ಮಡಿಕೇರಿ ಜೂ.26 NEWS DESK : ಬಲ್ಲಮಾವಟಿ ಶ್ರೀ ಭಗವತಿ ದೇವಾಲಯದಲ್ಲಿ ಬಲ್ಲಮಾವಟಿ ಬೂತ್ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಶಾಸಕ ಎ.ಎಸ್.ಪೊನ್ನಣ್ಣ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಲ್ಲಮಾವಟಿ ಬೂತ್ ಕಾಂಗ್ರೆಸ್ ಅಧ್ಯಕ್ಷ ಚಂಗೇಟಿರ ಕುಶಾಲಪ್ಪ ಶಾಸಕರ ಶ್ರೇಯೋಭಿವೃದ್ಧಿಗೆ ಪ್ರಾರ್ಥಿಸಿ, ಮುಂದಿನ ರಾಜಕೀಯ ಭವಿಷ್ಯ ಉತ್ತಮವಾಗಿರಲೆಂದು ಹಾರೈಸಿದರು. ಈ ಸಂದರ್ಭದಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷ ತಾಪಂಡ ಅಪ್ಪಣ್ಣ, ಕಾರ್ಯದರ್ಶಿ ಮಣವಟ್ಟಿರ ದಯಾ ಕುಟ್ಟಪ್ಪ, ಜಿಲ್ಲಾ ಎನ್ಎಸ್ಯುಐ ಕಾರ್ಯದರ್ಶಿ ಮುಕ್ಕಾಟಿರ ಯತೀಶ್, ನೆಲಜಿ ಬೂತ್ ಅಧ್ಯಕ್ಷ ಕೈಬುಲಿರ ಗಣಪತಿ, ಪಕ್ಷದ ನಾಯಕರುಗಳಾದ ಅಪ್ಪಚೆಟ್ಟೋಳಂಡ ಮಾಚಯ್ಯ, ಬೊಟ್ಟೋಮಳಂಡ ಜಾನಕ್ಕಿ, ಚೀಯಕಪೂವಂಡ ರಂಜನ್, ಚೋಕಿರ ವಾಸುದೇವ, ನಿವೃತ್ತ ಯೋಧ ಪೊನ್ನುಕಂಡ ಬೆಳ್ಳಿಯಪ್ಪ ಹಾಜರಿದ್ದರು.
ಲೇಖಕ: admin
ಮಡಿಕೇರಿ ಜೂ.26 NEWS DESK : ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆ ಸಂದರ್ಭ ಪ್ರತಿಕೃತಿ ದಹಿಸಿರುವುದಕ್ಕೆ ಬೇಸರಗೊಂಡು ಜನರೇ ನನ್ನ ಪರ ಸ್ವಯಂ ಪ್ರೇರಿತರಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಿಜೆಪಿ ಮಾಡುತ್ತಿರುವ ಆರೋಪದಂತೆ ಪ್ರತಿಕ್ರಿಯೆ ನೀಡಲು ನಾನು ಹೇಳಿರುವುದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಲೆ ಏರಿಕೆಯನ್ನು ವಿರೋಧಿಸಿ ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಆದರೆ ವಿರಾಜಪೇಟೆಯಲ್ಲಿ ಬಿಜೆಪಿಯ ಪ್ರತಿಭಟನೆ ಹಾದಿ ತಪ್ಪಿದೆ. ರಾಜ್ಯದ ಎಲ್ಲೂ ಪ್ರತಿಕೃತಿಯನ್ನು ದಹಿಸಿಲ್ಲ, ಸೈಕಲ್ ತುಳಿದಿದ್ದಾರೆ, ವಿರಾಜಪೇಟೆಯಲ್ಲಿ ಮಾತ್ರ ಪ್ರತಿಕೃತಿ ದಹಿಸಲಾಗಿದೆ. ಇದು ಸಹಜವಾಗಿಯೇ ಜನರ ಬೇಸರಕ್ಕೆ ಕಾರಣವಾಗಿದ್ದು, ಸ್ವಯಂ ಪ್ರೇರಣೆಯಿಂದ ನನ್ನ ಪರ ಧ್ವನಿ ಎತ್ತಿದ್ದಾರೆ. ಆದರೆ ಬಿಜೆಪಿಯವರ ಸರಣಿ ಹೇಳಿಕೆಗಳು ಬಿಜೆಪಿಯ ನಾಯಕರೇ ಹೇಳಿ ಮಾಡಿಸಿದ್ದಾಗಿದೆ ಎಂದರು. ಪಕ್ಷಾತೀತ, ಜಾತ್ಯತೀತ ಮತ್ತು ಧರ್ಮಾತೀತವಾಗಿ ಸಾಮಾಜಿಕ ಕಳಕಳಿಯಿಂದ ಜನಸೇವೆ ಮಾಡುತ್ತಾ ಬಂದವನು ನಾನು. ಅಭಿವೃದ್ಧಿ ಕಾರ್ಯಗಳ…
