ಮಡಿಕೇರಿ ಜು.3 NEWS DESK : ಬುಡಕಟ್ಟು ಜನಾಂಗದ ಕುಟುಂಬಗಳನ್ನು ಲೈನ್ ಮನೆಗಳಿಂದ ಮುಕ್ತಗೊಳಿಸಬೇಕು ಮತ್ತು ಸ್ವಂತ ವಸತಿಗಾಗಿ ನಿವೇಶನ ಮಂಜೂರು ಮಾಡಬೇಕೆಂದು ಆಗ್ರಹಿಸಿ ಬುಡಕಟ್ಟು ಕಾರ್ಮಿಕರ ಸಂಘ ಹಾಗೂ ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ಹೊಸೂರು ಗ್ರಾಮ ಪಂಚಾಯಿತಿ ಎದುರು ಧರಣಿ ಸತ್ಯಾಗ್ರಹ ನಡೆಸಿತು. ಮಳೆಯ ನಡುವೆ ಮಹಿಳೆಯರು, ಮಕ್ಕಳು ಸೇರಿದಂತೆ ಅನೇಕರು ಪ್ರತಿಭಟನೆ ನಡೆಸಿ ಲೈನ್ ಮನೆ ಜೀವನ ಬೇಡ, ಸ್ವಂತಮನೆ ನಿರ್ಮಿಸಿಕೊಳ್ಳಲು ಸರ್ಕಾರ ನಿವೇಶನ ನೀಡಬೇಕು ಎಂದು ಆಗ್ರಹಿಸಿದರು. ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳತ್ಮಾಡುವಿನಲ್ಲಿ ನಿವೇಶನ ರಹಿತರಿಗೆ ವಿತರಿಸಲು ಭೂಮಿ ಲಭ್ಯವಿದೆ. ಈ ಭೂಮಿಯನ್ನು ಹೊಸೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಲೈನ್ ಮನೆಗಳಲ್ಲಿ ಹಾಗೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಬುಡಕಟ್ಟು ಕುಟುಂಬಗಳಿಗೆ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು. ಬುಡಕಟ್ಟು ಕಾರ್ಮಿಕರ ಸಂಘದ ಅಧ್ಯಕ್ಷ ಗಪ್ಪು ಮಾತನಾಡಿ, ಕಾಫಿತೋಟಗಳ ಲೈನ್ಮನೆಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಕುಟುಂಬಗಳಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕಳೆದ 9 ವರ್ಷಗಳಿಂದ ನಿರಂತರ ಹೋರಾಟ…
ಲೇಖಕ: admin
ಮಡಿಕೇರಿ ಜು.2 NEWS DESK : ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘವು 25 ವಸಂತಗಳನ್ನು ಪೂರೈಸಿರುವ ಹಿನ್ನೆಲೆ, ಮುಂಬರುವ ನವೆಂಬರ್ ತಿಂಗಳಿನಲ್ಲಿ ‘ಬೆಳ್ಳಿ ಮಹೋತ್ಸವ’ವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಸಂಘದ ಗೌರವ ಅಧ್ಯಕ್ಷ, ನಿವೃತ್ತ ಎಸ್ಪಿ ಎಂ.ಎ.ಅಪ್ಪಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2000ನೇ ಸಾಲಿನಲ್ಲಿ ಅಂದಿನ ಜಿಲ್ಲಾ ಎಸ್ಪಿ ಸೀಮಂತ್ ಕುಮಾರ್ ಸಿಂಗ್ ಅವರ ಸಲಹೆಯ ಮೇರೆ ಡಿವೈಎಸ್ಪಿ ದಿ. ಕಾಳೇರಮ್ಮನ ನಾಣಯ್ಯ ಅವರ ನೇತೃತ್ವದಲ್ಲಿ ಸಮಾನ ಮನಸ್ಕ 28 ಮಂದಿ ಪೊಲೀಸ್ ನಿವೃತ್ತ ಅಧಿಕಾರಿಗಳು ಒಗ್ಗೂಡಿ ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘವನ್ನು ಸ್ಥಾಪಿಸಲಾಯಿತು. ಪ್ರಸ್ತುತ ಸಂಘದಲ್ಲಿ ಸುಮಾರು ಸಾವಿರಕ್ಕೂ ಮೇಲ್ಪಟ್ಟು ಸದಸ್ಯರುಗಳಿದ್ದಾರೆ ಎಂದರು. ಸಂಘ ಆರಂಭಗೊAಡರು ಕಚೇರಿಗೆ ಅಗತ್ಯ ಸ್ಥಳಾವಕಾಶ ಇಲ್ಲದ ಹಿನ್ನೆಲೆಯಲ್ಲಿ ಅಂದಿನ ಎಡಿಜಿಪಿ ಜೀವನ್ ಕುಮಾರ್ ಗಾಂವ್ಕರ್ ಅವರು ನಗರದ ಮೈತ್ರಿ ಸಭಾಂಗಣದ ಪಕ್ಕದಲ್ಲಿ ಸ್ಥಳವನ್ನು ಒದಗಿಸಿದ್ದಲ್ಲದೆ, ಅಗತ್ಯ ಆರ್ಥಿಕ ನೆರವನ್ನು ನೀಡಿದ್ದರೆಂದು ಸ್ಮರಿಸಿಕೊಂಡ ಅಪ್ಪಯ್ಯ…
