ಲೇಖಕ: admin

ಮಡಿಕೇರಿ ಜೂ.28 NEWS DESK : ಬೆಂಗಳೂರಿನ ಬನ್ನೇರುಘಟ್ಟದ ಪ್ರಖ್ಯಾತ ಫೋರ್ಟಿಸ್ ಆಸ್ಪತ್ರೆ ವತಿಯಿಂದ ಜು.7 ರಂದು ಮೊಣಕಾಲು ಮತ್ತು ಹಿಪ್ ಬದಲಿ ಉಚಿತ ಶಿಬಿರ ಮಡಿಕೇರಿಯಲ್ಲಿ ನಡೆಯಲಿದೆ. ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಹರ್ಷ ಹೆಲ್ತ್ ಕೇರ್ ಕ್ಲಿನಿಕ್‍ನಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಆಥ್ರ್ರೋಸ್ಕೋಫಿ ಮತ್ತು ಸ್ಪೋಟ್ರ್ಸ್ ಮೆಡಿಸಿನ್ ಟ್ರಾಮಾ ಕನ್ಸಲ್ಟೆಂಟ್ ಹಾಗೂ ಹಿರಿಯ ಸಲಹೆಗಾರರಾದ ಡಾ. ಕೆ.ಯೋಗೇಶ್, ಸೊಂಟ, ಮೊಣಕಾಲು ಮತ್ತು ಕೀಲು ನೋವುಗಳು, ನಡೆಯಲು ಕಷ್ಟವಾಗುವಿಕೆ, ವೃದ್ಧರಿಗಾಗಿ ಕೀಲು ಬದಲಿ ವ್ಯವಸ್ಥೆ, ಕೀಹೋಲ್ ಮೂಳೆ ಚಿಕಿತ್ಸೆಯ ಕಾರ್ಯಾಚರಣೆಗಳು, ರೊಬೊಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ಕುರಿತು ಉಚಿತ ಸಮಾಲೋಚನೆ ಹಾಗೂ ಚಿಕಿತ್ಸೆ ನೀಡಲಿದ್ದಾರೆ. ಶಿಬಿರದಲ್ಲಿ ಸಿ.ಜಿ.ಹೆಚ್.ಎಸ್., ಬಿಎಸ್‍ಎನ್‍ಎಲ್, ಕೆಇಬಿ, ರೈಲ್ವೆ ಸಿಬ್ಬಂದಿ ಮತ್ತು ಎಬಿವೈ (ಪೊಲೀಸ್) ಉಚಿತ ಸಮಾಲೋಚನೆ ನಡೆಯಲಿದೆ. ನಿಗಧಿತ ಭೇಟಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಅವಿನಾಶ್-7829128776 ಸಂಪರ್ಕಿಸಬಹುದಾಗಿದೆ.

Read More

ಸುಂಟಿಕೊಪ್ಪ ಜೂ.28 NEWS DESK : ಚೆಟ್ಟಳ್ಳಿ ಗ್ರಾ.ಪಂ ವ್ಯಾಪ್ತಿಯ ಚೇರಳ-ಶ್ರೀಮಂಗಲದಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ಫಸಲು ನಷ್ಟವಾಗುತ್ತಿರುವ ಹಿನ್ನೆಲೆ ರೈತರು ಕಂಗಾಲಾಗಿದ್ದಾರೆ. ಗ್ರಾಮದ ನಿವಾಸಿ ಹೊಸಮನೆ ಪೂವಯ್ಯ ಅವರ ತೋಟಕ್ಕೆ ನುಗ್ಗಿರುವ 4 ಕಾಡಾನೆಗಳ ಹಿಂಡು ಅಡಿಕೆ, ಕಾಫಿಗಿಡಗಳನ್ನು ಧ್ವಂಸಗೊಳಿಸಿದೆ. ಪ್ರತೀ ವರ್ಷ ಆನೆದಾಳಿಯಿಂದ ರೈತರು ಕಂಗಾಲಾಗಿದ್ದು, ಕಾಫಿ ತೋಟಗಳಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸಲು ಹಿಂದೇಟು ಹಾಕುತ್ತಿದ್ದಾರೆ. ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳು ಭಯಪಡುವಂತಾಗಿದೆ. ಅರಣ್ಯ ಅಧಿಕಾರಿಗಳು ಆನೆಗಳನ್ನು ಕಾಡಿಗಟ್ಟಬೇಕು ಮತ್ತು ಆನೆ ಕಂದಕಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದ ಗ್ರಾಮಸ್ಥರು, ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಡಳಿತ ಹಾಗೂ ಸಂಬಂಧಿಸಿ ಇಲಾಖೆಯನ್ನು ಒತ್ತಾಯಿಸಿದ್ದಾರೆ. 

