ಲೇಖಕ: admin

ಮೈಸೂರು ಜೂ.15 NEWS DESK : ಬ್ಯಾಂಕಿನವರಂತೆ ಮಾತಾಡಿ, ಆನ್‌ ಲೈನ್‌ ಉದ್ಯೋಗ , ಷೇರು ಮಾರುಕಟ್ಟೆ ಹಣದ ಅಮಿಷ ಒಡ್ಡಿ ಹಣ ದೋಚುವ ಗ್ಯಾಂಗ್‌ ನ ವಂಚಕರು ಇದೀಗ ಅರಣ್ಯ ಇಲಾಖೆಯ ಆನ್ಲೈನ್‌ ರಿಸರ್ವೇಶನ್ ಗೂ ನಕಲಿ‌ ವೆಬ್‌ಸೈಟ್‌ ತೆರೆದು ಹಣ ದೋಚುತ್ತಿರುವ ಬಗ್ಗೆ ಅರಣ್ಯ ಇಲಾಖೆಯು ಪ್ರವಾಸಿಗರಿಗೆ ಎಚ್ಚರಿಸಿದೆ. ಕಳೆದ ಜನವರಿ ತಿಂಗಳಿನಲ್ಲಿ ನಾಗರಹೊಳೆ ನ್ಯಾಷನಲ್‌ ಪಾರ್ಕ್‌ ಎಂಬ ನಕಲಿ ವೆಬ್‌ ಸೈಟ್‌ ತೆರೆದು ಪ್ರವಾಸಿಗರಿಗೆ ಸಫಾರಿ ಹಾಗೂ ರೂಂ ಬುಕಿಂಗ್‌ ಎಂದು ಹಣ ವಂಚಿಸುತಿದ್ದ ಗ್ಯಾಂಗ್‌ ಇದೀಗ ಮತ್ತೆ ಸಕ್ರಿಯವಾಗಿದೆ. ನಾಗರಹೊಳೆಯ ಕಾಕನಕೋಟೆ, ವೀರನಗೊಸಳ್ಳಿ ಮತ್ತು ನಾಣಚ್ಚಿ ಕೇಂದ್ರಗಳ ಮೂಲಕ ಸಫಾರಿಗೆ ತೆರಳಲು ಪ್ರವಾಸಿಗರಿಗೆ ಆನ್‌ಲೈನ್‌ ಬುಕಿಂಗ್‌ ವ್ಯವಸ್ಥೆ ಇದೆ. ಈ ಹಿಂದೆ ಜನವರಿಯಲ್ಲಿ ನಕಲಿ ವೆಬ್‌ ಸೈಟ್‌ ಮೂಲಕ ಇಲ್ಲಿಗೆ ಬುಕಿಂಗ್‌ ಮಾಡಿಕೊಂಡು ಪ್ರವಾಸಿಗರಿಗೆ ಸಾವಿರಾರು ರೂಪಾಯಿ ವಂಚನೆ ಮಾಡಲಾಗಿತ್ತು. ಪ್ರವಾಸಿಗರು ಬುಕಿಂಗ್‌ ಮಾಡಿದ ಹಿನ್ನೆಲೆಯಲ್ಲಿ ಆರಾಮವಾಗಿ ಸಫಾರಿ ಕೇಂದ್ರಕ್ಕೆ ಬಂದಾಗಲೇ ನಕಲಿ ಬುಕಿಂಗ್‌ ವಂಚನೆ…