ಮಡಿಕೇರಿ ಜು.2 NEWS DESK : ಟಿ.ಎಂ.ಶಹೀದ್ ತೆಕ್ಕಿತ್ ಅಭಿನಂದನಾ ಸಮಿತಿ ವತಿಯಿಂದ ಜು.6 ರಂದು ತೆಕ್ಕಿಲ್ ಗ್ರಾಮಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಳ್ಯ ಕೇರ್ಪಳದ ಬಂಟರ ಭವನದಲ್ಲಿ ಪೂರ್ವಾಹ್ನ 10.30 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಉದ್ಘಾಟಿಸಲಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿನಂದನಾ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್ 55 ಸೇವಾ ಚಟುವಟಿಕೆಗಳಿಗೆ ಚಾಲನೆ ನೀಡಲಿದ್ದು, ಚಟುವಟಿಕೆಗಳ ಸವಲತ್ತುಗಳನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಭಾಗೀರಥಿ ಮುರುಳ್ಯ ವಿತರಣೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ, ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಲಯನ್ ಎಂ.ಜೆ.ಎಫ್ ಎಂ.ಬಿ ಸದಾಶಿವ, ಮಾಜಿ ಸಚಿವ ರಮಾನಾಥ ರೈ,…
ಮಡಿಕೇರಿ ಜು.2 NEWS DESK : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಂಗಡಿ ಮತ್ತು ದೇವಾಲಯದ ಹುಂಡಿ ಕಳವು ಪ್ರಕರಣಕ್ಕೆ ಸಂಬAಧಿಸಿದAತೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಾಪೋಕ್ಲು ಸಮೀಪದ ನಾಲಾಡಿ ಗ್ರಾಮದ ನಿವಾಸಿ ಅಶೋಕ.ಕೆ.ಸಿ(35) ಎಂಬಾತನೇ ಬಂಧಿತ ಆರೋಪಿಯಾಗಿದ್ದು, 21.3 ಗ್ರಾಂ ಚಿನ್ನಾಭರಣ ಮತ್ತು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ಹೊರವಲಯದ ತಾಳತ್ಮನೆ ನಿವಾಸಿ ಭರತ್ ಎಂಬುವವರಿಗೆ ಸೇರಿದ ಕೋಳಿ ಮಾಂಸದ ಅಂಗಡಿ ಮತ್ತು ಜ್ಯೂಸ್ ಅಂಗಡಿಯಿAದ ಜೂ.5ರಂದು ರೂ.10 ಸಾವಿರ ನಗದು, 52 ಗ್ರಾಂ ಚಿನ್ನಾಭರಣ ಹಾಗೂ ಅಂಗಡಿಯ ಮುಂಭಾಗ ನಿಲ್ಲಿಸಿದ್ದ 1 ದ್ವಿಚಕ್ರ ವಾಹನವನ್ನು ಕಳವು ಮಾಡಿರುವ ಕುರಿತು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಕೈಗೊಂಡ ಗ್ರಾಮಾಂತರ ಠಾಣಾ ಪೊಲೀಸರು ಜು.1ರಂದು ಆರೋಪಿ ಕೆ.ಸಿ.ಅಶೋಕನನ್ನು ಮಾಲು ಸಹಿತ ಬಂಧಿಸಿದ್ದಾರೆ. ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಗೇರಿಯಲ್ಲಿ ಅಂಗಡಿ ಕಳವು ಮಾಡಿರುವುದು ಹಾಗೂ…
