ಲೇಖಕ: admin

ಸುಂಟಿಕೊಪ್ಪ ಡಿ.20 NEWS DESK : ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರ ಆವರಣದಲ್ಲಿ ನೂತನವಾಗಿ ಅಂದಾಜು ರೂ.15 ರಿಂದ 18 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮುಖಮಂಟಪವು(ತೀರ್ಥ) ಡಿ.25 ರಂದು ಲೋಕಾರ್ಪಣೆಗೊಳಿಸಲಾಗುವುದೆಂದು ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಬಿ.ಎಂ.ಸುರೇಶ್ ತಿಳಿಸಿದ್ದಾರೆ. ಶ್ರೀಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರವು 1992 ಮೇ 8 ರಂದು ಸ್ಥಾಪನೆಗೊಂಡ ನಂತರದ ದಿನಗಳಲ್ಲಿ ದೇವಾಲಯದ ಆವರಣದಲ್ಲಿ ಶ್ರೀ ಅಯ್ಯಪ್ಪಸ್ವಾಮಿ, ಶ್ರೀಕನ್ನಿಮೂಲ ಗಣಪತಿ, ಹಾಗೂ ನೈವೇದ್ಯ ಕೊಠಡಿ ಮತ್ತು ದೇವಸ್ಥಾನದ ಕಚೇರಿ ನಿರ್ಮಿಸಲಾಗಿತ್ತು. ಅದರಂತೆ ಕಳೆದ ವರ್ಷ ದುರ್ಗಾ ದೇವಿಯ ದೇವಸ್ಥಾನವನ್ನು ಬಿ.ಎಂ.ಸುರೇಶ್ ನೇತೃತ್ವದ ದೇವಸ್ಥಾನ ಆಡಳಿತ ಮಂಡಳಿ ತಂಡವು ದೇವಾಲಯವನ್ನು ನಿರ್ಮಿಸಿ ಜೀರ್ಣೊದ್ಧಾರಗೊಳಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ. ಈ ಬಾರೀ ಶ್ರೀಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ತೀರ್ಥ ಮಂಟಪದ ಅವಶ್ಯಕತೆಯನ್ನು ಮನಗಂಡ ಬಿ.ಎಂ.ಸುರೇಶ್ ಆಡಳಿತ ಮಂಡಳಿಯವರು ನಿರ್ಮಿಸುವ ಕಾರ್ಯಕ್ಕೆ ಮುಂದಾಗಿ ಊರಿನ ದಾನಿಗಳು, ಭಕ್ತಾದಿಗಳು ಸೇರಿದಂತೆ ಸುತ್ತ ಮುತ್ತಲಿನ ದಾನಿಗಳ ಸಹಾಯದಿಂದ ಸರಿಸುಮಾರು ಅಂದಾಜು ರೂ. 15 ರಿಂದ 18 ಲಕ್ಷ ವೆಚ್ಚದಲ್ಲಿ…

Read More

ಮಡಿಕೇರಿ ಡಿ.20 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಪ್ರಯುಕ್ತ ವಿಶ್ವಮಾನವ ದಿನಾಚರಣೆಯು ಡಿಸೆಂಬರ್, 29 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಡಿಸೆಂಬರ್, 29 ರಂದು ಬೆಳಗ್ಗೆ 10 ಗಂಟೆಗೆ ಗಣ್ಯರಿಂದ ಮೇಜರ್ ಮಂಗೇರಿರ ಮುತ್ತಣ್ಣ ವೃತ್ತದ ಪಕ್ಕದಲ್ಲಿರುವ ರಾಷ್ಟ್ರಕವಿ ಕುವೆಂಪು ಅವರ ಪುತ್ಥಳಿಗೆ ಮಾಲಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ…