Read More

ಮಡಿಕೇರಿ ಜೂ.14 NEWS DESK : ರಕ್ತದಾನ ಮಹಾದಾನವಾಗಿದ್ದು, ಕೊಡಗು ವಿಶ್ವ ವಿದ್ಯಾನಿಲಯಕ್ಕೆ ಒಳಪಡುವ ಎಲ್ಲಾ ಕಾಲೇಜುಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಚಿಕ್ಕಅಳುವಾರ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಆಲೂರ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತನಿಧಿ ಕೇಂದ್ರ, ಜಿಲ್ಲಾಸ್ಪತ್ರೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸೋಮವಾರಪೇಟೆ ತಾಲ್ಲೂಕು, ಕೊಡಗು ವಿಶ್ವ ವಿದ್ಯಾಲಯ, ಭಾರತೀಯ ರೆಡ್‌ಕ್ರಾಸ್ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ವಿಶ್ವವಿದ್ಯಾನಿಲಯದ ಚಿಕ್ಕ ಅಳುವಾರದ ಜ್ಞಾನ ಕಾವೇರಿ ಕ್ಯಾಂಪಸ್ ನಲ್ಲಿ ಶುಕ್ರವಾರ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಕ್ತದಾನದಿಂದಾಗುವ ಲಾಭಗಳ ಕುರಿತು ಅರಿವು ಮೂಡಿಸಿಕೊಳ್ಳುವುದು ಮುಖ್ಯ. ಮುಂಬರುವ ದಿನಗಳಲ್ಲಿ ಕೊಡಗು ವಿಶ್ವ ವಿದ್ಯಾನಿಲಯಕ್ಕೆ ಒಳಪಟ್ಟ ಎಲ್ಲಾ ಕಾಲೇಜುಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ರಕ್ತದಾನ ದಿನಾಚರಣೆ ಕಾರ್ಯಕ್ರಮವನ್ನು ಕಳೆದ 20 ವರ್ಷಗಳಿಂದ ಆಚರಿಸಿಕೊಂಡು…

Read More

ಮಡಿಕೇರಿ ಜೂ.14 NEWS DESK : ಚಲಿಸುತ್ತಿದ್ದ ಕಾರಿಗೆ ಸಿಲುಕಿ ಜಿಂಕೆಯೊಂದು ಮೃತಪಟ್ಟಿರುವ ಘಟನೆ ಕುಶಾಲನಗರ- ಮಡಿಕೇರಿ ಹೆದ್ದಾರಿಯ ಆನೆಕಾಡು ಮೀಸಲು ಅರಣ್ಯದ ಬಳಿ ನಡೆದಿದೆ. ಕುಶಾಲನಗರ ಕಾರು ಶೋ ರೂಮ್ ನಿಂದ ಮಡಿಕೇರಿ ಶೋರೂಮ್ ಗೆ ತೆರಳುತ್ತಿದ್ದ ಹೊಸ ಕಾರಿಗೆ ಅತ್ತೂರು ಅರಣ್ಯ ವಲಯದಿಂದ ಆನೆಕಾಡು ಮೀಸಲು ಅರಣ್ಯ ವಲಯದ ಕಡೆಗೆ ಸಾಗುತ್ತಿದ್ದ ಜಿಂಕೆ ಸಿಲುಕಿದೆೆ. ತೀವ್ರವಾಗಿ ಗಾಯಗೊಂಡ ಜಿಂಕೆ ಸ್ಥಳದಲ್ಲೇ ಮೃತಪಟ್ಟಿದೆ. ಕಾರು ಕೂಡ ಜಖಂಗೊಂಡಿದ್ದು, ಆನೆಕಾಡು ಮೀಸಲು ಅರಣ್ಯದ ಉಪವಲಯ ಅರಣ್ಯ ಅಧಿಕಾರಿ ದೇವಯ್ಯ ಹಾಗೂ ಸಿಬ್ಬಂದಿಗಳು ಸ್ಥಳ ಮಹಜರು ನಡೆಸಿ ಕಾರು ಚಾಲಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಸ್ಥಳಕ್ಕೆ ಕುಶಾಲನಗರ ವಲಯ ಅರಣ್ಯ ಅಧಿಕಾರಿ ರತನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More