ಮಡಿಕೇರಿ ಜು.2 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಸಭೆಯು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕಾರ್ಮಿಕ ಇಲಾಖೆಗಳಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ಚರ್ಚಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಘಟಕದ ಜಿಲ್ಲಾಧ್ಯಕ್ಷ ಕೆ.ಆರ್.ದಿನೇಶ್, ಸರ್ಕಾರ ಮತ್ತು ಇಲಾಖೆಗಳಿಂದ ಲಭ್ಯವಾಗುವ ಸೌಲಭ್ಯಗಳನ್ನು ಕಾರ್ಮಿಕರಿಗೆ ಒದಗಿಸುವ ನಿಟ್ಟಿನಲ್ಲಿ ಘಟಕದ ಬ್ಲಾಕ್ ಅಧ್ಯಕ್ಷರುಗಳು ಶ್ರಮವಹಿಸಬೇಕು, ಕಾರ್ಮಿಕರು ಕೆಲಸ ನಿರ್ವಹಿಸುವ ಸಂದರ್ಭ ಉಂಟಾಗುತ್ತಿರುವ ಅನಾನುಕೂಲತೆಗಳ ಬಗ್ಗೆಯೂ ಗಮನಹರಿಸಬೇಕಿದೆ ಎಂದು ಕರೆ ನೀಡಿದರು. ಸರ್ಕಾರದಿಂದ ಡೆಲಿವರಿ ಬಾಯ್, ಹಾಲು, ಪೇಪರ್ ವಿತರಣಾ ಸಿಬ್ಬಂದಿಗಳಿಗೆ ನೀಡಿರುವ ಅಪಘಾತ ವಿಮಾ ಕಾರ್ಡ್ ಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಮತ್ತು ಕಟ್ಟಡ ಕಾರ್ಮಿಕರು ತಮ್ಮ ಎಲ್ಲಾ ಕಾರ್ಡ್ಗಳನ್ನು ನವೀಕರಣಗೊಳಿಸಬೇಕು, ತೋಟದ ಕೂಲಿ ಕಾರ್ಮಿಕರು ಕಡ್ಡಾಯವಾಗಿ ಇ-ಶ್ರಮ್ ಕಾಡ್ಗಳನ್ನು ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು. ಸಭೆಯಲ್ಲಿ ಪೊನ್ನಂಪೇಟೆ ಗ್ರಾ.ಪಂ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಪೊನ್ನಂಪೇಟೆ ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷೆ ಮಂಜುಳಾ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಈ ಸಂದರ್ಭ…
ಮಡಿಕೇರಿ ಜು.2 NEWS DESK : ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಡಿಸೆಂಬರ್ 26 ರಿಂದ ನೋಂದಣಿ ಪ್ರಕ್ರಿಯೆ ಚಾಲನೆಗೊಂಡಿದೆ. ಪ್ರತೀ ತಿಂಗಳು 3,000 ಮತ್ತು 1500 ರೂ. ನಿರುದ್ಯೋಗ ಭತ್ಯೆಯನ್ನು ನೀಡುವ ಯೋಜನೆ ಆಗಿದೆ. ಜನವರಿ 12 ರಿಂದ ಅರ್ಹ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಯುವನಿಧಿ ಯೋಜನೆಗೆ ಇದುವರೆಗೆ 1134 ಮಂದಿ ಹೆಸರು ನೋಂದಣಿ ಮಾಡಿದ್ದು, 562 ಮಂದಿಗೆ ಯುವನಿಧಿ ಯೋಜನೆ ತಲುಪುತಿದೆ. ಯುವನಿಧಿ ಯೋಜನೆ ಪಡೆಯುತ್ತಿರುವವರು ಪ್ರತಿ ತಿಂಗಳು ಸ್ವಯಂ ದೃಢೀಕರಣವನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಿದೆ ಎಂದು ಜಿಲ್ಲಾ ಉದ್ಯೋಗವಿನಿಯಮಾಯಾಧಿಕಾರಿ ರೇಖಾ ಗಣಪತಿ ತಿಳಿಸಿದ್ದಾರೆ. ಕುಶಾಲನಗರ ತಾಲ್ಲೂಕಿನಲ್ಲಿ 177, ಮಡಿಕೇರಿ ತಾಲ್ಲೂಕಿನಲ್ಲಿ 304, ಪೊನ್ನಂಪೇಟೆ ತಾಲ್ಲೂಕಿನಲ್ಲಿ 133, ಸೋಮವಾರಪೇಟೆ ತಾಲ್ಲೂಕಿನಲ್ಲಿ 317, ವಿರಾಜಪೇಟೆ ತಾಲ್ಲೂಕಿನಲ್ಲಿ 203 ಮಂದಿ ಹೆಸರು ನೋಂದಾಯಿಸಿದ್ದಾರೆ. ಯುವನಿಧಿ ಯೋಜನೆ ಫಲಾನುಭವಿಗಳ ಗಮನಕ್ಕೆ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಯೋಜನೆಯಾದ…
ಮಡಿಕೇರಿ ಜು.2 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಡಾ.ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ `ವಚನ ಸಂರಕ್ಷಣಾ ದಿನಾಚರಣೆ’ಯು ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಉಪನ್ಯಾಸಕರಾದ ಎಚ್.ಎಲ್.ರಮೇಶ್ ಡಾ.ಫ.ಗು.ಹಳಕಟ್ಟಿ ವಚನ ಪುಸ್ತಕಗಳು ಹಾಗೂ ಪುಸ್ತಕ ಬಂಡಾರವನ್ನು ಕನ್ನಡ ಸಾಹಿತ್ಯಕ್ಕೆ ನೀಡಿದ್ದಾರೆ ಎಂದು ತಿಳಿಸಿದರು. ಉಪನ್ಯಾಸಕರಾದ ವೆಂಕಟ್ ನಾಯಕ್ ಮಾತನಾಡಿ, ಫ.ಗು.ಹಳಕಟ್ಟಿ ಅವರು ವಚನ ಸಾಹಿತ್ಯ ಸಂಗ್ರಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು. ವಚನ ಸಾಹಿತ್ಯ ಸಂಗ್ರಹಣೆಯಲ್ಲಿ ಸಾವಿರ ವಚನಗಳನ್ನು ರಚಿಸಿದ್ದಾರೆ. ಜೇಡರ ದಾಸಿಮಯ್ಯ ಅವರು ಕನ್ನಡದಲ್ಲಿ ಮೊದಲ ವಚನಕಾರ ಶಿವಾನುಭವ ಸಂಗ್ರಹದ ಲೇಖಕರು ಆಗಿದ್ದಾರೆ ಎಂದರು. ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕುಮಾರ್ ಅವರು ಮಾತನಾಡಿ ಫ.ಗು.ಹಳಕಟ್ಟಿಯವರು ವಚನ ಸಾಹಿತ್ಯದ ಪಿತಾಮಹ ಎಂದು ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಹೆಬ್ಬಾಲೆ…
ಮಡಿಕೇರಿ ಜು.2 NEWS DESK : ಯೂತ್ ರೆಡ್ ಕ್ರಾಸ್ ಸೊಸೈಟಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ರಾಷ್ಟ್ರೀಯ ವೈದ್ಯಕೀಯ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸುಂಟಿಕೊಪ್ಪದ ಸ್ವಸ್ಥ, ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಯೂತ್ ರೆಡ್ ಕ್ರಾಸ್ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳ ಕಾರ್ಯಕ್ರಮ ಅಧಿಕಾರಿ ಡಾ. ಕರುಂಬಯ್ಯ, ಸದಸ್ಯ ಡಾ. ಶಶಾಂಕ, ಘಟಕದ ವಿದ್ಯಾರ್ಥಿ ಕಾರ್ಯದರ್ಶಿ ಡಾ. ಹರಿನಾರಾಯಣ್, 26 ವೈದ್ಯರುಗಳ ತಂಡದೊಂದಿಗೆ ಸಾಮಾನ್ಯ ದೈಹಿಕ, ವ್ಯವಸ್ಥಿತ ಪರೀಕ್ಷೆ, ದೃಷ್ಟಿ ಮತ್ತು ಶ್ರವಣ ಪರೀಕ್ಷೆಗಳು ಮತ್ತು ಮನರಂಜನಾ ಚಟುವಟಿಕೆ ನಡೆಯಿತು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕೊಡಗು ಅಧ್ಯಕ್ಷ ಬಿ.ಕೆ.ರವೀಂದ್ರ ರೈ, ಯೂತ್ ರೆಡ್ ಕ್ರಾಸ್ ಸೊಸೈಟಿ ಕೊಡಗು ಅಧ್ಯಕ್ಷ ಎಂ, ಧನಂಜಯ , ಯೂತ್ ರೆಡ್ ಕ್ರಾಸ್ ಕಾರ್ಯಕ್ರಮದ ಸಂಯೋಜಕ ಎಂ,ಆರ್, ಜಗದೀಶ್, ನ್ಯಾಷನಲ್ ಮೆಡಿಕೋಸ್ ಆಗ೯ನೈಸೇಷನ್ ನ ಕರ್ನಾಟಕ ದಕ್ಷಿಣ ವಲಯ ಸಹಪ್ರಮುಖ ಡಾ.ಹರಿನಾರಾಯಣ್, ಸ್ವಸ್ಥ ನಿರ್ದೇಶಕಿ ಆರತಿ…
