟ್ರೀಯ ಯೋಗ ದಿನವನ್ನು ಕೊಡಗು ಜಿಲ್ಲೆಯ ವಿವಿಧ ಗ್ರಾ.ಪಂ ಗಳಲ್ಲಿ ಅಭಿವೃದ್ಧಿಪಡಿಸಲಾದ ಅಮೃತ್ ಸರೋವರ ಕೆರೆಗಳ ದಡದಲ್ಲಿ ಮನರೇಗಾ ಕೂಲಿ ಕಾರ್ಮಿಕರು, ಶಾಲಾ ಮಕ್ಕಳು, ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸ್ವ-ಸಹಾಯ ಸಂಘದ ಮಹಿಳೆಯರು ಹಾಗೂ ಸ್ಥಳೀಯ ಜನರ ಒಳಗೊಂಡಂತೆ ವಿವಿಧ ಯೋಗ ಆಸನಗಳನ್ನು ಮಾಡುವ ಮೂಲಕ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕೂಡಿಗೆ ಜೂ.21 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಕೂಡುಮಂಗಳೂರು ಗ್ರಾ.ಪಂ, ಶಾಲೆಯ ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.) , ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶಾಲಾ ಘಟಕ, ಕುಶಾಲನಗರ ಜೆ.ಸಿ.ಐ.ಕಾವೇರಿ ಸಂಸ್ಥೆ, ಅಳಿಲು ಸೇವಾ ಟ್ಟಸ್ಟ್ ನ ವತಿಯಿಂದ ಶಾಲೆಯ ದೈಹಿಕ ಶಿಕ್ಷಣ ವಿಭಾಗ, ರೆಡ್ ರಿಬ್ಬನ್ ಕ್ಲಬ್ ಹಾಗೂ ಸಹಯೋಗದೊಂದಿಗೆ ವಿಶ್ವ ಯೋಗೋತ್ಸವವನ್ನು ಆಚರಿಸಲಾಯಿತು. ಯೋಗೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ನಿವೃತ್ತ ಉಪನ್ಯಾಸಕ ಎಚ್.ಎಚ್.ಸುಂದರ್, ಯೋಗವು ನಮ್ಮ ದೈಹಿಕ ಹಾಗೂ ಮಾನಸಿಕ ದೃಢತೆಗೆ ಸಹಕಾರಿಯಾಗಿದೆ. ಇಂದಿನ ಜೀವನ ಶೈಲಿಗೆ ಯೋಗವು ತುಂಬಾ ಸಹಕಾರಿಯಾಗಿದೆ ಎಂದರು. ವಿದ್ಯಾರ್ಥಿಗಳು ಯೋಗವನ್ನು ದಿನನಿತ್ಯದ ಚಟುವಟಿಕೆಯ ಒಂದು ಭಾಗವಾಗಿ ರೂಢಿಸಿಕೊಂಡರೆ ಉತ್ತಮ ಆರೋಗ್ಯ ಕಂಡುಕೊಳ್ಳಲು ಸಾಧ್ಯ ಎಂದರು. ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಯೋಗ ದಿನದ ಮಹತ್ವ ಕುರಿತು ವಿವರಣೆ ನೀಡಿ ನಾವು ಪ್ರತಿನಿತ್ಯ ಯೋಗಾಭ್ಯಾಸ ಮಾಡಿದರೆ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ತುಂಬಾ ಸಹಕಾರಿಯಾಗಿದೆ.…
ವಿರಾಜಪೇಟೆ ಜೂ.21 NEWS DESK : ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯ ತೋಮರ (ತೋರ) ಗ್ರಾಮದಲ್ಲಿ 2019ರಲ್ಲಿ ಸಂಭವಿಸಿದ ಭೂ ಕುಸಿತ ಪ್ರದೇಶಗಳಿಗೆ ವಿರಾಜಪೇಟೆ ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ರಾಮಚಂದ್ರ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಗಳು