ಮಡಿಕೇರಿ ಜೂ.21 NEWS DESK : ವಿರಾಜಪೇಟೆಯ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹಿಸಿ ಕೀಳು ಮಟ್ಟದ ರಾಜಕೀಯ ಪ್ರದರ್ಶಿಸಿರುವ ಬಿಜೆಪಿಯ ಹದ್ದು ಮೀರಿದ ವರ್ತನೆಯನ್ನು ತೀವ್ರವಾಗಿ ಖಂಡಿಸುವುದಾಗಿ ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಎಸ್.ಟಾಟು ಮೊಣ್ಣಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜಕೀಯ ಕ್ಷೇತ್ರಕ್ಕೆ ಕಳಂಕವಾಗಿರುವ ಮತ್ತು ಸ್ವಾರ್ಥ ರಾಜಕಾರಣಕ್ಕೆ ಹೆಸರುವಾಸಿಯಾಗಿರುವ ಬಿಜೆಪಿಗರ ನೀಚ ಮನೋಸ್ಥಿತಿಯನ್ನು ಕ್ಷಮಿಸಲು ಸಾಧ್ಯವಿಲ್ಲ. ಬಿಜೆಪಿಯ ಈ ವರ್ತನೆಯಿಂದ ಕೊಡಗು ಜಿಲ್ಲೆಯ ಘನತೆಗೆ ದಕ್ಕೆಯಾಗಿದೆ ಎಂದು ತಿಳಿಸಿದ್ದಾರೆ. ವಿರಾಜಪೇಟೆ ಕ್ಷೇತ್ರದಲ್ಲಿ ಪೊನ್ನಣ್ಣ ಅವರ ಜನಪ್ರಿಯತೆ ಹೆಚ್ಚುತ್ತಿರುವುದು ಮತ್ತು ಸರಕಾರದ ಮಟ್ಟದಲ್ಲಿ ಪ್ರಭಾವಿಯಾಗಿರುವುದನ್ನು ಸಹಿಸದ ಬಿಜೆಪಿ ಮಂದಿ ಬೆಲೆ ಏರಿಕೆಯ ನೆಪ ಮಾಡಿಕೊಂಡು ಜನರ ಹಾದಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ವಿರಾಜಪೇಟೆ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಲ್ಲಿ ನಡೆಯದೆ ಇರುವ ಅಭಿವೃದ್ಧಿ ಕಾರ್ಯಗಳು ಪೊನ್ನಣ್ಣ ಅವರ ದಕ್ಷ ಆಡಳಿತದಿಂದ ಒಂದೇ ವರ್ಷದಲ್ಲಿ ಕಾರ್ಯಗತಗೊಂಡಿದೆ. ರಾತ್ರಿ, ಹಗಲೆನ್ನದೆ ತಮ್ಮ…
ಲೇಖಕ: admin
ಮಡಿಕೇರಿ ಜೂ.21 NEWS DESK : ಕರ್ನಾಟಕ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜೂನ್ 21 ಮತ್ತು 22 ರಂದು ಅತಿ ಹೆಚ್ಚು (115.5-204.4 ಮಿಮೀ) ಭಾರೀ (64.5-115.5 ಮಿಮೀ) ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 23 ರಿಂದ 25 ರ ಅವಧಿಯಲ್ಲೂ 204.4 ಮಿಮೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ವಿರಾಜಪೇಟೆ ಜೂ.21 NEWS DESK : ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಭಟನೆಗಳನ್ನು ಮಾಡುವುದು ಸಂವಿಧಾನ ಬದ್ದವಾದರು. ತೈಲ ಬೆಲೆ ಏರಿಕೆಯನ್ನು ಖಂಡಿಸಿ ಭಾ.ಜ.