ತ್ಯಾಗ ಹಾಗೂ ಸಹೋದರತೆಯ ಸಂದೇಶ ಸಾರುವ ಬಕ್ರೀದ್, ಈದ್-ಉಲ್-ಅದಾ ಹಬ್ಬ ನಿಮಗೆಲ್ಲರಿಗೂ ಸಂತೋಷ ಮತ್ತು ಶುಭವನ್ನು ತರಲಿ.
ಲೇಖಕ: admin
ತ್ಯಾಗ ಹಾಗೂ ಸಹೋದರತೆಯ ಸಂದೇಶ ಸಾರುವ ಬಕ್ರೀದ್, ಈದ್-ಉಲ್-ಅದಾ ಹಬ್ಬ ನಿಮಗೆಲ್ಲರಿಗೂ ಸಂತೋಷ ಮತ್ತು ಶುಭವನ್ನು ತರಲಿ.
ತ್ಯಾಗ ಹಾಗೂ ಸಹೋದರತೆಯ ಸಂದೇಶ ಸಾರುವ ಬಕ್ರೀದ್, ಈದ್-ಉಲ್-ಅದಾ ಹಬ್ಬ ನಿಮಗೆಲ್ಲರಿಗೂ ಸಂತೋಷ ಮತ್ತು ಶುಭವನ್ನು ತರಲಿ.
ತ್ಯಾಗ ಹಾಗೂ ಸಹೋದರತೆಯ ಸಂದೇಶ ಸಾರುವ ಬಕ್ರೀದ್, ಈದ್-ಉಲ್-ಅದಾ ಹಬ್ಬ ನಿಮಗೆಲ್ಲರಿಗೂ ಸಂತೋಷ ಮತ್ತು ಶುಭವನ್ನು ತರಲಿ.
ತ್ಯಾಗ ಹಾಗೂ ಸಹೋದರತೆಯ ಸಂದೇಶ ಸಾರುವ ಬಕ್ರೀದ್, ಈದ್-ಉಲ್-ಅದಾ ಹಬ್ಬ ನಿಮಗೆಲ್ಲರಿಗೂ ಸಂತೋಷ ಮತ್ತು ಶುಭವನ್ನು ತರಲಿ.
ಮಡಿಕೇರಿ ಜೂ.16 NEWS DESK : ವಿರಾಜಪೇಟೆ ತಾಲ್ಲೂಕು ಸಿದ್ದಾಪುರ ವ್ಯಾಪ್ತಿಯಲ್ಲಿ 2400 ಎಕರೆ ಜಮೀನಿನ ಬಾಬ್ತು ಭೂ ಪರಿವರ್ತನೆಯನ್ನು ಕೋರಿ ಇದುವರೆವಿಗೂ ಯಾವುದೇ ಮನವಿಗಳು ಸ್ವೀಕೃತವಾಗಿರುವುದಿಲ್ಲ ಹಾಗೂ ಸದರಿ ಜಮೀನುಗಳ ಭೂ ಪರಿವರ್ತನೆಯನ್ನು ಮಾಡಿರುವುದಿಲ್ಲ ಎಂಬ ಅಂಶವನ್ನು ಈ ಮೂಲಕ ಸ್ಪಷ್ಟೀಕರಿಸಲಾಗಿದೆ ಎಂದು ವಿರಾಜಪೇಟೆ ತಾಲ್ಲೂಕು ತಹಶೀಲ್ದಾರ್ ತಿಳಿಸಿದ್ದಾರೆ.
