ಲೇಖಕ: admin

ಮಡಿಕೇರಿ ಡಿ.20 NEWS DESK : ಹೆರವನಾಡು ಗ್ರಾಮದ ಕಲ್ಲಂಬಿಮನೆ ರಾಜ ಎಂಬುವರರ ಮನೆಯ ಶೆಡ್‍ನಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಪಿಯೂಷ್ ಪೆರೇರ ರಕ್ಷಿಸಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.

Read More

ಬೆಂಗಳೂರು, ಡಿ.20 NEWS DESK : ಬೆಳಗಾವಿ ಅಧಿವೇಶನ ಮುಗಿಸಿ ಬೆಂಗಳೂರಿಗೆ ಹಿಂತಿರುಗಿ ಬರುವಾಗ ಹೃದಯಾಘಾತದಿಂದ ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ದೊಡ್ಡ ಬೊಮಯ್ಯ (63) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಬೆಳಗಾವಿಯಲ್ಲಿ ನಡೆದ ವಿಧಾನಮಂಡಲದ ಅಧಿವೇಶನ ಮುಗಿದ ನಂತರ ಇಂದು ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿದ್ದರು.ಮನೆಗೆ ತೆರಳಲು ಬಿಎಂಟಿಸಿ ಬಸ್ ಹತ್ತಿದ್ದಾರೆ. ಬಸ್ಸಿನಲ್ಲೇ ಬೊಮಯ್ಯ ಅವರಿಗೆ ಹೃದಯಘಾತವಾಗಿ ನಿಧನರಾಗಿದ್ದಾರೆ. ಮೃತರು ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಹುಟ್ಟೂರು ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ ದೊಡ್ಡಯ್ಯ ಮತ್ತು ಚಿಕ್ಕಮ ದಂಪತಿಯ ಪುತ್ರರಾದ ದೊಡ್ಡಬೊಮಯ್ಯ ಅವರು ಈ ಮೊದಲು ಸಂಜೆವಾಣಿ ಮತ್ತು ಪ್ರಸ್ತುತ ಇಂದು ಸಂಜೆ  ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ ಕೆಲಸ ಮಾಡಿದ್ದರು. ಸುಮಾರು 30 ವರ್ಷ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಅವರು,…

Read More

ವಿರಾಜಪೇಟೆ  ಡಿ.20 NEWS DESK : ಬಿಳುಗುಂದ ಸರಕಾರಿ ಪ್ರೌಢ ಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಅಮ್ಮತ್ತಿ ಕೊಡವ ಸಮಾಜದ ಅಧ್ಯಕ್ಷರೂ ಹಾಗೂ ಸಮಾಜ ಸೇವಕರಾದ ಐನಂಡ ಪ್ರಕಾಶ್ ಗಣಪತಿ, ಲೀನಾ ಗಣಪತಿ ಹಾಗೂ ನಿವೃತ ಶಿಕ್ಷಕಿ ಸಾವಿತ್ರಿ ಹೆಚ್.ಜಿ. ಪಾಲ್ಗೊಂಡಿದ್ದರು. ಶಾಲೆಯ ಮುಖ್ಯ ಶಿಕ್ಷಕರಾದ ಡಾ. ರವಿ ಆರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಜ್ವಾಲಾಮುಖಿಯ ಮಾದರಿಯಲ್ಲಿ ಲಾವಾ ಹೊರಹೊಮ್ಮಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ವಿದ್ಯಾರ್ಥಿಗಳು ಗಣಿತದ ಆಕೃತಿಗಳನ್ನು ಮತ್ತು ವಿಜ್ಞಾನದ ಹಲವು ಮಾದರಿಗಳನ್ನು, ರಂಗೋಲಿಗಳನ್ನು ರಚಿಸಿ ಪ್ರದರ್ಶಿಸಿ, ಅದರ ಕಾರ್ಯ ವೈಖರಿಯನ್ನು ವೇದಿಕೆಯಲ್ಲಿ ಪ್ರದರ್ಶಿಸಿ ವಿವರಿಸಿದರು. ಅತಿಥಿಗಳು ವಿದ್ಯಾರ್ಥಿಗಳಿಗೆ ಪ್ರಯೋಗಗಳಲ್ಲಿ ಹಾಗೂ ಮಾದರಿಗಳ ನಿರ್ಮಾಣದಲ್ಲಿ ಇರುವ ಆಸಕ್ತಿಯನ್ನು ಕಂಡು ಅಭಿನಂದಿಸಿ, ಪ್ರೋತ್ಸಾಹಿಸಿದರು. ಶಾಲೆಯ ಗಣಿತ ಶಿಕ್ಷಕಿ ಅರುಣ ಆನ್ಸಿ ಡಿಸೋಜಾ ಹಾಗೂ ವಿಜ್ಞಾನ ಶಿಕ್ಷಕಿ ರೂಪ ಕಡೇಮನಿ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. ಶಿಕ್ಷಕರಾದ ಲೀಲಾವತಿ ವಿ.ಕೆ., ಭವ್ಯ…

