ಮಡಿಕೇರಿ ಜೂ.18 NEWS DESK : ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ 2024-25ನೇ ಸಾಲಿಗೆ ಅನ್ವಯವಾಗುವಂತೆ ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಮಕ್ಕಳ ಶಿಕ್ಷಣಕ್ಕಾಗಿ ಆರ್ಥಿಕ ನೆರವನ್ನು ನೀಡಲು ನಿರ್ಧರಿಸಿದ್ದು, ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಶಿಕ್ಷಣಕ್ಕಾಗಿ ನೀಡಲಾಗುವ ಆರ್ಥಿಕ ನೆರವನ್ನು ಪ್ರಾಥಮಿಕ ಶಾಲೆಯಿಂದ ಪದವಿ ತರಗತಿಗಳವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಪತ್ರಕರ್ತರ ಮಕ್ಕಳು ಪಡೆಯಲು ಅರ್ಹರಾಗಿರುತ್ತಾರೆ. ನೆರವು ಪಡೆಯಲು ಇಚ್ಛಿಸುವವರು ಅಂಕಪಟ್ಟಿ, ಶಾಲೆಗೆ ಪಾವತಿಸಿದ ಶುಲ್ಕದ ನಕಲು ಪ್ರತಿಯೊಂದಿಗೆ ಅರ್ಜಿಯನ್ನು ದಿನಾಂಕ 26-06-2024ರ ಒಳಗಾಗಿ ಸಲ್ಲಿಸಲು ಕೋರಲಾಗಿದೆ. ಅರ್ಜಿಗಳನ್ನು ‘ಮ್ಯಾನೇಜಿಂಗ್ ಟ್ರಸ್ಟಿ, ಕೊಡಗು ಪತ್ರಿಕಾ ಭವನ ಟ್ರಸ್ಟ್, ಪತ್ರಿಕಾ ಭವನ, ಕೈಗಾರಿಕಾ ಬಡಾವಣೆ, ಮಡಿಕೇರಿ-571201’ ಈ ವಿಳಾಸಕ್ಕೆ ಕಳುಹಿಸಿಕೊಡಬೇಕೆಂದು ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ತಿಳಿಸಿದ್ದಾರೆ.
ಲೇಖಕ: admin
ವಿರಾಜಪೇಟೆ ಜೂ.18 NEWS DESK : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಹಾಗೂ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಸಿಎಸ್ಆರ್ ಮತ್ತು ಸುಸ್ಥಿರ ಅಭಿವೃದ್ದಿ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ನಿರ್ವಹಣಾ ಶಾಸ್ತ್ರ ವಿಭಾಗದ ಮುಖಸ್ಥ ಆರ್.ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸಿಸುವ ಸಾಮಾಜಿಕ ಜವಾಬ್ದಾರಿಯನ್ನು ಬೆಳಿಸಿಕೊಳ್ಳುವುದರ ಮೂಲಕ ದೇಶದ ಸುಸ್ಥಿರ ಅಭಿವೃದ್ಧಿಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸಂತ ಅನ್ನಮ್ಮ ಕಾಲೇಜಿನ ಐಕ್ಯೂಎಸಿ ಸಂಚಾಲಕರ ಹಾಗೂ ಸಹಾಯಕ ಪ್ರಾಧ್ಯಾಪಕರಾದ ಬಿ.