ಜ. ರಾಷ್ಟ್ರ ನಾಯಕರ ಮತ್ತು ಶಾಸಕರ ಅಣುಕು ಶವ ಯಾತ್ರೆ ನಡೆಸಿ ಪ್ರತಿಕೃತಿ ದಹನ ಮಾಡಿರುವುದು ತನ್ನ ವಿಕೃತಿಯನ್ನು ಮೆರೆದಿರುವುದು ಖಂಡನೀಯ ಎಂದು ಕಾಂಗ್ರೆಸ್ ಪಕ್ಷದ ಪ್ರಮುಖರು ಆರೋಪಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ನಗರ ಮತ್ತು ಬ್ಲಾಕ್ ಕಾಂಗ್ರೆಸ್ ವಿರಾಜಪೇಟೆ ಘಟಕದಿಂದ ರಾಷ್ಟ್ರನಾಯಕರು ಸೇರಿದಂತೆ ಶಾಸಕರ ಭಾವಚಿತ್ರವನ್ನಿಟ್ಟು ಅಣುಕು ಶವ ಯಾತ್ರೆ ನಡೆಸಿ ಪ್ರತಿಕೃತಿ ದಹನ ಮಾಡಿರುವುದು ಖಂಡನೀಯ ಎಂದರು. ಪಕ್ಷಾತೀತವಾಗಿ ಜನಮನ್ನಣೆಯನ್ನು ಗಳಿಸಿರುವ ಕೊಡಗಿನ ಜನಪ್ರಿಯ ಶಾಸಕರು ಮತ್ತು ನೇರ ದಿಟ್ಟ ನುಡಿಯ ಜನಪ್ರತಿನಿಧಿ ಎಂದು ರಾಜ್ಯಮಟ್ಟದ ಮಾಧ್ಯಮಗಳಿಂದ ಪ್ರಶಂಸೆಗೆ ಪಾತ್ರರಾಗಿರುವ ಎ.ಎಸ್.ಪೊನ್ನಣ್ಣ ಅವರ ಭಾವಚಿತ್ರ ಇರಿಸಿ ಮತ್ತು ಕಾಂಗ್ರೆಸ್ ಪಕ್ಷ ರಾಷ್ಟ್ರ ಮಟ್ಟದ ನಾಯಕರ ಅಣುಕು ಶವಯಾತ್ರೆ ನಡೆಸಿ ದಹನ ಮಾಡಿರುವ ಕೌರ್ಯವು…
ಮಡಿಕೇರಿ ಜೂ.21 NEWS DESK : ಕೊಡಗು ಗೌಡ ನಿವೃತ್ತ ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಸಾರ್ವಜನಿಕರಿಗಾಗಿ ನಡೆದ ಕಣ್ಣು ತಪಾಸಣಾ ಶಿಬಿರದಲ್ಲಿ ಅವಶ್ಯವಿದ್ದವರಿಗೆ ಉಚಿತ ಕನ್ನಡಕವನ್ನು ವಿತರಿಸಲಾಯಿತು. ಕುಶಾಲನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜ್ ನ ಪ್ರಬಾರ ಪ್ರಂಶುಪಾಲ ಪಿ.ಪರ್ವತರಾಜನ್ ಅವರು ಕನ್ನಡವನ್ನು ವಿತರಿಸಿ ಮಾತನಾಡಿದರು. ಇದೊಂದು ಸಾಮಾಜಿಕ ಕಳಕಳಿಯ ಉತ್ತಮ ಕಾರ್ಯಕ್ರಮವಾಗಿದ್ದು, ಗ್ರಾಮೀಣ ಭಾಗದ ಜನರಿಗೆ ಇದು ಹೆಚ್ಚು ಪ್ರಯೋಜನವಾಗಲಿದೆ. ಇನ್ನು ಮುಂದೆಯೂ ಸಂಘ ಇಂತಹ ಪ್ರಯೋಜನಕಾರಿ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಆಯೋಜಿಸಲಿ ಎಂದು ಸಲಹೆ ನೀಡಿದರು. ಕಾಲೇಜ್ ನ ರಿಜಿಸ್ಟ್ರಾರ್ ಕೆ.ಎ.ಮೇರಿ ಮಾತನಾಡಿ ಈ ಇಳಿ ವಯಸ್ಸಿನಲ್ಲೂ ಸಂಘದ ಪದಾಧಿಕಾರಿಗಳು ಕೈಗೊಂಡಿರುವ ಜನಪರ ಕಾರ್ಯಕ್ರಮ ಅತ್ಯುತ್ತಮವಾಗಿದೆ. ಈ ರೀತಿಯ ಕಾರ್ಯಕ್ರಮಗಳನ್ನು ನಡೆಸುವುದರಿಂದ ಬಡ ಜನರ ಆಶೋತ್ತರಗಳಿಗೆ ಸಹಾಯ ಮಾಡಿದಂತಾಗುತ್ತದೆ ಎಂದು ತಿಳಿಸಿದರು. ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಕುದುಪಜೆ ಬೋಜಪ್ಪ,…
ಮಡಿಕೇರಿ ಜೂ.21 NEWS DESK : ಜಮ್ಮು-ಕಾಶ್ಮೀರದ ಶ್ರೀನಗರದ ದಾಲ್ ಸರೋವರದ ಬಳಿ ಏರ್ಪಡಿಸಲಾದ 10 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡರು.
