ಸುಂಟಿಕೊಪ್ಪ ಜೂ.17 NEWS DESK : ನಾಡಿನಾದ್ಯಂತ ತ್ಯಾಗ ಬಲಿದಾನ ಸಂಕೇತವಾದ ಮುಸ್ಲಿಂ ಭಾಂದವರು ಬಕ್ರೀದ್ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಪಟ್ಟಣದ ವಿವಿಧ ಮಸೀದಿಗಳಲ್ಲಿ ಬೆಳಿಗ್ಗಿನಿಂದಲೇ ನೂರಾರು ಸಂಖ್ಯೆಯಲ್ಲಿ ಮುಸ್ಲಿಂ ಭಾಂದವರು ಪಾಲ್ಗೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸುಂಟಿಕೊಪ್ಪ ಪಟ್ಟಣದ ಸುನ್ನಿ ಶಾಫಿ ಜುಮ್ಮ ಮಸ್ಜಿದ್ನಲ್ಲಿ ಮುಸ್ಲಿಯರ್ ಆರೀಫ್ ಸಖಾಫಿ, ಸುನ್ನಿ ಹನಫಿ ಮುಸ್ಲಿಂ ಜಮೀಯಮಸೀದಿ ಮೌಲನಾ ಜುಬ್ಬೇರ್ ಅಜಾರತ್, ಸುನ್ನಿ ಶಾಫಿ ಜುಮಾ ಮಸ್ಜಿದ್ ಧಾರ್ಮಿಕ ಮೌಲವಿ ಮೊಹಮದ್ ಹುಸೈನ್, ಕೂÀಬ್ಬ ಮಸ್ಜಿದ್ ಮೌಲನಾ ಇನಾಂ ಹಾಗೂ ಗದ್ದೆಹಳ್ಳದ ನೂರು ಜುಮ್ಮ ಮಸ್ಜಿದ್ನ ಆಸೀಫ್ ಶಾಖಾಫಿ ಧಾರ್ಮಿಕ ಪ್ರವಚ ನೀಡಿದರು. ನಂತರ ಪರಸ್ಪರು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ನಂತರ ಈದ್ಗಾಗಳಿಗೆ ತೆರಳಿ ಹಿರಿಯರಿಗೆ ಮೌನಾಚರಣೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ಸಲಾಫಿ ಮಸೀದಿಯಲ್ಲಿ ನಿಶಾದ್ ಸ್ವಲಾಹಿ, ಧಾರ್ಮಿಕ ಪ್ರವಚನಗಳನ್ನು ನೇರವೇರಿಸಿದರು.
ಲೇಖಕ: admin
ಮಡಿಕೇರಿ ಜೂ.17 NEWS DESK : ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ನಂದಿಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉಚಿತ ನೋಟ್ ಪುಸ್ತಕ ಹಾಗೂ ಶೈಕ್ಷಣಿಕ ಸಾಮಾಗ್ರಿಗಳನ್ನು ವಿತರಿಸಲಾಯಿತು. ದಾನಿಗಳಾದ ಚೆನ್ನಯ್ಯ ಅವರು ಕೊಡುಗೆಯಾಗಿ ನೀಡಿದ ಪುಸ್ತಕ ಹಾಗೂ ಶೈಕ್ಷಣಿಕ ಸಾಮಾಗ್ರಿಗಳನ್ನು ಶಾಲೆಯ ನೀಡಲಾಯಿತು. ಈ ಸಂದರ್ಭ ಮಾತನಾಡಿದ ಬೆಂಗಳೂರಿನ ಕೆಂಪೇಗೌಡ ಆಸ್ಪತ್ರೆಯ ಡಾ.