Read More

ಸುಂಟಿಕೊಪ್ಪ ಜೂ.28 NEWS DESK : 7ನೇ ಹೊಸಕೋಟೆ ಯುವಕನೋರ್ವ ಸೈಕಲ್ ಮೂಲಕ 31 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಪ್ರತಿ ಜಿಲ್ಲೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಿದರು. 7ನೇ ಹೊಸಕೋಟೆಯ ನಿವಾಸಿ ಪ್ರಶಾಂತ್ ಬೈಸಿಕಲ್ ಮೂಲಕ ಸಂಚರಿಸಿ ರಾಜ್ಯದ 31 ಜಿಲ್ಲೆಗಳಿಗೆ 26 ದಿನಗಳಲ್ಲಿ ತೆರಳಿ ಪ್ರತೀ ಜಿಲ್ಲೆಯಲ್ಲಿ ಒಂದೊಂದು ಗಿಡವನ್ನು ನೆಡುವ ಮೂಲಕ ನೆಲ-ಜಲ ಸಂರಕ್ಷಣೆಯಂತಹ ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಪ್ರಶಾಂತ್ 7ನೇ ಹೊಸಕೋಟೆ ಗ್ರಾಮದ ಸುರೇಶ ಹಾಗೂ ಉಷಾ ದಂಪತಿಗಳ ಪುತ್ರ. 

Read More

ಮಡಿಕೇರಿ ಜೂ.28 NEWS DESK : ಸೋಮವಾರಪೇಟೆ ತಾಲೂಕಿನ ಗೌಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನೋಟ್ ಪುಸ್ತಕ ಹಾಗೂ ಶೈಕ್ಷಣಿಕ ಸಾಮಾಗ್ರಿಗಳನ್ನು ವಿತರಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆಯು ದಾನಿಗಳಾದ ಬಸವನಕೊಪ್ಪ ಮಹೇಂದ್ರ ಕುಮಾರ್  ಸಹಕಾರದೊಂದಿಗೆ ವಿತರಿಸಿದರು. ಈ ಸಂದರ್ಭ ಶಾಲೆಯ ಶಿಕ್ಷಕರು, ದಾನಿಗಳು ಹಾಜರಿದ್ದರು.

Read More

ಮಡಿಕೇರಿ ಜೂ.28 NEWS DESK : ಕೊಡಗು ಜಿಲ್ಲಾ ಪೊಲೀಸ್ ಮತ್ತು ಮರಗೋಡು ಭಾರತಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ದಿನಾಚರಣೆ ನಡೆಯಿತು. ಮರಗೋಡಿನ ಭಾರತಿ ವಿದ್ಯಾಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಗ್ರಾಮಾಂತರ ಠಾಣಾಧಿಕಾರಿ ಪೊಲೀಸ್ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಯುವ ಜನಾಂಗವು ಕ್ಷಣಿಕ ಸುಖದ ಆಸೆಗೆ ಬಿದ್ದು ತಮ್ಮ ಸುಂದರ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು, ಡ್ರಗ್ಸ್ ನಂತಹ ಮಾದಕ ವಸ್ತುಗಳ ಸಂಪರ್ಕಕ್ಕೆ ಬಂದವರು ಎಂದೂ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯವಿಲ್ಲ. ಮಾದಕ ವಸ್ತುಗಳ ಬಳಕೆ ಮಾಡಿದವರು ಎಲ್ಲವನ್ನೂ ಕಳೆದುಕೊಳ್ಳಬೇಕಾಗುತ್ತದೆ. ಇಂತಹ ದುಶ್ಚಟಗಳ ಬಗ್ಗೆ ಎಲ್ಲರೂ ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಿದರು. ಡ್ರಗ್ಸ್ ಪೂರೈಕೆ ಮತ್ತು ಬಳಕೆಯ ಕುರಿತು ಮಾಹಿತಿ ಇದ್ದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ವ್ಯಸನ ಮುಕ್ತ ಸಮಾಜದ ನಿರ್ಮಾಣವಾಬೇಕು ಎಂದು ಕರೆ ನೀಡಿದರು. ವಿದ್ಯಾಸಾಗರ ಕಲಾವೇದಿಕೆ ಕುಶಾಲನಗರ ಇ.ರಾಜು…

