ಮಡಿಕೇರಿ ಜೂ.18 NEWS DESK : ದಕ್ಷಿಣ ಭಾರತದ ಅತ್ಯಂತ ಪವಿತ್ರ ಧಾರ್ಮಿಕ ಕ್ಷೇತ್ರವಾದ ಕಾವೇರಿ ತ್ರಿವೇಣಿ ಸಂಗಮದಲ್ಲಿ ಜಲಕ್ರೀಡೆಗೆ ಯಾವ ಕಾರಣಕ್ಕೂ ಅವಕಾಶ ನೀಡಬೇಡಿ ಎಂದು ಪೊಲೀಸರು ಮತ್ತು ಭಗಂಡೇಶ್ವರ ದೇವಾಲಯ ಸಿಬ್ಬಂದಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಸೂಚಿಸಿದ್ದಾರೆ. ಭಾಗಮಂಡಲ ಮೇಲ್ಸೇತುವೆ ವೀಕ್ಷಣೆಯ ಸಂದರ್ಭದಲ್ಲಿ ತ್ರಿವೇಣಿ ಸಂಗಮದಲ್ಲಿ ಈಜಾಡುತ್ತಿದ್ದ ಪ್ರವಾಸಿಗರನ್ನು ಕಂಡು ಗರಂ ಆಗಿ ಸಿಬ್ಬಂದಿ ವರ್ಗದವರನ್ನು ತರಾಟೆಗೆ ತೆಗೆದುಕೊಂಡರು. ತ್ರಿವೇಣಿ ಸಂಗಮದಲ್ಲಿ ಧಾರ್ಮಿಕ ಜಲಕ್ರಿಡೆ ನಡೆಸುತ್ತಿದ್ದ ಪ್ರವಾಸಿಗರಿಗೆ ಕ್ಷೇತ್ರದ ಪಾವಿತ್ರ್ಯತೆ ಬಗ್ಗೆ ತಿಳಿಸಿ ಮನವರಿಕೆ ಮಾಡಿದರು. ತ್ರಿವೇಣಿ ಸಂಗಮದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಹೊರತುಪಡಿಸಿ ಬೇರೆ ಯಾವುದೇ ರೀತಿಯಲ್ಲಿ ವಾತಾವರಣ ನಿರ್ಮಾಣವಾಗಬಾರದು ಎಂದರು. ಸಿಬ್ಬಂದಿಗಳು ಕಾವಲು ಕಾಯುವಂತೆ ನಿರ್ದೇಶನ ನೀಡಿದ ಪೊನ್ನಣ್ಣ, ಹೆಚ್ಚಿನ ಸಿಬ್ಬಂದಿ ಅವಶ್ಯಕತೆ ಇದ್ದರೆ ಒದಗಿಸುವುದಾಗಿ ತಿಳಿಸಿದರು. ಪ್ರವಾಸಿಗರಿಗೆ ಈ ನಿಟ್ಟಿನಲ್ಲಿ ಮಾಹಿತಿ ನೀಡಲು ತಿಳುವಳಿಕೆ ಫಲಕ ಅಳವಡಿಸುವಂತೆ ಸಬ್ ಇನ್ಸ್ಪೆಕ್ಟರ್ಗೆ ಸೂಚನೆ ನೀಡಿದರು. ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಪೊನ್ನಣ್ಣ…
ಲೇಖಕ: admin
ಮಡಿಕೇರಿ ಜೂ.18 NEWS DESK : ವಿರಾಜಪೇಟೆ ಪುರಸಭೆ ವ್ಯಪ್ತಿಯಲ್ಲಿ ಜೂ.19 ರಂದು ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ. ವಿರಾಜಪೇಟೆಯ ಕಾವೇರಿ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ರಾಜಾ ಹಾಗೂ ಎಲ್ಲಾ ಅಧಿಕಾರಿಗಳನ್ನೊಳಗೊಂಡು ಸಭೆ ನಡೆಯಲಿದ್ದು, ಪುರಸಭೆ ವ್ಯಾಪ್ತಿಯ ಎಲ್ಲಾ ನಾಗರೀಕರು ಆಗಮಿಸುವಂತೆ ಕೋರಿದೆ.