ಸಂಪತ್, ವಿದ್ಯಾರ್ಥಿಗಳು ತಮ್ಮ ಮನೆಯ ವಾತಾವರವನ್ನು ಸೂಚಿಯಾಗಿಡುವುದರ ಜೊತೆಗೆ ವೈಯಕ್ತಿಕ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಆ ಮೂಲಕ ಉತ್ತಮ ಆರೋಗ್ಯವನ್ನು ಪಡೆಯಬಹುದು ಎಂದು ಸಲಹೆ ನೀಡಿದರು. ಎಲ್ಐಸಿ ವ್ಯವಸ್ಥಾಪಕ ಹಾಗೂ ಪುಸ್ತಕ ದಾನಿ ಚೆನ್ನಯ್ಯ ಮಾತನಾಡಿ, ತಾನು ಇದೇ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, ಇಲ್ಲಿಯ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಗೆ ಸೇವೆ ಸಲ್ಲಿಸುವ ಅವಕಾಶ ದೊರೆತ್ತಿರುವುದು ನನ್ನ ಭಾಗ್ಯ ಎಂದರು. ವಿದ್ಯಾರ್ಥಿ ಸರ್ಕಾರಿ ಶಾಲೆ ಎಂಬ ಕೀಳರಿಮೆ ಹೊಂದದೆ. ಶಾಲೆಯ ಸಿಗುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉನ್ನತ ಸ್ಥಾನದಲ್ಲಿ ಗುರುತಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭ ಪುಸ್ತಕ…
ಮಡಿಕೇರಿ ಜೂ.17 NEWS DESK : ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಸೈಕಲ್ ತುಳಿದು, ಕಾರನ್ನು ಹಗ್ಗದಿಂದ ಎಳೆಯುವ ಮೂಲಕ ರಾಜ್ಯ ಸರ್ಕಾರದ ಬೆಲೆ ಏರಿಕೆಯ ಕ್ರಮವನ್ನು ತೀವ್ರವಾಗಿ ಖಂಡಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಶಾಸಕರುಗಳಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಮಾಜಿ ಎಂಎಲ್ಸಿಗಳಾದ ಸುನಿಲ್ ಸುಬ್ರಮಣಿ, ಎಸ್.ಜಿ.ಮೇದಪ್ಪ ಸೇರಿದಂತೆ ಕಾರ್ಯಕರ್ತರು ಜ.ತಿಮ್ಮಯ್ಯ ವೃತ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ಗೆ ಲೀಟರ್ವೊಂದಕ್ಕೆ ಅನುಕ್ರಮವಾಗಿ 3 ಮತ್ತು 3.50 ರೂ.ಗಳನ್ನು ಹೆಚ್ಚಳ ಮಾಡಿರುವ ಮೂಲಕ, ಜನ ಸಾಮಾನ್ಯರ ಮೇಲೆ ಹೆಚ್ಚಿನ ಹೊರೆ ಹೊರಿಸಿದೆ. ಇದು ಸರ್ಕಾರದ…
ಸೋಮವಾರಪೇಟೆ ಜೂ.17 NEWS DESK : ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ಅಗತ್ಯವೆಂದು ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಅಭಿಪ್ರಾಯ ಪಟ್ಟರು. ಪಟ್ಟಣದ ಎಂ.