ಡಿ.ಹೇಮಾ, ಮಾತನಾಡಿ ವಿದ್ಯಾರ್ಥಿಗಳಿಗೆ ಕಂಪನಿಗಳು ತಮ್ಮ ಲಾಭಾಂಶವನ್ನು ಕಂಪನಿಗಳ ಸಾಮಾಜಿಕ ಜವಾಬ್ದಾರಿಗಳ ಮೂಲಕ ವಿನಿಯೋಗಿಸಿ ಆರ್ಥಿಕ ಹಾಗೂ ಸಾಮಾಜಿಕ ಸುಸ್ಥಿರ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿವೆ ಎಂಬುದನ್ನು ತಿಳಿಸಿದರು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಹೆಚ್.ಎಸ್.ವೇಣುಗೋಪಾಲ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. ಕಾರ್ಯಕ್ರಮದ ನಿರ್ವಹಣೆಯನ್ನು ಅಂತಿಮ ಬಿಬಿಎ ವಿದ್ಯಾರ್ಥಿನಿ ಶೃತಿಕಾ ನಡಿಸಿಕೊಟ್ಟರು. ಉಪನ್ಯಾಸಕರಾದ ಸುಮಯ್ಯ ತಬಸುಮ್ ಸಂಪೂನ್ಮೂಲ ವ್ಯಕ್ತಿಯ…
ಸೋಮವಾರಪೇಟೆ ಜೂ.18 NEWS DESK : ರೋಟರಿ ಕ್ಲಬ್ ಆಫ್ ಸೋಮವಾರಪೇಟೆ ಹಿಲ್ಸ್ನ ಪದಗ್ರಹಣ ಕಾರ್ಯಕ್ರಮ ರೋಟರಿ ಭವನದಲ್ಲಿ ನಡೆಯಿತು. 2024-25ನೇ ಸಾಲಿನ ಅಧ್ಯಕ್ಷ ಜೆ.ಕೆ.ಪೊನ್ನಪ್ಪ ಹಾಗೂ ಕಾರ್ಯದರ್ಶಿ ಕೆ.ಡಿ.ಬಿದ್ದಪ್ಪ ಮತ್ತು ಆಡಳಿತ ಮಂಡಳಿ ಸದಸ್ಯರಿಗೆ ರೋಟರಿ ಚಾಮರಾಜನಗರ ಮಾಜಿ ಜಿಲ್ಲಾ ರಾಜ್ಯಪಾಲ ಡಾ. ಆರ್.ಎಸ್.ನಾಗಾರ್ಜುನ ಪದಗ್ರಹಣ ನೆರವೇರಿಸಿದರು. ನಂತರ ಮಾತನಾಡಿ ಅವರು, ಕೆಲವೇ ಜನರಿಗೆ ತಲುಪುವ ಯೋಜನೆಗಿಂತ ಸಾವಿರಾರು ಜನರಿಗೆ ಸೇವೆ ನೀಡುವಂತಹ ಕೆಲಸ ಮಾಡಬೇಕೆಂದು ಹೇಳಿದರು. ರೋಟರಿ ಸಂಸ್ಥೆಗಳು ದೊಡ್ಡ ಕನಸ್ಸುಗಳನ್ನು ಇಟ್ಟುಕೊಂಡು ಕೆಲಸ ಮಾಡಬೇಕು ಎಂದು ಕರೆ ನೀಡಿದ ಅವರು ಚಾಮರಾಜನಗರದಲ್ಲಿ ರೋಟರಿ ಸಂಸ್ಥೆ ವತಿಯಿಂದ ಡಯಾಲೀಸಿಸ್ ಘಟಕ ಕಾರ್ಯನಿರ್ವಹಿಸುತ್ತಿದೆ. ಸೋಮವಾರಪೇಟೆ ರೋಟರಿ ಸಂಸ್ಥೆ ದೊಡ್ಡ ಕನಸ್ಸು ಕಾಣಲೇಬೇಕು. ಒಳ್ಳೆ ಕಾರ್ಯಕ್ಕೆ ದಾನಿಗಳು ಕೈಜೋಡಿಸಲಿದ್ದಾರೆ ಎಂದು ಹೇಳಿದರು. ಪ್ರಪಂಚದಲ್ಲಿ 119 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ರೋಟರಿ ಪ್ರಮುಖ ಅಂತಾರಾಷ್ಟ್ರೀಯ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಸಾಕಷ್ಟು ಅಂತಾರಾಷ್ಟ್ರೀಯ ಸಂಸ್ಥೆಗಳು ತಮ್ಮ ಯೋಜನೆಗಳಿಗೆ ರೋಟರಿ ಸೇವಾ ಸಂಸ್ಥೆಯ ಮಾದರಿಯನ್ನು ಅನುಸರಿಸುತ್ತಿರುವುದನ್ನು…