ಬೆಂಗಳೂರು ಜೂ.18 NEWS DESK : ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ ವಿಜಯ ಕುಮಾರ್ (40) ಅವರ ಅವಲಂಬಿತ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಐದು ಲಕ್ಷ ರೂ.ಗಳ ಪರಿಹಾರವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕಳೆದ ಎಂಟು ವರ್ಷಗಳಿಂದ ವಾಹನ ಚಾಲಕರಾಗಿ ಕುವೈತ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅನಿವಾಸಿ ಭಾರತೀಯ ವಿಜಯ ಕುಮಾರ್ ಅವರ ಕುಟುಂಬದಲ್ಲಿ ಅವರ ಅಣ್ಣ ತಮ್ಮಂದಿರುವ ಸೇರಿದಂತೆ 8 ಜನ ಅವಲಂಬಿತರಿದ್ದಾರೆ. ಇವರ ಜೀವನ ನಿರ್ವಹಣೆ ದುಸ್ತರವಾಗುವುದರಿಂದ ಕೇರಳ ಸರ್ಕಾರ ಅಗ್ನಿ ದರುಂತದಲ್ಲಿ ಮೃತರ ಕುಟಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿರುವಂತೆಯೇ ರಾಜ್ಯ ಸರ್ಕಾರವೂ ಆರ್ಥಿಕ ನೆರವು ಘೋಷಿಸಬೇಕೆಂದು ರಾಜ್ಯ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ: ಆರತಿ ಕೃಷ್ಣ ಅವರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗಳು ಮೃತ ವಿಜಯಕುಮಾರ್ ಕುಟುಂಬಕ್ಕೆ ಐದು ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒದಗಿಸಲು ಸೂಚಿಸಿದ್ದಾರೆ.
ಮಡಿಕೇರಿ ಜೂ.18 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದ ಯದುವೀರ್ ಒಡೆಯರ್ ಅವರನ್ನು ಕೊಡಗು ಜಿಲ್ಲಾ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾ ಸನ್ಮಾನಿಸಿ ಅಭಿನಂದಿಸಿತು. ಮೈಸೂರಿನ ಕುವೆಂಪು ನಗರದಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರ ನೇತೃತ್ವದ ನಿಯೋಗ ಸಂಸದ ಯದುವೀರ್ ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿ, ಗೆಲುವಿನ ಹರ್ಷವನ್ನು ಹಂಚಿಕೊಂಡಿತು. ಈ ಸಂದರ್ಭ ಮಾತನಾಡಿದ ಯದುವೀರ್ ಅವರು ಗೆಲುವಿಗಾಗಿ ಶ್ರಮಿಸಿದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಕೊಡಗು ಜಿಲ್ಲೆಯ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದ ಅವರು, ಜಿಲ್ಲೆಯಲ್ಲಿ ಸಂಸದರ ಕಚೇರಿ ತೆರೆದು ಜನರ ಅಹವಾಲುಗಳನ್ನು ಸ್ವೀಕರಿಸಲಾಗುವುದು ಎಂದರು. ಏನೇ ಸಮಸ್ಯೆಗಳಿದ್ದರೂ ತಮ್ಮ ಆಪ್ತ ಸಹಾಯಕರ ಮೂಲಕ ನನ್ನ ಗಮನ ಸೆಳೆಯಿರಿ ಎಂದು ತಿಳಿಸಿದರು. ಅಪ್ರು ರವೀಂದ್ರ ಮಾತನಾಡಿ ನೂತನ ಸಂಸದರಿಂದ ಕೊಡಗಿನ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಬಂದಿದೆ, ಅಭಿವೃದ್ಧಿ ಕಾರ್ಯಗಳಿಗೆ…
