ಲೇಖಕ: admin

ಮಡಿಕೇರಿ ಜೂ.29 NEWS DESK : ಮಡಿಕೇರಿಯ ಮಲ್ಲಿಕಾರ್ಜುನ ನಗರ ಹಾಗೂ ತ್ಯಾಗರಾಜ ಕಾಲೋನಿಯ ಮಳೆಹಾನಿ ಪ್ರದೇಶಗಳಿಗೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲಿಸಿದರು. ಹೆಚ್ಚಿನ ಮಳೆಯಿಂದಾಗಿ ಗೋಡೆ ಕುಸಿತ ಉಂಟಾಗಿದ್ದು, ಮನೆ ಹಾನಿಯಾಗಿರುವುದನ್ನು ಪರಿಶೀಲಿಸಿದ ಶಾಸಕರು ಎನ್‍ಡಿಆರ್‍ಎಫ್ ಮತ್ತು ಎಸ್‍ಡಿಆರ್‍ಎಫ್ ಮಾರ್ಗಸೂಚಿಯಂತೆ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಇಲ್ಲಿನ ನಾಗರಿಕರು ಸಹ ಹೆಚ್ಚಿನ ಜಾಗೃತಿ ವಹಿಸಬೇಕಿದೆ ಎಂದರು. ಸ್ಥಳೀಯರ ಕುಂದುಕೊರತೆಯನ್ನು ಇದೇ ಸಂದರ್ಭದಲ್ಲಿ ಶಾಸಕರು ಆಲಿಸಿದರು. ನಂತರ ನಗರದ ಸ್ಟೀವರ್ಟ್ ಹಿಲ್ ಬಳಿಯಿರುವ ತ್ಯಾಜ್ಯ ಘಟಕ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಜಾಗ ಸಂಬಂಧ ಹೈಕೋರ್ಟ್ ನ್ಯಾಯಾಲಯದಲ್ಲಿ ಪ್ರಕರಣ ಇರುವುದರಿಂದ ಬದಲಿ ಜಾಗ ಗುರುತಿಸುವಂತೆ ಕಂದಾಯ ಹಾಗೂ ನಗರಸಭೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಜಾಗವನ್ನು ಅಭಿವೃದ್ಧಿ ಪಡಿಸುವ ಸಂಬಂಧ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತರಾದ ವಿಜಯ್, ಪರಿಸರ…

Read More

ಮಡಿಕೇರಿ ಜೂ.29 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2020 ರಲ್ಲಿ ಪ್ರಸ್ತುತಪಡಿಸಿದ ‘ಸಾಹೇಬ್ರು ಬಂದವೇ’ ನಾಟಕದಲ್ಲಿ ಮೋನಿಕಾ ಪಾತ್ರದಲ್ಲಿ ಅಭಿನಯಿಸಿದ್ದ ಸುಸ್ಮಿತಾ ಅವರು ಶಿವಮೊಗ್ಗ ಜಿಲ್ಲೆಯ ಸಾಗರದ ನೀನಾಸಂ ರಂಗಶಿಕ್ಷಣ ತರಬೇತಿಗೆ ಪ್ರಸ್ತಕ( 2024-25) ಸಾಲಿಗೆ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ತಿಳಿಸಿದ್ದಾರೆ. ಪ್ರತಿಯೊಬ್ಬ ರಂಗಭೂಮಿ ಕಲಾವಿದನ ಕನಸು ಪ್ರತಿಷ್ಠಿತ ನೀನಾಸಂಗೆ ಆಯ್ಕೆ ಆಗಬೇಕು ಎಂಬುದಾಗಿದೆ. ಆ ನಿಟ್ಟಿನಲ್ಲಿ ಅಷ್ಟೇ ಶ್ರದ್ಧೆ ಮತ್ತು ಪರಿಶ್ರಮದ ಅಗತ್ಯತೆ ಇದ್ದು, ಈಗಾಗಲೇ ಸಾವಿರಾರು ಕಲಾವಿದರು ಇಲ್ಲಿ ತರಬೇತಿ ಪಡೆದು ಉತ್ತಮ ಕಲಾವಿದರಾಗಿ ಹೊರಹೊಮ್ಮಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2020 ರಲ್ಲಿ ಪ್ರಸಿದ್ದ ಸಾಹೇಬ್ರು ಬಂದವೇ! ನಾಟಕವನ್ನು ರಾಜ್ಯದ ಒಬ್ಬ ಶ್ರೇಷ್ಟ ರಂಗಭೂಮಿ ನಿರ್ದೇಶಕರಾದ ಡಾ.ಜೀವನ್ ರಾಂ ಸುಳ್ಯ ಅವರ ನಿರ್ದೇಶನದಲ್ಲಿ ಸಿದ್ಧಪಡಿಸಲಾಗಿತ್ತು. ರಾಜ್ಯಾದ್ಯಂತ ಸುಮಾರು 20…