ಮಡಿಕೇರಿ ಜೂ.14 NEWS DESK : ರಾಷ್ಟ್ರೀಯ ಸೇವಾಯೋಜನೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವನ್ನು ಹೆಚ್ಚಿಸಲು ಮತ್ತು ಪ್ರತಿಭೆಗೆ ಉತ್ತಮ ವೇದಿಕೆಯನ್ನು ಕಲ್ಪಸಿಕೊಡುತ್ತದೆ ಎಂದು ರಾಜ್ಯಮಟ್ಟ ಅತ್ಯುತ್ತಮ ಎನ್.ಎಸ್.ಎಸ್ ಅಧಿಕಾರಿ ಪ್ರಶಸ್ತಿ ವಿಜೇತೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಸ್ನಾತಕೋತ್ತರ ವಿಭಾಗದ ಅರ್ಥಶಾಸ್ತ್ರ ಉಪನ್ಯಾಸಕಿ ಮಧುರ ಅಭಿಪ್ರಾಯ ವ್ಯಕ್ತಪಡಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಹಾಗೂ ಕೊಡಗು ವಿಶ್ವ ವಿದ್ಯಾನಿಲಯಯ ಅಧಿನಕ್ಕೆ ಒಳಪಡುವ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ 2023-24ನೇ ಸಾಲಿನ ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿಯಾಗಿದೆ. ಇದು ನಾಯಕತ್ವಗುಣ ಬೆಳೆಸುವುದರ ಜೊತೆಗೆ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ ಕಲ್ಪಿಸುತ್ತದೆ ಎಂದರು. ಎನ್‍ಎಸ್‍ಎಸ್‍ನಲ್ಲಿ ಕೇವಲ ಕೆಲಸ ಮಾಡಬೇಕು ಎಂದುಕೊಳ್ಳದೆ ಸ್ವಯಂ ಸೇವಕರ ಸೇವೆ ಎಂಬುದನ್ನು ಅರಿತುಕೊಳ್ಳಬೇಕು. ಇಲ್ಲಿ ಕಲಿತ ಗುಣಗಳನ್ನ ಜೀವನದಲ್ಲೂ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.…

Read More

ಮಡಿಕೇರಿ ಜೂ.14 NEWS DESK : ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ ಜಾರಿಗೊಳಿಸಿದ ಹಿನ್ನಲೆಯಲ್ಲಿ ಈ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಮಹತ್ತರ ಪಾತ್ರವಹಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಅವರನ್ನು ದೊಡ್ಡಬಳ್ಳಾಪುರ ವಕೀಲರ ಸಂಘದ ಸಂಘದಿಂದ ಸನ್ಮಾನಿಸಲಾಯಿತು. ಎ.ಎಸ್.ಪೊನ್ನಣ್ಣ ನವರ ವಿಧಾನ ಸೌಧ ಕಚೇರಿಗೆ ಭೇಟಿ ನೀಡಿದ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಶಾಸಕರನ್ನು ಸನ್ಮಾನಿಸಿ ಗೌರವಿಸಿದರು. ಇದೇ ಸಂದರ್ಭ ಕಚೇರಿ ಕಟ್ಟಡ ನಿರ್ಮಾಣಕ್ಕೆ ಮನವಿ ಸಲ್ಲಿಸಿದರು. ಸಂಘದ ಅಧ್ಯಕ್ಷ ಎಂ.ರವಿ, ಪದಾಧಿಕಾರಿಗಳಾದ ಕೃಷ್ಣಮೂರ್ತಿ, ಮುನಿರಾಜ್, ವಿಜಯ್ ಕುಮಾರ್, ಸದಸ್ಯರಾದ ಶಿವಕುಮಾರ್, ಮಹಮದ್ ಮಮ್ತಾಜ್, ಪ್ರಭಾಕರ್,ಸೈಯದ್ ನಾಜಿಮ್,ಪ್ರವೀಣ್ ಕುಮಾರ್,ಮೋಹನ್ ಕುಮಾರ್ ಹಾಜರಿದ್ದರು.