ಸೋಮವಾರಪೇಟೆ ಜೂ.18 NEWS DESK : ಕೊಡಗು ಜಿಲ್ಲಾ ವೀರಶೈವ ಲಿಂಗಾಯತ ಜಂಗಮ ಅರ್ಚಕರ ಸಂಘದ ವತಿಯಿಂದ ಲೋಕ ಕಲ್ಯಾಣಕ್ಕಾಗಿ ವರದ ಶಂಕರ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಪಟ್ಟಣದ ವಿರಕ್ತ ಮಠದ ಆವರಣದಲ್ಲಿ ಸಂಘದ ಕಾರ್ಯದರ್ಶಿ ಬಸವ ಕುಮಾರ ಶಾಸ್ತ್ರಿ ಪುರೋಹಿತ್ವದಲ್ಲಿ ಅರ್ಚನೆ, ಅಷ್ಟೋತ್ತರ ಹಾಗೂ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಸಂಘದ ಅಧ್ಯಕ್ಷ ಎಫ್.ಸಿ.ಹಿರೇಮಠ್, ನಾಡಿನೆಲ್ಲೆಡೆ ಸುಭಿಕ್ಷೆ ನೆಲೆಸಬೇಕು, ಶಾಂತಿ, ನೆಮ್ಮದಿ ಇರಬೇಕು. ಕಾಲಕಾಲಕ್ಕೆ ಮಳೆ, ಬೆಳೆ ಚೆನ್ನಾಗಿ ಆಗಬೇಕು ಎಂದು ಲೋಕ ಕಲ್ಯಾಣಕ್ಕಾಗಿ ಪೂಜೆ ಸಲ್ಲಿಸಲಾಗಿದೆ ಎಂದರು. ಸಂಘದ ಉಪಾಧ್ಯಕ್ಷ ಅಮ್ಮತ್ತಿ ಮಹೇಶ್, ಖಜಾಂಚಿ ಅಭಿಮಠ ಮಹೇಶ್, ಪದಾಧಿಕಾರಿಗಳಾದ ಚಂದ್ರಶೇಖರ್, ವೀರಯ್ಯ, ನಂದೀಶ್, ತ್ರಿಶಂಕು ಕುಮಾರ್ ಸೇರಿದಂತೆ ಜಿಲ್ಲೆಯ ವಿವಿಧೆಡೆಯ ಅರ್ಚಕರುಗಳು ಪಾಲ್ಗೊಂಡಿದ್ದರು.
ಮಡಿಕೇರಿ ಜೂ.18 NEWS DESK : ಮಡಿಕೇರಿಯ ವಿಂಗ್ಸ್ ಆಫ್ ಪ್ಯಾಶನ್ ಸಂಸ್ಥೆಯ ನೃತ್ಯ ಸಂಯೋಜಕಿ ಹಾಗೂ ನಿರ್ದೇಶಕಿ ಪ್ರೀತಕೃಷ್ಣ ಅವರಿಗೆ ಗೋಲ್ಡನ್ ಕೊರಿಯೋಗ್ರಾಫರ್ ಪ್ರಶಸ್ತಿ ಲಭಿಸಿದೆ. ವಾವ್ ಸಿನಿಮಾಸ್ ಚಾನಲ್ ವತಿಯಿಂದ ಬೆಂಗಳೂರಿನ ಸ್ಫೂರ್ತಿಧಾಮ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ “ವಾವ್” ಸಿನಿಮಾದ ನಿರ್ದೇಶಕ, ನಿರ್ಮಾಪಕ ಅವಿನಾಶ್, ಬಿಗ್ ಬಾಸ್ ಸೀಸನ್-4 ವಿನ್ನರ್ ಪ್ರಥಮ್, ನೃತ್ಯ ಸಂಯೋಜಕರಾದ ಜಗ್ಗಿ, ಶಶಿ, ಭೂಷಣ್, ವರುಣ್, ರವಿ ಮೋಹನ್ ಮತ್ತಿತರರು ಪ್ರೀತಕೃಷ್ಣಾಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಮಡಿಕೇರಿ ಜೂ.18 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ವಾರ್ಷಿಕ ಮಹಾಸಭೆಯು ಜೂ.30 ರಂದು ಸಂಘದ ಅಧ್ಯಕ್ಷೆ ಗೌರು ಎಂ. ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿರಾಜಪೇಟೆಯ ಸೇಂಟ್ ಆನ್ಸ್ ಶಾಲೆಯ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಸಭೆಗೆ ಸರ್ವ ಸದಸ್ಯರು ಹಾಜರಾಗುವಂತೆ ಕೊಡಗು ಜಿಲ್ಲಾ ಕಿವುಡರ ಸಂಘದ ಆಡಳಿತ ಮಂಡಳಿ ಕೋರಿದೆ.