Read More

ಮಡಿಕೇರಿ ಜೂ.29 NEWS DESK : ಸಿದ್ದಾಪುರ ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಜು.1 ರಂದು ಕಕ್ಕಬ್ಬೆ ಜಂಕ್ಷನ್‍ನಲ್ಲಿ ಬೆಳಿಗ್ಗೆ 10.30 ಗಂಟೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಕಕ್ಕಬ್ಬೆ, ಕುಂಜಿಲ, ಯವಕಪಾಡಿ, ನಾಲಡಿ ಸುತ್ತಮುತ್ತಲಿನ ಎಲ್ಲಾ ಕೊಡವ ಮತ್ತು ಕೊಡವತಿಯರು ಮಾನವ ಸರಪಳಿಯಲ್ಲಿ ಭಾಗವಹಿಸಿ ಪವಿತ್ರ ಕೊಡವ ಲ್ಯಾಂಡ್ ನ ಸಂರಕ್ಷಣೆಗಾಗಿ ಪಣತೊಡುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ಕೃಷಿ ಭೂಮಿಯನ್ನು ವಾಣಿಜ್ಯ ದುರುದ್ದೇಶವನ್ನಾಗಿ ಪರಿವರ್ತಿಸಲು ನಮ್ಮ ಪ್ರಾಚೀನ ಭೂಮಿ ಮತ್ತು ದೀರ್ಘಕಾಲಿಕ ಜಲಮೂಲಗಳನ್ನು ಲೂಟಿ ಮಾಡಲಾಗುತ್ತಿದೆ. ಇದು ಸ್ಥಳೀಯ ಕೊಡವರ ಅಸ್ಮಿತೆ, ಅಸ್ತಿತ್ವ ಮತ್ತು ಕೊಡವ ಹಿತಾಸಕ್ತಿಗಳಿಗೆ ಹಾನಿಕಾರಕವಾಗಿದೆ ಎಂದು ಆರೋಪಿಸಿದ್ದಾರೆ. ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ವಿಪತ್ತನ್ನು ಜಯಿಸಲು ಇರುವ ಏಕೈಕ ದಿವ್ಯೌಷಧ, ಅಂತರಾಷ್ಟ್ರೀಯ ಕಾನೂನಿನಡಿಯಲ್ಲಿ ನಮ್ಮ ಕೊಡವ ತಾಯಿ ನೆಲದಲ್ಲಿ…

Read More

ನವದೆಹಲಿ/ಬೆಂಗಳೂರು ಜೂ.29 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತು ಚರ್ಚೆ ನಡೆಸಿದರು. ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು. ರಾಜ್ಯದ ಪರವಾಗಿ ಮಂಡಿಸಲಾದ ಪ್ರಮುಖ ಪ್ರಸ್ತಾವನೆಗಳು ಹೀಗಿವೆ: ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ ಇಂಡಿಯಾ ರಿಸರ್ವ್ ಬೆಟಾಲಿಯನ್ (India Reserve Battalion) ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡುವುದು. ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್‌…

Read More

ಮಡಿಕೇರಿ ಜೂ.29 NEWS DESK : ವಿದ್ಯಾರ್ಥಿಗಳು ಮೌಲ್ಯಯುತವಾದ ಶಿಕ್ಷಣವನ್ನು ಪಡೆದು ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದು ಚೆಟ್ಟಳ್ಳಿ ಗ್ರಾ.ಪಂ ಸದಸ್ಯ ಸಿ.ಇ.ತೀರ್ಥಕುಮಾರ್ (ಮೂಡಳ್ಳಿ ರವಿ) ಹೇಳಿದರು. ಗಾಂಧಿ ಯುವಕ ಸಂಘದ ವತಿಯಿಂದ ಕಂಡಕರೆ ವತಿಯಿಂದ ಕಂಡಕರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಬಹುತೇಕರಿಗೆ ಇಂಗ್ಲಿಷ್ ವ್ಯಾಮೋಹದಿಂದ ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಉಂಟಾಗಿದೆ. ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಕಂಡಕರೆಯ ಗಾಂಧಿ ಯುವಕ ಸಂಘವು ಸಾಮಾಜಿಕ ಚಟುವಟಿಕೆಗಳ ಮೂಲಕ ಸ್ಥಳೀಯ ಸರ್ಕಾರಿ ಶಾಲೆಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಕೆಲಸವಾಗಿದೆ ಎಂದರು. ಕಳೆದ ವರ್ಷ ಗಾಂಧಿ ಯುವಕ ಸಂಘದ ವತಿಯಿಂದ ಕಂಡಕರೆ ಶಾಲೆಗೆ ಉಚಿತವಾಗಿ 25 ಕುರ್ಚಿಗಳನ್ನು ನೀಡಿ ಎಲ್ಲರಿಗೂ ಮಾದರಿಯಾಗಿದ್ದರು. ಇದೀಗ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ನೀಡಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ. ಗ್ರಾ.ಪಂ ಹಾಗೂ ಸರ್ಕಾರದ…