ಸಿದ್ದಾಪುರ ಜೂ.18 NEWS DESK : ವಿದ್ಯಾರ್ಥಿಗಳು ತಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು ಅವಕಾಶ ಸಿಕ್ಕಾಗ ಬಳಸಿಕೊಂಡು ಸಾಧನೆ ಮಾಡಬೇಕು ಎಂದು ಸಿದ್ದಾಪುರ ಸಂತ ಜೋಸೆಫ್ ದೇವಾಲಯದ ಧರ್ಮಗುರು ಮೈಕಲ್ ಮರಿ ತಿಳಿಸಿದರು. ಸಿದ್ದಾಪುರ ಎಸ್.ಜೆ.ಸಿ.ಕ್ರಿಕೆಟರ್ಸ್ ವತಿಯಿಂದ ಸಂತ ಜೋಸೆಫ್ ದೇವಾಲಯದಲ್ಲಿ ನಡೆದ ಧರ್ಮ ಕೇಂದ್ರದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಅಭಿನಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಈ ರೀತಿಯ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ. ಇದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಪ್ರೇರೇಪಿಸಿದಂತಾಗುತ್ತದೆ ಎಂದರು. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಹಾಗೂ ಕೊಡಗಿನಲ್ಲಿ ಪ್ರಥಮ ಸ್ಥಾನ ಪಡೆದ ನೆಲ್ಯಹುದಿಕೇರಿಯ ಜಾನ್ಸನ್ ಅವರ ಪುತ್ರಿ ಚರೀಷ್ಮ ಶೇ.85 ಅಂಕ ಪಡೆದ ಪಡೆದಿದ್ದಾಳೆ. ದ್ವಿತೀಯ ಪಿಯುಸಿ ನ ಜೀವಿನ್, ಜೋವಿಟ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಹೆಚ್ಚು ಅಂಕ ಪಡೆದ ಅನುಷ,ಶಿನೋಯ್,ದಿಯಾ ಜೋಸೆಫ್ ಅವರನ್ನು ಸನ್ಮಾನಿಸಿ ಪ್ರಶಸ್ತಿಪತ್ರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜೋಶ್ ಕುರಿಯನ್, ಜಿ.ಪಂ ಸದಸ್ಯ ಜಾನ್ಸನ್, ವಿಜೇಶ್,…