Read More

ಮಡಿಕೇರಿ ಡಿ.20 NEWS DESK : ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಅಂಗವಾಗಿ ಮೈಸೂರಿನಿಂದ ಆರಂಭಗೊಂಡ ರಥಯಾತ್ರೆ ಮಡಿಕೇರಿಗೆ ಆಗಮಿಸಿತು. ಗೌಡ ಸಮಾಜ, ಜೂನಿಯರ್ ಕಾಲೇಜು ಹಾಗೂ ಸಂತ ಮೈಕಲರ ಶಾಲೆಗೆ ರಥಯಾತ್ರೆ ತೆರಳಿ ಅಲ್ಲಿ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳಿಂದಾಗುವ ಅಪಾಯ, ದೇಶದ ಮೇಲಾಗುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲಾಯಿತು. ನಗರದ ಜೂನಿಯರ್ ಕಾಲೇಜಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಹಿಳಾ ಕಾಲೇಜು, ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳು, ವಿವಿಧ ಶಾಲೆಯ ಶಿಕ್ಷಕರು ಪಾಲ್ಗೊಂಡಿದ್ದರು. ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಕಿರು ನಾಟಕದ ಮೂಲಕ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು. ಗಾಂಜಾ ಸೇವನೆ ಮಾಡುವವರು ಮಾನಸಿಕ ಸ್ಥಿಮಿತ ಕಳೆದುಕೊಂಡು ಜೀವನ ಹಾಳುಮಾಡಿಕೊಳ್ಳುವುದು, ಕುಡಿತದ ಚಟದಿಂದ ಕುಟುಂಬ ನಾಶವಾಗುವುದು, ತಂಬಾಕು ಸೇವನೆಯಿಂದ ಶ್ವಾಸಕೋಶ ಮತ್ತು ಬಾಯಿಯ ಕ್ಯಾನ್ಸರ್ ಉಂಟಾಗಿ ಬದುಕು ಸರ್ವನಾಶವಾಗುವುದನ್ನು ನಾಟಕದ ಮೂಲಕ ಪ್ರಸ್ತುತಪಡಿಸಲಾಯಿತು. ಇಂತಹ ಚಟಕ್ಕೆ ಒಳಗಾದವರಿಗೆ ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕೊಠಡಿ ಸಂಖ್ಯೆ 11ರ…

