ಲೇಖಕ: admin

ನಾಪೋಕ್ಲು ಜೂ.29 NEWS DESK : ನಾಪೋಕ್ಲು ಕೊಡವ ಸಮಾಜ ರಸ್ತೆಯಲ್ಲಿ ಕಾಂಕ್ರೀಟ್ ಕಾಮಗಾರಿ ಕೈಗೊಳ್ಳಲಾಗಿದ್ದು ಸಂಚಾರ ಸಮಸ್ಯೆಯನ್ನು ಪರಿಹರಿಸಲಾಗಿದೆ.ರಸ್ತೆಯಲ್ಲಿ ಹೊಂಡ ಗುಂಡಿಗಳಾಗಿದ್ದು ಸಂಚಾರಕ್ಕೆ ತೊಡಕು ಉಂಟಾಗಿ ಈ ಬಗ್ಗೆ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಕೆಆರ್‍ಐಡಿಎಲ್ ವತಿಯಿಂದ 3.70 ಲಕ್ಷ ವೆಚ್ಚದಲ್ಲಿ 52 ಮೀಟರ್ ಉದ್ದದ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡಿದೆ. ರಸ್ತೆ ನಿರ್ಮಾಣದಿಂದಾಗಿ ಮುಂದಿನ 15 ದಿನಗಳು ವಾಹನ ಸಂಚಾರ ನಿಷೇಧಿಸಿ. ನಾಡಕಚೇರಿಗೆ ತೆರಳಲು ಬೈಪಾಸ್ ರಸ್ತೆಯಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ ಜೂ.29 NEWS DESK : ಬೆಲೆ ಏರಿಕೆ ವಿರುದ್ಧ ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಸಂದೇಶ ಕಳುಹಿಸಿರುವ ಕಾಂಗ್ರೆಸ್ ವ್ಯಕ್ತಿಯೊಬ್ಬರ ವಿರುದ್ಧ ದೂರು ನೀಡಿದರೂ ಪೊಲೀಸರು ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ಪೊಲೀಸರ ನಿರ್ಲಕ್ಷ್ಯವನ್ನು ಖಂಡಿಸಿ ಕೊಡಗು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳೆದುರು ಬಿಜೆಪಿ ವತಿಯಿಂದ ಜು.3ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ.ಅರುಣ್ ಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಕೈಗೊಂಬೆಯಂತೆ ವರ್ತಿಸುತ್ತಿದ್ದು, ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಮೊಕದ್ದಮೆಗಳನ್ನು ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ತಮಗೆ ಬಂದ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡರೆ ಪೊಲೀಸರು ಅವರ ವಿರುದ್ಧ ಮೊಕದ್ದಮೆ ಹೂಡಿ ಮೊಬೈಲ್‍ಗಳನ್ನು ವಶಪಡಿಸಿಕೊಂಡು ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಆದರೆ ಕಾಂಗ್ರೆಸಿಗರೊಬ್ಬರು ಬಿ.ಜೆ.ಪಿ ಪಕ್ಷದ ನಾಯಕರುಗಳು ಹಾಗೂ ಕಾರ್ಯಕರ್ತರನ್ನು…