ಮಡಿಕೇರಿ ಜೂ.18 NEWS DESK : ಕೊಡಗಿನ ನಾಪೋಕ್ಲಿನಲ್ಲಿ ಜನಿಸಿ ಭಾರತದ ಮೂಲೆ ಮೂಲೆಯಲ್ಲಿ ಹಾಕಿ ಆಟ ಅಡಿ ತೆರೆಯ ಮರೆಯಲ್ಲಿ ಯಾವ ಪ್ರಚಾರವೂ ಬಯಸದೆ, ಯಾವ ಪದವಿಯನ್ನು ಅಲಂಕರಿಸದ ಅದ್ಭುತ ಆಟಗಾರ ಅರೆಯಡ ರವಿ ಅಯ್ಯಪ್ಪ. ಅರೆಯಡ ಉತ್ತಯ್ಯ ಹಾಗೂ ಗೌರಿ ಕಾಮವ್ವ ( ತಾಮನೆ ಕಂಗಾಂಡ) ಅವರ 5ನೇ ಪುತ್ರನಾಗಿ ರವಿ ಅಯ್ಯಪ್ಪ ಅವರು ಜನಿಸಿದರು. ಶಿಕ್ಷಣ : ಇವರು ತಮ್ಮ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣವನ್ನು ನಾಪೋಕ್ಲಿನಲ್ಲಿ, ಪದವಿ ಪೂರ್ವ ಶಿಕ್ಷಣವನ್ನು ಸರಕಾರಿ ಪದವಿಪೂರ್ವ ಕಾಲೇಜು ನಾಪೋಕ್ಲಿನಲ್ಲಿ ಹಾಗೂ ಕಲೆಯಲ್ಲಿ ಪದವಿಯನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ಪಡೆದರು. ಹಾಕಿ ಪಂದ್ಯಾಟಗಳು : 1974ರಲ್ಲಿ ಭಾರತೀಯ ಸೈನ್ಯದ ಆರ್ಟಿಲರಿಗೆ ಪ್ರವೇಶ ಪಡೆದರು. 1980-84 ವರೆಗೆ ದಕ್ಷಿಣ ಕಮಾಂಡ್ ನ ಹಾಕಿ ಆಟಗಾರನಾಗಿ ಆಡಿದರು. 1985-87 ರವರೆಗೆ ಸರ್ವಿಸಸ್ ಪರ ಹಾಕಿ ಆಡಿದರು. ರಂಗಸ್ವಾಮಿ ಕಪ್ ಆಡಿದ ಅದ್ಭುತ ಆಟಗಾರ. ಭಾರತದ ಆಯ್ಕೆ ಶಿಬಿರ : 1982-83 ರಲ್ಲಿ ಭಾರತದ ಆಯ್ಕೆ ಶಿಬಿರಕ್ಕೆ…
ಮಡಿಕೇರಿ ಜೂ.18 NEWS DESK : ಕಾಡಾನೆಯೊಂದು ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ. ಗ್ರಾ.ಪಂ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಬಾವಿಯನ್ನು ನಿರ್ಮಿಸಲಾಗುತ್ತಿತ್ತು. ಸುಮಾರು 20 ಅಡಿಗಳಷ್ಟು ಆಳವಿದ್ದ ಬಾವಿಗೆ ಸೋಮವಾರ ಮಧ್ಯರಾತ್ರಿ ಕಾಡಾನೆ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಆನೆಯ ಮೃತದೇಹವನ್ನು ಮೇಲೆತ್ತುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಆಹಾರ ಮತ್ತು ನೀರನ್ನು ಹುಡುಕುತ್ತಾ ಕಾಡಾನೆಗಳು ಕೊಡಗಿನ ಗ್ರಾಮೀಣ ಪ್ರದೇಶಗಳಿಗೆ ಲಗ್ಗೆ ಇಡುತ್ತಿವೆ. ಇದರಿಂದ ಕೃಷಿಕ ವರ್ಗ ಅಪಾರ ನಷ್ಟವನ್ನು ಅನುಭವಿಸುತ್ತಿದೆ, ಅಲ್ಲದೆ ಕಾಡಾನೆಗಳು ಅಸಹಜ ಸಾವಿಗೂ ತುತ್ತಾಗುತ್ತಿವೆ. ಕಾಡಾನೆಗಳ ಉಪಟಳ ಮಿತಿ ಮೀರುತ್ತಿದ್ದು, ಗ್ರಾಮಗಳಲ್ಲಿ ಆತಂಕದ ವಾತಾವರಣ ಮೂಡಿದೆ.