Read More

ಮಡಿಕೇರಿ ಡಿ.20 NEWS DESK  :  ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಮತ್ತು ಮೊಬೈಲ್ ಬಳಕೆಯತ್ತ ಹೆಚ್ಚಿನ ಆಸಕ್ತಿ ವಹಿಸುತ್ತಿದ್ದು, ಶೈಕ್ಷಣಿಕವಾಗಿ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜೆಂಡರ್ ಸ್ಪೆಷಲಿಸ್ಟ್ ಕೇಶಿನಿ ಎಸ್.ಆರ್. ಕಳವಳ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಕೂಡಿಗೆ ಕ್ರೀಡಾ ಶಾಲೆಯ ವಿದ್ಯಾರ್ಥಿಗಳಿಗೆ ಆಯೋಜಿತ ‘ಡಿಜಿಟಲ್ ಸಾಕ್ಷರತೆ’ ಕುರಿತು ಮಾಹಿತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಣದತ್ತ ಹೆಚ್ಚಿನ ಕಾಳಜಿ ತೋರುವ ಮೂಲಕ ತಮ್ಮನ್ನು ತಾವು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ದೈಹಿಕವಾಗಿ ಸದೃಢಗೊಳಿಸಿಕೊಂಡು ಸತ್ಪ್ರಜೆಗಳಾಗಿ ರೂಪುಗೊಳ್ಳುವಂತೆ ಕರೆ ನೀಡಿದರು. ಪೊಲೀಸ್ ಇಲಾಖೆಯ ಮಕ್ಕಳ ವಿಶೇಷ ಘಟಕದ ಪ್ರಮುಖರಾದ ಸುಮತಿ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಸಾಧನೆ ಮಾಡುವಂತೆ ಸಲಹೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ…

Read More

ಕಣಿವೆ ಡಿ.20 NEWS DESK : ಅತ್ತೂರು ಗ್ರಾಮದ ಜ್ಞಾನಗಂಗಾ ವಸತಿ ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬ ಆಚರಿಸುವ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ವಿದ್ಯಾರ್ಥಿಗಳಿಂದ ವೈವಿಧ್ಯಮಯ ಕ್ರಿಸ್ಮಸ್ ಟ್ರೀ, ಗುಡಿಸಲು ಹಾಗೂ ಸಾಂತಾ ಕ್ಲಾಸ್ ಮಾದರಿಗಳನ್ನು ಸಜ್ಜುಗೊಳಿಸಲಾಗಿತ್ತು. ಈ ಸಂದರ್ಭ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲೆ ಸತ್ಯ ಸುಲೋಚನ, ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಆಚರಣೆಗಳ ಮಹತ್ವಗಳನ್ನು ತಿಳಿಯಪಡಿಸುವ ಸಲುವಾಗಿ ಎಲ್ಲಾ ಧರ್ಮಗಳ ಪ್ರಮುಖ ಆಚರಣೆಗಳು, ರಾಷ್ಟ್ರೀಯ ಹಬ್ಬಗಳು ಹಾಗೂ ನಾಡು ಕಟ್ಟಿದ ಮಹನೀಯರ ಸ್ಮರಣೆ ಗಳನ್ನು ಕಾಲ ಕಾಲಕ್ಕೆ ಆಚರಿಸಲಾಗುತ್ತಿದೆ ಎಂದು ಹೇಳಿದರು‌. ಶಾಲೆಯ ಕಾರ್ಯದರ್ಶಿ ಬಿ.ಎಸ್.ನಿಂಗಪ್ಪ ಹಾಗೂ ಶಾಲಾ ಶಿಕ್ಷಕರಾದ ಭಾವನಾ ಹಾಗೂ ಪ್ರೇಮ ಇದ್ದರು.

Read More

ಮಡಿಕೇರಿ ಡಿ.20 NEWS DESK : ಅಪರಾಧ ತಡೆ ಮಾಸಾಚರಣೆ ಸಂಬಂಧವಾಗಿ ಸುಂಟಿಕೊಪ್ಪ ಠಾಣೆಯ ಅಧಿಕಾರಿ‌ ಮತ್ತು ಸಿಬ್ಬಂದಿಗಳು ಗರಗಂದೂರಿನಲ್ಲಿರುವ ಮೊರಾರ್ಜಿ ದೇಸಾಯಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸಿದರು.

Read More

ಮಡಿಕೇಡಿ ಡಿ.20 NEWS DESK : ನಾಪೋಕ್ಲು ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹೊದವಾಡದ ಸರ್ಕಾರಿ ಪ್ರೌಢ ಶಾಲೆ, ಪಾರಾಣೆ ಸರ್ಕಾರಿ ಪ್ರೌಢ ಶಾಲೆ ಹಾಗೂ ರಾಫೆಲ್ ಪಿ.ಯು. ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತೆ, ಮಾದಕ‌ ದ್ರವ್ಯ ಮುಂತಾದ ವಿಚಾರಗಳ ಬಗ್ಗೆ ಕಾನೂನು ಅರಿವು ಮೂಡಿಸಿದರು.

