ಮಡಿಕೇರಿ ಜೂ.19 NEWS DESK : ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ನೀಡುವ ಮತ್ತು ಉಜ್ವಲ ಭವಿಷ್ಯ ರೂಪಿಸುವ ದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದ್ದು, ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಕರ್ತವ್ಯ ನಿರ್ವಹಿಸಬೇಕು ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲ ಓ.ಎಂ.ಪಂಕಜಾಕ್ಷನ್ ಅವರು ಕರೆ ನೀಡಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಇಂದಿನಿಂದ ಜೂ.24 ರವರೆಗೆ ಶಿಕ್ಷಕರಿಗಾಗಿ ನಡೆಯುವ ಮೂಲ ತರಬೇತಿ ಮತ್ತು ಮುಂದುವರೆದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತರಬೇತಿ ಶಿಬಿರಗಳು ಬದಲಾವಣೆಗೆ ದಾರಿಯಾಗಿದೆ, ಶಿಸ್ತು ರೂಪಿಸುತ್ತದೆ. ಸಮಾಜಮುಖಿಯಾಗಿ ಬೆಳೆಯಲು ಸಹಕರಿಸುತ್ತದೆ, ಸಕಾರಾತ್ಮಕ ಚಿಂತನೆ, ದೃಢತೆ, ವಿಶ್ವಾಸ ಹೆಚ್ಚಾಗುತ್ತದೆ ಮತ್ತು ನಕಾರಾತ್ಮಕ ಚಿಂತನೆ ಬಿಡಲು ಸಹಕಾರಿಯಾಗಿದೆ ಎಂದರು. ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಎಲ್ಲರಿಗೂ ಉತ್ತಮ ಸಂದೇಶವನ್ನು ನೀಡುತ್ತದೆ. ಅದನ್ನು ಜೀವನದಲ್ಲಿ ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸಬೇಕು. ಉತ್ತಮ ಮಾರ್ಗದರ್ಶನದಲ್ಲಿ ಕೊಂಡೊಯ್ಯಬೇಕು. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ…
ಲೇಖಕ: admin
ಸೋಮವಾರಪೇಟೆ ಜೂ.19 NEWS DESK : ವಿವಿಧ ಹಾಡಿಗಳಿಗೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಹಾಡಿ ನಿವಾಸಿಗಳ ಸಮಸ್ಯೆ ಆಲಿಸಿದರು. ಕಿಬ್ಬೆಟ್ಟ ಹಾಡಿಗೆ ಭೇಟಿ ನೀಡಿದ ಸಂದರ್ಭ 17 ಕುಟುಂಬಗಳಲ್ಲಿ 10 ಕುಟುಂಬದವರಿಗೆ ಆಧಾರ್ ಕಾರ್ಡ್ ದೊರೆತ್ತಿಲ್ಲ ಎಂದು ಹಾಡಿ ನಿವಾಸಿಗಳು ದೂರಿದರು. ಈ ಬಗ್ಗೆ ಕಂದಾಯ ಇಲಾಖೆಯ ಅಧಿಕಾರಿಯನ್ನು ಶಾಸಕರು ಪ್ರಶ್ನಿಸಿದ ಸಂದರ್ಭ ತಾಂತ್ರಿಕದೋಷ ಇರುವುದಾಗಿ ಅಧಿಕಾರಿಗಳು ತಿಳಿಸಿದ್ದು, ತಾಲ್ಲೂಕು ಕೇಂದ್ರದಲ್ಲಿ ವಿವಿಧ ಇಲಾಖಾಧಿಕಾರಿಗಳನ್ನು ಕರೆಯಿಸಿ ಆಧಾರ್ಕಾರ್ಡ್ ಆಂದೋಲನ ಹಮ್ಮಿಕೊಂಡು ಗಿರಿಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಹಾಡಿಯೊಳಗೆ ಎರಡು ನೀರಿನ ಸಿಸ್ಟನ್ಗಳನ್ನು ಅಳವಡಿಸಲು ಕ್ರಮಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹಾಗೂ ಜಿ.ಪಂ ಇಂಜಿನಿಯರಿಂಗ್ ವಿಭಾಗದ ಎಇಇ ವೀರೇಂದ್ರ ಕುಮಾರ್ ಅವರಿಗೆ ಸೂಚಿಸಿದರು. ಒಳಗುಂದ ಹಾಡಿಯಲ್ಲಿ ಸಮಸ್ಯೆ ಆಲಿಸಿದ ಶಾಸಕರು, ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಪಿಡಿಒ ಅವರನ್ನು ವಿಚಾರಿಸಿದರು. ಬೋರ್ವೆಲ್ ಕೊರೆಸಿ 2 ವರ್ಷಗಳಾದರೂ, ನೀರು…