Read More

ಮಡಿಕೇರಿ ಜೂ.29 NEWS DESK : ಜಗತ್ತಿನಾದ್ಯಂತ ಒಂದೂವರೆ ಕೋಟಿಗೂ ಹೆಚ್ಚು ಜನರು ಮಾತನಾಡುವ ತುಳು ಭಾಷೆಗೆ ಗೂಗಲ್ ಸರ್ಚ್ ಸಂಸ್ಥೆಯು ಮಾನ್ಯತೆ ನೀಡಿದ್ದು, ಇದು ತುಳು ಭಾಷೆಗೆ ಸಿಕ್ಕ ದೊಡ್ಡ ಗೌರವವಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನಿಕಟ ಪೂರ್ವ ಸದಸ್ಯ ಪಿ.ಎಂ.ರವಿ ಶ್ಲಾಘಿಸಿದ್ದಾರೆ. ಪಂಚ ದ್ರಾವಿಡ ಭಾಷೆಯಲ್ಲೇ ಅತಿ ಪುರಾತನ ಭಾಷೆಯಾಗಿರುವ ತುಳುವಿಗೆ 2600 ವರ್ಷಗಳ ಇತಿಹಾಸವಿದ್ದು, ಸ್ವಂತ ಲಿಪಿಯನ್ನು ಹೊಂದಿದೆ. ಜೂನ್ 27ರಂದು ಜಾಗತಿಕವಾಗಿ ತುಳು ಭಾಷೆಯನ್ನು ಗೂಗಲ್ ಸಂಸ್ಥೆಯು ತನ್ನ ಟ್ರಾನ್ಸ್ ಲೇಟರ್ ನಲ್ಲಿ ಸೇರ್ಪಡೆ ಮಾಡಿದ್ದು, ಇಂಗ್ಲೀಷ್ ಅಥವಾ ಯಾವುದೇ ಭಾಷೆಯ ಪದಗಳನ್ನು ಉಲ್ಲೇಖಿಸಿ ತುಳುವಿನಲ್ಲಿ ಅರ್ಥ ಕೇಳಿದರೆ ಅದಕ್ಕೆ ಸರಿಯಾದ ಅರ್ಥ ಕೊಡಬಲ್ಲ ಪದಗಳನ್ನು ತೋರಿಸುತ್ತದೆ. ತುಳು ಮಾತನಾಡುವ ಕರಾವಳಿ ಜನರು ಇಡೀ ಜಗತ್ತಿನಲ್ಲಿದ್ದಾರೆ. ತುಳು ಪ್ರಾದೇಶಿಕ ಭಾಷೆಯಾಗಿದ್ದರು ಹೆಚ್ಚಿನ ಮಂದಿ ತುಳುವನ್ನು ತಮ್ಮ ಮಾತೃಭಾಷೆಯನ್ನಾಗಿ ಬಳಸುತ್ತಿದ್ದಾರೆ. ಈಗ ಗೂಗಲ್ ಇಂಜಿನ್ ನಲ್ಲಿ ತುಳು ಭಾಷೆ ಸೇರ್ಪಡೆಯಾಗಿರುವುದು ತುಳುವಿನ ಮಟ್ಟಿಗೆ ಒಂದು…