Read More

ಗುವಾಹಟಿ ಡಿ.20 NEWS DESK : ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಿಂದಾಗಿ ರೈಲಿನ ಎಂಜಿನ್ ಮತ್ತು ಐದು ಬೋಗಿಗಳು ಹಳಿತಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಈಶಾನ್ಯ ಗಡಿನಾಡು ರೈಲ್ವೆ (ಎನ್‌ಎಫ್‌ಆರ್) ವಕ್ತಾರರು ತಿಳಿಸಿದ್ದಾರೆ. ರೈಲು ಸೈರಾಂಗ್‌ನಿಂದ ನವದೆಹಲಿಗೆ ತೆರಳುತ್ತಿದ್ದ ವೇಳೆ ಅಂದರೆ ಶನಿವಾರ ಬೆಳಗಿನ ಜಾವ 2.17ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಹೊಜೈ ಜಿಲ್ಲೆಯ ಚಾಂಗ್ಜುರೈ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಜಮುನಾಮುಖ್-ಕಂಪುರ ವಿಭಾಗದ ಮೂಲಕ ಸಂಚರಿಸಬೇಕಿದ್ದ ರೈಲುಗಳು ಉತ್ತರಪ್ರದೇಶದ ಮೂಲಕ ಕಾರ್ಯ ನಿರ್ವಹಿಸುತ್ತಿವೆ ಎಂದು ನಾಗಾಂವ್ ವಿಭಾಗೀಯ ಅರಣ್ಯ ಅಧಿಕಾರಿ ಸುಹಾಶ್ ಕದಮ್ ತಿಳಿಸಿದ್ದಾರೆ. ಘಟನೆಯನ್ನು ದೃಢಪಡಿಸಿರುವ , ಎನ್.ಎಫ್. ರೈಲ್ವೆ ವಿಭಾಗೀಯ ಪ್ರಧಾನ ಕಚೇರಿಯ ಅಧಿಕಾರಿಗಳು, ಅಪಘಾತ ಪರಿಹಾರ ರೈಲುಗಳು ಸ್ಥಳಕ್ಕೆ ತಲುಪಿವೆ ಎಂದು…

Read More

ಸುಂಟಿಕೊಪ್ಪ ಡಿ.18 NEWS DESK : ಚರ್ಚ್ ಆಫ್ ಸೌತ್ ಇಂಡಿಯಾದ ದಕ್ಷಿಣಪ್ರಾಂತ್ಯದ ಸುಂಟಿಕೊಪ್ಪದ ಇಮ್ಮಾನುವೇಲ್ ಚರ್ಚ್ ಕ್ರಿಸ್ಮಸ್ ಆಚರಣೆಯ ಅಂಗವಾಗಿ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಇಮ್ಮಾನುವೇಲ್ ದೇವಾಲಯ ಹೊರಾಂಗಣವನ್ನು ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿದ್ದು, ಒಳಾಂಗಣವನ್ನು ಕ್ರಿಸ್ಮಸ್ ಟ್ರೀ ಸೇರಿದಂತೆ ಅಲಂಕಾರಿಕ ವಸ್ತುಗಳನ್ನು ಇರಿಸಿ ಸಿಂಗರಿಸಲಾಗಿದೆ. ಡಿ.24 ರಿಂದ ಆರಂಭಗೊಳ್ಳಲಿರುವ ಪ್ರಾರ್ಥನೆಯನ್ನು ಇಮ್ಮಾನುವೇಲ್ ದೇವಾಲಯದ ಸುಂಟಿಕೊಪ್ಪ ಸಭಾಪಾಲಕರಾದ ಜೈಸನ್ ಅಯ್ಯ ಅವರು ಧಾರ್ಮಿಕ ವಿಧಿವಿಧಾನಗಳೊಂದಿಗೆ ಪ್ರಾರ್ಥನೆ-ಆರ್ಶಿವಚನ ನೀಡಲಿದ್ದಾರೆ.

Read More