Read More

ಮಡಿಕೇರಿ ಜೂ.14 NEWS DESK : ಸುಂಟಿಕೊಪ್ಪ ಹೋಬಳಿ ಅತ್ತೂರು ನಲ್ಲೂರು ಗ್ರಾಮದಲ್ಲಿ ದಲಿತರು ಹಾಗೂ ಹಿಂದುಳಿದವರ ಮೇಲೆ ನಾಲ್ವರು ವ್ಯಕ್ತಿಗಳಿಂದ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದ್ದು, ತಕ್ಷಣ ಇವರುಗಳನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರಿಗೆ ದೂರು ನೀಡಿದ್ದಾರೆ. ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಹೆಚ್.ಎಲ್.ದಿವಾಕರ್ ಮಾತನಾಡಿ ಅತ್ತೂರು-ನಲ್ಲೂರು ಗ್ರಾಮದಲ್ಲಿ ಸುಮಾರು 150 ಮಂದಿ ದಲಿತರು ಹಾಗೂ ಹಿಂದುಳಿದವರು ವಾಸ ಮಾಡುತ್ತಿದ್ದು, ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ. ಆದರೆ ಅದೇ ಗ್ರಾಮದ ನಾಲ್ವರು ಯುವಕರು ಸಂಘಟನೆಗಳ ಹೆಸರಿನಲ್ಲಿ ದೌರ್ಜನ್ಯ ನಡೆಸಿ ನೆಮ್ಮದಿ ಕೆಡಿಸಿದ್ದಾರೆ ಎಂದು ಆರೋಪಿಸಿದರು. ಕೆಲವು ದಿನಗಳ ಹಿಂದೆ ಗ್ರಾಮದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಪ್ರಕರಣದ ಹಾದಿ ತಪ್ಪಿಸಲು ಯತ್ನಿಸಿದ್ದಾರೆ. ಇದೇ ರೀತಿ ಮುಂದುವರೆದರೆ ಮುಂದೆ ದೊಡ್ಡ ಅನಾಹುತ ಸಂಭವಿಸುವ ಆತಂಕವಿದೆ. ಆದ್ದರಿಂದ ತಕ್ಷಣ ನಾಲ್ವರನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು. ಗ್ರಾಮಸ್ಥರಾದ ಸ್ವಾತಿ ಮಾತನಾಡಿ, ಕೆಲವು…

Read More

ಜಮ್‌ಶೆಡ್‌ಪುರ ಜೂ.14 NEWS DESK : ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯ ರೈಲು ನಿಲ್ದಾಣದ ಬಳಿ ಶುಕ್ರವಾರ ಗೂಡ್ಸ್ ರೈಲಿಗೆ ಸಿಲುಕಿ ಇಬ್ಬರು ಎಳೆ ಮಕ್ಕಳು ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್‌ಶೆಡ್‌ಪುರ ನಗರದ ಹೊರವಲಯದಲ್ಲಿರುವ ಗೋವಿಂದಪುರ ಹಾಲ್ಟ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಎರಡು ವರ್ಷದ ಬಾಲಕ ಮತ್ತು ಮೂರು ವರ್ಷದ ಬಾಲಕಿ ಜೊತೆಯಲ್ಲಿ ಮುಂಜಾನೆ ಹಳಿ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮೂವರು ಒಂದೇ ಕುಟುಂಬದ ಸದಸ್ಯರು ಎಂದು ಹೇಳಲಾಗಿದೆ. ಮೂವರು ಪ್ರಾಯಶಃ ಪೂರ್ವ ಸಿಂಗ್‌ಭೂಮ್ ಜಿಲ್ಲೆಯ ಪೊಟ್ಕಾ ಬ್ಲಾಕ್‌ನ ನಿವಾಸಿಗಳಾಗಿದ್ದು, ಅವರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಗೋವಿಂದಪುರ ಪೊಲೀಸ್ ಠಾಣೆಯ ಅಧಿಕಾರಿ ಪ್ರಕಾಶ್ ಕುಮಾರ್ ತಿಳಿಸಿದ್ದಾರೆ. ಗೋವಿಂದಪುರ ಹಾಲ್ಟ್ ರೈಲು ನಿಲ್ದಾಣವು ಆಗ್ನೇಯ ರೈಲ್ವೆಯ ಚಕ್ರಧರಪುರ ವಿಭಾಗದ ಅಡಿಯಲ್ಲಿ ಬರುತ್ತದೆ. ಮೃತದೇಹಗಳನ್ನು ಇಲ್ಲಿನ ಎಂಜಿಎಂ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Read More