ಮಡಿಕೇರಿ ಜೂ.19 NEWS DESK : ಜನಸಾಮಾನ್ಯರಿಗೆ ಹೊರೆಯಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸರಕಾರ ತಕ್ಷಣ ಇಳಿಕೆ ಮಾಡಬೇಕು. ಸಾಧ್ಯವಾಗದಿದ್ದಲ್ಲಿ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವಂತೆ ಒತ್ತಾಯಿಸಿ ಇತ್ತೀಚೆಗೆ ಬಿಜೆಪಿ ವತಿಯಿಂದ ರಾಜ್ಯವ್ಯಾಪಿ ತೀವ್ರ ಹೋರಾಟವನ್ನು ನಡೆಸಲಾಗಿದೆ. ಆದರೆ ಸರಕಾರ ಇದಕ್ಕೆ ಸ್ಪಂದನೆ ನೀಡದೆ ನಿರ್ಲಕ್ಷ್ಯ ವಹಿಸಿದೆ. ಕಾಂಗ್ರೆಸ್ ಸರಕಾರದ ತಪ್ಪು ನಿರ್ಧಾರದಿಂದಾಗಿ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲಿದೆ. ಆಟೋ, ಟ್ಯಾಕ್ಸಿ ಪ್ರಯಾಣ ದರವೂ ದುಬಾರಿಯಾಗಲಿದೆ. ಜನಸಾಮಾನ್ಯರಿಗೆ ಇದು ದೊಡ್ಡ ಹೊರೆಯಾಗಲಿದೆ ಎಂದು ಟೀಕಿಸಿದರು. ಜನವಿರೋಧಿ ಸರಕಾರ ಎಲ್ಲಾ ಹಂತದಲ್ಲೂ ಆಡಳಿತ ನಡೆಸುವಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಸರಣಿ ಆತ್ಮಹತ್ಯೆ, ಕೊಲೆಗಳು, ದೌರ್ಜನ್ಯ ಪ್ರಕರಣಗಳು ನಡೆಯುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯ ಸಾವಿಗೆ ಭ್ರಷ್ಟ ವ್ಯವಸ್ಥೆಯೇ ಕಾರಣವಾಗಿದೆ. ಈ ಸರಕಾರ ಜನರ ನೆಮ್ಮದಿಯನ್ನು ಕೆಡಿಸಿದೆ ಎಂದು ಆರೋಪಿಸಿದರು.…
ಮೈಸೂರು ಜೂ.19 NEWS DESK : ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರ ‘ಯೋಗ ಸಂಗೀತ, ಮೈಸೂರು ಪರಂಪರೆ’, ಕೃತಿ ಬಿಡುಗಡೆ, ಯೋಗ ದರ್ಶಿನಿ ಪ್ರದರ್ಶನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜೂ.21 ರಂದು ಜರುಗಲಿದೆ. ಮೈಸೂರಿನ ಓದುಗ ಪ್ರಕಾಶನ, ಮೈಸೂರು ಕಲ್ಚರಲ್ ಅಸೋಸಿಯೇಷನ್ ಹಾಗೂ ಭಾರತೀ ಯೋಗಧಾಮದ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ವಿಜಯಗಿರಿ, ಉತ್ತನಹಳ್ಳಿಯ ಭಾರತೀ ಯೋಗಧಾಮದಲ್ಲಿ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಕಾರ್ಯಕ್ರಮವನ್ನು ಭಾರತೀಯ ಯೋಗಧಾಮದ ಸಂಸ್ಥಾಪಕ ಡಾ.ಕೆ.ಎಲ್.ಶಂಕರನಾರಾಯಣ ಜೋಯ್ಸ್ ಉದ್ಘಾಟಿಸಲಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ‘ಯೋಗ ಸಂಗೀತ, ಮೈಸೂರು ಪರಂಪರೆ’ ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಲಕ್ಷ ವೃಕ್ಷ ಆಂದೋಲನದ ರೂವಾರಿ ಹಾಗೂ ಮುಡಾ ಮಾಜಿ ಅಧ್ಯಕ್ಷ ಶ್ರೀ ಎಚ್.ವಿ.ರಾಜೀವ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮೈಸೂರು ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಎ.ಪಿ.ನಾಗೇಶ್, ಲೇಖಕ ಶ್ರೀ ಐತಿಚಂಡ ರಮೇಶ್ ಉತ್ತಪ್ಪ, ಓದುಗ…