ಭೇಟಿ ಪರಿಶೀಲನೆ ನಡೆಸಿದರು. ಭೂ ಕುಸಿತ ಪ್ರದೇಶಗಳ ಸಮೀಪದ ಮನೆಗಳಿಗೆ ಭೇಟಿ ನೀಡಿ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಮುಂಜಾಗ್ರತ ಕ್ರಮ ವಹಿಸುವಂತೆ ನಿವಾಸಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭ ವಿರಾಜಪೇಟೆ ಕಂದಾಯ ಇಲಾಖೆಯ ಪರಿವೀಕ್ಷಕರಾದ ಎಂ.ಎಲ್.ಹರೀಶ್, ಗ್ರಾಮ ಆಡಳಿತಾಧಿಕಾರಿ ಅನುಶಾ, ನೂತನ್, ಅಜಯ್ ಹಾಜರಿದ್ದರು. ವರದಿ : ಕಿಶೋರ್ ಕುಮಾರ್ ಶೆಟ್ಟಿ
ಸೋಮವಾರಪೇಟೆ ಜೂ.21 NEWS DESK : ಕೊಡಗು ಜಿಲ್ಲಾ ಮತ್ತು ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ಮಹಿಳಾ ಸಹಕಾರ ಸಮಾಜ, ಅಕ್ಕನ ಬಳಗದ ಆಶ್ರಯದಲ್ಲಿ ಕವಯಿತ್ರಿ ಜಲಜಾ ಶೇಖರ್ ಅವರ “ಪ್ರತೀಕ್ಷ” ಮತ್ತು “ವಿಲೋಕನ” ಕೃತಿಗಳ ಬಿಡುಗಡೆಗೊಂಡಿತು. ಸೋಮವಾರಪೇಟೆಯ ಮಹಿಳಾ ಸಹಕಾರ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಲೋಕನ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ, 22 ಲೇಖನಗಳನ್ನು ಹೊಂದಿರುವ ವಿಲೋಕನ ಕೃತಿ ಒಂದು ಸುಂದರವಾದ ಪುಸ್ತಕವಾಗಿದೆ. ಇದರಲ್ಲಿ ವಿವಿಧ ವಿಚಾರಗಳಿದ್ದು, ಸಂಗ್ರಹಕ್ಕೆ ಯೋಗ್ಯವಾಗಿದೆ. ಇಂದು ಪುಸ್ತಕ ಬರೆಯುವುದಕ್ಕೂ ಹೆಚ್ಚಿನ ಜವಾಬ್ದಾರಿ ಪುಸ್ತಕ ಬಿಡುಗಡೆ ಮತ್ತು ಅದರ ಮಾರುಕಟ್ಟೆ ವಿಸ್ತರಣೆಗೆ ಬೇಕಾಗಿದೆ. ಇದರೊಂದಿಗೆ ಹಣ ಕೊಟ್ಟು ಪುಸ್ತಕ ತೆಗೆದುಕೊಂಡು ಓದುವವರ ಸಂಖ್ಯೆಯೂ ಹೆಚ್ಚಬೇಕಿದೆ ಎಂದು ಹೇಳಿದರು. ಪ್ರತೀಕ್ಷ ಕವನ ಸಂಕಲನವನ್ನು ಬಿಡುಗಡೆಗೊಳಿಸಿ ಮಾತನಾಡಿದ ನಿವೃತ್ತ ಪ್ರಾಂಶುಪಾಲ ಪ್ರೊ.ಧರ್ಮಪ್ಪ, ಅಣ್ಣ ಬಸವಣ್ಣ ಮತ್ತು ಅಕ್ಕಮಹಾದೇವಿ ಮೇಲಿನ ಕವನಗಳು ಗಮನ ಸೆಳೆಯುತ್ತವೆ. ಕವಿಗಳು ಎಂದಿಗೂ ಕಲ್ಪನಾಲೋಕದಲ್ಲಿ ಇದ್ದು, ಅವರ…
ಮಡಿಕೇರಿ ಜೂ.21 NEWS DESK : ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಮಂದಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆಯ ಜನಪ್ರಿಯ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹಿಸಿ ವಿಕೃತಿ ಮೆರೆದಿರುವುದು ಖಂಡನೀಯವೆಂದು ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶುದ್ಧ ರಾಜಕಾರಣಕ್ಕೆ ಹೆಸರಾಗಿರುವ ಕೊಡಗಿನ ಘನತೆಗೆ ಬಿಜೆಪಿ ಚ್ಯುತಿ ತಂದಿದೆ. ಎ.