ಮಡಿಕೇರಿ ಜೂ.14 NEWS DESK : ಇತ್ತೀಚೆಗೆ ಗೋವಾದಲ್ಲಿ ನಡೆದ ರಾಷ್ಟ್ರೀಯ ಮುಕ್ತ ಕಬಡ್ಡಿ ಪಂದ್ಯಾವಳಿಯಲ್ಲಿ “ರೈಸಿಂಗ್ ಸ್ಟಾರ್ ಕೊಡಗು” ತಂಡ ಚಿನ್ನದ ಪದಕ ಗೆದ್ದುಕೊಂಡಿದೆ. ಡಿಫೆಂಡರ್ ಆಗಿ ಉತ್ತಮ ಪ್ರದರ್ಶನ ತೋರಿದ ಪಾಲೂರು ಗ್ರಾಮದ ಆರ್.ಸಮರ್ಥ ಚಿನ್ನದ ಪದಕ ಗೆದ್ದಿದ್ದಾರೆ. ಇವರು ರಾಜೇಶ್ ಬಂಗೇರ ಹಾಗೂ ಕವಿತಾ ದಂಪತಿ ಪುತ್ರ. ತರಬೇತುದಾರ ಸುರೇಶ್ ಟಿ. ಅವರ ನೇತೃತ್ವದಲ್ಲಿ ನಡೆದ ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಈ ಸಾಧನೆ ಮಾಡಿದ್ದಾರೆ. ಸಮರ್ಥ್ ನ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಹಿರಿಯ ಕ್ರೀಡಾಪಟು ಆನಂದ ಪೂಜಾರಿ ಅವರು ಮುಂದಿನ ದಿನಗಳಲ್ಲಿ ಕ್ರೀಡಾಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಲಿ ಎಂದು ಶುಭ ಕೋರಿದ್ದಾರೆ.