ಬೆಂಗಳೂರು ಜೂ.21 NEWS DESK : ಬಳ್ಳಾರಿಯ ಜೆ.ಎಸ್.ಡಬ್ಲ್ಯೂ ಟೌನ್ ಶಿಪ್ ನಲ್ಲಿ ಸಂತೋಷ್ ಲಾಡ್ ಫೌಂಡೇಷನ್ ಮತ್ತು ಶ್ವಾಸ ಯೋಗ ಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ಯೋಗಾಭ್ಯಾಸ ಮಾಡಿದರು. ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಗಾಗಿ ಯೋಗ ಒಂದು ಪರಿಣಾಮಕಾರಿ ಸಾಧನ. ಇಂದು ಅಂತಾರಾಷ್ಟ್ರೀಯ ಯೋಗ ದಿನ. ಇಡೀ ಜಗತ್ತು ಭಾರತದ ಕೊಡುಗೆಯಾದ ಯೋಗದ ಮಹತ್ವವನ್ನು ಅರಿತು ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಮಡಿಕೇರಿ ಜೂ.21 NEWS DESK : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ವತಿಯಿಂದ ನಡೆದ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ಅಂತರ ಕಾಲೇಜು ಚರ್ಚಾ ಸ್ಪರ್ಧೆಯಲ್ಲಿ ಮಡಿಕೇರಿಯ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ವಿದ್ಯಾರ್ಥಿನಿ ರಶ್ಮಿತಾ ಹಾಗೂ ಬಿ.ಬಿ.ದೇಚಕ್ಕ ಭಾಗವಹಿಸಿ ಪ್ರಥಮ ಬಹುಮಾನ ಹಾಗೂ ಪಾರಿತೋಷಕವನ್ನು ಪಡೆದುಕೊಂಡಿದ್ದಾರೆ. ಇವರನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ ಆರ್.ಎಸ್.ರೇಣುಕಾ ಹಾಗೂ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಮಡಿಕೇರಿ ಜೂ.21 NEWS DESK : ಹೆಣ್ಣು ಜಾನಪದ ಸಾಹಿತ್ಯ ರಚನೆಗೆ ಸ್ಫೂರ್ತಿಯಾಗಿದ್ದು ತನ್ನ ಸಂಸಾರದಲ್ಲಿ ಶಕ್ತಿಯಾಗಿದ್ದವಳು ಎಂದು ನಾಪೋಕ್ಲು ಸ.ಪ್ರ.ದ.ಕಾಲೇಜಿನ ಪ್ರಾಂಶುಪಾಲೆ ಡಾ.ಕಾವೇರಿ ಅಭಿಪ್ರಾಯಪಟ್ಟರು. ವಿರಾಜಪೇಟೆ ಸರಾಕರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದಿಂದ ನಡೆದ ಜಾನಪದ ಸಾಹಿತ್ಯದಲ್ಲಿ ಸ್ತ್ರೀ ಕುರಿತ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಹೆಣ್ಣು ಸರಿ ಸಮನಾಗಿ ಹೊಲ ಗದ್ದೆಗಳಲ್ಲಿ ದುಡಿದು, ಮನೆಯ ಜವಾಬ್ದಾರಿಯನ್ನು ಹೊತ್ತು, ಸಂಸಾರ ಕುಟುಂಬಗಳ ನಿರ್ವಹಿಸುವಲ್ಲಿ ಹೆಣ್ಣು ಮೇಲುಗೈ ಸಾಧಿಸುವಳು, ಧಾರ್ಮಿಕ ಆಚರಣೆಗಳಲ್ಲಿ, ಸಭೆ ಸಮಾರಂಭಗಳು ನಿರ್ವಹಿಸುವಲ್ಲಿ ಹೆಣ್ಣಿನ ಪಾತ್ರ ಮುಖ್ಯವಾಗಿರುತ್ತದೆ. ಅನೇಕ ಜಾನಪದ ಗೀತೆಗಳಲ್ಲಿ ಹೆಣ್ಣಿನ ತ್ಯಾಗ, ನಿಷ್ಠೆ, ಧೈರ್ಯವನ್ನು ಪ್ರಶಂಸಿಸಲಾಯಿತು. ದಾಂಪತ್ಯದಲ್ಲಿ ಹೆಣ್ಣಿನ ಉದಾರತೆಯನ್ನು ಜಾನಪದ ಗೀತೆಗಳು ತಿಳಿಸುತ್ತವೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಸಿ.ದಯಾನಂದ, ಜಾನಪದವು ಸಾಹಿತ್ಯದ ಮೂಲ ಬೇರು ಮತ್ತು ಪ್ರೇರಣೆ ಆಗಿದೆ ಎಂದು ವಿವರಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಕೆ.ಬಸವರಾಜು ಪ್ರಸ್ತಾವಿಕ ಭಾಷಣ ಮಾಡಿದರೆ. ಸಹಾಯಕ…