ವಿರಾಜಪೇಟೆ ಜು.2 NEWS DESK : ಮೈಸೂರು ವಿಶ್ವ ವಿದ್ಯಾನಿಲಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಯುನಿಸೆಫ್ ವತಿಯಿಂದ ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಆಯೋಜಿಸಲಾಗಿದ್ದ ಬದಲಾವಣೆಗಾಗಿ ಮಾಧ್ಯಮ –ಮಕ್ಕಳ ವಿಷಯಗಳು ಕುರಿತ ಎರಡು ದಿನಗಳ ಕಾಲ ನಡೆದ ಕಾರ್ಯಾಗಾರದಲ್ಲಿ ಕೊಡಗಿನ ವಿರಾಜಪೇಟೆಯ ಪತ್ರಕರ್ತೆ ರಜಿತ ಕಾರ್ಯಪ್ಪ ಭಾಗವಹಿಸಿ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ. ಈ ಸಂದರ್ಭ ಕರ್ನಾಟಕ, ತೆಲಂಗಾಣ ಹಾಗೂ ಆಂದ್ರಪ್ರದೇಶದ ಯೂನಿಸೆಫ್ನ ಸಂವಹನ ವಕಾಲತ್ತು ಮತ್ತು ಪಾಲುದಾರಿಕೆ ತಜ್ಞ ಪ್ರೋಸುನ್ ಸೆನ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಪ್ರೋ. ಎಂ.ಎಸ್. ಸಪ್ನಾ, ಮಂಜುನಾಥ್ ಸುಬೇದಾರ್, ಡಾ. ಎಂ.ಮಂಜುಳಾ, ಎಂ. ಪುಷ್ಪಲತಾ ಸೇರಿದಂತೆ ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಜಿಲ್ಲೆಯ ವಿವಿಧ ಭಾಗಗಳ ಪತ್ರಕರ್ತರು, ಹವ್ಯಾಸಿ ಪತ್ರಕರ್ತರು ಹಾಜರಿದ್ದರು.
ಮಡಿಕೇರಿ ಜು.2 NEWS DESK : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ನಡೆಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯದ ನಿವೃತ್ತ ಡೆಪ್ಯೂಟಿ ಮಾನೈಜಿಂಗ್ ಡೈರೆಕ್ಟರ್ ಕಂಜಿತಂಡ ಸ್ವಾತಿ ಸುಬ್ರಮಣಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿ ನಾಯಕರ ಜವಬ್ದಾರಿಯ ಬಗ್ಗೆ ತಿಳಿಸಿ, ಉತ್ತಮ ನಾಗರಿಕರಾಗಬೇಕು ಎಂದರು. ಬದುಕಿನಲ್ಲಿ ಮೇಲೆ ಬರುವ ಪ್ರಯತ್ನ ಪಡಬೇಕು, ತಂದೆ – ತಾಯಿಗಳ ಬಗ್ಗೆ ಗೌರವ ಇರಬೇಕು ಎಂದ ಅವರು, ಶಾಲಾ ದಿನಗಳ ಮೆಲುಕು ಹಾಕಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ಕೊಡವ ಸಮಾಜ ಹಾಗೂ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ಶಾಲಾ ನಾಯಕರುಗಳು ಜವಾಬ್ದಾರಿ ವಹಿಸಿ ಕೆಲಸ ಮಾಡಿ ಪ್ರತಿಭೆಯನ್ನು ಪ್ರದರ್ಶಿಸಬೇಕು. ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಆ ಮೂಲಕ ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತರವಂತಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು,…