ನಾಪೋಕ್ಲು ಜೂ.26 NEWS DESK : ಬೆಟ್ಟಗೇರಿ ವಲಯ ಕಾಂಗ್ರೆಸ್ ವತಿಯಿಂದ ಪಾಲೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊಣ್ಣ ಅವರ ಹೆಸರಿನಲ್ಲಿ ಮಹಾ ರುದ್ರಭಿಷೇಕ ಪೂಜೆ ಸಲ್ಲಿಸಲಾಯಿತು. ಶಾಸಕ ಎ.ಎಸ್.ಪೊನ್ನಣ್ಣ ಅವರ ಶ್ರೇಯೋಭಿವೃದ್ಧಿಗೆ ಪಕ್ಷದ ಹಿರಿಯರಾದ ನಾಪಂಡ ಗಣೇಶ ಹೆರವನಾಡು ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ಪೂಜಾ ವಿಧಿ ವಿಧಾನವನ್ನು ದೇವಾಲಯದ ಮುಖ್ಯ ಅರ್ಚಕರಾದ ದೇವಿ ಪ್ರಸಾದ್ ನೆರವೇರಿಸಿದರು. ಈ ಸಂದರ್ಭ ಬೆಟ್ಟಗೇರಿ ವಲಯ ಅಧ್ಯಕ್ಷ ಕೊಡಗನ ತೀರ್ಥ ಪ್ರಸಾದ್ , ಗ್ರಾ.ಪಂ ಅಧ್ಯರಾದ ಚಳಿಯಂಡ ಕಮಲ ಉತ್ತಯ್ಯ, ಜಿಲ್ಲಾ ಕಾಂಗ್ರೆಸ್ ಸದಸ್ಯ ಮೋಹನ್ ರಾಜ್ , ಮಾಜಿ ವಲಯ ಅಧ್ಯಕ್ಷರು ಹಾಗೂ ಬೂತ್ ಅಧ್ಯಕ್ಷರಾದ ಕಾಳೇರಮ್ಮನ ಕುಮಾರ್, ಅರ್ವತ್ತೂಕ್ಲು ಬೂತ್ ಅಧ್ಯಕ್ಷ ಪೂಜಾರಿ ರ ಪ್ರದೀಪ್ ಕುಮಾರ್ , ಉಪಾಧ್ಯಕ್ಷರಾದ ಬಾಲಾಡಿ ಪ್ರತಾಪ್ , ಪಾಲೂರು ಬೂತ್ ಅಧ್ಯಕ್ಷ ದೊರೆರಾಜ್, ಮಚ್ಚಂಡ ಲಾಲು ಹಾಜರಿದ್ದರು. ವಲಯದ ಕಾರ್ಯದರ್ಶಿ ಮಜೀದ್ ಹಾಗೂ ಬೆಟ್ಟಗ್ಗೇರಿ…
ಕುಶಾಲನಗರ, ಜೂ.26 NEWS DESK : ಉತ್ತರ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಇಕೋ ಕ್ಲಬ್, ವಿಜ್ಞಾನ ಸಂಘ, ಎನ್.ಎಸ್.ಎಸ್.ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ರೆಡ್ ರಿಬ್ಬನ್ ಕ್ಲಬ್ ವತಿಯಿಂದ ಕುಶಾಲನಗರ ತಾಲ್ಲೂಕು ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳಸಾಗಣೆ ವಿರೋಧಿ ದಿನ ಆಚರಿಸಲಾಯಿತು. ಸಮಾಜ ವಿಜ್ಞಾನ ಸಂಘದ ಉಸ್ತುವಾರಿ ಶಿಕ್ಷಕಿ ಎಸ್.ಎಂ.