ಜಿ ರಸ್ತೆಯಲ್ಲಿ ನೂತನವಾಗಿ ಪ್ರಾರಂಭವಾಗಲಿರುವ ನಾಟ್ಯಕಲಾ ನೃತ್ಯ ಶಾಲೆಗೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಭಾಗದ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕಾಗಿದೆ ಆದ್ದರಿಂದ ಇಂಥ ನಾಟ್ಯ ಶಾಲೆಗಳು ಅವಶ್ಯಕ ಎಂದರು. ಪತ್ರಿಕಾ ಭವನದ ಅಧ್ಯಕ್ಷ ಎಸ್.ಮಹೇಶ್ ಮಾತನಾಡಿ, ಇಂದಿನ ಮಕ್ಕಳು ಬಹಳ ಬುದ್ಧಿವಂತರು. ಒಬ್ಬೊರೊಳಗೆ ಒಂದೊಂದು ಪ್ರತಿಭೆಗಳಿರುತವೆ. ಅವುಗಳನ್ನು ಗುರುತಿಸಬೇಕು, ಶಾಲೆಗಳಲ್ಲಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯು ಅವಶ್ಯಕವೆಂದರು. ಇಂದು ದೃಶ್ಯ ಮಾದ್ಯಮಗಳು ಸ್ಪರ್ಧೆಗಳನ್ನು ಆಯೋಜಿಸಿ ಸುಪ್ತವಾಗಿ ಅಡಗಿರುವ ಪ್ರತಿಭೆಗಳನ್ನು ನಾಡಿನಾದ್ಯಂತ ಪರಿಚಯ ಮಾಡುತ್ತಿರುವುದರಿಂದ ಎಲ್ಲರಲ್ಲೂ ಆಸಕ್ತಿ ಹೆಚ್ಚುತ್ತಿದೆ ಎಂದರು. ರಾಷ್ಟ್ರೀಯ ನೃತ್ಯ ತರಬೇತುದಾರ ವಿನೋದ್ ಕರ್ಕೇರಾ ಮಾತನಾಡಿ, ಇಂದು ನೃತ್ಯವೆಂಬುದು ಜೀವನದ ಅವಿಭಾಜ್ಯ ಅಂಗವೆಂಬಂತಾಗಿದೆ ಮಕ್ಕಳಿಂದ ವಯೋವೃದ್ಧರವರೆಗೂ ನೃತ್ಯದ ಬಗ್ಗೆ ಆಸಕ್ತಿ ಹೊಂದಿದ್ದಾರೆ. ಎಲ್ಲಾರೂ ದೃಶ್ಯ ಮಾಧ್ಯಮಗಳಲ್ಲಿ ಬರುವ ನೃತ್ಯ, ಹಾಡು ಮುಂತಾದ…
ನಾಪೋಕ್ಲು ಜೂ.17 NEWS DESK : ಕೊಡಗು-ಮೈಸೂರು ಲೋಕಸಭಾ ಕ್ಷೇತ್ರ ಅತ್ಯಂತ ವಿಸ್ತಾರವಾದ ಕ್ಷೇತ್ರವಾಗಿದ್ದು, ಜಿಲ್ಲೆಯ ನಾಯಕರು ಹಾಗೂ ಕಾರ್ಯಕರ್ತರು ಚುನಾವಣೆ ಗೆಲುವಿಗಾಗಿ ಪ್ರಾಮಾಣಿಕ ಶ್ರಮ ಹಾಕಿದ್ದಾರೆ ಎಂದು ಕ್ಷೇತ್ರದ ನೂತನ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಸಂಸದರಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ ಅವರು, ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ನಾಪೋಕ್ಲಿನ ಭಗವತಿ ಸನ್ನಿಧಿಯ ಸಮುದಾಯ ಭವನದಲ್ಲಿ ನಡೆದ ಕಾರ್ಯಕರ್ತ ಸಭೆಯಲ್ಲಿ ಪಾಲ್ಗೊಂಡು ಮತದಾರರಿಗೆ ಧನ್ಯವಾದ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಚುನಾವಣಾ ಪ್ರಚಾರ ಆರಂಭಿಸಿದ ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿ ಸಭೆ ನಡೆಸಿದ್ದು, ಕಾವೇರಿಯ ಆಶೀರ್ವಾದಿಂದಲೇ ಅಧಿಕಾರ ಸಿಕ್ಕಿದೆ ಎಂದರು. ಚುನಾವಣೆ ಸಂದರ್ಭ ಯಾವ ರೀತಿ ಶ್ರಮ ಹಾಕಿದ್ದೆವೋ ಅದೇ ರೀತಿ ಮುಂದಿನ ಐದು ವರ್ಷಗಳಲ್ಲೂ ಕೆಲಸ ಮಾಡುವುದಾಗಿ ಹೇಳದಿ ಅವರು, ಆದಷ್ಟು ಬೇಗ ಪ್ರಗತಿ ಪರೀಶೀಲನಾ ಸಭೆ ನಡೆಸಿ, ಉಳಿದಿರುವ ಕೆಲಸ ಕಾರ್ಯಗಳತ್ತ ಗಮನ ಹರಿಸುವುದಾಗಿ ಭರವಸೆ ನೀಡಿದರು. ಇದಕ್ಕೂ ಮುನ್ನ ಭಗವತಿ…
ನಾಪೋಕ್ಲು ಜೂ.17 NEWS DESK : ಹಳೆ ತಾಲೂಕು ಶ್ರೀ ಭಗವತಿ ದೇವಾಲಯದ ಸಮುದಾಯ ಭವನದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಆಯೋಜಿಸಿದ ಪಕ್ಷದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತ ಅಭಿನಂದನಾ ಸಮಾರಂಭದಲ್ಲಿ ಕುಂಡ್ಯೋಳಂಡ ಕುಟುಂಬಸ್ಥರಿಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಕುಂಡ್ಯೋಳಂಡ ಕೊಡವ ಕೌಟುಂಬಿಕ ಹಾಕಿ ಉತ್ಸವ-2024 ಹಾಕಿ ಉತ್ಸವ ಗಿನ್ನಿಸಿ ದಾಖಲೆ ಮಾಡಿದ್ದು, ಈ ಉತ್ಸವದದಲ್ಲಿ ಒಡೆಯರು ಭಾಗವಹಿಸಿದ್ದರು. ಚುನಾವಣೆ ನೀತಿ ಸಂಹಿತೆ ಇದ್ದ ಕಾರಣ ಅವರನ್ನು ಗೌರವಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಈ ಕಾರ್ಯಕ್ರಮದಲ್ಲಿ ಆಯೋಗಿಸಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಕುಂಡ್ಯೋಳಂಡ ಕುಟುಂಬಸ್ಥರ ಪರವಾಗಿ ಹಾಕಿ ಕಾರ್ನಿವಲ್ ಸಮಿತಿ ಅಧ್ಯಕ್ಷ ಕುಂಡ್ಯೋಳಂಡ ರಮೇಶ್ ಮುದ್ದಯ್ಯ , ಖಜಾಂಚಿ ವಿಷು ಪೂವಯ್ಯ, ಕಾರ್ಯದರ್ಶಿ ಬಿಪಿನ್, ವಿಜಯ ಮುತ್ತಣ್ಣ, ಬೋಪಣ್ಣ ನೆನಪಿನ ಕಾಣಿಕೆ ನೀಡಿ ಅಭಿನಂದಿಸಿ ಗೌರವಿಸಿದರು. ಈ ಸಂದರ್ಭ ವಿಧಾಮ ಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ, ಮಾಜಿ…
ನಾಪೋಕ್ಲು ಜೂ.17 NEWS DESK : ಹೊದ್ದೂರು ಗ್ರಾ.ಪಂ ಯ ವಾಟೆಕಾಡು ಸ.ಹಿ.ಪ್ರಾ.