Read More

ಮಡಿಕೇರಿ ಜೂ.14 NEWS DESK :  ಪಾರಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚುನಾವಣೆಯ ಮೂಲಕ ಶಾಲಾ ನಾಯಕರನ್ನು ನೇಮಕ ಆಯ್ಕೆಮಾಡಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ವೇದಪ್ರಸಾದ್‌ ನಿರ್ದೇಶನದಂತೆ ನಡೆದ ಚುನಾವಣೆಯಲ್ಲಿ ಪ್ರಧಾನಮಂತ್ರಿಯಾಗಿ ಜೆ.ಸಿ.ಮನು, ಉಪ ಪ್ರಧಾನಿಯಾಗಿ ಹೆಚ್.ಪಿ.ಪೊನ್ನಪ್ಪ, ಗೃಹ ಮಂತ್ರಿಗಳಾಗಿ ಪ್ರೀತಂ ಮತ್ತು ತಶ್ವಿನ್ , ಆರೋಗ್ಯ ಮಂತ್ರಿಗಳಾಗಿ ರಚನ ಮತ್ತು ನವ್ಯ,  ಕ್ರೀಡಾ ಮಂತ್ರಿಯಾಗಿ ಪೊನ್ನಪ್ಪ ಆಯ್ಕೆಯಾದರು. ಸಾಂಸ್ಕೃತಿಕ ಸಚಿವರಾಗಿ ತಾನ್ಸಿ ಮತ್ತು ಸಿಂಧು, ಸ್ವಚ್ಚತಾ ಸಚಿವರಾಗಿ ನೇಹಾಲ್ ಮತ್ತು ಶಶಾಂಕ್, ತೋಟಗಾರಿಕೆ ಮಂತ್ರಿಗಳಾಗಿ ಡೆವಿನ್ ಕರುಂಬಯ್ಯ, ಮತ್ತು ಹೇಮಂತ್, ವಾರ್ತಾ ಮಂತ್ರಿಯಾಗಿ ನಂದಿನಿ, ಆಹಾರ ಮಂತ್ರಿಗಳಾಗಿ ಸಿಂಧು ಮತ್ತು ಪೂಜ  ನೇಮಕಗೊಂಡರು. ಪ್ರಜಾಪ್ರಭುತ್ವ ಮಾದರಿಯಲ್ಲಿ ಗುಪ್ತ ಮತದಾನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಿತು. ನಂತರ ಮಾತನಾಡಿದ ಮುಖ್ಯ ಶಿಕ್ಷಕ ವೇದ ಪ್ರಸಾದ್, ಮಕ್ಕಳ ಮನಸ್ಸಿನಲ್ಲಿ ಪ್ರಜಾಪ್ರಭುತ್ವದ ಮಹತ್ವ ಮತ್ತು ದೇಶಕಟ್ಟುವಲ್ಲಿನ ಜವಾಬ್ದಾರಿಯ ಅರಿವನ್ನು ಈಗಿನಿಂದಲೇ ಜಾಗೃತಿಗೊಳಿಸಿದರೆ, ಮುಂದಿನ ಭವ್ಯ ಬಲಿಷ್ಠ ದೇಶದ ಕನಸು ನನಸಾಗಲಿದೆ ಮತ್ತು ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿಯೆ…

Read More

ಮಡಿಕೇರಿ ಜೂ.14 NEWS DESK : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜೂ.23 ರಂದು ನಗರದಲ್ಲಿ ಸಾರ್ವಜನಿಕರಿಗಾಗಿ ‘ಪ್ರಕೃತಿ-ಪರಿಸರ’ ವಿಷಯದ ಕುರಿತು ಜಿಲ್ಲಾ ಮಟ್ಟದ ಕವಿಗೋಷ್ಠಿ ಆಯೋಜಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಬ್ಬಿರ ಸರಸ್ವತಿ ತಿಳಿಸಿದ್ದಾರೆ.. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಭಾರತೀಯ ವಿದ್ಯಾಭವನದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಸಾಹಿತಿ ಕಿಗ್ಗಾಲು ಗಿರೀಶ್ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು. ಕವಿಗೋಷ್ಠಿಯಲ್ಲಿ ಆಯ್ಕೆಯಾದ ಮೊದಲ ಮೂರು ಅತ್ಯುತ್ತಮ ಕವನಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ಕವಿ, ಕವಯತ್ರಿಗಳಿಗೆ ಪ್ರಶಂಸನಾ ಪತ್ರ ನೀಡಲಾಗುವುದೆಂದು ಎಂದು ಬಬ್ಬಿರ ಸರಸ್ವತಿ ಹೇಳಿದರು. ಮಕ್ಕಳ ಕವನಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಮೊದಲು ನೋಂದಾಯಿತ 30 ಕವನಗಳಿಗೆ ಕಾರ್ಯಕ್ರಮದಲ್ಲಿ ವಾಚನ ಮಾಡಲು ಅವಕಾಶ ಕಲ್ಪಿಸಲಾಗುವುದು. ಆಸಕ್ತ ಕವಿಗಳು ಜೂ.22ರ ಒಳಗೆ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ…

Read More