Read More

ಮಡಿಕೇರಿ ಡಿ.20 NEWS DESK : ಕರ್ನಾಟಕ ಸರ್ಕಾರದ ಯೋಜನೆಯಂತೆ ಸೋಮವಾರಪೇಟೆ, ಶಾಂತಳ್ಳಿ, ಕೊಡ್ಲಿಪೇಟೆ, ಶನಿವಾರಸಂತೆ ಹೋಬಳಿಗಳ ವ್ಯಾಪ್ತಿಯಲ್ಲಿನ ಎಲ್ಲಾ ಗ್ರಾಮಗಳಿಗೆ ಸಂಬಂಧಿಸಿದಂತೆ ಇ-ಪೌತಿ ಖಾತೆ ಬದಲಾವಣೆ ಸಂಬಂಧ ಆಂದೋಲನ ನಡೆಯಲಿದೆ. ಪೌತಿ ವಾರಸುದಾರಿಕೆಯ ಖಾತೆಗೆ ಖಾತೆದಾರರ ಮರಣ ದೃಢೀಕರಣ ಪತ್ರ, ಒಂದು ವೇಳೆ ಮರಣ ದೃಢೀಕರಣ ಲಭ್ಯವಿಲ್ಲದಿದ್ದಲ್ಲಿ ಆಧಾರ ಮತ್ತು ಪಡಿತರ ಚೀಟಿ ದಾಖಲೆಗಳಂತೆ ಸಂಬಂಧಪಟ್ಟ ವಾರಸುದಾರರಿಂದ ಅಫಿಡೆವಿಟ್ ಪಡೆದುಕೊಳ್ಳುವುದು, ಆರ್‍ಡಿ ಸಂಖ್ಯೆಯುಳ್ಳ ವಂಶ ವೃಕ್ಷ ದೃಢೀಕರಣ ಪತ್ರ, ಚಾಲ್ತಿ ಸಾಲಿನ ಪಹಣಿ ಹಾಗೂ ಆಧಾರ್ ಪ್ರತಿ ಮತ್ತು ದೂರವಾಣಿ ಸಂಖ್ಯೆ ಈ ದಾಖಲಾತಿಗಳೊಂದಿಗೆ ಮನವಿಯನ್ನು/ ದಾಖಲೆಗಳನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಲ್ಲಿಸುವಂತೆ ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಡಿ.20 NEWS DESK : ಮಾಹಿತಿ ಹಕ್ಕು ಕಾಯ್ದೆಯು ಸರ್ಕಾರಿ ನೌಕರರ ರಕ್ಷಣೆ ಮತ್ತು ಭದ್ರತೆಗೆ ಇದೆ ಎಂದು ಭಾವಿಸಬೇಕೇ ಹೊರತು, ಇದರಿಂದ ಸರ್ಕಾರಿ ಕೆಲಸಕ್ಕೆ ಅಡ್ಡಿ ಎಂದು ತಿಳಿದುಕೊಳ್ಳಬಾರದು ಎಂದು ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್ ಕೆ. ಮತ್ತು ಡಾ. ಹರೀಶ್ ಕುಮಾರ್ ಅವರು ಪ್ರತಿಪಾದಿಸಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಸುಮಾರು ಎರಡುವರೆ ಗಂಟೆಗಳ ಕಾಲ ಮಾಹಿತಿ ಆಯುಕ್ತರು ಅಧಿಕಾರಿಗಳಿಗೆ ಪಾಠ ಮಾಡಿದರು. ಮಾಹಿತಿ ಆಯುಕ್ತರಾದ ಬದ್ರುದ್ದೀನ್ ಕೆ. ಅವರು ಮಾತನಾಡಿ ಮಾಹಿತಿ ಹಕ್ಕು ಕಾಯ್ದೆಯು ಸರಳವಾಗಿದ್ದರೂ ಸಹ ಗಂಭೀರವಾಗಿದೆ. ಅದನ್ನು ಅರ್ಥಮಾಡಿಕೊಂಡು ಕಚೇರಿಗೆ ಸಲ್ಲಿಕೆಯಾದ ಅರ್ಜಿಗೆ ನಿಯಮಾನುಸಾರ 30 ದಿನದೊಳಗೆ ಮಾಹಿತಿ ಒದಗಿಸಬೇಕು ಎಂದು ಸಲಹೆ ಮಾಡಿದರು. ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಿ ನೌಕರರು ಉತ್ತರದಾಯಿತ್ವ ಹೊಂದಿರಬೇಕು. ಜೊತೆಗೆ ಪಾರದರ್ಶಕತೆ ಇದ್ದಲ್ಲಿ ವಿಚಲಿರಾಗುವ ಅಗತ್ಯವಿಲ್ಲ. ಆ ದಿಸೆಯಲ್ಲಿ ಪ್ರಾಮಾಣಿಕತೆ ಇರಬೇಕು ಎಂದು ಬದ್ರುದ್ದೀನ್…

