ಸುಂಟಿಕೊಪ್ಪ,ಜೂ.19 NEWS DESK : ಮಾದಾಪುರದ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಹುತಾತ್ಮ ಯೋಧರಿಗೆ ನಮನ ಕಾರ್ಯಕ್ರಮವನ್ನು ಆಚರಿಸಲಾಯಿತು. ಇತ್ತೀಚೆಗೆ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಆವರಣದಲ್ಲಿ ಅರಣ್ಯ ಇಲಾಖೆಯ ವತಿಯಿಂದ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಗಾನಶ್ರೀ ಹಾಗೂ ಸಹಾಯಕ ವಲಯ ಅರಣ್ಯ ಅಧಿಕಾರಿ ಜಗದೀಶ್ ರವರು ಚಾಲನೆ ನೀಡಿದರು. ಮುಖ್ಯ ಅತಿಥಿಗಳು ವಿದ್ಯಾರ್ಥಿಗಳೊಂದಿಗೆ ಪರಿಸರದ ಮಹತ್ವವನ್ನು ಕುರಿತು ಸಂವಾದವಾದ ಮೂಲಕ ಸುತ್ತಲಿನ ಕ್ರಿಮಿಕೀಟ ಹಾಗೂ ಪ್ರಾಣಿಗಳ ಜೀವನ ಕ್ರಮ ಹಾಗೂ ಸ್ವಚ್ಛಂದ ಪರಿಸರದ ಅಗತ್ಯತೆಯನ್ನು ವಲಯ ಅರಣ್ಯಾಧಿಕಾರಿ ಗಾನಶ್ರೀ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿ ಕೊಟ್ಟರು. 2020ರ ಜೂನ್ 15ರಂದು ಭಾರತ ಚೀನಾ ಗಡಿಯಲ್ಲಿ ನಡೆದ ಸಮರದಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪಾರ್ಚನೆಯ ಮೂಲಕ ಯೋಧ ನಮನವನ್ನು ಸಲ್ಲಿಸಿದರು. ಹುತಾತ್ಮ ಯೋಧರ ಕುರಿತು ಸುಂಟಿಕೊಪ್ಪ ನಾಡು ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಕುಮಾರಿ ಶ್ರೀಶ ಮಾತನಾಡಿದರು.…
ಲೇಖಕ: admin
ಕುಶಾಲನಗರ ಜೂ.19 NEWS DESK : ಸರಕಾರಿ ಶಾಲೆಗಳ ಬಲವರ್ಧನೆಗೆ ಆಂಗ್ಲ ಮಾಧ್ಯಮ ಶಾಲೆಗಳ ಸಂಯೋಜನೆ ಅಗತ್ಯ ಎಂದು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂಥರ್ ಗೌಡ ಇಂದಿಲ್ಲಿ ಹೇಳಿದರು. ಕುಶಾಲನಗರ ತಾಲೂಕು ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ವತಿಯಿಂದ ಶಾಲೆಗಾಗಿ 51, 600 ವೆಚ್ಚದಲ್ಲಿ ಅಳವಡಿಸಲಾದ ಸಿ.ಸಿ ಕ್ಯಾಮೆರಾವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಮುಂದುವರಿದು ಮಾತನಾಡಿದ ಅವರು ಶೈಕ್ಷಣಿಕ ವರ್ಷದಲ್ಲಿ ಮಡಿಕೇರಿ ಕ್ಷೇತ್ರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಮಡಿಕೇರಿ. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸುಂಟಿಕೊಪ್ಪ. ಮತ್ತು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹೆಬ್ಬಾಲೆ ಸೇರಿದಂತೆ ಮೂರು ಶಾಲೆಗಳಿಗೆ ಒಂದನೇ ತರಗತಿಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ನೀಡಲಾಗಿದೆ ಎಂದರು. ನಂತರ ಜಿಲ್ಲಾ ಪಂಚಾಯತ್ ಅನುದಾನದಿಂದ 1 ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕರಣಗೊಂಡ ಗಂಡು ಮಕ್ಕಳ ಶೌಚಾಲಯವನ್ನು ಉದ್ಘಾಟಿಸಿ ಶಾಲಾ ಮಕ್ಕಳು ಸ್ವಚ್ಛತೆಯನ್ನು ಕಾಪಾಡಿಕೊಂಡು ಶೌಚಾಲಯವನ್ನು ಬಳಸಿಕೊಳ್ಳಬೇಕು. ಹಾಗೆ ಪರಿಸರ ದಿನದ…
ಮಡಿಕೇರಿ ಜೂ.19 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಆಯೋಜಿಸಲು ಚಿಂತಿಸಲಾಗಿದ್ದು, ಆ ನಿಟ್ಟಿನಲ್ಲಿ ಸ್ಥಳೀಯ ಸಮಸ್ಯೆ ಬಗೆಹರಿಸಲು ಶ್ರಮಿಸಲಾಗುವುದು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ವಿರಾಜಪೇಟೆಯ ಕಾವೇರಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನಸ್ಪಂದನ ಕಾರ್ಯಕ್ರಮ ಮೂಲಕ ಜನರ ಸಮಸ್ಯೆ ಪರಿಹರಿಸುವುದು ಉದ್ದೇಶವಾಗಿದೆ. ಆ ದಿಸೆಯಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವುದು ಪ್ರಮುಖವಾಗಿದೆ ಎಂದರು. ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವುದು ಅತಿಮುಖ್ಯ. ಸಾಧ್ಯವಾದಷ್ಟು ಸರ್ಕಾರದ ಕೆಲಸಗಳನ್ನು ತಲುಪಿದಲ್ಲಿ ಸಾರ್ಥಕವಾಗಲಿದೆ ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಯಾವುದೇ ರೀತಿಯ ಕುಂದುಕೊರತೆ ಇದ್ದಲ್ಲಿ ಮನವಿ ಮಾಡುವಂತಾಗಬೇಕು. ಬಗೆಹರಿಸುವಂತಹಗಳನ್ನು ಸ್ಥಳದಲ್ಲಿಯೇ ತಿಳಿಸಲಾಗುವುದು. ಇಲ್ಲದಿದ್ದಲ್ಲಿ 15 ದಿನದೊಳಗೆ ಬಗೆಹರಿಸಲಾಗುವುದು ಎಂದರು. ಸಾರ್ವಜನಿಕರ ಮನೆ ಬಾಗಿಲಿಗೆ…
ಮಡಿಕೇರಿ ಜೂ.19 NEWS DESK : ಅಂತರರಾಷ್ಟ್ರೀಯ 10 ನೇ ಯೋಗ ದಿನಾಚರಣೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರ ಅಧ್ಯಕ್ಷತೆಯಲ್ಲಿ ವಿಡಿಯೋ ಸಂವಾದದ ಮೂಲಕ ಪೂರ್ವಭಾವಿ ಸಭೆ ಬುಧವಾರ ನಡೆಯಿತು. ಜೂ.21 ರಂದು ನಡೆಯುವ ಅಂತರರಾಷ್ಟ್ರೀಯ 10ನೇ ಯೋಗ ದಿನಾಚರಣೆ ಆಚರಿಸುವ ನಿಟ್ಟಿನಲ್ಲಿ ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಕೋರಿದರು. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮಹತ್ವ ಅರಿತು ಸಂಬಂಧಪಟ್ಟ ವಿವಿಧ ಇಲಾಖೆಗಳು ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಬೇಕು. ಶಾಲಾ ಕಾಲೇಜು ಹಾಗೂ ಹಾಸ್ಟೇಲ್ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ಮತ್ತು ಬರಲು ಅಗತ್ಯ ಜವಾಬ್ದಾರಿ ವಹಿಸಿಕೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ನಿರ್ದೇಶನ ನೀಡಿದರು. ಸ್ವಚ್ಚತೆ ಕಾಪಾಡುವುದು ಮತ್ತು ಕುಡಿಯುವ ನೀರು ಕಲ್ಪಿಸುವುದು ಮತ್ತಿತರ ಸಂಬಂಧ ನಗರಸಭೆ ಅಧಿಕಾರಿಗಳು ಅಗತ್ಯ ಸಹಕಾರ ನೀಡುವಂತೆ ಸೂಚಿಸಿದರು. ಜಿಲ್ಲಾ ಆಯೂಷ್ ಅಧಿಕಾರಿ ಡಾ.ರೇಣುಕಾ ದೇವಿ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಜೂನ್,…
ಮಡಿಕೇರಿ ಜೂ.19 NEWS DESK : ವಿರಾಜಪೇಟೆಯ ನಮ್ಮ ಕ್ಲಿನಿಕ್ ಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲಿನ ಸಿಬ್ಬಂದಿಗಳ ಜೊತೆ ಚರ್ಚಿಸಿ ಕಾರ್ಯ ವೈಖರಿಯ ವಿವರ ಪಡೆದರು. ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಜೂ.19 NEWS DESK : ಹಟ್ಟಿಹೊಳೆ,ಗರಗಂದೂರು,ದೇವಸ್ತೂರು ದುರ್ಬಲ ಪ್ರದೇಶಗಳಿಗೆ ಎನ್ಡಿಆರೆಫ್ ತಂಡ ಭೇಟಿ ನೀಡಿ ವೀಕ್ಷಿಸಿದರು.