ಕುಶಾಲನಗರ, ಜೂ.18 NEWS DESK : ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಪ್ರತಿಭಾ ಅವರು ನಿರ್ಮಿಸಿ ನಿರ್ದೇಶಿಸಿ ತಯಾರಿಸಿರುವ ಸಂಭವಾಮಿ ಯುಗೇ ಯುಗೇ ಚಲನಚಿತ್ರ ಜೂನ್ 21ಕ್ಕೆ ರಾಜ್ಯಾದ್ಯಂತ 100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವುದಾಗಿ ಚಿತ್ರದ ನಿರ್ದೇಶಕ ಚೇತನ್ ಚಂದ್ರಶೇಖರ್ ಶೆಟ್ಟಿ ತಿಳಿಸಿದ್ದಾರೆ. ಕುಶಾಲನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚಿತ್ರದ ಬಗ್ಗೆ ಮಾಹಿತಿ ನೀಡಿದ ಅವರು, ಗ್ರಾಮೀಣ ಸೊಗಡಿನ ಚಿತ್ರ ಇದಾಗಿದ್ದು ಎಲ್ಲಾ ವರ್ಗದ ಪ್ರೇಕ್ಷಕರನ್ನು ರಂಜಿಸುವ ಭರವಸೆಯಿದೆ. ಕಣ್ಣು ಕಾಣದ ತಾಯಿಯೊಬ್ಬಳು ತನ್ನ ಮಕ್ಕಳ ಭವಿಷ್ಯಕ್ಕಾಗಿ ಹೋರಾಡುವ ಕಥೆಯನ್ನು ಒಳಗೊಂಡಿದೆ. ಚಿತ್ರದಲ್ಲಿ ಹಲವು ಹಿರಿಯ ಕಿರಿಯ ಕಲಾವಿದರು ನಟಿಸಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರದ ಉದಯೋನ್ಮುಖ ನಟಿಯಾದ ಮಧುರ ಗೌಡ ನಾಯಕಿಯರಲ್ಲಿ ಒಬ್ಬರಾಗಿ ನಟಿಸಿದ್ದಾರೆ ಎಂದು ತಿಳಿಸಿದ್ದಾರೆ. ಕುಟುಂಬ ಸಮೇತವಾಗಿ ನೋಡಬಹುದಾದ ಹಳ್ಳಿಗಾಡಿನ ಕಥೆ ಚಿತ್ರದಲ್ಲಿ ಅದ್ಭುತವಾಗಿ ಮೂಡಿ ಬಂದಿದೆ ಎಂದು ನಾಯಕ ನಟ ಜಯ ಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದರು. ಹೊಸಬರು ಎನ್ನುವುದಕ್ಕಿಂತ ಚಿತ್ರವನ್ನು ಚಿತ್ರಮಂದಿರದಲ್ಲೇ ನೋಡುವ ಮೂಲಕ ಕನ್ನಡ ಚಿತ್ರರಂಗದ ಉಳಿವಿಗೆ…
ಮಡಿಕೇರಿ ಜೂ.17 : ಪುತ್ತೂರಿನ ಕುಂಬ್ರ ಬಳಿ ಭಾನುವಾರ ನಡೆದ ಕಾರು ಮತ್ತು ಬೊಲೆರೊ ನಡುವಿನ ಅಪಘಾತದಲ್ಲಿ ಮೃತಪಟ್ಟ ವಾಲ್ನೂರು ತ್ಯಾಗತ್ತೂರುವಿನ ತ್ಯಾಗತ್ತೂರು ನಿವಾಸಿಗಳು, ಬಿಜೆಪಿಯ ಸಕ್ರಿಯ ಕಾರ್ಯಕರ್ತರೂ ಆದ ರವೀಂದ್ರ(53) ಹಾಗೂ ಲೋಕೇಶ್ (40) ಅವರ ಅಂತ್ಯ ಸಂಸ್ಕಾರ ಇಂದು ಸ್ವಗ್ರಾಮದಲ್ಲಿ ನಡೆಯಿತು. ಮೃತ ರವೀಂದ್ರ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಮತ್ತು ಲೋಕೇಶ್ ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪುತ್ತೂರು ಬಿಜೆಪಿ ಪ್ರಮುಖ ಅರುಣ್ ಪುತ್ತಿಲ, ತ್ಯಾಗತ್ತೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮನು ಮಹೇಶ, ಉಪಾಧ್ಯಕ್ಷ ಗಗನ್ ಉತ್ತಯ್ಯ, ಸಂಘ ಪರಿವಾರದ ಪ್ರಮುಖರಾದ ಪ್ರದೀಪ್, ರವೀಂದ್ರ ಭುವನೇಂದ್ರ ಮತ್ತಿತರರು ಮೃತ ದೇಹಗಳನ್ನು ತರುವಲ್ಲಿ ಸಂಪೂರ್ಣ ಸಹಕಾರ ನೀಡಿದರು.