Read More

ಮಡಿಕೇರಿ ಡಿ.20 NEWS DESK : ವಿರಾಜಪೇಟೆ ತಾಲ್ಲೂಕಿನ ಬೇಟೋಳಿ ವ್ಯಾಪ್ತಿಯ ಹೆಗ್ಗಳ, ಬೂದಿಮಾಳ,  ಬೇಟೋಳಿ, ರಾಮನಗರ, ನೀಮಲಗಿರಿ ಭಾಗದಲ್ಲಿ ರಸ್ತೆ ಕಾಮಗಾರಿ ಆರಂಭಗೊಂಡಿದೆ. 2024-25ನೇ ಸಾಲಿನ ಮಳೆ ಹಾನಿ ಪರಿಹಾರ ನಿಧಿ ಕಾಮಗಾರಿ ಸುಮಾರು 24 ಲಕ್ಷ ಅನುದಾನ ಒದಗಿಸಿ 8 ಕಡೆ ರಸ್ತೆ ಡಾಂಬರೀಕರಣ ಹಾಗೂ ಕಾಂಕ್ರೀಟ್ ಅಳವಡಿಸುವ ಕಾಮಗಾರಿ ಚಾಲನೆ ದೊರೆತಿದೆ. ರಾಮನಗರ, ಕೊಡುಂಗಲ್ಲೂರು ದೇವಸ್ಥಾನಕ್ಕೆ ಹೋಗುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು, ವಲಯ ಕಾಂಗ್ರೆಸ್ ಅಧ್ಯಕ್ಷ ವರ್ಗೀಸ್ ಲೆನಿನ್ ಹಾಗೂ ರಾಮನಗರ ಭಾಗದ ಕಾರ್ಯಕರ್ತರಾದ ತೀರೇಶ್, ರಾಜೇಶ್, ಸುಮಂತ್, ಕಿಶೋರ್ ಸೇರಿ ಇತರ ಕಾರ್ಯಕರ್ತರೊಂದಿಗೆ ರಸ್ತೆ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದರು. ಈ ಕಾಮಗಾರಿಗೆ ಅನುದಾನ ಒದಗಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಹಾಗೂ ಸಹಕರಿಸಿದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಅವರಿಗೆ ಹೆಗ್ಗಳ ಬೂದಿಮಾಳ ಹಾಗೂ ಬೇಟೋಳಿ ರಾಮನಗರ ಗ್ರಾಮಸ್ಥರು ಧನ್ಯವಾದ…

Read More

ಮಡಿಕೇರಿ ಡಿ.20 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ- ಭಾಗಮಂಡಲ ರಸ್ತೆ ಕಾಮಗಾರಿ ಭರದಿಂದ ಸಾಗಿದೆ. ಅತಿ ಮಳೆಯಿಂದ ಹೊಂಡ ಗುಂಡಿಗಳಾಗಿದ್ದ ರಸ್ತೆಯ ಅಭಿವೃದ್ಧಿಗೆ ಭಕ್ತರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದರು. ಇದಕ್ಕೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಅನುದಾನವನ್ನು ಒದಗಿಸಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಿದ್ದರು. ಮತ್ತೊಂದೆಡೆ ವಿರಾಜಪೇಟೆ – ಮಾಕುಟ್ಟ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಶಾಸಕರ ಪ್ರಯತ್ನಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉಳಿದಿರುವ ಎಲ್ಲಾ ರಸ್ತೆಗಳ ಅಭಿವೃದ್ಧಿ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸುವಂತೆ ಮನವಿ ಮಾಡಿದ್ದಾರೆ.