ಶಾಲೆ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಜನಶಕ್ತಿ ಸಂಸ್ಥೆ ವತಿಯಿಂದ ಉಚಿತ ನೋಡ್ ಪುಸ್ತಕ ವಿತರಣೆ ಮಾಡಲಾಯಿತು. ಸಂಸ್ಥೆಯ ರಾಜ್ಯ ಕಾರ್ಯದರ್ಶಿ ಹೇಮಂತ್ ಕೊಡುಗೆಯಾಗಿ ನೀಡಿದ ನೋಟ್ ಪುಸ್ತಕವನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಜುಬೆರಿಯ ಅವರ ಉಪಸ್ಥಿತಿಯಲ್ಲಿ ಪಾಲೆಮಾಡು ಭೂಮಿ ಮತ್ತು ಹಕ್ಕು ವಂಚಿತ ಹೋರಾಟಗಾರರ ಸಮಿತಿಯ ಅಧ್ಯಕ್ಷ ಹಾಗೂ ಹೂದ್ದೂರು ಗ್ರಾ.ಪಂ ಮತ್ತು ಶಾಲಾ ಎಸ್.ಡಿ.ಎಂ.ಸಿ ಸದಸ್ಯರಾದ ಮೊಣ್ಣಪ್ಪ, ಗ್ರಾ.ಪಂ ಸದಸ್ಯರಾದ ಕುಸುಮ ಹಾಗೂ ಸಂಪನ್ಮೂನ ವ್ಯಕ್ತಿಗಳಾದ ಉಷಾ ವಿದ್ಯಾರ್ಥಿಗಳಿಗೆ ವಿತರಿಸಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕ ಕುಮಾರಸ್ವಾಮಿ ಹಾಗೂ ಶಿಕ್ಷೃಕ ವೃಂದ ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ಕುಶಾಲನಗರ ಜೂ.17 NEWS DESK : ತ್ಯಾಗ, ಬಲಿದಾನದ ಹಬ್ಬವಾದ ಬಕ್ರೀದ್ ಹಬ್ಬವನ್ನು ಕುಶಾಲನಗರದ ಶಾಫಿ ಹಾಗೂ ಹನಫಿ ಬಾಂಧವರು ಸಂಭ್ರಮದಿಂದ ಆಚರಿಸಿದರು. ಬಕ್ರೀದ್ ಹಬ್ಬದ ಪ್ರಯುಕ್ತ ಬೆಳಿಗ್ಗೆ ಮಸೀದಿಗೆ ಆಗಮಿಸಿ ವಿಶೇಷ ಪ್ರಾರ್ಥನೆಯನ್ನು ನೆರವೇರಿಸಿದ ಮುಸಲ್ಮಾನರು, ಒಳ್ಳೆಯ ಮಳೆ, ಬೆಳೆಗಾಗಿ ಪ್ರಾರ್ಥಿಸಿದರು. ನಂತರ ಸರ್ವರಿಗೂ ಬಕ್ರೀದ್ ಹಬ್ಬದ ಶುಭಾಶಯಗಳನ್ನು ಕೋರುತ್ತಾ, ಸರ್ವರೂ ಸಾಮರಸ್ಯದಿಂದ ಬದುಕುವಂತೆ ಮನವಿ ಮಾಡಿದರು. ಕುಶಾಲನಗರದ ಹಿಲಾಲ್ ಮಸೀದಿ, ಜಾಮಿಯಾ ಮಸೀದಿ, ತಕ್ವಾ ಮಸೀದಿ, ದಂಡಿನಪೇಟೆ, ಜನತಾ ಕಾಲೋನಿ, ಕೂಡಿಗೆ, ನಂಜರಾಯಪಟ್ಟಣ, ಕೊಡಗರಹಳ್ಳಿ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಬಕ್ರೀದ್ ಹಬ್ಬದ ವಿಶೇಷ ಪ್ರಾರ್ಥನೆಯನ್ನು ನೆರವೇರಿಸಲಾಯಿತು. ಎಲ್ಲಾ ಮಸೀದಿಗಳ ಮುಂಭಾಗ ಪೊಲೀಸರು ಬಂದೋಬಸ್ತ್ ನೀಡಿದ್ದರು. ಈ ಸಂದರ್ಭ ಕುಶಾಲನಗರದ ಹಿಲಾಲ್ ಮಾಸೀದಿ ಧರ್ಮಗುರುಗಳಾದ ನಾಸರ್ ಫೈಜಿ಼, ಹಿಲಾಲ್ ಮಸೀದಿ ಅಧ್ಯಕ್ಷ ಹುಸೇನ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್, ದಾರುಲ್ ಉಲೂಂ ಮದ್ರಸದ ಪ್ರಾಂಶುಪಾಲ ತಮ್ಲೀಕ್ ದಾರಿಮಿ ಬಕ್ರೀದ್ ಹಬ್ಬದ ಕುರಿತು ಮಾತನಾಡಿದರು.