ಗೀತಾ ಮಾತನಾಡಿ, ಯುವಕರು ವಿವಿಧ ಕಾರಣಗಳಿಂದ ಮಾದಕ ದ್ರವ್ಯದ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಮಾದಕ ದ್ರವ್ಯಗಳ ಪಿಡುಗು ಸಮಾಜದಲ್ಲಿ ಆಳವಾಗಿ ಬೇರೂರಿದೆ. ಇದರಿಂದಾಗಿ ಬಹುತೇಕ ಇಡೀ ಪೀಳಿಗೆಯು ವಿನಾಶದತ್ತ ಸಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಮಾದಕ ವ್ಯಸನ ಮತ್ತು ದುರುಪಯೋಗದ ಹಿಡಿತದಿಂದ ಯುವ ಸಮುದಾಯ ಹಾಗೂ ಜನರನ್ನು ರಕ್ಷಿಸಲು, ಮಾದಕ ವ್ಯಸನ ಮತ್ತು ಅಕ್ರಮ ಸಾಗಣೆ ವಿರುದ್ಧ ಅರಿವು ಮೂಡಿಸುವ ದೃಷ್ಟಿಯಿಂದ ಪ್ರತಿ ವರ್ಷ ಜೂನ್…
ಮಡಿಕೇರಿ ಜೂ.26 NEWS DESK : ಡಾ.ಶಾನ್ ರಾಕ್ ಪ್ರತಿಷ್ಠಾನದ ವತಿಯಿಂದ “ಸೋನಿಕ್ ಸೊಲೇಸ್ 5.0′ ಶೀರ್ಷಿಕೆಯಡಿಯಲ್ಲಿ ಮಡಿಕೇರಿಯ ಜಿಲ್ಲಾ ಕಾರಾಗೃಹದ ಕೈದಿಗಳಿಗೆ ಧ್ವನಿ ಚಿಕಿತ್ಸೆ (ಸೌಂಡ್ ಹೀಲಿಂಗ್) ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರಾಗೃಹದ ಉಪಾಧೀಕ್ಷಕ ಸಂಜಯ್ ದತ್ತಿ, ಪ್ರತಿಷ್ಠಾನದ ಪ್ರಯತ್ನಗಳನ್ನು ಶ್ಲಾಘಿಸಿದರು. ಡಾ.ಶರಣ್ ರಾಕ್ ಮಾತನಾಡಿ, ಅಪರಾಧಿ ನಡವಳಿಕೆ ಹೆಚ್ಚಾಗಿ ಅಂತರ್ಗತ ಲಕ್ಷಣವಾಗಿರದೇ ಸನ್ನಿವೇಶಾನುಸಾರ ಸಾಂದರ್ಭಿಕವಾಗಿ ಬೇರು ಬಿಟ್ಟಿರುತ್ತದೆ. ಈ ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವವರಿಗೆ ತಮ್ಮ ಭಾವನೆಗಳನ್ನು ನಿಭಾಯಿಸುವ ಮತ್ತು ಹಿಂದು ಮುಂದು ನೋಡದೇ ಆವೇಶಭರಿತ ಆಯ್ಕೆಗಳನ್ನು ತಪ್ಪಿಸುವ ಸಾಧನಗಳೊಂದಿಗೆ ಸಜ್ಜುಗೊಳಿಸಲಲಾಗುವುದು ಎಂದರು. ಡಾ.ಶರಣ್ ರಾಕ್ ಪ್ರತಿಷ್ಟಾನವು ಈ ಕಾರ್ಯಾಗಾರವನ್ನೂ ಹೊರತಾದ ವಿಸ್ತ್ರತ ಉದ್ದೇಶವನ್ನು ಹೊಂದಿದೆ. ಗ್ರಾಮೀಣ ಭಾಗದ ಆಸಕ್ತ ಕಲಾವಿದರನ್ನು ತರಬೇತುಗೊಳಿಸುವುದರ ಮೂಲಕ ಸಶಕ್ತಿಕರಿಸುವುದು ಮತ್ತು ಸಂಗೀತವನ್ನು ವೃತ್ತಿಯಾಗಿ ಅನುಸರಿಸಲು ಅವಕಾಶ ಒದಗಿಸುವ ಉದ್ದೇಶವನ್ನು ಹೊಂದಿದೆ. ಗುಣಪಡಿಸುವಿಕೆ, ಕ್ರಿಯಾಶೀಲತೆ, ಶಾಂತಿ ಮತ್ತು…