ಎಸ್.ಪೊನ್ನಣ್ಣ ಅವರ ಜನಪ್ರಿಯತೆಯನ್ನು ಸಹಿಸದೆ ಈ ರೀತಿಯ ಕೀಳು ಮಟ್ಟದ ರಾಜಕೀಯ ಪ್ರದರ್ಶಿಸಿದೆ. ಅಭಿವೃದ್ಧಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ಪೊನ್ನಣ್ಣ ಅವರಿಗೆ ರಾಜ್ಯ ಮಟ್ಟದಲ್ಲಿ ಘನತೆ, ಗೌರವವಿದೆ. ವಿರಾಜಪೇಟೆ ಕ್ಷೇತ್ರದಲ್ಲಿ ಜನಪ್ರಿಯತೆ ಇದೆ. ಇದನ್ನು ಅರಗಿಸಿಕೊಳ್ಳಲಾಗದ ಬಿಜೆಪಿ ಮಂದಿ ವಿನಾಕಾರಣ ಪ್ರತಿಕೃತಿ ದಹಿಸಿ ವಿಕೃತಿ ಮೆರೆದಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ 25 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಅಧಿಕಾರವಿಲ್ಲದಿದ್ದರೂ ಕಾಂಗ್ರೆಸ್ ಮಂದಿ ಆಡಳಿತ ಪಕ್ಷದಲ್ಲಿರುವವರ ಪ್ರತಿಕೃತಿ ದಹಿಸಿ ಅಗೌರವ ತೋರುವ ರಾಜಕೀಯ ಪ್ರದರ್ಶಿಸಿಲ್ಲ. ಈಗ ಅಧಿಕಾರ ಕಳೆದುಕೊಂಡು ಹತಾಶೆಗೊಂಡಿರುವ ಬಿಜೆಪಿ ಪ್ರತಿಕೃತಿ…
ವಿರಾಜಪೇಟೆ ಜೂ.21 NEWS DESK : ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಯೋಗ ಸಹಕಾರಿಯಾಗಿದೆ ಎಂದು ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರು ಮತ್ತು ಸೆಂಟ್ ಆನ್ಸ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಮದಲೈ ಮುತ್ತು ಅಭಿಪ್ರಾಯಪಟ್ಟರು. ಕಾಲೇಜಿನಲ್ಲಿ ಎನ್.ಎಸ್.ಎಸ್, ದೈಹಿಕ ಶಿಕ್ಷಣ ವಿಭಾಗ, ರೆಡ್ ಕ್ರಾಸ್ ಘಟಕ ಮತ್ತು ಸೆಂಟ್ ಆನ್ಸ್ ಪಿಯು ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿ, ಯೋಗವು ವ್ಯಕ್ತಿಯ ಏಕಾಗ್ರತೆಗೆ ಅತೀ ಮುಖ್ಯವಾಗಿದ್ದು, ಸಕಲ ರೋಗಗಳ ನಿವಾರಣೆಗೂ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಯೋಗದ ಮಹತ್ವವನ್ನು ಸಮಾಜಕ್ಕೆ ಸಾರಿ ಪ್ರಚಾರ ಪಡಿಸುವ ಅಗತ್ಯವಿದೆ. ಯೋಗದಿಂದ ಮಾನಸಿಕ ಸ್ಥಿರತೆ ಮೂಡಲು ಸಾಧ್ಯ ಎಂದರು. ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ. ಇಂದು ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸುತ್ತಿದ್ದು, ಯೋಗವು ಇಂದಿನ ಸನ್ನಿವೇಶದಲ್ಲಿ ಪ್ರಸ್ತುತವಾಗಿದೆ ಎಂದರು. ವೇದಿಕೆಯಲ್ಲಿ ಕಾಲೇಜಿನ ಎನ್.ಎಸ್.ಎಸ್.…