Read More

ಮಡಿಕೇರಿ ಡಿ.20 NEWS DESK : ರಾಜ್ಯದ ಶೈಕ್ಷಣಿಕ ಸ್ಥಿತಿಗತಿಗಳನ್ನು ಸುಧಾರಿಸುವುದು ಸೇರಿದಂತೆ ಪ್ರಮುಖ ನಾಲ್ಕು ನಿರ್ಣಯಗಳನ್ನು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ದಕ್ಷಿಣ ಪ್ರಾಂತ ಸಮ್ಮೇಳನದಲ್ಲಿ ಕೈಗೊಳ್ಳಲಾಗಿದ್ದು, ಇವುಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗುವುದೆಂದು ಎಬಿವಿಪಿ ದಕ್ಷಿಣ ಪ್ರಾಂತ ಕಾರ್ಯದರ್ಶಿ ಗೋಪಿ ರಂಗನಾಥ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಲೇಜುಗಳಲ್ಲಿನ ಉಪನ್ಯಾಸಕರ ಕೊರತೆ, ನೂತನ ವಿಶ್ವ ವಿದ್ಯಾನಿಲಯಗಳಿಗೆ ಅಗತ್ಯ ಅನುದಾನ ದೊರಕದಿರುವ ಅಂಶಗಳ ಬಗ್ಗೆಯೂ ಸಮ್ಮೇಳನದಲ್ಲಿ ವಿಸ್ತೃತವಾಗಿ ಚರ್ಚಿಸಿ ನಿರ್ಣಯವನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಒಳಗೊಂಡ ನಿರ್ಣಯಗಳನ್ನು ಕಾರ್ಯಗತಗೊಳಿಸುವಂತೆ ಸರ್ಕಾರವನ್ನು ಕೋರಲಾಗುತ್ತದೆಂದು ತಿಳಿಸಿದರು. ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿಕೊಳ್ಳುವಂತೆ, ಶಿಕ್ಷಣದಲ್ಲಿ ಕೃತಕ ಬುದ್ಧಿಮತ್ತೆಯ ನೈತಿಕ ಹಾಗೂ ನ್ಯಾಯಯುತ ಸಂಯೋಜನೆಗಳ ಕುರಿತಾಗಿಯು ನಿರ್ಣಯಗಳನ್ನು ಕೈಗೊಂಡಿರುವುದಾಗಿ ಮಾಹಿತಿಯನ್ನಿತ್ತರು. :: ಯಶಸ್ವಿ ಸಮ್ಮೇಳನ :: ಇದೇ ಡಿ.17ರಿಂದ ಮೂರು ದಿನಗಳ ಕಾಲ ಮಡಿಕೇರಿಯಲ್ಲಿ ನಡೆದ ಎಬಿವಿಪಿ ಸಮ್ಮೇಳನದಲ್ಲಿ ಎಬಿವಿಪಿಯ 9 ಸಂಘಟನಾತ್ಮಕ ವಿಭಾಗಗಳಿಂದ 400 ಕ್ಕೂ ಹೆಚ್ಚಿನ…

Read More

ಮಡಿಕೇರಿ ಡಿ.20 NEWS DESK  : ಮಾಂಸದ ಆಸೆಗಾಗಿ ಕಾಡು ಹಂದಿ, ಜಿಂಕೆ, ಕಡವೆ, ಮೊಲ ಸೇರಿದಂತೆ ಮತ್ತಿತರ ವನ್ಯಜೀವಿಗಳಿಗೆ ಉರುಳು ಹಾಕಿ ಬೇಟೆಯಾಡಿದರೆ ಕನಿಷ್ಟ 3 ವರ್ಷ, ಗರಿಷ್ಠ 7 ವರ್ಷಗಳ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ.ಗಳವರೆಗೂ ದಂಡ ವಿಧಿಸಲಾಗುತ್ತದೆ ಎಂದು ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ. ಇತ್ತೀಚೆಗೆ ಚೆಟ್ಟಳ್ಳಿ ಗ್ರಾಮದಲ್ಲಿ ಉರುಳಿಗೆ ಸಿಲುಕಿ ಹುಲಿಯೊಂದು ಮೃತಪಟ್ಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಜೀವಿಗಳನ್ನು ಬೇಟೆಯಾಡದಂತೆ ಪತ್ರಿಕಾ ಪ್ರಕಟಣೆ ಮೂಲಕ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಉರುಳುಗಳನ್ನು ಬಳಸಿ ವನ್ಯಜೀವಿಗಳನ್ನು ಬೇಟೆಯಾಡುವುದು ಭಾರತದ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಅಡಿಯಲ್ಲಿ ಅಪರಾಧವಾಗುತ್ತದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಉರುಳುಗಳನ್ನು ಹಾಕುವುದು ಮತ್ತು ವನ್ಯ ಪ್ರಾಣಿಗಳನ್ನು ಹಿಡಿಯುವ ಪ್ರಯತ್ನ ಮಾಡುವುದೂ ಅಪರಾಧವಾಗಿದೆ. ಈ ರೀತಿಯ ಅಪರಾಧ ಮಾಡಿದಲ್ಲಿ ಕನಿಷ್ಟ 3 ವರ್ಷ ಮತ್ತು ಗರಿಷ್ಠ 7 ವರ್ಷಗಳ ಜೈಲು ಹಾಗೂ 5 ಲಕ್ಷ ರೂ.ಗಳವರೆಗೂ ದಂಡ ವಿಧಿಸಲಾಗುತ್ತದೆ…