Read More

ಟಿ.ಶೆಟ್ಟಿಗೇರಿ ಜೂ.28  NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಶ್ರೇಯೋಭಿವೃದ್ಧಿಗೆ ಕಾಂಗ್ರೆಸ್ ಕಾರ್ಯಕರ್ತರು ಟಿ.ಶೆಟ್ಟಿಗೇರಿ ಶ್ರೀ ಕೊರಕೋಟು ಅಯ್ಯಪ್ಪ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕಾಂಗ್ರೆಸ್ ವಲಯ ಅಧ್ಯಕ್ಷ ಪ್ರಭು ಸುಬ್ಬಯ್ಯ, ಹಿರಿಯ ಮುಖಂಡ ಅಪ್ಪಚಂಗಡ ಪಿ.ಮೋಟಯ್ಯ, ಟಿ .ಶೆಟ್ಟಿಗೇರಿ ಪಂಚಾಯಿತಿ ಮಾಜಿ ಅಧ್ಯಕ್ಷ ಪೆಮ್ಮಂಡ ರಾಜ ಕುಶಾಲಪ್ಪ, ಆಲೆಮಾಡ ಸೋಮಣ್ಣ, ತೀತಿರ ದೊರೆ ಗಣಪತಿ ಮತ್ತು ಹಲವಾರು ಕಾರ್ಯಕರ್ತರು ಪೊನ್ನಣ್ಣ ಅವರು ಜನಪರ ಕೆಲಸಗಳಿಗೆ ಮತ್ತಷ್ಟು ಮತ್ತಷ್ಟು ಶಕ್ತಿ ಲಭಿಸಲಿ ಎಂದು ಪ್ರಾರ್ಥಿಸಿದರು. ಶ್ರೀ ಅಯ್ಯಪ್ಪ ದೇವಾಲಯದ ಅರ್ಚಕ ವಸಂತ ಪೂಜೆ ನೆರವೇರಿಸಿದರು.