ಮಡಿಕೇರಿ ಜೂ.16 NEWS DESK : ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ ಭಾನುವಾರ ನಡೆದಿದೆ. ಗದ್ದೆಹಳ್ಳದ ಪಟ್ಟೆಮನೆ ನಿವಾಸಿ ಲೋಕೇಶ್ (60) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಸುಂಟಿಕೊಪ್ಪದಿಂದ ಗದ್ದೆಹಳ್ಳದ ಕಡೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಖಾಸಗಿ ಬಸ್ ವೊಂದು ಹಿಂಬದಿಯಿಂದ ಡಿಕ್ಕಿಯಾಗಿದೆೆ ಎಂದು ಹೇಳಲಾಗಿದೆ. ಅಪಘಾತದಿಂದ ಲೋಕೇಶ್ ಅವರು ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದ ಸಂದರ್ಭ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕಾಗಮಿಸಿದ ಸುಂಟಿಕೊಪ್ಪ ಪೊಲೀಸರು ಖಾಸಗಿ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಗದ್ದೆಹಳ್ಳ ಭಾಗದ ಹೆದ್ದಾರಿ ತಿರುವಿನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಮಡಿಕೇರಿ ಜೂ.16 NEWS DESK : ಭಾರತ ಮುಂದಿನ 15 ವರ್ಷಗಳಲ್ಲಿ ಫುಡ್ ಹಬ್ ಆಗಿ ಬದಲಾಗುವ ಎಲ್ಲಾ ಸಾಧ್ಯತೆಗಳಿರುವುದರಿಂದ ಅಧಿಕ ಮೌಲ್ಯವಿರುವ ಹಣ್ಣುಗಳನ್ನು ಬೆಳೆಯಲು ಬೆಳೆಗಾರರು ಮುಂದಾಗಬೇಕು. ಆ ಮೂಲಕ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಬಹುದು ಎಂದು ನವದೆಹಲಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದ ಮಹಾ ನಿರ್ದೇಶಕ ಡಾ.ಎಸ್.ಕೆ.ಸಿಂಗ್ ತಿಳಿಸಿದ್ದಾರೆ. ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ನಡೆದ ಬೆಣ್ಣೆಹಣ್ಣು ಕ್ಷೇತ್ರೋತ್ಸವ ಹಾಗೂ ವೈವಿಧ್ಯತೆ ಮೇಳದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದೇಶಿ ತೋಟಗಾರಿಕಾ ಬೆಳೆಗಾರರ ಅಭಿವೃದ್ಧಿ ಸಂಘವನ್ನು ಆರಂಭಿಸಲಾಗಿದ್ದು, ಬೆಳೆಗಾರರು ಸಂಘದಲ್ಲಿ ಸೇರ್ಪಡೆಗೊಳ್ಳುವ ಮೂಲಕ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ರೈತರು ನೇರವಾಗಿ ಹಣ್ಣಿನ ಗಿಡಗಳನ್ನು ಖರೀದಿ ಮಾಡಿದರೆ ಹೆಚ್ಚು ವೆಚ್ಚವಾಗುತ್ತದೆ. ಸಂಘದ ಮೂಲಕ ಎಲ್ಲರೂ ಒಗ್ಗೂಡಿ ಖರೀದಿಸಿದಾಗ ವೆಚ್ಚ ಕಡಿಮೆಯಾಗಲಿದೆ. ಅಲ್ಲದೆ ಇದರಿಂದ ಇತರೆ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು. ಕೊಡಗು ಸೇರಿದಂತೆ ರಾಜ್ಯದ ಪ್ರಮುಖ ಆಯ್ದ ಭಾಗದಲ್ಲಿ ಆಫ್ ಸೀಸನ್ ಲಿಚ್ಚಿ, ಬಟರ್ ಫ್ರೂಟ್ ಸೇರಿದಂತೆ ಅಧಿಕ ಮೌಲ್ಯದ ಹಣ್ಣುಗಳನ್ನು ಬೆಳೆಯಬಹುದಾಗಿದೆ. ಹೆಚ್ಚು…