Read More

ಮಡಿಕೇರಿ ಡಿ.20 NEWS DESK : ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಸುಂಟಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಬಾಲ ಗಭಿ೯ಣಿ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಮಡಿಕೇರಿ ಸಖಿ ಒನ್ ಸ್ಟಾಪ್ ಸೆಂಟರ್ ಆಡಳಿತಾಧಿಕಾರಿ ಪ್ರಭಾವತಿ ಮಾತನಾಡಿ, ಮಕ್ಕಳು ಶಿಕ್ಷಣ ಪಡೆಯುವ ವಯಸ್ಸಿನಲ್ಲಿ ಶಿಕ್ಷಣದ ಕಡೆ ಮಾತ್ರ ಗಮನ ಹರಿಸಬೇಕು. ಓದುವ ವಯಸ್ಸಿನಲ್ಲಿ ಯಾವುದೇ ಆಕರ್ಷಣೆಗೆ ಒಳಗಾಗಬಾರದು. ಅಲ್ಲದೆ ಸಮಾಜದಲ್ಲಿ ಅಪರಿಚಿತ ವ್ಯಕ್ತಿಗಳೊಂದಿಗೆ ಯಾವುದೇ ರೀತಿಯ ಮಾತುಕತೆಯಾಗಲೀ ಒಡನಾಟವನ್ನು ಇಟ್ಟುಕೊಳ್ಳಬಾರದು. ಪ್ರಸ್ತುತ ದಿನಗಳಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ಆಕರ್ಷಣೆಗೆ ಒಳಗಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಶಾಲೆಗೆ ಹೋಗುವ ಮಕ್ಕಳ ಬಗ್ಗೆ ಅವರ ತಂದೆ, ತಾಯಿಗಳು ಮಕ್ಕಳ ಆಗುಹೋಗುಗಳ ಬಗ್ಗೆ ಗಮನ ಹರಿಸಬೇಕು ಎಂದು ತಿಳಿಸಿದರು. ಕಾನೂನು ಸಲಹೆಗಾರರಾದ ರೇವತಿ ಮಾತನಾಡಿ,  ಬಾಲ್ಯ ವಿವಾಹ ನಿಷೇಧ ಕುರಿತು ಮಾತನಾಡಿ, ಹೆಣ್ಣು ಮಕ್ಕಳು…

Read More

ಗೋಣಿಕೊಪ್ಪ ಡಿ.20 NEWS DESK : ಕಾರುಣ್ಯಾಶ್ರಮದ ಕೊಡಗು ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿಗಳಾಗಿ ಅಮೀನಾ ಎಂ.ಎಂ ಆಯ್ಕೆಯಾಗಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿ ನಚೆನ್ನಂಗೊಲ್ಲಿ ನಿವಾಸಿಯಾಗಿರುವ ಇವರು ಅವಿನಾ ಡ್ರಿಮ್ಸ್ ವಲ್ರ್ಡ್ ಸೇವ ಸಂಸ್ಥೆಯ ಸಂಸ್ಥಾಪಕರಾಗಿದ್ದಾರೆ. ಸರಕಾರಿ ಶಾಲೆಗಳಿಗೆ ಸಿ.ಸಿ.ಕ್ಯಾಮರ ಮತ್ತು ಇನ್ನಿತರ ಪೀಠೋಪಕರಣಗಳ ಅವಶ್ಯಕತೆಯನ್ನು ಪೂರೈಸುವುದರ ಜತೆಗೆ ಸಂಕಷ್ಟದಲ್ಲಿರುವವರ ಸೇವೆಯಲ್ಲಿ ನಿರಂತರಾಗಿ ತೊಡೆಸಿಕೊಂಡಿದ್ದಾರೆ. ಇವರ ಸಮಾಜ ಸೇವೆಯನ್ನು ಪರಿಗಣಿಸಿ, ಕಾರುಣ್ಯಾಶ್ರಮದ ಸಂಸ್ಥಾಪಕ ಅಮರಯ್ಯ ಸ್ವಾಮಿ ಹಿರೇಮಠ ಹರೇಟನೂರು ಅವರು ಕಾರುಣ್ಯಾಶ್ರಮದ ಕೊಡಗು ಜಿಲ್ಲಾ ಸಂಪರ್ಕಧಿಕಾರಿಯಾಗಿ ನೇಮಕ ಮಾಡಿದ್ದಾರೆ ಎಂದು ಆಶ್ರಮದ ಕಾರ್ಯಾಧ್ಯಕ್ಷರಾದ ಡಾ. ಚನ್ನಬಸಯ್ಯಸ್ವಾಮಿ ಹಿರೇಮಠ ಮಾಹಿತಿ ನೀಡಿದ್ದಾರೆ.

Read More