ಲೇಖಕ: admin

ಮಡಿಕೇರಿ ಜೂ.26 NEWS DESK : ಯುವ ಜನಾಂಗ ಮಾದಕ ವಸ್ತು ಸೇವನೆಯಂತಹ ದುಶ್ಚಟಗಳಿಗೆ ಬಲಿಯಾಗಿ, ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳದೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಕರೆ ನೀಡಿದ್ದಾರೆ. ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಕಾವೇರಿ ಹಾಲ್‍ನಲ್ಲಿ ಬುಧವಾರ ನಡೆದ `ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಟ ವಿರುದ್ಧ’ ಅಂತರ ರಾಷ್ಟ್ರೀಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು. ನಾಳೆಯ ಬಗ್ಗೆ ಚಿಂತಿಸಬೆಕು. ಮಾನವನ ಜೀವನ ಅತ್ಯಂತ ಅಮೂಲ್ಯವಾಗಿದ್ದು, ಭವಿಷ್ಯದಲ್ಲಿ ಉತ್ತಮ ಗುರಿ ಸಾಧಿಸಲು ನಿರಂತರ ಪ್ರಯತ್ನಿಸಬೇಕು ಎಂದು ಸಲಹೆ ಮಾಡಿದರು. ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ತುತ್ತಾಗಾಬಾರದು. ಮಾದಕ ವಸ್ತುಗಳಿಗೆ ಅವಲಂಬಿತರಾದರೆ ಅದರಿಂದ ಪುನಃ ಹೊರಬರುವುದು ತುಂಬಾ ಕಷ್ಟ ಎಂದರು. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 2023 ರಲ್ಲಿ 101 ಪ್ರಕರಣ ದಾಖಲಾಗಿದೆ. 89.217 ಕೆ.ಜಿ.ಗಾಂಜಾ, 154.26 ಗ್ರಾಂ. ಟ್ಯಾಬ್ಲೆಟ್, ಎಲ್‍ಎಸ್‍ಡಿ 9 ಬ್ಲಾಕ್ಸ್,…

Read More

ಮಡಿಕೇರಿ ಜೂ.26 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕುಮಾರ ಅಧಿಕಾರ ವಹಿಸಿಕೊಂಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಹೆಚ್ಚುವರಿ ಪ್ರಭಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿನ್ನಸ್ವಾಮಿ ಅವರು ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದೇಶಕರ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು. ಕುಮಾರ ಅವರು ಈ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಂಗಳೂರಿನ ನಾಟಕ ಅಕಾಡೆಮಿಯಲ್ಲಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

Read More

ಮಡಿಕೇರಿ ಜೂ.26 NEWS DESK : ಗೋವಾದಲ್ಲಿ ನಡೆದ ರಾಷ್ಟ್ರೀಯ ಮುಕ್ತ ಕಬಡ್ಡಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡ ಚಿನ್ನದ ಪದಕ ಗೆದ್ದುಕೊಂಡಿದ್ದು, ತಂಡವನ್ನು ಪ್ರತಿನಿಧಿಸಿದ ಕೊಡಗಿನ ಯಶ್ವಿತ್ ರೈ ಪಂದ್ಯಾವಳಿಯ ಅಲ್ ರೌಂಡರ್ ಆಗಿ ಉತ್ತಮ ಪ್ರದರ್ಶನ ನೀಡಿದ್ದಾನೆ. ಕುಂಜಲಗೇರಿ ಗ್ರಾಮದ ಬಿ.ಪಿ.ಉಲ್ಲಾಸ್ ರೈ ಮತ್ತು ಬಿ.ಯು.ಸುಜಾತಾ ರೈ ದಂಪತಿಯ ಪುತ್ರನಾದ ಯಶ್ವಿತ್ ರೈ ತರಬೇತುದಾರ ಟಿ.ಸುರೇಶ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾನೆ.

Read More

ಕಡಂಗ ಜೂ.27 NEWS DESK :  ಗೋವಾದಲ್ಲಿ ನಡೆದ ರಾಷ್ಟ್ರೀಯ ಮುಕ್ತ ಕಬಡ್ಡಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡ ಚಿನ್ನದ ಪದಕ ಗೆದ್ದುಕೊಂಡಿದ್ದು, ತಂಡವನ್ನು ಪ್ರತಿನಿಧಿಸಿದ ಕೊಡಗಿನ ಯಶ್ವಿತ್ ರೈ ಪಂದ್ಯಾವಳಿಯ ಅಲ್ ರೌಂಡರ್ ಆಗಿ ಉತ್ತಮ ಪ್ರದರ್ಶನ ನೀಡಿದ್ದಾನೆ. ಕುಂಜಲಗೇರಿ ಗ್ರಾಮದ  ಬಿ.ಪಿ.ಉಲ್ಲಾಸ್ ರೈ ಮತ್ತು ಬಿ.ಯು.ಸುಜಾತಾ ರೈ ದಂಪತಿಯ ಪುತ್ರನಾದ ಯಶ್ವಿತ್ ರೈ ತರಬೇತುದಾರ ಟಿ.ಸುರೇಶ್ ಅವರಅವರಲ್ಲಿ ತರಬೇತಿ ಪಡೆಯುತ್ತಿದ್ದಾನೆ. ವರದಿ : ನೌಫಲ್ ಕಡಂಗ 