Read More

ನಾಪೋಕ್ಲು ಜೂ.29 NEWS DESK : ಬಲ್ಲಮಾವಟಿ ಗ್ರಾಮದ ಶ್ರೀ ಭಗವತಿ ದೇವಾಲಯದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರ ಹೆಸರಿನಲ್ಲಿ ಬಲ್ಲಮಾವಟಿ ಬೂತ್ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಬಲ್ಲಮಾವಟಿ ಬೂತ್ ಕಾಂಗ್ರೆಸ್ ಅಧ್ಯಕ್ಷ ಚಂಗೇಟಿರ ಕುಶಾಲಪ್ಪ ಶಾಸಕ ಹೆಸರಿನಲ್ಲಿ ಪ್ರಾರ್ಥಿಸಿದರು. ಪೂಜಾ ವಿಧಿ ವಿಧಾನವನ್ನು ದೇವಾಲಯದ ಮುಖ್ಯ ಅರ್ಚಕ ಶಶಿಧರ ನೆರವೇರಿಸಿದರು. ಈ ಸಂದರ್ಭ ವಲಯ ಕಾಂಗ್ರೆಸ್ ಅಧ್ಯಕ್ಷ ತಾಪಂಡ ಅಪ್ಪಣ್ಣ, ವಲಯ ಕಾಂಗ್ರೆಸ್ ಕಾರ್ಯದರ್ಶಿ ಮಣವಟ್ಟಿರ ದಯಾ ಕುಟ್ಟಪ್ಪ, ಜಿಲ್ಲಾ ಎನ್‍ಎಸ್‍ಯುಐ ಕಾರ್ಯದರ್ಶಿ ಮುಕ್ಕಾಟಿರ ಯತೀಶ್, ನೆಲಜಿ ಬೂತ್ ಅಧ್ಯಕ್ಷ ಕೈಬುಲಿರ ಗಣಪತಿ, ಪಕ್ಷದ ನಾಯಕರುಗಳಾದ ಅಪ್ಪಚೆಟ್ಟೋಳಂಡ ಮಾಚಯ್ಯ, ಬೊಟ್ಟೋಳಂಡ ಜಾನಕ್ಕಿ, ಚೀಯಕಪೂವಂಡ ರಂಜನ್, ಚೋಕಿರ ವಾಸುದೇವ, ನಿವೃತ್ತ ಯೋಧ ಪೊನ್ನುಕಂಡ ಬೆಳ್ಳಿಯಪ್ಪ ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಜೂ.29 NEWS DESK : ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ತೆನ್ನಿರ ಮೈನಾ ಎಂಬ ವ್ಯಕ್ತಿ ನಿರಂತರವಾಗಿ ಸಾಮಾಜಿಕ ಜಾಲತಾಣವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿಯ ಮಡಿಕೇರಿ ನಗರ ಮಂಡಲ ಆರೋಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಮಂಡಲದ ಅಧ್ಯಕ್ಷ ಉಮೇಶ್ ಸುಬ್ರಮಣಿ, ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರ ವಿರುದ್ಧ ತೆನ್ನಿರಾ ಮೈನಾ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮತ್ತು ಅವಹೇಳನ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನಾಕಾರರನ್ನು ಹೆಂಡ ಕುಡಿದ ಕೋತಿಗಳು ಎಂದು ತೇಜೋವಧೆ ಮಾಡಿದ್ದು, ಇದರಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯರಿಗೆ ಮುಜುಗರವಾಗಿದೆ ಮತ್ತು ಅವಮಾನವಾಗಿದೆ. ತೆನ್ನಿರ ಮೈನಾ ಅವರ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರು ಯಾವುದೇ ಪ್ರಕರಣ ದಾಖಲಾಗಿಲ್ಲ ಮತ್ತು ಇವರ ಮೊಬೈಲ್ ಫೋನ್ ವಶಕ್ಕೆ ಪಡೆದಿಲ್ಲ ಎಂದು ಆರೋಪಿಸಿದರು. ಕಳೆದ ಚುನಾವಣೆ ಸಂದರ್ಭ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡ…