ಬೆಂಗಳೂರು ಜೂ.17 NEWS DESK : ಕಾರ್ಗಿಲ್ ಯುದ್ಧದ ವೀರರ ಶೌರ್ಯ ಮತ್ತು ತ್ಯಾಗಕ್ಕೆ ಗೌರವವಾಗಿ, ಭಾರತೀಯ ಸೇನೆಯು 1999 ರ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ವಿಜಯದ 25 ನೇ ವಾರ್ಷಿಕೋತ್ಸವದ ನೆನಪಿಗಾಗಿ ಪ್ಯಾನ್-ಇಂಡಿಯಾ ಮೋಟಾರ್ಸೈಕಲ್ ಎಕ್ಸ್ಪೆಡಿಶನ್ ಅನ್ನು ಪ್ರಾರಂಭಿಸಿದೆ. ರಾಷ್ಟ್ರೀಯ ಮಿಲಿಟರಿ ಶಾಲೆಯ ಚಾಣಕ್ಯ ಆಡಿಟೋರಿಯಂನಲ್ಲಿ ಕಮಾಂಡೆಂಟ್ ಬ್ರಿಗ್ ಅಜಯ್ ಸಿಂಗ್ ಠಾಕೂರ್ ಧ್ವಜಾರೋಹಣದ ಮೂಲಕ ಯಾತ್ರ ತಂಡಕ್ಕೆ ಚಾಲನೆ ನೀಡಿದರು. ತಂಡವು ಹಿಮಾಚಲ ಪ್ರದೇಶದ ಮನಾಲಿ, ಸರ್ಚು ಮತ್ತು ಲಡಾಖ್ನ ನ್ಯೋಮಾ ಮೂಲಕ ಸುಮಾರು 4000 ಕಿಲೋಮೀಟರ್ಗಳನ್ನು ರಸ್ತೆಯ ಮೂಲಕ ಕ್ರಮಿಸಿ ಸೈನಿಕರಿಗೆ ಗೌರವ ಸಲ್ಲಿಸಲಿದೆ. ಈ ಐತಿಹಾಸಿಕ ಪಯಣದಲ್ಲಿ ತಲಾ ಎಂಟು ಮೋಟಾರ್ಸೈಕ್ಲಿಸ್ಟ್ಗಳ ಮೂರು ತಂಡಗಳು ದೇಶದ ಮೂರು ಮೂಲೆಗಳಿಂದ ಹೊರಟಿವೆ – ಪೂರ್ವದಲ್ಲಿ ದಿಂಜಾನ್, ಪಶ್ಚಿಮದಲ್ಲಿ ದ್ವಾರಕಾ ಮತ್ತು ದಕ್ಷಿಣದಲ್ಲಿ ಧನುಷ್ಕೋಡಿ. ಈ ಯಾತ್ರೆಯು ಅಂತಿಮವಾಗಿ ದ್ರಾಸ್ನ ಗನ್ ಹಿಲ್ನಲ್ಲಿ ಕೊನೆಗೊಳ್ಳುತ್ತದೆ. ಎಲ್ಲಾ ಪ್ರಮುಖ ಸ್ಥಳಗಳಲ್ಲಿ ಫ್ಲಾಗ್-ಆಫ್ ಮತ್ತು ಫ್ಲ್ಯಾಗ್-ಇನ್ ಸಮಾರಂಭಗಳನ್ನು ಹಿರಿಯ…
ಕಡಂಗ ಜೂ.17 NEWS DESK : ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಕಡಂಗದಲ್ಲಿ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಿದರು. ವಿಶ್ವ ದಲ್ಲಿ ಶಾಂತಿ, ಸೌಹಾರ್ದತೆ ನೆಲಸಲಿ ಎಂದು ಸಮುದಾಯ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬದ್ರಿಯ ಸುನ್ನಿ ಮಸೀದಿಯ ಈದ್ ನಮಾಜಿಗೆ ಖತೀಬ್ ಸತ್ತಾರ್ ಅಹಸನಿ ಮತ್ತು ಮೊಯದ್ದೀನ್ ಜುಮಾ ಮಸೀದಿಯ ಈದ್ ನಮಾಜಿಗೆ ರಫೀಕ್ ಲತೀಫಿ ನೇತೃತ್ವ ವಹಿಸಿದರು. ಬದ್ರಿಯ ಜಮಾಹತ್ ಅಧ್ಯಕ್ಷ ಉಸ್ಮಾನ್, ಮೊಯದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ಲಾ, ಆಡಳಿತ ಮಂಡಳಿ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.