ನಾಪೋಕ್ಲು ಜೂ.19 NEWS DESK : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಕಾಲೇಜು ಸಭಾಂಗಣದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಎಸ್.ಬಿ ಅಪ್ಪಾಜಿ ಗೌಡ ಹಾಗೂ ಹಿರಿಯ ಮಾಧ್ಯಮ ವರದಿಗಾರ, ರಮ್ಯ ಸ್ಟುಡಿಯೋ ಮಾಲೀಕ ದುಗ್ಗಳ ಸದಾನಂದ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ.ಕಾವೇರಿ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ಕಾಲೇಜಿನ ನಿವೃತ್ತ ಮುಖ್ಯ ಆಡಳಿತಾಧಿಕಾರಿ ಬಿದ್ದಾಟ0ಡ ಮೇರಿ ಚಿಟ್ಟಿಯಪ್ಪ, ಕಾಳೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಪದ್ಮಾವತಿ ಮುಕ್ಕಾಟಿ, ಪದ್ಮಾ ಗಣಪತಿ, ರಾಜು ದೇವಯ್ಯ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಂಚಾಲಕ ಎಲ್.ಸಿ.ರಂಗಸ್ವಾಮಿ , ಕ್ರೀಡಾ ಸಮಿತಿ ಸಂಚಾಲಕರು, ದೈಹಿಕ ನಿರ್ದೇಶಕರು ಕೆ.ಎಸ್.ಶಿವರಾಜಕುಮಾರ್, ಸಾಂಸ್ಕೃತಿಕ ಸಮಿತಿ ಸಂಚಾಲಕ ಮನೋಜ್ ಕುಮಾರ್, ವಿದ್ಯಾರ್ಥಿ ಪ್ರತಿನಿಧಿ ಮೊಹಮ್ಮದ್ ಶಮಿಮ್ ,ಕೆ.ಹೆಚ್.ನಿಷ್ಮ, ಎಂ.ವಿ.ಇರ್ಫಾನ್, ಎಂ.ಐ.ರಕ್ಷತಾ, ಬಿ.ಪಿ.ನಿತಿನ್ , ಎಂ.ವಿ.ಕೀರ್ತಿ. ಕನ್ನಡ ಪ್ರಾಧ್ಯಾಪಕಿ ಹರಿಣಿ, ಉಪನ್ಯಾಸಕ ವೇಣು…
ಮಡಿಕೇರಿ ಜೂ.19 NEWS DESK : ‘ಸ್ವಂತಕ್ಕಾಗಿ ಮತ್ತು ಸಮಾಜಕ್ಕಾಗಿ ಯೋಗ’ ಎನ್ನುವ ಧ್ಯೇಯ ವಾಕ್ಯದೊಂದಿಗೆ ಪ್ರಸಕ್ತ ಸಾಲಿನ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಗರದ ಕೆಳಗಿನ ಗೌಡ ಸಮಾಜದಲ್ಲಿ ಜೂ.21 ರಂದು ನಡೆಯಲಿದೆ ಎಂದು ಆಯುಷ್ ಇಲಾಖಾ ಅಧಿಕಾರಿ ಡಾ.ರೇಣುಕಾ ದೇವಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, 2015ರಲ್ಲಿ ಆರಂಭಗೊಂಡ ಯೋಗ ದಿನಾಚರಣೆ ದಶಕದ ಆಚರಣೆಯ ಹಂತದಲ್ಲಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಗೌಡ ಸಮಾಜದಲ್ಲಿ ಬೆಳಗ್ಗೆ 6.30 ಗಂಟೆಗೆ ಯೋಗ ದಿನಾಚರಣೆಯ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಯೋಗ ಉದ್ಘಾಟಿಸಲಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಶಾಸಕರು, ಸಂಸದರು ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ::: 19 ಆಸನಗಳ ಪ್ರಾತ್ಯಕ್ಷಿಕೆ ::: ನಗರದ ಯೋಗ ಸಂಘಟನೆಯ ಸಂಚಾಲಕರಾದ ಕೆ.ಕೆ.ಮಹೇಶ್ ಕುಮಾರ್…