ನವದೆಹಲಿ ಜೂ.26 NEWS DESK : 18ನೇ ಲೋಕಸಭೆಯ ಸ್ಪೀಕರ್ ಆಗಿ ಬಿಜೆಪಿ ಸಂಸದ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಸತತ 2ನೇ ಅವಧಿಗೆ ಲೋಕಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಓಂ ಬಿರ್ಲಾ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅಭಿನಂದನೆ ಸಲ್ಲಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾತನಾಡಿ 2ನೇ ಬಾರಿಗೆ ಲೋಕಸಭಾಧ್ಯಕ್ಷ ಹುದ್ದೆಯನ್ನು ಅಲಂಕರಿಸಿ ದೊಡ್ಡ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೀರಿ. ಮುಂದಿನ 5 ವರ್ಷಗಳವರೆಗೆ ನೀವು ನಮಗೆ ಮಾರ್ಗದರ್ಶನ ನೀಡುತ್ತೀರಿ ಎಂದು ನಾವು ಭಾವಿಸುತ್ತೇವೆ ಎಂದರು.
ಮಡಿಕೇರಿ ಜೂ.26 NEWS DESK : ಶ್ರೀ ರಾಜೇಶ್ವರಿ ವಿದ್ಯಾಲಯ ವತಿಯಿಂದ ಪ್ರಪ್ರಥಮ ಬಾರಿಗೆ ಎಸ್.ಆರ್.ವಿ ಫುಟ್ಬಾಲ್ ಕಪ್ ಹೊನಲು ಬೆಳಕಿನ ಫುಟ್ಬಾಲ್ ಪ್ರೀಮಿಯರ್ ಲೀಗ್ ಪಂದ್ಯವು ಜು.7 ರಂದು ನಡೆಯಲಿದೆ. ನಗರದ ಗಾಂಧಿ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಮಡಿಕೇರಿ ನಗರದ ಕ್ರೀಡಾ ಪಟುಗಳಿಗೆ ಮಾತ್ರ ಸೀಮಿತವಾಗಿದೆ. ಒಟ್ಟು ಹತ್ತು ಮಾಲೀಕತ್ವದ ಹತ್ತು ತಂಡಗಳು ಪಾಲ್ಗೊಳ್ಳಲಿದೆ. ಬೆಂಜ್ಝಿ ಫುಟ್ಬಾಲ್ ಕ್ಲಬ್, ದಿ ರೆಡ್ ಡೆವಿಲ್ಸ್, ಟೀಮ್ ಭಗವತಿ, ಕೂರ್ಗ್ ಚಾಮರ್ಸ್, ಟೀಮ್ ಒನ್ ಟಚ್, ಟೀಮ್ ಬ್ರದರ್ಸ್, ವೆಸ್ಟನ್, ವೈಲ್ಡ್ ಮಾಸ್ಟರ್ಸ್, ಟೀಮ್ ಲೆಜೆಂಡ್ಸ್, ಹಾಗೂ ಕೆ.ಎಂ.ಯುನೈಟೆಡ್ ತಂಡಗಳ ನಡುವೆ ಪಂದ್ಯಗಳು ನಡೆಯಲಿವೆ. ವಿಜೇತ ತಂಡಕ್ಕೆ 25,000 ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 15,000 ನಗದು ಹಾಗೂ ಆಕರ್ಷಕ ಟ್ರೊಫಿ ಜೊತೆಗೆ ವೈಯಕ್ತಿಕ ಟ್ರೊಫಿಗಳು ನೀಡಲಾಗುವುದು. ಕ್ರೀಡಾ ಕೂಟದ ಪ್ರಮುಖವಾಗಿ ಎಂ.ಸಿ.ಸಿ ಲೆಜೆಂಡ್ಸ್ ಹಾಗೂ ಕೊಡಗು ಪತ್ರಕರ್ತರ ನಡುವೆ ಪ್ರದರ್ಶನ ಪಂದ್ಯವು ನಡೆಯಲಿದೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…