Read More

ನಾಪೋಕ್ಲು ಜೂ.29 NEWS DESK : ವಿದ್ಯೆ, ಬುದ್ಧಿವಂತಿಕೆ ಯಾರ ಸ್ವತ್ತಲ್ಲ ವಿದ್ಯಾರ್ಥಿಗಳು ತಮ್ಮ ಸ್ವಂತ ಸಾಮರ್ಥ್ಯದಿಂದ ಮುಂದೆ ಬರಬೇಕು ಎಂದು ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೇದುರ ವಿಶಾಲ ಹೇಳಿದರು. ನಾಪೋಕ್ಲು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ 2024- 25ರ ಸಾಲಿನ ವಿದ್ಯಾರ್ಥಿ ಸಂಘದವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಶಾಲಾ ಹಂತದಲ್ಲಿ ರಚಿಸಲಾಗುವ ಸಂಘವು ವಿದ್ಯಾರ್ಥಿಯ ಭವಿಷ್ಯಕ್ಕೆ ಪೂರಕವಾಗಿರುತ್ತದೆ ಎಂದ ಅವರು ಮೌಲ್ಯ ನಿರ್ಣಯವೂ ಸಹ ವಿದ್ಯಾರ್ಥಿಗಳಿಗೆ ಪರಿಪೂರ್ಣತೆಯನ್ನು ಒದಗಿಸುತ್ತದೆ. ವಿದ್ಯಾರ್ಥಿ ದೆಸೆಯಲ್ಲೇ ಮುಂದಿನ ಭವಿಷ್ಯದ ಬಗ್ಗೆ ಕನಸು ಕಂಡು ಅದನ್ನು ನನಸಾಗಿಸಲು ಶಿಸ್ತು, ಸೈಂಯಮ ಮತ್ತು ಶ್ರದ್ಧೆಯಿಂದ ಶ್ರಮಿಸುವಂತಾಗಬೇಕು ಎಂದು ಹಿತವಚನ ನುಡಿದರು. ನಿವೃತ್ತ ಪ್ರಾಂಶುಪಾಲರು ಹಾಗೂ ಸಂಸ್ಥೆಯ ನಿರ್ದೇಶಕರಾದ ಪ್ರೊ.ಕಲ್ಯಾಟಂಡ ಪೂಣಚ್ಚ ಮಾತನಾಡಿ, ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಸಂಸ್ಥೆಯ ಮಾಜಿ ಅಧ್ಯಕ್ಷರ ಕೊಡುಗೆ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿ ಮಕ್ಕಳಿಗೆ ಹಿತವಚನವನ್ನು ನೀಡಿದರು. ಶಾಲೆಯ ಪ್ರಾಂಶುಪಾಲರಾದ ಕಲ್ಯಾಣಂಡ ಶಾರದ ಮಾತನಾಡಿ, ವಿದ್ಯಾರ್ಥಿಗಳು ಜವಾಬ್ದಾರಿಯನ್ನು ಹೊಂದಿ…

Read More

ನಾಪೋಕ್ಲು ಜೂ.29 NEWS DESK : ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಸರಕಾರ ಹಲವು ನಿಯಮಗಳನ್ನು ಜಾರಿಗೊಳಿಸಿದೆ ಎಂದು ಠಾಣಾಧಿಕಾರಿ ಮಂಜುನಾಥ್ ಹೇಳಿದರು. ಕುಂಜಿಲದ ಆಕ್ಸ್‌ಫರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಅಂಗವಾಗಿ ವಿಷಯ ವಿವರಣೆಯನ್ನು ಅವರು ನೀಡಿದರು. ಸಮಾಜದಲ್ಲಿ ಜರುಗುತ್ತಿರುವ ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳು ಹಾಗೂ ಸಂಚಾರಿ ನಿಯಮಗಳ ಕುರಿತು ಮಾಹಿತಿ ನೀಡಿದರು. ಅಂತರ್ಜಾಲ ವಂಚನೆಗಳನ್ನು ವಿವರಿಸಿ ಎಚ್ಚರಿಕೆ ನೀಡಿದರು. ತಂಬಾಕು ಉತ್ಪನ್ನಗಳು ಮಾರಕ ಆದರೂ ಅದನ್ನು ಮಾರಾಟ ಮಾಡುತ್ತಿದ್ದಾರೆ.ಆದರೆ ವಿದ್ಯಾರ್ಥಿಗಳು ಅವುಗಳ ಮೊರೆ ಹೋಗಬಾರದು ಎಂದರು. ಮಾದಕ ವಸ್ತುಗಳ ಬಳಕೆ ವಿರುದ್ಧ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಕ್ರೈಂ ಠಾಣಾಧಿಕಾರಿ ಶ್ರೀಧರ್, ಆಕ್ಸ್‌ಫರ್ಡ್ ಆಂಗ್ಲ ಮಾಧ್ಯಮ ಶಾಲೆಯ ನಿರ್ವಾಹಕ ಅಧಿಕಾರಿ ಶಾಹಿದ್ ಅಲಿ, ಮುಖ್ಯೋಪಧ್ಯಾಯಿನಿ ಕವಿತಾ, ಅಧ್ಯಾಪಕವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು. ವರದಿ : ದುಗ್ಗಳ ಸದಾನಂದ.

Read More