Read More

ಮಡಿಕೇರಿ ಜೂ.26 NEWS DESK  : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹಿಸಿದ ಬಿಜೆಪಿ ಕ್ರಮ ಖಂಡನೀಯವೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ಶಾಸಕ ಎ.ಎಸ್.ಪೊನ್ನಣ್ಣ ಅವರು ಪಕ್ಷಾತೀತ ಮತ್ತು ಜಾತ್ಯತೀತವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಅಲ್ಲದೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಸಕಾಲದಲ್ಲಿ ಮಾಡುತ್ತಿದ್ದಾರೆ, ಬಡವರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುತ್ತಿದ್ದಾರೆ. ಸಾಮಾನ್ಯ ಕಾರ್ಯಕರ್ತರ ಕರೆಗೂ ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಹೀಗಿರುವಾಗ ಬಿಜೆಪಿ ಮಂದಿ ಕೇವಲ ಮತಕ್ಕಾಗಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚು ಮಾಡಿರುವುದಕ್ಕೆ ಬಡವರಿಗೆ ಹಾಗೂ ಕೂಲಿಕಾರ್ಮಿಕರಿಗೆ ತೊಂದರೆಯಾಗಿದೆ ಎಂದು ಹೇಳುತ್ತಿರುವ ಬಿಜೆಪಿ ಮಂದಿ ಕಳೆದ 10 ವರ್ಷಗಳ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಗೊಬ್ಬರ ಸೇರಿದಂತೆ…

Read More

ಮಡಿಕೇರಿ ಜೂ.26 NEWS DESK : ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ ಘಟಕದ 3ನೇ ವಾರ್ಷಿಕೋತ್ಸವದ ಅಂಗವಾಗಿ ಜೂ.27 ರಂದು ಮಡಿಕೇರಿಯಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಡಿಕೇರಿಯ ಹ್ಯೂಮಾನಿಟಿ ಫಸ್ಟ್ ಇಂಡಿಯಾ ಸಂಸ್ಥೆ ಹಾಗೂ ಕೊಡಗು ಜಿಲ್ಲಾ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ನಗರದ ಬಾಲಭವನದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಶಿಬಿರ ನಡೆಯಲಿದೆ ಎಂದು ಮಾಹಿತಿ ನೀಡಿದರು. ಸುಮಾರು 50 ಬಾರಿ ರಕ್ತ ನೀಡಿದ ಮಹಾದಾನಿ ರಾಮಪ್ಪ ಶಿಬಿರವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪಿ.ಎಂ.ರವಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಕೋವಿಡ್ ಸಂದರ್ಭ ಜಿಲ್ಲೆಯಲ್ಲಿ…

Read More

ಸಿದ್ದಾಪುರ ಜೂ.26 NEWS DESK :  ಮಾದಕ ದ್ರವ್ಯ ವಿರೋಧಿ ದಿನಾಚರಣೆ ಪ್ರಯುಕ್ತ ನೆಲ್ಯಹುದಿಕೇರಿ ಸಿದ್ದಾಪುರದಲ್ಲಿ ಬೈಕ್‌ ಮೂಲಕ ಜಾಗೃತಿ ಜಾಥಾ ನಡೆಯಿತು. ಸಿದ್ದಾಪುರ ಪೋಲಿಸ್ ಠಾಣಾ ವ್ಯಾಪ್ತಿಯ ಅತ್ತಿಮಂಗಲ ಬಳಿ ಬೈಕ್‌ ಜಾಥಾಕ್ಕೆ ಡಿವೈಎಸ್ಪಿ ಮಹೇಶ್ ಚಾಲನೆ ನೀಡಿದರು. ನಂತರ ಮಾತನಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾರ್ಗದರ್ಶನದಲ್ಲಿ ಅಂತರಾಷ್ಟ್ರೀಯ ಮಾದಕ ವಿರೋಧಿ ದಿನಾಚರಣೆ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯುವ ಸಮೂಹ ದುಶ್ಚಟಗಳಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಕೈಜೋಡಿಸಬೇಕೆಂದರು. ಈ ಸಂದರ್ಭ ಸರ್ಕಲ್ ಇನ್ಸ್‌ಪೆಕ್ಟರ್​ ರಾಜು, ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ಸೇರಿದಂತೆ ಸಿಬ್ಬಂದಿಗಳು ಹಾಗೂ ಸ್ಥಳೀಯರು ಭಾಗವಹಿಸಿದ್ದರು.