ಮಡಿಕೇರಿ ಜೂ.16 NEWS DESK : ಗೋಣಿಕೊಪ್ಪ ಪಟ್ಟಣದ ಕೀರೆಹೊಳೆಯ ಜಾಗ ಒತ್ತುವರಿಯಾಗಿದ್ದರೆ ತಕ್ಷಣ ತೆರವು ಕಾರ್ಯಾಚರಣೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ಸೂಚನೆ ನೀಡಿದ್ದಾರೆ. ಗೋಣಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಿಸಲಾಗಿರುವ ‘ಟ್ರಾö್ಯಸ್ ಬ್ಯಾರಿಕೇಡ್’ ನ್ನು ಉದ್ಘಾಟಿಸಿ ವನ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೀರೆಹೊಳೆಯನ್ನು ಹಿಂದಿನಂತೆ ಸಂರಕ್ಷಿಸಬೇಕಾಗಿದೆ, ಈ ಕಾರ್ಯಕ್ಕೆ ಮರು ಚಾಲನೆ ನೀಡಬೇಕು. ನದಿ, ತೊರೆ, ಹಳ್ಳಕೊಳ್ಳ ಹಾಗೂ ಜಲಾಶಯವನ್ನು ನಾಶ ಮಾಡಿ ಅಭಿವೃದ್ಧಿ ಮಾಡಬೇಕಿಲ್ಲ, ಅರಣ್ಯ, ಪರಿಸರ ಸಂರಕ್ಷಣೆಗೆ ಪ್ರಥಮ ಆದ್ಯತೆ ನೀಡಿ, ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ಪ್ರತಿಪಾದಿಸಿದರು. ಕೀರೆಹೊಳೆಯಲ್ಲಿ ಟ್ರ್ಯಾಸ್ ಬ್ಯಾರಿಕೇಡ್ ಅಳವಡಿಸಿರುವುದರಿಂದ ಘನತ್ಯಾಜ್ಯ ವಿಲೇವಾರಿಗೆ ಸಹಕಾರಿಯಾಗಿದೆ. ಇದೊಂದು ರೀತಿಯ ಸಣ್ಣ ಪ್ರಯೋಗ ಎಂದರು. ಮನೆ, ವಿದ್ಯುತ್, ಕುಡಿಯುವ ನೀರು ಮತ್ತಿತರ ಸೌಲಭ್ಯಕ್ಕಾಗಿ ಮನವಿಗಳು ಬರುತ್ತವೆ, ಆದರೆ ಸ್ವಚ್ಚತಾ ಕಾರ್ಯಕ್ಕೆ ಮನವಿ ಮಾಡುವುದು ಕಡಿಮೆ. ‘ಕ್ಲೀನ್ ಕೂರ್ಗ್’ ತಂಡದವರು ಕೀರೆಹೊಳೆ…
ಕುಶಾಲನಗರ ಜೂ.15 NEWS DESK : ಕೊಡಗು ಜಿಲ್ಲೆಯ ಕುಶಾಲನಗರದ ಯುವ ಪ್ರತಿಭೆ ನಟಿ ಮಧುರ ಗೌಡ ಅವರು ನಟಿಸಿರುವ ಕನ್ನಡ ಚಲನಚಿತ್ರ ‘ಸಂಭವಾಮಿ ಯುಗೇ ಯುಗೇ’ ಈ ತಿಂಗಳ 21 ರಂದು ಬಿಡುಗಡೆಗೊಳ್ಳಲಿದೆ. ರಾಜ್ಯದಾದ್ಯಂತ ಏಕಕಾಲದಲ್ಲಿ ಪ್ರದರ್ಶನಗೊಳ್ಳಲಿರುವ ಮಧುರ ಗೌಡ ನಾಯಕಿಯಾಗಿ ನಟಿಸಿರುವ ಕನ್ನಡ ಚಲನಚಿತ್ರ ಕುಶಾಲನಗರದ ಸಿನಿ ಫ್ಲೆಕ್ಸ್ ಥಿಯೇಟರ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ಮಧುರ ಗೌಡ ಕುಶಾಲನಗರ ನಿವಾಸಿಗಳಾದ ಬೆಳ್ಯನ ಸುರೇಶ್ ಹಾಗೂ ಬಬಿತಾ ದಂಪತಿಗಳ ಪುತ್ರಿ.