Read More

ಮಡಿಕೇರಿ ಜೂ.29 NEWS DESK : ಮಡಿಕೇರಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರಾಗಿ ಕೌಸರ್ ಎಂ.ಬಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಿರಂಜನ್ ಕ್ಸೇವಿಯರ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಹನೀಫ್ ಪಿ.ಎ ಅವರ ಆದೇಶದ ಮೇರೆಗೆ ಪಕ್ಷ ಸಂಘಟನೆಗಾಗಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿರುವುದಾಗಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.29 NEWS DESK : ಹಾಲಿನ ದರ ಏರಿಕೆ ಮಾಡಿದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯ ಎನ್.‌ ರವಿ ಕುಮಾರ್‌,  ಛಲವಾದಿ ನಾರಾಯಣ ಸ್ವಾಮಿ, ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ  ಎಂ.ರುದ್ರೇಶ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ  ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ರೈತ ಮೋರ್ಚಾ ಪದಾಧಿಕಾರಿಗಳು ಮತ್ತು ಪ್ರಮುಖರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಜೂ.29 NEWS DESK : ಹೆಚ್‍ಡಿಎಫ್‍ಸಿ ಬ್ಯಾಂಕ್ ಮಡಿಕೇರಿ ಶಾಖೆ ವತಿಯಿಂದ ಹಾಕತ್ತೂರು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಛತ್ರಿ ಮತ್ತು ಬ್ಯಾಗ್‍ಗಳನ್ನು ವಿತರಿಸಲಾಯಿತು. ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕ್ ನ ಆರ್.ಎಂ.ಓ.ನಾರಾಯಣ, ರಾಜೇಂದ್ರ ಹಾಗೂ‌‌ ಬ್ಯಾಂಕ್ ಅಧಿಕಾರಿಗಳಾದ ಪುನಿತ್ ಪೂಣಚ್ಚ ವಿದ್ಯಾರ್ಥಿಗಳಿಗೆ ಛತ್ರಿ ಹಾಗೂ ಬ್ಯಾಗ್ ಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ನೀತು ಕುಮಾರಿ, ಬ್ಯಾಂಕ್ ನ ಶ್ರೀನಿವಾಸ್., ಹಾಕತ್ತೂರು ತ್ರಿನೇತ್ರ ಯುವಕ ಸಂಘದ ಅಧ್ಯಕ್ಷರಾದ ಪಿ.ಪಿ. ಸುಕುಮಾರ್. ಸ್ಥಾಪಕ ಅಧ್ಯಕ್ಷರಾದ ಪಿ.ಇ.ದಿವಾಕರ್. ಮಾಜಿ ಅಧ್ಯಕ್ಷ ರಾದ ಟಿ.ಕೆ.ಸಂತೋಷ್. ಶಿಕ್ಷಕರಾದ ಎಂ.ವನಜಾ, ಸಿ.ಎಂ.ಮುನೀರ್, ಬಿ.ಎನ್.ಜಯಂತಿ, ಕೆ.ಕೆ.ಪುಷ್ಪ, ಕೆ.ಜಿ.ಭವಾನಿ ಶಂಕರ್, ಸಹನಾ ಹಾಜರಿದ್ದರು.

Read More

ಮಡಿಕೇರಿ ಜೂ.29 NEWS DESK : ಫವಿ ಸೇವಾ ಟ್ರಸ್ಟ್ ವತಿಯಿಂದ ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿಪೂರ್ವ ಕಾಲೇಜಿಗೆ ಲ್ಯಾಪ್‍ಟಾಪ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಪವಿ ಸೇವಾ ಟ್ರಸ್ಟ್ ಸಂಚಾಲಕ ಅಳಮೇಂಗಡ ಮಾಳವಿಕಾ ರಮೇಶ್ ಮಾತನಾಡಿ, ನಾಗರಹೊಳೆ ಅಭಯ ಅರಣ್ಯದಂಚಿನ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣ ಪಡೆಯುತ್ತಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 25 ಲ್ಯಾಪ್‍ಟಾಪ್ ಗಳನ್ನು ವಿದ್ಯಾಸಂಸ್ಥೆಯ ಅಧ್ಯಕ್ಷ  ಅಳಮೇಂಗಡ ಬೋಸ್ ಮಂದಣ್ಣ ಅವರಿಗೆ ಹಸ್ತಾಂತರಿಸಲಾಗಿದೆ ಎಂದರು. ಸಂಸ್ಥೆಯ ಉಪಾಧ್ಯಕ್ಷ ಕಾಯಮಾಡ ರಾಜ, ಪ್ರಾಂಶುಪಾಲ ಪ್ರಭು, ಮುಖ್ಯ ಶಿಕ್ಷಕ ಚಂದ್ರಶೇಖರ್, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Read More