ಮಡಿಕೇರಿ ಜೂ.26 NEWS DESK : ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ರಾತ್ರಿ ವೇಳೆ ನಿರಂತರ ಮಳೆ ಸುರಿಯುತ್ತಿದ್ದು, ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಜೂನ್ ತಿಂಗಳ ಆರಂಭದಲ್ಲಿ ಕೈಕೊಟ್ಟ ಮಳೆ ಕೊನೆಯಲ್ಲಿ ಬಿರುಸು ಪಡೆದುಕೊಂಡಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಶ್ರೀಭಗಂಡೇಶ್ವರ ಕ್ಷೇತ್ರ ಭಾಗಮಂಡಲದಲ್ಲಿ ಉತ್ತಮ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ತಲಕಾವೇರಿ ರಸ್ತೆಯಲ್ಲಿ ಮರ ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆಯಾಗಿತ್ತು. ಇದೀಗ ಮರವನ್ನು ತೆರವುಗೊಳಿಸಲಾಗಿದೆ. ಮಡಿಕೇರಿ ನಗರ ವ್ಯಾಪ್ತಿಯಲ್ಲೂ ಮಳೆಯಾಗುತ್ತಿದ್ದು, ಮಂಜು ಮತ್ತು ಚಳಿ ಇದೆ. ನೀರುಕೊಲ್ಲಿ- ಚೆಟ್ಟಳ್ಳಿ ರಸ್ತೆಯಲ್ಲಿ ಮರ ಬಿದ್ದು, ವಾಹನ ಸಂಚಾರಕ್ಕೆ ತೊಡಕ್ಕುಂಟಾಗಿತ್ತು. ವಿರಾಜಪೇಟೆ, ಗೋಣಿಕೊಪ್ಪ, ಪೊನ್ನಂಪೇಟೆ, ಸೋಮವಾರಪೇಟೆ, ಕುಶಾಲನಗರ, ಸಿದ್ದಾಪುರ, ಕರಿಕೆ ಭಾಗದಲ್ಲೂ ಮಳೆಯಾಗುತ್ತಿದೆ. ಆರ್ದ್ರಾ ಮಳೆಯ ಆಗಮನ ಕೃಷಿಕರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡAತೆ ಕಳೆದ 24…
ಮಡಿಕೇರಿ ಜೂ.26 NEWS DESK : ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಹಾಲ್ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಉದ್ಘಾಟಿಸಿ, ಮಾತನಾಡಿ ಯುವಕರು ದುಶ್ಚಟಗಳಿಂದ ದೂರವಿರಬೇಕು. ವಿದ್ಯಾರ್ಥಿಗಳು, ಮಾದಕ ದ್ರವ್ಯ ಸೇವನೆ ಮಾಡದಂತೆ ಜನರಿಗೆ ತಿಳಿವಳಿಕೆ ನೀಡಬೇಕು ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಪ್ಪ, ನಗರಸಭೆ ಪೌರಾಯುಕ್ತ ವಿಜಯ್ ಹಾಗೂ ಇತರರು ಇದ್ದರು. ಸಭಾ ಕಾರ್ಯಕ್ರಮಕ್ಕೂ ಮೊದಲು ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಹೊರಟು ಮಂಗೇರಿರ ಮುತ್ತಣ್ಣ ವೃತ್ತ, ಅಜ್ಜಮಾಡ ದೇವಯ್ಯ ವೃತ್ತ, ಇಂದಿರಾಗಾಂಧಿ ವೃತ್ತ ಹಾಗೂ ಕಾಲೇಜು ರಸ್ತೆ ಮೂಲಕ ಜಾಗೃತಿ ಜಾಥಾ ಹೊರಟು ನಗರದ ಕಾವೇರಿ ಹಾಲ್ ಜಾಗೃತಿ ಜಾಥ ನಡೆಯಿತು.