Read More

ಮಡಿಕೇರಿ ಜೂ.26 NEWS DESK  : ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ರಾತ್ರಿ ವೇಳೆ ನಿರಂತರ ಮಳೆ ಸುರಿಯುತ್ತಿದ್ದು, ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಮಳೆ ತೀವ್ರತೆಯನ್ನು ಪಡೆದುಕೊಳ್ಳುತ್ತಿರುವುದರಿಂದ ಜೂ.28 ರ ಬೆಳಿಗ್ಗೆ 8.30 ಗಂಟೆಯವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೂನ್ ತಿಂಗಳ ಆರಂಭದಲ್ಲಿ ಕೈಕೊಟ್ಟ ಮಳೆ ಕೊನೆಯಲ್ಲಿ ಬಿರುಸು ಪಡೆದುಕೊಂಡಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಶ್ರೀಭಗಂಡೇಶ್ವರ ಕ್ಷೇತ್ರ ಭಾಗಮಂಡಲದಲ್ಲಿ ಉತ್ತಮ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ತಲಕಾವೇರಿ ರಸ್ತೆಯಲ್ಲಿ ಮರ ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆಯಾಗಿತ್ತು. ಇದೀಗ ಮರವನ್ನು ತೆರವುಗೊಳಿಸಲಾಗಿದೆ. ಮಡಿಕೇರಿ ನಗರ ವ್ಯಾಪ್ತಿಯಲ್ಲೂ ಮಳೆಯಾಗುತ್ತಿದ್ದು, ಮಂಜು ಮತ್ತು ಚಳಿ ಇದೆ. ನೀರುಕೊಲ್ಲಿ- ಚೆಟ್ಟಳ್ಳಿ ರಸ್ತೆಯಲ್ಲಿ ಮರ ಬಿದ್ದು, ವಾಹನ ಸಂಚಾರಕ್ಕೆ ತೊಡಕುಂಟಾಗಿತ್ತು. ವಿರಾಜಪೇಟೆ, ಗೋಣಿಕೊಪ್ಪ, ಪೊನ್ನಂಪೇಟೆ, ಸೋಮವಾರಪೇಟೆ, ಕುಶಾಲನಗರ, ಸಿದ್ದಾಪುರ, ಕರಿಕೆ ಭಾಗದಲ್ಲೂ ಉತ್ತಮ ಮಳೆಯಾಗುತ್ತಿದೆ. ಆದ್ರ್ರಾ ಮಳೆಯ ಆಗಮನ…

Read More

ಮಡಿಕೇರಿ ಜೂ.26 NEWS DESK : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿರಾಜಪೇಟೆಯ ಕಾವೇರಿ ಶಾಲಾ ವಿಧ್ಯಾರ್ಥಿಗಳು ಕಾಕೋಟುಪರಂಬು ಕಾಲಭೈರವ ದೇವಸ್ಥಾನದ ಆವರಣದಲ್ಲಿ ವಿವಿಧ ರೀತಿಯ ಸಸಿಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ನಂತರ ಶಾಲೆಯ ಸುತ್ತಮುತ್ತ ಶ್ರಮದಾನ ಮಾಡಿದರು. ದಿನದ ಮಹತ್ವದ ಕುರಿತು 10ನೇ ತರಗತಿಯ ವಿದ್ಯಾರ್ಥಿ ಆಶ್ರಯ ಅಕ್ಕಮ್ಮ ಹಾಗೂ ನಿಶಾನ್ ಎಂ. ಎಂ ಕಿರು ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್,ಸುದೇಶ್, ಕಾರ್ಯದರ್ಶಿ ಪಿ.ಎನ್.ವಿನೋದ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಯು.ಪಿ,ಪಾರ್ವತಿ, ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಬಿ.ಎಸ್.ಜ್ಯೋತಿ, ದೈಹಿಕ ಶಿಕ್ಷಕಿ ಎಂ.ಪಿ.ಮೋನಿಕ, ಸಹ ಶಿಕ್ಷಕಿ ಬಿ.ಡಿ,ಭಾಗ್ಯ, ಟಿ.ಜಿ,ಕಲ್ಪ, ಕೆ.ಎನ್,ವೀಣಾ, ಟಿ.ಎಸ್.ಸುಕನ್ಯ ಹಾಗೂ ಬೋಧಕ ಬೋಧಕೇತರ ವೃಂದದವರು ಹಾಜರಿದ್ದರು.

Read More

ಮಡಿಕೇರಿ ಜೂ.26 NEWS DESK : ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿಯನ್ನು ಜೂ.27 ರಂದು ಸೋಮವಾರಪೇಟೆಯಲ್ಲಿ ಅರ್ಥಪೂರ್ಣವಾಗಿ ಆಡಚರಿಸಲು ಸೋಮವಾರಪೇಟೆ ತಾಲ್ಲೂಕು ಆಡಳಿತ ನಿರ್ಧರಿಸಿದೆ. ತಹಶೀಲ್ದಾರ್ ನವೀನ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಜೂ.27 ರಂದು ಬೆಳಿಗ್ಗೆ 10 ಗಂಟೆಗೆ ಒಕ್ಕಲಿಗರ ಕಲ್ಯಾಣಮಂಟಪದಲ್ಲಿ ನಡೆಯಲಿದ್ದು,  ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ನೆರವೇರಲಿದೆ. ಈ ಸಂದರ್ಭ ಒಕ್ಕಲಿಗ ಮುಖಂಡರು ಹಾಜರಿದ್ದರು.

Read More