ಮಡಿಕೇರಿ ಜೂ.29 NEWS DESK : ಕೊಡಗಿನ ಅಪ್ರತಿಮ ಸ್ವಾತಂತ್ರ್ಯ ಸೇನಾನಿಗಳಾದ ಪಂದ್ಯಂಡ ಬೆಳ್ಯಪ್ಪ ಹಾಗೂ ಸೀತಮ್ಮ ಬೆಳ್ಯಪ್ಪ  ಜೋಡಿ ಪ್ರತಿಮೆಯನ್ನೊಳಗೊಂಡ ಸ್ಮಾರಕವನ್ನು ಮಡಿಕೇರಿಯ ಕೇಂದ್ರ ಸ್ಥಾನದಲ್ಲಿ ಸ್ಥಾಪಿಸಿ ಅಭಿವೃದ್ಧಿ ಪಡಿಸುವಂತೆ ಯುನೈಟೆಡ್ ಕೊಡವ ಆರ್ಗನೈಜೇಷನ್ – ಯುಕೊ ಅಧ್ಯಕ್ಷ ಕೊಕ್ಕಲೇಮಾಡ ಮಂಜು ಚಿಣ್ಣಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೊಡಗು ಕರ್ನಾಟಕದೊಂದಿಗೆ ವಿಲೀನವಾದ ನಂತರ ಎಲ್ಲಾ ಸರ್ಕಾರಗಳು ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರನ್ನು ನಿರ್ಲಕ್ಷಿಸುತ್ತಲೇ ಬಂದಿದ್ದು, ಕೊಡಗಿನ ಸ್ವಾತಂತ್ರ್ಯ ಇತಿಹಾಸವನ್ನೇ ತಿರುಚಿ ನೈಜ ಇತಿಹಾಸವನ್ನು ಮರೆಮಾಚುವ ಹುನ್ನಾರ ನಡೆಯುತ್ತ ಬಂದಿದೆ ಎಂದು ಆರೋಪಿಸಿರುವ ಅವರು, ಹೀಗೆಯೇ ಮುಂದುವರಿದರೆ ಭಾರತ ಸ್ವಾತಂತ್ರ್ಯ ಇತಿಹಾಸದಲ್ಲಿ ಕೊಡಗು ಕಣ್ಮರೆಯಾಗಲಿದೆ. ಈ ನಿಟ್ಟಿನಲ್ಲಿ ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳು ಶಾಶ್ವತವಾಗಿ ಜನಮಾನಸದಲ್ಲಿ ಉಳಿಯುವಂತೆ ಮಾಡಲು ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ನಿಟ್ಟಿನಲ್ಲಿ ಮೊದಲ ಹಂತದಲ್ಲಿ, ಮಡಿಕೇರಿಯ ಪ್ರಮುಖ ಸ್ಥಳದಲ್ಲಿ ಪಂದ್ಯಂಡ ಬೆಳ್ಯಪ್ಪ ಹಾಗೂ ಸೀತಮ್ಮ ಬೆಳ್ಯಪ್ಪ ನವರ ಪರಿಚಯ ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರವನ್ನು…

Read More

ವಿರಾಜಪೇಟೆ ಜೂ.29 NEWS DESK : ಮಾದಕ ವ್ಯಸನ ಕೇವಲ ವ್ಯಕ್ತಿಯನ್ನಷ್ಟೇ ಹಾಳು ಮಾಡುವುದಿಲ್ಲ. ಕುಟುಂಬ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತದೆ ಎಂದು ವಿರಾಜಪೇಟೆ ವಿಭಾಗದ ಆರಕ್ಷಕ ಉಪ ಅಧೀಕ್ಷಕರಾದ ಮೋಹನ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಆರಕ್ಷಕ ಇಲಾಖೆ ಮತ್ತು ಕಾವೇರಿ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಅಂತರ್ ರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮ ಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಪ್ರಸ್ತುತ ಸಮಾಜದ ಯುವ ವರ್ಗವು ಮಾದಕವಸ್ತು ಸೇವನೆಗೆ ದಾಸರಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಮಾದಕದ್ರವ್ಯ ವ್ಯಸನಿಯಾದ ವ್ಯಕ್ತಿಯನ್ನು ಕುಟುಂಬ ತ್ಯಜಿಸುತ್ತದೆ.ಅಲ್ಲದೆ ಸಮಾಜದಿಂದ ಧಿಕ್ಕರಿಸುವಂತನಾಗುತ್ತಾನೆ.ಇದು ಜೇಡ ಬಲೆಯಂತೆ ಸುಳಿಯಲ್ಲಿ ಸಿಲುಕಿದ ವ್ಯಕ್ತಿ ಹೊರಬರಲು ಹರ ಸಹಾಸ ಪಡುವ ಪ್ರಮೇಯ ಎದುರಾಗುತ್ತದೆ. ಮಾದಕದ್ರವ್ಯ ಮತ್ತು ವಸ್ತುಗಳ ಉಪಯೋಗ ಹಾಗೂ ಮಾರಾಟ ಕಾನೂನು ಬಾಹಿರವಾಗಿದೆ. ವ್ಯಸನದ ಆರಂಭದಲ್ಲೇ ತ್ಯಜಿಸುವ ಮನಸ್ಸು ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ವಿರಾಜಪೇಟೆ ವೃತ್ತ ನಿರೀಕ್ಷ ಶಿವರುದ್ರ…