ಮಂಗಳೂರು ಜೂ.19 NEWS DESK : ಹಿಂದೂ ರಾಷ್ಟ್ರ ಸ್ಥಾಪನೆಯ ಕಾರ್ಯಕ್ಕೆ ವೇಗ ನೀಡಲು ಜೂ.24 ರಿಂದ ಜೂ 30ರ ವರೆಗೆ ಗೋವಾ ಪೋಂಡಾದಲ್ಲಿನ ಶ್ರೀ ರಾಮನಾಥ ದೇವಸ್ಥಾನದಲ್ಲಿ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶಿನವನ್ನು ಹಿಂದೂ ಜನಜಾಗೃತಿ ಸಮಿತಿಯ ಚಂದ್ರ ಮೊಗವೀರ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಹಿಂದೂ ರಾಷ್ಟ್ರಕ್ಕೆ ಸಂಬಂಧಿತ ವಿವಿಧ ವಿಷಯಗಳ ಬಗ್ಗೆ ವಿಶೇಷ ಗಣ್ಯರ ಸಂವಾದದ ಜೊತೆಗೆ ಹಿಂದೂ ರಾಷ್ಟ್ರದ ಅಡಿಪಾಯಕ್ಕಾಗಿ ಚರ್ಚೆ ನಡೆಯುವುದು ಎಂದರು. ಈ ಅಧಿವೇಶನಕ್ಕೆ ಅಮೇರಿಕಾ, ಇಂಗ್ಲೆಂಡ್. ದಕ್ಷಿಣ ಆಫ್ರಿಕಾ, ಘಾನಾ, ನೇಪಾಳ ಮತ್ತು ಬಾಂಗ್ಲಾದೇಶದ ಪ್ರತಿನಿಧಿಗಳು ಬರುವರು. ಜೊತೆಗೆ ಭಾರತದ 26 ರಾಜ್ಯಗಳಿಂದ ಸಾವಿರಕ್ಕಿಂತಲೂ ಹೆಚ್ಚಿನ ಸಂಘಟನೆಗಳು 2000 ಕ್ಕಿಂತಲೂ ಹೆಚ್ಚಿನ ಪ್ರತಿನಿಧಿಗಳು, ಇಂದೋರಿನ ಮಹಾಮಂಡಲೇಶ್ವರ ಸ್ವಾಮಿ, ಪ್ರಣವಾನಂದ ಸರಸ್ವತಿ ಮಹಾರಾಜ, ಇಂಟರ್ನ್ಯಾಷನಲ್ ವೇದಾಂತ ಸೊಸೈಟಿಯ ನಿರ್ಗುಣಾನಂದಗಿರಿ ಮಹಾರಾಜ್, ಛತ್ತೀಸ್ಗಡದ ಶ್ರೀ ರಾಮಬಾಲಕದಾಸ ಮಹಾತ್ಯಾಗಿ ಮಹಾರಾಜ, ಛತ್ತಿಸ್ಗಡದ ಶದಾಣಿ ದರ್ಬಾರಿನ ಡಾ.ಯಧಿಷ್ಠಿರಲಾಲ್ ಮಹಾರಾಜ ಸೇರಿದಂತೆ ಸಂತರು, ಶ್ರೀರಾಮ…
ಮಡಿಕೇರಿ ಜೂ.19 NEWS DESK : ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹನ್ ಅವರಿಗೆ “ಸ್ಪಂದನ ಸಿರಿ ಸಾಮಾಜಿಕ ಸೇವಾ ವಿಭೂಷಣ ಪ್ರಶಸ್ತಿ” ಲಭಿಸಿದೆ. ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆಯ 13ನೇ ವಾರ್ಷಿಕೋತ್ಸವದ ಅಂಗವಾಗಿ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆದ ಅಖಿಲ ಭಾರತ ಸ್ಪಂದನ ಸಿರಿ ಸಾಹಿತ್ಯ ಮತ್ತು ಸಂಸ್ಕೃತಿ ಸಮ್ಮೇಳನದಲ್ಲಿ ಪುಷ್ಪಗಿರಿ ಮಹಾ ಸಂಸ್ಥಾನ ಮಠದ ಡಾ.ಸೋಮೇಶ್ವರ ಸ್ವಾಮೀಜಿ, ಸಾಹಿತಿ ಶೈಲಜಾ, ಸ್ಪಂದನ ಸಿರಿ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕಲಾವತಿ ಮಧುಸೂದನ್ ಹಾಗೂ ಮತ್ತಿತರರು ಗಾಯತ್ರಿ ನರಸಿಂಹನ್ ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ, ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.