ಮಡಿಕೇರಿ ಜೂ.21 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ಅಂತರಾಷ್ಟ್ರೀಯ 10ನೇ ಯೋಗ ದಿನಾಚರಣೆಯು ಅರ್ಥಪೂರ್ಣವಾಗಿ ಜರುಗಿತು. ನಗರದ ಕೆಳಗಿನ ಗೌಡ ಸಮಾಜದಲ್ಲಿ ಯೋಗಾಭಿಮಾನಿಗಳು ಭಾಗವಹಿಸಿ ಯೋಗ, ಧ್ಯಾನ ಮಾಡಿ ಗಮನ ಸೆಳೆದರು. ಸೂರ್ಯ ನಮಸ್ಕಾರ, ವೃಕ್ಷಾಸನ, ಪಾದಹಸ್ತಾಸನ, ಉದ್ರ್ವಾಸನ, ತಾಡಾಸನ, ಅರ್ಧ ಮತ್ಸೇಂದ್ರಾಸನ, ಭುಜಂಗಾಸನ, ಪವನಮುಕ್ತಾಸನ, ಭದ್ರಾಸನ, ತ್ರಿಕೋನಾಸನ, ಉಷ್ಟ್ರಾಸನ, ವಜ್ರಾಸನ, ಶಲಭಾಸನ, ಶಶಾಂಕಾಸನ, ಮಂಡೂಕಾಸನ, ವಕ್ರಾಸನ, ಮಕರಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧಹಲಾಸನ, ಶವಾಸನ, ಕಪಾಲಭಾತಿ, ಶೀತಲಿ ಪ್ರಾಣಾಯಾಮ, ಭ್ರಾಮರಿ ಪ್ರಾಣಾಯಾಮ, ಧ್ಯಾನ, ನಾಡಿಶೋಧ ಪ್ರಾಣಾಯಾಮ ಹೀಗೆ ಹಲವು ರೀತಿಯ ಯೋಗ ಮಾಡಲಾಯಿತು. ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಿ.ರೇಣುಕಾದೇವಿ, ಯೋಗ ಗುರು ರಮೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಮಡಿಕೇರಿ ಜೂ.21 NEWS DESK : ರಾಜಕೀಯ ದುರುದ್ದೇಶದಿಂದ ವಿರಾಜಪೇಟೆಯ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿಯನ್ನು ವಿರಾಜಪೇಟೆಯಲ್ಲಿ ಸುಟ್ಟಿರುವ ಘಟನೆಯನ್ನು ಕೊಡವಾಮೆರ ಕೊಂಡಾಟ ಸಂಘಟನೆ ಖಂಡಿಸಿದೆ ಪಕ್ಷ ರಾಜಕಾರಣ ಅವರವರ ವೈಯಕ್ತಿಕ ಹಕ್ಕು, ಪ್ರತಿಭಟನೆ ಮಾಡುವುದು, ಪ್ರಶ್ನಿಸುವುದು ಪ್ರತಿಪಕ್ಷಗಳ ಕರ್ತವ್ಯ ಮತ್ತು ಹಕ್ಕು ಕೂಡ. ಆದರೆ ಸಂಬಂಧವೇ ಇಲ್ಲದ ವಿಚಾರಕ್ಕೆ ಪೊನ್ನಣ್ಣರ ಪ್ರತಿಕೃತಿ ದಹಿಸಿದ ಘಟನೆ ಇಡೀ ಕೊಡವ ಜನಾಂಗಕ್ಕೆ ಮಾಡಿದ ಅವಮಾನ. ಶವ ಯಾತ್ರೆ ಹಾಗೂ ಸಂಸ್ಕಾರಕ್ಕೆ ಕೊಡವ ಜನಾಂಗದಲ್ಲಿ ತನ್ನದೇ ಆದ ಮಹತ್ವವಿದೆ, ಗೌರವವವಿದೆ. ಆದರೆ ಆ ಪಾವಿತ್ರತೆಯನ್ನೂ ಮೀರಿ ಬೀದಿಯಲ್ಲಿ ನಡೆಸಿದ ಅಣಕುಯಾತ್ರೆ ಕಳವಳಕಾರಿ ಮತ್ತು, ಕೊಡವ ಜನಾಂಗದ ಅವಹೇಳನವಾದದ್ದು. ಪಕ್ಷಾತೀತವಾಗಿ, ಜನಾಂಗೀಯ ಪರವಾಗಿ ನಿಲುವುಳ್ಳವರಾಗಿ, ಈ ಘಟನೆಯನ್ನು ಕೊಡವಾಮೆರ ಕೊಂಡಾಟ ಸಂಘಟನೆ ತೀವ್ರವಾಗಿ ಖಂಡಿಸುವುದಾಗಿ ಸಂಘಟನೆಯ ಪ್ರಮುಖರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