Read More

ಸುಂಟಿಕೊಪ್ಪ ಜೂ.28 NEWS DESK : ಸಂತ ಅಂತೋಣಿ ದೇವಾಲಯದ ವಾರ್ಷಿಕೋತ್ಸವಕ್ಕೆ ಮಡಿಕೇರಿ ಸಂತ ಮೈಕಲ್ಸ್ ಶಿಕ್ಷಣ ಸಂಸ್ಥೆ ವ್ಯವಸ್ಥಾಪಕ ರೇ.ಫಾ. ಸಂಜಯ್ ಕುಮಾರ್ ಹಾಗೂ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ವಿಜಯಕುಮಾರ್ ಮೂಲಕ ಚಾಲನೆ ನೀಡಿದರು. ರೇ.ಫಾ. ಸಂಜಯ್ ಕುಮಾರ್ ಧ್ವಜಾರೋಹಣ ನೇರವೇರಿಸುವ ಮೂಲಕ ಚಾಲನೆ ನೀಡಿದರು. ವಾರ್ಷಿಕೋತ್ಸವದ ಅಂಗವಾಗಿ 3 ದಿನಗಳ ಕಾಲ ದೇವಾಲಯದಲ್ಲಿ ವಿಶೇಷ ಬಲಿಪೂಜೆ, ಆರಾಧನೆ ನೆರವೇರಲಿದೆ. ಇಂದು ಸಂಜೆ ಬಲಿಪೂಜೆ ಹಾಗೂ ಆರಾಧನೆಯನ್ನು ಡೊರ್ನಹಳ್ಳಿಯ ಸಂತ ಅಂತೋಣಿ ಬಸಿಲಿಕಾ ಆಡಳಿತಾಧಿಕಾರಿ ವಂ.ಗುರುಗಳಾದ ಪ್ರವೀಣ್ ಪೇಧ್ರು ನೇರವೇರಿಸಲಿದ್ದಾರೆ. ಜೂ.29 ರಂದು ಸೋಮವಾರಪೇಟೆ ಜಯವೀರ ಮಾತೆ ದೇವಾಲಯದ ಧರ್ಮಗುರುಗಳಾದ ವಂ.ರೇ.ಫಾ. ಅವಿನಾಶ್ ಹಾಗೂ ಧರ್ಮಗುರುಗಳಾದ ವಿಜಯಕುಮಾರ್ ನೇರವೇರಿಸಲಿದ್ದಾರೆ. ಜೂ.30 ರಂದು ಸಂಜೆ 5.30 ಗಂಟೆಗೆ ಸಂತ ಅಂತೋಣಿಯವರ ಹಬ್ಬದ ಅಡಂಬರ ಗಾಯನ ಬಲಿಪೂಜೆ ನೆರವೇರಲಿದೆ. ಪರಮ ಪ್ರಸಾದ ಆರಾಧನೆಯನ್ನು ಹೆಚ್.ಡಿಕೋಟೆಯ ಸೈಂಟ್ ಮೇರಿಸ್ ಚರ್ಚ್‍ನ ಬರ್ನಾಡ್ ಪ್ರಕಾಶ್ ಬಾರ್ನಿಸ್ ನೇರವೇರಿಸಲಿದ್ದಾರೆ ಎಂದು ದೇವಾಲಯದ ಧರ್ಮಗುರುಗಳಾದ ವಿಜಯಕುಮಾರ್ ತಿಳಿಸಿದ್ದಾರೆ.…

Read More

   ಕುಶಾಲನಗರ ಜೂ.28 NEWS DESK :  ಸಮುದಾಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ರೋಟರಿ ಸದಸ್ಯರು ತಮ್ಮ ಯೋಜನೆಗಳ ಚಮತ್ಕಾರ ಅನಾವರಣಗೊಳಿಸಬೇಕು ಎಂದು ಮಡಿಕೇರಿಯ ರೋಟರಿ ಮಿಸ್ಟಿ ಹಿಲ್ಸ್ ನ ಮಾಜಿ ಸಹಾಯಕ ರಾಜ್ಯಪಾಲ ಡಾ. ಸಿ.ಆರ್.ಪ್ರಶಾಂತ್ ಕರೆ ನೀಡಿದ್ದಾರೆ. ಕುಶಾಲನಗರ ರೋಟರಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನೆರವೇರಿಸಿ ಮಾತನಾಡಿದರು. ಮಹಿಳಾ ಶಕ್ತಿ ಮೂಲಕ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಲು ಸಾಧ್ಯ ಎಂದ ಅವರು, ರೋಟರಿಯಲ್ಲಿ ಮಹಿಳಾ ಸದಸ್ಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕಾಗಿದೆ ಎಂದರು. ಹೆಚ್ಚಿನ ಪ್ರಮಾಣದಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಆ ಮೂಲಕ ಸಮಾಜದ ಅಭಿವೃದ್ಧಿ ಸಾಧ್ಯ ಎಂದರು. ಕುಶಾಲನಗರ ರೋಟರಿ ಕಾರ್ಯ ವೈಖರಿಯ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ರೋಟರಿ ಕುಶಾಲನಗರದ ನೂತನ ಅಧ್ಯಕ್ಷರಾಗಿ ಸಿ ಬಿ ಹರೀಶ್ ,ಕಾರ್ಯದರ್ಶಿಯಾಗಿ ಡಿ.ಡಿ.ಕಿರಣ್ ಅವರು ಆಯ್ಕೆಗೊಂಡಿದ್ದು ಅವರ ತಂಡಕ್ಕೆ ಪ್ರಮಾಣವಚನ ಬೋಧಿಸಿದರು. ಹಿಂದಿನ ಸಾಲಿನ ಅಧ್ಯಕ್ಷರಾಗಿದ್ದ ಸುನೀತಾ ಮಹೇಶ್ ಅವರಿಂದ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು. ಈ…