ಮಡಿಕೇರಿ ಜೂ.19 NEWS DESK : ಐಮಂಗಲ ಭದ್ರಕಾಳಿ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಮಡಿಕೇರಿ ಜೂ.19 NEWS DESK : ಜನಸಾಮಾನ್ಯರಿಗೆ ಹೊರೆಯಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸರಕಾರ ತಕ್ಷಣ ಇಳಿಕೆ ಮಾಡಬೇಕು. ಸಾಧ್ಯವಾಗದಿದ್ದಲ್ಲಿ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿ ಬಿಜೆಪಿಯ 2ನೇ ಹಂತದ ಹೋರಾಟವಾಗಿ ಜೂ.20ರಂದು ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವಂತೆ ಒತ್ತಾಯಿಸಿ ಜನಪರವಾಗಿ ಇತ್ತೀಚೆಗೆ ರಾಜ್ಯವ್ಯಾಪಿ ತೀವ್ರ ಹೋರಾಟವನ್ನು ನಡೆಸಲಾಗಿದೆ. ಆದರೆ ಸರಕಾರ ಇದಕ್ಕೆ ಸ್ಪಂದನೆ ನೀಡದೆ ನಿರ್ಲಕ್ಷ್ಯ ವಹಿಸಿದೆ. ಎರಡನೇ ಹಂತದ ಪ್ರತಿಭಟನೆಗೂ ಸ್ಪಂದನೆ ದೊರೆಯದಿದ್ದಲ್ಲ್ಲಿ ಗ್ರಾಮ ಮಟ್ಟದಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕುವಲ್ಲಿಯವರೆಗೆ ಹೋರಾಟವನ್ನು ರೂಪಿಸಲಾಗುವುದು ಎಂದರು. ಜನಪರ ಕಾಳಜಿಯಿಂದ ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ ಗುರುವಾರ ನಡೆಸುತ್ತಿರುವ ಪ್ರತಿಭಟನೆಗೆ ಸಾರ್ವಜನಿಕರು, ಆಟೋ, ಟ್ಯಾಕ್ಸಿ ಮತ್ತಿತರ ವಾಹನ ಚಾಲಕರುಗಳು ಕೂಡ ಬೆಂಬಲ ನೀಡಬೇಕೆಂದು ಮನವಿ ಮಾಡಿದರು. ಬಿಜೆಪಿಯ ವಿರಾಜಪೇಟೆ ಮಂಡಲದ ಅಧ್ಯಕ್ಷ ಸುವಿನ್ ಗಣಪತಿ ಮಾತನಾಡಿ…
ಮಡಿಕೇರಿ ಜೂ.19 NEWS DESK : ಪಿಕ್ಅಪ್ ವಾಹನ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಗೋಣಿಕೊಪ್ಪ- ಪೊನ್ನಂಪೇಟೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ನಡೆದ ಘಟನೆಯಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಗೋಣಿಕೊಪ್ಪ ಗ್ರಾ.ಪಂ ಮಾಜಿ ಸದಸ್ಯೆ ಪ್ರಭಾವತಿ ಸ್ಥಳದಲ್ಲೇ ಮೃತಪಟ್ಟರು. ಗಂಭೀರವಾಗಿ ಗಾಯಗೊಂಡು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿಂಬದಿ ಸವಾರರಾದ 10ನೇ ತರಗತಿ ವಿದ್ಯಾರ್ಥಿನಿ ಅನು ಚಿಕಿತ್ಸೆ ಫಲಿಸದೆ ಇಂದು ನಿಧನ ಹೊಂದಿದ್ದಾಳೆ. ಪಿಕ್ಅಪ್ ವಾಹನ ಚಾಲಕನನ್ನು ವಶಕ್ಕೆ ಪಡೆದಿರುವ ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಪ್ರಭಾವತಿ ಅವರು ಪತಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಗೋಣಿಕೊಪ್ಪ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 10 ನೇ ತರಗತಿ ವಿದ್ಯಾರ್ಥಿನಿ ಅನು, ಶ್ರೀಜಾ ಎಂಬುವವರ ಪುತ್ರಿಯಾಗಿದ್ದು, ಪ್ರಭಾವತಿ ಅವರ ಬಳಿ ಮನೆ ಪಾಠ ಹೇಳಿಸಿಕೊಳ್ಳುತ್ತಿದ್ದಳು. ಇಬ್ಬರು ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಸೋಮವಾರಪೇಟೆ ಜೂ.18 NEWS DESK : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ದರ್ಶನ್ ವಿರುದ್ಧ ಕೊಡಗಿನಲ್ಲಿಯೂ ಆಕ್ರೋಶ ವ್ಯಕ್ತವಾಗಿದ್ದು, ವೀರಶೈವ ಲಿಂಗಾಯತ ಸಮಾಜ ಪ್ರತಿಭಟನೆ ನಡೆಸಿದೆ. ವಿವಿಧ ವೀರಶೈವ ಲಿಂಗಾಯತ ಸಂಘಟನೆಗಳು ಇಂದು ಸ್ವಾಮೀಜಿಗಳ ಸಮ್ಮುಖದಲ್ಲಿ ಪಟ್ಟಣದ ತಾಲ್ಲೂಕು ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮೃತ ರೇಣುಕಾ ಸ್ವಾಮಿ ಕುಟುಂಬಕ್ಕೆ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದರು. ಕಲ್ಲುಮಠದ ಮಹಾಂತ ಸ್ವಾಮೀಜಿ ಮಾತನಾಡಿ ಇಂದು ಸಮಾಜದಲ್ಲಿ ಹಿಂಸೆ, ಕ್ರೌರ್ಯ ಹೆಚ್ಚುತ್ತಿದೆ, ಇದು ಒಳ್ಳೆಯ ಬೆಳವಣಿಗೆಯಲ್ಲ. ರೇಣುಕಾ ಸ್ವಾಮಿಯನ್ನು ಹಿಂಸೆಕೊಟ್ಟು ಕೊಲೆ ಮಾಡಿದ್ದಾರೆ, ಅವರ ಕುಟುಂಬ ಅನಾಥವಾಗಿದೆ. ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದರು. ಈ ರೀತಿಯ ಕೃತ್ಯಗಳು ನೆಡೆಯದಂತೆ ಯಾವುದೇ ಸರ್ಕಾರ ಇರಲಿ ಎಚ್ಚರಿಕೆ ವಹಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಮಾತನಾಡಿ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಕಾರ್ಯ…
ಮಡಿಕೇರಿ ಜೂ.18 NEWS DESK : ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ಜನವಿರೋಧಿ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಅವರು, ತಕ್ಷಣ ಬೆಲೆ ಇಳಿಕೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಎಲ್ಲಾ ಸರಕು ಸಾಗಾಣೆ ವೆಚ್ಚ ಹೆಚ್ಚಾಗಲಿದ್ದು, ಅಗತ್ಯ ವಸ್ತುಗಳ ಬೆಲೆಯೂ ದುಬಾರಿಯಾಗಲಿದೆ. ಇದು ಜನಸಾಮಾನ್ಯರ ಮೇಲೆ ದೊಡ್ಡ ಹೊರೆಯಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದ್ವಿಚಕ್ರ ವಾಹನ, ಕಾರು ಮತ್ತಿತರ ವಾಹನಗಳ ಮೂಲಕ ಉದ್ಯೋಗಕ್ಕೆ ತೆರಳುವ ನೌಕರರು, ಆಟೋರಿಕ್ಷಾ, ಟ್ಯಾಕ್ಸಿ ಮಾಲೀಕ, ಚಾಲಕರಿಗೂ ಬೆಲೆ ಏರಿಕೆಯಿಂದ ಜೀವನ ಕಷ್ಟವಾಗಲಿದೆ. ಕಳೆದ 10 ವರ್ಷಗಳಲ್ಲಿ ನಿರಂತರವಾಗಿ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದ್ದು, ಇದೀಗ ಮತ್ತೆ ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿ ಗಾಯದ ಮೇಲೆ ಬರೆ ಎಳೆದಿದೆ. ಬಸ್ ಗಳಲ್ಲಿ ಉಚಿತ…
ಮಡಿಕೇರಿ ಜೂ.18 NEWS DESK : ಬೆಳೆವಿಮೆ ಸಂಬಂಧ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಕರು ಹೆಸರು ನೋಂದಾಯಿಸಲು ಅಗತ್ಯ ಕ್ರಮವಹಿಸುವಂತೆ ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಡಾ.ಎನ್.ವಿ.ಪ್ರಸಾದ್ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಳೆವಿಮೆ ಸೌಲಭ್ಯ ಬಳಸಿಕೊಳ್ಳುವಲ್ಲಿ ರೈತರಿಗೆ ಮತ್ತಷ್ಟು ಮಾಹಿತಿ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಶ್ರಮ ವಹಿಸಬೇಕು. ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಸಾಕಷ್ಟು ದಾಸ್ತಾನು ಮಾಡಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ, 2024ರ ಮುಂಗಾರು ಹಂಗಾಮಿಗೆ 2024 ರ ಮೇ, 20 ರ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯನ್ನು ಹೋಬಳಿ ಮಟ್ಟ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ. ಭತ್ತ ಮತ್ತು ಮುಸುಕಿನ ಜೋಳದ…