ಮಡಿಕೇರಿ ಜೂ.26 NEWS DESK : ಕೊಡಗಿನ ಹಾಕಿಯ ಪಿತಾಮಹ ಎಂದೆ ಹೆಸರಾದ ಶಂಕರ ಸ್ವಾಮಿ ಅವರ ಗರಡಿಯಲ್ಲಿ ಪಳಗಿದ ಅದೆಷ್ಟೋ ಆಟಗಾರರು ಬಾನಿನಲ್ಲಿ ನಕ್ಷತ್ರಗಳಿದ್ದಂತೆ, ಅವರ ಲೆಕ್ಕ ಸಿಕ್ಕುವುದಿಲ್ಲ. ಇವರ ಲೇಖನದಲ್ಲಿ “ಮುದ್ದಯ್ಯ ಒಬ್ಬ ಅದ್ಭುತ ಆಟಗಾರ ಹಾಗೂ ತರಬೇತಿದಾರನಾಗಬಹುದು ಹಾಗೂ ತಾನು ಹುಟ್ಟು ಹಾಕಿದ ವಾಂಡರರ್ಸ್ ಸಂಸ್ಥೆಯನ್ನು ಮುನ್ನಡೆಸುವ ಸಾಮರ್ಥ್ಯ ಹೊಂದಿರುವ ಆಟಗಾರನಾಗುತ್ತಾನೆ” ಎಂದು ಕಾಫಿ ಲ್ಯಾಂಡ್ ಪತ್ರಿಕೆಯಲ್ಲಿ ಕೆಲವು ವರ್ಷಗಳ ಹಿಂದೆ ಮುನ್ನುಡಿ ಬರೆದಿದ್ದರು. ಕೊಡಗಿನ ಕೋಟೇರ ನಂಜುಂಡ ಹಾಗೂ ಕಾಮವ್ವ (ತಾಮನೆ ಕೀತಿಯಂಡ) ದಂಪತಿಯರ ಪುತ್ರನಾಗಿ ಮುದ್ದಯ್ಯನವರು 5 ಏಪ್ರಿಲ್ 1949 ರಲ್ಲಿ ಜನಿಸಿದರು. ಇವರ ತಂದೆ ನಿವೃತ್ತ ಅಸಿಸ್ಟೆಂಟ್ ಕಮಿಷನರ್. ಇವರು ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಮಡಿಕೇರಿಯ ಸೆಂಟ್ರಲ್ ಹೈಸ್ಕೂಲ್ ನಲ್ಲಿ ಪಡೆದರು. :: ಅದ್ಭುತ ಕಲೆ :: ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ಪದವಿ ಓದುತ್ತಿದ್ದಾಗ ಮೈಸೂರು ವಿಶ್ವವಿದ್ಯಾನಿಲಯವನ್ನು 3 ವರ್ಷಗಳ ಕಾಲ ಪ್ರತಿನಿಧಿಸಿದ್ದರು. ಪೂನಾದ ವಿರುದ್ಧ ನಡೆದ ಅಂತರ…