ಕೂಡಿಗೆ ಜೂ.18 NEWS DESK : ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ಹಾಗೂ ಹುಲುಗುಂದ ವ್ಯಾಪ್ತಿಯ ಹಿಂದೂ ರುದ್ರಭೂಮಿಗೆ ಧರ್ಮಸ್ಥಳ ಸಂಘದ ವತಿಯಿಂದ ಸಿಲಿಕಾನ್ ಚೇಂಬರ್ ಮಂಜೂರಾತಿ ಪತ್ರವನ್ನು ನೀಡಲಾಯಿತು. ಚಿಕ್ಕತ್ತೂರು ಕಾರ್ಯಕ್ಷೇತ್ರದ ವತಿಯಿಂದ ಹುಲಗುಂದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 1,51,630 ರೂ. ಮಂಜೂರಾತಿ ಪತ್ರವನ್ನು ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷ ಭಾಸ್ಕರ್ ನಾಯಕ್ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭ ಮಾತನಾಡಿದ ಧರ್ಮಸ್ಥಳ ಸಂಘದ ಯೋಜನಾಧಿಕಾರಿ ರೋಹಿತ್, ಪರಮಪೂಜ್ಯ ಡಾ. ಡಿ.ವೀರೇಂದ್ರ ಹೆಗಡೆಯವರ ಆಶೀರ್ವಾದದಿಂದ ಕೊಡಗು ಜಿಲ್ಲೆಯ ಸಮುದಾಯ ಭವನ, ಶಾಲೆಗಳ ದುರಸ್ತಿ, ಮೃತಪಟ್ಟವರಿಗೆ ಧನಸಹಾಯ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ನೀಡುತ್ತ ಬರಲಾಗುತ್ತಿದೆ. ಅದೇ ರೀತಿ ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ಹಾರಂಗಿ-ಹುಲಗುಂದ ಗ್ರಾಮದ ಹಿಂದೂರುದ್ರ ಭೂಮಿಗೆ 1,51,630 ರೂ ವೆಚ್ಚದಲ್ಲಿ ಆದೇಶ ಪತ್ರವನ್ನು ನೀಡಲಾಗಿದೆ ಎಂದು ತಿಳಿಸಿದರು. ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷ ಭಾಸ್ಕರ್ ನಾಯಕ್ ಮಾತನಾಡಿ, ಹಾರಂಗಿ-ಹುಲಗುಂದ ಗ್ರಾಮದ ಹಿಂದೂ ರುದ್ರ ಭೂಮಿಗೆ ಶವ ಸುಡುವ ಸಿಲಿಕಾನ್…
ಮಡಿಕೇರಿ ಜೂ.18 NEWS DESK : ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ(ಐಬಿಪಿಎಸ್) ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್ಗಳಲ್ಲಿ ಖಾಲಿಯಿರುವ 9,995 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಜೂನ್ 27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ರಾಜ್ಯದ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲಿಷ್ ಜತೆಗೆ ಕಳೆದ ಬಾರಿಯಂತೆ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಸ್ಟೇಲ್-1 ಹುದ್ದೆಗಳಿಗೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶವನ್ನು ಐಬಿಪಿಎಸ್ ನೀಡಿದೆ. ಕಳೆದ ಬಾರಿ 8,622 ಹುದ್ದೆಗಳಿಗೆ ನೇಮಕ ನಡೆಸಿದ ಐಬಿಪಿಎಸ್ ಈ ಬಾರಿ 9,995 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದೆ. ರಾಜ್ಯದಲ್ಲಿ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕ ನಡೆಯಲಿದೆ. ರಾಜ್ಯದ ಎರಡು ಬ್ಯಾಂಕುಗಳಲ್ಲಿ 586 ಹುದ್ದೆಗಳು ಖಾಲಿ ಇವೆ. ಇದರಲ್ಲಿ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಒಟ್ಟು 200…
ಮಡಿಕೇರಿ ಜೂ.17 NEWS DESK : ಕಾಡಾನೆಗಳ ಹಿಂಡು ಮನೆಯ ಅಂಗಳದಲ್ಲಿ ದಾಂಧಲೆ ನಡೆಸಿ, ಹೂ ಕುಂಡಗಳನ್ನು ಹಾನಿಗೊಳಿಸಿದ್ದಲ್ಲದೆ, ಮನೆಯ ಒಳಕ್ಕೆ ಮರಿಯಾನೆಗಳು ನುಗ್ಗಲು ಯತ್ನಿಸಿದ ಘಟನೆ ಗುಹ್ಯ ಗ್ರಾಮದಲ್ಲಿ ನಡೆದಿದೆ. ಗುಹ್ಯ ಗ್ರಾಮದ ಮೂಕೊಂಡ ಸುಬ್ರಮಣಿ ಎಂಬವರ ಕಾಫಿ ತೋಟದಲ್ಲಿ ಮರಿಯಾನೆಗಳೂ ಸೇರಿದಂತೆ ಆರಕ್ಕೂ ಹೆಚ್ಚು ಕಾಡಾನೆಗಳು ಬಿಡುಬಿಟ್ಟು ದಾಂಧಲೆ ನಡೆಸಿವೆ. ಅಲ್ಲದೆ ಕೃಷಿ ಫಸಲುಗಳನ್ನು ನಾಶಗೊಳಿಸಿವೆ. ರಾತ್ರಿ ಮನೆಯಂಗಳಕ್ಕೆ ಬಂದ ಕಾಡಾನೆಗಳ ಹಿಂಡು ಮನೆಯ ಅಂಗಳದಲ್ಲಿದ್ದ 20ಕ್ಕೂ ಅಧಿಕ ಹೂ ಕುಂಡಗಳನ್ನು ತುಳಿದು ಧ್ವಂಸಗೊಳಿಸಿವೆ. ಗುಹ್ಯ ಭಾಗದಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿಯಿಂದಾಗಿ ರಾತ್ರಿ ಮನೆಯಲ್ಲಿ ನಿದ್ರೆ ಮಾಡಲು ಭಯವಾಗುತ್ತಿದೆ. ಸಂಜೆ ಮನೆಯಿಂದ ಹೊರ ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿ ಎಂದು ಮೂಕೊಂಡ ಸುಬ್ರಮಣಿ ಆತಂಕ ವ್ಯಕ್ತಪಡಿಸಿದ್ದಾರೆ. ಮನೆಯ ಬದಿಯಲ್ಲಿದ್ದ ಪ್ಲಾಸ್ಟಿಕ್ ಚೇರ್ಗಳನ್ನು ಹಾಗೂ ಇನ್ನಿತರ ವಸ್ತುಗಳನ್ನು ಎಳೆದು, ತುಳಿದು ನಾಶಗೊಳಿಸಿದ್ದು, ಮನೆಯ ಪಕ್ಕದಲ್ಲೇ ಕಾಡಾನೆಗಳು ಘೀಳಿಡುತ್ತಿದ್ದವು. ಮರಿಯಾನೆಗಳು ಮನೆಯ ಒಳಕ್ಕೆ ನುಗ್ಗಲು ಯತ್ನಿಸುತ್ತಿದ್ದವು ಎಂದರು. ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಅರಣ್ಯ…