Read More

ಮಡಿಕೇರಿ ಜೂ.29 NEWS DESK  : ಕೊಡಗು ಪತ್ರಕರ್ತರ ಸಂಘ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಜು.1 ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ಪತ್ರಿಕಾ ದಿನಾಚರಣೆ ನಡೆಯಲಿದೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್ ಅವರ ಅಧ್ಯಕ್ಷತೆಯಲ್ಲಿ ಬೆಳ್ಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಮ್ಯಾನೆಂಜಿಂಗ್‌ ಟ್ರಸ್ಟಿ ಎಂ.ಪಿ.ಕೇಶವ ಕಾಮತ್‌ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಸಾಹಿತಿಗಳು, ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ ದೇರ್ಲ ಆಗಮಿಸಲಿದ್ದಾರೆ. ಗಡಿನಾಡ ಸಂಚಾರಿ ಸಂಪಾದಕ ಟಿ.ಪಿ.ರಮೇಶ್ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಹಿರಿಯ ಪತ್ರಕರ್ತರಾದ ಶಕ್ತಿ ದಿನಪತ್ರಿಕೆಯ ಸಂಪಾದಕರಾದ ಜಿ. ಚಿದ್ವಿಲಾಸ್‌, ಗಡಿನಾಡ ಸಂಚಾರಿ ಸಂಪಾದಕ ಟಿ.ಪಿ.ರಮೇಶ್ ,ಸುಂಟಿಕೊಪ್ಪದ ಸಂಯುಕ್ತ ಕರ್ನಾಟಕ ವರಿಗಾರರಾದ ಕೆ.ಹೆಚ್.‌ಶಿವಣ್ಣ, ಗೋಣಿಕೊಪ್ಪಲು ಸುದ್ದಿ ಸಂಸ್ಥೆ ಸಂಪಾದಕ ಟಿ.ಎಲ್.‌ ಶ್ರೀನಿವಾಸ್‌ ಹಾಗೂ ಸೋಮವಾರಪೇಟೆ ವಿಜಯ ಕರ್ನಾಟಕ ವರದಿಗಾರ ತೇಲಪಂಡ ಕವನ್‌ ಕಾರ್ಯಪ್ಪ ಇವರುಗಳನ್ನು ಸನ್ಮಾನಿಸಲಾಗುವುದು ಎಂದು ಕೊಡಗು…

Read More

ಮಡಿಕೇರಿ ಜೂ.29 NEWS DESK : ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ‘ಗ್ಲಾಸ್ ಬ್ರಿಡ್ಜ್’ಗಳನ್ನು ಸೆಪ್ಟೆಂಬರ್, 15 ರವರೆಗೆ ಸ್ಥಗಿತಗೊಳಿಸುವಂತೆ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೆಪ್ಟೆಂಬರ್, 15 ರವರೆಗೆ ಗ್ಲಾಸ್ ಬ್ರಿಡ್ಜ್ ಸ್ಥಗಿತ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಿಂದ ಆದೇಶ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಜಿಲ್ಲೆಯಲ್ಲಿ ಯಾವುದೇ ರೀತಿಯ ಸುರಕ್ಷತೆ ಇಲ್ಲದೆ ಗ್ಲಾಸ್ ಬ್ರಿಡ್ಜ್‍ಗಳ ನಿರ್ಮಾಣ ಮಾಡಲಾಗಿದೆ. ಸುರಕ್ಷತೆ ಇಲ್ಲದಿರುವ ಗ್ಲಾಸ್ ಬ್ರಿಡ್ಜ್‍ಗಳಿಗೆ ಪಿಡಿಒಗಳು ಹೇಗೆ ಎನ್‍ಒಸಿ ನೀಡುತ್ತಾರೆ. ಸಭೆಯ ನಡಾವಳಿ ಮಾಡಿಕೊಂಡು ಎನ್‍ಒಸಿ ನೀಡಿದರೆ ಸಾಕೆ, ಸುರಕ್ಷತೆ ಬೇಡವೇ ಎಂದು ಜಿಲ್ಲಾಧಿಕಾರಿ ಅವರು ಪ್ರಶ್ನಿಸಿದರು. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ‘ಗ್ಲಾಸ್ ಬ್ರಿಡ್ಜ್’ ವೀಕ್ಷಣೆಗೆ ಭೇಟಿ ನೀಡುವುದರಿಂದ ಏನಾದರೂ ತೊಂದರೆಯಾದಲ್ಲಿ ಯಾರೂ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ ಎಂದು ಪಂಚಾಯತ್ ರಾಜ್ ಅಧಿಕಾರಿಗಳಿಗೆ ಎಚ್ಚರಿಸಿದರು. ಜಿಲ್ಲೆಯಲ್ಲಿ ಉತ್ತಮ…

Read More