Read More

  ಮಡಿಕೇರಿ ಜೂ.28 NEWS DESK : ಪಾರಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ಮತ್ತು ಅಕ್ರಮ ಕಳ್ಳ ಸಾಗಣೆ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯೋಪದ್ಯಾಯರಾದ ವೇದಪ್ರಸಾದ್ ಅವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯದ ಕೆಡುಕುಗಳು ಮತ್ತು ಸಾಮಾಜಿಕ ಪಿಡುಗಾಗಿ ಕಾಡುತ್ತಿರುವ ಮಾದಕ ದ್ರವ್ಯಗಳ ನಿರ್ಮೂಲನೆಯ ಕುರಿತು ಹಾಗೂ ಅವ್ಯಾಹತವಾಗಿ ನಡೆಯುತ್ತಿರುವ ಕಳ್ಳ ಸಾಗಣೆಯ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದರಲ್ಲದೆ, ಸಾಮಾಜಿಕ ಪಿಡುಗು ನಿವಾರಿಸಿ, ಸಮ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ದೆಸೆಯಿಂದಲೇ ಸರ್ವರೂ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಸಹ ಶಿಕ್ಷಕ ಕಿಶೋರ್ ಕುಮಾರ್  ಪ್ರತಿಜ್ಞಾ ವಿಧಿ ಬೋಧಿಸಿದರು. ಶಿಕ್ಷಕಿಯರಾದ ಸುಮಿತ್ರ, ಮಂಜುಳ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.  

Read More

ಮಡಿಕೇರಿ ಜೂ.27 NEWS DESK : ನಿರಂತರ ಮಳೆಯಿಂದಾಗಿ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕೊಯನಾಡು ಸರ್ಕಾರಿ ಶಾಲೆಯ ಹಿಂಭಾಗದ ಗುಡ್ಡದ ಮಣ್ಣು ಕುಸಿದು ಶಾಲೆಯ ಗೋಡೆ ಮತ್ತು ಕಿಟಕಿಗೆ ಹಾನಿಯಾಗಿದೆ. ದೊಡ್ಡ ದೊಡ್ಡ ಕಲ್ಲು ಸಹಿತ ಮಣ್ಣು ಬಂದ ರಭಸಕ್ಕೆ ಶಾಲೆಯ ಗೋಡೆಯ ಒಂದು ಭಾಗ ಮತ್ತು ಕಿಟಕಿಯೊಂದು ಬಿದ್ದಿದೆ. ತರಗತಿಯೊಳಗೆ ಗೋಡೆ, ಗುಡ್ಡದ ಮಣ್ಣು ಮತ್ತು ಕಲ್ಲು ಬಿದ್ದಿದ್ದು, ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದ್ದ ಕಾರಣ ಭಾರೀ ಅನಾಹುತವೊಂದು ತಪ್ಪಿದೆ. ::: ದುಬಾರೆಯಲ್ಲಿ ನಿರ್ಬಂಧ ::: ಕೊಡಗು ಜಿಲ್ಲೆಯ ಹೆಸರುವಾಸಿ ಪ್ರವಾಸಿತಾಣ ದುಬಾರೆ ಭಾಗದಲ್ಲಿ ನಿರಂತರ ಮಳೆಯಿಂದ ನದಿ ತುಂಬಿ ಹರಿಯುತ್ತಿದೆ. ಮುಂಜಾಗೃತಾ ಕ್ರಮವಾಗಿ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ರ‍್ಯಾಫ್ಟಿಂಗ್ ಜಲಕ್ರೀಡೆಯನ್ನು ಮಳೆಯ ಕಾರಣ ಈಗಾಗಲೇ ಸ್ಥಗಿತಗೊಳಿಸಲಾಗಿದೆ.

Read More