ಮಡಿಕೇರಿ ಜೂ.17 NEWS DESK : ಕೊಂಡಂಗೇರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಬಡ ವಿದ್ಯಾರ್ಥಿಗಳಿಗೆ ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಜಿ.ಜಾಶಿರ್ ಮೂರ್ನಾಡು ಹಾಗೂ ಕೊಂಡಂಗೇರಿ ಜೆಡಿಎಸ್ ಮುಖಂಡ ನಜೀರ್ ಆಲಿ ಅವರು ಪುಸ್ತಕಗಳನ್ನು ವಿತರಿಸಿದರು. ಸುಮಾರು 40 ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಪುಸ್ತಕಗಳನ್ನು ನೀಡಲಾಗಿದೆ ಎಂದು ಜಾಶಿರ್ ತಿಳಿಸಿದರು. ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಈ ಸಂದರ್ಭ ಉಪಸ್ಥಿತರಿದ್ದರು.
ಮಡಿಕೇರಿ ಜೂ.17 NEWS DESK : ಸಿದ್ದಾಪುರದ ಕಾಫಿ ತೋಟ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿರುವ ಬೃಹತ್ ಭೂಪರಿವರ್ತನೆಗೆ ಆಡಳಿತ ವ್ಯವಸ್ಥೆಯ ಪರೋಕ್ಷ ಕುಮ್ಮಕ್ಕು ಇದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಸಿದ್ದಾಪುರದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಇಂದು ನಡೆದ ಶಾಂತಿಯುತ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು ಪವಿತ್ರ “ಕೊಡವ ಲ್ಯಾಂಡ್” ಉಳಿಯಬೇಕಾದರೆ ಬೃಹತ್ ಭೂಪರಿವರ್ತನೆ ಪ್ರಕ್ರಿಯೆಗಳು ಸ್ಥಗಿತಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಆಂಧ್ರ ಸೇರಿದಂತೆ ವಿವಿಧ ರಾಜ್ಯಗಳ ಭೂಮಾಫಿಯ ಹಾಗೂ ರಾಜಕೀಯ ಬೆಂಬಲಿಗರು ಭೂಲೋಕದ ಸ್ವರ್ಗವೆಂದೇ ಪರಿಗಣಿಸಲ್ಪಟ್ಟಿರುವ ಕೊಡವ ಭೂಮಿಯನ್ನು ವ್ಯಾಪರೀಕರಣಗೊಳಿಸಲು ಮುಂದಾಗಿದ್ದಾರೆ. ಹಸಿರ ಸುಂದರ ಪ್ರಕೃತಿಯ ಸೊಬಗನ್ನು, ಜಲಮೂಲಗಳನ್ನು ನಾಶಗೊಳಿಸಿ ಬೃಹತ್ ಕಾಂಕ್ರೀಟ್ ಕಟ್ಟಡಗಳ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದಾರೆ. ಭೂಮಿ ಖರೀದಿ ವ್ಯವಹಾರ ಒಂದು ಜೂಜಾಟದಂತೆ ನಡೆಯುತ್ತಿದ್ದು, ಈ ಬೆಳವಣಿಗೆ ಅತ್ಯಂತ ಸೂಕ್ಷ್ಮ ಜನಾಂಗವಾಗಿರುವ ಆದಿಮಸಂಜಾತ ಬುಡಕಟ್ಟು ಜನಾಂಗ ಕೊಡವರ ನಾಶಕ್ಕೂ ಕಾರಣವಾಗಬಹುದು ಎಂದು ಆತಂಕ…






